Author: kannadanewsnow05

ಮೈಸೂರು : ಖ್ಯಾತ ಸಾಹಿತಿ ಭಾನು ಮುಷ್ತಾಕ್ ಅವರನ್ನು ಈ ಬಾರಿ ದಸರಾ ಉದ್ಘಾಟಕರಾಗಿ ಸರ್ಕಾರ ಆಹ್ವಾನ ನೀಡಿದೆ. ಈ ವಿಚಾರವಾಗಿ ವಿಪಕ್ಷಗಳು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಅಲ್ಲದೆ ಡಿಸಿಎಂ ಡಿಕೆ ಶಿವಕುಮಾರ್ ಸಹ ಚಾಮುಂಡಿ ಬೆಟ್ಟ ಏನು ಹಿಂದೂಗಳ ಆಸ್ತಿಯಲ್ಲ ಎಂದು ಮತ್ತೊಂದು ವಿವಾದದ ಹೇಳಿಕೆ ನೀಡಿದ್ದು, ವಿಪಕ್ಷಗಳ ಆಕ್ರೋಶ ಮತ್ತಷ್ಟು ಹೆಚ್ಚಾಗಿದೆ. ಇದೀಗ ಸಿಎಂ ಸಿದ್ದರಾಮಯ್ಯ ಹೈದರಾಲಿ ಟಿಪ್ಪು ಸುಲ್ತಾನ್ ಅವರು ದಸರಾ ಆಚರಣೆ ಮಾಡಿರಲಿಲ್ವಾ? ಇದು ಜಾತ್ಯತೀತ ಹಬ್ಬವಾಗಿದೆ ಎಂದು ಸ್ಪಷ್ಟನೆ ನೀಡಿದರು. ಮೈಸೂರಲ್ಲಿ ಮಾತನಾಡಿದ ಅವರು, ದಸರಾ ಸಾಂಸ್ಕೃತಿಕವಾಗಿ ಮಾಡುವ ನಾಡ ಹಬ್ಬ. ಇಂತಹವರೇ ಉದ್ಘಾಟನೆ ಮಾಡಬೇಕು ಅಂತ ಏನು ಇಲ್ಲ ಇಂಥ ಧರ್ಮದವರೇ ಉದ್ಘಾಟನೆ ಮಾಡಬೇಕು ಅಂತ ಏನಿಲ್ಲ. ಹೈದರಾಲಿ ಟಿಪ್ಪು ದಸರಾ ಆಚರಣೆ ಮಾಡಿರಲಿಲ್ವಾ? ಮಿರ್ಜಾ ಇಸ್ಮಾಯಿಲ್ ದಿವಾನರಾಗಿ ಇರ್ಲಿಲ್ವಾ? ಇದು ಧರ್ಮಾತೀತವಾದ ಜಾತ್ಯಾತೀತವಾದ ಹಬ್ಬವಾಗಿದೆ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು. ದಸರಾ ನಾಡಹಬ್ಬ…

Read More

ಮಂಡ್ಯ : ಗಣಪತಿ ವಿಸರ್ಜನೆ ಹಾಗೂ ಈದ್ ಮಿಲಾದ್ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮಂಡ್ಯ ನಗರದಲ್ಲೂ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಮಂಡ್ಯದಲ್ಲಿ ಪೊಲೀಸರಿಂದ ರೂಟ್ ಮಾರ್ಚ್ ಸಹ ನಡೆಸಲಾಯಿತು.ನಗರದ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಪಥ ಸಂಚಲನ ನಡೆಸಿದರು.ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ನೇತೃತ್ವದಲ್ಲಿ ರೂಟ್ ಮಾರ್ಚ್ ನಡೆಸಲಾಯಿತು. ಕಳೆದ ಸಾರಿ ಗಣಪತಿ ವಿಸರ್ಜನೆ ವೇಳೆ ನಾಗಮಂಗಲದಲ್ಲಿ ಕೋಮು ಗಲಭೆ ಸಂಭವಿಸಿತ್ತು. ಈ ವೇಳೆ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟ ಹಿಂಸಾಚಾರ ನಡೆದಿತ್ತು. ಈ ಕಾರಣದಿಂದ ಈ ಬಾರಿ ಆತರಹ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರವಹಿಸಲಾಗಿದೆ. ಮಂಡ್ಯದ ಸಂಜಯ್ ವೃತ್ತ, ಹೊಳಲು ಸರ್ಕಲ್, ಗುತ್ತಲು, ನೂರಡಿ ರಸ್ತೆ ಸೇರಿ ವಿವಿಧ ಕಡೆ ಪಥ ಸಂಚಲನ. ಮಂಡ್ಯದಲ್ಲಿ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಹೇಳಿಕೆ ನೀಡಿದ್ದು, ಗಣೇಶ ಹಾಗೂ ಈದ್ ಮಿಲಾದ್ ಹಬ್ಬ ಹಿನ್ನಲೆ ಪೊಲೀಸ್ ಇಲಾಖೆ ಸಿದ್ದತೆ ಮಾಡಿಕೊಂಡಿದೆ. ಕಳೆದ ವರ್ಷ ನಾಗಮಂಗಲ ಎರಡೂ ಕೋಮು ನಡುವೆ ಗಲಭೆ ಆಗಿತ್ತು.…

Read More

ಶಿವಮೊಗ್ಗ : ಕಳೆದ ಎರಡು ದಿನಗಳ ಹಿಂದೆ ಅಷ್ಟೆ ಯಾದಗಿರಿ ಜಿಲ್ಲೆಯಲ್ಲಿ 9ನೇ ತರಗತಿ ಬಾಲಕಿ ಮಗುವಿನ ಜನ್ಮ ನೀಡಿದ ಪ್ರಕರಣದ ಬೆಳಕಿಗೆ ಬಂದಿತ್ತು. ಈ ಘಟನೆ ಮಾಸುವ ಮುನ್ನವೇ ಶಿವಮೊಗ್ಗದಲ್ಲಿಯು ಇಂತಹುದೆ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ ಎರಡು ದಿನದ ಹಿಂದೆ 9ನೇ ತರಗತಿಯ ವಿದ್ಯಾರ್ಥಿನಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಹೌದು 15 ವರ್ಷದ ಬಾಲಕಿಯೊಬ್ಬಳು ಈಚೆಗೆ ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು. ಕಳೆದ ಎರಡು ದಿನದ ಹಿಂದೆ ಮನೆಯಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. 7 ತಿಂಗಳ ಗಂಡು ಶಿಶು 1.8 ಕೆ.ಜಿ ತೂಕವಿದೆ. ಕೂಡಲೆ ಮಗು ಮತ್ತು ಬಾಲಕಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Read More

ದಾವಣಗೆರೆ : ಕೋಮು ಭಾವನೆಗೆ ಧಕ್ಕೆ ತರುವ ಫ್ಲೆಕ್ಸ್ ಅಡವಳಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕರ್ತವ್ಯ ಲೋಪದ ಆರೋಪದ ಅಡಿ ಪಿಎಸ್ಐ ಹಾಗೂ ಕಾನ್ಸ್ಟೇಬಲ್ ಗಳನ್ನು ಇದೀಗ ಅಮಾನತುಗೊಳಿಸಲಾಗಿದೆ. ದಾವಣಗೆರೆಯ ಆರ್‌ಎಂಸಿ ಯಾರ್ಡ್ PSI ಸಚಿನ್ ಬಿರಾದಾರ್ ಪೊಲೀಸ್ ಕಾನ್ಸ್ಟೇಬಲ್ ಆದ ಷಣ್ಮುಗ ಹಾಗು ವತ್ಸಲ ಅಮಾನತುಗೊಳಗಾದ ಸಿಬ್ಬಂದಿಗಳಾಗಿದ್ದಾರೆ. ಮೂವರನ್ನು ಅಮಾನತುಗೊಳಿಸಿ ಎಸ್ ಪಿ ಉಮಾ ಪ್ರಶಾಂತ ಆದೇಶ ಹೊರಡಿಸಿದ್ದಾರೆ ದಾವಣಗೆರೆಯ ಮಟ್ಟಿಕಲ್ಲ ಪ್ರದೇಶದಲ್ಲಿ ಆಕ್ಷೇಪಾರ್ಹ ಫ್ಲೆಕ್ಸ್ ಅಳವಡಿಸಲಾಗಿತ್ತು ಶಿವಾಜಿ ಮತ್ತು ಅಫ್ಜಲ್ ಖಾನ್ ಸನ್ನಿವೇಶದ ಅಳವಡಿಸಲಾಗಿತ್ತು. ಸಾವರ್ಕರ್ ಯುವಕರ ಸಂಘ ಈ ಒಂದು ಆಕ್ಷೇಪಾರ್ಹ ಫ್ಲೆಕ್ಸ್ ಅಳವಡಿಸಿತ್ತು. ಕೋಮು ಭಾವನೆಗೆ ಧಕ್ಕೆ ತರುವ ರೀತಿಯ ಫ್ಲೆಕ್ಸ್ ಅಳವಡಿಸಿದ್ದರು. ಆಕ್ಷೇಪರಹ ಫ್ಲೆಕ್ಸ್ ಅಳವಡಿಕೆಗೆ ಬಗ್ಗೆ ಮಾಹಿತಿ ನೀಡದ ಆರೋಪದ ಹಿನ್ನೆಲೆಯಲ್ಲಿ ಮೇಲಾಧಿಕಾರಿಗಳ ಗಮನಕ್ಕೆ ತರದೆ ಕರ್ತವ್ಯ ಲೋಪ ಎಸಗಿದ ಹಿನ್ನೆಲೆ ಪಿಎಸ್ಐ ಹಾಗೂ ಇಬ್ಬರು ಕಾಂಸ್ಟೇಬಲ್ ಅಮಾನತುಗೊಳಿಸಿ ಎಸ್ ಪಿ ಉ ಮಹಾಪ್ರಶಾಂತ್ ಆದೇಶ ಹೊರಡಿಸಿದ್ದಾರೆ.

Read More

ಕಲಬುರ್ಗಿ : ಜಮೀನು ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ವೃದ್ಧರೊಬ್ಬರನ್ನು ತಲ್ವಾರ್ ಇಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕಲಬುರ್ಗಿ ತಾಲೂಕಿನ ಸೀತನೂರು ಗ್ರಾಮದ ಸೇತುವೆ ಬಳಿ ನಡೆದಿದೆ. ಇಂದು ಬೆಳಿಗ್ಗೆ ಭೀಕರವಾಗಿ ಕೊಲೆ ಮಾಡಲಾಗಿದೆ. ಅಪರಿಚಿತ ದುಷ್ಕರ್ಮಿಗಳಿಂದ ಶಿವರಾಯ ಮಾಲಿಪಾಟೀಲ್ (65) ಕೊಲೆಯಾಗಿದೆ. ಬೆಳಿಗ್ಗೆ ಜಮೀನು ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದಾಗ ಈ ಒಂದು ಕೃತ್ಯ ನಡೆದಿದೆ ಹಳೆಯ ದ್ವೇಷ ಹಿನ್ನೆಲೆಯಲ್ಲಿ ಶಿವರಾಯ ಮಾಲಿಪಾಟೀಲ್ ಅನ್ನು ಕೊಲೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಡಿಸಿಪಿ ಕನ್ನಿಕಾ ಸಿಕ್ರಿವಾಲ್ ಭೇಟಿ ನೀಡಿದ್ದು ಫರತಾಬಾದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ನವದೆಹಲಿ : ಸೆಪ್ಟೆಂಬರ್ 1 ರಿಂದ, ಅನೇಕ ಪ್ರಮುಖ ಬದಲಾವಣೆಗಳು ಸಾಮಾನ್ಯ ಜನರ ಜೀವನದ ಮೇಲೆ ಪರಿಣಾಮ ಬೀರುತ್ತವೆ. ಆದ್ದರಿಂದ, ಈ ಬದಲಾವಣೆಗಳು ನಿಮ್ಮ ಮೇಲೆ ಹೇಗೆ ಪರಿಣಾಮ ಬೀರುತ್ತವೆ ಮತ್ತು ಯಾವ ವಿಷಯಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳಬೇಕು ಎಂಬುದನ್ನು ತಿಳಿದುಕೊಳ್ಳುವುದು ಅವಶ್ಯಕ. ಸೆಪ್ಟೆಂಬರ್ 1, 2025 ರಿಂದ ಜಾರಿಗೆ ಬರಲಿರುವ ಐದು ಪ್ರಮುಖ ಬದಲಾವಣೆಗಳು ಹೀಗಿವೆ ಬೆಳ್ಳಿಯ ಮೇಲೆ ಹಾಲ್‌ಮಾರ್ಕ್ ಕಡ್ಡಾಯ ಈ ಹಿಂದೆ ಚಿನ್ನದ ಆಭರಣಗಳ ಮೇಲೆ ಮಾತ್ರ ಹಾಲ್‌ಮಾರ್ಕ್ ಮಾಡಬೇಕಾಗಿತ್ತು, ಆದರೆ ಈಗ ಸೆಪ್ಟೆಂಬರ್ 1 ರಿಂದ ಈ ನಿಯಮ ಬೆಳ್ಳಿಗೂ ಅನ್ವಯಿಸುತ್ತದೆ. ಇದರರ್ಥ ಮಾರುಕಟ್ಟೆಯಲ್ಲಿ ಮಾರಾಟವಾಗುವ ಬೆಳ್ಳಿ ಆಭರಣಗಳು ಮತ್ತು ಇತರ ವಸ್ತುಗಳು ಪ್ರಮಾಣೀಕರಿಸಲ್ಪಡುತ್ತವೆ ಮತ್ತು ಶುದ್ಧತೆಯ ಪುರಾವೆಯೊಂದಿಗೆ ಲಭ್ಯವಿರುತ್ತವೆ. ಇದು ನಕಲಿ ಬೆಳ್ಳಿಯ ಮಾರಾಟವನ್ನು ನಿಲ್ಲಿಸುತ್ತದೆ. ಬೆಳ್ಳಿಯ ಬೆಲೆಗಳಲ್ಲಿ ಕೆಲವು ಬದಲಾವಣೆಗಳಿರಬಹುದು, ಆದ್ದರಿಂದ ಹೂಡಿಕೆ ಮಾಡುವ ಮೊದಲು ಬೆಲೆಗಳನ್ನು ಪರಿಶೀಲಿಸುವುದು ಮುಖ್ಯವಾಗಿದೆ. SBI ಕ್ರೆಡಿಟ್ ಕಾರ್ಡ್ ಬಳಕೆದಾರರಿಗೆ ಹೊಸ ಶುಲ್ಕಗಳು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ…

Read More

ಚಾಮರಾಜನಗರ : ಕೃಷಿ ಹೊಂಡದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪುರುಷ ಮತ್ತು ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಒಡೆಯರಪಾಳ್ಯದಲ್ಲಿ ಒಂದು ಘಟನೆ ನಡೆದಿದೆ. ಮೂರು ಮಕ್ಕಳ ತಾಯಿಯಾದ ಮೀನಾಕ್ಷಿ (38) ಹಾಗೂ ಅವಿವಾಹಿದ ರವಿ (40) ಎನ್ನುವ ಪುರುಷನ ಶವ ಪತ್ತೆಯಾಗಿದೆ. ಬೇರೆ ಬೇರೆ ಜಾತಿಯವರಾಗಿದ್ದ ಮೀನಾಕ್ಷಿ ಮತ್ತು ರವಿ ಪರಸ್ಪರ ಪ್ರೀತಿಸುತ್ತಿದ್ದರು ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಹನೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಉಡುಪಿ, ಆ.30 : “ಬಿಜೆಪಿ ಮತ್ತು ಜೆಡಿಎಸ್‌ನವರು ಜನತೆಯ ಬದುಕಿನ ಬಗ್ಗೆ ನೋಡುವುದಿಲ್ಲ. ಅವರು ಧರ್ಮ ಮತ್ತು ಭಾವನೆಗಳ ಮೇಲೆ ರಾಜಕಾರಣ ಮಾಡುತ್ತಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಉಡುಪಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು. ಧರ್ಮಸ್ಥಳದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಸಮಾವೇಶ ವಿಚಾರವಾಗಿ ಕೇಳಿದಾಗ ಅವರು ಈ ರೀತಿ ಪ್ರತಿಕ್ರಿಯೆ ನೀಡಿದರು.ಕೃಷ್ಣನ ಆಶೀರ್ವಾದ ಪಡೆಯಲು ಬಂದಿದ್ದೀರಿ ಎಂದು ಕೇಳಿದಾಗ, “ಕೃಷ್ಣ, ಗಣಪತಿ ಹಾಗೂ ನಿಮ್ಮ (ಮಾಧ್ಯಮಗಳ) ಆಶೀರ್ವಾದ ಪಡೆಯಲು ಬಂದಿದ್ದೇನೆ. ನಿಮ್ಮದು ಸೇರಿದಂತೆ ಎಲ್ಲರ ಆಶೀರ್ವಾದ ಬೇಕು” ಎಂದು ಚಟಾಕಿ ಹಾರಿಸಿದರು. ಸೆಪ್ಟೆಂಬರ್ ಕ್ರಾಂತಿ ಬಗ್ಗೆ ಚರ್ಚೆಯಾಗುತ್ತಿರುವಾಗ ಪ್ರಾರ್ಥನೆಗೆ ಇದು ಸೂಕ್ತ ಕಾಲವೇ ಎಂದು ಕೇಳಿದಾಗ, “ಅದೆಲ್ಲಾ ಏನಿಲ್ಲ. ಪ್ರಾರ್ಥನೆ ನನ್ನ ಸಹಜ ಪದ್ಧತಿ. ಉಡುಪಿಯ ಕೃಷ್ಣಮಠದಿಂದ ಈ ಹಿಂದೆಯೂ ಆಹ್ವಾನ ಇತ್ತು. ನಮ್ಮ ಸರ್ಕಾರ ಬಂದ ಮೇಲೆಯೂ ಆಹ್ವಾನಿಸಿದ್ದರು. ಆದರೆ ಬರಲು ಸಾಧ್ಯವಾಗಿರಲಿಲ್ಲ. ಈಗ ಬಂದಿದ್ದೇನೆ” ಎಂದು ತಿಳಿಸಿದರು.

Read More

ಉಡುಪಿ : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಉಡುಪಿಗೆ ಭೇಟಿ ನೀಡಿದ್ದು ಉಡುಪಿಯ ಪುತ್ತಿಗೆ ಮಠಕ್ಕೆ ಭೇಟಿ ನೀಡಿ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಆಶೀರ್ವಾದ ಪಡೆದುಕೊಂಡರು. ಈ ವೇಳೆ ಶ್ರೀಗಳು ರಾಜ್ಯಕ್ಕೆ ಮತ್ತು ದೇಶಕ್ಕೆ ಡಿಕೆ ಶಿವಕುಮಾರ್ ಅವರ ಸೇವೆ ದೊರಕಲಿ ಎಂದು ಪರೋಕ್ಷವಾಗಿ ಸಿಎಂ ಆಗಲಿ ಎಂದು ತಿಳಿಸಿದರು. ಡಿ.ಕೆ ಶಿವಕುಮಾರ್ ಓಪನ್ ಆಗಿ ಭಗವದ್ಗೀತೆ ಪಠಿಸುವ ಏಕೈಕ ರಾಜಕಾರಣಿ. ರಾಕ್ ಸ್ಟಾರ್ ರಾಜಕಾರಣಿ. ರಾಜ್ಯಕ್ಕೆ ದೇಶಕ್ಕೆ ಅವರ ಸೇವೆ ದೊರಕಲಿ. ಭಗವದ್ಗೀತೆ ಪುಸ್ತಕ ಪಡೆದಿದ್ದಾರೆ, ಅವರ ಮನಸ್ಸಿನ ಇಚ್ಛೆ ಫಲಿಸಲಿ ಎಂದು ಉಡುಪಿಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಆಶೀರ್ವಾದ ಮಾಡಿದ್ದಾರೆ. ಡಿಕೆಶಿ ಜೊತೆ ಪುತ್ತಿಗೆ ಮಠಕ್ಕೆ 35 ವರ್ಷದ ಸಂಬಂಧವಿದೆ. ಡಿಕೆ ಜೈಲ್ ಮಂತ್ರಿ ಆಗಿದ್ದರು, ಕೃಷ್ಣ ಹುಟ್ಟಿದ್ದು ಜೈಲಿನಲ್ಲೇ. ಅವರು ಶ್ರೀಕೃಷ್ಣನ ದೊಡ್ಡ ಭಕ್ತ, ಭಗವದ್ಗೀತೆಯನ್ನು ಬಹಳ ಅನುಸರಿಸುತ್ತಾರೆ ಎಂದು ಮಠದ ರಾಜಾಂಗಣದಲ್ಲಿ ನಡೆದ ತಮ್ಮ ಜನ್ಮ ನಕ್ಷತ್ರ ಕಾರ್ಯಕ್ರಮದಲ್ಲಿ ಡಿ.ಕೆ…

Read More

ಕಲಬುರ್ಗಿ : ಅನ್ಯಜಾತಿಯ ಯುವಕನನ್ನು ಪ್ರೀತಿಸುತ್ತಿದ್ದ ಮಗಳನ್ನ ತಂದೆ ಹಾಗೂ ಕುಟುಂಬಸ್ಥರು ಸೇರಿ ಹತ್ಯೆ ಮಾಡಿ ಸುಟ್ಟು ಹಾಕಿರುವ ಘಟನೆಗೆ ಸಂಬಂಧಿಸಿದಂತೆ ಇದೀಗ ಪೊಲೀಸರು ತಂದೆ ಸೇರಿದಂತೆ ಮೂವರನ್ನು ಅರೆಸ್ಟ್ ಮಾಡಿದ್ದಾರೆ. ಘಟನೆ ತಿಳಿದು ಗ್ರಾಮಕ್ಕೆ ಭೇಟಿ ನೀಡಿದ ಪೊಲೀಸರು ಮೃತಳ ತಂದೆ ಯನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ತಾವೇ ಕೊಂದಿರುವುದಾಗಿ ಹೇಳಿದ್ದಾರೆ.ಹೀಗಾಗಿ, ಪ್ರಕರಣ ದಾಖಲಿಸಿಕೊಂಡು ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ. ಸ್ಥಳಕ್ಕೆ ಸೊಕೋ ತಂಡವನ್ನು ಕಳುಹಿಸಲಾಗಿದೆ. ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆ ಮಾಡಲಾಗುತ್ತಿದೆ. ಘಟನೆ ಹಿನ್ನೆಲೆ? ಮೃತಪಟ್ಟ ಯುವತಿ ಕವಿತಾ ಎಂಬುದು ಗೊತ್ತಾಗಿದೆ. ಗ್ರಾಮದಲ್ಲಿ ಪೋಷಕರೊಂದಿಗೆ ವಾಸವಾಗಿದ್ದಳು. ತಂದೆ ಶಂಕರ್ ಕೊಳ್ಳೂರ್ ಕೃಷಿಕ. ಶಂಕರ್​ಗೆ ಐವರು ಹೆಣ್ಣು ಮಕ್ಕಳಿದ್ದು, ಇಬ್ಬರಿಗೆ ಮದುವೆ ಮಾಡಿ ಕೊಟ್ಟಿದ್ದಾರೆ. ಕೊಲೆಯಾದ 18 ವರ್ಷದ ಕವಿತಾ ನಾಲ್ಕನೆಯವಳು. ಪಿಯುಸಿ ಮುಗಿಸಿ ನರ್ಸಿಂಗ್ ಓದುತಿದ್ದಳು. ಕವಿತಾ ತನ್ನ ಗ್ರಾಮದ ಅನ್ಯ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದಳು. ಇವರಿಬ್ಬರ ಲವ್ ವಿಚಾರ ಮನೆಯವರಿಗೆ ಕಳೆದ ಮೂರು ತಿಂಗಳ ಹಿಂದೆ…

Read More