Author: kannadanewsnow05

ಮೈಸೂರು : ಕನ್ನಡ ಚಿತ್ರರಂಗದಲ್ಲಿ ಡಾ.ರಾಜಕುಮಾರ್ ಕಾಲದಿಂದಲೂ ಅನೇಕ ಹಾಸ್ಯ ಕಲಾವಿದರು ಕನ್ನಡ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದಾರೆ. ಇದೀಗ ಕನ್ನಡ ಚಿತ್ರರಂಗದ ಮತ್ತೊಬ್ಬ ಹೊಸ ಹಾಸ್ಯ ನಟ ಹಾಗೂ ಹಲವು ಚಿತ್ರಗಳಲ್ಲಿ ನಾಯಕನಾಗಿ ಅಭಿನಯಿಸಿರುವ ಚಿಕ್ಕಣ್ಣ ಸೈಲೆಂಟಾಗಿ ಹಸೆಮಣೆ ಏರಲು ಸಜ್ಜಾದ್ದಾರೆ. ಹೌದು ಹಾಸ್ಯನಟ ಚಿಕ್ಕಣ್ಣ ಸದ್ದಿಲ್ಲದೇ ಹಸಮಣೆ ಏರಲು ಸಜ್ಜಾಗಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದ ಯುವತಿಯ ಜೊತೆ ಚಿಕ್ಕಣ್ಣ ಹಸಮಣೆ ಏರಲಿದ್ದಾರೆ. ಮಹದೇವಪುರ ಗ್ರಾಮದ ಪಾವನಾ ಎಂಬ ಯುವತಿಯ ಜೊತೆ ಚಿಕ್ಕಣ್ಣ ಮದುವೆ ನಿಶ್ಚಯವಾಗಿದೆ. ಈಗಾಗಲೇ ಹೂ ಮುಡಿಸುವ ಶಾಸ್ತ್ರವನ್ನು ಎರಡು ಕುಟುಂಬಗಳು ನೇರವೇರಿಸಿರಿವೆ. ನಿಶ್ಚಿತಾರ್ಥ ಮತ್ತು ಮದುವೆ ದಿನಾಂಕ ಮುಂದಿನ ವಾರ ನಿಗದಿಯಾಗಲಿದೆ.

Read More

ಮಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರನ್ನ ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಅಂತ ಪರಿಚಯಿಸಿ‌ ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ಗಿರೀಶ್‌ ಮಟ್ಟಣ್ಣನವರ್ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಶ್ರೀಕ್ಷೇತ್ರ ಧರ್ಮಸ್ಥಳದ ಭಕ್ತ ಪ್ರವೀಣ್ ಕೆ.ಆರ್ ಎಂಬುವವರು ನೀಡಿದ ದೂರಿನಡಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಮಟ್ಟಣ್ಣನವರ್, ತಿಮರೋಡಿ, ಮದನ್ ಬುಗುಡಿ ವಿರುದ್ಧ ಕೇಸ್‌ ದಾಖಲಾಗಿದೆ. ಈ ಹಿಂದೆ ಮಟ್ಟಣ್ಣನವರ್‌ ಮಾಧ್ಯಮಗಳ ಎದುರು ಮಾತನಾಡುವ ವೇಳೆ ಮದನ್ ಬುಗುಡಿಯನ್ನ ಮಾನವ ಹಕ್ಕು ಆಯೋಗದ ಅಧಿಕಾರಿ ಎಂದು ಪರಿಚಯಿಸಿದ್ದರು. ಇದು ಸುಳ್ಳು ಎಂದು ಆರೋಪಿಸಿ ಪ್ರವೀಣ್‌ ದೂರು ನೀಡಿದ್ದರು. ದೂರಿನ ಆಧಾರದ ಮೇರೆಗೆ 204, 319(2), 353(2) ಸೆಕ್ಷನ್ ಗಳಡಿ ಪ್ರಕರಣ ದಾಖಲಾಗಿದೆ.

Read More

ರಾಯಚೂರು : ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಪಟಾಕಿ ಸಿಡಿದು ಬಾಲಕನೋರ್ವ ಸಾವನ್ನಪ್ಪಿದ್ದ ಘಟನೆ ನಡೆದಿತ್ತು. ಈ ಘಟನೆ ಮಾಸುವ ಮುನ್ನವೇ ಇದೀಗ ರಾಯಚೂರಲ್ಲಿ ಗಣೇಶ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶಿಸಿ ಯುವಕನೋರ್ವ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಮೃತ ಯುವಕನನ್ನು ರಾಯಚೂರು ತಾಲೂಕಿನ ಗಟ್ಟುಬಿಚ್ಚಾಲಿ ಗ್ರಾಮದ ನರಸಿಂಹ (22) ಎಂದು ತಿಳಿದುಬಂದಿದೆ. ಹನುಮಾಪುರ ಬಳಿ ರಾಜೊಳ್ಳಿಬಂಡಾ ಕಾಲುವೆಯಲ್ಲಿ ಗಣೇಶ ವಿಸರ್ಜನೆಗೆ ಹೊರಟಿದ್ದ ವೇಳೆ ಬೊಲೆರೋ ಪಿಕಪ್ ಮೇಲೆ ಗಣೇಶನನ್ನ ಹಿಡಿದು ಕುಳಿತಿದ್ದ ಯುವಕನಿಗೆ ವಿದ್ಯುತ್ ಸ್ಪರ್ಶಿಸಿದೆ. ಬೊಲೆರೋ ಪಿಕಪ್‌ನಲ್ಲಿದ್ದ ಇನ್ನುಳಿದ ಯುವಕರು ವಿದ್ಯುತ್ ಸ್ಪರ್ಶಿಸಿದ ಕೂಡಲೇ ಕೆಳಗೆ ಬಿದ್ದ ಪರಿಣಾಮ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಳೆಯ ನಡುವೆಯೇ ಅದ್ದೂರಿಯಾಗಿ ಗಣೇಶನ ಮೆರವಣಿಗೆ ನಡೆಯುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಘಟನೆ ಸಂಬಂಧ ಯರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮೈಸೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡುತ್ತಿರುವುದಾಗಿ ಬಿಜೆಪಿ ಧರ್ಮಸ್ಥಳ ಚಲೋ ಪಾದಯಾತ್ರೆ ಹಮ್ಮಿಕೊಂಡಿದ್ದು ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು ಅವರು ಎಲ್ಲದರಲ್ಲೂ ರಾಜಕೀಯ ಮಾಡುತ್ತಾರೆ ಎಂದು ಬಿಜೆಪಿ ಧರ್ಮಸ್ಥಳ ಚಲೋಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಧರ್ಮಸ್ಥಳದ ಕುರಿತು ಅಪಪ್ರಚಾರ ಮಾಡುತ್ತಿರುವ ಹಿನ್ನೆಲೆ ಬಿಜೆಪಿ ಧರ್ಮಸ್ಥಳ ಚಲೋ ಪಾದಯಾತ್ರೆ ಹಮ್ಮಿಕೊಂಡಿದೆ. ಅವರು ಯಾತ್ರೆ ಹೋದರೆ ಹೋಗಲಿ ಪಾಪ. ಧರ್ಮಸ್ಥಳದ ಹೆಗ್ಗಡೆಯವರೇ ಸ್ವಾಗತ ಮಾಡಿದ್ದಾರೆ. ಸತ್ಯ ಹೊರಬೇರಬೇಕು ಅಂತ ಎಸ್ಐಟಿ ಮಾಡಿದ್ದೇವೆ ಇಲ್ಲದಿದ್ದರೆ ಧರ್ಮಸ್ಥಳದ ಮೇಲೆ ತೂಗುಗತ್ತಿ ಇರುತ್ತದೆ ಅನುಮಾನ ಹೋಗಲಾಡಿಸಲು ಎಸ್ಐಟಿ ಮಾಡಲಾಗಿದೆ ಎಂದು ತಿಳಿಸಿದರು.

Read More

ಕೊಪ್ಪಳ : ಖ್ಯಾತ ಸಾಹಿತಿ ಬಾನು ಮುಷ್ತಾಕ್ ಅವರು ಈ ಬಾರಿ ದಸರಾ ಉದ್ಘಾಟಿಸಲಿದ್ದಾರೆ. ಈ ವಿಚಾರವಾಗಿ ಈಗಾಗಲೇ ವಿಪಕ್ಷಗಳು ಆಡಳಿತ ಪಕ್ಷದ ವಿರುದ್ಧ ಮುಗಿಬಿದ್ದಿದ್ದು, ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿದ್ದು ಬಿಜೆಪಿ ನಾಯಕರನ್ನು ಕೆರಳಿಸಿದೆ. ಇದೀಗ ಶಾಸಕ ಜನಾರ್ಧನ ರೆಡ್ಡಿ ಬಾನು ಅವರು ದಸರಾ ಉದ್ಘಾಟನೆಗೆ ಹೂ ಮುಡಿದುಕೊಂಡು, ಅರಿಶಿನ ಕುಂಕುಮ ಇಟ್ಕೊಂಡು ಬಂದು ಉದ್ಘಾಟಿಸಲಿ ಎಂದು ಹೇಳಿಕೆ ನೀಡಿದ್ದಾರೆ. ಮುಷ್ತಾಕ್ ಹಿಂದೂ ಸಂಪ್ರದಾಯವನ್ನು ಒಪ್ಪಿ ದಸರಾ ಉದ್ಘಾಟನೆ ಮಾಡಲಿ ತಲೆಗೆ ಹೂ ಮುಡಿದುಕೊಂಡು, ಅರಿಶಿನ ಕುಂಕುಮ ಇಟ್ಟುಕೊಂಡು ಬರಬೇಕು. ಆ ರೀತಿ ಬಂದು ದಸರಾ ಉದ್ಘಾಟಿಸಿದರೆ ನಮಗೆ ಯಾವುದೇ ರೀತಿಯ ಅಭ್ಯಂತರ ಇಲ್ಲ ಎಂದು ಕೊಪ್ಪಳದಲ್ಲಿ ಶಾಸಕ ಜನಾರ್ಧನ ರೆಡ್ಡಿ ಹೇಳಿಕೆ ನೀಡಿದರು ನಿಸಾರ್ ಅಹ್ಮದ್ ಅವರಿಗೆ ನಾವು ಯಾವುದೇ ರೀತಿ ವಿರೋಧ ಮಾಡಿಲ್ಲ ಭಾನುಮಷ್ಟ ಕೀಳು ಮಟ್ಟದಲ್ಲಿ ಮಾತನಾಡಿದ್ದಾರೆ ಭುವನೇಶ್ವರಿ ಹಾಗೂ ಕನ್ನಡ ಧ್ವಜದ ಬಗ್ಗೆ ಕೀಳಾಗಿ ಮಾತನಾಡಿದ್ದಾರೆ ಹಾಗಾಗಿ ನಾವು ಅವರಿಗೆ ಈ…

Read More

ಮೈಸೂರು : ಖ್ಯಾತ ಸಾಹಿತಿ ಭಾನು ಮುಷ್ತಾಕ್ ಅವರನ್ನು ಈ ಬಾರಿ ದಸರಾ ಉದ್ಘಾಟಕರಾಗಿ ಸರ್ಕಾರ ಆಹ್ವಾನ ನೀಡಿದೆ. ಈ ವಿಚಾರವಾಗಿ ವಿಪಕ್ಷಗಳು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಅಲ್ಲದೆ ಡಿಸಿಎಂ ಡಿಕೆ ಶಿವಕುಮಾರ್ ಸಹ ಚಾಮುಂಡಿ ಬೆಟ್ಟ ಏನು ಹಿಂದೂಗಳ ಆಸ್ತಿಯಲ್ಲ ಎಂದು ಮತ್ತೊಂದು ವಿವಾದದ ಹೇಳಿಕೆ ನೀಡಿದ್ದು, ವಿಪಕ್ಷಗಳ ಆಕ್ರೋಶ ಮತ್ತಷ್ಟು ಹೆಚ್ಚಾಗಿದೆ. ಇದೀಗ ಸಿಎಂ ಸಿದ್ದರಾಮಯ್ಯ ಹೈದರಾಲಿ ಟಿಪ್ಪು ಸುಲ್ತಾನ್ ಅವರು ದಸರಾ ಆಚರಣೆ ಮಾಡಿರಲಿಲ್ವಾ? ಇದು ಜಾತ್ಯತೀತ ಹಬ್ಬವಾಗಿದೆ ಎಂದು ಸ್ಪಷ್ಟನೆ ನೀಡಿದರು. ಮೈಸೂರಲ್ಲಿ ಮಾತನಾಡಿದ ಅವರು, ದಸರಾ ಸಾಂಸ್ಕೃತಿಕವಾಗಿ ಮಾಡುವ ನಾಡ ಹಬ್ಬ. ಇಂತಹವರೇ ಉದ್ಘಾಟನೆ ಮಾಡಬೇಕು ಅಂತ ಏನು ಇಲ್ಲ ಇಂಥ ಧರ್ಮದವರೇ ಉದ್ಘಾಟನೆ ಮಾಡಬೇಕು ಅಂತ ಏನಿಲ್ಲ. ಹೈದರಾಲಿ ಟಿಪ್ಪು ದಸರಾ ಆಚರಣೆ ಮಾಡಿರಲಿಲ್ವಾ? ಮಿರ್ಜಾ ಇಸ್ಮಾಯಿಲ್ ದಿವಾನರಾಗಿ ಇರ್ಲಿಲ್ವಾ? ಇದು ಧರ್ಮಾತೀತವಾದ ಜಾತ್ಯಾತೀತವಾದ ಹಬ್ಬವಾಗಿದೆ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು. ದಸರಾ ನಾಡಹಬ್ಬ…

Read More

ಮಂಡ್ಯ : ಗಣಪತಿ ವಿಸರ್ಜನೆ ಹಾಗೂ ಈದ್ ಮಿಲಾದ್ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮಂಡ್ಯ ನಗರದಲ್ಲೂ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಮಂಡ್ಯದಲ್ಲಿ ಪೊಲೀಸರಿಂದ ರೂಟ್ ಮಾರ್ಚ್ ಸಹ ನಡೆಸಲಾಯಿತು.ನಗರದ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಪಥ ಸಂಚಲನ ನಡೆಸಿದರು.ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ನೇತೃತ್ವದಲ್ಲಿ ರೂಟ್ ಮಾರ್ಚ್ ನಡೆಸಲಾಯಿತು. ಕಳೆದ ಸಾರಿ ಗಣಪತಿ ವಿಸರ್ಜನೆ ವೇಳೆ ನಾಗಮಂಗಲದಲ್ಲಿ ಕೋಮು ಗಲಭೆ ಸಂಭವಿಸಿತ್ತು. ಈ ವೇಳೆ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟ ಹಿಂಸಾಚಾರ ನಡೆದಿತ್ತು. ಈ ಕಾರಣದಿಂದ ಈ ಬಾರಿ ಆತರಹ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರವಹಿಸಲಾಗಿದೆ. ಮಂಡ್ಯದ ಸಂಜಯ್ ವೃತ್ತ, ಹೊಳಲು ಸರ್ಕಲ್, ಗುತ್ತಲು, ನೂರಡಿ ರಸ್ತೆ ಸೇರಿ ವಿವಿಧ ಕಡೆ ಪಥ ಸಂಚಲನ. ಮಂಡ್ಯದಲ್ಲಿ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಹೇಳಿಕೆ ನೀಡಿದ್ದು, ಗಣೇಶ ಹಾಗೂ ಈದ್ ಮಿಲಾದ್ ಹಬ್ಬ ಹಿನ್ನಲೆ ಪೊಲೀಸ್ ಇಲಾಖೆ ಸಿದ್ದತೆ ಮಾಡಿಕೊಂಡಿದೆ. ಕಳೆದ ವರ್ಷ ನಾಗಮಂಗಲ ಎರಡೂ ಕೋಮು ನಡುವೆ ಗಲಭೆ ಆಗಿತ್ತು.…

Read More

ಶಿವಮೊಗ್ಗ : ಕಳೆದ ಎರಡು ದಿನಗಳ ಹಿಂದೆ ಅಷ್ಟೆ ಯಾದಗಿರಿ ಜಿಲ್ಲೆಯಲ್ಲಿ 9ನೇ ತರಗತಿ ಬಾಲಕಿ ಮಗುವಿನ ಜನ್ಮ ನೀಡಿದ ಪ್ರಕರಣದ ಬೆಳಕಿಗೆ ಬಂದಿತ್ತು. ಈ ಘಟನೆ ಮಾಸುವ ಮುನ್ನವೇ ಶಿವಮೊಗ್ಗದಲ್ಲಿಯು ಇಂತಹುದೆ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ ಎರಡು ದಿನದ ಹಿಂದೆ 9ನೇ ತರಗತಿಯ ವಿದ್ಯಾರ್ಥಿನಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಹೌದು 15 ವರ್ಷದ ಬಾಲಕಿಯೊಬ್ಬಳು ಈಚೆಗೆ ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು. ಕಳೆದ ಎರಡು ದಿನದ ಹಿಂದೆ ಮನೆಯಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. 7 ತಿಂಗಳ ಗಂಡು ಶಿಶು 1.8 ಕೆ.ಜಿ ತೂಕವಿದೆ. ಕೂಡಲೆ ಮಗು ಮತ್ತು ಬಾಲಕಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Read More

ದಾವಣಗೆರೆ : ಕೋಮು ಭಾವನೆಗೆ ಧಕ್ಕೆ ತರುವ ಫ್ಲೆಕ್ಸ್ ಅಡವಳಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕರ್ತವ್ಯ ಲೋಪದ ಆರೋಪದ ಅಡಿ ಪಿಎಸ್ಐ ಹಾಗೂ ಕಾನ್ಸ್ಟೇಬಲ್ ಗಳನ್ನು ಇದೀಗ ಅಮಾನತುಗೊಳಿಸಲಾಗಿದೆ. ದಾವಣಗೆರೆಯ ಆರ್‌ಎಂಸಿ ಯಾರ್ಡ್ PSI ಸಚಿನ್ ಬಿರಾದಾರ್ ಪೊಲೀಸ್ ಕಾನ್ಸ್ಟೇಬಲ್ ಆದ ಷಣ್ಮುಗ ಹಾಗು ವತ್ಸಲ ಅಮಾನತುಗೊಳಗಾದ ಸಿಬ್ಬಂದಿಗಳಾಗಿದ್ದಾರೆ. ಮೂವರನ್ನು ಅಮಾನತುಗೊಳಿಸಿ ಎಸ್ ಪಿ ಉಮಾ ಪ್ರಶಾಂತ ಆದೇಶ ಹೊರಡಿಸಿದ್ದಾರೆ ದಾವಣಗೆರೆಯ ಮಟ್ಟಿಕಲ್ಲ ಪ್ರದೇಶದಲ್ಲಿ ಆಕ್ಷೇಪಾರ್ಹ ಫ್ಲೆಕ್ಸ್ ಅಳವಡಿಸಲಾಗಿತ್ತು ಶಿವಾಜಿ ಮತ್ತು ಅಫ್ಜಲ್ ಖಾನ್ ಸನ್ನಿವೇಶದ ಅಳವಡಿಸಲಾಗಿತ್ತು. ಸಾವರ್ಕರ್ ಯುವಕರ ಸಂಘ ಈ ಒಂದು ಆಕ್ಷೇಪಾರ್ಹ ಫ್ಲೆಕ್ಸ್ ಅಳವಡಿಸಿತ್ತು. ಕೋಮು ಭಾವನೆಗೆ ಧಕ್ಕೆ ತರುವ ರೀತಿಯ ಫ್ಲೆಕ್ಸ್ ಅಳವಡಿಸಿದ್ದರು. ಆಕ್ಷೇಪರಹ ಫ್ಲೆಕ್ಸ್ ಅಳವಡಿಕೆಗೆ ಬಗ್ಗೆ ಮಾಹಿತಿ ನೀಡದ ಆರೋಪದ ಹಿನ್ನೆಲೆಯಲ್ಲಿ ಮೇಲಾಧಿಕಾರಿಗಳ ಗಮನಕ್ಕೆ ತರದೆ ಕರ್ತವ್ಯ ಲೋಪ ಎಸಗಿದ ಹಿನ್ನೆಲೆ ಪಿಎಸ್ಐ ಹಾಗೂ ಇಬ್ಬರು ಕಾಂಸ್ಟೇಬಲ್ ಅಮಾನತುಗೊಳಿಸಿ ಎಸ್ ಪಿ ಉ ಮಹಾಪ್ರಶಾಂತ್ ಆದೇಶ ಹೊರಡಿಸಿದ್ದಾರೆ.

Read More

ಕಲಬುರ್ಗಿ : ಜಮೀನು ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ವೃದ್ಧರೊಬ್ಬರನ್ನು ತಲ್ವಾರ್ ಇಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕಲಬುರ್ಗಿ ತಾಲೂಕಿನ ಸೀತನೂರು ಗ್ರಾಮದ ಸೇತುವೆ ಬಳಿ ನಡೆದಿದೆ. ಇಂದು ಬೆಳಿಗ್ಗೆ ಭೀಕರವಾಗಿ ಕೊಲೆ ಮಾಡಲಾಗಿದೆ. ಅಪರಿಚಿತ ದುಷ್ಕರ್ಮಿಗಳಿಂದ ಶಿವರಾಯ ಮಾಲಿಪಾಟೀಲ್ (65) ಕೊಲೆಯಾಗಿದೆ. ಬೆಳಿಗ್ಗೆ ಜಮೀನು ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದಾಗ ಈ ಒಂದು ಕೃತ್ಯ ನಡೆದಿದೆ ಹಳೆಯ ದ್ವೇಷ ಹಿನ್ನೆಲೆಯಲ್ಲಿ ಶಿವರಾಯ ಮಾಲಿಪಾಟೀಲ್ ಅನ್ನು ಕೊಲೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಡಿಸಿಪಿ ಕನ್ನಿಕಾ ಸಿಕ್ರಿವಾಲ್ ಭೇಟಿ ನೀಡಿದ್ದು ಫರತಾಬಾದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More