Author: kannadanewsnow05

ನವದೆಹಲಿ : ಒಂದು ಕಡೆ ಸಿಎಂ ಸಿದ್ದರಾಮಯ್ಯನವರೇ ಮುಂದಿನ 10 ವರ್ಷಗಳ ಕಾಲ ಸಿಎಂ ಆಗಿರುತ್ತಾರೆ ಎಂದು ಕೆಲವು ಕಾಂಗ್ರೆಸ್ ನಾಯಕರು ಹೇಳುತ್ತಿದ್ದರೆ, ಇನ್ನೊಂದು ಕಡೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಲವು ರಾಜ್ಯಗಳ ಪಿಸಿಸಿ ಸ್ಥಾನ ಬದಲಾವಣೆ ಮಾಡಲಾಗುತ್ತದೆ ಎಂದು ಹೇಳಿಕೆ ನೀಡಿದ್ದಾರೆ. ಇದರ ಮಧ್ಯ ಸಹಕಾರ ಸಚಿವ ಕೆಎನ್ ರಾಜಣ್ಣ ಅವರು ಎಐಸಿಸಿ ಅಧ್ಯಕ್ಷರು ಹೇಳಿದರೆ ಕೆಪಿಸಿಸಿ ಅಧ್ಯಕ್ಷನಾಗುತ್ತೇನೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷರು ಹೇಳಿದರೆ ಕೆಪಿಸಿಸಿ ಅಧ್ಯಕ್ಷನಾಗುತ್ತೇನೆ. ಎಐಸಿಸಿ ಅಧ್ಯಕ್ಷರು ಹೇಳಿದರೆ ಮಂತ್ರಿ ಸ್ಥಾನ ಬಿಟ್ಟು ಕೆಪಿಸಿಸಿ ಅಧ್ಯಕ್ಷನಾಗುತ್ತೇನೆ. ಒನ್ ಮ್ಯಾನ್ ಒನ್ ಪೋಸ್ಟಿಗೆ ಬದ್ಧನಾಗಿರುತ್ತೇನೆ. ಸಿಎಂ ಘೋಷಣೆ ಮಾಡುವಾಗ ಪ್ರೆಸ್ ರಿಲೀಸ್ ಮಾಡಿದ್ದರು. ಎಂಪಿ ಚುನಾವಣೆಯ ವರೆಗೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಎಂದಿದ್ದರು. ಹೈಕಮಾಂಡ್ ಹೇಳಿದೆ ಅನ್ನೋ ಭಾವನೆ ಕಾರ್ಯಕರ್ತರಲ್ಲಿ ಇದೆ. ಅಧ್ಯಕ್ಷರ ಬದಲಾವಣೆ ಮಾಡಿ ಎಂದು ನಾನೇನು ಹೇಳುತ್ತಿಲ್ಲ. ಗೊಂದಲ ಬಗೆಹರಿಸಿ ಅನ್ನುವುದೇ ನಮ್ಮ ಬಯಕೆಯಾಗಿದೆ.…

Read More

ರಾಯಚೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ನಿರಂತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು ಇದೀಗ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಎಂಬಲ್ಲಿ ದಂಪತಿಗಳು ಸಾವನ್ನಪ್ಪಿದ್ದಾರೆ. ತಂದೆ ತಾಯಿ ಕಳೆದುಕೊಂಡ ಪುತ್ರ ರೂಲ್ಸ್ ಮಾಡಿ ನ್ಯಾಯಕ್ಕಾಗಿ ಆಳಲು ತೋಡಿಕೊಂಡಿರುವ ಘಟನೆ ವರದಿಯಾಗಿದೆ. ಹೌದು ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ತಂದೆ ತಾಯಿ ಬಲಿಯಾಗಿದ್ದು, ತಂದೆ ತಾಯಿಯನ್ನ ಕಳೆದುಕೊಂಡು ಯುವಕ ಬಸವರಾಜ್ ಸದ್ಯ ಅನಾಥನಾಗಿದ್ದಾನೆ. ರಾಯಚೂರಿನಲ್ಲಿ ನಡೆದ ಘಟನೆ ಈಗ ತಡವಾಗಿ ಬೆಳಕಿಗೆ ಬಂದಿದೆ. ರಾಯಚೂರು ಜಿಲ್ಲೆಯ ಲಿಂಗಸುಗೂರಿನ ಹಟ್ಟಿ ಪಟ್ಟಣದಲ್ಲಿ ಈ ಒಂದು ಘಟನೆ ನಡೆದಿದೆ. ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬಸವರಾಜ್ ತಾಯಿ ಈರಮ್ಮ ಆತ್ಮಹತ್ಯೆ ಮಾಡಿಕೊಂಡಿದ್ದು ಇನ್ನೂ ಅದೇ ನೋವಲ್ಲಿ ತಂದೆ ಪರಪ್ಪ ಕೂಡ ಸಾವನ್ನಪ್ಪಿದ್ದಾರೆ. ಈ ಕುರಿತು ಯುವಕ ಬಸವರಾಜ್ ರಿಲ್ಸ್ ಮಾಡಿ ವಿಡಿಯೋ ಬಿಡುಗಡೆ ಮಾಡಿದ್ದಾನೆ. ಬಸವರಾಜ ನಮ್ಮ ಮನೆ ಹರಾಜಿನಲ್ಲಿ ಇದೆ ನ್ಯಾಯ ಕೊಡಿಸಿ ಎಂದು ಅಳಲು ತೋಡಿಕೊಂಡಿದ್ದಾನೆ ವಿಡಿಯೋ ರೀಟ್ಸಪ್ ಮಾಡಿ ಯುವಕ ನ್ಯಾಯಕ್ಕಾಗಿ ಆಗ್ರಹಿಸಿದ್ದಾನೆ. ಮೃತ…

Read More

ನವದೆಹಲಿ : ರಾಜ್ಯ ಸಹಕಾರ ಸಚಿವ ಕೆಎನ್ ರಾಜಣ್ಣ ಅವರು ದೆಹಲಿಗೆ ಭೇಟಿ ನೀಡಿದ್ದು, ದೆಹಲಿಯ ಕರ್ನಾಟಕ ಭವನದಲ್ಲಿ ಬಿಜೆಪಿ ಎಂಎಲ್ಸಿ ಸಿಟಿ ರವಿ ಹಾಗೂ ಸಚಿವ ಕೆ ಎನ್ ರಾಜಣ್ಣ ಒಟ್ಟಿಗೆ ಉಪಹಾರ ಸೇವಿಸಿದರು. ಬಳಿಕ ಹೈಕಮಾಂಡ್ ಅವರನ್ನು ಭೇಟಿಯಾದ ನಂತರ ಮಾತನಾಡಿದ ಅವರು, ಜಿಲ್ಲೆಯ ಅಭಿವೃದ್ಧಿಗೆ ಅನುದಾನ ನೀಡಲು ಕೇಂದ್ರ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಮಾಡಿದ್ದು, ಮನವಿಗೆ ಸ್ಪಂದಿಸಿದ ಅವರು ಅನುದಾನ ನೀಡಲು ಒಪ್ಪಿಗೆ ನೀಡಿದ್ದಾರೆ ಎಂದು ತಿಳಿಸಿದರು. ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಪಕ್ಷದ ಬೆಳವಣಿಗೆ ಕುರಿತು ಮಾಹಿತಿ ನೀಡಿದ್ದೇನೆ. ಅಲ್ಲದೆ ಕೆ.ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ ಅವರನ್ನು ಭೇಟಿಯಾಗಿ ಚರ್ಚಿಸಿದ್ದೇನೆ. ರಾಜ್ಯದಲ್ಲಿನ ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ಮಾಡಿದ್ದೇನೆ.ತೆರವಾಗಲಿರುವ ವಿಧಾನ ಪರಿಷತ್ ಸದಸ್ಯರ ಆಯ್ಕೆ ವಿಚಾರ ಪ್ರಸ್ತಾಪ ಮಾಡಿದ್ದೇನೆ ಎಂದು ತಿಳಿಸಿದರು. ಇನ್ನು ನಮ್ಮ ಜಿಲ್ಲೆ ಅಭಿವೃದ್ಧಿ ವಿಚಾರವಾಗಿ ದೆಹಲಿಗೆ ಭೇಟಿ ನೀಡಿದ್ದೇನೆ.…

Read More

ಬೆಂಗಳೂರು : ಒಂದು ಕಡೆ ಕಾಂಗ್ರೆಸ್ ಹಲವು ನಾಯಕರು ಮುಂದಿನ 10 ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ ಎಂದು ಹೇಳಿಕೆ ನೀಡುತ್ತಿದ್ದಾರೆ. ಇನ್ನೊಂದು ಕಡೆ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಮಾಡುವ ಕುರಿತು ಸುಳಿವು ನೀಡಿದ್ದಾರೆ. ಇದೆ ವಿಚಾರವಾಗಿ ಮಾಜಿ ಸಂಸದ ಡಿಕೆ ಸುರೇಶ್ ಪ್ರತಿಕ್ರಿಯೆ ನೀಡಿದ್ದು ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಹೈಕಮಾಂಡ್ ಗೆ ಬಿಟ್ಟಿದ್ದು ಜನ ನನಗೆ ಇದೀಗ ರೆಸ್ಟ್ ಕೊಟ್ಟಿದ್ದಾರೆ. ಹಾಗಾಗಿ ನಾನು ಯಾವುದೇ ಆಕಾಂಕ್ಷಿ ಅಲ್ಲ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವರಿಷ್ಠರಿಗೆ ಬಿಟ್ಟ ವಿಚಾರ. ನಾನು ಯಾವುದೇ ಸ್ಥಾನದ ಆಕಾಂಕ್ಷಿಯಲ್ಲ. ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಹೈಕಮಾಂಡ್ ತೀರ್ಮಾನ ಮಾಡುತ್ತದೆ ಜನರು ನನಗೆ ಸದ್ಯಕ್ಕೆ ರೆಸ್ಟ್ ಕೊಟ್ಟಿದ್ದಾರೆ. ಹಾಗಾಗಿ ರೆಸ್ಟ್ ನಲ್ಲಿದ್ದೇನೆ ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿಕೆ ನೀಡಿದರು. ಮೆಟ್ರೋ ಟಿಕೆಟ್ ದರ ಏರಿಕೆ…

Read More

ಮೈಸೂರು : ಮೈಸೂರಿನಲ್ಲಿ ಉದಯಗಿರಿ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿಸಿಪಿ ಕಾರಿನ ಮೇಲೆ ಕಲ್ಲು ಎಸೆದಿದ್ದ ನಾಲ್ವರನ್ನು ಇದೀಗ ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ ಹೀಗಾಗಿ ಈ ಒಂದು ಪ್ರಕರಣದಲ್ಲಿ ಬಂದಿತರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. ಹೌದು ಮೈಸೂರಿನ ಉದಯಗಿರಿ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣ ಸಂಬಂಧ ಡಿಸಿಪಿ ಜಾಹ್ನವಿ ಕಾರಿಗೆ ಕಲ್ಲೆಸೆದ ನಾಲ್ವರು ಆರೋಪಿಗಗಳು ಇದೀಗ ಅರೆಸ್ಟ್ ಆಗಿದ್ದಾರೆ. ಘಟನೆ ಕುರಿತು ಸಿಸಿಟಿವಿ ಹಾಗೂ ಮೊಬೈಲ್ ವಿಡಿಯೋ ಅನ್ನು ಆಧರಿಸಿ ನಾಲ್ವರು ಆರೋಪಿಗಳನ್ನ ಬಂಧಿಸಲಾಗಿದ್ದು, ಬಂಧಿತ ಆರೋಪಿಗಳ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. ಇನ್ನಷ್ಟು ಆರೋಪಿಗಳು ಬಂಧನಕ್ಕೆ ಸಿಸಿಬಿ ಅಧಿಕಾರಿಗಳು ಬಲೆ ಬೀಸಿದ್ದಾರೆ. ಈ ಒಂದು ಗಲಾಟೆಗೆ ಕಾರಣನಾಗಿದ್ದ ಮುಸ್ಲಿಂ ಮುಖಂಡ ಮುಸ್ತಾಕ್ ಪ್ರಚೋದನಕಾರಿ ಭಾಷಣ ಮಾಡಿದ್ದ ಇದರಿಂದಲೇ ಈ ಒಂದು ಗಲಾಟೆ ನಡೆದಿದ್ದು ಸದ್ಯ ಮುಸ್ಲಿಂ ಮುಖಂಡ ಮುಸ್ತಾಕ್ ಪರಾರಿಯಾಗಿದ್ದು, ಆತನ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಪ್ರಕರಣದಲ್ಲಿ ಬಂಧಿತರನ್ನು 14 ದಿನಗಳ ನ್ಯಾಯಾಂಗ…

Read More

ಬೆಂಗಳೂರು : ಈಗಾಗಲೇ ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿದ ಬೆನ್ನೆಲೆ ಬೆಂಗಳೂರಿನ ಜನತೆಗೆ ಗಾಯದ ಮೇಲೆ ಬರೆ ಎಳೆದಂತೆ ಇದೀಗ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು, ಬೆಲೆ ಏರಿಕೆಯಿಂದ ಕಂಗೆಟ್ಟಿರೋ ಜನರಿಗೆ ಇದೀಗ ಮತ್ತೊಂದು ಶಾಕ್ ಬಿಸಿ ತಟ್ಟಲಿದೆ. ಮುಂದಿನ ಮೂರು ವರ್ಷಗಳಿಗೆ ಅನ್ವಯವಾಗುವಂತೆ ವಿದ್ಯುತ್ ದರ ಹೆಚ್ಚಳಕ್ಕೆ ಬೆಸ್ಕಾಂ ಇದೀಗ ನಿರ್ಧಾರ ಕೈಗೊಂಡಿದೆ ಎಂದು ತಿಳಿದು ಬಂದಿದೆ. ಬೆಂಗಳೂರಿನಲ್ಲಿ ವಿದ್ಯುತ್ ದರ ಏರಿಕೆ ಪಕ್ಕ ಎನ್ನಲಾಗುತ್ತಿದೆ ವಿದುದ್ದರ ಏರಿಕೆಗೆ ಬೆಸ್ಕಾಂನಿಂದ ಸಕಲ ಸಿದ್ಧತೆ ಮಾಡಿಕೊಂಡಿದ್ದು ಫೆಬ್ರವರಿ 17ರಂದು ಸಾರ್ವಜನಿಕರ ಆಕ್ಷೇಪಣೆ ಸ್ವೀಕಾರ ಮಾಡಲಿದ್ದು ನಂತರದಲ್ಲಿ ಪರಿಶೀಲಿಸಿ ದರ ಏರಿಕೆಗೆ ನಿರ್ಧಾರ ಮಾಡಲಿದೆ ಈಗಾಗಲೇ ದರ ಹೆಚ್ಚಳಕ್ಕೆ ಬೆಸ್ಕಾಂನಿಂದ ಪ್ರಸ್ತಾಪ ಸಲ್ಲಿಸಿದ್ದು ಮುಂದಿನ ಮೂರು ವರ್ಷಗಳಿಗೆ ಅನ್ವಯ ಆಗುವಂತೆ ಪ್ರಸ್ತಾಪಿಸಲಿಕ್ಕೆ ಆಗಿದೆ ಇನ್ನು ಬೆಸ್ಕಾಂ ಪ್ರಸ್ತಾವನೆಗೆ ಕೈಗಾರಿಕೋದ್ಯಮಿಗಳು ಕಿಡಿ ಕಾರುತ್ತಿದ್ದಾರೆ. ರೆವೆನ್ಯೂ ಹೆಚ್ಚಳ ಮಾಡುವ ಉದ್ದೇಶ ಇದರಲ್ಲಿ ಇದೆ ಎಂದು ಬೆಸ್ಕಾಂ ಅಧಿಕಾರಿಗಳ ವಿರುದ್ಧ ಕೈಗಾರಿಕೋದ್ಯಮಿಗಳು ಭಾರಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.…

Read More

ಮಂಗಳೂರು : ಕೇರಳದ ಕೊಳಚೆ ತ್ಯಾಜ್ಯವನ್ನು ಮಂಗಳೂರಿನಲ್ಲಿ ಡಂಪ್ ಮಾಡಲಾಗುತ್ತಿದೆ ಎನ್ನುವ ಖಚಿತ ಮಾಹಿತಿಯ ಮೇರೆಗೆ ಮಂಗಳೂರಿನ ಪಾಲಿಕೆ ಅಧಿಕಾರಿಗಳು ದಾಳಿ ಮಾಡಿದ್ದು ಕೇರಳದ ಎರಡು ತ್ಯಾಜ್ಯ ಟ್ಯಾಂಕರ್ ಗಳಿಗೆ 10000 ದಂಡ ವಿಧಿಸಿದ್ದು ಅಲ್ಲದೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು ಕೂಡ ದಾಖಲಿಸಿದ್ದಾರೆ. ಕೇರಳ ಭಾಗದಿಂದ ತಲಪಾಡಿ ಗೇಟ್ ಮೂಲಕ ತ್ಯಾಜ್ಯ ವಾಹನಗಳು ಆಗಮಿಸುತ್ತಿದ್ದು, ತಲಪಾಡಿ ಮತ್ತಿತರ ಗಡಿ ಭಾಗಗಳ ಮೂಲಕ ತ್ಯಾಜ್ಯಗಳನ್ನು ತುಂಬಿಕೊಂಡು ವಾಹನಗಳು ಎಂಟ್ರಿ ಪಡೆಯುತ್ತಿವೆ ಕೇರಳದ ತ್ಯಾಜ್ಯ ನಿರ್ವಹತು ತಂದಿದ್ದ ಸಿವಿಲ್ ಟ್ಯಾಂಕರ್ ಗಳು. ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಕೊಳಚೆ ತ್ಯಾಜ್ಯ ಸ್ಥಳಾಂತರ ನಡೆಯುತ್ತಿದೆ.ಕೊಳಚೆ ತ್ಯಾಜ್ಯ ತಂದು ಖಾಸಗಿ ಟ್ಯಾಂಕರ್ ಗಳು ಸುರಿಯುತ್ತಿವೆ. ಕೇರಳದಿಂದ ತ್ಯಾಜ್ಯ ತಂದು ಸುರಿಯುವ ವೇಳೆ ಖದೀಮರು ಸಿಕ್ಕಿ ಬಿದ್ದಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಪಾಲಿಕೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.ಕೇರಳದ ಕೊಳಚೆ ತ್ಯಾಜ್ಯ ತಂದು ಮ್ಯಾನ್ ಹೋಲ್ ಮತ್ತು ನದಿಗಳು ಚರಂಡಿ ಕಾಲುವೆಗೆ ತ್ಯಾಜ್ಯದ ನೀರು ಸುರಿದು ಹೋಗುತ್ತಿದ್ದಾರೆ.…

Read More

ವಿಜಯಪುರ : ಕಳೆದ 2 ದಿನಗಳ ಹಿಂದೆ ವಿಜಯಪುರ ನಗರದ ಮದೀನಾ ನಗರದಲ್ಲಿ ಭೀಮಾತೀರದ ಹಂತಕ ಬಾಗಪ್ಪ ಹರಿಜನ್ ನನ್ನು ಭೀಕರವಾಗಿ ಕೊಲೆಗಯ್ಯಲಾಗಿತ್ತು. ಇದೀಗ ಈ ಒಂದು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಆರೋಪಿ ಪಿಂಟ್ಯಾ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ವಿಜಯಪುರದ ಗಾಂಧಿಚೌಕ್ ನ ಪೊಲೀಸರು ಪಿಂಟ್ಯಾ ಸೇರಿದಂತೆ ನಾಲ್ವರು ಅರೋಪಿಗಳನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.ಬಂಧಿತ ಆರೋಪಿಗಳನ್ನ ಪ್ರಕಾಶ್​ ಅಲಿಯಾಸ್​ ಪಿಂಟ್ಯಾ ಅಗರಖೇಡ್ (25), ರಾಹುಲ್ ತಳಕೇರಿ (20), ಗದಿಗೆಪ್ಪ ಅಲಿಯಾಸ್ ಮನಿಕಂಠ ದನಕೊಪ್ಪ (27), ಎ4 ಸುದೀಪ್ ಕಾಂಬಳೆ (23) ಎಂದು ಎಂದು ಎಸ್​ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ. ಬಂಧಿತರೆಲ್ಲರು ಗೆಳೆಯರು ಎಂದು ತಿಳಿದುಬಂದಿದೆ. ಮದೀನಾ ನಗರದಲ್ಲಿ ಬಾಗಪ್ಪ ಹರಿಜನ ಭೀಕರ ಹತ್ಯೆಯಾಗಿತ್ತು. ಕೊಡಲಿ ಸೇರಿ ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆಗೈಯಲಾಗಿದೆ. ಬಾಡಿಗೆ ಮನೆ ಮಾಡಿ ನಗರದ ಹೊರ ವಲಯದ ರೇಡಿಯೋ ಕೇಂದ್ರದ ಬಳಿ ಬಾಗಪ್ಪ ವಾಸವಿದ್ದ. ಇನ್ನು ಫೆಬ್ರವರಿ 19 ರಂದು ವಿಜಯಪುರ ಕೋರ್ಟ್‌ಗೆ ಹಾಜರಾಗಿ, ಪ್ರಮುಖ…

Read More

ಬೆಂಗಳೂರು : ರಾಜ್ಯದಲ್ಲಿ ಕಳೆದ ಬಿಜೆಪಿ ಅವಧಿಯಲ್ಲಿ 10 ಹೊಸ ವಿಶ್ವವಿದ್ಯಾಲಯಗಳನ್ನು ಆರಂಭಿಸಲಾಗಿತ್ತು. ಇದೀಗ ಈ 10 ವಿಶ್ವವಿದ್ಯಾಲಯಗಳ ಪೈಕಿ 9 ವಿಶ್ವವಿದ್ಯಾಲಯಗಳನ್ನು ಮುಚ್ಚುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.ಡಿಸಿಎಂ ಡಿಕೆ ಶಿವಕುಮಾರ್ ಅಧ್ಯಕ್ಷತೆಯ ಸಂಪುಟ ಉಪಸಮಿತಿ ಈ ಕುರಿತು ತೀರ್ಮಾನ ಕೈಗೊಂಡಿದೆ ಎಂದು ತಿಳಿದುಬಂದಿದೆ. ವಿಶ್ವವಿದ್ಯಾಲಯ ಆರ್ಥಿಕ ಸ್ಥಿತಿಗತಿಯ ಪರಿಶೀಲನೆಗೆ ಸಂಪುಟ ಉಪ ಸಮಿತಿ ರಚನೆ ಮಾಡಲಾಗಿತ್ತು. ಬೀದರ್ ವಿಶ್ವವಿದ್ಯಾಲಯವನ್ನು ಹೊರತುಪಡಿಸಿ ಉಳಿದ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಇದೀಗ ಸಂಪುಟ ಉಪಸಮಿತಿ ತೀರ್ಮಾನ ಕೈಗೊಂಡಿದೆ. ಹಾಸನ ಚಾಮರಾಜನಗರ, ಹಾವೇರಿ, ಕೊಡಗು, ಕೊಪ್ಪಳ ಬಾಗಲಕೋಟೆ, ಮಹಾರಾಣಿ ಕ್ಲಸ್ಟರ್, ಮಂಡ್ಯ ಹಾಗೂ ನೃಪತುಂಗ ವಿಶ್ವವಿದ್ಯಾಲಯ ಗೆ ಬೀಗ ಹಾಕುವ ಕುರಿತು ಸಂಪುಟ ಉಪ ಸಮಿತಿ ತೀರ್ಮಾನಿಸಿದೆ. 150 ಸಂಯೋಜಿತ ಕಾಲೇಜುಗಳನ್ನು ಬೀದರ್ ವಿಶ್ವವಿದ್ಯಾಲಯ ಹೊಂದಿದೆ. ಅಲ್ಲದೆ ಬೀದರ್ ವಿಶ್ವವಿದ್ಯಾಲಯ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಹಿನ್ನೆಲೆಯಲ್ಲಿ ಅದನ್ನು ಹೊರತುಪಡಿಸಿ ಬಹುತೇಕ ವಿಶ್ವವಿದ್ಯಾಲಯಗಳಿಗೆ ಬೀಗ ಜಡಿಯುವ ಸಾಧ್ಯತೆ ಇದೆ. ಕುಲಪತಿಗೆ ವಾಹನ ಕರುಣಿಸಲು ಹಣಕಾಸಿನ ಕೊರತೆ ಇದೆ.ಹೊಸ…

Read More

ರಾಮನಗರ : ರಾಮನಗರದಲ್ಲಿ ಭೀಕರವಾದಂತಹ ಅಪಘಾತ ಸಂಭವಿಸಿದ್ದು, ಬೈಕ್ ಗೆ ವೇಗವಾಗಿ ಬಂದು ಕಾರೊಂದು ಡಿಕ್ಕಿ ಹೊಡೆದ ಪರಿಣಾಮ, ಸ್ಥಳದಲ್ಲೇ 12 ವರ್ಷದ ಬಾಲಕ ಸಾವನ್ನಪ್ಪಿದ್ದು, ಆ ಬಾಲಕನ ತಂದೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ಎಸ್ ಪಾಳ್ಯದ ಮಯ್ಯಾಸ್ ಫ್ಯಾಕ್ಟರಿ ಬಳಿ ನಡೆದಿದೆ. ಮೃತ ಬಾಲಕನನ್ನು ರಾಮನಗರ ತಾಲೂಕಿನ ಬಿಡದಿ ಹೋಬಳಿಯ ಸಿದ್ದಯ್ಯನದೊಡ್ಡಿ ಗ್ರಾಮದ ನಿವಾಸಿ ಚಿರಂತ್ ಗೌಡ (12) ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಚಿರಂತ್ ತಂದೆ ಸುರೇಶ್ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ನಿನ್ನೆ ರಾತ್ರಿ ಸುರೇಶ್ ಅವರು ಮಗನನ್ನು ಅಜ್ಜಿ ಮನೆಗೆ ಬಿಡಲು ಬೈಕ್‌ನಲ್ಲಿ ಹೋಗ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬಾಲಕ ಚಿರಂತ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸುರೇಶ್‌ಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಸುರೇಶ್ ದಯಾನಂದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More