Author: kannadanewsnow05

ಹುಬ್ಬಳ್ಳಿ : ಸಮಾಜದಲ್ಲಿ ಎಂತೆಂತಹ ವಿಕೃತ ಮನಸ್ಸು ಹೊಂದಿರುವವರು, ಕಾಮುಕಗಳು ಇರುತ್ತಾರೆ ಎಂದರೆ ಹುಬ್ಬಳ್ಳಿಯಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ಇದೀಗ ನಡೆದಿದೆ ಕಾಮುಕನೊಬ್ಬ ತಡರಾತ್ರಿ ಮನೆಗಳಿಗೆ ನುಗ್ಗಿ, ಮಹಿಳೆಯರ ಒಳಉಡುಪು ಕದ್ದು ಪರಾರಿಯಾಗಿರುವ ಘಟನೆ ವರದಿಯಾಗಿದೆ. ಹೌದು ಹುಬ್ಬಳ್ಳಿಯಲ್ಲಿ ಮಹಿಳೆಯರ ಒಳಉಡುಪು ಕಳ್ಳತನ ನಡೆದಿದೆ. ಸಿಸಿಟಿವಿ ಕ್ಯಾಮೆರಾದಲ್ಲಿ ಸೈಕೋಪಾತ್ ಕೃತ್ಯ ಸೆರೆಯಾಗಿದೆ. ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಈ ಒಂದು ಘಟನೆ ನಡೆದಿದೆ. ರಾತ್ರಿ ಕಳ್ಳಬೆಕ್ಕಿನಂತೆ ಬಂದು ಕಿರಾತಕ ಒಳಉಡುಪು ಕದ್ದಿದ್ದಾನೆ. ಕೇವಲ ಮಹಿಳೆಯರ ಒಳಉಡುಪು, ಕದಿಯುತ್ತಿದ್ದ ಕಾಮುಕ ಪರಾರಿಯಾಗುತ್ತಿದ್ದ. ಇದೀಗ ಕಾಮುಕನ ಬಂಧನಕ್ಕೆ ಸ್ಥಳೀಯರು ಆಗ್ರಹಿಸಿದ್ದಾರೆ.

Read More

ಚಿಕ್ಕಮಗಳೂರು : ರಾಜ್ಯದ ಪ್ರತಿಷ್ಠಿತ ದೇವಾಲಯಗಳ ಹೆಸರಿನಲ್ಲಿ ನಕಲಿ ವೆಬ್ಸೈಟ್ ತೆರೆದು ಕೋಟ್ಯಾಂತರ ರೂಪಾಯಿ ವಂಚನೆ ಎಸಗುತ್ತಿದ್ದ ತೆಲಂಗಾಣ ಮೂಲದ ಇಬ್ಬರು ಆರೋಪಿಗಳನ್ನು ಇದೀಗ ಚಿಕ್ಕಮಂಗಳೂರು ಸೆನ್ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯ, ಶೃಂಗೇರಿ ಮಠ ಸೇರಿದಂತೆ ರಾಜ್ಯದ ಪ್ರತಿಷ್ಠಿತ ದೇವಾಲಯಗಳ ಪ್ರಸಾದ, ಪೂಜ್ಯ ಹೆಸರಲ್ಲಿ ಈ ಇಬ್ಬರು ಆರೋಪಿಗಳು ನಕಲಿ ವೆಬ್ಸೈಟ್ ಓಪನ್ ಮಾಡಿ, ಹಣ ಪಡೆದು ವಂಚನೆ ಎಸಗುತ್ತಿದ್ದರು. ಹಣ ಪಡೆದು ವಂಚನೆ ಎಸಗುತ್ತಿದ್ದ ತೆಲಂಗಾಣದ ಮೂಲದ ಇಬ್ಬರು ಆರೋಪಿಗಳನ್ನ ಅರೆಸ್ಟ್ ಮಾಡಲಾಗಿದೆ. ತೆಲಂಗಾಣ ಮೂಲದ ಸುದೀಪ್ ಮತ್ತು ಅನಿಲ್ ಕುಮಾರ್ ಬಂಧಿತ ಆರೋಪಿಗಳು. ಚಿಕ್ಕಮಗಳೂರು ಸೆನ್ ಪೊಲೀಸ್ ಠಾಣೆ ಡಿವೈಎಸ್ಪಿ ನೇತೃತ್ವದಲ್ಲಿ ಅರೆಸ್ಟ್ ಮಾಡಲಾಗಿದೆ. www.devaraseve.com ಹೆಸರಿನಲ್ಲಿ ಪ್ರತಿಷ್ಠಿತ ದೇವಾಲಯಗಳ ಹೆಸರು ಬಳಕೆ ಮಾಡುತ್ತಿದ್ದರು. ರಾಜ್ಯ ಮತ್ತು ದೇಹದ ಪ್ರತಿಷ್ಠಿತ ದೇಗುಲಗಳ ಬಗ್ಗೆ ವೆಬ್ಸೈಟ್ನಲ್ಲಿ ಪೋಸ್ಟ್ ಹಂಚಿಕೊಳ್ಳುತ್ತಿದ್ದು, ವಿಶೇಷ ಪೂಜೆ, ಪ್ರಸಾದ ಮತ್ತು ವಿಶೇಷ ಸೇವೆ ಹೆಸರಿನ ಲಿಂಕ್ ಅಲ್ಲಿ ವಂಚನೆ ಎಸಗುತ್ತಿದ್ದರು.…

Read More

ಬೆಂಗಳೂರು : ಬೆಂಗಳೂರಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಂದ ಬಳಿಕ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಮಂಜು (27) ಕೊಲೆಯಾದ ಪತ್ನಿ ಧರ್ಮಶೀಲನ್ (29) ಆತ್ಮಹತ್ಯೆಗೆ ಶರಣಾದ ಪತಿ ಎಂದು ತಿಳಿದುಬಂದಿದೆ. ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೊಲೆಯಾದ ಮಹಿಳೆ ತಂದೆ ದೂರು ನೀಡಿದ್ದು, ಪೆರಿಯಸ್ವಾಮಿ ಅವರು ಮೂಲತಃ ತಮಿಳುನಾಡಿನವರು. ನಗರದ ಉಲ್ಲಾಳು ಮುಖ್ಯರಸ್ತೆಯಲ್ಲಿ ಕುಟುಂಬಸಮೇತ ವಾಸವಾಗಿದ್ದರು. ಇವರ ನಾಲ್ವರು ಹೆಣ್ಣು ಮಕ್ಕಳ ಪೈಕಿ ಎರಡನೇ ಮಗಳಾದ ಮಂಜು ಅವರಿಗೆ 2022ರಲ್ಲಿ ಧರ್ಮಶೀಲನ್ ಎಂಬಾತನೊಂದಿಗೆ ಮದುವೆ ಮಾಡಲಾಗಿತ್ತು. ಮದುವೆಯ ಬಳಿಕ ಧರ್ಮಶೀಲನ್ ದುಬೈನಲ್ಲಿ ಕೆಲಸ ಮಾಡುತ್ತಿದ್ದರೆ, ಮಂಜು ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಸೆ.28ರಂದು ನನ್ನ ತಂಗಿಯ ಮಗ ಪ್ರಶಾಂತ್ ಜೊತೆ ಮಗಳ ಮನೆಗೆ ಹೋದಾಗ ಬಾಗಿಲು ಹಾಕಿತ್ತು. ನಿರಂತರವಾಗಿ ಬಾಗಿಲು ಬಡಿದರೂ ಪ್ರತಿಕ್ರಿಯೆ ಬರದ ಕಾರಣ ಮತ್ತೊಂದು ಕೀ ಮೂಲಕ ಬೀಗ ತೆರೆದು ಒಳಗೆ ಪ್ರವೇಶಿಸಿದಾಗ…

Read More

ಗದಗ : ಗದಗ ತಹಸೀಲ್ದಾರ್ ಕಚೇರಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದ್ದು, ಬೆಟಿಗೇರಿಯ ನಾಡಕಚೇರಿ ಉಪ ತಹಸೀಲ್ದಾರ್ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಈ ಕುರಿತು ಆದೇಶ ಹೊರಡಿಸಿದ್ದಾರೆ. ತಹಸಿಲ್ದಾರ್ ಕಚೇರಿಗೆ ಕಾನೂನು ಸಚಿವ ಹೆಚ್ ಕೆ ಪಾಟೀಲ್ ಏಕಾಏಕಿ ಭೇಟಿ ನೀಡಿದ್ದರು. ಕಾನೂನು ಸಚಿವ ಹೆಚ್ ಕೆ ಪಾಟೀಲ್ ದಿಢೀರ್ ಭೇಟಿ ನೀಡಿದ್ದ ವೇಳೆ, ಪತಿ ಬದುಕಿದ್ದರು ಸಹ ವಿಧವಾ ವೇತನ ಮಂಜೂರು ಮಾಡಿದ ಹಿನ್ನೆಲೆಯಲ್ಲಿ, ಪರಿಶೀಲನೆ ವೇಳೆ ದಾಖಲೆ ಸಮೇತ ಅಧಿಕಾರಿ ಸಿಕ್ಕಾಕಿಕೊಂಡಿದ್ದಾರೆ. ಕೂಡಲೇ ಅಧಿಕಾರಿ ಅಮಾನತು ಗೊಳಿಸುವಂತೆ ಸಚಿವ HK ಪಾಟೀಲ್ ಸೂಚನೆ ನೀಡಿದ್ದಾರೆ. ಸಚಿವರ ಸೂಚನೆಯ ಮೇರೆಗೆ ಇದೀಗ ತಹಶೀಲ್ದಾರ್ ಸಸ್ಪೆಂಡ್ಡ್ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Read More

ರಾಮನಗರ : ರಾಜ್ಯದಲ್ಲಿ ಈಗಾಗಲೇ ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭವಾಗಿದ್ದು, ಸಮೀಕ್ಷೆ ಮೊದಲ ದಿನದಿಂದಲೇ ಸರ್ವರ್ ಹಾಗೂ ಮೊಬೈಲ್ ತಾಂತ್ರಿಕ ದೋಷಗಳು ಕಂಡುಬಂದಿದ್ದವು. ಹೀಗಾಗಿ ಸಮೀಕ್ಷೆ ಸ್ವಲ್ಪ ಕುಂಠಿತವಾಗಿತ್ತು. ಆದರೆ ಇನ್ನೊಂದಡೆ ಶಿಕ್ಷಕಿ ಒಬ್ಬರು ಕೇವಲ 7 ದಿನಗಳಲ್ಲಿ ಶೇ. 100ರಷ್ಟು ಸಮೀಕ್ಷೆ ಪೂರ್ಣಗೊಳಿಸಿದ್ದಾರೆ. ಹೌದು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಅಂಬಾಡಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಶಾಂತಮ್ಮ ಅವರು ರಾಜ್ಯ ಸರ್ಕಾರದಿಂದ ಕೈಗೊಳ್ಳಲಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಕಾರ್ಯವನ್ನು ಕೇವಲ 7 ದಿನಗಳಲ್ಲಿಯೇ ಪೂರ್ಣಗೊಳಿಸಿ ಶೇ.100ರಷ್ಟು ಸಾಧನೆ ಮಾಡಿದ್ದಾರೆ. ಇಂದು ಅವರನ್ನು ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಅವರು ತಮ್ಮ ಕಚೇರಿಯಲ್ಲಿ ಅಭಿನಂದಿಸಿ, ವೈಯಕ್ತಿವಾಗಿ 1,001 ರೂ.ಗಳ ನಗದು ಬಹುಮಾನ ನೀಡಿ ಶ್ರೀಮತಿ ಶಾಂತಮ್ಮ ಅವರ ಕಾರ್ಯವನ್ನು ಪ್ರಶಂಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಅಭಿನಂದನಾ ಪತ್ರ ಸಹ ನೀಡಿದ್ದಾರೆ. ಸಮೀಕ್ಷೆಯಲ್ಲಿ ನೀವು ತೋರಿದ ಆಸಕ್ತಿ, ಉತ್ಸಾಹ ಮತ್ತು ಪ್ರಾಮಾಣಿಕ ಪ್ರಯತ್ನವು…

Read More

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಈ ಒಂದು ಶೈಕ್ಷಣಿಕ ಸಮೀಕ್ಷೆಗೆ ಸರ್ಕಾರಿ ಶಾಲೆಯ ಶಿಕ್ಷಕರನ್ನು ನೇಮಿಸಲಾಗಿದೆ. ಇದೀಗ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ಸಮೀಕ್ಷೆ ನಡೆಸುವಾಗಲೇ ಮುಖ್ಯ ಶಿಕ್ಷಕರೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ಹೆಚ್. ಎಂ ರಾಮಕೃಷ್ಣಪ್ಪ (57) ಎನ್ನುವ ಮುಖ್ಯ ಶಿಕ್ಷಕ ಸಾವನ್ನಪ್ಪಿದ್ದಾರೆ. ರಾಮಕೃಷ್ಣಪ್ಪ ಅವರು ದಿಗಬಕೋಟೆ ಗ್ರಾಮದ ಶಾಲೆಯ ಮುಖ್ಯ ಶಿಕ್ಷಕರಾಗಿದ್ದಾರೆ. ಚಿಂತಾಮಣಿಯ 25ನೇ ವಾರ್ಡ್ನಲ್ಲಿ ಸಮೀಕ್ಷೆ ವೇಳೆ ಅವರಿಗೆ ಏಕಾಏಕಿ ಹೃದಯಾಘಾತ ಆಗಿದೆ ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿತ್ತಾದರು, ಚಿಕಿತ್ಸೆ ಫಲಿಸದೇ ಹೆಚ್ ಎಂ ರಾಮಕೃಷ್ಣಪ್ಪ ಸಾವನಪ್ಪಿದ್ದಾರೆ. ಕೆಲಸದ ಒತ್ತಡದಿಂದ ಹೃದಯಘಾತವಾಗಿದೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ.

Read More

ಬಳ್ಳಾರಿ : ಯಾವುದೇ ಕ್ಷಣದಲ್ಲಿ ಆದರೂ ಸಚಿವ ಸಂಪುಟ ವಿಸ್ತರಣೆಯಾಗಲಿದೆ. 10 ದಿನಗಳಲ್ಲಿ ಬಿ.ನಾಗೇಂದ್ರ ಮತ್ತೆ ಸಚಿವರಾಗಲಿದ್ದಾರೆ ಎಂಬುದಾಗಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಯಾವುದೇ ಕ್ಷಣದಲ್ಲಾದರೂ ಸಚಿವ ಸಂಪುಟ ವಿಸ್ತರಣೆ ಆಗಬಹುದು. ನಮ್ಮ ಕೈಯಲ್ಲಿ ನಿರ್ಧಾರ ಇಲ್ಲ. ಹೈಕಮಾಂಡ್ ನೋಡಿಕೊಳ್ಳಲಿದೆ ಎಂದರು. ಬಿ.ನಾಗೇಂದ್ರ ಮತ್ತೆ ಸಚಿವರಾಗುತ್ತಾರೆ. 10 ದಿನಗಳಲ್ಲಿ ಬಿ.ನಾಗೇಂದ್ರಗೆ ಮತ್ತೆ ಸಚಿವ ಸ್ಥಾನ ಸಿಗಲಿದೆ. ಸಿದ್ಧರಾಮಯ್ಯನವರೇ ಐದು ವರ್ಷ ಸಿಎಂ ಆಗಿ ಮುಂದುವರೆಯುತ್ತಾರೆ ಎಂದರು. ಬಳ್ಳಾರಿ ಜಿಲ್ಲೆಯಲ್ಲಿ ಯಾವ ಕೆಲಸಗಳು ಪೆಂಡಿಂಗ್ ಉಳಿದಿಲ್ಲ. ಎಲ್ಲಾ ಕೆಲಸ ಕಾರ್ಯಗಳು ನಡೆಯುತ್ತಿವೆ. ನಾಗೇಂದ್ರ ಮೂಲಕ ಸಮಸ್ಯೆಗಳ ಬಗ್ಗೆ ನನಗೆ ಮಾಹಿತಿ ಬರ್ತಿದೆ. ಸಾಹಿತ್ಯ ಸಮ್ಮೇಳನ ನಡೆಸಲು ನಾಲ್ಕು ಸ್ಥಳ ಗುರುತಿಸಲಾಗಿದೆ. ಬಳ್ಳಾರಿ ಶಾಸಕರೊಂದಿಗೆ ಸೇರಿ ಸ್ಥಳ ಪರಿಶೀಲನೆ ಮಾಡುತ್ತೇನೆ. ಬಳ್ಳಾರಿಯಲ್ಲಿ ಅದ್ಧೂರಿಯಾಗಿ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದರು.

Read More

ಹುಬ್ಬಳ್ಳಿ : ರಾಜ್ಯದಲ್ಲಿ ಸೆಪ್ಟೆಂಬರ್ 22 ರಿಂದ ಸಾಮಾಜಿಕ ಆರ್ಥಿಕ ಶೈಕ್ಷಣಿಕ ಸಮೀಕ್ಷೆ ಆರಂಭಿಸಲಾಗಿದ್ದು, ಇದೀಗ ಹುಬ್ಬಳ್ಳಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ನಿರ್ಲಕ್ಷ್ಯವಹಿಸಿದ ಹಿನ್ನೆಲೆ ಮಹಾನಗರ ಪಾಲಿಕೆಯ ಇಬ್ಬರು ಸಿಬ್ಬಂದಿ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಮಹಾನಗರಪಾಲಿಕೆ ವ್ಯಾಪ್ತಿಯ ಹುಬ್ಬಳ್ಳಿ ಶಹರದಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯ ಕಾರ್ಯದಲ್ಲಿ ನಿರ್ಲಕ್ಷ್ಯವಹಿಸಿ, ಕರ್ತವ್ಯಲೋಪ ಮಾಡಿರುವ ಮಹಾನಗರಪಾಲಿಕೆಯ ಇಬ್ಬರು ಸಿಬ್ಬಂದಿಗಳನ್ನು ಅಮಾನತು ಮಾಡಿ, ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ ಅವರು ಆದೇಶಿದ್ದಾರೆ. ಸಮೀಕ್ಷೆಗೆ ನಿಯೋಜನೆಗೊಂಡಿರುವ ಎಲ್ಲ ಸಮೀಕ್ಷೆದಾರಿಗೆ ಅಗತ್ಯ ತರಬೇತಿ ನೀಡಿ, ಅಗತ್ಯ ಮಾರ್ಗದರ್ಶನ ಮಾಡಲಾಗಿದೆ. ಪ್ರತಿಯೊಬ್ಬರು ನೀಡಿರುವ ಸಮೀಕ್ಷಾ ಗುರಿಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು. ತಾಂತ್ರಿಕ ಸಮಸ್ಯೆಗಳು ಉಂಟಾದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸ್ಥಾಪಿಸಿರುವ ಸಹಾಯವಾಣಿಗೆ ಸಂಪರ್ಕಿಸಿ, ಪರಿಹರಿಸಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ. ಸಮೀಕ್ಷೆಗೆ ಗುರಿ ನಿಗದಿ ಮಾಡಲಾಗಿದೆ. ಕರ್ತವ್ಯಲೋಪ, ನಿರ್ಲಕ್ಷ್ಯ ಮತ್ತು ಸಮೀಕ್ಷೆಯಲ್ಲಿ ಉದಾಸೀನತೆ ತೋರುವ ಅಧಿಕಾರಿ, ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮಕೈಗೊಂಡು ಸರಕಾರಕ್ಕೆ ವರದಿ ಸಲ್ಲಿಸಲಾಗುವುದು. ಕಾಲಮಿತಿಯಲ್ಲಿ…

Read More

ಬೆಂಗಳೂರು : ರಾಜ್ಯದಲ್ಲಿ ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಈಗಾಗಲೇ ಆರಂಭವಾಗಿದ್ದು ಆರಂಭದಲ್ಲಿ ಸರ್ವರ್ ಸಮಸ್ಯೆ ಹಾಗೂ ಕೆಲವು ತಾಂತ್ರಿಕ ದೋಷಗಳಿಂದ ತುಂಬ ಸಮಸ್ಯೆ ಆಗಿತ್ತು. ಇದೀಗ ಸಮೀಕ್ಷೆ ವೇಗ ಪಡೆದುಕೊಂಡಿದ್ದು, ಈ ವಿಚಾರವಾಗಿ ವಿಪಕ್ಷ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ಇದಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದು ಇದು ಯಾವುದೇ ಜಾತಿ ಧರ್ಮಗಳಿಗೆ ಸೀಮಿತ ಅಲ್ಲ ರಾಜ್ಯದ 7 ಕೋಟಿ ಜನರ ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಾಗಿದೆ ಎಂದು ತಿಳಿಸಿದರು. ಬೆಂಗಳೂರಲ್ಲಿ ಮಾತನಾಡಿದ ಅವರು, ಜಾತಿ ಗಣತಿಯನ್ನು ವಿರೋಧಿಸಿದ ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ಇದೀಗ ತಿರುಗೇಟು ನೀಡಿದ್ದಾರೆ. ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಸಮೀಕ್ಷೆ ಆಗಿದ್ದು, ಯಾವುದೇ ಒಂದು ಜಾತಿ ಧರ್ಮಗಳಿಗೆ ಇದು ಸೀಮಿತ ಅಲ್ಲ, 7 ಕೋಟಿ ಜನರ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯಾಗಿದೆ. ಇದು ಯಾರ ವಿರುದ್ಧವಾದ ಸಮೀಕ್ಷೆ ಅಲ್ಲವೇ ಅಲ್ಲ ಇದು ಎಲ್ಲರ ಪರವಾಗಿರುವ ಸಮೀಕ್ಷೆ ಎಂದು ತಿಳಿಸಿದ್ದಾರೆ.

Read More

ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘ ಮತ್ತೆ ಇದೀಗ ಸಿಡಿದೆದ್ದಿದೆ. ಕಮಿಷನ್ ದುಪ್ಪಟ್ಟು ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಗುತ್ತಿಗೆದಾರರು ಅಸಮಾಧಾನ ಹೊರ ಹಾಕುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದು ಗುತ್ತಿಗೆದಾರರ ಸಂಘ ಇದೀಗ ಆಕ್ರೋಶ ಹೊರಹಾಕಿದೆ. ಕರ್ನಾಟಕ ಸ್ಟೇಟ್ ಕಂಟ್ರಾಕ್ಟರ್ಸ್ ಅಸೋಸಿಯೇಷನ್ ಸಮಸ್ಯೆಯ ಬಗ್ಗೆ ಸಿಎಂ ಸಿದ್ದರಾಮಯ್ಯ ಗೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಕಾಮಗಾರಿ ಕೈಗೊಳ್ಳುವ 8 ಇಲಾಖೆಗಳಿಂದ ಹಣ ಬಂದಿಲ್ಲ. ರಾಜ್ಯ ಗುತ್ತಿಗೆದಾರರ ಸಂಘಕ್ಕೆ ಬಾಕಿ ಹಣ ಬಿಡುಗಡೆ ಆಗಿಲ್ಲ. ಗುತ್ತಿಗೆದಾರರ ಬಾಕಿ ಹಣ ಬಿಡುಗಡೆಗೆ ಇದೀಗ ತೀವ್ರ ಆಗ್ರಹ ಕೇಳಿ ಬರುತ್ತಿದೆ. ಒಟ್ಟು ರಾಜ್ಯ ಸರ್ಕಾರ 33,000 ಕೋಟಿ ಹಣ ಬಾಕಿ ಉಳಿಸಿಕೊಂಡಿದೆ. ಹಿಂದಿನ ಸರ್ಕಾರಕ್ಕಿಂತ ಈಗಿನ ಕಮಿಷನ್ ದುಪ್ಪಟ್ಟು ಆಗಿದೆ ಎರಡು ವರ್ಷಗಳಿಂದ ಸಮಸ್ಯೆ ಇದ್ದು ಬಾಕಿ ಹಣ ಬಿಡುಗಡೆ ಮಾಡಿ ಎಂದು ಅಗ್ರಹಿಸಿದ್ದಾರೆ. ಸರ್ಕಾರದಿಂದ ನಮಗೆ ಯಾವ ಪ್ರಯೋಜನ ಆಗಿಲ್ಲ ಅಂತ ಸೇವ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ. ಇದೆ ವಿಚಾರವಾಗಿ ಬಿಜೆಪಿ ಶಾಸಕ ಅಶ್ವತ್ಥನಾರಾಯಣ್…

Read More