Author: kannadanewsnow05

ಮಂಡ್ಯ : ಬಾಬಾ ಸಾಹೇಬ್ ಅಂಬೇಡ್ಕರ್ ಅವರ ನಾಮಫಲಕವನ್ನು ಹರಿದು ಹಾಕಿ ದೌರ್ಜನ್ಯ ಎಸಗಿರುವ ಘಟನೆ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಪೋಲೀಸ್ ಠಾಣಾ ವ್ಯಾಪ್ತಿಯ ಕೆ.ಶೆಟ್ಟಿಹಳ್ಳಿ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ಜರುಗಿದ್ದು, ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಕೆ.ಶೆಟ್ಟಿಹಳ್ಳಿ ಗ್ರಾಮದಲ್ಲಿ 30 ಗುಂಟೆ ಗ್ರಾಮಠಾಣಾ ಜಾಗವಿದ್ದು, ಈ ಜಾಗದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣ ಮಾಡುವಂತೆ ಈಗಾಗಲೇ ಗ್ರಾಮ ಪಂಚಾಯಿತಿ, ತಾಲೂಕು ಆಡಳಿತ, ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೂ ಒಂದು ವರ್ಷದ ಹಿಂದೆಯೇ ಗ್ರಾಮದ ದಲಿತ ಮುಖಂಡರು ಸಾಕಷ್ಟು ಮನವಿ ಸಲ್ಲಿಸಿದ್ದಾರೆ. ಆದರೆ, ಗ್ರಾಮದ ಸವರ್ಣಿಯ ಮುಖಂಡರು ಗ್ರಾಮಠಾಣಾ ಜಾಗದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಸೋಮವಾರ ಬೆಳಿಗ್ಗೆ ದಲಿತ ಮುಖಂಡರು ಗ್ರಾಮಠಾಣಾ ಜಾಗದಲ್ಲಿ ಅಂಬೇಡ್ಕರ್ ಅವರ ನಾಮಫಲಕ ಅಳವಡಿಸಲು ಮುಂದಾಗಿದ್ದಾರೆ. ಆದರೆ, ಗ್ರಾಮದ ಕೆಲವು ಸವರ್ಣಿಯ ಮುಖಂಡರು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ನಾಮಫಲಕವನ್ನು ಹರಿದು ಹಾಕಿ ದೌರ್ಜನ್ಯ ಎಸಗಿದ್ದಾರೆ.…

Read More

ಬೆಳಗಾವಿ, ಡಿಸೆಂಬರ್ 14: ದಾವಣಗೆರೆ ಜಿಲ್ಲೆ ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿಯಾಗಿದ್ದಾರೆ ಅದಕ್ಕೆ ಶ್ಯಾಮನೂರು ಶಿವಶಂಕರಪ್ಪ ಅವರು ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಹಿರಿಯ ಶಾಸಕ ಶ್ಯಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ ವಿಧಾನಸಭೆಯಲ್ಲಿ ಇಂದು ಮಂಡಿಸಲಾದ ಸಂತಾಪ ಸೂಚನಾ ನಿರ್ಣಯವನ್ನು ಬೆಂಬಲಿ ಅವರು ಮಾತನಾಡಿದರು. ಶ್ಯಾಮನೂರು ಶಿವಶಂಕರಪ್ಪ ಅವರು ತಮ್ಮ 63 ನೇ ವಯಸ್ಸಿನಲ್ಲಿ ವಿಧಾನಸಭೆ ಪ್ರವೇಶಿಸಿ ಆರು ಬಾರಿ ಶಾಸಕರಾದವರು. ಒಮ್ಮೆ ಸಂಸತ್ ಸದಸ್ಯರಾಗಿದ್ದರು. ದೀರ್ಘ ಕಲಾ ರಾಜಕೀಯದಲ್ಲಿದ್ದರು ಎಂದರು. ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿದ್ದರು. 1969ರಲ್ಲಿ ದಾವಣಗೆರೆ ಪುರಸಭೆ ಸದಸ್ಯರಾಗಿ ನಂತರ ನಗರಸಭೆ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು ಎಂದರು. ದಾವಣಗೆರೆಯಲ್ಲಿ ಬಾಪೂಜಿ ವಿದ್ಯಾ ಕೇಂದ್ರದ ಮೂಲಕ ಇಂಜಿನಿಯರಿಂಗ್, ವೈದ್ಯಕೀಯ ಕಾಲೇಜುಗಳು ಸೇರಿದಂತೆ ಅನೇಕ ಸಂಸ್ಥೆಗಳನ್ನು ಕಟ್ಟಿ ಜಿಲ್ಲೆಯನ್ನು ವಿದ್ಯಾಖಾಶಿಯಾಗಿಸಿದರು. ಉದ್ಯಮಿಯಾಗಿ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ ಎಂದರು. ದಾವಣಗೆರೆಗೆ ಬ್ರಾಂಡ್ ಹೆಸರು ಕೊಟ್ಟರು ಜವಳಿ ಕ್ಷೇತ್ರದ ಅವನತಿ…

Read More

ಬೆಂಗಳೂರು : ಬೆಂಗಳೂರಲ್ಲಿ ಯುವತಿಯೋಬ್ಬಳು ತನ್ನ ಸ್ನೇಹಿತರೊಂದಿಗೆ ಪಾರ್ಟಿ ಮಾಡುತ್ತಿದ್ದಳು. ಈ ವೇಳೆ ಏಕಾಏಕಿ ಪೊಲೀಸರು ಹೋಟೆಲ್ ಗೆ ಎಂಟ್ರಿ ಆಗಿದ್ದಾರೆ. ಆಗ ಭಯದಿಂದ ಯುವತಿ ಒಬ್ಬಳು ಬಾಲ್ಕನಿಯಿಂದ ಕೆಳಗೆ ಹಾರಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೆಚ್‌ಎಎಲ್‌ನ ಎಇಸಿಎಸ್ ಲೇಔಟ್ ನ ಹೊಟೇಲ್‌ನಲ್ಲಿ ನಡೆದಿದೆ. ವೀಕೆಂಡ್‌ನಲ್ಲಿ ಸ್ನೇಹಿತರೊಂದಿಗೆ ಹೋಟೆಲ್‌ನಲ್ಲಿ ಪಾರ್ಟಿ ಮಾಡುತ್ತಿದ್ದ ವೇಳೆ ಪೊಲೀಸರು ಧಿಡೀರ್ ಎಂಟ್ರಿ ಕೊಟ್ಟ ಪರಿಣಾಮ ಭಯಗೊಂಡ ಯುವತಿ ಹೋಟೆಲ್ ಬಾಲ್ಕನಿಯಿಂದ ಕೆಳಗೆ ಹಾರಿದ್ದಾಳೆ. ಘಟನೆಯಲ್ಲಿ ಯುವತಿಯ ತಲೆ, ಮೈಕೈಗೆ ಗಂಭೀರ ಗಾಯಗಳಾಗಿವೆ. ಸದ್ಯ ಗಂಭೀರ ಗಾಯಗೊಂಡಿರುವ ಯುವತಿಯನ್ನು ಕುಂದಲಹಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾಳೆ. ಶನಿವಾರ ರಾತ್ರಿ ಯುವತಿ ಸೇರಿದಂತೆ ಎಂಟು ಜನ ಸ್ನೇಹಿತರು ಸೇರಿ ಪಾರ್ಟಿ ಆಯೋಜಿಸಿದ್ದರು. ಪಾರ್ಟಿಗಾಗಿ ಮೂರು ರೂಂಗಳನ್ನು ಬುಕ್ ಮಾಡಿದ್ದರು. ಬಳಿಕ ಯುವಕರು ಹಾಗೂ ಯುವತಿಯರು ಹಾಡುಗಳನ್ನ ಹಾಕಿಕೊಂಡು ಡ್ಯಾನ್ಸ್ ಮಾಡುತ್ತಿದ್ದರು. ಯುವಕರ ಪಾರ್ಟಿ, ಡ್ಯಾನ್ಸ್ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಏಕೆಂದರೆ…

Read More

ಬೆಳಗಾವಿ : ದೇಶದ ಹಿರಿಯ ರಾಜಕಾರಣಿ, ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ (95) ಭಾನುವಾರ ಸಂಜೆ ನಿಧನರಾದರು. ವಯೋಸಹಜ ಅನಾರೋಗ್ಯ ಹಿನ್ನೆಲೆಯಲ್ಲಿ ಕಳೆದ ಕೆಲ ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಸಂಜೆ ಕಲ್ಲೇಶ್ವರ ಮಿಲ್ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಹಿರಿಯ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆ ನಡೆಯಲಿದೆ.ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ. ಶಾಮನೂರು ಶಿವಶಂಕರಪ್ಪ ಅವರು ನಿಧನ ಹೊಂದಿದ ಹಿನ್ನೆಲೆಯಲ್ಲಿ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ. ಇಂದು ಶ್ಯಾಮನೂರು ಅವರ ಅಂತ್ಯಕ್ರಿಯೆಯಲ್ಲಿ ಎಲ್ಲಾ ಸಚಿವರು ಶಾಸಕರು ವಿರೋಧ ಪಕ್ಷದವರು ಭಾಗಿಯಾಗಲಿದ್ದಾರೆ.ಇಂದು ಕಲಾಪ ಆರಂಭವಾದ ವೇಳೆ ಸಿಎಂ ಸಿದ್ದರಾಮಯ್ಯ ವಿಪಕ್ಷ ನಾಯಕ ಆರ್ ಅಶೋಕ್ ಸಚಿವರಾದ ಕೆ ಎಚ್ ಮುನಿಯಪ್ಪ ಸೇರಿದಂತೆ ಹಲವರು ಸಂತಾಪ ಸೂಚಿಸಿದರು.

Read More

ಮಡಿಕೇರಿ : ಪ್ರವಾಸಿ ಬಸ್ಸೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ವಿರಾಜಪೇಟೆಯ ಮಾಕುಟ್ಟ ಬಳಿಯ ಮಗಡಿಪಾರೆ ಆಂಜನೇಯ ದೇವಾಲಯದ ಬಳಿ ನಡೆದಿದೆ. ಪ್ರವಾಸಿಗರನ್ನು ಮೈಸೂರಿನಲ್ಲಿ ಇಳಿಸಿ ವಾಪಸ್ ತೆರಳುವಾಗ ಈ ಅವಘಡ ಸಂಭವಿಸಿದೆ. ಬಸ್‍ನಲ್ಲಿ ಚಾಲಕ ಮತ್ತು ನಿರ್ವಾಹಕ ಇಬ್ಬರೇ ಇದ್ದರು. ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎನ್ನಲಾಗುತ್ತಿದೆ. ಅಕಸ್ಮಾತ್ ಪ್ರವಾಸಿಗರಿದ್ದಿದ್ದರೆ ಭಾರೀ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ಕೇರಳ ನೋಂದಣಿಯ ಖಾಸಗಿ ಬಸ್ ಎಂದು ತಿಳಿದುಬಂದಿದೆ.ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ತೆರಳಿ ಬೆಂಕಿ ನಂದಿಸಿದ್ದಾರೆ. ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ದಾವಣಗೆರೆ : ದೇಶದ ಹಿರಿಯ ರಾಜಕಾರಣಿ, ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ (95) ಭಾನುವಾರ ಸಂಜೆ ನಿಧನರಾದರು. ವಯೋಸಹಜ ಅನಾರೋಗ್ಯ ಹಿನ್ನೆಲೆಯಲ್ಲಿ ಕಳೆದ ಕೆಲ ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಸಂಜೆ ಕಲ್ಲೇಶ್ವರ ಮಿಲ್ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಹಿರಿಯ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆ ನಡೆಯಲಿದೆ.ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ.

Read More

ಬೆಂಗಳೂರು ಡಿ 15: ಪ್ರಧಾನ ಮಂತ್ರಿ ಬೆಳೆ ವಿಮೆ ಯೋಜನೆಯಡಿ ರೈತರು, ಕೇಂದ್ರ ಸ ರ್ಕಾರ ಮತ್ತು ರಾಜ್ಯ ಸರ್ಕಾರ ಪಾವತಿಸಿರುವ ಕಂತಿನ ಹಣ ಎಷ್ಟು? ಈವರೆಗೆ ರೈತರಿಗೆ ನೀಡಿರುವ ಪರಿಹಾರ ಎಷ್ಟು ಎಂಬ ಬಗ್ಗೆ ಕೇಂದ್ರ ಸರ್ಕಾರ ಶ್ವೇತಪತ್ರ ಹೊರಡಿಸಲಿ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸವಾಲು ಹಾಕಿದ್ದಾರೆ. ಸದನದಲ್ಲಿ ತಾವು ಫಸಲು ಬಿಮಾ ಯೋಜನೆ ಬಗ್ಗೆ ಸುಳ್ಳು ಮಾಹಿತಿ ನೀಡಿದ್ದಾಗಿ ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ ಮಾಡಿರುವ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ವಿಮೆ ಯೋಜನೆ ಬಗ್ಗೆ ಶ್ವೇತಪತ್ರ ಹೊರಡಿಸಿದರೆ ಖಾಸಗಿ ವಿಮಾ ಕಂಪನಿಗಳಿಗೆ ಕೇಂದ್ರ ಸರ್ಕಾರ ಹೇಗೆ ಲಾಭ ಮಾಡಿಕೊಡುತ್ತಿದೆ ಎಂಬುದು ಬಟಾ ಬಯಲಾಗಲಿದೆ ಎಂದರು. ದೇಶಾದ್ಯಂತ ಬೆಳೆ ವಿಮೆ ಯೋಜನೆ ಜಾರಿಯಾದ ದಿನದಿಂದ ಈವರೆಗೆ ವಿಮಾ ಕಂಪನಿಗಳು ಉದ್ದಾರ ಆಗಿದೆಯೇ ಹೊರತು ರೈತರಲ್ಲ. ಇದೊಂದು ಬಿಜೆಪಿ ಪ್ರಾಯೋಜಿತ ಪಕ್ಕಾ ಗೋಲ್ಮಾಲ್ ಯೋಜನೆ ಎಂದು ಈಶ್ವರ ಖಂಡ್ರೆ ಪುನರುಚ್ಚರಿಸಿದರು.…

Read More

ವಾಸ್ತುವಿನ ಪ್ರಕಾರ ನಿಮ್ಮ ಮನೆ ಮತ್ತು ಕಚೇರಿಯಲ್ಲಿ ಕನ್ನಡಿಯ ಸೂಕ್ತ ದಿಕ್ಕನ್ನು ನಿರ್ಧರಿಸುವ ಮೂಲಕ ವಾಸ್ತುವಿನ ಶಕ್ತಿಯನ್ನು ಅರ್ಥಮಾಡಿಕೊಳ್ಳಿ. ವಾಸ್ತು ತತ್ವಗಳ ಪ್ರಕಾರ ಕನ್ನಡಿಗಳನ್ನು ಸರಿಯಾಗಿ ಇರಿಸಿದಲ್ಲಿ ಧನಾತ್ಮಕತೆ ಮತ್ತು ಸಮೃದ್ಧಿಯನ್ನು ಸುಲಭವಾಗಿ ಹೆಚ್ಚಿಸಿಕೊಳ್ಳಬಹುದು. ಇದರಿಂದ ತಿಳಿಯಬಹುದಾದ ಪ್ರಮುಖ ಅಂಶಗಳೆಂದರೆ ಕನ್ನಡಿಗಳನ್ನು ವಾಸ್ತು ಶಾಸ್ತ್ರಕ್ಕೆ ಅನುಗುಣವಾಗಿ ಇರಿಸಿದಾಗ, ನಿಮ್ಮ ಮನೆ ಮತ್ತು ಕಚೇರಿಯ ಧನಾತ್ಮಕ ಶಕ್ತಿಯನ್ನು ವರ್ಧಿಸಬಹುದು ಮತ್ತು ಆಕರ್ಷಿಸಬಹುದು. ಉತ್ತಮ ಆರೋಗ್ಯಕ್ಕಾಗಿ ವಾಸ್ತುವಿನೊಂದಿಗೆ ಹೊಂದಿಸಲು ಹಾಗೂ ತೊಂದರೆ ಮತ್ತು ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಲು ಹಾಸಿಗೆಯ ಎದುರು ಕನ್ನಡಿಗಳನ್ನು ನೇರವಾಗಿ ಇಡುವುದನ್ನು ತಪ್ಪಿಸಿ. ಲಿವಿಂಗ್ ರೂಮ್‌ನ ಉತ್ತರ ಅಥವಾ ಪೂರ್ವದ ಗೋಡೆಗಳ ಮೇಲೆ ಕನ್ನಡಿಗಳನ್ನು ಇರಿಸುವುದರಿಂದ ಅನುಗ್ರಹದ ಸಂಕೇತಗಳನ್ನು ಪ್ರತಿಬಿಂಬಿಸುತ್ತವೆ. ಇದು ನಿಮಗೆ ಸಂಪತ್ತು ಮತ್ತು ಅದೃಷ್ಟವನ್ನು ತರಬಲ್ಲದು. ಕಚೇರಿಯ ಉತ್ತರ ಅಥವಾ ಪೂರ್ವ ಗೋಡೆಯ ಮೇಲೆ ಕನ್ನಡಿಯನ್ನು ಇರಿಸಿದಲ್ಲಿ, ಅದು ಮುಕ್ತ ಸ್ಥಳಗಳು ಅಥವಾ ಬಾಗಿಲುಗಳ ಮೂಲಕ ಬರುವ ಹೊಸ ಅವಕಾಶಗಳು ಮತ್ತು ಬೆಳವಣಿಗೆಯನ್ನು ಸಂಕೇತಿಸುತ್ತದೆ. ಹಾಸಿಗೆಗೆ ಎದುರಾಗಿರುವ ಕನ್ನಡಿಗಳು…

Read More

ಬೆಳಗಾವಿ : ದೇಶದ ಹಿರಿಯ ರಾಜಕಾರಣಿ, ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ (95) ಭಾನುವಾರ ಸಂಜೆ ನಿಧನರಾದರು. ವಯೋಸಹಜ ಅನಾರೋಗ್ಯ ಹಿನ್ನೆಲೆಯಲ್ಲಿ ಕಳೆದ ಕೆಲ ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಇವರ ನಿಧನಕ್ಕೆ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಶಾಮನೂರು ಶಿವಶಂಕರಪ್ಪ ಅಗಲಿಕೆ ತುಂಬಾ ನೀವು ತಂದಿದೆ.ಅವರನ್ನು ಯಾವಾಗಲು ಗೌರವಿಸುವೆ. ಸದನದಲ್ಲಿ ಸಂತಾಪ ಸೂಚನೆಗೆ ಅವಕಾಶ ನೀಡಲಾಗುತ್ತೆ. ಅಂತ್ಯಕ್ರಿಯೆಗೆ ಹೋಗುವ ಸದಸ್ಯರಿಗೆ ಅನುವು ಮಾಡಿಕೊಡುತ್ತೇವೆ. ನಾನು ಸಹ ಶಾಮನೂರು ಅಂತ್ಯಸಂಸ್ಕಾರದಲ್ಲಿ ಭಾಗವಹಿಸುತ್ತೇನೆ ಎಂದು ಯುಟಿ ಖಾದರ್ ತಿಳಿಸಿದರು.

Read More

ನವದೆಹಲಿ : ಕಳೆದ ಕೆಲವು ದಿನಗಳಿಂದ ಇಂಡಿಗೋ ವಿಮಾನ ಹರಾಟದಲ್ಲಿ ತೀವ್ರ ಸಮಸ್ಯೆ ಎದುರಾಗಿತ್ತು. ಇದೀಗ ನವದೆಹಲಿಯಲ್ಲಿ ಮತ್ತೆ ಇಂಡಿಗೋ ವಿಮಾನ ಹಾರಾಟದಲ್ಲಿ ಸಮಸ್ಯೆ ಆಗಿದ್ದು, ಹವಾಮಾನ ವೈಪರಿತ್ಯ ಹಿನ್ನೆಲೆಯಲ್ಲಿ ಇಂಡಿಗೋ ವಿಮಾನ ಹಾರಾಟಕ್ಕೆ ತಡವಾಗಿದೆ. ಹಾಗಾಗಿ ದೆಹಲಿಯಲ್ಲಿಯೇ ಕಾಂಗ್ರೆಸ್ ನಾಯಕರು ಲಾಕ್ ಆಗಿದ್ದಾರೆ ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ಇಂಡಿಗೋ ವಿಮಾನ ತಡವಾಗಿದೆ. ಶಾಮನೂರು ಶಿವಶಂಕರಪ್ಪ ಅಂತಿಮ ದರ್ಶನಕ್ಕೆ ನಾಯಕರು ಹೊರಟಿದ್ದರು. ಸುಮಾರು 20 ಕ್ಕೂ ಹೆಚ್ಚು ಶಾಸಕರು ಇಂಡಿಗೋ ವಿಮಾನದಲ್ಲಿ ಲಾಕ್ ಆಗಿದ್ದಾರೆ. ಇಂದು ಬೆಳಿಗ್ಗೆ 6:45 ಕ್ಕೆ ಇಂಡಿಗೋ ವಿಮಾನ ಟೇಕ್ ಆಫ್ ಆಗಬೇಕಾಗಿತ್ತು. ಆದರೆ ಇನ್ನೂ ಆಗಿಲ್ಲ. ವಿಮಾನದಲ್ಲಿ ಕೋನರೆಡ್ಡಿ, ಬಸನಗೌಡ ಬಾದರ್ಲಿ, ಆನಂದ್ ಗಡದೇವರಮಠ, ಹೆಚ್‌ಕೆ ಪಾಟೀಲ್, ಲಕ್ಷ್ಮೀ ಹೆಬಾಳ್ಕರ್, ಶರಣ ಪ್ರಕಾಶ್ ಪಾಟೀಲ್, ರಾಜು ಗೌಡ, ಸಲೀಂ ಅಹಮದ್, ತನ್ವೀರ್ ಸೇಠ್, ಸತೀಶ್ ಜಾರಕಿಹೊಳಿ, ಜಿ ಎಸ್ ಪಾಟೀಲ್, ಮಾಲೀಕಯ್ಯ ಗುತ್ತೇದಾರ್, ಈಶ್ವರ್ ಖಂಡ್ರೆ, ಜೆ ಟಿ ಪಾಟೀಲ್, ತಿಪ್ಪಣ್ಣ ಕಾಮಕನೂರ್, ನಾಗೇಂದ್ರ, ಎಂ…

Read More