Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ನಿನ್ನೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ನಡೆಯಿತು. ಈ ಒಂದು ಸಂಪುಟ ಸಭೆಯಲ್ಲಿ ಹಲವು ನಿರ್ಣಾಯಗಳನ್ನ ತೆಗೆದುಕೊಳ್ಳಲಾಯಿತು. ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು ಇಲ್ಲಿವೆ 1. ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ಕಡ್ಡಾಯ ಜೀವ ವಿಮಾ ಯೋಜನೆಯ ವಿಮಾದಾರರಿಗೆದಿನಾಂಕ: 01.04.2020 ರಿಂದ 31.03.2022ರ ದ್ವೆöÊವಾರ್ಷಿಕ ಅವಧಿಯಲ್ಲಿ ಚಾಲ್ತಿಯಲ್ಲಿದ್ದ ಎಲ್ಲಾ ಪಾಲಿಸಿಗಳಿಗೆ ವಿಮಾ ಮೊತ್ತದ ಮೇಲೆ ಪ್ರತಿ ಸಾವಿರ ರೂಪಾಯಿಗಳಿಗೆ ಪ್ರತಿ ವರ್ಷಕ್ಕೆ ರೂ.80/- ರಂತೆ ಲಾಭಾಂಶ (ಬೋನಸ್) ಘೋಷಿಸಲು ಮತ್ತು ಅವಧಿ ಪೂರ್ಣ, ಮರಣಜನ್ಯ ಹಾಗೂ ವಿಮಾ ತ್ಯಾಗ ಮೌಲ್ಯಗಳಿಂದ ದಿನಾಂಕ: 01.04.2022 ರಿಂದ 31.03.2024ರ ಅವಧಿಯಲ್ಲಿ ಪ್ರತಿ ಸಾವಿರ ರೂಪಾಯಿಗಳಿಗೆ ಪ್ರತಿ ವರ್ಷಕ್ಕೆ ರೂ.80/- ರಂತೆ ಮಧ್ಯಂತರ ಲಾಭಾಂಶವನ್ನು (ಇಂಟರೀಮ್ ಬೋನಸ್) ಘೋಷಿಸಲು ಸಚಿವ ಸಂಪುಟ ನಿರ್ಧರಿಸಿದೆ. 2. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ “ಆಶಾಕಿರಣ” ಯೋಜನೆಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ರೂ.52.85 ಕೋಟಿಗಳ…
ಉಡುಪಿ : ಹನಿಟ್ರ್ಯಾಪ್ ಜಾಲವೊಂದನ್ನು ಭೇದಿಸಿರುವ ಜಿಲ್ಲೆಯ ಕುಂದಾಪುರ ನಗರ ಠಾಣೆ ಪೊಲೀಸರು ಮಹಿಳೆ ಸಹಿತ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಹಣ ಹಾಗೂ ಕೃತ್ಯಕ್ಕೆ ಬಳಸಿದ ಎರಡು ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಮಾಹಿತಿ ನೀಡಿದ್ದಾರೆ. ನಾವುಂದ ಬಡಾಕೆರೆಯ ಸವದ್ ಯಾನೆ ಅಚ್ಚು (28), ಗುಲ್ವಾಡಿ ಗಾಂಧಿಕಟ್ಟೆಯ ಸೈಪುಲ್ಲಾ(38), ಹಂಗಳೂರು ಗ್ರಾಮದ ಮೊಹಮ್ಮದ್ ನಾಸೀರ್ ಶರೀಫ್ (36), ಕುಂಭಾಶಿ ಮೂಡುಗೋಪಾಡಿ ಜನತಾ ಕಾಲೋನಿಯ ಅಬ್ದುಲ್ ಸತ್ತಾರ್ (23), ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಾಗೋಡಿಯ ಅಬ್ದುಲ್ ಅಝೀಝ್ (26) ಹಾಗೂ ಕುಂದಾಪುರ ಎಂ.ಕೋಡಿಯ ಆಸ್ಮಾ (43) ಬಂಧಿತ ಆರೋಪಿಗಳು. ದೂರುದಾರ ಸಂದೀಪ್ ಕುಮಾರ್ ಸುಮಾರು ಮೂರು ತಿಂಗಳ ಹಿಂದೆ ಕುಂದಾಪುರಕ್ಕೆ ಬಂದಾಗ ಆರೋಪಿ ಸವದ್ನ ಪರಿಚಯವಾಗಿತ್ತು. ಮುಂದೆ ಆತನ ಸ್ನೇಹಿತರಾದ ಉಳಿದ ಆರೋಪಿಗಳ ಪರಿಚಯ ಕೂಡ ಆಗಿತ್ತು. ಇದೇ ವೇಳೆ ಸವದ್, ಆಸ್ಮಾ ಎಂಬ ಮಹಿಳೆಯನ್ನು ಪರಿಚಯ ಮಾಡಿಕೊಟ್ಟು, ಆಕೆಯ…
ನವದೆಹಲಿ : ಧರ್ಮಸ್ಥಳ ಪ್ರಕರಣದ ತನಿಖೆ NIA ಗೆ ವಹಿಸಲು ಪಟ್ಟು ಹಿಡಿಯಲಾಗಿದ್ದು, ಇದೀಗ ದೆಹಲಿಯಲ್ಲಿ ಕರ್ನಾಟಕದ ಸ್ವಾಮೀಜಿಗಳು ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ. ವಚನಾನಂದ ಸ್ವಾಮೀಜಿಗಳ ನೇತೃತ್ವ ಒಟ್ಟು 8 ಮಠದ ಸ್ವಾಮೀಜಿಗಳ ನಿಯೋಗ ತಂಡ ಭೇಟಿ ನೀಡಿ ಪ್ರಕರಣದ ತನಿಖೆ ವಹಿಸುವಂತೆ ಮದುವೆ ಮಾಡಿದ್ದಾರೆ. ಈ ವೇಳೆ ಸ್ವಾಮೀಜಿಗಳಿಗೆ ಸ್ಪಂದಿಸಿದ ನೀಡಿದ ಅಮಿತ್ ಶಾ ಧರ್ಮಸ್ಥಳ ಕೇಸ್ ಬಗ್ಗೆ ಕೇಂದ್ರದ ಕ್ಯಾಬಿನೆಟ್ ನಲ್ಲಿ ಚರ್ಚಿಸಲಾಗುತ್ತಿದ್ದು, ಸ್ವಾಮೀಜಿಗಳ ನಿಯೋಗಕ್ಕೆ ಅಮಿತ್ ಶಾ ಪ್ರತಿಕ್ರಿಯೆ ನೀಡಿದರು. ಎಲ್ಲಾ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಸಭೆಯ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ಧರ್ಮ ಕ್ಷೇತ್ರಗಳ ವಿರುದ್ಧ ಅಪಪ್ರಚಾರ ತಡೆಗೆ ಹೊಸ ಕಾನೂನು ಜಾರಿಗೊಳಿಸಲಾಗುತ್ತೆ ಸಮಾಜವನ್ನು ಜಾಗೃತಿಗೊಳಿಸಿ ಎಂದು ಸ್ವಾಮೀಜಿಗಳಿಗೆ ಅಮಿತ್ ಶಾ ಸೂಚನೆ ನೀಡಿದರು. ಬುರುಡೆ ಪ್ರಕರಣದ ಮಾಹಿತಿಯನ್ನು ಇದೆ ವೇಳೆ ಅಮಿತ್ ಶಾ ಸ್ವಾಮೀಜಿಗಳಿಂದ ಮಾಹಿತಿ ಪಡೆದುಕೊಂಡರು. ಧರ್ಮಸ್ಥಳ ಬುರುಡೆ ಕೇಸ್ ಬಗ್ಗೆ ಸ್ವಾಮಿಜಿಗಳಿಂದ ಅಮಿತ್ ಶಾ ಮಾಹಿತಿ ಸಂಗ್ರಹಿಸಿದ್ದಾರೆ.…
ಬೆಂಗಳೂರು : ಮುಡಾದಲ್ಲಿ ಸಿದ್ದರಾಮಯ್ಯ ಪತ್ನಿಗೆ 14 ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ರಾಜಪಾಲರ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಮೇಲ್ಮನವಿ ಸಲ್ಲಿಸಿದ್ದು, ಇಂದು ಹೈಕೋರ್ಟ್ ನಲ್ಲಿ ಪ್ರಕರಣದ ವಿಚಾರಣೆ ನಡೆಯಿತು. ವಿಚಾರಣೆಯ ಬಳಿಕ ಹೈಕೋರ್ಟ್ ವಿಚಾರಣೆಯನ್ನು 2 ವಾರಗಳ ಕಾಲ ಮುಂದೂಡಿತು. ವಿಚಾರಣೆಯ ವೇಳೆ ಸಿಎಂ ಸಿದ್ದರಾಮಯ್ಯ ಪರ ವಕೀಲರು ವಾದ ಮಂಡನೆಗೆ ಕಾಲಾವಕಾಶ ಕೋರಿದರು. ಬಳಿಕ ವಿಚಾರಣೆಯನ್ನು ಎರಡನೇ ವಾರಕ್ಕೆ ಹೈಕೋರ್ಟ್ ಮುಂದೂಡಿದೆ. ಹೈಕೋರ್ಟ್ ಏಕ ಸದಸ್ಯ ಪೀಠ ರಾಜ್ಯಪಾಲರ ಕ್ರಮ ಎತ್ತಿ ಹಿಡಿದಿತ್ತು. ತೀರ್ಪು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಇದೀಗ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.
ಮಂಡ್ಯ : ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಇಂದು ಸಾಮೂಹಿಕ ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ಇಂದು ನಾಳೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಮದ್ಯ ಮಾರಾಟ ನಿಷೇಧ ಜಾರಿಗೊಳಿಸಲಾಗಿದೆ. ನಾಗಮಂಗಲದ ಸುತ್ತಮುತ್ತಲು ಎರಡು ದಿನಗಳ ಕಾಲ ಮದ್ಯ ಮಾರಾಟ ನಿಷೇಧಗೊಳಿಸಿ ಜಿಲ್ಲಾಧಿಕಾರಿ ಡಾ. ಕುಮಾರ್ ಆದೇಶ ಹೊರಡಿಸಿದ್ದಾರೆ. ಗಣೇಶ ವಿಸರ್ಜನೆಯ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದ್ದು, ಕಳೆದ ವರ್ಷ ಗಣೇಶ ವಿಸರ್ಜನೆ ವೇಳೆ ಕೋಮುಗಲಭೆ ನಡೆದಿತ್ತು. ಕೋಮುಗಲಭೆಯ ವೇಳೆ ಸಾರ್ವಜನಿಕರ ಆಸ್ತಿಪಾಸ್ತಿ ನಷ್ಟವಾಗಿತ್ತು ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾ ಆಡಳಿತದಿಂದ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ ನಾಗಮಂಗಲದಲ್ಲಿ ದಾರಿಯುದ್ದಕ್ಕೂ ಸಿಸಿ ಕ್ಯಾಮೆರಾ ಗಳನ್ನು ಅಳವಡಿಸಲಾಗಿದೆ. ಪೊಲೀಸ್ ಭದ್ರತೆಯಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ ನಡೆಯಲಿದೆ.
ಕೊಡಗು : ಸುಮಾರು 18 ಲಕ್ಷ ಮೌಲ್ಯದ 70 ಕ್ವಿಂಟಲ್ ಕಾಫಿ ಕಳ್ಳತನ ಮಾಡಿದ ಐವರು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಈ ಒಂದು ಘಟನೆ ನಡೆದಿದ್ದು, ಬಂಧಿತರನ್ನು ಸುನಿಲ್, ರಾಜು, ಶರತ್, ದಿನೇಶ್ ಹಾಗು ಜಿತೇಂದ್ರ ಎಂದು ತಿಳಿದು ಬಂದಿದೆ. ಆರೋಪಿಗಳು ಸುಮಾರು 18 ಲಕ್ಷ ಮೌಲ್ಯದ ಕಾಫಿ ಕಳ್ಳತನ ಮಾಡಿದ್ದರು. ಕುಶಾಲನಗರ ತಾಲೂಕಿನ ಕಡ್ಲೂರಿನಲ್ಲಿ ಈ ಒಂದು ಘಟನೆ ನಡೆದಿತ್ತು. ಕೊಡಗು ಜಿಲ್ಲೆಯ ಕುಶಲನಗರ ತಾಲೂಕಿನ ಕಡ್ಲೂರು ಗ್ರಾಮದಲ್ಲಿ ಉಮಾ ಕಾಫಿ ವರ್ಕ್ಸ್ ನಲ್ಲಿ ಆರೋಪಿಗಳು ಕಳ್ಳತನ ಮಾಡಿದ್ದಾರೆ. ಬಂಧಿತರಿಂದ 6,095 ಕೆಜಿ ಕಾಫಿ ಹಾಗೂ ಮೂರು ವಾಹನ ವಶಕ್ಕೆ ಪಡೆಯಲಾಗಿದೆ ಈ ಕುರಿತು ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಪೋಕ್ಸೊ ಪ್ರಕರಣದಲ್ಲಿ ಚಾರ್ಜ್ಶೀಟ್ ಸಲ್ಲಿಸಲು ಪೊಲೀಸರು ಲಂಚಕ್ಕೆ ಬೇಡಿಕೆಯಿಟ್ಟಿದ್ದರು. 70 ಸಾವಿರ ಲಂಚ ಸ್ವೀಕರಿಸುವ ವೇಳೆ ದೇವನಹಳ್ಳಿ ಪೊಲೀಸ್ ಸಿಬ್ಬಂದಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಮಹಿಳಾ ಪಿಎಸ್ಐ ಜಗದೇವಿ ಪರಾರಿಯಾಗಿದ್ದಾರೆ. 70 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟು, 50 ಸಾವಿರ ಲಂಚ ಸ್ವೀಕರಿಸುತ್ತಿದ್ದ ಸಮಯದಲ್ಲಿ ದೇವನಹಳ್ಳಿ ಪೊಲೀಸ್ ಠಾಣಾ ಸಿಬ್ಬಂದಿ ಅಮರೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪೋಕ್ಸೊ ಪ್ರಕರಣದಲ್ಲಿ ಚಾರ್ಜ್ಶೀಟ್ ಸಲ್ಲಿಸಲು ಪೊಲೀಸರು ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಮಹಿಳೆಯೊಬ್ಬರು ನೀಡಿದ್ದ ದೂರಿನನ್ವಯ ಲೋಕಾಯುಕ್ತ ಅಧಿಕಾರಿಗಳಿಂದ ಕಾರ್ಯಾಚರಣೆ ನಡೆಸಲಾಗಿತ್ತು. ದೇವನಹಳ್ಳಿ ಠಾಣೆ ಪಿಎಸ್ಐ ಜಗದೇವಿ, ಕಾನ್ಸ್ಟೇಬಲ್ಗಳಾದ ಮಂಜುನಾಥ್, ಅಮರೇಶ್ ವಿರುದ್ದ ದೂರು ದಾಖಲಾಗಿತ್ತು. ಪೋಕ್ಸೊ ಕೇಸ್ನಲ್ಲಿ ಚಾರ್ಜ್ಶೀಟ್ ಹಾಕಲು 70 ಸಾವಿರ ಲಂಚ ಕೇಳಿದ್ದರು. ಸದ್ಯ ಲೋಕಾಯುಕ್ತ ದಾಳಿ ವೇಳೆ ಪಿಎಸ್ಐ ಜಗದೇವಿ ಹಾಗೂ ಕಾನ್ಸ್ಟೇಬಲ್ ಮಂಜುನಾಥ್ ಪರಾರಿಯಾಗಿದ್ದಾರೆ. ಲೋಕಾಯುಕ್ತ ಎಸ್ಪಿ ವಂಶಿಕೃಷ್ಣ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.
ಚಾಮರಾಜನಗರ : ಮಲೆ ಮಾದೇಶ್ವರ ಬೆಟ್ಟದಲ್ಲಿ ಅಕ್ರಮ ಮದ್ಯ ಸಾಗಾಟ ನಿಲ್ಲುತ್ತಿಲ್ಲ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಾದೇಶ್ವರ ಬೆಟ್ಟದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮುಂದುವರೆದಿದೆ. ಸಿಎಂ ಸಿದ್ದರಾಮಯ್ಯ ಮದ್ಯ ಮುಕ್ತ ಮಾಲೆ ಮಾದೇಶ್ವರ ಬೆಟ್ಟವನ್ನಾಗಿಸಲು ಪಣತೊಟ್ಟಿದ್ದಾರೆ. ಆದರೆ ಇದೀಗ ಮಾದಪ್ಪನ ಬೆಟ್ಟದಲ್ಲಿ ಮದ್ಯ ಸಾಗಟ ಎಗ್ಗಿಲ್ಲದೆ ನಡೆಯುತ್ತಿದೆ. ಮಲೆ ಮಹದೇಶ್ವರ ಬೆಟ್ಟದ ಸುತ್ತಲೂ ಇರುವ ಹುಲಿಗೂಡು, ತಂಬಡಗಿರಿ ಗ್ರಾಮದ ಬಳಿ ಅಕ್ರಮ ಮದ್ಯ ಸಾಗಾಟಕ್ಕೆ ಯತ್ನಿಸಲಾಗಿದೆ. ಈ ವೇಳೆ ವಡ್ಡರದೊಡ್ಡಿ ಗ್ರಾಮದ ನಿವಾಸಿ ಎ.ಜೇಮ್ಸ್ ಎನ್ನುವ ವ್ಯಕ್ತಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಶ್ರೀ ರಾಘವೇಂದ್ರ ಸ್ವಾಮಿಗಳ ಪವಾಡಗಳು 16 ನೇ ಶತಮಾನದಲ್ಲಿ ವಾಸಿಸುತ್ತಿದ್ದ ಪ್ರಮುಖ ಸಂತರಲ್ಲಿ ಒಬ್ಬರು ಮತ್ತು ಅವರ ಹಲವಾರು ಅದ್ಭುತ ಆಶೀರ್ವಾದಗಳು ಮತ್ತು ಕೆಲಸಗಳಿಂದಾಗಿ ಅನೇಕ ಜನರು ದೇವರೆಂದು ಪರಿಗಣಿಸಲ್ಪಟ್ಟ ದೇವರು “ಶ್ರೀ ರಾಘವೇಂದ್ರ ಸ್ವಾಮಿಗಳು”. ಇಂದಿಗೂ ರಾಘವೇಂದ್ರ ಸ್ವಾಮಿಯ ಭಕ್ತರು ಅವರ ಉಪಸ್ಥಿತಿಯನ್ನು ಮತ್ತು ಅನುಗ್ರಹವನ್ನು ಅನುಭವಿಸುತ್ತಾರೆ. ಶ್ರೀ ರಾಘವೇಂದ್ರ ಸ್ವಾಮಿಗಳು ಅನೇಕ ಪವಾಡಗಳನ್ನು ಮಾಡಿದ್ದಾರೆ. ರಾಘವೇಂದ್ರ ಸ್ವಾಮಿಗಳ ಪವಾಡ ಮತ್ತು ಆಸಕ್ತಿದಾಯಕ ವಿಚಾರಗಳು ಹೀಗಿವೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ…
ದಾವಣಗೆರೆ : ದಾವಣಗೆರೆ ಶಾಸಕ ಬಿಪಿ ಹರೀಶ್ ಎಸ್ಪಿ ಉಮಾ ಪ್ರಶಾಂತ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಆರೋಪ ಹಿನ್ನಲೆಯಲ್ಲಿ ಇದೀಗ ದಾವಣಗೆರೆ ನಗರದ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಹೌದು ದಾವಣಗೆರೆ ಎಸ್ಪಿ ಉಮಾ ಪ್ರಶಾಂತ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಬಿಜೆಪಿ ಶಾಸಕ ಬಿಪಿ ಹರೀಶ್ಗೆ ಇದೀಗ ಸಂಕಷ್ಟ ಎದುರಾಗಿದೆ. ಸೆಪ್ಟೆಂಬರ್ 02ರಂದು ದಾವಣಗೆರೆ ನಗರದ ವರದಿಗಾರರ ಕೂಟದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಎಸ್ಪಿ ಉಮಾ ಪ್ರಶಾಂತ್ರನ್ನು ಉದ್ದೇಶಿಸಿ ಮಾತನಾಡುವಾಗ ಶಾಮನೂರು ಮನೆ ಶ್ವಾನದ ತರ ಆಡುತ್ತಾರೆ’ ಎಂದು ಶಾಸಕ ಬಿಪಿ ಹರೀಶ್ ಕೀಳು ಮಟ್ಟದ ಭಾಷೆ ಬಳಸಿದ್ದರು. ಈ ಸಂಬಂಧ ಎಸ್ಪಿ ಉಮಾ ಪ್ರಶಾಂತ್ ನೀಡಿದ ದೂರಿನ ಮೇರೆಗೆ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ BNS 2023 (U/s-132,351(2),79) ಪ್ರಕರಣ ದಾಖಲಾಗಿದೆ. ಸದ್ಯ ಶಾಸಕರ ಆಕ್ಷೇಪಾರ್ಹ ಹೇಳಿಕೆಗೆ ಎಫ್ಐಆರ್ ದಾಖಲಾಗಿದೆ. ಈ ಕಾರಣಕ್ಕೆ ನಿನ್ನೆ ರಾತ್ರಿ ದಾವಣಗೆರೆ ನಗರದ ಕೆಟಿಜೆ ಪೊಲೀಸ್ ಠಾಣೆಯ ಸಿಬ್ಬಂದಿ ದಾವಣಗೆರೆ…












