Subscribe to Updates
Get the latest creative news from FooBar about art, design and business.
Author: kannadanewsnow05
ಬೆಳಗಾವಿ : ಬೆಳಗಾವಿಯಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು ಕಬ್ಬು ಕಟಾವು ಮಾಡುವ ಯಂತ್ರಕ್ಕೆ ಸಿಲುಕಿ ಇಬ್ಬರು ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ನಡೆದಿದೆ. ಬಾರವ್ವ ಕೋಬಡಿ (60) ಹಾಗೂ ಲಕ್ಷ್ಮೀಬಾಯಿ ರುದ್ರಗೌಡರ (65) ಎಂದು ತಿಳಿದುಬಂದಿದೆ. ಕಟಾವು ವೇಳೆ ಮುಂದೆ ನೋಡದೆ ಡ್ರೈವರ್ ವಾಹನ ಚಲಾಯಿಸಿದ್ದಾನೆ ಇಬ್ಬರೂ ಮಹಿಳೆಯರ ತಲೆ ಯಂತ್ರದಲ್ಲಿ ಸಿಲುಕಿ ಇಬ್ಬರು ಸಾವನ್ನಪ್ಪಿದ್ದಾರೆ. ಕಬ್ಬಿಣ ಗದ್ದೆಗೆ ಕೂಲಿ ಕೆಲಸಕ್ಕೆ ಎಂದು ಇಬ್ಬರು ಮಹಿಳೆಯರು ಬಂದಿದ್ದರು. ಚಾಲಕನ ನಿರ್ಲಕ್ಷದಿಂದ ಕೂಲಿಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ. ತಳದಲ್ಲಿ ಕುಟುಂಬ ಸದಸ್ಯರ ಆಕ್ರಂದನ ಇದೀಗ ಮುಗಿಲು ಮುಟ್ಟಿದೆ. ಘಟನೆ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ತನಿಖೆ ಕೈಗೊಂಡಿದ್ದಾರೆ.
BREAKING : ಕಾರವಾರದಲ್ಲಿ ಜಿಪಿಎಸ್ ಟ್ರ್ಯಾಕರ್ ಹೊಂದಿದ ಸೀಗಲ್ ಹಕ್ಕಿ ಪತ್ತೆ : ನೌಕಾನೆಲೆಯಲ್ಲಿ ಚೀನಾ ಗೂಢಚರ್ಯೆ ಶಂಕೆ
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ವಲಸಿಗ ಸಿಗಲ್ ಪಕ್ಷಿಯಲ್ಲಿ ಚೀನಾದ ಜಿಪಿಎಸ್ ಟ್ರಾಕರ್ ಪತ್ತೆಯಾಗಿದೆ. ಟ್ರಾಕರ್ ಹೊಂದಿದ ಸಿಗಲ್ ಪಕ್ಷಿಯನ್ನು ಅರಣ್ಯ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಕದಂಬ ನೌಕಾನೆಲ್ಲಿ ಪ್ರದೇಶದಲ್ಲಿ ನಿನ್ನೆ ಸಿಗಲ್ ಹಕ್ಕಿ ಕಾಣಿಸಿಕೊಂಡಿತ್ತು ಉತ್ತರ ಕನ್ನಡ ಜಿಲ್ಲೆಯ ಕದಂಬ ನೌಕಾನೆಲೆ ಪ್ರದೇಶದಲ್ಲಿ ಹಕ್ಕಿ ಕಾಣಿಸಿಕೊಂಡಿತು. ಟ್ರ್ಯಾಕರ್ ಹೊಂದಿದೆ ಸೀಗಲ್ ಹಕ್ಕಿ ಕಂಡು ಪೊಲೀಸರು ಆತಂಕಗೊಂಡಿದ್ದಾರೆ ಈ ಟ್ರಾಕ್ಟರ್ ಬಗ್ಗೆ ಕಾರವಾರ ಪೊಲೀಸರು ಸದ್ಯ ಮಾಹಿತಿ ಕಲೆ ಹಾಕುತ್ತಿದ್ದಾರೆ. ಜಿಪಿಎಸ್ ಟ್ರಾಕರ್ ನಲ್ಲಿ ಚೀನಾದ ವಿಜ್ಞಾನ ಅಕಾಡೆಮಿಯ ಬರಹ ಹೊಂದಿದೆ ನಮೂದಿಸಲಾಗಿದೆ. ಇಕೋ ಎನ್ವಿರಾನ್ಮೆಂಟ್ ಎಂದು ನಮೂದಿಸಲಾಗಿದೆ. ಸಿಗಲ್ ಹಕ್ಕಿಗಳ ಚಲನವಲನ ಮತ್ತು ಅವುಗಳ ಆಹಾರ ಪದ್ಧತಿ ಹಾಗೂ ವಲಸೆ ಸಮೀಕ್ಷೆಗೆ ಈ ಒಂದು ಜಿಪಿಎಸ್ ಟ್ರಾಕರ್ ಅಳವಡಿಸಲಾಗುತ್ತದೆ.ಕಚೇರಿಗೆ ಶಿಫ್ಟ್ ಮಾಡಲಾಗಿದೆ ಚೀನಾದ ಅಕಾಡೆಮಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸಂಪರ್ಕಿಸುತ್ತಿದ್ದಾರೆ ಕಾರವಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ರೇಷನ್ ಕಾರ್ಡ್ಗೆ ಅರ್ಜಿ ಹಾಕಿ ಕಾಯುತ್ತಿದ್ದವರಿಗೆ ಗುಡ್ನ್ಯೂಸ್ ಅನ್ನು ಆಹಾರ ಸಚಿವ ಕೆಎಚ್ ಮುನಿಯಪ್ಪ ನೀಡಿದ್ದಾರೆ. ಹೌದು, ಅವರು ಸುವರ್ಣ ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸದಾಗಿ ಬಿಪಿಎಲ್ ಕಾರ್ಡ್ ಪಡೆದುಕೊಳ್ಳುವವ ಸಲುವಾಗಿ ಒಟ್ಟು 3.96 ಲಕ್ಷ ಅರ್ಜಿಗಳು ಬಂದಿದ್ದು, ಅವುಗಳಲ್ಲಿ ಈಗಾಗಲೇ ಅರ್ಜಿಗಳನ್ನು ವಿಲೇವಾರಿ ಮಾಡಿದ್ದು ಮುಂದಿನ ಒಂದುವರೆ ತಿಂಗಳಲ್ಲಿ ಅರ್ಹರಿಗೆ ಹೊಸ ರೇಷನ್ ಕಾರ್ಡ್ಗಳನ್ನು ನೀಡಲಾಗುತ್ತೆ ಎಂದರು. ರಾಜ್ಯದಲ್ಲಿ ಹೊಸದಾಗಿ ಬಿಪಿಎಲ್ ಕಾರ್ಡ್ ಪಡೆದುಕೊಳ್ಳುವವ ಸಲುವಾಗಿ ಒಟ್ಟು 3.96 ಲಕ್ಷ ಅರ್ಜಿಗಳು ಬಂದಿದ್ದವು, ಈ ಪೈಕಿ ಮಾನದಂಡವನ್ನು ಪೂರೈಸಿರುವ ಪೈಕಿ 2.95 ಲಕ್ಷ ಅರ್ಜಿಗಳನ್ನು ಈಗಾಗಲೇ ವಿಲೇವಾರಿ ಮಾಡಲಾಗಲಾಗಿದ್ದು, ಬಾಕಿ ಉಳಿದ ಮಂದಿಗೆ ಶೀಘ್ರದಲ್ಲಿ ಅಂದರೆ ಒಂದು ತಿಂಗಳೊಳಗೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಅಂತ ಅವರು ಹೇಳಿದರು. ಇನ್ನೂ ಇದೇ ವೇಳೆ ಅವರು ಮಾತನಾಡುತ್ತ ಅನರ್ಹ ಬಿಪಿಎಲ್ ಕಾರ್ಡ್ ಫಲಾನುಭವಿಗಳನ್ನು ಹತ್ತಿಕ್ಕಿವ ನಿಟ್ಟಿನಲ್ಲಿ ಎಪಿಎಲ್ಗೆ ಬದಲಾವಣೆ ಮಾಡಿ ಅರ್ಹ ಫಲಾನುಭವಿಗಳಿಗೆ ಕಾರ್ಡ್ಗಳನ್ನು ನೀಡಲಾಗುತ್ತಿದೆ…
ಬೆಳಗಾವಿ : ಇಂದು ಸುವರ್ಣ ಸೌಧದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಕೆಲವು ರೈತರು ಭೇಟಿಯಾಗಲು ಬಂದಿದ್ದರು. ತಮ್ಮ ಊರಿನ ಕನ್ನಡ ಶಾಲೆಯ ಅಭಿವೃದ್ಧಿ ಮೂಲಭೂತ ಸೌಕರ್ಯ ಒದಗಿಸುವಂತೆ ಕೋರಲು ಭೇಟಿಯಾಗಲು ಸುವರ್ಣಸುವುದಕ್ಕೆ ಬಂದಿದ್ದರು. ಈ ವೇಳೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ರೈತರು, ಗರಂ ಆಗಿದ್ದಾರೆ. ಕನ್ನಡ ಶಾಲೆ ಅಭಿವೃದ್ಧಿಯ ಬಗ್ಗೆ ರೈತರು ಭೇಟಿಗೆ ಬಂದಿದ್ದರು ಸಚಿವರನ್ನು ಭೇಟಿ ಮಾಡಲು ಬಂದಾಗ ನಾನು ಎಲ್ಲ ಮಾಡಿದ್ದೀನಿ ಮೊದಲು ಹೊರಗೆ ಹೋಗಿ ಅಂತ ರೈತರಿಗೆ ಹೇಳಿದ್ದಾರೆ. ರೈತರನ್ನು ಸಿಬ್ಬಂದಿಗಳು ಕಚೇರಿಯಿಂದ ಹೊರಗಡೆ ಹಾಕಿದ್ದಾರೆ. ಆಗ ರೈತರು ಅವನೊಬ್ಬ ಶಿಕ್ಷಣ ಸಚಿವ ಗೂಂಡಾಗಳನ್ನು ಇಟ್ಟುಕೊಂಡು ನಮ್ಮ ಮೇಲೆ ಹಲ್ಲೆ ಮಾಡಲು ಬಂದಿದ್ದಾನೆ ಎಂದು ಸಚಿವ ಮಧು ಬಂಗಾರಪ್ಪ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಹಿವೇಳೆ ಪೊಲೀಸರು ರೈತರನ್ನು ವಶಕ್ಕೆ ಪಡೆದುಕೊಂಡ ಘಟನೆ ನಡೆಯಿತು.
ಬೆಳಗಾವಿ : ಇತ್ತೀಚಿಗೆ ಯುವಕರಿಗೆ ಮದುವೆಯಾಗಲು ಹೆಣ್ಣುಗಳೇ ಸಿಗುತ್ತಿಲ್ಲ ಅದರಲ್ಲೂ ಗ್ರಾಮೀಣ ಭಾಗದಲ್ಲಿ ಕೃಷಿ ಮಾಡಿಕೊಂಡು ಇರುವ ಯುವಕರಿಗಂತು ಹೆಣ್ಣು ಹೆತ್ತ ಪೋಷಕರು ಹೆಣ್ಣು ಕೊಡಲ್ಲ ಅಂತ ನೇರವಾಗಿ ಹೇಳಿ ಬಿಡುತ್ತಿದ್ದಾರೆ. ಇದೀಗ ಇದೇ ವಿಚಾರವಾಗಿ ಪರಿಷತ್ ನಲ್ಲಿ ಪುಟ್ಟಣ್ಣ ಅವರು ಗ್ರಾಮೀಣ ಭಾಗದಲ್ಲಿ ಕೃಷಿ ಮಾಡುವ ಯುವಕರಿಗೆ ಹೆಣ್ಣು ಸಿಗುತ್ತಿಲ್ಲ ಹಾಗಾಗಿ ಸರ್ಕಾರ ಇವರಿಗೆ ಒಂದು ಯೋಜನೆ ಜಾರಿ ಮಾಡಬೇಕು ಎಂದು ವಿಷಯ ಪ್ರಸ್ತಾಪಿಸಿದರು. ಗ್ರಾಮೀಣ ಭಾಗದಲ್ಲಿ ಕೃಷಿ ಮಾಡುವ ಯುವಕರಿಗೆ ಹೆಣ್ಣು ಸಿಗುತ್ತಿಲ್ಲ. ಎಂದು ಪರಿಷತ್ ನಲ್ಲಿ ಶೂನ್ಯ ವೇಳೆ ಕಾಂಗ್ರೆಸ್ ಸದಸ್ಯ ಪುಟ್ಟಣ್ಣ ಪ್ರಸ್ತಾಪಿಸಿದರು. ಸರ್ಕಾರ ಇಂತಹ ಯುವಕರಿಗೆ ಯೋಜನೆ ಘೋಷಣೆ ಮಾಡಬೇಕು ಹೆಣ್ಣು ಮಕ್ಕಳು ಸಿಗದೇ ತಾಲೂಕಿಗೆಂದು ಮಠ ಕಟ್ಟಿ ಕೊಡಿ ಅಂತ ಅರ್ಜಿ ಹಾಕುತ್ತಿದ್ದಾರೆ. ಮಠ ಕಟ್ಟಿ ಕೊಡಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಆಗುತ್ತಿದೆ ಎಂದು ಅವರು ಪ್ರಸ್ತಾಪಿಸಿದರು.
ಬೆಂಗಳೂರು : ಬೆಂಗಳೂರಿನಲ್ಲಿ ಅಮಾನವೀಯ ಘಟನೆ ಒಂದು ನಡೆದಿದ್ದು ರಸ್ತೆಯ ಮೇಲೆ ಮಲಗಿದ್ದಂತಹ ಸಾಕು ನಾಯಿಯ ಮೇಲೆ ನೆರೆಮನೆಯ ವ್ಯಕ್ತಿಯೊಬ್ಬ ಉದ್ದೇಶಪೂರ್ವಕವಾಗಿ ಕಾರು ಹಾಯಿಸಿ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ರಾಯಸಂದ್ರದ ಬಳಿ ಈ ಘಟನೆ ನಡೆದಿದ್ದು, ಹರೀಶ್ ಎಂಬಾತನ ವಿರುದ್ಧ ದೂರು ದಾಖಲಾಗಿದೆ. ರಮೇಶ್ ಎಂಬುವರ ಮನೆಯ ಬಳಿ ಸಾಕು ನಾಯಿಗಳು ಪದೇ ಪದೇ ಸಾಯುತ್ತಿರುತ್ತವೆ. ಅದು ಆಕಸ್ಮಿಕವಾದ ಘಟನೆ ಎಂದು ತಿಳಿದು ಸುಮ್ಮನಾಗಿರುತ್ತಾರೆ. ಆದರೆ ಡಿಸೆಂಬರ್ 13 ರಂದು ಬೆಳಗ್ಗೆ 06.40 ಗಂಟೆಗೆ ಅವರ ಸಾಕು ನಾಯಿ ರಸ್ತೆಯಲ್ಲಿ ಸಾವನ್ನಪ್ಪಿತ್ತು. ಈ ವೇಳೆ ಅನುಮಾನ ಬಂದು ರಮೇಶ್ ಅಲ್ಲಿನ ಸಿಸಿ ಕ್ಯಾಮರಾವನ್ನು ನೋಡಿದ ನಂತರ ಮನೆಯ ಹಿಂಭಾಗದ ನಿವಾಸಿಯಾದ ಹರೀಶ್ ಅಲಿಯಾಸ್ ಹರೀ ಎಂಬಾತನು ಈ ಕೃತ್ಯ ಎಸಗಿದ್ದಾನೆ ಅನ್ನೋದು ತಿಳಿದುಬಂದಿದೆ ಅವರು ಆರೋಪಿಸಿದ್ದಾರೆ. ರಸ್ತೆಯ ಮಧ್ಯದಲ್ಲಿ ಮಲಗಿದ್ದ ನಾಯಿ, ಕಾರು ತನ್ನ ಕಡೆಗೆ ಬರುತ್ತಿದೆ ಎಂದು ತಿಳಿದು ಅಲ್ಲಿಂದ ತೆರಳಲು ಯತ್ನಿಸುತ್ತಿರುವುದು ವಿಡಿಯೋದಲ್ಲಿದೆ. ಆದರೆ,…
ಶಿವಮೊಗ್ಗ : ಶಿವಮೊಗ್ಗದಲ್ಲಿ ಭೀಕರವಾದ ಮರ್ಡರ್ ಆಗಿದ್ದು, ಪತ್ನಿ ಜತೆಗೆ ಅನೈತಿಕ ಸಂಬಂಧ ಹೊಂದಿದ್ದಾನೆಂದು ಆರೋಪಿಸಿ ಅಣ್ಣನೊಬ್ಬ ತನ್ನ ಸ್ವಂತ ತಮ್ಮನನ್ನೇ ಹತ್ಯೆಗೈದು ಹೂತುಹಾಕಿದ ಘಟನೆ ಸೊರಬ ತಾಲೂಕಿನ ಜೇಡಗೇರಿ ಗ್ರಾಮದಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಆನವಟ್ಟಿ ಹೋಬಳಿ ಕಾನುಕೊಪ್ಪ ಹೊಸೂರು ಗ್ರಾಮದ ರಾಮಚಂದ್ರ (30) ಕೊಲೆಯಾದ ವ್ಯಕ್ತಿ. ಆತನ ಹಿರಿಯ ಸಹೋದರ ಮಾಲತೇಶ್ ಕೊಲೆ ಆರೋಪಿ. ಪುತ್ರ ರಾಮಚಂದ್ರ ಕಳೆದ ಸೆಪ್ಟೆಂಬರ್ 8 ರಂದು ಮನೆಯಿಂದ ನಾಪತ್ತೆಯಾಗಿದ್ದ. ಈ ಬಗ್ಗೆ ಕೆಲವು ದಿನಗಳ ನಂತರ ತಾಯಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆದರೆ ಪ್ರಕರಣದಲ್ಲಿ ಕಾಣೆಯಾದವನ ಪತ್ತೆಯಾಗಿರಲಿಲ್ಲ. ಆದಾಗ್ಯೂ ಅನುಮಾನ ಬಲವಾದ ಹಿನ್ನೆಲೆಯಲ್ಲಿ ಪೊಲೀಸರು ತನಿಖೆಯ ಜಾಡು ಬದಲಿಸಿದ್ದರು. ಅಲ್ಲದೆ, ಪ್ರಕರಣದಲ್ಲಿ ಸಾಕಷ್ಟು ಸಂಶಯಗಳು ಮೂಡಿದ ಹಿನ್ನೆಲೆಯಲ್ಲಿ ರಾಮಚಂದ್ರ ಅವರ ಸಹೋದರ ಮಾಲತೇಶ್ ನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದರು ಎನ್ನಲಾಗಿದೆ. ಒಂದೂವರೆ ತಿಂಗಳ ಹಿಂದೆ ನಾಪತ್ತೆಯಾಗಿದ್ದ ರಾಮಚಂದ್ರ ಬಗ್ಗೆ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ…
ಬೆಳಗಾವಿ : ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ ಮೇಲೆ ಗೃಹಲಕ್ಷ್ಮಿ ಯೋಜನೆ ಯಶಸ್ವಿಯಾಗಿ ಜಾರಿ ಆಯ್ತು ಆದರೆ ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ವಿಪಕ್ಷಗಳು ಪಟ್ಟು ಬಿಡದೆ ಗೃಹಲಕ್ಷ್ಮಿ ಹಣ ಹಾಕದೆ ರಾಜ್ಯದ ಜನರಿಗೆ ಸರ್ಕಾರ ಮೋಸ ಮಾಡಿದೆ ಎಂದು ಆರೋಪಿಸಿವೆ. ಇದರ ಬೆನ್ನಲ್ಲೇ ಸಚಿವೆ ಹೆಬ್ಬಾಳಕರ್ ಕೂಡ ಹೌದು ಎರಡು ತಿಂಗಳ ಹಣ ಗೃಹಲಕ್ಷ್ಮಿಯರ ಖಾತೆಗೆ ಜಮೆಯಾಗಿಲ್ಲ ಎಂದು ಸತ್ಯ ಒಪ್ಪಿಕೊಂಡಿದ್ದಾರೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಎರಡು ತಿಂಗಳು ವರಲಕ್ಷ್ಮಿ ಹಣ ಜಮೆ ಆಗಿಲ್ಲ ಎಂದು ಸದನದಲ್ಲಿ ಸತ್ಯ ಒಪ್ಪಿಕೊಂಡಿದ್ದಾರೆ. ಹಣ ಖಾತೆ ಜಮೆ ಆಗದೆ ಇರುವುದರ ಕುರಿತು ಇವತ್ತು ಸದನದಲ್ಲಿ ಚರ್ಚೆ ಆಯಿತು. ಈ ವೇಳೆ ಲಕ್ಷ್ಮಿ ಬಾಳ್ಕರ್ ಎರಡು ತಿಂಗಳ ಹಣ ಜಮೆ ಆಗಿಲ್ಲ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ. ನಾನು ಸದನಕ್ಕೆ ತಪ್ಪು ಮಾಹಿತಿ ನೀಡುವ ಉದ್ದೇಶ ಇರಲಿಲ್ಲ ಆದರೆ ನಾನು ಹೋಗಿ ಪರಿಶೀಲನೆ ಮಾಡಿದಾಗ ಎರಡು ತಿಂಗಳು ಹೆಚ್ಚು ಕಡಿಮೆ ಆಗಿದೆ ಎಂದು…
ಮೈಸೂರು : RCB ಅಭಿಮಾನಿಗಳಿಗೆ ಇದೀಗ ಕೆಎಸ್ಸಿಎ ಗುಡ್ ನ್ಯೂಸ್ ನೀಡಿದೆ. ಬೆಂಗಳೂರಿನಲ್ಲಿ ಈ ಬಾರಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಯಲಿದೆ ಎಂದು ಮೈಸೂರಿನಲ್ಲಿ ಕೆ ಎಸ್ ಸಿ ಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಈ ಒಂದು ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ವೆಂಕಟೇಶ್ ಪ್ರಸಾದ್ ಅವರು ಶೀಘ್ರದಲ್ಲಿಯೇ ಬೆಂಗಳೂರಲ್ಲಿ ಉದ್ಘಾಟನಾ ಪಂದ್ಯ ದಿನಾಂಕ ನಿಗದಿ ಮಾಡಲಾಗುತ್ತದೆ. ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನೆ ಪಂದ್ಯ ನಡೆಯಲಿವೆ. ಕಳೆದ ಆವೃತ್ತಿಯಲ್ಲಿ ಆರ್ಸಿಬಿ ಚಾಂಪಿಯನ್ಸ್ ಆಗಿದ್ದರು. ಜನರಲ್ ಆಗಿ ಯಾರು ಗೆಲ್ಲುತ್ತಾರೋ ಅವರ ಒಂದು ಗ್ರೌಂಡ್ ನಲ್ಲಿ ಉದ್ಘಾಟನಾ ಪಂದ್ಯ ನಡೆಸಬೇಕು. ಈ ವಿಚಾರವಾಗಿ ನಾನು ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆಶಂಕರ್ ಅವರ ಜೊತೆ ಮಾತನಾಡಿದ್ದು ಅವರು ಸಹ ಸಂಪುಟದಲ್ಲಿ ಈ ವಿಚಾರವಾಗಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಅಂತರಾಷ್ಟ್ರೀಯ ಪಂದ್ಯಗಳು ಹಾಗೂ ಪಂದ್ಯಗಳನ್ನು ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡಿಸುವುದು ಅಷ್ಟು ಸುಲಭದ ಕೆಲಸವಲ್ಲ ಏಕೆಂದರೆ ಕಾಲ್ತುಳಿತ ದುರಂತದಿಂದ ಪಂದ್ಯ ನಡೆದಿರಲು ನಿರ್ಧರಿಸಲಾಗಿತ್ತು. ಬೆಂಗಳೂರಿನಲ್ಲಿ ಪಂದ್ಯ…
ಬೆಂಗಳೂರು : ತನ್ನ ಮಗಳಿಗಾಗಿ ಪತ್ನಿಯನ್ನು ನಿರ್ಮಾಪಕ ಹರ್ಷವರ್ಧನ್ ಕಿಡ್ನ್ಯಾಪ್ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟಿ ಚೈತ್ರ ಸಹೋದರಿ ದೂರು ನೀಡಿದ ಬೆನ್ನಲ್ಲೇ ಇದೀಗ ಹರ್ಷವರ್ಧನ್ ಹೆಂಡತಿ ಚೈತ್ರಾಳನ್ನು ತಂದು ಒಪ್ಪಿಸಿದ್ದಾನೆ. ಹೌದು ಮಗಳಿಗಾಗಿ ತನ್ನ ಹೆಂಡತಿಯನ್ನು ಕಿಡ್ನ್ಯಾಪ್ ಮಾಡಿದ್ದ ಹರ್ಷವರ್ಧನ್ ನಟಿ ಚೈತ್ರಾಳಿಗೆ ತನ್ನ ಮಗು ನೀಡುವಂತೆ ಬೇಡಿಕೆ ಇಟ್ಟಿದ್ದನು ಮೈಸೂರಿನಲ್ಲಿ ಶೂಟಿಂಗ್ ಇದೆ ಎಂದು ಹೇಳಿಸಿ ಕಿಡ್ನ್ಯಾಪ್ ಮಾಡಿದ್ದ. ಬೆಂಗಳೂರಿನ ಮೂಲಕ ಕಿಡ್ನಾಪ್ ಮಾಡಿಸಿದ್ದಾನೆ. ಪ್ರೀತಿಸಿ ನಟಿ ಚೈತ್ರ ಮತ್ತು ಹರ್ಷವರ್ಧನ್ ಮದುವೆ ಆಗಿದ್ದರು. ಮದುವೆಯ ಬಳಿಕ ಇಬ್ಬರ ನಡುವೆ ಕೌಟುಂಬಿಕ ಕಲಹ ನಡೆದಿತ್ತು. ಒಂದು ವರ್ಷದ ಮಗಳಿಗಾಗಿ ಪಟ್ಟು ಹಿಡಿದಿದ್ದಾನೆ. ಚೈತ್ರ ಜೊತೇನೆ ಮಗು ಇತ್ತು ಚೈತ್ರ ಸಹ ತಾಯಿ ಮನೆಯಲ್ಲಿ ಇದ್ದರು. ಈ ಕುರಿತು ಚೈತ್ರ ಸೋದರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆರೋಪಿ ಹರ್ಷವರ್ಧನ್ ಮತ್ತು ಚೈತ್ರ ವಿಚಾರಣೆ ನಡೆಸಿದ್ದಾರೆ ವಿಚಾರಣೆ ವೇಳೆ ಕೌಟುಂಬಿಕ ಕಲಹ ಅಂತ ದಂಪತಿಗಳು ಒಪ್ಪಿಕೊಂಡಿದ್ದಾರೆ ಮಾತನಾಡಿ ಸರಿ ಮಾಡಿಕೊಳ್ಳುತ್ತೇವೆ…














