Author: kannadanewsnow05

ಬೆಳಗಾವಿ : ನಿನ್ನೆ ಸದನದಲ್ಲಿ ಗ್ಯಾರಂಟಿ ಯೋಜನೆ ಕುರಿತು ವಿಪಕ್ಷಗಳು ರಾಜ್ಯ ಸರ್ಕಾರದವರು ಇದಕ್ಕೆ ಲಕ್ಷ್ಮಿ ಹೆಬ್ಬಾಳ್ಕರ್ ಹೌದು ಎರಡು ತಿಂಗಳ ಕಂತು ಹಣ ಬಾಕಿ ಇದೆ ಎಂದು ಒಪ್ಪಿಕೊಂಡು ಸರಿಯಾದ ವ್ಯಕ್ತಿ ಪಡಿಸಿದ್ದರು. ಇದೀಗ ಚುನಾವಣೆ ಪೂರ್ವ ಕರ್ನಾಟಕದ ಮಹಿಳೆಯರಿಗೆ ಮಾಡಿದಂತ ವಾಗ್ದಾನ ಏನು ಇತ್ತೋ ಆ ವಾಗ್ದಾನ ಸಂಪೂರ್ಣವಾಗಿ ಬದ್ಧತೆಯಿಂದ ನಾವು ನಮ್ಮ ಸರ್ಕಾರ ನಮ್ಮ ಇಲಾಖೆ ನಿಭಾಯಿಸುತ್ತಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು. ಬೆಳಗಾವಿಯಲ್ಲಿ ಮಾತನಾಡಿದ ಅವರು, ಸರಿಯಾದ ರೀತಿಯಲ್ಲಿ ಗೃಹಲಕ್ಷ್ಮಿ ಹಣ ಹಾಕುತ್ತಿದ್ದೇವೆ 23 ತಿಂಗಳ ಹಣವನ್ನು ಮಹಿಳೆಯರ ಖಾತೆಗೆ ಹಾಕಿದ್ದೇವೆ. 46 ಸಾವಿರ ರೂಪಾಯಿ ಒಬ್ಬರಿಗೆ ಬಂದಿದೆ. ಆಗಸ್ಟ್ ವರೆಗೂ ಕ್ಲಿಯರ್ ಇದೆ. 23 ಕಂತುಗಳಲ್ಲಿ ಈಗಾಗಲೇ ಹಣ ಹಾಕಿದ್ದೇವೆ ನನ್ನ ಹೇಳಿಕೆಗೆ ನಾನು ಈಗಲೂ ಬದ್ಧ ಆಗಿದ್ದೇನೆ. ಇವರು ಕೇಳಿದ್ದು ಫೆಬ್ರವರಿ ಮಾರ್ಚ್ ತಿಂಗಳದ್ದು, ಫೈನಾನ್ಸಿಯಲ್ ಡಿಪಾರ್ಟ್ಮೆಂಟ್ಗೆ ಪ್ರತಿ ತಿಂಗಳು ನಮ್ಮ ಇಲಾಖೆಯಿಂದ ನಾನು ಫೈಲ್ ಮಾಡುತ್ತೇನೆ. 1ನೇ ತಾರೀಕು ಅಥವಾ 3ನೇ…

Read More

ಬೆಂಗಳೂರು : ಇತ್ತೀಚಿಗೆ ಹೃದಯಘಾತ ಎನ್ನುವುದು ಸಾಮಾನ್ಯವಾಗಿ ಬಿಟ್ಟಿದೆ ಚಿಕ್ಕ ಮಕ್ಕಳಿಂದ ಹಿಡಿದು ವಯೋ ವೃದ್ಧರು ಸಹ ಹಾರ್ಟ್ ಅಟ್ಯಾಕ್ ಗೆ ಬಲಿಯಾಗುತ್ತಿದ್ದಾರೆ. ಇದೀಗ ವ್ಯಕ್ತಿಯೊಬ್ಬರು ಲಘು ಹೃದಯಾಘಾತಕ್ಕೆ ಒಳಗಾಗಿ, ರಸ್ತೆಯಲ್ಲಿ ಬಿದ್ದು ಒದ್ದಾಡುತ್ತಿದ್ದ. ಆತನ ಪತ್ನಿ ಸಹಾಯಕ್ಕೆ ಅಂಗಲಾಚಿದರೂ ಯಾರೊಬ್ಬರೂ ಕೂಡ ಅವರ ನೋವಿಗೆ ಸ್ಪಂದಿಸಿಲ್ಲ. ಹೌದು ಇಂದಿನ ಕಾಲದಲ್ಲಿ ಮಾನವೀಯತೆ ಕರುಣೆ ಅನ್ನೋದು ಅತ್ಯಂತ ವಿರಳವಾಗಿದೆ.ವ್ಯಕ್ತಿಯೊಬ್ಬ ನಡುರಸ್ತೆಯಲ್ಲಿ ಬಿದ್ದು ಒದ್ದಾಡುತ್ತಿದ್ದರೂ ಆತನನ್ನು ತುರ್ತು ಆಸ್ಪತ್ರೆಗೆ ದಾಖಲಿಸಲು ಸಕಾಲದಲ್ಲಿ ಅಂಬ್ಯುಲೆನ್ಸ್​ ಲಭ್ಯವಾಗಲಿಲ್ಲ.. ರಸ್ತೆಯಲ್ಲಿ ಜನರ ಸಹಾಯಕ್ಕಾಗಿ ಅವರ ಹೆಂಡತಿ ಅಂಗಲಾಚಿದರೂ ಯಾರೊಬ್ಬರು ಅವರ ನೋವಿಗೆ ಸ್ಪಂದಿಸದೆ ಮಾನವೀಯತೆ ತೋರದ ಪರಿಣಾಮ ವ್ಯಕ್ತಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಗರದಲ್ಲಿ ವರದಿಯಾಗಿದೆ. ನಗರದ ಬಾಲಾಜಿ ನಗರದ ಮೋಟಾರ್ ವಾಹನ ಮೆಕ್ಯಾನಿಕ್ ಆಗಿದ್ದ 34ವರ್ಷದ ವೆಂಕಟರಮಣನ್ ಡಿಸೆಂಬರ್ 13ರ ಮುಂಜಾನೆ ಎದೆ ನೋವಿನಿಂದ ಅಸ್ವಸ್ಥರಾಗಿದ್ದರು. ಈ ವೇಳೆ ಅಂಬ್ಯುಲೆನ್ಸ್​ ಸಿಗದ ಕಾರಣ ಅವರ ಪತ್ನಿ ರೂಪಾ ಪತಿಯನ್ನು ದ್ವಿಚಕ್ರ ವಾಹನದಲ್ಲಿ ಹತ್ತಿರದ ಖಾಸಗಿ ಆಸ್ಪತ್ರೆಗೆ…

Read More

ಬೆಳಗಾವಿ : ರಾಜ್ಯದಲ್ಲಿ ಶಕ್ತಿ ಯೋಜನೆ ಅಡಿಯಲ್ಲಿ ರಾಜ್ಯ ಸರ್ಕಾರ 4000 ಕೋಟಿ ಹಣ ಬಾಕಿ ಉಳಿಸಿಕೊಂಡಿದೆ ಎಂದು ಪರಿಷತ್ ವಿಪಕ್ಷ ನಾಯಕ ಕೆಲವಾದಿ ನಾರಾಯಣಸ್ವಾಮಿ ಟ್ವೀಟ್ ಮುಖಾಂತರ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ವಿಚಾರವಾಗಿ ಸಾರಿಗೆ ಇಲಾಖೆ ಸಚಿವ ರಾಮಲಿಂಗ ರೆಡ್ಡಿ ಸದ್ಯದ ರಾಜ್ಯದ ಆರ್ಥಿಕ ಸಮಸ್ಯೆಗೆ ಹಿಂದಿನ ಬಿಜೆಪಿ ಸರ್ಕಾರವೇ ಕಾರಣ ಎಂದು ತಿರುಗಟು ನೀಡಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ರಾಮಲಿಂಗರೆಡ್ಡಿ 2023ರಲ್ಲಿ ಅಧಿಕಾರ ಬಿಟ್ಟುಕೊಟ್ಟ ಸಂದರ್ಭದಲ್ಲಿ 80,000 ಕೋಟಿ ಬಿಲ್ ಬಾಕಿ ಇತ್ತು. ಆಮೇಲೆ ಬಜೆಟ್ ನಲ್ಲಿ ಇರುವುದನೆಲ್ಲಾ ಅನುಮೋದನೆ ಮಾಡಿಕೊಂಡರು. ಬಜೆಟ್ ನಲ್ಲಿ ಇಲ್ಲದೆ ಇರುವಂತ ನಾಲ್ಕು ಲಕ್ಷ ಕೋಟಿ ಬಜೆಟೆ ಇಲ್ಲ ಆದರೂ ಅನುಮೋದನೆ ಮಾಡಿಕೊಂಡರು. ಅವರು ಮಾಡಿರುವಂತಹ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ. ನಮ್ಮ ಶಕ್ತಿ ಯೋಜನೆಯಲ್ಲಿ 11748 ಕೋಟಿ ಬಿಡುಗಡೆಯಾಗಿದೆ. ಇನ್ನು ನಾಲ್ಕು ಸಾವಿರ ಕೋಟಿ ಬಿಡುಗಡೆ ಆಗುತ್ತೆ. ಆದರೆ ಬಿಜೆಪಿಯವರಿಗೆ ಒಂದು ಪ್ರಶ್ನೆ ಕೇಳುತ್ತೇನೆ ನೀವು…

Read More

ರಾಮನಗರ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು ರಾಮನಗರದಲ್ಲಿ 19 ವರ್ಷದ ವಿದ್ಯಾರ್ಥಿನಿಯ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ರಾಮನಗರದ ಮಾಗಡಿ ಪೊಲೀಸರಿಂದ ಇದೀಗ ಮೂವರು ಯುವಕರನ್ನು ಅರೆಸ್ಟ್ ಮಾಡಿದ್ದಾರೆ. ವಿಕಾಸ್ ಪ್ರಶಾಂತ್ ಮತ್ತು ಚೇತನ್ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ. ಬೆಂಗಳೂರಿನ ಕಾಲೇಜಿನಲ್ಲಿ ವಿದ್ಯಾರ್ಥಿನಿ ಓದುತ್ತಿದ್ದಳು. ಪ್ರೀತಿಯ ನೆನಪಲ್ಲಿ ವಿಕಾಸ್ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದಾನೆ ನಂತರ ಯುವತಿಯ ಜೊತೆಗೆ ಲೈಂಗಿಕ ಸಂಪರ್ಕ ಕೂಡ ಬೆಳೆಸಿದ್ದಾರೆ. ಅದನ್ನು ವಿಡಿಯೋ ಮಾಡಿಕೊಂಡು ವಿದ್ಯಾರ್ಥಿನಿಗೆ ವಿಕಾಸ್ ಬೆದರಿಕೆ ಹಾಕಿದ್ದಾನೆ. ನಾನು ಕರೆದಾಗೆಲ್ಲ ಬರಬೇಕು ಅಂತ ಬೆದರಿಕೆ ಹಾಕಿದ್ದಾನೆ. ಮೂರು ತಿಂಗಳ ಹಿಂದೆ ವಿಡಿಯೋ ಮಾಡಿಕೊಂಡು ಬೆದರಿಕೆ ಹಾಕಿದ್ದಾನೆ. ಆನಂತರ ಪ್ರಶಾಂತ್ ಚೇತನ್ ಜೊತೆಗೆ ಸೇರಿಸಿಕೊಂಡು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎನ್ನುವ ಆರೋಪ ಕೇಳಿ ಬಂದಿದೆ. ಇದರಿಂದ ಮನನೊಂದ ವಿದ್ಯಾರ್ಥಿನಿ ನೆನ್ನೆ ರಾಮನಗರದ ಮಾಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ, ವಿದ್ಯಾರ್ಥಿನಿಯ ದೂರಿನ ಅನ್ವಯ ಇದೀಗ ಪೊಲೀಸರು ವಿಕಾಸ್ ಪ್ರಶಾಂತ್ ಮತ್ತು…

Read More

ಶಿವಮೊಗ್ಗ : ಶಿವಮೊಗ್ಗದಲ್ಲಿ ಪಾಪಿ ಪೋಷಕರು ನವಜಾತಾ ಶಿಶುವನ್ನು ಬಿಟ್ಟು ಹೋಗಿರುವ ಘಟನೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಮಲ್ಲಾಪುರದ ಗ್ರಾಮದ ಬಳಿ ನವಜಾತ ಗಂಡು ಶಿಶು ಪತ್ತೆಯಾಗಿದೆ. ಸಾಸ್ಟೆಹಳ್ಳಿ ಗ್ರಾಮದ ಕುಶ ಎಂಬವರು ತಮ್ಮದೊಡ್ಡಪ್ಪನ ಪುತ್ರನಿಗೆ ಆನಾರೋಗ್ಯದ ಕಾರಣ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹಿಂದಿರುವಾಗ ಸಮೀಪದ ಮಲ್ಲಾಪುರ ಗ್ರಾಮದ ಬಳಿ ಮಗು ಅಳುವ ಶಬ್ದ ಕೇಳಿಸಿದೆ. ಬಳಿಕ ತಮ್ಮ ಅತ್ತಿಗೆ ಸಹಾಯದೊಂದಿಗೆ ಸ್ಥಳಕ್ಕೆ ಹೋಗಿ ನೋಡಿದಾಗ 2-3 ದಿನದ ಗಂಡು ಮಗು ಪತ್ತೆಯಾಗಿದೆ. ಸುತ್ತಮುತ್ತಲಿನ ಮನೆಗಳಲ್ಲಿ ವಿಚಾರಿಸಿದಾಗ ಆ ಮಗುವು ಯಾರಿಗೂ ಸಂಬಂಧಪಟ್ಟಿಲ್ಲ ಎಂಬುದನ್ನು ದೃಢಪಡಿಸಿಕೊಂಡ ಅವರು ಹೊಳೆಹೊನ್ನೂರು ಠಾಣೆಗೆ ದೂರು ನೀಡಿದ್ದಾರೆ.

Read More

ಬಹುಶಃ ಇಂದು ಅತ್ಯಂತ ಜನಪ್ರಿಯವಾದ ಸಿದ್ಧ ಈ ಕಲ್ಯಕ್ಯ ಸಿದ್ಧವಾಗಿದೆ. ಗೂಗಲ್‌ನಲ್ಲಿ ಹುಡುಕಿದರೆ ಅವರ ಹೆಸರು ಸಿಗುವುದಿಲ್ಲ. ಆದರೆ ಅವರು ಅನೇಕ ಜನರ ಜೀವನದಲ್ಲಿ ಪವಾಡಗಳನ್ನು ಮಾಡಿದರು ಎಂದು ಹೇಳಲಾಗುತ್ತದೆ. ಸತತ 3 ದಿನ ಕೇಳಕಿಯಾರ್ ಮಂತ್ರವನ್ನು ಪಠಿಸುವುದರಿಂದ 3 ದಿನಗಳಲ್ಲಿ ನಿಮ್ಮ ಸಮಸ್ಯೆ ನಿವಾರಣೆಯಾಗುತ್ತದೆ. ವಾಕ್ಯ ಸಿದ್ದಿ, ಮಂತ್ರಸಿದ್ದಿ ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕ್ಕೈಕ ಜೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ 9686268564 ಇಷ್ಟ ಪಟ್ಟವರು ನೀಮ್ಮಂತೇ ಆಗಲು, ಪ್ರೀತಿಯಲ್ಲಿ ಮೋಸ ಹೋಗಿದ್ದರೆ ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇ‍ಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಎಷ್ಟೇ ಪ್ರಯತ್ನ ಜೀವನದಲ್ಲಿ ಏಳಿಗೆ ಅಭಿವೃದ್ಧಿ ಆಗದೆ ನೋಂದಿದ್ದರೆ ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕೇವಲ 2 ದಿನದಲ್ಲಿ ಪರಿಹಾರ ಶತಃಸಿದ್ದ ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ…

Read More

ಬೆಳಗಾವಿ : ಸಿದ್ದರಾಮಯ್ಯ ಔಟ್ ಗೋಯಿಂಗ್ ಚೀಫ್ ಮಿನಿಸ್ಟರ್ ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೊನೆ ಅಧಿವೇಶನ ಎಂದು ಬೆಳಗಾವಿಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿಕೆ ನೀಡಿದರು. ಪಾಪ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಿಸ್ಥಿತಿ ಅರ್ಥ ಮಾಡಿಕೊಳ್ಳಿ ಮುಖ್ಯಮಂತ್ರಿಗಳ ಪಾಲಿನ ದಾಟಿ ನೋಡಿದರೆ ನಿಮಗೆ ಅರ್ಥ ಆಗುತ್ತದೆ ಸದನದಲ್ಲಿ ಚರ್ಚಿಸುವುದಕ್ಕೆ ಮುಖ್ಯಮಂತ್ರಿಗಳಿಂದ ಪರಿಹಾರ ಸಿಗುತ್ತದೆ ಎನ್ನುವ ಆಶಾ ಭಾವನೆ ಇಲ್ಲ. ನೀವು ಸಿಎಂ ಆಗಿ ಎಷ್ಟು ದಿನ ಇರುತ್ತೀರಿ ಅನ್ನೋದು ಮುಖ್ಯ ಅಲ್ಲ ಆ ಸ್ಥಾನದಲ್ಲಿದ್ದು ರಾಜ್ಯಕ್ಕೆ ಏನು ಕೆಲಸ ಮಾಡಿದ್ದೀರಿ ಎನ್ನುವುದು ಮುಖ್ಯವಾಗುತ್ತದೆ ಎರಡುವರೆ ವರ್ಷಗಳಿಂದ ಏನು ಮಾಡದೆ ಇರುವವರು ಈ ಎರಡು ವಾರದಲ್ಲಿ ಏನು ಮಾಡುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

Read More

ಬೆಂಗಳೂರು : 2023ರಲ್ಲಿ 134 ಸ್ಥಾನ ಪಡೆದು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂತು. ಅಧಿಕಾರ ವಹಿಸಿಕೊಂಡ ಕೂಡಲೇ ರಾಜ್ಯದ ಜನರಿಗೆ ಭರವಸೆ ನೀಡಿದಂತೆ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದರು. ಆದರೆ ಇದೀಗ ಈ ಒಂದು ಗ್ಯಾರೆಂಟಿ ಯೋಜನೆಗಳೇ ರಾಜ್ಯ ಸರ್ಕಾರವನ್ನು ಆರ್ಥಿಕ ಸಂಕಷ್ಟಕ್ಕೆ ದೂಡಿವೆ ಎಂದು ಹೇಳಲಾಗುತ್ತಿದೆ. ಹೌದು 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನ ನೀಡಿದ್ದ ಭರವಸೆಯಂತೆ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯನ್ನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಯಶಸ್ವಿಯಾಗಿ ಜಾರಿಗೊಳಿಸಿದೆ. ಆದ್ರೆ ಇದೇ ಗ್ಯಾರಂಟಿ ಯೋಜನೆಗಳು ಇದೀಗ ಸರ್ಕಾರವನ್ನು ಆರ್ಥಿಕ ಸಂಕಷ್ಟಕ್ಕೆ ದೂಡಿದೆಯಾ? ಅನ್ನೋ ಪ್ರಶ್ನೆ ಎದ್ದಿದೆ. ಈಗಾಗಲೇ ಬೆಳಗಾವಿ ಅಧಿವೇಶನದಲ್ಲಿ ವಿಪಕ್ಷ ನಾಯಕರು ರಾಜ್ಯ ಸರ್ಕಾರದ ವಿರುದ್ಧ ಗೃಹಲಕ್ಷ್ಮಿ ಹಣ ಬಾಕಿ ಉಳಿಸಿಕೊಂಡಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಇದಕ್ಕೆ ಪೂರಕವೆಂಬಂತೆ ನಿನ್ನೆ ಸದನದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೌದು ಎರಡು…

Read More

ಬಾಗಲಕೋಟೆ : ಬೆಳಗಾವಿಯಲ್ಲಿ ಆರ್ಕೆಸ್ಟ್ರಾದಲ್ಲಿ ಡ್ಯಾನ್ಸ್ ಮಾಡಲು ಬಂದಿದ್ದ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಜಾನಪದ ಕಲಾವಿದ ಮೈಲಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಇಂದು ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ವೇಳೆ ಮಹಾಲಿಂಗಪುರ ಪೊಲೀಸರು, ಮೈಲಾರಿಯನ್ನು ಬಂಧಿಸಿದ್ದು, ಸದ್ಯ ಕೋರ್ಟ್ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದೆ. ಇನ್ನು ನ್ಯಾಯಾಂಗ ಬಂಧನಕ್ಕೆ ನೀಡಿದ ಬಳಿಕ ಮಾತನಾಡಿದ ಮೈಲಾರಿ, ಇದರಲ್ಲಿ ಎಷ್ಟೋ ಜನರ ಕೈವಾಡವಿದೆ. ಮ್ಯೂಸಿಕ್ ಮೈಲಾರಿ, ಟ್ರೆಂಡಿಂಗ್ ಸ್ಟಾರ್ ಆಗಬೇಕ ಅಂದ್ರ ಎಷ್ಟು ಕಷ್ಟಪಟ್ಟೀವಿ. ಬಡತನದಿಂದ ಎಷ್ಟು ಸ್ಟ್ರಗಲ್ ಮಾಡಿ ಬಂದೀನಿ ಅದು ನನಗೆ ಗೊತ್ತು. ಸುಮಾರು ಬಾರಿ ನನ್ನ ಮೇಲೆ ಆರೋಪ ಹೊರಿಸುವ ಪ್ರಯತ್ನಗಳು ಆಗಿವೆ. ಕಾನೂನು ಇದೆ. ಕಾನೂನಾತ್ಮಕವಾಗಿ ನಾನು ಹೋರಾಟ ಮಾಡ್ತೇನೆ ಎಂದಿದ್ದಾನೇ. ನನ್ನ ಏಳಿಗೆ ಸಹಿಸಲಾಗದೇ ಈ ರೀತಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಸಂವಿಧಾನವಿದೆ, ಸಂವಿಧಾನದಲ್ಲಿ ಎಲ್ಲರಿಗೂ ನ್ಯಾಯ ಸಿಗುತ್ತೆ. ನನಗೂ ನ್ಯಾಯ ಸಿಗುತ್ತೆ. ನನ್ನದು ಯಾವುದೇ ರೀತಿಯ ತಪ್ಪಿಲ್ಲ. ಕಾನೂನಿನ ಮೂಲಕ ನಾನು ಹೋರಾಟ ಮಾಡಿ,…

Read More

ದಕ್ಷಿಣಕನ್ನಡ : ದಕ್ಷಿಣಕನ್ನಡದಲ್ಲಿ ರೈಲ್ವೆ ನಿಲ್ದಾಣದಲ್ಲಿ ನಡೆಯುತ್ತಿದ್ದ ಅಭಿವೃದ್ಧಿ ಕಾಮಗಾರಿಯ ವೇಳೆ ಭಾರೀ ಕ್ರೇನ್ ಒಂದು ರೈಲ್ವೆ ಹಳಿಯ ಮೇಲೆ ಮಗುಚಿ ಬಿದ್ದಿದ್ದು, ಅದೃಷ್ಟವಶಾತ್ ಹೆಚ್ಚಿನ ಅನಾಹುತ ತಪ್ಪಿದೆ. ಘಟನೆಯಿಂದ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಕೆಲಕಾಲ ರೈಲು ಸಂಚಾರಕ್ಕೂ ಅಡಚಣೆ ಉಂಟಾಯಿತು. ರೈಲ್ವೆ ನಿಲ್ದಾಣದ ಪ್ಲಾಟ್‌ಫಾರಂ ಸಮೀಪ ಬುಧವಾರ ಕಾಮಗಾರಿ ನಡೆಸಲು ಹಳಿಯ ಪಕ್ಕದಲ್ಲಿ ಕ್ರೇನ್ ಬಳಸಲಾಗುತ್ತಿತ್ತು. ಈ ವೇಳೆ ತಾಂತ್ರಿಕ ದೋಷ ಅಥವಾ ನೆಲದ ಕುಸಿತದಿಂದ ಸಮತೋಲನ ಕಳೆದುಕೊಂಡ ಪರಿಣಾಮ ಕ್ರೇನ್ ಏಕಾಏಕಿ ಪಲ್ಟಿಯಾಗಿ ನೇರವಾಗಿ ರೈಲ್ವೆ ಹಳಿಯ ಮೇಲೆ ಉರುಳಿದೆ. ಘಟನೆ ಸಂಭವಿಸಿದ ತಕ್ಷಣ ರೈಲ್ವೆ ಅಧಿಕಾರಿಗಳು, ತಾಂತ್ರಿಕ ಸಿಬ್ಬಂದಿ ಹಾಗೂ ಭದ್ರತಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಹಳಿಯ ಮೇಲೆ ಮಗುಚಿ ಬಿದ್ದ ಕ್ರೇನ್‌ನ್ನು ತೆರವುಗೊಳಿಸಲು ಮತ್ತೊಂದು ಯಂತ್ರದ ಸಹಾಯದಿಂದ ಕಾರ್ಯಾಚರಣೆ ನಡೆಸಲಾಯಿತು. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮಾತ್ರವಲ್ಲದೇ ಈ ವೇಳೆ, ಯಾವುದೇ ರೈಲುಗಳು ಆಗಮಿಸದ ಹಿನ್ನೆಲೆಯಲ್ಲಿ ಭಾರಿ ದುರಂತವೊಂದು ತಪ್ಪಿದೆ.

Read More