Author: kannadanewsnow05

ಬೆಂಗಳೂರು : ಮಧ್ಯಪ್ರದೇಶ ರಾಜಸ್ಥಾನದಲ್ಲಿ ಕೆಮ್ಮಿನ ಸಿರಪ್ ಕುಡಿದು ಮಕ್ಕಳ ಸರಣಿ ತಾವು ಸಂಭವಿಸಿದ ಹಿನ್ನೆಲೆಯಲ್ಲಿ ಇದೀಗ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು ಈಗಾಗಲೇ ಎರಡು ಸಿರಪ್ ಗಳನ್ನು ಖರೀದಿ ಹಾಗೂ ಮಾರಾಟ ನಿಷೇಧಿಸಿದ್ದು, ರಾಜ್ಯ ಆರೋಗ್ಯ ಇಲಾಖೆ ಮಹತ್ವದ ಸಭೆ ನಡೆಸಿ ಕೆಮ್ಮಿನ ಸಿರಪ್ ಬಳಕೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಹೌದು ಆರೋಗ್ಯ ಇಲಾಖೆ ಮಾರ್ಗಸೂಚಿಯ ಪ್ರಕಾರ, 2 ವರ್ಷದೊಳಗಿನ ಮಕ್ಕಳಿಗೆ ಸಿರಪ್ ನೀಡುವಂತಿಲ್ಲ. 2-5 ವರ್ಷದ ಮಕ್ಕಳಿಗೆ ತಜ್ಞರ ಸಲಹೆ ಮೇರೆಗೆ ಔಷಧಿ ನೀಡಬೇಕು. ಅಲ್ಲದೇ 5 ವರ್ಷ ಮೇಲ್ಪಟ್ಟ ಮಕ್ಕಳಿಗೆ ವೈದ್ಯರ ಸಲಹೆ ಮೇರೆಗೆ ಔಷಧಿ ನೀಡಬೇಕು. ಕಡಿಮೆ ಅವಧಿಗೆ ಕನಿಷ್ಠ ಅಗತ್ಯವಿರುವ ಡೋಸ್ ಬಳಸಬೇಕು. ಮಲ್ಟಿಮೆಡಿಸನ್ ಒಳಗೊಂಡ ಸಿರಪ್‌ಗಳನ್ನ ಬಳಸಬಾರದು ಎಂದು ತಿಳಿಸಿದೆ. ಇನ್ನು ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ಕೆಮ್ಮಿನ ಸಿರಪ್‌ಗಳನ್ನ ಖರೀದಿಸಬಾರದು, ಬಳಸಬಾರದು. ಈ ಹಿಂದೆ ಬಳಸಿದ ಔಷಧಿಗಳನ್ನ ಮರುಬಳಕೆ ಮಾಡಬಾರದು. ಕೆಮ್ಮು ಉಲ್ಬಣಗೊಂಡರೆ ವೈದ್ಯರನ್ನ ಸಂಪರ್ಕಿಸಿ. ಅವಧಿ ಮೀರಿದ ಔಷಧಿಗಳನ್ನ ನೋಡಿ ಬಳಸಬೇಕು. ಯಾವುದೇ…

Read More

ಕೊಪ್ಪಳ : ಸಚಿವ ಜಮೀರ್ ಅಹ್ಮದ್ ಖಾನ್ ನವೆಂಬರ್ ನಲ್ಲಿ ಸಚಿವ ಸಂಪುಟ ಪುನಾರಚನೆ ಆಗಲಿದೆ. ಹೊಸವರಿಗೆ ಸಚಿವ ಸ್ಥಾನ ನೀಡಲಾಗುತ್ತದೆ ಎಂದು ಹೇಳಿಕೆ ನೀಡಿದ್ದು, ಇನ್ನು ವಿಪಕ್ಷ ನಾಯಕರು ನವೆಂಬರ್ ನಲ್ಲಿ ಕ್ರಾಂತಿ ಆಗಲಿದ್ದು ಮುಖ್ಯಮಂತ್ರಿ ಸ್ಥಾನ ಬದಲಾವಣೆ ಆಗಲಿದೆ ಎಂದು ಹೇಳಿಕೆ ನೀಡಿದ್ದಾರೆ. ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಪ್ಪಳದಲ್ಲಿ ಮಾಧ್ಯಮಗಳು ನವೆಂಬರ್ ನಲ್ಲಿ ಕ್ರಾಂತಿಯಾಗಲಿದೆಯಾ ಎಂದು ಪ್ರಶ್ನಿಸಿದಾಗ, ನವೆಂಬರ್​ನಲ್ಲಿ ಯಾವ ಕ್ರಾಂತಿನೂ‌ ಇಲ್ಲ, ಭ್ರಾಂತಿನೂ ಇಲ್ಲ ಎಂದು ತಿಳಿಸಿದರು. ಇನ್ನು ಸಮೀಕ್ಷೆಯ ಹಿಂದೆ ಯಾರನ್ನೂ ತುಳಿಯುವ ಪ್ರಶ್ನೆ ಇಲ್ಲ. ಸಮಸಮಾಜ ನಿರ್ಮಾಣ ಮಾಡಬೇಕು ಎಂಬುದು ನಮ್ಮ ಉದ್ದೇಶ. ಬದಲಾವಣೆ ಬೇಡ ಎನ್ನುವವರು ಸಮೀಕ್ಷೆ ವಿರೋಧಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಸಮೀಕ್ಷೆಯಲ್ಲಿ ಭಾಗಿಯಾಗುವುದಿಲ್ಲ ಎಂಬ ಹೇಳಿಕೆಗೆ ಪ್ರತ್ರಿಕ್ರಿಯಿಸಿ, ಕೇಂದ್ರ ಸರ್ಕಾರ ಜಾತಿ ಗಣತಿ ಮಾಡುತ್ತದೆ, ಆಗ ಅದನ್ನು ವಿರೋಧ ಮಾಡುತ್ತಾರಾ? ಇದನ್ನು ನೀವು ಅವರಿಗೆ ಕೇಳಿದ್ದೀರಾ? ಎಂದು ಮಾಧ್ಯಮದವರ ಮೇಲೆ ಗರಂ…

Read More

ಮಂಡ್ಯ :- ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಕ್ಷಿಪ್ರವಾಗಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೆ ವಿಪಕ್ಷ ನಾಯಕರು ಇಲ್ಲಸಲ್ಲದ ವಿಚಾರಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಶಾಸಕ ಕೆ.ಎಂ.ಉದಯ್ ವಾಗ್ಧಾಳಿ ನಡೆಸಿದರು. ಮದ್ದೂರು ತಾಲೂಕಿನ ಹೆಮ್ಮನಹಳ್ಳಿ, ಬೆಸಗರಹಳ್ಳಿ ಗ್ರಾಮಗಳಲ್ಲಿ ಪರಿಶಿಷ್ಟ ಸ್ಮಶಾನಗಳ ಅಭಿವೃದ್ಧಿ ಹಾಗೂ ಚಾಮನಹಳ್ಳಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸೋಮವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ನಾನು ಶಾಸಕನಾದ ನಂತರ ಕ್ಷೇತ್ರದಲ್ಲಿ ಕೇವಲ 2 ವರ್ಷಗಳಲ್ಲಿ ಹಿಂದೆಂದೂ ಕಾಣದಷ್ಟು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗುತ್ತಿದೆ. ಆದರೆ, ಕ್ಷೇತ್ರದ ಅಭಿವೃದ್ಧಿಯನ್ನು ಸಹಿಸದ ವಿಪಕ್ಷಗಳು ಇಲ್ಲಸಲ್ಲದ ವಿಚಾರಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಕಿಡಿಕಾರಿದರು. ಕ್ಷೇತ್ರದ ಅಭಿವೃದ್ಧಿಯನ್ನು ಯಾರು ತಾನೇ ಬೇಡ ಎನ್ನುತ್ತಾರೆ. ಕ್ಷೇತ್ರ ಅಭಿವೃದ್ಧಿ ವಿಷಯದಲ್ಲಿ 25 ವರ್ಷದಷ್ಟು ಹಿಂದೆ ಉಳಿದಿದೆ. ಅದನ್ನು ಮನಗಂಡು ಸರ್ಕಾರದಿಂದ ವಿಶೇಷ ಅನುದಾನ ತಂದು ಸಮಗ್ರ ಅಭಿವೃದ್ಧಿ ಮಾಡುತ್ತಿದ್ದು, ಇಷ್ಟೊಂದು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ಸಿಗುತ್ತಿದೆ ಎಂಬ ಅಸೂಯೆಯಿಂದ ವಿರೋಧ ಪಕ್ಷಗಳು ಅನಗತ್ಯವಾಗಿ ಗೊಂದಲಗಳನ್ನು ಸೃಷ್ಟಿಸುತ್ತಿದ್ದಾರೆ…

Read More

ಚಿಕ್ಕಮಗಳೂರು : ಚಿಕ್ಕಮಗಳೂರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದ್ದು, ನಾಲ್ವರಿಗೆ ಗಂಭೀರವಾದ ಗಾಯಗಳಾಗಿವೆ. ತಕ್ಷಣ ಗಾಯಾಳುಗಳನ್ನು ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಚಿಕ್ಕಮಗಳೂರು ತಾಲೂಕಿನ ಅಲ್ಲಂ ಪುರ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಮರಕ್ಕೆ ಗುದ್ದಿದರಭಸಕ್ಕೆ ಪಲ್ಟಿಯಾಗಿ ಕಾರು ಕಾಲುವಿಗೆ ಬಿದ್ದಿದೆ. ಕಾರಿನಲ್ಲಿದ್ದ ಚಿಕ್ಕಮಂಗಳೂರು ಸಮೀಪದ ದಾಸರಹಳ್ಳಿ ನಿವಾಸಿಗಳಿಗೆ ಗಂಭೀರವಾದ ಗಾಯಗಳಾಗಿವೆ. ಅಪಘಾತದ ಕುರಿತು ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಳಗಾವಿ : ನಾಳೆ ನಡೆಯಲಿರುವ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ನಾಗೇಂದ್ರ ಮತ್ತು ಕೆ. ಎನ್. ರಾಜಣ್ಣ ಅವರ ರಾಜೀನಾಮೆಯಿಂದ ತೆರವಾಗಿರುವ ಎರಡು ಸಚಿವ ಸ್ಥಾನಗಳನ್ನು ಭರ್ತಿ ಮಾಡುವಂತೆ ಈ ಹಿಂದೆಯೇ ಬೇಡಿಕೆ ಇಟ್ಟಿದ್ದೇವೆ. ಆದಷ್ಟು ಬೇಗನೆ ಈ ಸಮುದಾಯಕ್ಕೆ ಸಚಿವ ಸ್ಥಾನ ನೀಡುವಂತೆ ಸ್ವಾಮೀಜಿ ನೇತೃತ್ವದಲ್ಲಿ ಬೇಡಿಕೆ ಇಡುತ್ತೇವೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ನಗರದಲ್ಲಿಂದು ಮಾಧ್ಯಮದವರ ಜೊತೆಗೆ ಮಾತನಾಡಿದ ಅವರು, ‘ನಾಗೇಂದ್ರ ಮತ್ತು ಕೆ. ಎನ್. ರಾಜಣ್ಣ ಅವರ ರಾಜೀನಾಮೆಯಿಂದ ತೆರವಾಗಿರುವ ಎರಡು ಸಚಿವ ಸ್ಥಾನಗಳನ್ನು ಭರ್ತಿ ಮಾಡುವಂತೆ ಈ ಹಿಂದೆಯೇ ಬೇಡಿಕೆ ಇಟ್ಟಿದ್ದೇವೆ. ಆದಷ್ಟು ಬೇಗನೆ ಈ ಸಮುದಾಯಕ್ಕೆ ಸಚಿವ ಸ್ಥಾನ ನೀಡುವಂತೆ ತಿಳಿಸಿದ್ದೇವೆ. ನಾಳೆ ನಡೆಯಲಿರುವ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿ ಪೀಠದ ಪ್ರಸನ್ನಾನಂದ ಸ್ವಾಮೀಜಿ ನೇತೃತ್ವದ ನಿಯೋಗದ ಮೂಲಕ ಮುಖ್ಯಮಂತ್ರಿ ಮತ್ತು ಪಕ್ಷದ ಅಧ್ಯಕ್ಷರಿಗೆ ಭೇಟಿಯಾಗಿ ಒತ್ತಡ ಹಾಕುತ್ತೇವೆ’ ಎಂದಿದ್ದಾರೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಹಾಡ ಹಗಲೇ ಎರಡು ಗುಂಪುಗಳ ನಡುವೆ ಮಾರಾಮಾರಿ ಆಗಿದೆ. ಚಾಕು ಹಿಡಿದು ನಡು ರಸ್ತೆಯಲ್ಲಿಯೇ ಗ್ಯಾಂಗ್ ಹೊಡೆದಾಡಿಕೊಂಡಿದೆ. ಬೆಂಗಳೂರಿನ ಕೋಣನಕುಂಟೆ ಬೆಳೆಯ ಸೋಮಣ್ಣ ಲೇಔಟ್ ಅಲ್ಲಿ ಈ ಒಂದು ಹೊಡೆದಾಟ ಗಲಾಟೆ ನಡೆದಿದೆ. ಆಟೋ ಮತ್ತು ಕಾರಿನಲ್ಲಿ ಬಂದು ಯುವಕರ ಮೇಲೆ ಹಲ್ಲೆ ನಡೆಸಿದ್ದಾರೆ. ಯುವಕರ ಪುಂಡಾಟದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಶನಿವಾರ ಸಂಜೆ 4 ಗಂಟೆಗೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಸಿನಿಮಾ ಸ್ಟೈಲ್ ನಲ್ಲಿ ಎರಡು ಗುಂಪುಗಳ ನಡುವೆ ಈ ಒಂದು ಗಲಾಟೆ ನಡೆದಿದೆ. ಈ ಕುರಿತು ಕೋಣನಕುಂಟೆ ಪೊಲೀಸರು ಪ್ರಕರಣದ ದಾಖಲಿಸಿಕೊಂಡು ಪುಂಡರು ಯಾರು ಎನ್ನುವುದರ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ ಎಂದು ತಿಳಿದುಬಂದಿದೆ.

Read More

ಕೊಪ್ಪಳ, ಅಕ್ಟೋಬರ್ 6 : ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೇಲ್ಜಾತಿಗಳನ್ನು ತುಳಿಯಲು ಸಮೀಕ್ಷೆ ನಡೆಸಲಾಗುತ್ತಿದೆ ಎಂಬ ಕೇಂದ್ರ ಸಚಿವ ಸೋಮಣ್ಣ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ನಡೆಸದಿದ್ದರೆ, ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ. ಈ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸಮಸಮಾಜ ನಿರ್ಮಾಣವನ್ನು ವಿರೋಧಿಸುವವರು ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಜನರ ದಾರಿ ತಪ್ಪಿಸುತ್ತಿದ್ದಾರೆ. ಈಗಾಗಲೇ 1.10 ಕೋಟಿ ಕುಟುಂಬಗಳ ಸಮೀಕ್ಷಾ ಕಾರ್ಯ ಮುಗಿದಿದ್ದು, ನಿನ್ನೆವರೆಗೆ ಶೇ.63 ರಷ್ಟು ಸರ್ವೇ ಕಾರ್ಯ ಪ್ರಗತಿಯಾಗಿದೆ. ನಾಳೆ ಸಂಜೆವರೆಗೆ ಸಮೀಕ್ಷೆಯ ಪ್ರಗತಿಯನ್ನು ಪರಿಶೀಲಿಸಿ, ಸಮೀಕ್ಷೆ ಅವಧಿ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…

Read More

ಕೊಪ್ಪಳ : ಬಿಜೆಪಿ ಒಂದೆ ಒಂದು ಮನೆ ಕೊಟ್ಟಿದ್ರೆ ರಾಜೀನಾಮೆ ಕೊಡುತ್ತೇನೆ ಎಂದು ಕೊಪ್ಪಳದಲ್ಲಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಸವಾಲು ಹಾಕಿದ್ದಾರೆ. ಧಮ್ಮು, ತಾಕತ್ತು ಬಗ್ಗೆ ವಿಪಕ್ಷ ನಾಯಕ ಆರ್ ಅಶೋಕ್ ಮಾತನಾಡುತ್ತಾರೆ. ನಾನು ಬಿಜೆಪಿ ನಾಯಕರಿಗೆ ಓಪನ್ ಚಾಲೆಂಜ್ ಹಾಕುತ್ತೇನೆ ಒಂದೇ ಒಂದು ಮನೆ ಕೊಟ್ಟಿದ್ದು ಸಾಬೀತು ಮಾಡಿದರೆ ಕೂಡಲೇ ರಾಜೀನಾಮೆ ನೀಡುತ್ತೇನೆ. ಇಂದು ಸಂಜೆ ರಾಜ್ಯಪಾಲರಿಗೆ ರಾಜೀನಾಮೆ ಕೊಡುತ್ತೇನೆ ಎಂದು ಸವಾಲು ಹಾಕಿದರು. ಕೊಪ್ಪಳದಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಶಂಕು ಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್, ಬಿಜೆಪಿಯವರದು ಬರೀ ಸುಳ್ಳು. ಈ ಹಿಂದೆ ಹೆಗಡೆ ಸಂವಿಧಾನ ಬದಲಾವಣೆ ಮಾಡುತ್ತೇನೆ ಅಂದಿದ್ದರು. ಅಂಬೇಡ್ಕರ್ ಸಂವಿಧಾನ ಕೊಟ್ಟಿದ್ದಕ್ಕೆ ನಾವು ಇಲ್ಲಿ ಕುಳಿತಿದ್ದೇವೆ. ಸಿಎಂ ಸಿದ್ದರಾಮಯ್ಯ ಎಲ್ಲಾ ಗ್ಯಾರಂಟಿಗಳನ್ನು ಜಾರಿ ಮಾಡಿದ್ದಾರೆ ಎಂದರು.

Read More

ಬೆಂಗಳೂರು : ದೇಶದ ಬೇರೆ ರಾಜ್ಯಗಳಲ್ಲಿ ಕಾಫ್‌ ಸಿರಫ್‌ ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಹಾಸನದ ಚೆನ್ನರಾಯಪಟ್ಟಣದಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಕಳಪೆ ಕಾಫ್ ಸಿರಫ್ ಕರ್ನಾಟಕ ರಾಜ್ಯದಲ್ಲಿ ಸರಬರಾಜು ಆಗಿಲ್ಲ ಎಂದು ಸ್ಪಷ್ಟಪಡಿಸಿದರು. ಮುನ್ನೆಚ್ವರಿಕೆ ಕ್ರಮವಾಗಿ ಎಲ್ಲಾ ಕಂಪನಿಗಳ ಕಾಫ್‌ ಸಿರಫ್‌ಗಳ ಮಾದರಿ ಸಂಗ್ರಹಿಸಿ ತಪಾಸಣೆಗೆ ಒಳಪಡಿಸಲಾಗುತ್ತಿದೆ. ರಾಜ್ಯದಲ್ಲಿಯ ಕಾಫ್‌ ಸಿರಫ್‌ಗಳ ಟೆಸ್ಟ್‌ಗೆ ಇಲಾಖೆ ಮುಂಜಾಗ್ರತ ಕ್ರಮ ಕೈಗೊಂಡಿದೆ. ರಾಜ್ಯದಲ್ಲಿ ಈ ಮೊದಲಿನಿಂದಲು ಔಷಧಿ ನಿಯಂತ್ರಣ ಇಲಾಖೆ ಎಚ್ಚರಿಕೆ ವಹಿಸಿದೆ. ಹೆಚ್ಚಿನ ಔಷಧಿಗಳನ್ನು ತಪಾಸಣೆಗೆ ಒಳಪಡಿಸುತ್ತಿದ್ದು, ಇದರಲ್ಲಿ ಕರ್ನಾಟಕ ದೇಶದಲ್ಲೇ ಮುಂಚೂಣಿಯಲ್ಲಿದೆ ಎಂದು ತಿಳಿಸಿದರು. ರಾಜ್ಯ ಆರೋಗ್ಯ ಇಲಾಖೆಯಿಂದ ಕಾಫ್‌ ಸಿರಫ್‌ ಬಳಕೆ ಬಗ್ಗೆ ಮಾರ್ಗಸೂಚಿ ಬಿಡುಗಡೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಈಗಾಗಲೇ ಬೇರೆ ಬೇರೆ ಕಂಪನಿಗಳ ಎಲ್ಲಾ ಕಾಫ್‌ ಸಿರಫ್‌ಗಳ ಮಾದರಿ ಸಂಗ್ರಹಿಸಿ ತಪಾಸಣೆ ನಡೆಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಕರ್ನಾಟಕದಲ್ಲಿ…

Read More

ಬೆಂಗಳೂರು : ಕೋಲಾರದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಟಿಟಿ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿಗಳು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಸುಣ್ಣಕಲ್ಲು ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ರಾಮಾಂಜಲು (36) ಹಾಗೂ ಕಲಾವತಿ (27) ಮೃತ ದಂಪತಿಗಳು ಎಂದು ತಿಳಿದುಬಂದಿದೆ. ಮೃತರು ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಯರಂವಾರಪಲ್ಲಿ ನಿವಾಸಿಗಳು ಎಂದು ತಿಳಿದುಬಂದಿದೆ. ಸ್ವಗ್ರಾಮದಿಂದ ಬೆಂಗಳೂರಿಗೆ ಕೆಲಸಕ್ಕೆ ತೆರಳುವ ವೇಳೆ ಅಪಘಾತ ಸಂಭವಿಸಿದೆ. ರಾಯಲ್ಪಾಡು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Read More