Author: kannadanewsnow05

ಬೆಂಗಳೂರು : ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನುದಾನ ನೀಡುವ ವಿಚಾರವಾಗಿ ಇದೀಗ ಸಿಎಂ ಸಿದ್ದರಾಮಯ್ಯ ಕೇಂದ್ರ ಬಿಜೆಪಿ ನಾಯಕರು ವಿರುದ್ಧ ಹಾಗೂ ಬಿಜೆಪಿ ಸಂಸದರ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಸಂಸದರು ರಾಜ್ಯಕ್ಕೆ ಅನ್ಯಾಯ ದ್ರೋಹ ಮಾಡುತ್ತಿದ್ದಾರೆ ನಮಗೆ ಕೇಂದ್ರ ಸರ್ಕಾರದಿಂದ ಅನುದಾನ ಬರಬೇಕಿತ್ತು, ಆದರೆ ಒಂದು ರೂಪಾಯಿ ಕೂಡ ನೀಡಲಿಲ್ಲ ಎಂದರು. ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಅನುದಾನ ಕೊಡಲಿಲ್ಲ. ನಿರ್ಮಲ ಸೀತಾರಾಮನ್ ಕೂಡ ಒಂದು ರೂಪಾಯಿ ನೀಡಿಲ್ಲ. ಚುನಾವಣೆಯ ವೇಳೆ ಮೋದಿ ಮೋದಿ ಎಂದು ಮತ ಹಾಕ್ತೀರಾ,? ನಿಮ್ಮ ಪಿ.ಸಿ ಮೋಹನ್ ಮಾತನಾಡಿದ್ದಾನ? ಸಂಸತ್ ನಲ್ಲಿ ಎಂದಾದರೂ ಒಂದು ದಿನ ಮಾತನಾಡಿದ್ದಾನ? ಸೂರ್ಯ ಅಂತ ಸಂಸದ ಇದ್ದಾನೆ, ಅವನನ್ನ ಅಮಾವಾಸ್ಯೆ ಅಂತ ಕರೀತೀನಿ. ಶೋಭಾ ಕುಮಾರಸ್ವಾಮಿ ಕೂಡ ಒಂದು ದಿನ ಬಾಯಿ ಬಿಡಲಿಲ್ಲ. ರಾಜ್ಯಕ್ಕೆ ಬರಬೇಕಾದ ತೆರಿಗೆ ಪಾಲಿನ ಬಗ್ಗೆ ಇವರು ಬಾಯಿ ಬಿಡಲಿಲ್ಲ ಎಂದು ಬೆಂಗಳೂರಿನಲ್ಲಿ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

Read More

ಚಿಕ್ಕಮಗಳೂರು : ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ಸಾಕು ನಾಯಿಗಳಿಗೆ ವಿಷ ಹಾಕಿ ಕಿಡಿಗೇಡಿಗಳು ಕೊಂದಿರುವ ಘಟನೆ ನಡೆದಿದೆ. ವಿಷದ ಆಹಾರ ತಿಂದು 8 ಸಾಕು ನಾಯಿಗಳು ಮೃತಪಟ್ಟಿವೆ. ಎನ್ಆರ್ ಪುರ ತಾಲೂಕಿನ ಅಬ್ಬಿಗುಂಡಿಯಲ್ಲಿ ಈ ಒಂದು ಅಮಾನವೀಯ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಅಬ್ಬಿಗುಂಡಿ ಗ್ರಾಮದಲ್ಲಿ ಸತ್ಯನಾರಾಯಣ ಎಂಬುವರ ಮನೆಯಲ್ಲಿ ಸಾಕು ನಾಯಿಗಳು ಇದ್ದವು. ಸತ್ತ ಕೋಳಿಗಳನ್ನು 8 ಸಾಕು ನಾಯಿಗಳು ಸೇವಿಸಿ ಇದೀಗ ಸಾವನ್ನಪ್ಪಿವೆ. ಕಿಡಿಗೇಡಿಗಳು ಸತ್ತ ಕೋಳಿಗಳಿಗೆ ಕ್ರಿಮಿನಾಶಕ ಬೆರೆಸಿದ್ದು ಬೆಳಕಿಗೆ ಬಂದಿದೆ. ನಾಯಿಗಳಿಗೆ ವಿಷ ಇಟ್ಟವರೆ ವಿರುದ್ಧ ಸ್ಥಳೀಯರು ಇದೀಗ ಆಕ್ರೋಶ ಹೊರ ಹಾಕುತ್ತಿದ್ದಾರೆ. ಕಿಡಿಗೇಡಿಗಳಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Read More

ಮೈಸೂರು : ಮೈಸೂರಲ್ಲಿ ಘೋರವಾದ ದುರಂತವೊಂದು ಸಂಭವಿಸಿದ್ದು, ನಾಲೆಯಲ್ಲಿ ಈಜಲು ಹೋಗಿ ಮೂವರು ಬಾಲಕರು ನೀರುಪಾಲಾಗಿರುವ ದಾರುಣ ಘಟನೆ ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಭಾಸ್ಕರ ದೇವಾಲಯದ ಬಳಿ ಸೋಮವಾರ ನಡೆದಿದೆ. ಸಾಲಿಗ್ರಾಮ ಪಟ್ಟಣದ ಕೋಟೆ ಬೀದಿ ನಿವಾಸಿಗಳಾದ ಅಯಾನ್ (16), ಆಜಾನ್ (13) ಹಾಗೂ ಲುಕ್ಮಾನ್ (14) ಮೃತ ಬಾಲಕರು. ಅಯಾನ್ ಹಾಗೂ ಆಜಾನ್ ಕೆ ಆರ್ ಪೇಟೆ ನವೋದಯ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದು, ದೀಪಾವಳಿ ರಜೆಯ ಕಾರಣ ಊರಿಗೆ ಬಂದಿದ್ದರು. ಸೋಮವಾರ ಮಧ್ಯಾಹ್ನ ಸಮಯಕ್ಕೆ ಇಬ್ಬರು ಸ್ನೇಹಿತರ ಜೊತೆ ಸ್ಥಳೀಯ ಲುಕ್ಮಾನ್ ಜೊತೆ ಭಾಸ್ಕರ ದೇವಾಲಯದ ಬಳಿ ಇರುವ ಚಾಮರಾಜ ಎಡೆ ದಂಡೆ ನಾಲೆಗೆ ಈಜಲು ಹೋಗಿದ್ದರು. ನಾಲೆಯಲ್ಲಿ ಈಜುವಾಗ ನೀರಿನ ರವಸಕ್ಕೆ ಕೊಚ್ಚಿ ಹೋಗಿದ್ದಾರೆ ಎನ್ನಲಾಗಿದೆ.

Read More

ಬೆಂಗಳೂರು : ರಾಜ್ಯ ಬಿಜೆಪಿ ನಾಯಕರಿಗೆ ಕೇಂದ್ರದ ಬಳಿ ಹೋಗಿ ರಾಜ್ಯಕ್ಕೆ ಪರಿಹಾರ ಕೊಡಿಸುವ ತಾಕತ್ತು ಇಲ್ಲ. NDA ಇಂದ ಗೆದ್ದ ರಾಜ್ಯದ 19 ಸಂಸದರು ಏನು ಇಂಡಿಯಾ ಗೇಟ್ ಕಾಯುತ್ತಿದ್ದಾರಾ? ಕೇಂದ್ರಕ್ಕೆ ಹೋಗಿ ರಾಜ್ಯಕ್ಕೆ ಬರುವ ಪರಿಹಾರವನ್ನು ಕೇಳಿ ಎಂದು ಶಾಸಕ ಪ್ರದೀಪ ಈಶ್ವರ ಬಿಜೆಪಿ ನಾಯಕರು ವಿರುದ್ಧ ವಾಗ್ದಾಳಿ ನಡೆಸಿದರು. ಕೇಂದ್ರ ಸರ್ಕಾರಕ್ಕೆ ರಾಜ್ಯದ ಮೇಲೆ ತುಂಬಾ ಕೋಪ ಇದೆ ಅಂತ ಅನಿಸುತ್ತದೆ. ಪ್ರವಾಹದಿಂದ ರಾಜ್ಯದಲ್ಲಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ನಾವು ಕೇಂದ್ರ ಸರ್ಕಾರಕ್ಕೆ ಪರಿಹಾರ ನೀಡುವಂತೆ ಕೇಳಿದ್ದೆವು. ಮಹಾರಾಷ್ಟ್ರಕ್ಕೆ 1556 ಕೋಟಿ ರೂಪಾಯಿ ಪರಿಹಾರ ನೀಡಿದ್ದಾರೆ. ಆದರೆ ಕರ್ನಾಟಕಕ್ಕೆ ಮಾತ್ರ 384 ಕೋಟಿ ರೂಪಾಯಿ ನೀಡಿದ್ದಾರೆ. ಇದೇ ದೊಡ್ಡ ಸಾಧನೆ ಅನ್ನುವ ರೀತಿಯಲ್ಲಿ ಆರ್ ಅಶೋಕ ಟ್ವೀಟ್ ಮಾಡಿದ್ದಾರೆ. ಪರಿಹಾರದ ಬಗ್ಗೆ ಕೇಳಿದರೆ ಅಶೋಕ್ ನಮ್ಮನ್ನೆ ಕೇಳಲು ಹೇಳುತ್ತಾರೆ. ಎನ್.ಡಿ.ಎ ಇಂದ ಗೆದ್ದ 19 ಸಂಸದರು ಇಂಡಿಯಾ ಗೇಟ್ ಕಾಯುತ್ತಿದ್ದಾರಾ? ಕಾಂಗ್ರೆಸ್ಗೆ ಪರಿಹಾರ ಕೇಳುತ್ತಿಲ್ಲ ರಾಜ್ಯಕ್ಕೆ ಪರಿಹಾರ…

Read More

ಕೋಲಾರ : ಕೋಲಾರದಲ್ಲಿ ಆಟೋ ಚಾಲಕನನ್ನ ಭೀಕರವಾಗಿ ಕೊಲೆ ಮಾಡಲಾಗಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ರಾಕ್ಷಸರು ಭೀಕರವಾಗಿ ಕೊಲೆ ಮಾಡಿದ್ದಾರೆ. ಬಂಗಾರಪೇಟೆಯ ಎಳೆಸಂದ್ರ ಗ್ರಾಮದ ಆಫ್ರಿದ್ ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ. ರಾಷ್ಟ್ರೀಯ ಹೆದ್ದಾರಿ 75 ರ ಕೆಂದಟ್ಟಿ ಬಳಿ ಈ ಒಂದು ಕೊಲೆ ನಡೆದಿದೆ. ರಸ್ತೆ ಬದಿ ನಿಂತಿರುವ ಆಟೋದಲ್ಲಿ ರಕ್ತ ಹರಿದಿದೆ. ಮೃತ ಆಫೀದ್ ಬೆಂಗಳೂರಿನಲ್ಲಿ ಆಟೋ ಓಡಿಸುತ್ತಿದ್ದ ಎಂದು ತಿಳಿದುಬಂದಿದೆ ಕಳೆದ ಎರಡು ದಿನಗಳ ಹಿಂದೆ ಆಫ್ರಿದ್ ಪತ್ನಿ ಜಗಳವಾಡಿ ಮನೆ ಸೇರಿದ್ದಾಳೆ. ಪತ್ನಿ ಗರ್ಭಿಣಿಯಾಗಿದ್ದು ಮೂರನೇ ಮಗುವಿನ ನಿರೀಕ್ಷೆಯಲ್ಲಿ ಆಫ್ರಿದ್ ಇದ್ದ. ಬೆಂಗಳೂರಿಗೆ ಹೊರಟಿದ್ದ ಬೆಳಿಗ್ಗೆ ರಸ್ತೆ ಬದಿ ಆಟೋದಲ್ಲಿ ಆಫ್ರಿದ ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿದ್ದು ತನಿಖೆ ಕೈಗೊಂಡಿದ್ದಾರೆ.

Read More

ಬೆಂಗಳೂರು : ಪಥ ಸಂಚಲನ ಮಾಡೋಕೆ ಆರ್ ಎಸ್ ಎಸ್ ಗೆ ಅಷ್ಟು ಅರ್ಜೆಂಟ್ ಏನಿತ್ತು? ಜಗದೀಶ್ ಶೆಟ್ಟರ್ ಸಿಎಂ ಆಗಿದ್ದಾಗ ಶಿಕ್ಷಣ ಇಲಾಖೆ ಅನುಮತಿ ಕೊಟ್ಟಿರಲಿಲ್ಲ. ಶಿಕ್ಷಣ ಇಲಾಖೆ ಮುಖ್ಯಮಂತ್ರಿಗಳ ಅಧೀನದಲ್ಲಿಯೇ ಇರುವುದು ಜಗದೀಶ ಶೆಟ್ಟರ್ ಅಚಾನಕ್ಕಾಗಿ ಸಿಎಂ ಆಗಿದ್ದಕ್ಕೆ ಮರೆತು ಹೋದರು ಅಂತ ಅನಿಸುತ್ತದೆ ಎಂದು ಕಾಂಗ್ರೆಸ್ ಶಾಸಕ  ಪ್ರದೀಪ್ ಈಶ್ವರ್ ವ್ಯಂಗ್ಯವಾಡಿದರು. ನಮ್ಮ ಪಕ್ಷದಿಂದಲೂ ಎಂಎಲ್ಸಿ ಆಗಿದ್ದರು ಈಗ ಬಿಜೆಪಿಗೆ ಹೋದರು ಆರ್ ಎಸ್ ಎಸ್ ನವರ ಭಾಷಣಕ್ಕೆ ಬಡಮಕ್ಕಳು ಬಲಿಯಾಗುತ್ತಿದ್ದಾರೆ. ಕೇಸ್ ಆದಾಗ ಯಾವೊಬ್ಬ ಬಿಜೆಪಿ ನಾಯಕರು ಜಾಮೀನು ಕೊಡಿಸಲ್ಲ ಬೆಂಗಳೂರಿಗೆ ಬಂದಾಗ ಬಿಜೆಪಿ ನಾಯಕರು ಕರೆದು ತಿಂಡಿ ಕೊಡಿಸಲ್ಲ. ಎಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ ನಡೆಸಿದರು. RSS ಬಗ್ಗೆ ಜೆಡಿಎಸ್ ನಿಲುವು ಏನು ಅಂತ ತಿಳಿಸಬೇಕು. ಎಚ್ ಡಿ ಕುಮಾರಸ್ವಾಮಿಗೆ ಆರ್ಎಸ್ಎಸ್ ಬಗ್ಗೆ ಇರುವ ನೀಲವು ಏನು ಅಂತ ಅವರು ತಿಳಿಸಬೇಕು ಆರ್ಎಸ್ಎಸ್ ಬೈದು ಸಂಪಾದಕೀಯ ಕಾಲಂ ಬರೆದಿದ್ದ ನಿಮ್ಮ…

Read More

ಬೆಳಗಾವಿ : ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ಮುಖ್ಯ ಶಿಕ್ಷಕ ನೊಬ್ಬ ವಿದ್ಯಾರ್ಥಿಯ ಮೇಲೆ ಮನಸ್ಸು ಇಚ್ಛೆ ಹಲ್ಲೆ ಮಾಡಿದ್ದು, ಪೋಷಕರಿಗೆ ವಿದ್ಯಾರ್ಥಿ ಕರೆ ಮಾಡಿದ್ದಾನೆ ಎಂಬ ಒಂದೇ ಒಂದು ಕಾರಣಕ್ಕೆ ವಿದ್ಯಾರ್ಥಿಗೆ ಕಾಲಿನಿಂದ ಒದ್ದು ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾನೆ. ಈ ವಿಚಾರವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದು ಮಕ್ಕಳ ಮೇಲೆ ದೌರ್ಜನ್ಯ ಎಸಗುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಿನ ದಿನಗಳಲ್ಲಿ ಹೊಸ ಶಾಸನ ಜಾರಿಗೆ ತರಲಾಗುತ್ತದೆ ಎಂದು ತಿಳಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಮಾಧ್ಯಮಗಳ ಮೂಲಕ ನನಗೆ ಈತರ ಸುದ್ದಿ ತಿಳಿಯಿತು. ಯಾರ ಮೇಲೆ ದೌರ್ಜನ್ಯ ಆದರೂ ಕೂಡ ಸಹಿಸಲು ಸಾಧ್ಯವಿಲ್ಲ. ಅದರಲ್ಲೂ ಮಕ್ಕಳ ಮೇಲೆ ಈ ರೀತಿ ದೌರ್ಜನ್ಯ ಆಗಿರುವಂತದ್ದನ್ನು ನೋಡಿ ನನಗೆ ತುಂಬಾ ಸಂಕಟವಾಗಿದೆ. ಯಾರು ಇದನ್ನು ಮಾಡಿದ್ದಾರೆ ಅಂತವರು ವಿರುದ್ಧ ಕಠಿಣ ಶಿಕ್ಷೆ ಹಾಗೂ ಅವರನ್ನು ಬಿಡುವುದಿಲ್ಲ ಮಕ್ಕಳ ಆಯೋಗದಿಂದ ಕೂಡ ನಾವು ಎಫ್ಐಆರ್ ಮಾಡುತ್ತೇವೆ ಎಂದರು. ಈ…

Read More

ಚಿತ್ರದುರ್ಗ : ವಿದ್ಯಾರ್ಥಿಯ ಮೇಲೆ ಮುಖ್ಯ ಶಿಕ್ಷಕನೊಬ್ಬ ಹಲ್ಲೆ ನಡೆಸಿರುವ ಘಟನೆ ನಾಯಕನಹಳ್ಳಿಯಲ್ಲಿ ನಡೆದಿದೆ. ಸಂಸ್ಕೃತ ವೇದ ಅಧ್ಯಯನ ಶಾಲಾ ಮುಖ್ಯ ಶಿಕ್ಷಕ ಹಲ್ಲೆ ನಡೆಸಿದ್ದಾನೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದಲ್ಲಿ ಗುರು ತಿಪ್ಪೇರುದ್ರಸ್ವಾಮಿ ದೇಗುಲಕ್ಕೆ ಸೇರಿದ ವೇದ ಅಧ್ಯಯನ ಶಾಲೆಯಲ್ಲಿ ಈ ಒಂದು ಘಟನೆ ನಡೆದಿದೆ. ಪೋಷಕರಿಗೆ ಕರೆ ಮಾಡಿದ್ದ ಎಂಬ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಯ ಮೇಲೆ ಮುಖ್ಯ ಶಿಕ್ಷಕ ವೀರೇಶ್ ಹಿರೇಮಠ ಹಲ್ಲೆ ಮಾಡಿ ದೌರ್ಜನ್ಯ ಮೆರೆದಿದ್ದಾರೆ. ವಿದ್ಯಾರ್ಥಿಯ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿದ್ದಾನೆ. ಕಾಲಲ್ಲಿ ಇವತ್ತು ವಿಕೃತಿ ಮೆರೆದಿದ್ದಾನೆ. ಶಿಕ್ಷಕ ವಿರೇಶ ಹಿರೇಮಠ್ ಕ್ರೌರ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪುಟ್ಟ ವಿದ್ಯಾರ್ಥಿ ಮೇಲೆ ಶಿಕ್ಷಕ ಕ್ರೌರ್ಯ ಮೆರೆದಿರುವ ವಿಡಿಯೋ ವೈರಲ್ ಆಗಿದೆ. ಉತ್ತರ ಕರ್ನಾಟಕ ಮೊಲದ ವಿದ್ಯಾರ್ಥಿಯ ಮೇಲೆ ಶಿಕ್ಷಕ ದೌರ್ಜನ್ಯ ಎಸಗಿದ್ದಾನೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಶಿಕ್ಷಕ ವೀರೇಶ್ ನಾಪತ್ತೆಯಾಗಿದ್ದಾನೆ. ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ವೀರೇಶ್ ವಿರುದ್ಧ FIR ದಾಖಲಾಗಿದೆ.

Read More

1)ಸಾಲ ಲಕ್ಷ ಕೋಟಿ ಇರಲಿ ಎಲೆ ಲವಂಗ ಏಲಕ್ಕಿಯ ಪ್ರಯೋಗ ಮಾಡಿದರೆ ಸಾಲತಿರುವುದು 2)ಪಕ್ಕಾ ಸಾಲ ಅಂತ ಇದ್ರೆ ಅದು ನಮ್ಮನ್ನು ನಿದ್ರೆ ಮಾಡಲು ಬಿಡುವುದಿಲ್ಲ ಯಾವಗ ಸಾಲ ತೀರುತ್ತದೆ ಎಂಬ ಚಿಂತೆ ನಮ್ಮನ್ನು ಕಾಡುತ್ತದೆ ಸಾಲ ಇಲ್ಲದ ಜೀವನ ಅತಿ ಸುಂದರ ಜೀವನ ಎನ್ನಬಹುದು ಸಾಲ ತೆಗೆದುಕೊಳ್ಳುವುದು ತುಂಬಾ ಸುಲಭ ಆದರೆ ಅದನ್ನು ತೀರಿಸುವುದು ತುಂಬಾ ಕಷ್ಟಕರವಾದ ಕೆಲಸ ಎಂದು ಎಲ್ಲರಿಗೂ ಗೊತ್ತು ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9686268564 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಇತ್ತೀಚಿಗೆ ವಿಕ್ಟೋರಿಯಾ ಆಸ್ಪತ್ರೆಯ ವೈದೇ ಕೃತಿಕಾ ರೆಡ್ಡಿ ಪತಿ ಮಹೇಂದ್ರ ರೆಡ್ಡಿ ಇಂದಲೇ ಭೀಕರವಾಗಿ ಕೊಲೆಯಾಗಿದ್ದು ಬೆಳಕಿಗೆ ಬಂದಿತ್ತು. ಇದೀಗ ವಿಕ್ಟೊರಿಯ ಆಸ್ಪತ್ರೆಯ ಡಾ. ಕೃತಿಕಾ ರೆಡ್ಡಿ ಕೊಲೆ ಪ್ರಕರಣಕ್ಕೆ ಇದೀಗ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು ವೈದ್ಯ ಮಹೇಂದ್ರರೆಡ್ಡಿಯ ಮತ್ತೊಂದು ಕ್ರೂರಮುಖ ಬಯಲಾಗಿದೆ. ಹಂತ ಹಂತವಾಗಿ ಪತ್ನಿಗೆ ಹತ್ಯೆಗೆ ಪಾಪಿ ಪತಿ ಸ್ಕೆಚ್ ಹಾಕಿದ್ದ. ಕೃತಿಕಾಳನ್ನು ಕೊಲ್ಲಲೇಬೇಕೆಂದು ಆತ ಸ್ಕೆಚ್ ಹಾಕಿದ ಹಿನ್ನೆಲೆಯಲ್ಲಿ, ಮನೆಗೆ ನಾಟ್ ಫಾರ್ ಸೇಲ್ ಔಷಧಿಯನ್ನು ಮಹೇಂದ್ರ ರೆಡ್ಡಿ ತಂದಿದ್ದ. ಗ್ಯಾಸ್ಟ್ರಿಕ್ ಔಷಧಿ, ಗ್ಲುಕೋಸ್ ಬಾಟಲ್ ಸೇರಿ ಹಲವು ಔಷಧಿಗಳು ಇದೀಗ ಆತನ ಮನೆಯಲ್ಲಿ ಪತ್ತೆಯಾಗಿದೆ. ಕೃತಿಕಾ ರೆಡ್ಡಿ ಇದ್ದ ರೂಂನಲ್ಲಿ ಈ ಎಲ್ಲಾ ಔಷಧಿಗಳು ಪತ್ತೆಯಾಗಿವೆ. ಒಂದು ರೀತಿ ಕೃತಿಕ ರೂಮನ್ನು ಮಹೇಂದ್ರ ಕ್ಲಿನಿಕ್ ರೀತಿ ಬದಲಾಯಿಸಿದ್ದ. ಅಲ್ಲದೆ ಋತುಚಕ್ರದ ಸಮಯದಲ್ಲೂ ಕೂಡ ಡ್ರಿಪ್ಸ್ ಹಾಕಿಕೊಳ್ಳುವಂತೆ ಮಹೇಂದ್ರ ಕೃತಿಕಾಗಿ ಒತ್ತಡ ಹೇರುತ್ತಿದ್ದ. ಕ್ಯಾನುಲ ಚುಚ್ಚಿ ಕೈತುಂಬ ಗಾಯ ಮಾಡಿದ್ದ

Read More