Author: kannadanewsnow05

ಮೈಸೂರು : ಮುಡಾ ಹಗರಣಕ್ಕೆ ಸಬಂಧಪಟ್ಟಂತೆ ಇದೀಗ ಇಡಿ ಅಧಿಕಾರಿಗಳು ಒಟ್ಟು 252 ನಿವೇಶನಗಳ ಒಟ್ಟು 440 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಮುಡಾ ಅಧಿಕಾರಿಗಳು ಅಕ್ರಮವಾಗಿ ನೀಡಿದ 252 ನಿವೇಶನಗಳನ್ನು ಇದೀಗ ಇಡಿ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಅಲ್ಲದೇ ಮುಡಾದ ಮಾಜಿ ಆಯುಕ್ತರಾದ ದಿನೇಶ್ ಕುಮಾರ್ ಬಳಿ ಇದ್ದ 32 ಸೈಟ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. 40.8 ಕೋಟಿ ಮೌಲ್ಯದ ನಿವೇಶನಗಳನ್ನು ಇಡಿ ಅಧಿಕಾರಿಗಳು ವರ್ಷಕ್ಕೆ ಪಡೆದುಕೊಂಡಿದ್ದಾರೆ. ಅಧಿಕಾರಿಗಳು ಅಕ್ರಮವಾಗಿ 752 ಸೈಟ್ ಗಳನ್ನು ಅಲಾಟ್ ಮಾಡಿದ್ದರು. ಮುಡಾ ಅಧಿಕಾರಿಗಳೇ ಅಕ್ರಮದಲ್ಲಿ ಭಾಗಿಯಾಗಿರುವುದು ಸಾಬೀತು ಆಗಿತ್ತು.ಮಾಜಿ ಆಯುಕ್ತ ದಿನೇಶ್ ಬಳಿ ಇರುವ 32 ನಿವೇಶನಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ದಿನೇಶ್ ಕುಟುಂಬಸ್ಥರ ಹೆಸರಿನಲ್ಲಿ ಆಸ್ತಿ ಮಾಡಿದ್ದ ಎನ್ನಲಾಗಿದೆ.

Read More

ಚಿಕ್ಕಮಗಳೂರು : ನಗರದಲ್ಲಿ ಹಸುವಿನ ಬಾಲಕ್ಕೆ ಬೆಂಕಿ ಹಚ್ಚಿ ವಿಕೃತಿ ಮೆರೆದ ಬಾಲಕನನ್ನು ಹಿಂದೂ ಕಾರ್ಯಕರ್ತರು ಥಳಿಸಿ ಪೊಲೀಸರಿಗೊಪ್ಪಿಸಿದ್ದಾರೆ. ವಿಜಯಪುರ ಬಡಾವಣೆಯಲ್ಲಿ 16 ವರ್ಷದ ಬಾಲಕನೊಬ್ಬ ಹಸುವಿನ ಬಾಲಕ್ಕೆ ಸೆಂಟ್ ಸ್ಪ್ರೇ ಮಾಡಿ ಬೆಂಕಿ ಹಚ್ಚಿದ್ದಾನೆ. ಬಾಲಕನ ಕೃತ್ಯ ಕಂಡು ಸ್ಥಳೀಯರು ಹಾಗೂ ಹಿಂದೂ ಕಾರ್ಯಕರ್ತರು ಬಾಲಕನಿಗೆ ಥಳಿಸಿ, ಪೊಲೀಸರಿಗೊಪ್ಪಿಸಿದ್ದಾರೆ. ಬಾಲಕನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ವಿಕೃತಿ ಮೆರೆದ ಬಾಲಕನ ವಿರುದ್ಧ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಗನಿಗೆ ಥಳಿಸಿದ ಹಿಂದೂ ಸಂಘಟನೆ ಕಾರ್ಯಕರ್ತರ ಮೇಲೂ ಬಾಲಕನ ತಾಯಿ ದೂರು ನೀಡಿದ್ದಾಳೆ. ಅಪ್ರಾಪ್ತ ಬಾಲಕನ ಮನಸ್ಥಿತಿ ಬಗ್ಗೆ ಸ್ಥಳೀಯರು ಆತಂಕ ಹೊರಹಾಕಿದ್ದಾರೆ. ಬಾಲಕ ಕೃತ್ಯಕ್ಕೆ ಬಳಸಿದ ಲೈಟರ್ ಹಾಗೂ ಸೆಂಟ್ ಬಾಟಲಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಕ್ರಮಕ್ಕೆ ಮುಂದಾಗಿದ್ದಾರೆ.

Read More

ಚಿಕ್ಕಬಳ್ಳಾಪುರ : ಬೆಂಗಳೂರಿನಲ್ಲಿ ಬಸವ ಸಂಸ್ಕೃತಿ ಅಭಿಯಾನ ಕಾರ್ಯಕ್ರಮ ವಿಚಾರವಾಗಿ, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದು, ಸಿದ್ದರಾಮಯ್ಯ ತಂಡ ಹಿಂದೂ ಧರ್ಮ ಒಡೆಯಲು ಪ್ರಯತ್ನಿಸುತ್ತಿದೆ ಬಸವಣ್ಣನವರು ಮೂರ್ತಿ ಪೂಜಕರು, ಅಂಕಿತನಾಮ ಕೂಡಲಸಂಗಮದೇವ. ಶಿವನ ಹೆಸರಿನಲ್ಲಿ ಬಸವಣ್ಣನವರ ವಚನಗಳಿವೆ. ಬಸವಣ್ಣನ ಹೆಸರನ್ನು ಕೆಲವು ಸ್ವಾಮೀಜಿಗಳು ಬಿಸಿನೆಸ್ ಮಾಡಿಕೊಂಡಿದ್ದಾರೆ. ಈ ನಕ್ಸಲೆಟ್ ಸ್ವಾಮಿಗಳು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಮನೆಯಲ್ಲಿ ಇರುತ್ತಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ಬಸವತತ್ವ ಅಂತಾರಲ್ಲ ಆ ಸ್ವಾಮಿಗಳಿಗೆ ಏನು ಗೊತ್ತಿದೆ? ಬಸವಣ್ಣ ಹುಟ್ಟಿದ್ದು ವಿಜಯಪುರ ಜಿಲ್ಲೆಯಲ್ಲಿ ಐಕ್ಯ ಆಗಿದ್ದು ಕೂಡ ಅಲ್ಲಿಯೇ. ಸನಾತನ ಧರ್ಮವನ್ನು ಬಯ್ಯುವ ನಕ್ಸಲೆಟ್ ಗ್ಯಾಂಗ್. ಕೆಲ ನಕ್ಸಲೆಟ್ ಸ್ವಾಮೀಜಿಗಳು ತಮ್ಮ ಮನಸ್ಸಿಗೆ ಬಂದಂತೆ ಕರೆಯುತ್ತಿದ್ದರು ಓಂ ಶ್ರೀ ಗುರು ಲಿಂಗ ಬಸವ ಸ್ವಾಮಿ ನಮಃ ಅಂತ ಕರೆಯುತ್ತಿದ್ದರು. ಈಗ ಶ್ರೀ ಗುರುಲಿಂಗ ಸ್ವಾಮಿ ನಮಃ ಅಂತ ಕರೆಯುತ್ತಿದ್ದಾರೆ ಮುಂದಿನ ದಿನಗಳಲ್ಲಿ ಇವರೆಲ್ಲ ಬಸವಲಿಂಗ ಅಂತ ಕರೆಯುತ್ತಾರೆ ಎಂದು ಶಾಸಕ ಬಸನಗೌಡ ಪಾಟೀಲ್…

Read More

ಬೆಂಗಳೂರು : ಜ್ಞಾನ ಎನ್ನುವುದು ಯಾರ ಅಪ್ಪನ ಮನೆಯ ಸ್ವತ್ತಲ್ಲ ಎಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಮಹರ್ಷಿ ವಾಲ್ಮೀಕಿ ರಾಮಾಯಣ ಬರೆಯಲು ಸಾಧ್ಯ ಆಗುತ್ತಿತ್ತಾ? ಬೆಸ್ತರ ಜಾತಿಯಲ್ಲಿ ಹುಟ್ಟಿದವರು ಮಹಾಭಾರತ ಬರೆಯಲು ಆಗುತ್ತಿತ್ತ? ಎಂದು ಪ್ರಶ್ನಿಸಿದರು. ಎಲ್ಲರಿಗೂ ಸಮಾನವಾದ ಅವಕಾಶ ಸಿಕ್ಕರೆ ಸಮಾನವಾಗಿ ಬೆಳೆಯುತ್ತಾರೆ. ನಮ್ಮದು ಜಡತ್ವದಿಂದ ಕೂಡಿರುವ ಜಾತಿ ವ್ಯವಸ್ಥೆ. ಆರ್ಥಿಕ ಹಾಗೂ ಸಾಮಾಜಿಕ ಶಕ್ತಿ ಬಂದರೆ ಇದಕ್ಕೆ ಚಲನೆ ಬರುತ್ತದೆ. ಅದಕ್ಕಾಗಿ ನಾವು ಗ್ಯಾರಂಟಿ ಯೋಜನೆ ಜಾರಿಗೆ ತಂದಿದ್ದೇವೆ. ವಚನ ವಿಶ್ವವಿದ್ಯಾಲಯ ಸ್ಥಾಪನೆ ಮಾಡುವಂತೆ ಬೇಡಿಕೆ ಇಟ್ಟಿದ್ದೀರಿ ಅದನ್ನು ಮುಂದಿನ ವರ್ಷದಿಂದ ಮಾಡೋಣ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು. ನಾನು ರಾಜಕೀಯದಲ್ಲಿ ಏನು ಮಾತು ಕೊಡುತ್ತೇನೋ ಆ ಕೆಲಸ ಮಾಡುತ್ತೇನೆ. ಮೆಟ್ರೋ ಯೋಜನೆ ನಾವು ಮತ್ತು ಕೇಂದ್ರ ಸರ್ಕಾರ ಸೇರಿ ಮಾಡಿರುವುದು. ಮೆಟ್ರೋದಲ್ಲಿ ರಾಜ್ಯದ ಪಾಲು ಹೆಚ್ಚಿದೆ ಶೇ.87 ರಷ್ಟು ನಮ್ಮ…

Read More

ಹಾಸನ : ಹಾಸನದಲ್ಲಿ ಸಮೀಕ್ಷೆಗೆ ಹೋಗುತ್ತಿದ್ದ ಶಿಕ್ಷಕಿಗೆ ಅಪಘಾತವಾಗಿದ್ದು, ಗಂಭೀರವಾದ ಗಾಯಗಳಾಗಿದೆ. ದ್ವಿಚಕ್ರ ವಾಹನದಲ್ಲಿ ತೆರಳುವಾಗ ನಾಯಿ ಅಡ್ಡ ಬಂದಿದ್ದರಿಂದ ಅಪಘಾತವಾಗಿದ್ದು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ವಡ್ಡರಹಳ್ಳಿಯಲ್ಲಿ ಈ ಅಪಘಾತ ಸಂಭವಿಸಿದೆ. ವಡ್ಡರಹಳ್ಳಿಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕಿ ರಾಧಾಗೆ ಗಂಭೀರವಾಗಿ ಗಾಯವಾಗಿದೆ. ಪ್ರಜ್ಞೆ ತಪ್ಪಿ ಬಿದ್ದಿದ್ದ ರಾಧಾ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಚನ್ನರಾಯಪಟ್ಟಣ ಆಸ್ಪತ್ರೆಯಲ್ಲಿ ಶಿಕ್ಷಕಿ ರಾಧಾ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಿಕ್ಷಕಿ ಮೇಲೆ ನಾಯಿ ದಾಳಿ ಇನ್ನು ಹಾಸನದಲ್ಲಿ ಮತ್ತೊಂದು ಘಟನೆ ಸಂಭವಿಸಿದ್ದು, ಜಾತಿ ಗಣತಿಗೆ ತೆರಳಿದ್ದ ಶಿಕ್ಷಕಿ ಮೇಲೆ ನಾಯಿಗಳು ಡೆಡ್ಲಿ ಅಟ್ಯಾಕ್ ನಡೆಸಿವೆ. ಹಾಸನದ ಬೇಲೂರು ಪಟ್ಟಣದಲ್ಲಿ ಈ ಒಂದು ಘಟನೆ ನಡೆದಿದೆ. ಬೀದಿ ನಾಯಿಗಳು ದಾಳಿ ಮಾಡಿದಾಗ, ಶಿಕ್ಷಕಿ ಬಚಾವ್ ಮಾಡಲು ಹೋಗಿದ್ದ ಅವರ ಪತಿ ಸೇರಿ 7 ಜನರ ಮೇಲು ಕೂಡ ನಾಯಿಗಳು ದಾಳಿ ಮಾಡಿದೆ. ಶಿಕ್ಷಕಿ ಸೇರಿದಂತೆ ಒಟ್ಟು 7 ಜನರ ಮೇಲೆ ಬೀದಿ ನಾಯಿಗಳು ದಾಳಿ ಮಾಡಿವೆ.…

Read More

ಹಾಸನ : ಹಾಸನದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಜಾತಿ ಗಣತಿಗೆ ತೆರಳಿದ್ದ ಶಿಕ್ಷಕ ಮೇಲೆ ನಾಯಿಗಳು ಡೆಡ್ಲಿ ಅಟ್ಯಾಕ್ ನಡೆಸಿವೆ. ಹಾಸನದ ಬೇಲೂರು ಪಟ್ಟಣದಲ್ಲಿ ಈ ಒಂದು ಘಟನೆ ನಡೆದಿದೆ. ಬೀದಿ ನಾಯಿಗಳು ದಾಳಿ ಮಾಡಿದಾಗ, ಶಿಕ್ಷಕಿ ಬಚಾವ್ ಮಾಡಲು ಹೋಗಿದ್ದವರ ಮೇಲು ಕೂಡ ನಾಯಿಗಳು ದಾಳಿ ಮಾಡಿದೆ. ಶಿಕ್ಷಕಿ ಸೇರಿದಂತೆ ಒಟ್ಟು 7 ಜನರ ಮೇಲೆ ಬೀದಿ ನಾಯಿಗಳು ದಾಳಿ ಮಾಡಿವೆ. ಶಿಕ್ಷಕಿ ಚಿಕ್ಕಮಗೆ ತೀವ್ರವಾದ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಸದ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಕೈ, ಕಾಲು ಸೇರಿದಂತೆ ದೇಹದ ಹಲವು ಭಾಗಗಳಿಗೆ ಶಿಕ್ಷಕಿ ಚಿಕ್ಕಮಗೆ ಗಂಭೀರವಾದ ಗಾಯಗಳಾಗಿವೆ. ಆಸ್ಪತ್ರೆಗೆ ಶಾಸಕ ಸುರೇಶ್ ಭೇಟಿ ನೀಡಿ ಗಾಯಾಳುಗಳ ಆರೋಗ್ಯವನ್ನು ವಿಚಾರಿಸಿದರು.

Read More

ಬೆಂಗಳೂರು : ಬೆಂಗಳೂರಿನ ಬೇಗೂರಿನಲ್ಲಿ ಸಿಲಿಂಡರ್ ಬ್ಲಾಸ್ಟ್ ಆಗಿದೆ. ಸಿಲಿಂಡರ್ ಬ್ಲಾಸ್ಟ್ ಆಗಿ ಬೆಂಕಿ ಹೊತ್ತಿಕೊಂಡಿದೆ. ಸ್ಕ್ರಾಪ್ ಗೋ Lದಾಮಿಗೆ ಬೆಂಕಿ ಹೊತ್ತಿಕೊಂಡಿದೆ. ಗೋದಾಮಿನಲ್ಲಿ ಇದ್ದಂತಹ ಪ್ಲಾಸ್ಟಿಕ್ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ದಟ್ಟವಾದ ಹೊಗೆಯಿಂದ ಇಡೀ ಏರಿಯಾವನ್ನು ಆವರಿಸಿದೆ. ಬೇಗೂರಿನ ಅಕ್ಷಯ ನಗರದಲ್ಲಿ ಆತಂಕದ ವಾತಾವರಣ ನಿರ್ಮಾಣ ಆಗಿದೆ ಅಗ್ನಿಶಾಮಕದಳ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ. ಬೆಳಿಗ್ಗೆ 11 ಗಂಟೆ ಸುಮಾರಿಗೆ ಈ ಒಂದು ಅವಘಡ ಸಂಭವಿಸಿದೆ. ಘಟನಾ ಸ್ಥಳಕ್ಕೆ ಬೇಗೂರು ಠಾಣೆ ಪೊಲೀಸರು ಭೇಟಿ ನೀಡಿದ್ದು, ಮೂರು ಅಗ್ನಿಶಾಮಕ ವಾಹನ ದೌಡಯಿಸಿವೆ. 20ಕ್ಕೂ ಹೆಚ್ಚು ಸಿಬ್ಬಂದಿಗಳು ಬೆಂಕಿ ನಂದಿಸುವಲಿ ನಿರತರಾಗಿದ್ದಾರೆ. ಮೊದಲಿಗೆ ಸಿಲಿಂಡರ್ ಬ್ಲಾಸ್ಟ್ ನಿಂದ ಈ ಒಂದು ಅಗ್ನಿ ಅವಗಡ ಸಂಭವಿಸಿದೆ. ಪ್ಲಾಸ್ಟಿಕ್ ಗೋದಾಮು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಸುಮಾರು 2 ಗಂಟೆಗಳ ಕಾಲ ಬೆಂಕಿ ನಂದಿಸುತ್ತಿದ್ದರು, ಬೆಂಕಿ ತಹ ಬದಿಗೆ ಬಂದಿಲ್ಲ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಆಗಿಲ್ಲ ಎನ್ನುವುದು ತಿಳಿದು ಬಂದಿದೆ. ಈ ಕುರಿತು ಮತ್ತಷ್ಟು ಮಾಹಿತಿಯನ್ನು…

Read More

ಕೊಪ್ಪಳ : ಡಿಕೆ ಸಿಎಂ ಆಗಬೇಕು ಅಂತ ಆಪ್ತರು ಹೇಳಿಕೆ ವಿಚಾರವಾಗಿ ನಾನು ಸಿಎಂ ಆಗಬೇಕು ಅಂತ ಕೆಲವರು ಹೇಳುತ್ತಾರೆ ನಾನೇನು ಕಮ್ಮಿ ಇದಿನ ಡಿಕೆ ಎಷ್ಟು ಸಲ ಗೆದ್ದಿದ್ದಾರೆ ನಾನು ಸಹ ಅಷ್ಟೇ ಸಲ ಗೆದ್ದಿದ್ದೇನೆ ನಾನು 1985 ರಿಂದ ಶಾಸಕನಾಗಿದ್ದೇನೆ ಅಭಿಮಾನಕ್ಕಾಗಿ ಕೆಲವರು ಆ ರೀತಿ ಹೇಳಿಕೆ ನೀಡುತ್ತಾರೆ ಎಂದು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಹಾಗು ಶಾಸಕ ಬಸವರಾಜ್ ರಾಯರೆಡ್ಡಿ ಹೇಳಿಕೆ ನೀಡಿದ್ದಾರೆ. ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆರ್ಥಿಕ ಶೈಕ್ಷಣಿಕ ಸಮೀಕ್ಷೆ ಪ್ರಕ್ಷಣೆಗಳ ಬಗ್ಗೆ ಡಿಕೆ ಶಿವಕುಮಾರ್ ಅಸಮಾಧಾನ ವಿಚಾರವಾಗಿ ಡಿಕೆ ಶಿವಕುಮಾರ್ ಹೇಳಿಕೆಯಲ್ಲಿ ತಪ್ಪಿಲ್ಲ ಆದರೆ ಅದು ಅನಿವಾರ್ಯ ಜಾಸ್ತಿ ಪ್ರಶ್ನೆ ಕೇಳಿದರೆ ಮತ್ತೊಂದು ಸರ್ವೇ ಮಾಡುವುದು ತಪ್ಪುತ್ತದೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ಕೊಕನೂರ ಕನಕಗಿರಿ ಕಾರಟಿಗಿಯಲ್ಲಿ ಶೇಕಡ ನೂರಕ್ಕೆ ನೂರರಷ್ಟು ಸರ್ವೆ ಆಗಿದೆ ಹಾಗಾಗಿ ಜಿಲ್ಲಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಇದು ಜಾತಿಗಣತಿಯಲ್ಲ ಸಾಮಾಜಿಕ ಆರ್ಥಿಕ ಶೈಕ್ಷಣಿಕ ಗಣತಿ ನನಗೆ ಯಾವುದೇ ಜಾತಿ ಧರ್ಮ ಇಲ್ಲ…

Read More

ಕೊಪ್ಪಳ : ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಪಟ್ಟಂತೆ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗಳು ನಡೆಯುತ್ತಿದ್ದು. ಸಿಎಂ ಸಿದ್ದರಾಮಯ್ಯಗೆ ವೋಟ್ ಹಾಕಿದ್ದು ಐದು ವರ್ಷಗಳ ಕಾಲ ಸಿಎಂ ಆಗಿರುತ್ತಾರೆ ಎಂದು ಮಧ್ಯ ಬಿಟ್ಟು ಹೋಗಲಿ ಅಂತ ಅಲ್ಲ ಎಂದು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಹಾಗು ಶಾಸಕ ಬಸವರಾಜ್ ರಾಯರೆಡ್ಡಿ ಹೇಳಿಕೆ ನೀಡಿದ್ದಾರೆ. ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ವಿಚಾರ ಸದ್ಯಕ್ಕೆ ಅಪಪ್ರಸ್ತುತ 5 ವರ್ಷ ಇರಲಿ ಅಂತ ಸಿದ್ದರಾಮಯ್ಯಗೆ ವೋಟ್ ಹಾಕಲಾಗಿದೆ. ಐದು ವರ್ಷ ಆಗಿರುತ್ತಾರೆ ಅಂತ ಅಂದುಕೊಂಡಿದ್ದೇನೆ ನವೆಂಬರ್ ಕ್ರಾಂತಿ ಇಲ್ಲ ನಮ್ಮದು ಏನಿದ್ದರೂ ಶಾಂತಿ ಬದಲಾವಣೆ ಮಾತನಾಡಬಾರದು ಅಂತ ಹೈಕಮಾಂಡ್ ಹೇಳಿದೆ ಯಾರು ಸಹ ಬದಲಾವಣೆ ಕುರಿತು ಮಾತನಾಡಬೇಡಿ ಅಂತ ಹೈ ಕಮಾಂಡ್ ಹೇಳಿದೆ ಸಿಎಂ ಆಯ್ಕೆ ಮಾಡುವುದು ಪಕ್ಷ ಮತ್ತು ಹೈಕಮಾಂಡ್ ಶಾಸಕರ ಅಭಿಪ್ರಾಯದಲ್ಲಿ ಸಿಎಂ ಹಾಕಿ ಆಗೋದು ಎಂದು ಶಾಸಕ ಬಸವರಾಜ್ ರಾಯರೆಡ್ಡಿ ಹೇಳಿಕೆ ನೀಡಿದ್ದಾರೆ.

Read More

ಬೆಂಗಳೂರು : ಬೆಂಗಳೂರು ಹೊರವಲಯದಲ್ಲಿ ಭೂಸ್ವಾಧೀನಕ್ಕೆ ರಾಜ್ಯ ಸರ್ಕಾರ ಇದೀಗ ಪ್ಲಾನ್ ಮಾಡಿಕೊಂಡಿದ್ದು ರೈತರ ಸಾವಿರಾರು ಎಕರೆ ಭೂಮಿ ಸ್ವಾಧೀನಕ್ಕೆ ರಾಜ್ಯ ಸರ್ಕಾರ ಪ್ಲಾನ್ ಮಾಡಿದೆ. ಕರ್ನಾಟಕ ಗೃಹ ಮಂಡಳಿಗೆ ರೈತರ ಕೃಷಿ ಭೂಮಿ ಸ್ವಾಧೀನಕ್ಕೆ ಸಿದ್ಧತೆ ಮಾಡಿಕೊಂಡಿದೆ. 2760 ಎಕರೆ ರೈತರ ಭೂಮಿ ಸ್ವಾಧೀನಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ರಾಜ್ಯ ಸರ್ಕಾರದ ನಡೆ ಖಂಡಿಸಿ ರೈತರು ತೀವ್ರ ಆಕ್ರೋಶ ಹೊರಹಾಕಿದ್ದಾರೆ. ದೊಡ್ಡ ಬೆಳವಂಗಲ ಹೋಬಳಿ ವ್ಯಾಪ್ತಿಯಲ್ಲಿ ಭೂಸ್ವಾಧೀನಕ್ಕೆ ಸರ್ಕಾರ ಪ್ಲಾನ್ ಮಾಡಿಕೊಂಡಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ದೊಡ್ಡಹೆಜ್ಜೆ, ವೆಂಕಟೇಶಪುರ, ಸೇರಿದಂತೆ ಒಟ್ಟು 2760 ಎಕರೆ ಭೂಸ್ವಾಧೀನಕ್ಕೆ ರೈತರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಕೃಷಿ ಭೂಮಿ ಸ್ವಾಧೀನ ಖಂಡಿಸಿ 5 ಗ್ರಾಮಗಳ ರೈತರು ಸಮಾವೇಶ ನಡೆಸುತ್ತಿದ್ದಾರೆ. ಚಿಕ್ಕ ಬೆಳವಂಗಲದಿಂದ ದೊಡ್ಡ ಬೆಳವಂಗದವರೆಗೆ ರೈತರು ಬೃಹತ್ ಪಾದಯಾತ್ರೆ ಕೈಗೊಂಡಿದ್ದಾರೆ. ಕರ್ನಾಟಕ ಗೃಹ ಮಂಡಳಿ ನೋಟಿಸ್ ಗಳನ್ನು ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ…

Read More