Subscribe to Updates
Get the latest creative news from FooBar about art, design and business.
Author: kannadanewsnow05
ಧರ್ಮಸ್ಥಳ : ಧರ್ಮಸ್ಥಳದಲ್ಲಿ 15 ವರ್ಷಗಳ ಹಿಂದೆ ಶಾಲಾ ಬಾಲಕಿಯ ಅನುಮಾನಾಸ್ಪದ ಸಾವು ವಿಚಾರವಾಗಿ ಇದೀಗ ಈ ಒಂದು ಪ್ರಕರಣದ ತನಿಖೆಯನ್ನು ಡಿಜಿ ಐಜಿಪಿ ಸಲೀಂ ಅವರು ಎಸ್ಐಟಿಗೆ ಹಸ್ತಾಂತರಿಸಿದ್ದಾರೆ ಎಂದು ತಿಳಿದುಬಂದಿದೆ. ಹೌದು 15 ವರ್ಷದ ಬಾಲಕಿ ಶವವನ್ನು ಹೂತಿದ್ದೇನೆ ಎಂದು ಅನಾಮಿಕ ವ್ಯಕ್ತಿ ಎಸ್ಐಟಿ ಅಧಿಕಾರಿಗಳಿಗೆ ಹೇಳಿಕೆ ನೀಡಿದ್ದ. ಈತನ ಹೇಳಿಕೆ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳು ಶಾಕ್ ಗೆ ಒಳಗಾಗಿದ್ದರು. ಅಲ್ಲದೆ ಇತ್ತೀಚಿಗೆ ಮತ್ತೋರ್ವ ದೂರುದಾರ ಟಿ ಜಯಂತ್ ಎನ್ನುವ ಹೊಸ ಸಾಕ್ಷಿದಾರ ಕೂಡ ಬಾಲಕಿಯ ಶವವನ್ನು ಹೂತಿರುವುದು ಕಣ್ಣಾರೆ ನೋಡಿದ್ದೇನೆ ಎಂದು ಸಾಕ್ಷಿ ಹೇಳಿದ್ದ ಇವೆಲ್ಲದರ ಹೇಳಿಕೆಗಳಿಂದ ಇದು ಒಂದು ಪ್ರಕರಣದ ತನಿಖೆಯನ್ನು ಎಸ್ಐಟಿಗೆ ಹಸ್ತಾಂತರಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಹೋರಾಟಗಾರ ಟಿ ಜಯಂತ್ ದೂರು ನೀಡಿದ್ದರು. ಪೊಲೀಸ್ ಅಧಿಕಾರಿಯ ವಿರುದ್ಧ ಜಯಂತ್ ಗಂಭೀರವಾದ ಆರೋಪ ಮಾಡಿದ್ದಾರೆ. ರಾಜ್ಯ ಹೆದ್ದಾರಿ 37ರ ಅರಣ್ಯದಲ್ಲಿ ಬಾಲಕಿಯ ಶವ ಹೂತು ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಅಪ್ರಾಪ್ತೆಯ ಶವವನ್ನು ಪೋಲಿಸ್ ಅಧಿಕಾರಿ…
ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ಶವಗಳ ಓದಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಈ ಒಂದು ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು ಅಸ್ತಿಪಂಜರ ಶೋಧ ಕೇಸ್ಗೆ ಟ್ವಿಸ್ಟ್ ಸಿಕ್ಕಿದೆ. ಅಸ್ತಿಪಂಜರದ ಶೋಧ ಕಾರ್ಯದ ವೇಳೆ ಅಚ್ಚರಿಯೋಂದು ನಡೆದಿದೆ. ಆ ಸಾಕ್ಷವನ್ನು ನೋಡಿ ಅಧಿಕಾರಿಗಳೇ ಶಾಕ್ ಆಗಿದ್ದಾರೆ. ಧರ್ಮಸ್ಥಳದಲ್ಲಿ ಅಸ್ತಿಪಂಜರ ಶೋಧ ಪ್ರಕರಣಕ್ಕೆ ದೊಡ್ಡ ತಿರುವು ಸಿಕ್ಕಿದೆ. ಹೌದು 11 ಪಾಯಿಂಟ್ ಸ್ಥಳ ಬಿಟ್ಟು ಬೇರೆ ಜಾಗದಿಂದ ದೂರುದಾರ ಅಧಿಕಾರಿಗಳನ್ನು ಕರೆದುಕೊಂಡು ಹೋಗಿದ್ದಾನೆ. ಇಲ್ಲಿ ಬೇಡ ಎಂದು ಬೇರೊಂದು ಪಾಯಿಂಟ್ ತೋರಿಸಿದ್ದಾನೆ ಅಲ್ಲಿಂದ 120 ಮೀಟರ್ ಮುಂದೆ ದೂರುದಾರ ಹೆಜ್ಜೆ ಹಾಕಿದ್ದಾನೆ. ನಿನ್ನೆ 11ನೇ ಪಾಯಿಂಟ್ ಆಗೆದಿರುವುದಾಗ ಅಚ್ಚರಿ ಕಾದಿತ್ತು. ಧರ್ಮಸ್ಥಳದಲ್ಲಿ ಮತ್ತೊಂದು ಹೊಸ ಸ್ಥಳ ತೋರಿಸಿದ ವ್ಯಕ್ತಿ ಹೊಸ ಪಾಯಿಂಟ್ ಅಲ್ಲಿ ಪುರುಷನ ಪೂರ್ಣ ಅಸ್ತಿ ಪಂಜರ ಪತ್ತೆಯಾಗಿದೆ ಇದುವರೆಗೂ ಹದಿಮೂರು ಸ್ಥಳಗಳನ್ನು ಅನಾಮಿಕ ವ್ಯಕ್ತಿ ಗುರುತಿಸಿದ್ದಾನೆ. ದೂರುದಾರನ ನಡೆ ನಡೆ ನೋಡಿ ಅಧಿಕಾರಿಗಳೇ ಶಾಕ್ ಆಗಿದ್ದಾರೆ. ಹೊಸ ಸ್ಥಳದ ಬಗ್ಗೆ ಎಸ್ಐಟಿಗೆ ದೂರುದಾರ…
ಬೆಂಗಳೂರು : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಮಂಡ್ಯ ಜಿಲ್ಲೆ ಮಳವಳ್ಳಿ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಪಿ.ಎಂ,ನರೇಂದ್ರ ಸ್ವಾಮಿ ಅವರನ್ನು ನೇಮಕ ಮಾಡಿ ಇತ್ತೀಚಿಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಇದೀಗ ಈ ಒಂದು ನೇಮಕ ವಿಚಾರವಾಗಿ, ಹೈ ಕೋರ್ಟ್ ಪಿಎಂ ನರೇಂದ್ರಸ್ವಾಮಿ ರಾಜ ಸರ್ಕಾರ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿಗೆ ನೋಟಿಸ್ ನೀಡಿದೆ. ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರ ನೇಮಕ ವಿಚಾರವಾಗಿ ಪಿಎಂ ನರೇಂದ್ರಸ್ವಾಮಿ ನೇಮಕವನ್ನು ಪ್ರಶ್ನಿಸಿ ಇಂದು ಹೈಕೋರ್ಟ್ ನಲ್ಲಿ ಪಿಐಎಲ್ ವಿಚಾರಣೆ ನಡೆಯಿತು. ಶಾಸಕರಾಗಿ ಲಾಭದಾಯಕ ಹುದ್ದೆ ಹೊಂದಿರುವುದಾಗಿ ಆರೋಪ ಮಾಡಿದ್ದು ಎಂ ಶ್ರೇಯಸ್ ಎಂಬುವವರು ಸಲ್ಲಿಸಿದ ಪಿಐಎಲ್ ವಿಚಾರಣೆ ನಡೆಯಿತು. ಸರ್ಕಾರ, ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಪಿಎಂ ನರೇಂದ್ರಸ್ವಾಮಿಗೆ ನೋಟಿಸ್ ನೀಡಲಾಗಿದೆ. ಸಿಜೆ ವಿಭು ಬಕ್ರೂ, ನ್ಯಾ. ಸಿಎಂ ಜೋಶಿ ಅವರಿದ್ದ ಪೀಠದಿಂದ ನೋಟಿಸ್ ಜಾರಿಗೊಳಿಸಲಾಗಿದೆ.
ಬೆಂಗಳೂರು : ನಟಿ ರಮ್ಯಾ ಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲವಾಗಿ ಮೆಸೇಜ್ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗ ಸಿಸಿಬಿ ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದು, ನಟಿ ರಮ್ಯಾ ಗೆ ಮೆಸೇಜ್ ಮಾಡಿದ್ದ ಒಟ್ಟು 48 ಜನರ ಐಪಿ ಅಡ್ರೆಸ್ ಗಳನ್ನು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದಾರೆ ಇದುವರೆಗೂ ಒಟ್ಟು 15 ಜನರನ್ನು ಗುರುತಿಸಿದ್ದು, ನಾಲ್ವರನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೌದು ಮಾಜಿ ಸಂಸದೆ ನಟಿ ರಮ್ಯಾ ಗೆ ಅಶ್ಲೀಲ ಮೆಸೇಜ್ ಮಾಡಿ ನಿಂದನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಸಿಬಿ ಪೊಲೀಸರು ಪ್ರಕರಣದ ತನಿಖೆಯನ್ನು ಮುಂದುವರೆಸಿದ್ದಾರೆ ಒಟ್ಟು 48 ಜನರ ಐಪಿ ಅಡ್ರೆಸ್ ಅನ್ನು ಸಿಸಿಬಿ ತಂಡ ಇದೀಗ ಪತ್ತೆ ಹಚ್ಚಿದೆ. ಈ ಬಗ್ಗೆ 15 ಜನರನ್ನು ಗುರುತಿಸಲಾಗಿದ್ದು ನಾಲ್ವರನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅಶ್ಲೀಲವಾಗಿ ಪೊಲೀಸರು ಕಮೆಂಟ್ ಮಾಡಿದವರಿಗೆ ಇದೀಗ ಬಿಸಿ ಮುಟ್ಟಿಸುತ್ತಿದ್ದಾರೆ. ಚಿಕ್ಕಮಂಗಳೂರು, ಚಿತ್ರದುರ್ಗ ಹಾಗೂ ಕೋಲಾರ ಭಾಗದವರೇ ಹೆಚ್ಚು ಅಶ್ಲೀಲವಾಗಿ ಮೆಸೇಜ್ ಮಾಡಿದ್ದಾರೆ. ಸಾಮಾನ್ಯವಾಗಿ ಕಮೆಂಟ್ ಮಾಡಿದವರಿಗೆ ಕರೆಸಿ…
ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು SIT ಅಧಿಕಾರಿಗಳು 11ನೇ ಪಾಯಿಂಟ್ ನಲ್ಲಿ ಉತ್ಖನನ ಆರಂಭಿಸಿದ್ದಾರೆ. ಈಗಾಗಲೇ ಒಂದರಿಂದ 10 ಹಾಗೂ 12 ಮತ್ತು 13 ನೇ ಪಾಯಿಂಟ್ನಲ್ಲಿ SIT ಅಧಿಕಾರಿಗಳು ಉತ್ಖನನ ನಡೆಸಿದ್ದಾರೆ. ಈಗಾಗಲೇ ದೂರುದಾರ ತೋರಿಸಿರುವ 6ನೇ ಪಾಯಿಂಟ್ ನಲ್ಲಿ ಅಸ್ತಿಪಂಜರದ ಕೆಲವು ಮೂಳೆಗಳು ದೊರೆತಿದ್ದು ಅವುಗಳನ್ನು FSL ಗೆ ಕಳುಹಿಸಲಾಗಿದೆ. ಆದರೆ FSL ಅಧಿಕಾರಿಗಳು ಈ ಒಂದು ಮೂಳೆಗಳ ಡಿಎನ್ಎ ಪರೀಕ್ಷೆ ಕಷ್ಟ ಸಾಧ್ಯ ಎನ್ನುತ್ತಿದ್ದಾರೆ ಏಕೆಂದರೆ 15 ವರ್ಷಗಳ ಹಿಂದೆ ನಡದಲ್ಲಿ ಬೂತು ಹಾಕಿದ್ದರಿಂದ ಮಣ್ಣಿನ ಲವಣಾಂಶಗಳು ದಿಂದ ಮೂಳೆಗಳ ಡಿಎನ್ಎ ನಾಶ ಆಗಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ಬೆಂಗಳೂರು : ವೇತನ ಪರಿಷ್ಕರಣೆ 4 ವರ್ಷಗಳಿಗೊಮ್ಮೆ ಆಗಬೇಕು ಅಂತಿದೆ. 2023ರಲ್ಲಿ ಅಂದಿನ ಬಿಜೆಪಿ ಸರ್ಕಾರ ಪರಿಷ್ಕರಣೆ ಮಾಡಿ ಆದೇಶ ಮಾಡಿದೆ. ಆದ್ರೆ ನೌಕರರು 4 ವರ್ಷಗಳ ಹಿಂಬಾಕಿ ಕೇಳುತ್ತಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ. ವೇತನ ಪರಿಷ್ಕರಣೆ 4 ವರ್ಷಕ್ಕೊಮ್ಮೆ ಆಗಬೇಕು ಅಂತಿದೆ. 2016 ರಲ್ಲಿ ನಮ್ಮ ಸರ್ಕಾರವೇ ಪರಿಷ್ಕರಣೆ ಮಾಡಿತ್ತು, 2020ರಲ್ಲಿ ಮಾಡಲಿಲ್ಲ. 2023ರಲ್ಲಿ ಅಂದಿನ ಬಿಜೆಪಿ ಸರ್ಕಾರ ಪರಿಷ್ಕರಣೆ ಮಾಡಿ ಆದೇಶ ಮಾಡಿದೆ. ಆದರೆ ನೌಕರರು ನಾಲ್ಕು ವರ್ಷದ ಬಾಕಿ ಕೇಳುತ್ತಿದ್ದಾರೆ. ಶ್ರೀನಿವಾಸ ಮೂರ್ತಿ ಕಮಿಟಿ 38 ತಿಂಗಳಿನ ಪರಿಷ್ಕರಣೆ ಪರಿಶೀಲಿಸಬಹುದು ಎಂದಿದ್ದು, 2023ರ ಪರಿಷ್ಕರಣೆ ಆದೇಶದಂತೆ ನೀಡಬೇಕು ಅಂದಿದೆ. ಹಾಗಾಗಿ ಆದೇಶದಲ್ಲೇ ಗೊಂದಲ ಇದೆ ಎಂದು ತಿಳಿಸಿದ್ದಾರೆ. ಇನ್ನೂ ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಸಂಚಾರದಲ್ಲಿ ಯಾವುದೇ ವ್ಯತ್ಯಾಸ ಆಗಿಲ್ಲ. ಉಳಿದ ಮೂರು ನಿಗಮಗಳಲ್ಲಿ 50% ಬಸ್ಗಳ ಸಂಚಾರ ಆಗುತ್ತಿದೆ. ಕೆಎಸ್ಆರ್ಟಿಸಿ ಸಂಚಾರವೂ ಪೂರ್ಣ ಪ್ರಮಾಣದಲ್ಲಿ ನಿಂತಿಲ್ಲ. ಅಲ್ಲೂ 50% ಬಸ್ಸುಗಳು ಸಂಚರಿಸುತ್ತಿವೆ. ವಿಚಾರ…
ಬೆಂಗಳೂರು : ಗ್ರಾಮ ಲೆಕ್ಕಿಗರಿಂದ (ವಿ.ಎ.) ಸಚಿವರವರೆಗೆ ಕಾಗದರಹಿತ ವ್ಯವಹಾರಕ್ಕಾಗಿ ಇ-ಕಚೇರಿ ಕಡ್ಡಾಯಗೊಳಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಸೋಮವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಬಹಳ ದಿನಗಳಿಂದ ವಿ.ಎ.ಗಳಿಗೆ ಸ್ವಂತ ಕಚೇರಿ ಇರಲಿಲ್ಲ. ಹೀಗಾಗಿ ಜನರಿಗೆ ವಿ.ಎ. ಸಿಗುತ್ತಿರಲಿಲ್ಲ. ಕಚೇರಿ ಇಲ್ಲದ ವಿ.ಎ.ಗಳಿಗೆ ಗ್ರಾಮ ಪಂಚಾಯತಿಯಲ್ಲೇ ಕೊಠಡಿ ಮಾಡಲು ತೀರ್ಮಾನಿಸಲಾಗಿದೆ. ಒಟ್ಟು 8,357 ವಿ.ಎ.ಗಳ ಪೈಕಿ 7,405 ವಿ.ಎ.ಗಳಿಗೆ ಕಚೇರಿ ಸೌಲಭ್ಯ ಮಾಡಿಕೊಟ್ಟಿದ್ದೇವೆ. ಇನ್ನೂ 952 ವಿ.ಎ.ಗಳಿಗೆ ಕಚೇರಿ ಆಗಬೇಕಿದ್ದು, ಪ್ರಕ್ರಿಯೆ ನಡೆಯುತ್ತಿದೆ ಎಂದರು. ಎಲ್ಲ ಗ್ರಾಮ ಲೆಕ್ಕಿಗರ ಕಚೇರಿಯಲ್ಲಿ ಇ-ಕಚೇರಿ ಅಳವಡಿಸಲು ತೀರ್ಮಾನಿಸಲಾಗಿದೆ. ನಾಲ್ಕು ತಿಂಗಳಲ್ಲಿ ಎಲ್ಲ ವಿ.ಎ.ಗಳಿಗೆ ಲ್ಯಾಪ್ಟಾಪ್ ಕೊಡುತ್ತೇವೆ. ಈಗಾಗಲೇ ಸುಮಾರು 4,000 ಲ್ಯಾಪ್ಟಾಪ್ಗಳನ್ನು ಕೊಟ್ಟಿದ್ದೇವೆ. ವಿ.ಎ.ಗಳಿಂದ ಹಿಡಿದು ಸಚಿವರವರೆಗೆ ಇ-ಕಚೇರಿ ಕಡ್ಡಾಯವಾಗಿ ಬಳಕೆ ಮಾಡಲು ತೀರ್ಮಾನಿಸಲಾಗಿದೆ. ಕಾಗದರಹಿತ ವಹಿವಾಟಿಗಾಗಿ ಒಂದು ತಿಂಗಳಲ್ಲಿ ಕಡ್ಡಾಯವಾಗಿ ಇ-ಕಚೇರಿ ಅಳವಡಿಕೆಗೆ ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಮಂಡ್ಯ :- ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸಾರಿಗೆ ಒಕ್ಕೂಟಗಳ ಜಂಟಿ ಕ್ರಿಯಾ ಸಮಿತಿ ಕರೆ ನೀಡಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮಂಡ್ಯ ಜಿಲ್ಲೆಯ ಸಾರಿಗೆ ಬಸ್ಗಳ ಸಂಚಾರ ಬಹುತೇಕ ಸಂಪೂರ್ಣ ಸ್ತಬ್ಧ ಸ್ತಬ್ಧಗೊಂಡಿದೆ. ಮಂಡ್ಯ ಜಿಲ್ಲೆಯ 7 ಘಟಕಗಳ ಚಾಲಕರು ಮತ್ತು ನಿರ್ವಾಹಕರು ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿ ಗೈರು ಹಾಜರಾಗಿರುವ ಪರಿಣಾಮ ಬೆಳಿಗ್ಗೆ 6 ಗಂಟೆಯಿಂದಲೇ ಬಸ್ ಸಂಚಾರ ಸ್ಥಗಿತಗೊಂಡಿದ ಹಿನ್ನೆಲೆಯಲ್ಲಿ ಪ್ರಯಾಣಿಕರು ತೊಂದರೆಗೀಡಾದರು. ಇದರಿಂದಾಗಿ ಸಾರ್ವಜನಿಕರ ಪ್ರಯಾಣಕ್ಕೆ ತೀವ್ರ ತೊಂದರೆ ಉಂಟಾಗಿದ್ದು, ಸಾರಿಗೆ ಬಸ್ಗಳನ್ನೇ ಅವಲಂಬಿಸಿರುವ ಜನರು ಕೆಲಸ ಕಾರ್ಯಗಳಿಗೆ ಹಾಗೂ ಶಾಲಾ, ಕಾಲೇಜುಗಳಿಗೆ ಹೋಗಲು ಪರದಾಡುವಂತಾಗಿದೆ. ಅನಿರ್ದಿಷ್ಟಾವಧಿ ಪ್ರತಿಭಟನೆ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಸಾರಿಗೆ ಅಧಿಕಾರಿಗಳು ಮದ್ದೂರು ಘಟಕದ ವತಿಯಿಂದ 5 ಮಂದಿ ಖಾಸಗಿ ಚಾಲಕರನ್ನು ನೇಮಕ ಮಾಡಿಕೊಂಡು ಬಸ್ ಚಾಲನೆಗೆ ಮುಂದಾಗಿದ್ದರು. ಆದರೆ, ನಿರ್ವಾಹಕರು ಗೈರು ಹಾಜರಾಗಿರುವ ಕಾರಣ ಟಿಕೇಟ್ ವಿತರಣೆ ಮಾಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಖಾಸಗಿ ಚಾಲಕರು…
BREAKING : ಚಿಕ್ಕಮಗಳೂರು ಜಿಲ್ಲೆಯಲ್ಲಿ ಭೀಕರವಾದ ಅಪಘಾತ ಸಂಭಾವಿಸಿದ್ದು, ಕೆಎಸ್ಆರ್ಟಿಸಿ ಬಸ್ ಹಾಜಿಜ್ ಕ್ಯಾಂಟರ್ ಮುಖಾಮುಖಿ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ತರೀಕೆರೆ ತಾಲೂಕಿನ ಶಿವಪುರ ಗೇಟ್ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಶಿವಪುರನಲ್ಲಿ ನಿದ್ದೆಯ ಮಂಪರಿನಲ್ಲಿ ಕ್ಯಾಂಟರ್ ಚಾಲಕ ಬಸ್ಸಿಗೆ ಡಿಕ್ಕಿ ಹೊಡೆದಿದ್ದಾನೆ. ಕ್ಯಾಟರ್ ಚಾಲಕ ಮತ್ತು ಕ್ಲೀನರ್ ಸ್ಥಳದಲ್ಲಿ ಸಾವನಪ್ಪಿದ್ದಾರೆ. ಹುಬ್ಬಳ್ಳಿಯಿಂದ ಕ್ಯಾಂಟರ್ ವಾಹನ ಮೈಸೂರಿಗೆ ತಿರುಳುತ್ತಿತ್ತು ಕಡೂರಿನಿಂದ ಕೆಎಸ್ಆರ್ಟಿಸಿ ಬಸ್ ಹೂವಿನಹಡಗಲಿಗೆ ತೆರಳುತ್ತಿತ್ತು. ಮೃತಪಟ್ಟ ಇಬ್ಬರನ್ನು ಹುಬ್ಬಳ್ಳಿ ಮೂಲದ ಚಾಲಕ ಕ್ಲೀನರ್ ಎಂದು ತಿಳಿದುಬಂದಿದೆ. ಬೀರೂರು ಪೊಲೀಸ್ ಠಾಣೆಯಲ್ಲಿ ಅಪಘಾತ ಕುರಿತು ಪ್ರಕರಣ ದಾಖಲಾಗಿದೆ.
ಕೊಪ್ಪಳ / ತುಮಕೂರು : ಇಂದು ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ಹಮ್ಮಿಕೊಂಡಿದ್ದಾರೆ. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮುಷ್ಕರ ಹಮ್ಮಿಕೊಂಡಿದ್ದು, ಇದರಿಂದ ಇಡೀ ರಾಜ್ಯದ ಜನತೆಗೆ ದೊಡ್ ಹೊಡೆತ ಬಿದ್ದಿದೆ. ಪ್ರಯಾಣಿಕರು ತಮ್ಮ ಊರುಗಳಿಗೆ ತೆರಳಲು ಪರದಾಟ ನಡೆಸುತ್ತಿದ್ದರು. ಇದೀಗ ತುಮಕೂರು ಮತ್ತು ಕೊಪ್ಪಳ ವಿಶ್ವವಿದ್ಯಾಲಯ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಹೌದು ಸಾರಿಗೆ ಮುಷ್ಕರ ಹಿನ್ನೆಲೆಯಲ್ಲಿ ತುಮಕೂರು ವಿಶ್ವವಿದ್ಯಾಲಯ ಪರೀಕ್ಷೆಯನ್ನು ಮುಂದೂಡಲಾಗಿದೆ. ಇಂದು ನಡೆಯಬೇಕಿದ್ದ ಪರೀಕ್ಷೆಯನ್ನು ವಿಶ್ವವಿದ್ಯಾಲಯ ಮುಂದೂಡಿದೆ. ಸ್ನಾತಕ ಪೂರ್ವ ಹಾಗೂ ಸ್ನಾತಕೋತ್ತರ ಪರೀಕ್ಷೆಯನ್ನು ವಿಶ್ವವಿದ್ಯಾಲಯ ಮುಂದೂಡಿದೆ. ಅದೇ ರೀತಿಯಾಗಿ ಕೊಪ್ಪಳ ವಿಶ್ವವಿದ್ಯಾಲಯ ಕೂಡ ಸ್ನಾತ್ತಕೋತ್ತರ ಪರೀಕ್ಷೆ ಮುಂದೂಡಿದೆ. ಈ ಕುರಿತು ಕೊಪ್ಪಳ ವಿಶ್ವವಿದ್ಯಾಲಯ ಕುಲಪತಿ ಬಿಕೆ ರವಿ ಮಾಹಿತಿ ನೀಡಿದ್ದು ಪರೀಕ್ಷೆ ಮುಂದುವಂತೆ ವಿದ್ಯಾರ್ಥಿಗಳು ಒತ್ತಾಯ ಮಾಡಿದ್ದರು. ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಪರೀಕ್ಷೆ ನೋಡಲಾಗಿದೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ತಳಕಲ್ ನಲ್ಲಿ ಇರುವ ವಿಶ್ವವಿದ್ಯಾಲಯದಲ್ಲಿ ಸ್ನಾತ್ತಕೋತ್ತರ ಪರೀಕ್ಷೆ ಮುಂದೂಡಿದ್ದು, ಪರೀಕ್ಷಾ ದಿನಾಂಕ ಶೀಘ್ರ ತಿಳಿಸುವುದಾಗಿ…