Subscribe to Updates
Get the latest creative news from FooBar about art, design and business.
Author: kannadanewsnow05
ಬೆಳಗಾವಿ : ಇತ್ತೀಚಿಗೆ ಯುವಕರಿಗೆ ಮದುವೆಯಾಗಲು ಹೆಣ್ಣುಗಳೇ ಸಿಗುತ್ತಿಲ್ಲ ಅದರಲ್ಲೂ ಗ್ರಾಮೀಣ ಭಾಗದಲ್ಲಿ ಕೃಷಿ ಮಾಡಿಕೊಂಡು ಇರುವ ಯುವಕರಿಗಂತು ಹೆಣ್ಣು ಹೆತ್ತ ಪೋಷಕರು ಹೆಣ್ಣು ಕೊಡಲ್ಲ ಅಂತ ನೇರವಾಗಿ ಹೇಳಿ ಬಿಡುತ್ತಿದ್ದಾರೆ. ಇದೀಗ ಇದೇ ವಿಚಾರವಾಗಿ ಪರಿಷತ್ ನಲ್ಲಿ ಪುಟ್ಟಣ್ಣ ಅವರು ಗ್ರಾಮೀಣ ಭಾಗದಲ್ಲಿ ಕೃಷಿ ಮಾಡುವ ಯುವಕರಿಗೆ ಹೆಣ್ಣು ಸಿಗುತ್ತಿಲ್ಲ ಹಾಗಾಗಿ ಸರ್ಕಾರ ಇವರಿಗೆ ಒಂದು ಯೋಜನೆ ಜಾರಿ ಮಾಡಬೇಕು ಎಂದು ವಿಷಯ ಪ್ರಸ್ತಾಪಿಸಿದರು. ಗ್ರಾಮೀಣ ಭಾಗದಲ್ಲಿ ಕೃಷಿ ಮಾಡುವ ಯುವಕರಿಗೆ ಹೆಣ್ಣು ಸಿಗುತ್ತಿಲ್ಲ. ಎಂದು ಪರಿಷತ್ ನಲ್ಲಿ ಶೂನ್ಯ ವೇಳೆ ಕಾಂಗ್ರೆಸ್ ಸದಸ್ಯ ಪುಟ್ಟಣ್ಣ ಪ್ರಸ್ತಾಪಿಸಿದರು. ಸರ್ಕಾರ ಇಂತಹ ಯುವಕರಿಗೆ ಯೋಜನೆ ಘೋಷಣೆ ಮಾಡಬೇಕು ಹೆಣ್ಣು ಮಕ್ಕಳು ಸಿಗದೇ ತಾಲೂಕಿಗೆಂದು ಮಠ ಕಟ್ಟಿ ಕೊಡಿ ಅಂತ ಅರ್ಜಿ ಹಾಕುತ್ತಿದ್ದಾರೆ. ಮಠ ಕಟ್ಟಿ ಕೊಡಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಆಗುತ್ತಿದೆ ಎಂದು ಅವರು ಪ್ರಸ್ತಾಪಿಸಿದರು.
ಬೆಂಗಳೂರು : ಬೆಂಗಳೂರಿನಲ್ಲಿ ಅಮಾನವೀಯ ಘಟನೆ ಒಂದು ನಡೆದಿದ್ದು ರಸ್ತೆಯ ಮೇಲೆ ಮಲಗಿದ್ದಂತಹ ಸಾಕು ನಾಯಿಯ ಮೇಲೆ ನೆರೆಮನೆಯ ವ್ಯಕ್ತಿಯೊಬ್ಬ ಉದ್ದೇಶಪೂರ್ವಕವಾಗಿ ಕಾರು ಹಾಯಿಸಿ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ರಾಯಸಂದ್ರದ ಬಳಿ ಈ ಘಟನೆ ನಡೆದಿದ್ದು, ಹರೀಶ್ ಎಂಬಾತನ ವಿರುದ್ಧ ದೂರು ದಾಖಲಾಗಿದೆ. ರಮೇಶ್ ಎಂಬುವರ ಮನೆಯ ಬಳಿ ಸಾಕು ನಾಯಿಗಳು ಪದೇ ಪದೇ ಸಾಯುತ್ತಿರುತ್ತವೆ. ಅದು ಆಕಸ್ಮಿಕವಾದ ಘಟನೆ ಎಂದು ತಿಳಿದು ಸುಮ್ಮನಾಗಿರುತ್ತಾರೆ. ಆದರೆ ಡಿಸೆಂಬರ್ 13 ರಂದು ಬೆಳಗ್ಗೆ 06.40 ಗಂಟೆಗೆ ಅವರ ಸಾಕು ನಾಯಿ ರಸ್ತೆಯಲ್ಲಿ ಸಾವನ್ನಪ್ಪಿತ್ತು. ಈ ವೇಳೆ ಅನುಮಾನ ಬಂದು ರಮೇಶ್ ಅಲ್ಲಿನ ಸಿಸಿ ಕ್ಯಾಮರಾವನ್ನು ನೋಡಿದ ನಂತರ ಮನೆಯ ಹಿಂಭಾಗದ ನಿವಾಸಿಯಾದ ಹರೀಶ್ ಅಲಿಯಾಸ್ ಹರೀ ಎಂಬಾತನು ಈ ಕೃತ್ಯ ಎಸಗಿದ್ದಾನೆ ಅನ್ನೋದು ತಿಳಿದುಬಂದಿದೆ ಅವರು ಆರೋಪಿಸಿದ್ದಾರೆ. ರಸ್ತೆಯ ಮಧ್ಯದಲ್ಲಿ ಮಲಗಿದ್ದ ನಾಯಿ, ಕಾರು ತನ್ನ ಕಡೆಗೆ ಬರುತ್ತಿದೆ ಎಂದು ತಿಳಿದು ಅಲ್ಲಿಂದ ತೆರಳಲು ಯತ್ನಿಸುತ್ತಿರುವುದು ವಿಡಿಯೋದಲ್ಲಿದೆ. ಆದರೆ,…
ಶಿವಮೊಗ್ಗ : ಶಿವಮೊಗ್ಗದಲ್ಲಿ ಭೀಕರವಾದ ಮರ್ಡರ್ ಆಗಿದ್ದು, ಪತ್ನಿ ಜತೆಗೆ ಅನೈತಿಕ ಸಂಬಂಧ ಹೊಂದಿದ್ದಾನೆಂದು ಆರೋಪಿಸಿ ಅಣ್ಣನೊಬ್ಬ ತನ್ನ ಸ್ವಂತ ತಮ್ಮನನ್ನೇ ಹತ್ಯೆಗೈದು ಹೂತುಹಾಕಿದ ಘಟನೆ ಸೊರಬ ತಾಲೂಕಿನ ಜೇಡಗೇರಿ ಗ್ರಾಮದಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಆನವಟ್ಟಿ ಹೋಬಳಿ ಕಾನುಕೊಪ್ಪ ಹೊಸೂರು ಗ್ರಾಮದ ರಾಮಚಂದ್ರ (30) ಕೊಲೆಯಾದ ವ್ಯಕ್ತಿ. ಆತನ ಹಿರಿಯ ಸಹೋದರ ಮಾಲತೇಶ್ ಕೊಲೆ ಆರೋಪಿ. ಪುತ್ರ ರಾಮಚಂದ್ರ ಕಳೆದ ಸೆಪ್ಟೆಂಬರ್ 8 ರಂದು ಮನೆಯಿಂದ ನಾಪತ್ತೆಯಾಗಿದ್ದ. ಈ ಬಗ್ಗೆ ಕೆಲವು ದಿನಗಳ ನಂತರ ತಾಯಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆದರೆ ಪ್ರಕರಣದಲ್ಲಿ ಕಾಣೆಯಾದವನ ಪತ್ತೆಯಾಗಿರಲಿಲ್ಲ. ಆದಾಗ್ಯೂ ಅನುಮಾನ ಬಲವಾದ ಹಿನ್ನೆಲೆಯಲ್ಲಿ ಪೊಲೀಸರು ತನಿಖೆಯ ಜಾಡು ಬದಲಿಸಿದ್ದರು. ಅಲ್ಲದೆ, ಪ್ರಕರಣದಲ್ಲಿ ಸಾಕಷ್ಟು ಸಂಶಯಗಳು ಮೂಡಿದ ಹಿನ್ನೆಲೆಯಲ್ಲಿ ರಾಮಚಂದ್ರ ಅವರ ಸಹೋದರ ಮಾಲತೇಶ್ ನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದರು ಎನ್ನಲಾಗಿದೆ. ಒಂದೂವರೆ ತಿಂಗಳ ಹಿಂದೆ ನಾಪತ್ತೆಯಾಗಿದ್ದ ರಾಮಚಂದ್ರ ಬಗ್ಗೆ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ…
ಬೆಳಗಾವಿ : ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ ಮೇಲೆ ಗೃಹಲಕ್ಷ್ಮಿ ಯೋಜನೆ ಯಶಸ್ವಿಯಾಗಿ ಜಾರಿ ಆಯ್ತು ಆದರೆ ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ವಿಪಕ್ಷಗಳು ಪಟ್ಟು ಬಿಡದೆ ಗೃಹಲಕ್ಷ್ಮಿ ಹಣ ಹಾಕದೆ ರಾಜ್ಯದ ಜನರಿಗೆ ಸರ್ಕಾರ ಮೋಸ ಮಾಡಿದೆ ಎಂದು ಆರೋಪಿಸಿವೆ. ಇದರ ಬೆನ್ನಲ್ಲೇ ಸಚಿವೆ ಹೆಬ್ಬಾಳಕರ್ ಕೂಡ ಹೌದು ಎರಡು ತಿಂಗಳ ಹಣ ಗೃಹಲಕ್ಷ್ಮಿಯರ ಖಾತೆಗೆ ಜಮೆಯಾಗಿಲ್ಲ ಎಂದು ಸತ್ಯ ಒಪ್ಪಿಕೊಂಡಿದ್ದಾರೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಎರಡು ತಿಂಗಳು ವರಲಕ್ಷ್ಮಿ ಹಣ ಜಮೆ ಆಗಿಲ್ಲ ಎಂದು ಸದನದಲ್ಲಿ ಸತ್ಯ ಒಪ್ಪಿಕೊಂಡಿದ್ದಾರೆ. ಹಣ ಖಾತೆ ಜಮೆ ಆಗದೆ ಇರುವುದರ ಕುರಿತು ಇವತ್ತು ಸದನದಲ್ಲಿ ಚರ್ಚೆ ಆಯಿತು. ಈ ವೇಳೆ ಲಕ್ಷ್ಮಿ ಬಾಳ್ಕರ್ ಎರಡು ತಿಂಗಳ ಹಣ ಜಮೆ ಆಗಿಲ್ಲ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ. ನಾನು ಸದನಕ್ಕೆ ತಪ್ಪು ಮಾಹಿತಿ ನೀಡುವ ಉದ್ದೇಶ ಇರಲಿಲ್ಲ ಆದರೆ ನಾನು ಹೋಗಿ ಪರಿಶೀಲನೆ ಮಾಡಿದಾಗ ಎರಡು ತಿಂಗಳು ಹೆಚ್ಚು ಕಡಿಮೆ ಆಗಿದೆ ಎಂದು…
ಮೈಸೂರು : RCB ಅಭಿಮಾನಿಗಳಿಗೆ ಇದೀಗ ಕೆಎಸ್ಸಿಎ ಗುಡ್ ನ್ಯೂಸ್ ನೀಡಿದೆ. ಬೆಂಗಳೂರಿನಲ್ಲಿ ಈ ಬಾರಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಯಲಿದೆ ಎಂದು ಮೈಸೂರಿನಲ್ಲಿ ಕೆ ಎಸ್ ಸಿ ಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಈ ಒಂದು ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ವೆಂಕಟೇಶ್ ಪ್ರಸಾದ್ ಅವರು ಶೀಘ್ರದಲ್ಲಿಯೇ ಬೆಂಗಳೂರಲ್ಲಿ ಉದ್ಘಾಟನಾ ಪಂದ್ಯ ದಿನಾಂಕ ನಿಗದಿ ಮಾಡಲಾಗುತ್ತದೆ. ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನೆ ಪಂದ್ಯ ನಡೆಯಲಿವೆ. ಕಳೆದ ಆವೃತ್ತಿಯಲ್ಲಿ ಆರ್ಸಿಬಿ ಚಾಂಪಿಯನ್ಸ್ ಆಗಿದ್ದರು. ಜನರಲ್ ಆಗಿ ಯಾರು ಗೆಲ್ಲುತ್ತಾರೋ ಅವರ ಒಂದು ಗ್ರೌಂಡ್ ನಲ್ಲಿ ಉದ್ಘಾಟನಾ ಪಂದ್ಯ ನಡೆಸಬೇಕು. ಈ ವಿಚಾರವಾಗಿ ನಾನು ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆಶಂಕರ್ ಅವರ ಜೊತೆ ಮಾತನಾಡಿದ್ದು ಅವರು ಸಹ ಸಂಪುಟದಲ್ಲಿ ಈ ವಿಚಾರವಾಗಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಅಂತರಾಷ್ಟ್ರೀಯ ಪಂದ್ಯಗಳು ಹಾಗೂ ಪಂದ್ಯಗಳನ್ನು ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡಿಸುವುದು ಅಷ್ಟು ಸುಲಭದ ಕೆಲಸವಲ್ಲ ಏಕೆಂದರೆ ಕಾಲ್ತುಳಿತ ದುರಂತದಿಂದ ಪಂದ್ಯ ನಡೆದಿರಲು ನಿರ್ಧರಿಸಲಾಗಿತ್ತು. ಬೆಂಗಳೂರಿನಲ್ಲಿ ಪಂದ್ಯ…
ಬೆಂಗಳೂರು : ತನ್ನ ಮಗಳಿಗಾಗಿ ಪತ್ನಿಯನ್ನು ನಿರ್ಮಾಪಕ ಹರ್ಷವರ್ಧನ್ ಕಿಡ್ನ್ಯಾಪ್ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟಿ ಚೈತ್ರ ಸಹೋದರಿ ದೂರು ನೀಡಿದ ಬೆನ್ನಲ್ಲೇ ಇದೀಗ ಹರ್ಷವರ್ಧನ್ ಹೆಂಡತಿ ಚೈತ್ರಾಳನ್ನು ತಂದು ಒಪ್ಪಿಸಿದ್ದಾನೆ. ಹೌದು ಮಗಳಿಗಾಗಿ ತನ್ನ ಹೆಂಡತಿಯನ್ನು ಕಿಡ್ನ್ಯಾಪ್ ಮಾಡಿದ್ದ ಹರ್ಷವರ್ಧನ್ ನಟಿ ಚೈತ್ರಾಳಿಗೆ ತನ್ನ ಮಗು ನೀಡುವಂತೆ ಬೇಡಿಕೆ ಇಟ್ಟಿದ್ದನು ಮೈಸೂರಿನಲ್ಲಿ ಶೂಟಿಂಗ್ ಇದೆ ಎಂದು ಹೇಳಿಸಿ ಕಿಡ್ನ್ಯಾಪ್ ಮಾಡಿದ್ದ. ಬೆಂಗಳೂರಿನ ಮೂಲಕ ಕಿಡ್ನಾಪ್ ಮಾಡಿಸಿದ್ದಾನೆ. ಪ್ರೀತಿಸಿ ನಟಿ ಚೈತ್ರ ಮತ್ತು ಹರ್ಷವರ್ಧನ್ ಮದುವೆ ಆಗಿದ್ದರು. ಮದುವೆಯ ಬಳಿಕ ಇಬ್ಬರ ನಡುವೆ ಕೌಟುಂಬಿಕ ಕಲಹ ನಡೆದಿತ್ತು. ಒಂದು ವರ್ಷದ ಮಗಳಿಗಾಗಿ ಪಟ್ಟು ಹಿಡಿದಿದ್ದಾನೆ. ಚೈತ್ರ ಜೊತೇನೆ ಮಗು ಇತ್ತು ಚೈತ್ರ ಸಹ ತಾಯಿ ಮನೆಯಲ್ಲಿ ಇದ್ದರು. ಈ ಕುರಿತು ಚೈತ್ರ ಸೋದರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆರೋಪಿ ಹರ್ಷವರ್ಧನ್ ಮತ್ತು ಚೈತ್ರ ವಿಚಾರಣೆ ನಡೆಸಿದ್ದಾರೆ ವಿಚಾರಣೆ ವೇಳೆ ಕೌಟುಂಬಿಕ ಕಲಹ ಅಂತ ದಂಪತಿಗಳು ಒಪ್ಪಿಕೊಂಡಿದ್ದಾರೆ ಮಾತನಾಡಿ ಸರಿ ಮಾಡಿಕೊಳ್ಳುತ್ತೇವೆ…
ಹಾಸನ : ಹಾಸನದಲ್ಲಿ ಘೋರವಾದ ದುರಂತವೊಂದು ಸಂಭವಿಸಿದ್ದು, ಕಂಬ ಏರಿ ವಿದ್ಯುತ್ ತಂತಿ ದುರಸ್ತಿ ಮಾಡುವಾಗ ವಿದ್ಯುತ್ ಪ್ರವಹಿಸಿ ಕಾರ್ಮಿಕನೊಬ್ಬ ಸಾವನ್ನಪ್ಪಿದ ಘಟನೆ ಹಾಸನದ ಕಾಟೀಹಳ್ಳಿಯ ಟೀಚರ್ಸ್ ಕಾಲೋನಿಯಲ್ಲಿ ನಡೆದಿದೆ. ಮೃತನನ್ನು ಬಿಹಾರ ಮೂಲದ ಬರಿಕುಲ್ (18) ಎಂದು ಗುರುತಿಸಲಾಗಿದೆ. ಅವಘಡದಲ್ಲಿ ಸಲೀಂ (17) ಎಂಬಾತನಿಗೆ ಗಂಭೀರ ಗಾಯಗಳಾಗಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ. ಇಬ್ಬರು ಕಂಬವೇರಿ ವಿದ್ಯುತ್ ತಂತಿ ದುರಸ್ತಿ ಮಾಡುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಕಾರ್ಮಿಕರಿಗೆ ಶಾಕ್ ಹೊಡೆಯುತ್ತಿದ್ದಂತೆ ಇನ್ನುಳಿದ ಮೂರು ಕಾರ್ಮಿಕರು ಅಲ್ಲಿಂದ ಓಡಿ ಹೋಗಿದ್ದಾರೆ.ಗಾಯಗೊಂಡ ಯುವಕನನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು : ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಮಹಿಳಾ ಟಕ್ಕಿಗೆ ಎರಡು ಕೋಟಿ ವಂಚನೆ ಎಸಗಲಾಗಿದೆ. ಬೆಂಗಳೂರಲ್ಲಿ ಮಹಿಳಾ ಟೆಕ್ಕಿ ಒಬ್ಬರು ತಮ್ಮ 2 ನಿವೇಶನ, ತಾವು ವಾಸವಿದ್ದ ಫ್ಲ್ಯಾಟ್ ಮಾರಿ ಸೈಬರ್ ವಂಚಕರಿಗೆ ಮಹಿಳಾ ಟೆಕ್ಕಿ 2 ಕೋಟಿ ಹಣ ಹಾಕಿದ್ದಾರೆ. ಸಾಫ್ಟ್ವೇರ್ ಇಂಜಿನಿಯರ್ ಆಗಿರುವ ಬಬಿತಾ ದಾಸ ವಂಚನೆಗೆ ಒಳಗಾದವರು. ಬಾಬೀತಾ ದಾಸ್ ಬೆಂಗಳೂರಿನ ವಿಜ್ಞಾನ ನಗರದ ನ್ಯೂತಿಪ್ಪಸಂದ್ರದ ನಿವಾಸಿಯಾಗಿದ್ದು ವೈಟ್ ಫೀಲ್ಡ್ ಸನ್ ಠಾಣೆಗೆ ಇದೀಗ ನೀಡಿದ್ದಾರೆ. ಹತ್ತು ವರ್ಷದ ಮಗನ ಜೊತೆಗೆ ಬಬಿತಾದಾಸ್ ನ್ಯೂತಿಪ್ಪಸಂತರದ ಫ್ಲಾಟ್ ನಲ್ಲಿ ನೆಲೆಸಿದ್ದರು. ಕೆಲವು ತಿಂಗಳ ಹಿಂದೆ ಬ್ಲೂ ಡಾರ್ಟ್ ಕೊರಿಯರ್ ಹೆಸರಿನಲ್ಲಿ ಕರೆ ಬಂದಿತ್ತು ಹೇಳಿ ವಿಡಿಯೋ ಕರೆ ಮಾಡಿ ಹೆದರಿಸಿದ್ದಾರೆ. ಬ್ಲೂಡಾಟ್ ಕೊರಿಯರ್ ನಲ್ಲಿ ನಿಮ್ಮ ಹೆಸರಿನ ಬ್ಯಾಗೇಜ್ ಸಿಕ್ಕಿದೆ ಆ ಬ್ಯಾಗೇಜ್ ನಿಮ್ಮ ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಆಗಿದೆ. ನಾವು ಮುಂಬೈ ಪೊಲೀಸರು ನಿಮ್ಮನ್ನು ಡಿಜಿಟಲ್ ಅರೆಸ್ಟ್ ಮಾಡುತ್ತಿದ್ದೇವೆ ನಾವು ನಿಮ್ಮನ್ನು ವೆರಿಫೈ ಮಾಡುವವರೆಗೂ ಎಲ್ಲೂ…
ಮೈಸೂರು : ಬೆಂಗಳೂರಲ್ಲಿ ಮಗಳಿಗಾಗಿ ತನ್ನ ಹೆಂಡತಿಯನ್ನೇ ಪತಿ ಅಪರಣ ಮಾಡಿರುವ ಘಟನೆ ವರದಿಯಾಗಿದೆ. ನಟಿ ಚೈತ್ರಾಳನ್ನು ಅಪಹರಿಸಿ ತನ್ನ ಮಗು ನೀಡುವಂತೆ ಪತಿ ಬೇಡಿಕೆ ಇಟ್ಟಿದ್ದಾನೆ. ಮೈಸೂರಿನಲ್ಲಿ ಶೂಟಿಂಗ್ ಇದೆ ಎಂದು ಹೇಳಿಸಿ ಪತ್ನಿಯನ್ನು ಅಪಹರಣ ಮಾಡಿದ್ದಾನೆ. ಬೆಂಗಳೂರಿನ ನೈಸ್ ರೋಡ್ ನಲ್ಲಿ ಸ್ನೇಹಿತನ ಮೂಲಕ ಹೇಳಿಸಿ ನಟಿ ಚೈತ್ರಳನ್ನು ಇದೀಗ ಅಪಹರಣ ಮಾಡಲಾಗಿದೆ. ಪ್ರೀತಿಸಿ ನಟಿ ಚೈತ್ರ ಮತ್ತು ನಿರ್ಮಾಪಕ ಹರ್ಷವರ್ಧನ್ ಮದುವೆ ಆಗಿದ್ದರು. ಕೌಟುಂಬಿಕ ಕಲಹದಿಂದ ಬೇರೆ ಬೇರೆಯಾಗಿದ್ದಾರೆ. ಒಂದು ವರ್ಷದ ಮಗಳ ಜೊತೆಗೆ ನಟಿ ಚೈತ್ರ ಬೆಂಗಳೂರಿಗೆ ಬಂದಿದ್ದಾರೆ. ಚೈತ್ರಾಳನ್ನು ಅಪಹರಿಸಿ ತನ್ನ ಮಗಳನ್ನು ನೀಡುವಂತೆ ನಿರ್ಮಾಪಕ ರ್ಷವರ್ಧನ್ ಒತ್ತಾಯ ಮಾಡಿದ್ದಾನೆ. ಚೈತ್ರಳ ತಾಯಿಗೆ ಕರೆ ಮಾಡಿ ನನ್ನ ಮಗಳನ್ನು ತಂದು ಕೊಡಿ ನಿಮ್ಮ ಮಗಳನ್ನು ಕರೆದುಕೊಂಡು ಹೋಗಿ ಎಂದು ಬೆದರಿಸಿದ್ದಾನೆ. ಈ ಸಂಬಂಧ ಚೈತ್ರ ಸಹೋದರಿ ದುರು ನೀಡಿದ್ದಾರೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಬೆಳಗಾವಿ : ನಮ್ಮಲ್ಲಿ ಹೈಕಮಾಂಡ್ ಇದೆ ಅವರು ಏನು ತೀರ್ಮಾನ ಮಾಡುತ್ತಾರೆ ಅದರ ನಡೆದುಕೊಳ್ಳುತ್ತೇವೆ ಜನ ನಮಗೆ ಆಶೀರ್ವಾದ ಮಾಡಿದ್ದಾರೆ ಐದು ವರ್ಷ ಇರಿ ಅಂತ ಆಶೀರ್ವಾದ ಮಾಡಿದ್ದಾರೆ. 2013ರಲ್ಲೂ ಆಶೀರ್ವಾದ ಮಾಡಿದ್ದಾರೆ 2023ರಲ್ಲೂ ಆಶೀರ್ವಾದ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಬಿಜೆಪಿಯವರಿಗೆ ಒಮ್ಮೆ ಕೂಡ ಆಶೀರ್ವಾದ ಮಾಡಿಲ್ಲ. ಎಲ್ಲಿಯವರೆಗೂ ರಾಜ್ಯದ ಜನತೆ ಇಲ್ಲಿವರೆಗೂ ಬಿಜೆಪಿ ಅವರಿಗೆ ಒಮ್ಮೆಯೇ ಆಶೀರ್ವಾದ ಮಾಡಿಲ್ಲ. ಮುಂದೆಯೂ ಮಾಡಲ್ಲ ಇವರು ವಿರೋಧ ಪಕ್ಷದಲ್ಲಿ ಶಾಶ್ವತವಾಗಿ ಇರುತ್ತಾರೆ. ಈಗ ಇರುವ ಸಂಖ್ಯೆ ಏನಿದೆ ಅದಕ್ಕಿಂತಲೂ ಕಡಿಮೆ ಬರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಸದನದಲ್ಲಿ ವಾಗ್ದಾಳಿ ನಡೆಸಿದರು. ಹೈಕಮಾಂಡ್ ಹೇಳುವವರೆಗು ನಾನೇ CM! ಇಂದು ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯಗೆ ಕುಣಿಗಲ್ ಶಾಸಕ ರಂಗನಾಥ್ ಪ್ರಶ್ನೆ ಕೇಳಿದರು ಆಕ್ರೋಶ ಭರಿತರಾದಂತೆ ಶಾಸಕ ಎಚ್ ಡಿ ರಂಗನಾಥ್ ಪ್ರಶ್ನೆ ಕೇಳಿದರು ನಂತರ ಸ್ವಲ್ಪ ಸಮಯದ ಬಳಿಕ ನನಗೇನು ಸಿಟ್ಟಿಲ್ಲ ನಾನು ಮಾತನಾಡುವುದೇ ಹೀಗೆ…














