Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಕಾಂಗ್ರೆಸ್ ಪಕ್ಷದ ಕೆಲವು ಶಾಸಕರಿಂದ ಅಧ್ಯಯನದ ಹೆಸರಿನಲ್ಲಿ ವಿದೇಶ ಪ್ರವಾಸ ಕೈಗೊಳ್ಳುತ್ತಿದ್ದು ಈ ವಿಚಾರವಾಗಿ ಕಾಂಗ್ರೆಸ್ ಹೈಕಮಾಂಡ್ ಶಾಸಕರ ವಿದೇಶ ಪ್ರವಾಸಕ್ಕೆ ಬ್ರೇಕ್ ಹಾಕುವ ಸಾಧ್ಯತೆ ಇದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಸಿಎಂ ಸಿದ್ದರಾಮಯ್ಯ ಮತ್ತು ಕೆಲಸವರಿಗೆ ಹೈಕಮಾಂಡ್ ನಾಯಕರು ಕರೆ ಮಾಡುವ ಸಾಧ್ಯತೆಯಿದ್ದು ದೂರವಾಣಿ ಮೂಲಕ ವಿದೇಶ ಪ್ರವಾಸ ಕೈಗೊಳ್ಳುತ್ತಿರುವ ಶಾಸಕರಿಗೆ ಬ್ರೇಕ್ ಹಾಕುವ ಸಾಧ್ಯತೆ ಇದು ಈಗಾಗಲೇ ಹೈಕಮಾಂಡ್ ನಾಯಕರು ಶಾಸಕರ ವಿದೇಶ ಪ್ರವಾಸದ ಕುರಿತು ಮಾಹಿತಿ ಪಡೆದಿದ್ದಾರೆ ಎನ್ನಲಾಗಿದೆ.
ಬೆಂಗಳೂರು : ರಾಜ್ಯದಲ್ಲಿ ಭ್ರಷ್ಟಾಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಬೆಲ್ಗೆ ಬಿಗ್ ಶಾಕ್ ನೀಡಿದ್ದು, ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಬಿಸಿ ಮುಟ್ಟಿಸಿದೆ. ಬೆಂಗಳೂರು, ಮೈಸೂರು ದಾವಣಗೆರೆ ಜಿಲ್ಲೆಗಳಲ್ಲಿ ಹಲವು ಕಡೆ ಏಕಕಾಲಕ್ಕೆ ದಾಳಿ ನಡೆದಿದೆ. PWD ಚೀಫ್ ಇಂಜಿನಿಯರ್ ಪುರುಷೋತ್ತಮ ದಾಸ್ ಎಂಬುವವರಿಗೆ ಸೇರಿದ 11 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ 5 ಕಡೆ, ಬೆಂಗಳೂರಿನಲ್ಲಿ 6 ಕಡೆ ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳ ಹುಡುಕಾಟ ನಡೆಸಿದ್ದಾರೆ. ಇನ್ನು ದಾವಣಗೆರೆಯ ಬೆಸ್ಕಾಂನ ಸಿವಿಲ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಜುನ್ ವಿರುದ್ಧ ಆದಾಯ ಮೀರಿ ಅಪಾರ ಪ್ರಮಾಣದ ಆಸ್ತಿ ಗಳಿಸಿರುವ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆ ಲೋಕಾಯುಕ್ತ ಎಸ್ಪಿ ಎಂಎಸ್ ಕೌಲಾಪುರೆ ನೇತ್ರತ್ವದ ತಂಡ ದಾಳಿ ನಡೆಸಿದೆ. ಬೆಸ್ಕಾಂ ಇಂಜಿನಿಯರ್ ಆರ್.ಹೆಚ್ ಅರ್ಜುನ್ ಅವರ ಮನೆ ಹಾಗೂ ಕಚೇರಿ ಮೇಲೂ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ.
ಬೆಂಗಳೂರು : ಬೆಂಗಳೂರಲ್ಲಿ ರೋಡ್ ರೇಜ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ ಮತ್ತೊಂದು ರೋಡ್ ರೇಜ್ ಪ್ರಕರಣ ವರದಿಯಾಗಿದೆ. ಕ್ಯಾಮೆರಾದಲ್ಲಿ ರೋಡ್ ರೇಜಿನ ಭಯಾನಕ ದೃಶ್ಯ ಸೆರೆಯಾಗಿದೆ. ಬೆಂಗಳೂರಲ್ಲಿ ಕಾರು ಚಾಲಕನಿಂದ ಅಟ್ಟಹಾಸ ಮೆರೆದಿದ್ದು, ಕಾರಿನ ಬಾನೆಟ್ ಮೇಲೆ ವ್ಯಕ್ತಿಯನ್ನು ಎಳೆದೊಯ್ದು ಅಟ್ಟಹಾಸ ಮೆರೆದಿದ್ದಾನೆ. ಸುಮಾರು 1 ಕಿಲೋಮೀಟರ್ ದೂರದವರೆಗೆ ವ್ಯಕ್ತಿಯನ್ನು ಕಾರಿನ ಬಾನೆಟ್ ಮೇಲೆ ಎಳೆದೋಯ್ದು ದರ್ಪ ತೋರಿದ್ದಾನೆ. ನಂಜುಂಡ ಎಂಬ ಚಾಲಕ ಗೂಡ್ಸ್ ಹಣದಲ್ಲಿ ಹೂವು ಸಾಗಿಸುತ್ತಿದ್ದ. ಟ್ರಿನಿಟಿ ಜಂಕ್ಷನ್ ಬಳಿ ಬಲ ತಿರುವು ಪಡೆಯುವಾಗ ಗಲಾಟೆ ಆಗಿದೆ ನಂಜುಂಡನಿಗೆ ಕಾರು ಚಾಲಕ ಸುರೇಶ್ ಅವಾಚ್ಯವಾಗಿ ನಿಂದಿಸಿದ್ದಾನೆ. ಹಿಂದೆ ಬಂದ ಕಾರು ಚಾಲಕ ಸುರೇಶ್ ನಿಂದ ಅವಾಚ್ಯವಾಗಿ ನಿಂದನೆ ಮಾಡಿದ್ದಾನೆ. ನಂತರ ಸಿವಿ ಜಂಕ್ಷನ್ ಬಳಿ ಮತ್ತೆ ಇಬ್ಬರ ಮಧ್ಯೆ ಗಲಾಟೆ ಆಗಿದೆ ಅವಾಚ್ಯ ಪದ ಬಳಕೆ ಪ್ರಶ್ನಿಸಿದ್ದ ಗೂಡ್ಸ್ ಚಾಲಕ ನಂಜುಂಡ. ಆ ಸಂದರ್ಭದಲ್ಲಿ ವ್ಯಕ್ತಿ ಎದುರುಗಡೆ ಇದ್ದಾನೆ ಎನ್ನುವುದನ್ನು ಕೇರ್ ಮಾಡದೆ ಆತನನ್ನು ಕಾರಿನ ಬಾನೆಟ್…
ಬೆಳಗಾವಿ : ಬೆಳಗಾವಿಯಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ರೂಪಾಯಿ ಮೌಲ್ಯದ ಭೂಮಿ ಮಾರಾಟ ಮಾಡಲಾಗಿದ್ದು, ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿ ಅಕ್ರಮವಾಗಿ ಭೂಮಿ ಮಾರಿ ವಂಚನೆ ಎಸಗಲಾಗಿತ್ತು. ಪ್ರಕರಣ ಭೇದಿಸಿದ ಪೊಲೀಸರು ಸಬ್ ರೆಜಿಸ್ಟರ್ ಸೇರಿದಂತೆ ಒಟ್ಟು ಒಂಬತ್ತು ಜನರನ್ನು ಅರೆಸ್ಟ್ ಮಾಡಿದ್ದಾರೆ. ಭೂಗಳ್ಳರ ಜೊತೆಗೆ ಸಬ್ ರಿಜಿಸ್ಟರ್ ಅಧಿಕಾರಿ ಸೇರಿದಂತೆ ಹಲವರು ಶಾಮೀಲು ಆಗಿದ್ದರು. ಬೆಳಗಾವಿ ಜಿಲ್ಲಾ ಪೊಲೀಸರಿಂದ ಸಬ್ ರಿಜಿಸ್ಟರ್ ಸೇರಿದಂತೆ ಮೊದಲು 6 ಜನರನ್ನು ಅರೆಸ್ಟ್ ಮಾಡಲಾಗಿದೆ. ಹುಕ್ಕೇರಿ ಪಟ್ಟಣದ ಸಭೆ ರಿಜಿಸ್ಟರ್ ಮಡಿವಾಳಯ್ಯ ಬಾನಿಮಠ, ದಾಖಲೆಗಳು ಫೋಟೋ ಎಡಿಟ್ ಮಾಡಿದ ಅಶೋಕ್ ಸೂರ್ಯವಂಶಿ, ಬಾಂಡ್ ರೈಟರ್ ಆನಂದ ದಡ್ಡಿಮನಿ, ಸೇರಿದಂತೆ ಆರು ಜನರ ಬಂಧನವಾಗಿದೆ. ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಾಂತರ ರೂಪಾಯಿ ಬೆಲೆಬಾಳುವ ಆಸ್ತಿಯನ್ನು ಮಾರಾಟ ಮಾಡಿದ್ದಾರೆ. ಜಮೀನು ಮಾಲೀಕರಿಗೆ ಗೊತ್ತಾಗದಂತೆ ಬೇರೆಯವರಿಗೆ ಜಮೀನು ಮಾರಾಟ ಮಾಡಿದ್ದಾರೆ. ಫೋಟೋಶಾಪ್ ಸಾಫ್ಟ್ವೇರ್ ನಲ್ಲಿ ಆಧಾರ್ ಕಾರ್ಡ್ ಎಡಿಟ್ ಮಾಡಿ ಈ ಒಂದು…
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ವಿದೇಶದಿಂದ ಅಕ್ರಮವಾಗಿ ತಂದಿದ್ದ ಸುಮಾರು 3 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮೊದಲ ಪ್ರಕರಣದಲ್ಲಿ ಬ್ಯಾಂಕಾಕ್ನಿಂದ ಬೆಂಗಳೂರಿಗೆ ಬಂದಿದ್ದ ಪ್ರಯಾಣಿಕನ ಲಗೇಜ್ ಪರಿಶೀಲನೆ ನಡೆಸಿದ ವೇಳೆ 9.7 ಕೆಜಿ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದೆ. ಈ ಗಾಂಜಾದ ಅಂದಾಜು ಮೌಲ್ಯ ಸುಮಾರು 3.39 ಕೋಟಿ ರೂಪಾಯಿ ಎನ್ನಲಾಗಿದೆ. ತಕ್ಷಣವೇ ಪ್ರಯಾಣಿಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದ್ದು, ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಇನ್ನೊಂದು ಪ್ರಕರಣದಲ್ಲಿ ಕೂಡ ಬ್ಯಾಂಕಾಕ್ನಿಂದ ಬಂದಿದ್ದ ಪ್ರಯಾಣಿಕ ಅಕ್ರಮವಾಗಿ ಕ್ಯಾಂಡಿ ಪ್ಯಾಕೆಟ್ಗಳಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದುದನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಈ ವೇಳೆ ಸುಮಾರು 1.7 ಕೆಜಿ ಮಾದಕ ವಸ್ತು ವಶಪಡಿಸಿಕೊಳ್ಳಲಾಗಿದ್ದು, ಅದರ ಮೌಲ್ಯ ಸುಮಾರು 4.7 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.
BREAKING : ಬಿಕ್ಲು ಶಿವ ಕೊಲೆ ಕೇಸ್ : ನಿರೀಕ್ಷಣಾ ಜಾಮೀನು ಕೋರಿ ಸುಪ್ರೀಂಕೋರ್ಟ್ ಗೆ ಭೈರತಿ ಬಸವರಾಜ್ ಅರ್ಜಿ ಸಲ್ಲಿಕೆ
ಬೆಂಗಳೂರು : ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಬಿಜೆಪಿ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಅದರ ಬೆನ್ನಲ್ಲೇ ಶಾಸಕ ಭೈರತಿ ಬಸವರಾಜ್ ತಲೆಮರೆಸಿಕೊಂಡಿದ್ದಾರೆ. ಇದೀಗ ಬಿಜೆಪಿ ಶಾಸಕ ಭೈರತಿ ಬಸವರಾಜ್ ಸುಪ್ರೀಂ ಕೋರ್ಟ್ ಗೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಸಲ್ಲಿಸಿದ್ದ ಅರ್ಜಿಯನ್ನು ನಿನ್ನೆ ಹೈಕೋರ್ಟ್ ವಜಾಗೊಳಿಸಿತ್ತು. ಅದರ ಬೆನ್ನಲ್ಲೆ, ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ.
ಮಂಡ್ಯ : ಮಂಡ್ಯದಲ್ಲಿ ಭೀಕರ ಬಸ್ ಅಪಘಾತವಾಗಿದ್ದು, ಅಂಡರ್ ಪಾಸ್ ಸೇತುವೆಗೆ ಕೆಎಸ್ಆರ್ಟಿಸಿ ಬಸ್ ಒಂದು ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ ನಲ್ಲಿ ಇದ್ದ 19 ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೋಡಿಹಳ್ಳಿ ಎಂಬಲ್ಲಿ ಈ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ವಿಜಪೇಟೆಗೆ ಈ ಒಂದು ಬಸ್ ತೆರಳುತ್ತಿತ್ತು ರಾಷ್ಟ್ರೀಯ ದಶಪಥ ಸರ್ವಿಸ್ ರಸ್ತೆಯಲ್ಲಿ ಈ ಒಂದು ಆಕ್ಸಿಡೆಂಟ್ ಆಗಿದ್ದು ಚಾಲಕ ನಿಯಂತ್ರಣ ತಪ್ಪಿ ಅಂಡರ್ ಪಾಸ್ ಸೇತುವೆಗೆ ಡಿಕ್ಕಿ ಹೊಡೆದಿದ್ದು ಸದ್ಯ ಗಾಯಾಳುಗಳನ್ನು ಮದ್ದೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವಿಜಯನಗರ : ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಹಾಗೂ ಹೈಕಮಾಂಡ್ ಅವರನ್ನು ಭೇಟಿ ಮಾಡುವ ವಿಚಾರವಾಗಿ ಭಾರಿ ಚರ್ಚೆ ನಡೆಯುತ್ತಿದ್ದು ಇದರ ಮಧ್ಯ ಸಚಿವ ಜಮೀರ್ ಅಹ್ಮದ್ ಖಾನ್ 2028 ರ ವರೆಗೂ ಸಿದ್ದರಾಮಯ್ಯರೆ ಅವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ವಿಜಯನಗರದಲ್ಲಿ ಮಾತನಾಡಿದ ಅವರು, 2028ರವರೆಗೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ, ಮುಂದಿನ ಚುನಾವಣೆಯೂ ಅವರ ನೇತೃತ್ವದಲ್ಲೇ ನಡೆಯಲಿದೆ. ಹಾಗಾಗಿ 2028ರವರೆಗೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಹೇಳುವ ಮೂಲಕ ಸಿಎಂ ಬದಲಾವಣೆ ಚರ್ಚೆಗೆ ತೆರೆ ಎಳೆದಿದ್ದಾರೆ. ನಮ್ಮದು ಹೈಕಮಾಂಡ್ ಪಕ್ಷ ಹೈಕಮಾಂಡ್ ಏನೇ ನಿರ್ಧಾರ ತಗೊಂಡ್ರೂ ನಾವು ಬದ್ಧರಾಗಿರುತ್ತೇವೆ. ಒಂದು ವೇಳೆ ಬೀದಿಯಲ್ಲಿ ಹೋಗೋ ದಾಸಯ್ಯನನ್ನು ತಂದು ಸಿಎಂ ಮಾಡಿದ್ರೂ ನಾವು ಒಪ್ಪಿಕೊಳ್ಳುತ್ತೇವೆ. ಆದರೆ ಸದ್ಯಕ್ಕೆ 2028ರವರೆಗೆ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ ಎಂದು ಹೇಳುವ ಮೂಲಕ ಸಿಎಂ ಬದಲಾವಣೆಯ ಊಹಾಪೋಹಗಳಿಗೆ ತೆರೆ ಎಳೆದರು.
ಬೆಂಗಳೂರು : ಬೆಂಗಳೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಶಾಲಾ ಬಸ್ ಹರಿದು ಪೊಲೀಸ್ ಸಿಬ್ಬಂದಿಯ ಇಬ್ಬರು ಮಕ್ಕಳು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಬೆಂಗಳೂರಿನ ಹೆಣ್ಣೂರು ಸಂಚಾರಿ ಠಾಣಾ ವ್ಯಾಪ್ತಿಯ ಥಣಿಸಂದ್ರ ಬಳಿ ಘಟನೆ ನಡೆದಿದೆ. ಮೃತ ಮಕ್ಕಳನ್ನ ವರ್ಷ (2) ಹಾಗು ಭಾನು (4) ಎಂದು ತಿಳಿದುಬಂದಿದೆ. ನಗರದ ಸಿಎಆರ್ (CAR) ವಿಭಾಗದಲ್ಲಿ ಕಾನ್ಸ್ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿರುವ ನಾಗನಗೌಡ ಎಂಬುವವರು ಇಂದು ಬೆಳಿಗ್ಗೆ ತಮ್ಮ ಬೈಕ್ನಲ್ಲಿ ಇಬ್ಬರು ಮಕ್ಕಳನ್ನು ಕೂರಿಸಿಕೊಂಡು ಹಾಲು ತರಲು ಹೊರಟಿದ್ದರು. ಥಣಿಸಂದ್ರದ ಮುಖ್ಯರಸ್ತೆಯ ಬಳಿ ಚಲಿಸುತ್ತಿದ್ದಾಗ, ಎದುರುಗಡೆಯಿಂದ ಬಂದ ಅಜ್ ಮೋನಿ ಶಾಲೆಗೆ ಸೇರಿದ ಬಸ್ ಅಚಾನಕ್ಕಾಗಿ ಟರ್ನ್ ಪಡೆದುಕೊಂಡಿದೆ. ಈ ವೇಳೆ ಬೈಕ್ಗೆ ಬಸ್ ಬಲವಾಗಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮೃತಪಟ್ಟವರನ್ನು ಕಾನ್ಸ್ಟೇಬಲ್ ನಾಗನಗೌಡ ಅವರ ಮಗಳು ವರ್ಷ (2 ) ಹಾಗೂ ಅವರ ಅಣ್ಣನ ಮಗಳು ಭಾನು (4) ಎಂದು ಗುರುತಿಸಲಾಗಿದೆ. ಮೃತಪಟ್ಟ ಇಬ್ಬರೂ ಮಕ್ಕಳು ಪೊಲೀಸ್ ಸಿಬ್ಬಂದಿಯವರ ಕುಟುಂಬಕ್ಕೆ ಸೇರಿದವರಾಗಿದ್ದು, ಥಣಿಸಂದ್ರದ…
BIG NEWS : ಹಿಂದಿನ ಬಿಜೆಪಿ ಸರ್ಕಾರಕ್ಕಿಂತ ಈಗ ಕಮಿಷನ್ ಹಾವಳಿ ಹೆಚ್ಚಾಗಿದೆ : ಸರ್ಕಾರದ ವಿರುದ್ಧ ಗುತ್ತಿಗೆದಾರರ ಕಿಡಿ
ಮಂಡ್ಯ : ರಾಜ್ಯ ಸರ್ಕಾರ ಗುತ್ತಿಗೆದಾರರ ಕಾಮಗಾರಿ ಬಿಲ್ ಬಾಕಿ ಉಳಿಸಿಕೊಂಡ ಹಿನ್ನೆಲಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಗುತ್ತಿಗೆದಾರರು ಇದೀಗ ತಿರುಗಿ ಬಿದ್ದಿದ್ದಾರೆ. ಅಲ್ಲದೇ ಮಾರ್ಚ್ 5 ರಂದು ಪ್ರತಿಭಟನೆ ಮಾಡಲು ಗುತ್ತಿಗೆದಾರರು ಬೃಹತ್ ಹೋರಾಟಕ್ಕೆ ಕರೆ ನೀಡಿದ್ದಾರೆ. ಮಂಡ್ಯದಲ್ಲಿ ಗುತ್ತಿಗೆದಾರರ ಸಂಘದ ಪೂರ್ವಭಾವಿ ಸಭೆಯಲ್ಲಿ ಈ ಒಂದು ನಿರ್ಧಾರ ತೆಗೆದುಕೊಂಡಿದ್ದು, ಮಂಡ್ಯದಲ್ಲಿ ಲೋಕೊಪಯೋಗಿ ಇಲಾಖೆ ಕಚೇರಿ ಆವರಣದಲ್ಲಿ ಸಭೆ ನಡೆಸಲಾಗಿತ್ತು. ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಮಂಜುನಾಥ ನೇತೃತ್ವದಲ್ಲಿ ಈ ಒಂದು ಸಭೆ ನಡೆದಿದ್ದು, ಸರ್ಕಾರ ಗುತ್ತಿಗೆದಾರರ 37 ಸಾವಿರ ಕೋಟಿ ಹಣ ಬಾಕಿ ಉಳಿಸಿಕೊಂಡಿದೆ. ಮಂಡ್ಯ ಜಿಲ್ಲೆಯಲ್ಲಿ ಗುತ್ತಿಗೆದಾರರ 950 ಕೋಟಿ ಹಣ ಬಾಕಿ ಉಳಿಸಿಕೊಂಡಿದ್ದರಿಂದ ಗುತ್ತಿಗೆದಾರರಿಗೆ ಸಂಕಷ್ಟದ ಪರಿಸ್ಥಿತಿ ಎದುರಾಗಿದೆ. ಸಣ್ಣ ಪುಟ್ಟ ಗುತ್ತಿಗೆ ಕೆಲಸ ಮಾಡಿದರು ನಮಗೆ ದುಡ್ಡು ಕೊಡುತ್ತಿಲ್ಲ ಸಾಲ ಸೋಲ ಮಾಡಿ ಕೆಲಸ ಮಾಡಿದ್ದೇವೆ ಈಗ ಬಡ್ಡಿ ಕಟ್ಟಲು ಆಗುತ್ತಿಲ್ಲ ಸಮಸ್ಯೆ ಸರಿಪಡಿಸುವಂತೆ ಮನವಿ ಮಾಡಿದರು ಯಾರು ಆಲಿಸುತ್ತಿಲ್ಲ. ಹಿಂದಿನ ಬಿಜೆಪಿ ಸರ್ಕಾರ ಗಿಂತ…














