Author: kannadanewsnow05

ಬೆಂಗಳೂರು : ಈತ ಎಂತಹ ಕಿಲಾಡಿ ಅಂದರೆ ಈಗಾಗಲೇ ಆತನಿಗೆ ಎರಡು ಮದುವೆಯಾಗಿದ್ದು, ಆದರೂ ಕೂಡ ಬೇರೆ ಹುಡುಗಿಯೊಂದಿಗೆ ಎಂಗೇಜ್ಮೆಂಟ್ ಮಾಡಿಕೊಂಡಿದ್ದಾನೆ. ವಿಷಯ ತಿಳಿದು ಮೊದಲ ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಬಂದು ಆತನಿಗೆ ಹಿಗ್ಗಾಮುಗ್ಗ ಥಳಿಸಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನಲ್ಲಿ ನಡೆದಿದೆ. ಹೌದು ಆನೇಕಲ್ ನಲ್ಲಿ ರವಿ ಎಂಬ ಖಿಲಾಡಿ ಕಾಮುಕನಿಗೆ ಇದೀಗ ಧರ್ಮದೇಟು ಬಿದ್ದಿದೆ. ಇಬ್ಬರ ಜೊತೆ ಮದುವೆಯಾಗಿದ್ದು ಅಲ್ಲದೆ ಮತ್ತೊಬ್ಬಳ ಜೊತೆಗೆ ಎಂಗೇಜ್ಮೆಂಟ್ ಮಾಡಿಕೊಳ್ಳಲು ಮುಂದಾಗಿದ್ದಾನೆ. ರವಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಯುವತಿಯರನ್ನು ಮದುವೆ ಆಗಿ ಪ್ರಗ್ನೆಂಟ್ ಮಾಡಿ ಅವರನ್ನು ಬಿಟ್ಟು ಬಿಡೋದೇ ಈತನ ಚಟವಾಗಿದೆ. ತುಮಕೂರು ಮೂಲದ ಆರೋಪಿ ರವಿಗೆ ಇದೀಗ ಹಿಗ್ಗಾಮುಗ್ಗ ಥಳಿಸಲಾಗಿದೆ. ಕಳೆದ 2024ರಲ್ಲಿ ಪಂಕಜ ಜೊತೆಗೆ ರವಿಗೆ ಮೊದಲ ಮದುವೆಯಾಗಿತ್ತು. ಮೊದಲ ಪತ್ನಿ ಗರ್ಭಣಿಯಾಗಿದ್ದಾಗ 2025ರಲ್ಲಿ ಎರಡನೇ ಮದುವೆ ಆಗಿದ್ದಾನೆ ಮದುವೆ ಆಗಿರುವ ವಿಷಯ ತಿಳಿದು ಆಗ ಮೊದಲ ಪತ್ನಿ ಗಲಾಟೆ ಮಾಡಿದ್ದಾಳೆ. ಮೊದಲ ಪತ್ತೆ…

Read More

ಮುಂಬೈ : ಅಮೆರಿಕಾ ಇರಾನ್ ನಡುವಿನ ಸಂಧನ ಮಾತುಕತೆ ವಿಫಲ ಹಾಗೂ ಜಲಸಂಧಿ ಮೇಲಿನ ಅಮೆರಿಕ ದಿಗ್ಬಂಧನ ಹಿನ್ನೆಲೆಯಲ್ಲಿ ಭಾರತೀಯ ಶೇರು ಮಾರುಕಟ್ಟೆಯಲ್ಲಿ ಇದೀಗ ಮತ್ತೆ ರಕ್ತಪಾತ ನಡೆದಿದೆ. ಹೌದು ಮುಂಬೈ ಷೇರು ಮಾರುಕಟ್ಟೆಯಲ್ಲಿ ಮತ್ತೆ ರಕ್ತಪಾತ ಆಗಿದ್ದು, ಸನ್ಸೆಕ್ಸ್ 1,600 ಅಂಕಕ್ಕೆ ಕುಸಿದಿದ್ದು, 400ಕ್ಕೂ ಹೆಚ್ಚು ಪಾಯಿಂಟ್ ನಿಫ್ಟಿ ಕುಸಿತ ಕಂಡಿದೆ. ಇಂದು ವಹಿವಾಟು ಆರಂಭವಾಗುತ್ತಿದ್ದಂತೆಯೇ ಮುಂಬೈ ಷೇರು ಮಾರುಕಟ್ಟೆ ತೀವ್ರ ಕುಸಿತಕ್ಕೆ ಸಾಕ್ಷಿಯಾಯಿತು. ಜಾಗತಿಕ ಮಾರುಕಟ್ಟೆಯಲ್ಲಿನ ನಕಾರಾತ್ಮಕ ಬೆಳವಣಿಗೆಗಳು, ಯುಎಸ್-ಇರಾನ್ ನಡುವಿನ ಉದ್ವಿಗ್ನತೆ ಮತ್ತು ಕಚ್ಚಾ ತೈಲ ಬೆಲೆ ಏರಿಕೆಯು ಹೂಡಿಕೆದಾರರಲ್ಲಿ ಭೀತಿ ಮೂಡಿಸಿದೆ. ಪರಿಣಾಮವಾಗಿ ಬಿಎಸ್‌ಇ (BSE) ಸೆನ್ಸೆಕ್ಸ್ 1,600ಕ್ಕೂ ಹೆಚ್ಚು ಅಂಕಗಳನ್ನು ಕಳೆದುಕೊಂಡು 72,000 ಮಟ್ಟಕ್ಕೆ ಕುಸಿದಿದೆ. ಬ್ಯಾಂಕಿಂಗ್, ಆಟೋ ಮತ್ತು ಐಟಿ ವಲಯದ ಷೇರುಗಳು ಭಾರಿ ನಷ್ಟ ಅನುಭವಿಸಿವೆ.

Read More

ಮುಂಬೈ : ಅಮೆರಿಕಾ ಇರಾನ್ ನಡುವಿನ ಸಂಧನ ಮಾತುಕತೆ ವಿಫಲ ಹಾಗೂ ಜಲಸಂಧಿ ಮೇಲಿನ ಅಮೆರಿಕ ದಿಗ್ಬಂಧನ ಹಿನ್ನೆಲೆಯಲ್ಲಿ ಭಾರತೀಯ ಶೇರು ಮಾರುಕಟ್ಟೆಯಲ್ಲಿ ಇದೀಗ ಮತ್ತೆ ರಕ್ತಪಾತ ನಡೆದಿದೆ. ಹೌದು ಮುಂಬೈ ಷೇರು ಮಾರುಕಟ್ಟೆಯಲ್ಲಿ ಮತ್ತೆ ರಕ್ತಪಾತ ಆಗಿದ್ದು, ಸನ್ಸೆಕ್ಸ್ 1,500 ಅಂಕಕ್ಕೆ ಕುಸಿದಿದೆ. ಇಂದು ವಹಿವಾಟು ಆರಂಭವಾಗುತ್ತಿದ್ದಂತೆಯೇ ಮುಂಬೈ ಷೇರು ಮಾರುಕಟ್ಟೆ ತೀವ್ರ ಕುಸಿತಕ್ಕೆ ಸಾಕ್ಷಿಯಾಯಿತು. ಜಾಗತಿಕ ಮಾರುಕಟ್ಟೆಯಲ್ಲಿನ ನಕಾರಾತ್ಮಕ ಬೆಳವಣಿಗೆಗಳು, ಯುಎಸ್-ಇರಾನ್ ನಡುವಿನ ಉದ್ವಿಗ್ನತೆ ಮತ್ತು ಕಚ್ಚಾ ತೈಲ ಬೆಲೆ ಏರಿಕೆಯು ಹೂಡಿಕೆದಾರರಲ್ಲಿ ಭೀತಿ ಮೂಡಿಸಿದೆ. ಪರಿಣಾಮವಾಗಿ ಬಿಎಸ್‌ಇ (BSE) ಸೆನ್ಸೆಕ್ಸ್ 1,500ಕ್ಕೂ ಹೆಚ್ಚು ಅಂಕಗಳನ್ನು ಕಳೆದುಕೊಂಡು 72,000 ಮಟ್ಟಕ್ಕೆ ಕುಸಿದಿದೆ. ಬ್ಯಾಂಕಿಂಗ್, ಆಟೋ ಮತ್ತು ಐಟಿ ವಲಯದ ಷೇರುಗಳು ಭಾರಿ ನಷ್ಟ ಅನುಭವಿಸಿವೆ.

Read More

ಬೆಂಗಳೂರು : ಬೆಂಗಳೂರಿನ ಖಾಸಗಿ ಕಾಲೇಜು, ವಿದ್ಯಾರ್ಥಿಗಳ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರು ವಿದ್ಯಾರ್ಥಿಗಳನ್ನು ಇದೀಗ ಮಡಿವಾಳ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆದಿತ್ಯ ಭೋಸ್ಲೆ, ಶೌರ್ಯ ಅಗರ್ವಾಲ್, ನಿಕ್ಕು ಸುಲ್ತಾನಿಯ ಹಾಗು ಸಯ್ಯದ್ ಮೊಹಮ್ಮದ್ ಬಿಲಾಲ್ ಬಂಧಿತ ಆರೋಪಿಗಳು. ನಾಲ್ವರನ್ನು ಬಂಧಿಸಿ ಪೊಲೀಸರು ವಿಚಾರಣೆಗೆ ಒಳಪಡಿಸಿದಾಗ ಹಣಕ್ಕಾಗಿ ಸಹಪಾಠಿಯನ್ನು ಕಿಡ್ನಾಪ್ ಮಾಡಿದ್ದಾಗಿ ತಪ್ಪು ಒಪ್ಪಿಕೊಂಡಿದ್ದಾರೆ. ಕಿಡ್ನ್ಯಾಪ್ ಮಾಡಿದ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಹೊಯ್ಸಳ ಪೊಲೀಸರಿಗೆ ಕಿಡ್ನಾಪ್ ಆಗಿದ್ದ ಸ್ನೇಹಿತ ಕರೆ ಮಾಡಿದ್ದ ಸದ್ಯ ಪ್ರಕರಣದ ತನಿಖೆಯನ್ನು ಮಡಿವಾಳ ಠಾಣೆ ಪೊಲೀಸರು ಮುಂದುವರಿಸಿದ್ದಾರೆ.

Read More

ಚಿಕ್ಕಮಗಳೂರು : ಸಚಿವ ಸ್ಥಾನ ನೀಡುವಂತೆ ದೆಹಲಿಗೆ ಕಾಂಗ್ರೆಸ್ ನಾಯಕರು ಭೇಟಿ ನೀಡಿದ್ದು, ಈ ವಿಚಾರವಾಗಿ, ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ. ಸಂಪುಟ ಪುನಾರಚನೆ ನಿರ್ಧಾರವನ್ನು ಹೈಕಮಾಂಡ್​ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಚಿಕ್ಕಮಗಳೂರಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಸಚಿವ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸಚಿವ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ. ಸಂಪುಟ ಪುನಾರಚನೆ ಕಾರ್ಯ ಬಾಕಿಯಿದೆ. ಐದು ರಾಜ್ಯಗಳ ಚುನಾವಣೆ, ಬಜೆಟ್ ಅಧಿವೇಶನ ಸಂಪುಟ ಪುನಾರಚನೆ ವಿಳಂಬಕ್ಕೆ ಕಾರಣವಿರಬಹುದು ಎಂದು ಹೇಳಿದರು. ಉಪಚುನಾವಣೆಯಲ್ಲಿ ಕಾಂಗ್ರೆಸ್​ ಗೆಲುವು ಸಾಧಿಸುವುದು ಖಂಡಿತ. ತಲೆದಂಡಕ್ಕೆ ಚುನಾವಣೆಯ ಸೋಲು-ಗೆಲುವು ಕಾರಣವಲ್ಲ. ಸಲೀಂ ಅಹ್ಮದ್ ಅವರು ಪಕ್ಷದ ಮುಖಂಡರು. ಅವರು, ದಾವಣಗೆರೆ ದಕ್ಷಿಣ ಉಪ ಚುನಾವಣೆಯಲ್ಲಿ ಕೆಲವರ ಪಕ್ಷವಿರೋಧಿ ಕಾರ್ಯಗಳ ಬಗ್ಗೆ ಹೇಳಿಕೆ ನೀಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆಯೇ ಹೊರತು, ಉಪಚುನಾವಣೆಯಲ್ಲಿ ಕಾಂಗ್ರೆಸ್ ಪರಾಜಿತವಾಗಲಿದೆ ಎಂದು ಅವರು…

Read More

ಬೆಳಗಾವಿ : ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಹಾರಾಷ್ಟ್ರದ ಸಾತಾರಾ ಸಮೀಪ ಇಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಳಗಾವಿ ಜಿಲ್ಲೆಯ ನಾಲ್ವರು ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತರಲ್ಲಿ ಸಂಕೇಶ್ವರದ ಖ್ಯಾತ ವೈದ್ಯ ಡಾ. ಸಚಿನ್‌ ಶಂಕರಗೌಡ ಪಾಟೀಲ್ ಅವರು ಸೇರಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತದ ತೀವ್ರತೆಯಿಂದ ವಾಹನ ಸಂಪೂರ್ಣವಾಗಿ ಜಖಂಗೊಂಡಿದ್ದು, ಸ್ಥಳದಲ್ಲೇ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇತರ ಮೃತರ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದ್ದು, ಗಾಯಾಳುಗಳಿದ್ದಾರೆಯೇ ಎಂಬುದೂ ಸ್ಪಷ್ಟವಾಗಿಲ್ಲ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Read More

ಕೊಪ್ಪಳ : ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಪ್ರಕರಣ ಸದ್ದು ಮಾಡಿದ ಬಳಿಕ ಸದ್ಯ ಕೊಪ್ಪಳದಲ್ಲೂ ಅಂತಹದ್ದೆ ಒಂದು ಪ್ರಕರಣ ಬೆಳಕಿಗೆ ಬಂದಿದೆ. ಮುಸ್ಲಿಂ ಯುವಕನೊಬ್ಬ 16 ಕ್ಕೂ ಹೆಚ್ಚು ಹಿಂದೂ ಯುವತಿಯರ ಅಶ್ಲೀಲ ರೀತಿಯ ಫೋಟೋಗಳನ್ನ ಫೋನ್‌ನಲ್ಲಿ ಇಟ್ಟುಕೊಂಡು ಹಿಂದೂ ಸಂಘಟನೆಗಳ ಕೈಗೆ ತಗಲಾಕಿ ಕೊಂಡಿದ್ದಾನೆ. ಸದ್ಯ ಹಿಂದೂ ಸಂಘಟನೆಗಳು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕೊಪ್ಪಳ ತಾಲೂಕಿನ ಕಂಪ್ಲಿ ಗ್ರಾಮದ ಮುಸ್ಲಿಂ ಯುವಕ ಮುಸ್ತಫಾ ಎಂಬಾತನ ಬಳಿ, 16 ಕ್ಕೂ ಹೆಚ್ಚು ಹಿಂದೂ ಯುವತಿಯರ ಜೊತೆಗಿನ ಫೋಟೋ ಹಾಗೂ ಅಶ್ಲೀಲ ವಿಡಿಯೊಗಳು ಪತ್ತೆಯಾಗಿವೆ. ಈತ ಪ್ರೀತಿ ಹೆಸರಲ್ಲಿ ಹಿಂದೂ ಯುವತಿಯರನ್ನ ಟಾರ್ಗೆಟ್ ಮಾಡಿ, ಅವರಿಗೆ ಡ್ರಗ್ಸ್ ಗಾಂಜಾ ನೀಡಿ ಅಶ್ಲೀಲ ವಿಡಿಯೊಗಳನ್ನ ಮಾಡಿಕೊಂಡಿದ್ದಾನೆ. ಜೊತೆಗೆ ತಾನೂ ಗಾಂಜಾ ಸೇದುವ ವಿಡಿಯೊಗಳು ಆತನ ಮೊಬೈಲ್‌ನಲ್ಲಿ ಪತ್ತೆಯಾಗಿವೆ. ಈತ ಹಿಂದೂ ಯುವತಿಯರನ್ನೆ ಟಾರ್ಗೆಟ್ ಮಾಡಿ ಅವರಿಗೆ ಆಸೆ ಆಮಿಷಗಳನ್ನ ತೋರಿಸಿ, ಲವ್ ಜಿಹಾದ್ ಮಾಡ್ತಾಯಿದ್ದ. ವಿಶ್ವ ಹಿಂದೂ ಪರಿಷತ್‌ ಜಿಲ್ಲಾಧ್ಯಕ್ಷ ಡಾ. ಸಂಗಮೇಶ…

Read More

ನವದೆಹಲಿ : ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ದರದಲ್ಲಿ ಮತ್ತೆ ಏರಿಕೆಯಾಗಿದ್ದು, ಅಮೆರಿಕ ಇರಾನ್ ನಡುವಿನ ಸಂಧಾನ ಮಾರುಕತೆ ವಿಫಲವಾದ ಹಿನ್ನೆಲೆಯಲ್ಲಿ ಇದೀಗ ಜಾಗತಿಕ ಮಾರುಕಟ್ಟೆಯಲ್ಲಿ 80ರಷ್ಟು ಕಚ್ಚಾತೈಲ ದರ ಏರಿಕೆಯಾಗಿದೆ ಮಾರುಕಟ್ಟೆಯಲ್ಲಿ ಬ್ಯಾರೆಲ್ ಕಚ್ಚಾ ತೈಲದ ದರ 104 ಡಾಲರ್ ಗೆ ಏರಿಕೆಯಾಗಿದೆ. ಹೌದು ದೀರ್ಘಕಾಲದ ನಿರೀಕ್ಷೆಯ ನಂತರ ನಡೆದ ಅಮೆರಿಕ ಮತ್ತು ಇರಾನ್ ನಡುವಿನ ರಾಜತಾಂತ್ರಿಕ ಸಂಧಾನ ಮಾತುಕತೆಗಳು ಯಾವುದೇ ಫಲಿತಾಂಶ ನೀಡದೆ ವಿಫಲಗೊಂಡಿವೆ. ಈ ಬೆಳವಣಿಗೆಯ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ (Crude Oil) ಬೆಲೆಯಲ್ಲಿ ಭಾರಿ ಏರಿಕೆ ಕಂಡುಬಂದಿದ್ದು, ವಿಶ್ವದ ಆರ್ಥಿಕತೆಯ ಮೇಲೆ ಆತಂಕದ ಛಾಯೆ ಆವರಿಸಿದೆ. ಮುಖ್ಯಾಂಶಗಳು: ರಾಜತಾಂತ್ರಿಕ ಬಿಕ್ಕಟ್ಟು: ಇರಾನ್ ಮೇಲಿನ ನಿರ್ಬಂಧಗಳ ತೆರವು ಮತ್ತು ತೈಲ ರಫ್ತಿಗೆ ಸಂಬಂಧಿಸಿದ ಒಪ್ಪಂದಗಳು ಮಾತುಕತೆಯ ಹಂತದಲ್ಲೇ ಸ್ಥಗಿತಗೊಂಡಿವೆ. ಬೆಲೆ ಏರಿಕೆ: ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕ್ರೂಡ್ ಆಯಿಲ್ ಬೆಲೆಯು ಗಣನೀಯವಾಗಿ ಏರಿಕೆಯಾಗಿದ್ದು, ಮುಂಬರುವ ದಿನಗಳಲ್ಲಿ ಇದು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಪರಿಣಾಮ: ಭಾರತದಂತಹ…

Read More

ಬೆಂಗಳೂರು : ಇತ್ತೀಚಿಗೆ ಹುಬ್ಬಳ್ಳಿಯಲ್ಲಿ ಜಿಮ್ ಟ್ರೈನರ್ ಗಳಿಂದ ಲವ್ ಜಿಹಾದ್ ಪ್ರಕರಣ ನಡೆದಿತ್ತು. ಇದೀಗ ಬೆಂಗಳೂರಲ್ಲಿ ವಿವಾಹಿತೆಯ ಮೋಹಕ್ಕೆ ಬಿದ್ದು, ಬ್ಲ್ಯಾಕ್‌ಮೇಲ್‌ಗೆ ಸಿಲುಕಿದ್ದ 28 ವರ್ಷದ ಜಿಮ್‌ ಟ್ರೈನರ್‌ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದ ವಾಜರಹಳ್ಳಿಯಲ್ಲಿ ನಡೆದಿದೆ. ದಿಲೀಪ್ (28) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ತಿಳಿದುಬಂದಿದೆ. ನೆಲಮಂಗಲ ತಾಲೂಕಿನ ವಾಜರಹಳ್ಳಿಯ ನಿವಾಸಿಯಾಗಿದ್ದ ದಿಲೀಪ್ ವೃತ್ತಿಯಲ್ಲಿ ಜಿಮ್ ಟ್ರೈನರ್ ಆಗಿದ್ದರು. ಇವರು ಕೆಲಸ ಮಾಡುತ್ತಿದ್ದ ಜಿಮ್‌ಗೆ ಫಿಟ್ನೆಸ್‌ಗಾಗಿ ಬರುತ್ತಿದ್ದ ಯೋಗಿತಾ ಎಂಬ ಮಹಿಳೆಯ ಪರಿಚಯವಾಗಿತ್ತು. ಈ ಪರಿಚಯ ಸಲುಗೆಗೆ ತಿರುಗಿ ಇಬ್ಬರ ನಡುವೆ ಸಂಬಂಧ ಏರ್ಪಟ್ಟಿತ್ತು ಎನ್ನಲಾಗಿದೆ. ಒಂದು ವರ್ಷದ ಹಿಂದೆಯೇ ಈ ವಿಚಾರ ಪೊಲೀಸ್ ಠಾಣೆ ಮೆಟ್ಟಿಲೇರಿ ಪ್ರಕರಣ ಸುಖಾಂತ್ಯಗೊಂಡಿತ್ತು. ಆದರೂ ಕೂಡ ಯೋಗಿತಾ, ದಿಲೀಪ್ ಬೆನ್ನು ಬಿಡದೆ ಬ್ಲಾಕ್‌ಮೇಲ್ ಮಾಡುತ್ತಿದ್ದಳು ಎಂಬ ಆರೋಪ ಕೇಳಿಬಂದಿದೆ. ದಿಲೀಪ್ ನೇಣಿಗೆ ಶರಣಾಗುವ ಮುನ್ನ ಯೋಗಿತಾಳಿಗೆ ವಿಡಿಯೋ ಕಾಲ್ ಮಾಡಿದ್ದ ಎನ್ನಲಾಗಿದೆ. ಇದರಿಂದ ಗಾಬರಿಗೊಂಡ ಯೋಗಿತಾ,…

Read More

ರಾಜಸ್ತಾನ್ : ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಯುವ ಜನತೆ ಇಯರ್ ಬಡ್ ಗಳನ್ನು ಹೆಚ್ಚಾಗಿ ಬಳಸುತ್ತಿದ್ದಾರೆ. ಅಲ್ಲದೆ ಕಳೆದ ಕೆಲವು ತಿಂಗಳ ಹಿಂದೆ ಇದೇ ಇಯರ್ ಬಡ್ ಸ್ಪೋಟಗೊಂಡು ಯುವಕನೊಬ್ಬ ಸಾವನಪ್ಪಿದ ಪ್ರಕರಣ ನಡೆದಿತ್ತು. ಇದೀಗ ರಾಜಸ್ಥಾನದ ಜೈಪುರ್ ನಲ್ಲಿ ಇಯರ್ ಬಡ್ ಸ್ಫೋಟಗೊಂಡು ವಿದ್ಯಾರ್ಥಿನಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ವರದಿಯಾಗಿದೆ. ಹೌದು ಇಯರ್ ಬಡ್ ಕಿವಿಯಲ್ಲಿದ್ದಾಗಲೇ ಸ್ಫೋಟಗೊಂಡು ಯುವತಿ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ರಾಜಸ್ತಾನದ ಮೆಡಿಕಲ್ ವಿದ್ಯಾರ್ಥಿಯೊಬ್ಬರು, ಜೆಬಿಎಲ್ ಇಯರ್‌ಬಡ್‌ ಕಿವಿಗೆ ಹಾಕಿರುವಾಗಲೇ ಸ್ಫೋಟಗೊಂಡು ತಮ್ಮ ಕಿವಿಗೆ ಹಾನಿಯಾಗಿರುವುದಾಗಿ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಹೇಳಿಕೊಂಡಿದ್ದಾರೆ. ಅವರ ಪೋಸ್ಟ್‌ ವೈರಲ್‌ ಆಗ್ತಿದ್ದಂತೆ ಜೆಬಿಎಲ್‌ ಸಂಸ್ಥೆ ಕೂಡ ಪ್ರತಿಕ್ರಿಯೆ ನೀಡಿದೆ. ಜೊತೆಗೆ ಇಯರ್‌ ಪಾಡ್‌ ಬಳಸುವವರಿಗೆ ಕೆಲ ಸಲಹೆಗಳನ್ನೂ ನೀಡಿದೆ. JBL ಬಲಭಾಗದ ಇಯರ್‌ ಬಡ್‌ ನನ್ನ ಕಿವಿಯಲ್ಲಿ ಸಿಡಿದು ಟಿಎಂ ಪೊರೆಯ ಉರಿಯೂತಕ್ಕೆ (ಹಾನಿ) ಕಾರಣವಾಯಿತು. ಇದು ಒಂದು ತಿಂಗಳ ಹಿಂದೆ ನನ್ನ ಸಹೋದರಿ ನನಗೆ ಉಡುಗೊರೆಯಾಗಿ ನೀಡಿದ್ದಳು, ಜೆಬಿಎಲ್…

Read More