Subscribe to Updates
Get the latest creative news from FooBar about art, design and business.
Author: kannadanewsnow05
ಢಾಕಾ : ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಾಳಿಗಳ ಸರಣಿ ಮುಂದುವರಿದಿದ್ದು, ಕಳೆದ ಕೆಲವು ದಿನಗಳ ಹಿಂದೆ ಇಬ್ಬರು ಹಿಂದೂಗಳ ಹತ್ಯೆ ಬೆನ್ನಲ್ಲೆ, ಕಿಡಿಗೇಡಿಗಳ ದಾಳಿಯಿಂದ ಪವಾಡ ಸದೃಶವಾಗಿ ಪಾರಾಗಿ ಜೀವ ಉಳಿಸಿಕೊಂಡಿದ್ದ ಉದ್ಯಮಿ ಕೊಂಕನ್ ಚಂದ್ರ (50) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಇದೀಗ ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಕೇಔರ್ಬಂಗಾ ಪ್ರದೇಶದಲ್ಲಿ ಮೆಡಿಕಲ್ ಶಾಪ್ ಮುಚ್ಚಿ ಬುಧವಾರ (ಡಿ.31) ರಾತ್ರಿ 9 ಗಂಟೆ ಸುಮಾರಿಗೆ ಮನೆ ಕಡೆ ಬರುತ್ತಿದ್ದ ಕೊಂಕನ್ ಮೇಲೆ ಕಿಡಿಗೇಡಿಗಳು ಮಾರಣಾಂತಿಕ ಹಲ್ಲೆ ಮಾಡಿದ್ದರು. ಹಲವು ಬಾರಿ ಹೊಟ್ಟೆಗೆ ಇರಿದು, ಪೆಟ್ರೋಲ್ಹಾಕಿ ಬೆಂಕಿ ಹಚ್ಚಿದ್ದರು. ದೃಷ್ಟವಶಾತ್ ಪಕ್ಕದಲ್ಲೇ ಇದ್ದ ನೀರಿದ್ದ ಕೆರೆಗೆ ಜಿಗಿದು ಕೊಂಕನ್ ಪ್ರಾಣ ಉಳಿಸಿಕೊಂಡಿದ್ದರು. ನಂತರ ಕೆಲ ಸ್ಥಳೀಯರು ರಕ್ಷಿಸಿ ಢಾಕಾ ಮಡಿಕಲ್ ಆಸ್ಪತ್ರೆಗೆ ದಾಖಲಿಸಿದ್ದರು. ಗಂಭೀರ ಸ್ಥಿತಿಯಲ್ಲಿದ್ದ ಕೊಂಕನ್ ಚಂದ್ರ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಬಾಂಗ್ಲಾ ಮಾಧ್ಯಮಗಳು ವರದಿ ಮಾಡಿವೆ.
ಬಳ್ಳಾರಿ : ಬ್ಯಾನರ್ ಕಟ್ಟುವ ವಿಚಾರದಲ್ಲಿ ಶಾಸಕ ಭರತ್ ರೆಡ್ಡಿ ಮತ್ತು ಜನಾರ್ದನ ರೆಡ್ಡಿ ಬೆಂಬಲಿಗರ ನಡುವಿನ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭರತ್ ರೆಡ್ಡಿ ಸೇರಿ 22 ಜನರ ವಿರುದ್ಧ ದೂರು ದಾಖಲಾಗಿದೆ. ಮಾಜಿ ಸಚಿವ ಜನಾರ್ದನ ರೆಡ್ಡಿ ಮನೆಗೆ ಅತಿಕ್ರಮ ಪ್ರವೇಶ, ಜಾತಿನಿಂದನೆ, ಹಲ್ಲೆಗೆ ಯತ್ನ ಆರೋಪದಡಿ ಬ್ರೂಸ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾಸಕ ಭರತ್ ರೆಡ್ಡಿ ಅವರ ಆಪ್ತರಾದ ಸತೀಶ್ ರೆಡ್ಡಿ, ಚಾನಾಳ ಶೇಖರ್, ಲೋಕೇಶ್ ಅವಂಬಾವಿ, ಗಂಗಾಧರ ಸೇರಿ 22 ಜನರ ವಿರುದ್ದ ಪ್ರಕರಣ ದಾಖಲಾಗಿದೆ. ನಿನ್ನೆ ಭರತ್ ರೆಡ್ಡಿ ಅವರ ಬೆಂಬಲಿಗ ಚಾನಾಳ ಶೇಖರ್ ಅವರು ಜನಾರ್ದನ್ ರೆಡ್ಡಿ, ಶ್ರೀರಾಮುಲು ಸೇರಿದಂತೆ 11 ಜನರ ವಿರುದ್ಧ ದೂರು ನೀಡಿದ್ದರು. ಇಂದು ಜನಾರ್ದನ ರೆಡ್ಡಿ ಅವರ ಬೆಂಬಲಿಗ ಮನೆಗೆಲಸದ ವ್ಯಕ್ತಿ ನಾಗರಾಜ್ ಅವರು ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರತಿದೂರು ದಾಖಲಿಸಿದ್ದಾರೆ.
ಬಳ್ಳಾರಿ : ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆ ಸಂಬಂಧ ಓರ್ವ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಇದೀಗ 40 ಜನರನ್ನು ಬಳ್ಳಾರಿ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.ಗಲಾಟೆ ನಡೆದ ವಿಡಿಯೋ ಆಧರಿಸಿ ವಶಕ್ಕೆ ಪಡೆದುಕೊಂಡಿದ್ದು, ಎರಡು ಕಡೆಯ ಒಟ್ಟು 40 ಜನರನ್ನು ವಶಕ್ಕೆ ಪಡೆಯಲಾಗಿದೆ. ಇನ್ನು ಬಳ್ಳಾರಿಯಲಿ ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆಯಲ್ಲಿ ಕೈ ಕಾರ್ಯಕರ್ತ ಸಾವನಪ್ಪಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಖಾಸಗಿ ಗನ್ ಮ್ಯಾನ್ ಗಳು ಇದೀಗ ನಾಪತ್ತೆಯಾಗಿದ್ದಾರೆ. ಗಲಾಟೆ ವೇಳೆ ಸತೀಶ್ ರೆಡ್ಡಿ ಗನ್ ಮ್ಯಾನ್ ಗಳು ಗುಂಡು ಹಾರಿಸಿದರು. ಗನ್ ಮ್ಯಾನ್ ಗಳು ಐದು ಗನ್ ಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜನಾರ್ಧನ ರೆಡ್ಡಿ ಸತೀಶ ರೆಡ್ಡಿ ಗೆ ಸಂಬಂಧಿಸಿದಂತೆ ಎಲ್ಲಾ ಗನ್ ಮ್ಯಾನ್ ಗಳು ನಾಪತ್ತೆಯಾಗಿದ್ದಾರೆ. ಸತೀಶ್ ರೆಡ್ಡಿಯ ನಾಲ್ವರು ಖಾಸಗಿ ಗನ್ ಮ್ಯಾನ್ ಗಳು ನಾಪತ್ತೆಯಾಗಿದ್ದಾರೆ.
ಬೆಳಗಾವಿ : ಬೆಳಗಾವಿಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಶಾಲೆಗೆ ತೆರಳುತ್ತಿದ್ದ ಬಾಲಕಿಯ ಮೇಲೆ ಚಾಲಕನ ನಿರ್ಲಕ್ಷದಿಂದ ಬಸ್ ಹರಿದು, ಸ್ವಲ್ಪದರಲ್ಲೇ 13 ವರ್ಷದ ಬಾಲಕಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಇದೀಗ ವರದಿಯಾಗಿದೆ. ಶಾಲಾ ಬಾಲಕಿ ಸೈಕಲ್ ಮೇಲೆ ತೆರಳುವಾಗ ಖಾಸಗಿ ಬಸ್ ವಿದ್ಯಾರ್ಥಿನಿಯ ಮೇಲೆ ಹರಿದಿದೆ. ಸಾವಿನ ಮನೆ ಕದ ತಟ್ಟಿ ವಾಪಸ್ ಬಂದ 13 ವರ್ಷದ ಬಾಲಕಿ, ಬೆಳಗಾವಿ ಜಿಲ್ಲೆಯ ಗೋಕಾಕ್ನ ಮಲ್ಲಾಪುರ ಪಿಜಿ ಬಳಿ ಇ ಒಂದು ಘಟನೆ ಸಂಭವಿಸಿದೆ. ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಬಸ್ ಗುದ್ದಿದ ಬಳಿಕ ಬಾಲಕಿ ಬಸ್ ಕೆಳಗೆ ಇದ್ದಾಳೆ ಆದರೆ ಬಾಲಕಿ ಪ್ರಾಣಾಪಾಯದಿಂದ ಪಾರಾಗಿದ್ದು ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ
ಮೈಸೂರು : ವಿದ್ಯುತ್ ಅವಘಡದಲ್ಲಿ ಗಾಯಗೊಂಡಿದ್ದ ಇಂಜಿನಿಯರ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಚಿಕಿತ್ಸೆ ಫಲಿಸದೇ ಇಂಜಿನಿಯರ್ ಆನಂದ್ (43) ಸಾವನ್ನಪ್ಪಿದ್ದರೆ.ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಆನಂದ್ ಸಾವನ್ನಪ್ಪಿದ್ದಾರೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಇ ಆಗಿರುವ ಆನಂದ್ ಹುಣಸೂರು ಪಟ್ಟಣದ KPTCL ವಿದ್ಯುತ್ ಕೇಂದ್ರದಲ್ಲಿ ಎಇ ಆಗಿ ಕೆಲಸ ಮಾಡುತ್ತಿದ್ದರು. ದುರಸ್ತಿ ಕಾರ್ಯದ ವೇಳೆ ವಿದ್ಯುತ್ ಸ್ಪರ್ಶಿಸಿ ಆನಂದ್ ಗಾಯಗೊಂಡಿದ್ದರು. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಆನಂದ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಆನಂದ್ ಸಾವನ್ನಪ್ಪಿದ್ದಾರೆ. ಹುಣಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಬೀದಿ ಕಾಮಣ್ಣನರ ಕಾಟ ಹೆಚ್ಚಾಗಿದ್ದು ಕಳೆದ ಒಂದು ತಿಂಗಳ ಹಿಂದೆ ರಸ್ತೆ ಬದಿಯಲ್ಲಿ ನಿಂತಿದ್ದ ವೈದ್ಯೆಗೆ ಕಾಮುಕನೊಬ್ಬ ಬಂದು ವೈದ್ಯೆಗೆ ಮುಟ್ಟಿ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿರುವ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಇದೀಗ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಇದೀಗ ಪೊಲೀಸರು ಆರೋಪಿ ರಾಕೇಶ್ (24) ಎಂಬಾತನನ್ನು ಅರೆಸ್ಟ್ ಮಾಡಿದ್ದಾರೆ. ಕಳೆದ ಒಂದು ತಿಂಗಳ ಹಿಂದೆ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿರುವ ಘಟನೆ ಈಗ ತಡವಾಗಿ ಬೆಳಕಿಗೆ ಬಂದಿದೆ. ವೈದ್ಯೆ ಒಬ್ಬರು ರಸ್ತೆಯ ಬದಿ ಫುಟ್ ಪಾತ್ ನಲ್ಲಿ ನಿಂತಿದ್ದರು. ಈ ವೇಳೆ ಏಕಾಏಕಿ ಬಂದ ಕಾಮುಕನೊಬ್ಬ ವೈದ್ಯೆಯ ಖಾಸಗಿ ಭಾಗ ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ತಕ್ಷಣ ಎಚ್ಚೆತ್ತು ವೈದ್ಯ ಆತನಿಂದ ಬಿಡಿಸಿಕೊಂಡಿದ್ದಾರೆ.ಅಲ್ಲಿಂದ ಕಾಮುಕ ಪರಾರಿಯಾಗಿದ್ದಾನೆ. ಕಳೆದ ಡಿಸೆಂಬರ್ 17ರಂದು ನಡೆದ ಘಟನೆ ಇದೀಗ ಸಿಸಿ ಕ್ಯಾಮೆರಾದಲ್ಲಿ ಲಭ್ಯವಾಗಿದೆ. ಬೆಂಗಳೂರಿನ ಚಿಕ್ಕಬಾಣಾವರದ ಎಜಿಬಿ ಲೇಔಟ್ ನಲ್ಲಿ ಈ ಒಂದು ಘಟನೆ ನಡೆದಿದೆ. ಕೆಲಸ ಮುಗಿಸಿ…
ಬೆಂಗಳೂರು : ಬೆಂಗಳೂರಲ್ಲಿ ಭೀಕವಾದ ಅಪಘಾತ ಸಂಭವಿಸಿದ್ದು, ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮುಖ್ಯಶಿಕ್ಷಕರೊಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಹೊರವಲಯದ ಆಕಾಶವಾಣಿ ಸಮೀಪ ಈ ಒಂದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಶಾಲೆಕ ಮುಖ್ಯ ಶಿಕ್ಷಕ ಜಗದೀಶಯ್ಯ (57) ಸಾವನ್ನಪ್ಪಿದ್ದರೆ. ನೆಲಮಂಗಲದ ಬಸವನಹಳ್ಳಿ ಶಿಕ್ಷಕ ಜಗದೀಶಯ್ಯ ವಾಸವಾಗಿದ್ದರು.ಇಂದು ಮುಂಜಾನೆ ಕರ್ತವ್ಯಕ್ಕೆ ಹಾಜರಾಗಲು ಬರುವಾಗ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ದೊಡ್ಡಬೆಳವಂಗಲ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಗದಗ : ಗದಗದ ಸರ್ಕಾರಿ ಆಯುರ್ವೇದಿಕ್ ಆಸ್ಪತ್ರೆಯಲ್ಲಿ ಡಿ ಗ್ರೂಪ್ ನೌಕರ ಒಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಗದಗದ ಬೆಟಿಗೇರಿಯಲ್ಲಿರುವ ಆಯುರ್ವೇದಿಕ್ ಆಸ್ಪತ್ರೆಯಲ್ಲಿ ಈ ಒಂದು ಘಟನೆ ನಡೆದಿದ್ದು, ಹೊರಗುತ್ತಿಗೆ ನೌಕರ ಮೈಲಾರಲಿಂಗೇಶ್ವರ ರಂಗಪ್ಪ (35) ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೈಲಾರ ಲಿಂಗೇಶ್ವರ ರಂಗಪ್ಪ ಮೂಲತಃ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಚಿಕ್ಕಮುದುರ ಗ್ರಾಮದ ನಿವಾಸಿಯಾಗಿದ್ದು ಈ ಒಂದು ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ ಮೈಲಾರ ಲಿಂಗೇಶ್ವರ ರಂಗಪ್ಪ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಸದ್ಯ ಘಟನಾ ಸ್ಥಳಕ್ಕೆ ಬೆಟಗೇರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ
ಬೆಂಗಳೂರು : ಬೆಂಗಳೂರಿನಲ್ಲಿ ಬೀದಿ ಕಾಮಣ್ಣನರ ಕಾಟ ಹೆಚ್ಚಾಗಿದ್ದು ಕಳೆದ ಒಂದು ತಿಂಗಳ ಹಿಂದೆ ರಸ್ತೆ ಬದಿಯಲ್ಲಿ ನಿಂತಿದ್ದ ವೈದ್ಯೆಗೆ ಕಾಮುಕನೊಬ್ಬ ಬಂದು ವೈದ್ಯೆಗೆ ಮುಟ್ಟಿ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿರುವ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಒಂದು ತಿಂಗಳ ಹಿಂದೆ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿರುವ ಘಟನೆ ಈಗ ತಡವಾಗಿ ಬೆಳಕಿಗೆ ಬಂದಿದೆ. ವೈದ್ಯೆ ಒಬ್ಬರು ರಸ್ತೆಯ ಬದಿ ಫುಟ್ ಪಾತ್ ನಲ್ಲಿ ನಿಂತಿದ್ದರು. ಈ ವೇಳೆ ಏಕಾಏಕಿ ಬಂದ ಕಾಮುಕನೊಬ್ಬ ವೈದ್ಯೆಯ ಖಾಸಗಿ ಭಾಗ ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ತಕ್ಷಣ ಎಚ್ಚೆತ್ತು ವೈದ್ಯ ಆತನಿಂದ ಬಿಡಿಸಿಕೊಂಡಿದ್ದಾರೆ.ಅಲ್ಲಿಂದ ಕಾಮುಕ ಪರಾರಿಯಾಗಿದ್ದಾನೆ. ಕಳೆದ ಡಿಸೆಂಬರ್ 17ರಂದು ನಡೆದ ಘಟನೆ ಇದೀಗ ಸಿಸಿ ಕ್ಯಾಮೆರಾದಲ್ಲಿ ಲಭ್ಯವಾಗಿದೆ. ಬೆಂಗಳೂರಿನ ಚಿಕ್ಕಬಾಣಾವರದ ಎಜಿಬಿ ಲೇಔಟ್ ನಲ್ಲಿ ಈ ಒಂದು ಘಟನೆ ನಡೆದಿದೆ ಕೆಲಸ ಮುಗಿಸಿ ವೈದ್ಯೆ ತನ್ನ ಪಿಜಿ ಒಳಗೆ ಹೋಗುತ್ತಿದ್ದರು. ಈ ವೇಳೆ ಸ್ಕೂಟರ್ ನಲ್ಲಿ ಅಪರಿಚಿತ ಒಬ್ಬ ಹಿಂಬಾಲಿಸಿಕೊಂಡು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ A1 ಆರೋಪಿ ಪವಿತ್ರಗೌಡಗೆ ಜೈಲಿನಲ್ಲಿ ಇಂದಿನಿಂದ ಮನೆ ಊಟ ಸಿಗುವ ಸಾಧ್ಯತೆ ಇದೆ. ಪವಿತ್ರಗೌಡಗೆ ಮನೆ ಊಟದ ಭಾಗ್ಯ ಕೋರ್ಟ್ ನೀಡಿದೆ. ಹಾಗಾದರೆ ಯಾವಾಗ ಊಟ ಬರುತ್ತದೆ ಯಾರು ಊಟ ತರುತ್ತಾರೆ ಇದೆಲ್ಲಾ ಮಾಹಿತಿಗಳನ್ನು ಜೈಲಾಧಿಕಾರಿಗಳಿಗೆ ಪವಿತ್ರಾ ಪರ ವಕೀಲರು ಮಾಹಿತಿ ನೀಡಿದ್ದಾರೆ. ನಾಲ್ವರು ಊಟ ತರುವುದಾಗಿ ವಕೀಲರು ಮಾಹಿತಿ ನೀಡಿದ್ದು ನಿನ್ನೆ ಪವಿತ್ರ ಗೌಡ ಪರವಕೀಲರು ಎಲ್ಲಾ ಪ್ರಕ್ರಿಯೆ ಪೂರ್ಣಗೊಳಿಸಿದ್ದಾರೆ. ಹೀಗಾಗಿ ಇಂದಿನಿಂದ ಪವಿತ್ರ ಗೌಡಗೆ ಮನೆ ಊಟ ಸಿಗುವ ಸಾಧ್ಯತೆ ಇದೆ. ಇನ್ನು ಪವಿತ್ರ ಗೌಡಗೆ ಮನೆ ಊಟ ಸಿಗುವ ವಿಷಯ ತಿಳಿದ ಬೆನ್ನಲ್ಲೆ ನಟ ದರ್ಶನ್ ಕೂಡ ನನಗೂ ಮನೆ ಊಟ ಬೇಕು ಎಂದು ಪಟ್ಟು ಹಿಡಿದಿದ್ದಾರೆ ಎಂದು ತಿಳಿದುಬಂದಿದೆ. ಜೈಲಿನ ಊಟ ನನಗೆ ಅಡ್ಜಸ್ಟ್ ಆಗುತ್ತಿಲ್ಲ ಎಂದು ಕೋರ್ಟ್ ಗೆ ಮನವಿ ಮಾಡಲಿದ್ದಾರೆ. ಕಳೆದ ಬಾರಿಗೂ ದರ್ಶನ್ ಕೋರ್ಟಿಗೆ ಮನವಿ ಮಾಡಿದ್ದರು. ಆದರೆ ಕೋರ್ಟ್ ದರ್ಶನ್ ಅವರ ಅರ್ಜಿಯನ್ನು…














