Subscribe to Updates
Get the latest creative news from FooBar about art, design and business.
Author: kannadanewsnow05
ವಿಜಯಪುರ : ಬಿಜೆಪಿ ಪಕ್ಷದಿಂದ 6 ವರ್ಷಗಳ ಕಾಲ ಉಚ್ಛಾಟಿತರಾಗಿರುವ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಇದೀಗ ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ಬ್ಯಾಟಿಂಗ್ ಬೀಸಿದ್ದಾರೆ. ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಅಷ್ಟು ಸುಲಭವಾದದ್ದಲ್ಲ ಎಂದು ಹೇಳಿಕೆ ನೀಡಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಗೆ ನನ್ನನ್ನು ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಲು ಷಡ್ಯಂತ್ರ ಮಾಡಿದ್ದರೊ, ಅದೇ ರೀತಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಷಡ್ಯಂತ್ರ ನಡೆಯುತ್ತಿದೆ ಎಂದು ಸ್ಪೋಟಕವಾದ ಹೇಳಿಕೆ ನೀಡಿದರು. ಆದರೆ ಸಿಎಂ ಸಿದ್ದರಾಮಯ್ಯ ಅವರನ್ನು ಯಾವುದೇ ಕಾರಣಕ್ಕೂ ಅಷ್ಟು ಸುಲಭವಾಗಿ ಕೆಳಗಿಳಿಸಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪರವಾಗಿ ಶಾಸಕ ಬಸನಗೌಡ ಪಾಟೀಲ ಇದೀಗ ಬ್ಯಾಟಿಂಗ್ ಬೀಸಿದ್ದಾರೆ.
ಹುಬ್ಬಳ್ಳಿ : ಇಂದು ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಬಿಹಾರ ಮೂಲದ ಯುವಕನೊಬ್ಬ ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿಗೆಯನ್ನು ಕಿಡ್ನ್ಯಾಪ್ ಮಾಡಿ ಬಳಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ನಂತರ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ನಡೆದಿತ್ತು. ಇದೀಗ ಘಟನೆಗೆ ಸಂಬಂಧಿಸಿದಂತೆ ಬಾಲಕಿಯ ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ಪರಿಹಾರ ನೀಡಲಾಗುವುದು ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ ಘೋಷಿಸಿದ್ದಾರೆ. ಸರ್ಕಾರದ ಪರಿಹಾರದ ಬಗ್ಗೆ ಸಲೀಂ ಅಹಮದ್ ಮಾಹಿತಿ ನೀಡಿದ್ದಾರೆ. ವಿಧಾನ ಪರಿಷತ್ ಕಾಂಗ್ರೆಸ್ ಮುಖ್ಯ ಸಚೇತಕ ಸಲೀಂ ಅಹಮದ್ ಮೃತ ಬಾಲಕಿಯ ಕುಟುಂಬಕ್ಕೆ 10 ಲಕ್ಷ ಪರಿಹಾರ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಇನ್ನು ಆರೋಪಿಯನ್ನು ಅರೆಸ್ಟ್ ಮಾಡಲು ತೆರಳಿದಾಗ ಪಿಎಸ್ಐ ಅನ್ನಪೂರ್ಣ ಹಾಗೂ ಇಬ್ಬರು ಕಾನ್ಸ್ಟೇಬಲ್ ಮೇಲೆ ಆರೋಪಿ ಹಲ್ಲೆ ಮಾಡಿದ್ದಾನೆ. ಕೂಡಲೇ ಪಿಎಸ್ಐ ಅನ್ನಪೂರ್ಣ ಅವರು ಆರೋಪಿ ಮೇಲೆ ತಮ್ಮ ಆತ್ಮ ರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ. ಈ ವೇಳೆ ತಕ್ಷಣ ಆತನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ…
BIG NEWS : ಬೀದರ್ ನಲ್ಲಿ ಭೀಕರ ಅಗ್ನಿ ದುರಂತ : ಆಕಸ್ಮಿಕ ಬೆಂಕಿಗೆ 16 ಎಕರೆ ಜೋಳ, 120 ಮಾವಿನ ಗಿಡಗಳು ಸುಟ್ಟು ಭಸ್ಮ!
ಬೀದರ್ : ಬೀದರ್ ನಲ್ಲಿ ಭೀಕರವಾದ ಅಗ್ನಿ ಅವಘಡ ಸಂಭವಿಸಿದ್ದು, ಆಕಸ್ಮಿಕ ಬೆಂಕಿ ಹೊತ್ತಿಕೊಂಡಿರುವ ಪರಿಣಾಮ 14 ಎಕರೆ ಜೋಳ, 6 ಎಕರೆಯಲ್ಲಿ ಬೆಳೆದಿದ್ದ ಕಬ್ಬು, ಪರಂಗಿ ಹಣ್ಣು ಜೊತೆಗೆ 120 ಮಾವಿನ ಗಿಡಗಳು ಬೆಂಕಿಗಾಹುತಿಯಾಗಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದ ಹೊರವಲಯದ ತೋಟದಲ್ಲಿ ನಡೆದಿದೆ. ಸುಮಾರು 120 ಮಾವಿನ ಗಿಡಗಳಿಗೆ ಬೆಂಕಿ ತಗುಲಿದ್ದು, ಅಪಾರ ಪ್ರಮಾಣದ ಹಾನಿಯಾಗಿದೆ. ಜೊತೆಗೆ ಅಕ್ಕಪಕ್ಕದ ಹೊಲದಲ್ಲಿನ ಬೆಳೆಗಳಿಗೂ ಹಾನಿಯಾಗಿದೆ. ಟ್ರಾನ್ಸ್ಫಾರ್ಮ್ನಲ್ಲಿನ ವಿದ್ಯುತ್ ಪ್ರವಹಸಿ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದೆ. ಪ್ರಶಾಂತ್ ಪಾಟೀಲ್ ಎಂಬುವವರಿಗೆ ಸೇರಿದ 6 ಎಕರೆ ಹೊಲದಲ್ಲಿ ಬೆಳೆದಿದ್ದ ಕಬ್ಬು, ಪಪ್ಪಾಯಿ, ಮಾವು ಹಾಗೂ ಭರತ್ ನಾಟೀಕರ್ ಎಂಬುವವರ 14 ಎಕರೆಯ ಜೋಳ ಸುಟ್ಟು ಭಸ್ಮವಾಗಿದೆ. ಘಟನೆ ಕುರಿತು ಭಾಲ್ಕಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಇತ್ತೀಚಿಗೆ ರಾಜ್ಯದಲ್ಲಿ ಪಿಯುಸಿ ಫಲಿತಾಂಶ ಪ್ರಕಟವಾದ ಬಳಿಕ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ, ಕೆಲವು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದರು. ಇದೀಗ ಬೆಂಗಳೂರಿನಲ್ಲಿ ಪರೀಕ್ಷೆ ಭಯದಿಂದ ದಂತ ವೈದ್ಯಕೀಯ ವಿದ್ಯಾರ್ಥಿನಿಯೋರ್ವಳು ಅಪಾರ್ಟ್ಮೆಂಟ್ ನ ನಾಲ್ಕನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಹೆಬ್ಬಾಳದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾಗಿರುವ ದಂತ ವೈದ್ಯಕೀಯ ವಿದ್ಯಾರ್ಥಿನಿಯನ್ನು ಸೌಮ್ಯ (19) ಎಂದು ತಿಳಿದುಬಂದಿದೆ. ಅಪಾರ್ಟ್ಮೆಂಟಿನ 4ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ.ದಂತ ವೈದ್ಯಕೀಯ ಕಾಲೇಜಿನಲ್ಲಿ ವಿದ್ಯಾರ್ಥಿನಿ ಸೌಮ್ಯ 2ನೇ ವರ್ಷದಲ್ಲಿ ಓದುತ್ತಿದ್ದಳು. ಪರೀಕ್ಷೆ ವಿಚಾರವಾಗಿ ವಿದ್ಯಾರ್ಥಿನಿ ಸೌಮ್ಯ ಭಯಗೊಂಡಿದ್ದಾಳೆ ಎನ್ನಲಾಗಿದೆ. ಈ ಹಿಂದೆಯೂ ವಿದ್ಯಾರ್ಥಿ ಸೌಮ್ಯ ಆತ್ಮಹತ್ಯೆಗೆ ಯತ್ನಿಸಿದ್ದಳು ಎಂದು ತಿಳಿದುಬಂದಿದೆ. ಘಟನೆ ಕುರಿತಂತೆ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ತಾಲೂಕಿನ ಗಣೇಶ ಗುಡಿಯ ಬಾಡಗುಂದದ ಹೋಂಸ್ಟೇಯೊಂದರ ಈಜುಕೊಳದಲ್ಲಿ 6 ವರ್ಷದ ಬಾಲಕನೋರ್ವ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಬಾಲಕನನ್ನು ಹುಸೇನೈನ್ ರಹೀಮ್ ಖಾನ್ (06) ಎಂದು ತಿಳಿದುಬಂದಿದೆ. ಬಲ್ಲ ಮೂಲಗಳ ಪ್ರಕಾರ ಬೆಳಗಾವಿಯಿಂದ ಪ್ರವಾಸಕ್ಕೆಂದು ಕುಟುಂಬಸ್ಥರ ಜೊತೆ ಗಣೇಶಗುಡಿಯ ಬಾಡಗುಂದದ ಅಶೋಕ ಹೋಮ್ಸ್ಟೇಗೆ ಬಂದಿದ್ದ ಈ ಬಾಲಕ ಈಜುಕೊಳದಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎಂದು ತಿಳಿಬಂದಿದೆ. ಘಟನೆ ನಡೆದ ಕೆಲವೇ ಕ್ಷಣಗಳಲ್ಲಿ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಬಾಲಕ ಹುಸೇನೈನ್ ರಹೀಮ್ ಖಾನ್ ಮೃತಪಟ್ಟಿದ್ದಾನೆ. ಆಸ್ಪತ್ರೆಯಲ್ಲಿ ಬಾಲಕನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ರಜೆ ಸಮಯವನ್ನು ಕಳೆಯಲು ಬಂದ ಕುಟುಂಬಕ್ಕೆ ಇದೀಗ ಬಾಲಕನ ಸಾವು ಬಿಗ್ ಶಾಕ್ ನೀಡಿದೆ.
ಹುಬ್ಬಳ್ಳಿ : ಇದು ಹುಬ್ಬಳ್ಳಿಯಲ್ಲಿ ಬಿಹಾರ್ ಮೂಲದ ಯುವಕನಿಂದ 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದು ಆತ್ಮರಕ್ಷಣೆಗಾಗಿ ಪೊಲೀಸರು ಆತನ ಮೇಲೆ ಗುಂಡಿನ ದಾಳಿ ನಡೆಸಿ ಅರೆಸ್ಟ್ ಮಾಡಿವರು ಘಟನೆ ವರದಿಯಾಗಿದೆ. ಹೌದು ಆರೋಪಿ ಯುವಕನ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಇದೀಗ ಆರೋಪಿ ಯುವಕನನ್ನು ಅರೆಸ್ಟ್ ಮಾಡಿದ್ದಾರೆ. ಘಟನೆಯಲ್ಲಿ ಒಬ್ಬ ಪಿಎಸ್ಐ ಮತ್ತು ಇಬ್ಬರು ಸಿಬ್ಬಂದಿಗಳಿಗೆ ಗಾಯಗಳಾಗಿದ್ದು, ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಸದ್ಯ ಗಾಯಾಳು ಪೊಲೀಸ್ ಸಿಬ್ಬಂದಿಗಳಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಆರೋಪಿಯು 5 ವರ್ಷದ ಬಾಲಕಿಗೆ ಚಾಕಲೇಟ್ ಆಸೆ ತೋರಿಸಿ ಕಿಡ್ನಾಪ್ ಮಾಡಿ ಬಳಿಕ ಅತ್ಯಾಚಾರ ಆಗಿದ್ದಾನೆ. ನಂತರ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಘಟನೆ ಖಂಡಿಸಿ ಹುಬ್ಬಳ್ಳಿ ನಗರದಾದ್ಯಂತ ಪ್ರತಿಭಟನೆ ಜೋರಾಗಿದ್ದು ಅಶೋಕ್ ನಗರ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನಾಕಾರರು ಆತನನ್ನು ಎನ್ಕೌಂಟರ್ ಮಾಡುವಂತೆ ಆಕ್ರೋಶ…
ದಾವಣಗೆರೆ : ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಮುಸ್ಲಿಂ ಮಹಿಳೆ ಹಾಗೂ ಆಕೆಯ ಸಂಬಂಧಿಕರ ಮೇಲೆ ಹಲ್ಲೆ ನಡೆಸಲಾಗಿದೆ. ನಡು ರಸ್ತೆಯಲ್ಲಿಯೇ ಮಹಿಳೆಯ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ದಾವಣಗೆರೆ ಜಿಲ್ಲೆಯ ಚೆನ್ನಗಿರಿ ತಾಲೂಕಿನ ತಾವರೆಕೆರೆ ಗ್ರಾಮದಲ್ಲಿ ನಡೆದಿದೆ. ತಾವರೆಕೆರೆ ಗ್ರಾಮದಲ್ಲಿ ಏಪ್ರಿಲ್ 9ರಂದು ಈ ಒಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ನಸ್ರೀನ್ ಬಾನು, ನಸ್ರಿನ್ ಮತ್ತು ಫಯಾಜ್ ಎನ್ನುವವರ ಮೇಲೆ ಹಲ್ಲೆ ನಡೆಸಲಾಗಿದೆ. ಮಹಿಳೆ ಮೇಲೆ ಹಗ್ಗ ಮತ್ತು ದೊಣ್ಣೆ ಕಬ್ಬಿಣದ ಪೈಪ್ ಗಳಿಂದ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಮೊಹಮ್ಮದ್ ಫಯಾಜ್ ಎನ್ನುವ ವ್ಯಕ್ತಿಯಿಂದ ಮಹಿಳೆಯ ಮೇಲೆ ಹಲ್ಲೆ ನಡೆದಿದೆ ಎಂದು ತಿಳಿದುಬಂದಿದೆ. ಮಹಮ್ಮದ್ ಗೌಸ್ ಪೀರ್, ಚಾಂದ್ ಪೀರ್, ದಸ್ತಗಿರ್ ಇನಾಯತ್ ಉಲ್ಲಾ, ರಸೂಲ್ ಟಿ ಆರ್ ನಿಂದ ಮಹಿಳೆಯ ಮೇಲೆ ಹಲ್ಲೆ ನಡೆದಿದೆ. ಆರೋಪಿಗಳನ್ನು ಪೊಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ. ಅಲ್ಲದೆ ಮಹಿಳೆಯ ಮೇಲೆ ಹಲ್ಲೆ ಮಾಡುವ ದೃಶ್ಯ ಕೂಡ ಸಾಮಾಜಿಕ…
ಬೆಂಗಳೂರು : ವಿಶ್ವ ಬ್ಯಾಂಕ್ ಸಾಲದ ವಿಚಾರವಾಗಿ 2000 ಕೋಟಿ ರೂಪಾಯಿ ಹಗರಣ ನಡೆದಿದೆ. ರಾಜ ಕಾಲುವೆ ನಿರ್ಮಾಣದಲ್ಲಿ ಸುಮಾರು 2000 ಕೋಟಿ ರೂಪಾಯಿ ಹಗರಣ ಆಗಿದೆ ಎಂದು ಬೆಂಗಳೂರಿನ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಇಂದು ರಾಜ್ಯಪಾಲರಿಗೆ ದೂರು ನೀಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ವಿಶ್ವಬ್ಯಾಂಕ್ ಸಾಲದ ವಿಚಾರದಲ್ಲಿ 2000 ಕೋಟಿ ರೂಪಾಯಿ ಹಗರಣ ಆಗಿದೆ ಎಂದು ರಾಜ್ಯಪಾಲರಿಗೆ ಶಾಸಕ ಮುನಿರತ್ನ ದೂರು ನೀಡಿದ್ದಾರೆ. ಫೆಬ್ರವರಿ ತಿಂಗಳಲ್ಲಿ ಹಗರಣದ ಬಗ್ಗೆ ಇಡಿಗೆ ದೂರು ನೀಡಿದೆ. ಅದಾದ ಬಳಿಕ ಅಧಿಕಾರಿಗಳನ್ನು ಗುತ್ತಿಗೆದಾರರನ್ನು ಮನೆಗೆ ಕರೆಸಿಕೊಂಡು ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಡಿಕೆ ಸುರೇಶ್ ಸಭೆ ನಡೆಸಿದ್ದಾರೆ.ರಾಜ ಕಾಲುವೆ ನಿರ್ಮಾಣದಲ್ಲಿ ಬಹುಕೋಟಿ ಹಗರಣ ಆಗಿದೆ. ಸ್ಟಾರ್ ಚಂದ್ರುಗೆ ಮಹದೇವಪುರ ಕ್ಷೇತ್ರದಲ್ಲಿ ಟೆಂಡರ್ ನೀಡಲಾಗಿದೆ. ಬ್ಯಾಟರಾಯನಪುರ ವ್ಯಾಪ್ತಿಯಲ್ಲಿ ರಾಮಲಿಂಗಂ ಕನ್ಸ್ಟ್ರಕ್ಷನ್ ಕಂಪನಿ, ಯಲಹಂಕದಲ್ಲಿ ಎಲ್ಲಯ್ಯ ಕನ್ಸ್ಟ್ರಕ್ಷನ್ ಕಂಪನಿ ಗೆ ಟೆಂಡರ್ ಕೊಡುತ್ತಾರೆ ಅದೇ ರೀತಿ ರಾಜರಾಜೇಶ್ವರಿ ನಗರದಲ್ಲೂ ಗುತ್ತಿಗೆ ನೀಡಿದ್ದಾರೆ. ಹಾಸನದ…
ಬೆಂಗಳೂರು : ಇತ್ತೀಚೆಗೆ ಹೆಂಡತಿಯರ ಕಾಟಕ್ಕೆ ಅದೆಷ್ಟೋ ಗಂಡಂದಿರು ಕಿರುಕುಳ ತಾಳದೆ ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇದೀಗ ಬೆಂಗಳೂರಿನಲ್ಲಿ ಪತ್ನಿಯ ಕಾಟಕ್ಕೆ ಬೇಸತ್ತು ವ್ಯಕ್ತಿಯೊಬ್ಬ ಬೆಂಗಳೂರಿನ ರಾಜಭವನದ ಎದುರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆತಿಸಿರುವ ಘಟನೆ ಇದೀಗ ವರದಿಯಾಗಿದೆ. ಹೌದು ಪೆಟ್ರೋಲ್ ಸುರವಿಕೊಂಡು ವ್ಯಕ್ತಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ. ಹೆಂಡತಿ ಕಿರುಕುಳಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಅಲ್ಲದೇ ಈ ಕುರಿತು ಪೊಲೀಸರು ಸ್ವೀಕರಿಸದಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ನನ್ನ ಮೇಲೆ ಕೊಲೆ ಯತ್ನ ನಡೆದಿದೆ. ನನಗೆ ಬದುಕಲು ದಾರಿ ಇಲ್ಲ. ಸಾಯುವುದೊಂದೇ ದಾರಿ ಎಂದು ವ್ಯಕ್ತಿ ಹೇಳಿದ್ದಾನೆ. ಕೂಡಲ್ಸ್ ವ್ಯಕ್ತಿಯನ್ನು ವಿಧಾನಸೌಧ ಠಾಣೆ ಪೊಲೀಸರು ತಕ್ಷಣ ಕರೆದೊಯ್ಯದಿದ್ದಾರೆ.
ಬಳ್ಳಾರಿ : ಹಿಂದುಳಿದ ನಾಯಕನಾಗಿ ಬೆಳೆಯಬೇಕೆಂದರೆ ಅಷ್ಟು ಸುಲಭವಲ್ಲ. ಬೆಂಕಿಯ ಮೇಲೆ ಹಗ್ಗದ ಮೇಲೆ ನಡೆದ ಹಾಗೆ ಇರುತ್ತದೆ ಎಂದುಸಂಗೊಳ್ಳಿ ರಾಯಣ್ಣ ಕನಕದಾಸರ ಮೂರ್ತಿ ಉದ್ಘಾಟನೆ ಕಾರ್ಯಕ್ರಮದಲ್ಲಿ MLC ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಬಳ್ಳಾರಿ ಜಿಲ್ಲೆಯ ಕಂಪ್ಲಿ ಕ್ಷೇತ್ರದ ಕಲ್ಲಕಂಬ ಗ್ರಾಮದಲ್ಲಿ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಸಿದ್ದರಾಮಯ್ಯ ಹಿಂದುಳಿದ ಸಮುದಾಯ ನಾಯಕರಾಗಿ ಬೆಳೆಯಬೇಕಾದರೆ ಸಣ್ಣ ಪುಟ್ಟ ತಪ್ಪುಗಳನ್ನು ನೋಡುವವರೇ ಹೆಚ್ಚು ಸಿದ್ದರಾಮಯ್ಯ ಎಲ್ಲವನ್ನೂ ಎದುರಿಸಿ ಬೆಳೆದು ನಿಂತು ಮುಖ್ಯಮಂತ್ರಿ ಆಗಿದ್ದರು. ಈಗ ಮತ್ತೊಮ್ಮೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾರೆ. ಸಿದ್ದರಾಮಯ್ಯನವರ ಶಕ್ತಿಯನ್ನು ಕುಂದಿಸುವ ಕುತಂತ್ರ ನಡೆಯುತ್ತಿದೆ. ಬಿಜೆಪಿ ಜೆಡಿಎಸ್ ಮೈತ್ರಿ ಮಾಡಿಕೊಂಡು ಕುತಂತ್ರ ನಡೆಸುತ್ತಿವೆ. ಕೇಂದ್ರ ಸರ್ಕಾರದ ಮೂಲಕ ಒತ್ತಡ ಹಾಕಿಸಿ ಕುತಂತ್ರ ಮಾಡುತ್ತಿದ್ದಾರೆ.ನಿಮ್ಮ ಯಾವುದೇ ಕುತಂತ್ರಗಳಿಂದ ಸಿದ್ದರಾಮಯ್ಯ ಜಗ್ಗಲ್ಲ ಬಗ್ಗಲ್ಲ. ಸಿದ್ದರಾಮಯ್ಯನವರ ಮೇಲೆ ನಿಮ್ಮ ಪ್ರೀತಿ ಬೆಂಬಲ ಹೀಗೆ ಇರಲಿ. ಎಂದು ಕಲ್ಲಕಂಬ ಗ್ರಾಮದಲ್ಲಿ ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದರು.