Subscribe to Updates
Get the latest creative news from FooBar about art, design and business.
Author: kannadanewsnow05
ಹಾವೇರಿ : ಕರ್ತವ್ಯ ಲೋಪ ಹಿನ್ನಲೆ ಹಾವೇರಿ ಜಿಲ್ಲೆಯ ಗುತ್ತಲ ಠಾಣೆ ಪಿಎಸ್ಐ ಬಸನಗೌಡ ಬಿರಾದರ ಅಮಾನತುಗೊಳಿಸಿ ದಾವಣಗೆರೆ ಪೂರ್ವ ವಲಯ ಐಜಿಪಿ ಡಾ. ರವಿಕಾಂತ್ ಗೌಡ ಆದೇಶ ಹೊರಡಿಸಿದ್ದಾರೆ. ಗುತ್ತಲ ಪಟ್ಟಣದಲ್ಲಿ ಮಟ್ಕಾ ರಾಜಾರೋಷವಾಗಿ ನಡೆಯುತ್ತಿತ್ತು. ಮೂರು ದಿನಗಳ ಹಿಂದೆ ಗುತ್ತಲ ಪಟ್ಟಣಕ್ಕೆ ರುದ್ರಪ್ಪ ಲವಾಣಿ ಭೇಟಿ ನೀಡಿದ್ದರು. ವಿವಿಧ ಕಾಮಗಾರಿಗಳ ಉದ್ಘಾಟನೆಗೆ ರುದ್ರಪ್ಪ ಲಮಾಣಿ ಆಗಮಿಸಿದ್ದರು. ಆರೋಪಿಯನ್ನು ಹಿಡಿದು ಪೊಲೀಸರಿಗೆ ರುದ್ರಪ ಲಮಾಣಿ ಒಪ್ಪಿಸಿದ್ದಾರೆ. ಮಟ್ಕಾ ದಂದೇ ಕೋರರನ್ನು ಹಿಡಿಯಲು ಶಾಸಕರೇ ಬರಬೇಕಾಯಿತು ಎಂದು ಪೊಲೀಸರ ವಿರುದ್ಧ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ: ಅಪ್ರಾಪ್ತ ವಯಸ್ಸಿನ ದಿವ್ಯಾಂಗ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಗೆ 40 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ಒಂದೂವರೆ ಲಕ್ಷ ರೂಪಾಯಿ ದಂಡ ವಿಧಿಸಿ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಶೇಷ ತ್ವರಿತ ಪೋಕ್ಸೋ ನ್ಯಾಯಾಲಯ ಬುಧವಾರ ತೀರ್ಪು ಪ್ರಕಟಿಸಿದೆ. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸಿ.ಎಮ್. ಪುಷ್ಪಲತಾ ಅವರು ಒಟ್ಟು 8 ಸಾಕ್ಷಿಗಳ ವಿಚಾರಣೆ ಮಾಡಿ, 58 ದಾಖಲೆಗಳು, 7 ಮುದ್ದೆಮಾಲುಗಳ ಆಧಾರದ ಮೇಲಿಂದ ಆರೋಪಿ ಧರೇಪ್ಪ ಖನಸೆ ಮೇಲಿನ ಆಪಾದನೆ ಸಾಬೀತಾಗಿದೆ ಎಂದು ತೀರ್ಪು ನೀಡಿದ್ದರು. ಜೊತೆಗೆ ಆರೋಪಿತನಿಗೆ ಕಲಂ: 6 ಪೋಕ್ಸೋ ಕಾಯ್ದೆ-2012 ರಡಿ 30 ವರ್ಷಗಳ ಕಾರಾಗೃಹ ಶಿಕ್ಷೆ ಮತ್ತು ಒಂದು ಲಕ್ಷ ರೂ. ದಂಡ ಮತ್ತು ದಂಡದ ಮೊತ್ತ ತುಂಬಲು ತಪ್ಪಿದಲ್ಲಿ 2 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ, ಹಾಗೂ ಕಲಂ 3(1) (w) (i) (ii), 3(2)(v) ಎಸ್ಸಿ/ಎಸ್ಟಿ ಸೆಕ್ಷನ್ ಅಡಿಯಲ್ಲಿ 10 ವರ್ಷ ಕಾರಾಗೃಹ ಶಿಕ್ಷೆ, 50…
ಒಬ್ಬ ಯುವಕನಿಗೆ ಬದುಕೇ ಬೇಸರವಾಗಿತ್ತು. ಯಾವುದರಲ್ಲೂ ಆಸಕ್ತಿಇಲ್ಲ. ಒಂಥರಾ ಖಿನ್ನತೆ. ಮನೆಯಲ್ಲಿ ಒಬ್ಬನೇ ಕುಳಿತಿರುತ್ತಿದ್ದ. ಸ್ನೇಹಿತರ ಜತೆಗೆ ಬೆರೆಯುವುದು ಕೂಡಾ ಬೇಡ ಅನಿಸುತ್ತಿತ್ತು. ಒಂದು ದಿನ ಆ ಊರಿಗೆ ಒಬ್ಬ ಗುರುಗಳು ಬಂದಿದ್ದಾರೆ ಎನ್ನುವ ಸುದ್ದಿ ಅವನಿಗೆ ಗೊತ್ತಾಯಿತು. ತನ್ನ ಸಮಸ್ಯೆಗೆ ಅವರ ಬಳಿ ಏನಾದರೂ ಪರಿಹಾರ ಇರಬಹುದಾ ಎಂದು ಯೋಚಿಸಿದ. ಯುವಕ ಗುರುಗಳ ಬಳಿಗೆ ಹೋಗಿ, ʻʻಜೀವನದಲ್ಲಿ ನನಗೆ ಹಲವಾರು ಸಮಸ್ಯೆಗಳಿವೆ. ಹಾಗಾಗಿ ಸದಾ ಬೇಸರದಲ್ಲಿ ಕಾಲ ಕಳೆಯುತ್ತಿದ್ದೇನೆ. ನಾನು ಎಲ್ಲರ ಹಾಗೆ ಸಂತೋಷವಾಗಿರೋದು ಹೇಗೆ? ದಯವಿಟ್ಟು ನನ್ನ ಸಮಸ್ಯೆಗೆ ಪರಿಹಾರ ತಿಳಿಸಿʼʼ ಎಂದು ಕೇಳಿದ. ಗುರುಗಳು ಯುವಕ ಹೇಳಿದ್ದೆಲ್ಲವನ್ನೂ ಗಮನವಿಟ್ಟು ಕೇಳಿದರು. ಆದರೆ, ಏನೂ ಉತ್ತರ ನೀಡದೆ ಎದ್ದು ಒಳಗೆ ನಡೆದರು. ಯುವಕನಿಗೆ ಗೊಂದಲವಾಯಿತು. ʻʻನಾನೇನೋ ಇವರಾದರೂ ಪರಿಹಾರ ಹೇಳುತ್ತಾರೆ ಎಂದು ಇಲ್ಲಿಗೆ ಬಂದರೆ ಏನೂ ಹೇಳದೆ ಒಳಗೆ ಹೋಗಿಬಿಟ್ಟರಲ್ಲʼʼ ಅಂತ ಮನಸ್ಸಿನೊಳಗೇ ಹೇಳಿಕೊಂಡ. ಅಷ್ಟು ಹೊತ್ತಿಗೆ ಗುರುಗಳು ಹೊರಗೆ ಬಂದರು. ಅವರ ಒಂದು ಕೈಯಲ್ಲಿ ಒಂದು ಲೋಟ…
ಮಂಡ್ಯ : ಮಂಡ್ಯದ PWD ಕಚೇರಿಯ AEE ಸತೀಶ್ ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಸತೀಶ್ ಮೇಲೆ ಭ್ರಷ್ಟಾಚಾರದ ಆರೋಪ ಕೇಳಿ ಬಂದಿತ್ತು. ದೂರು ಬಂದ ಹಿನ್ನೆಲೆ ಮಂಡ್ಯದ ಲೋಕಾಯುಕ್ತ ಪೊಲೀಸರಿಂದ ದಾಳಿ ನಡೆದಿದೆ. ಲೋಕಾಯುಕ್ತ ಎಸ್ಪಿ ಸುರೇಶ್ ಬಾಬು ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಸತೀಶ್ಗೆ ಸೇರಿದ ಮನೆ, ಕಚೇರಿ, ಪತ್ನಿಯ ತವರು ಮನೆಗಳ ಮೇಲೆ ಏಕಾ ಕಾಲದಲ್ಲಿ ದಾಳಿ. ದಾಖಲೆಗಳನ್ನ ಪರಿಶೀಲಿಸುತ್ತಿರುವ ಪೊಲೀಸರು. ಸತೀಶ್ ಮಂಡ್ಯದ PWD ಕಚೇರಿಯ AEE ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸತೀಶ್ಗೆ ಸೇರಿದ ಮನೆಗಳು, ಕಚೇರಿ, ಪತ್ನಿಯ ತವರು ಮನೆಗಳ ಮೇಲೆ ಏಕಾ ಕಾಲದಲ್ಲಿ ದಾಳಿ ನಡೆಸಲಾಗಿದೆ. ದಾಖಲೆಗಳನ್ನ ಪರಿಶೀಲಿಸುತ್ತಿರುವ ಲೋಕಾಯುಕ್ತ ಪೊಲೀಸರು. ಬಂದೀಗೌಡ ಬಡಾವಣೆಯಲ್ಲಿರುವ ಬಾಡಿಗೆ ಮನೆ, ಮರೀಗೌಡ ಬಡಾವಣೆಯಲ್ಲಿರುವ ತಂದೆ ಮನೆ, ಕಚೇರಿ, ಪತ್ನಿಯ ತವರು ಮನೆ ಮೇಲೆ ದಾಳಿ, ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.
ಬೆಂಗಳೂರು : ರಾಜ್ಯದಲ್ಲಿ ಇದೀಗ ಮತ್ತೊಂದು ದರೋಡೆ ನಡೆದಿದ್ದು, ನಾಲ್ಕು ಬೈಕ್ ನಲ್ಲಿ ಬಂದ ಗ್ಯಾಂಗ್ ಒಂದು ಸೀನಿಮಿಯ ರೀತಿಯಲ್ಲಿ ವ್ಯಕ್ತಿಯ ಮೇಲೆ ಹಲ್ಲೆ ಮಾಡಿ 20 ಲಕ್ಷ ದರೋಡೆ ಮಾಡಿದ್ದಾರೆ. ಬೆಂಗಳೂರಿನ ಯಲಹಂಕದಿಂದ ದೇವನಹಳ್ಳಿಗೆ ತೆರಳುವಾಗ ಈ ಒಂದು ಕೃತ್ಯ ನಡೆದಿದೆ. ನಾಲ್ಕು ಬೈಕ್ಗಳಲ್ಲಿ ಬಂದಿದ್ದ ಗ್ಯಾಂಗ್ನಿಂದ ದೊಣ್ಣೆಗಳಿಂದ ಹಲ್ಲೆ ನಡೆದಿದೆ. ಆಂಧ್ರಪ್ರದೇಶದ ವಿಶ್ವ ಪ್ರಸಾದ್ ಆತನ ಜೊತೆಗಿದ್ದ ವ್ಯಕ್ತಿ ಮೇಲೆ ಹಲ್ಲೆ ನಡೆಸಿದ್ದಾರೆ. 20 ಲಕ್ಷ ಹಣ ದೊಂದಿಗೆ ದರೋಡೆಕೋರರು ಪರಾರಿಯಾಗಿದ್ದಾರೆ. ದೇವನಹಳ್ಳಿಯ ವಿಜಯಪುರ ಪೊಲೀಸ್ರಿಂದ ಕಳ್ಳರ ಹುಡುಕಾಟ ನಡೆಯುತ್ತಿದೆ. ದೇವನಹಳ್ಳಿ ತಾಲೂಕಿನ ವೆಂಕಟಗಿರಿ ವೆಂಕಟಗಿರಿ ಕೋಟೆಯ ರಾಷ್ಟ್ರೀಯ ಹೆದ್ದಾರಿ 47ರ ಬಳಿ ಇರುವ ಖಾಸಗಿ ಲೇಔಟ್ ನಲ್ಲಿ ಈ ಒಂದು ಘಟನೆ ನಡೆದಿದೆ.
ಬೆಂಗಳೂರು : ಪಾನಿಯಗಳಲ್ಲಿ ಹಾನಿಕಾರಕ ಅಂಶ ಪತ್ತೆ ಹಿನ್ನೆಲೆಯಲ್ಲಿ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಲ್ಲಿ ಸ್ವಯಂ ಪ್ರೇರಿತ ದೂರು ದಾಖಲಾಗಿದೆ. ಜ್ಯೂಸ್ ಮಾದರಿಯ ‘Buzz Ballz’ ನಲ್ಲಿ ಅಪಾಯಕಾರಿ ಅಂಶ ಪತ್ತೆಯಾಗಿದೆ. ಈ ಒಂದು ತಂಪು ಪಾನೀಯದಲ್ಲಿ ವಿಷಕಾರಿ ಅಂಶ ಪತ್ತೆಯಾಗಿದೆ. ತಂಪು ಪಾನೀಯದಲ್ಲಿ ಅಧಿಕ ಸಕ್ಕರೆ ಮಟ್ಟ ಇದ್ದು, ಶೇಕಡ 15ರಷ್ಟು ಆಲ್ಕೋಹಾಲ್ ಅಂಶ ಇದೆ ಎಂದು ಆರೋಪ ಕೇಳಿ ಬಂದಿದೆ. ಟಿನ್ ರೂಪದಲ್ಲಿ ಈ ಒಂದು ಡ್ರಿಂಕ್ಸ್ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿದೆ. ಶಾಲಾ ಕಾಲೇಜಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಮಾರಾಟ ಮಾಡಲಾಗುತ್ತಿದೆ. ಹಾಗಾಗಿ ಮಕ್ಕಳ ಆಯೋಗದಲ್ಲಿ ಸ್ವಯಂ ಪ್ರೇರಿತ ದೂರು ದಾಖಲಾಗಿದ್ದು ಸೋಶಿಯಲ್ ಮೀಡಿಯಾದಲ್ಲಿ ಬಂದಂತಹ ವರದಿಯನ್ನು ಆಧರಿಸಿಕೊಂಡು ದೂರು ದಾಖಲಿಸಿಕೊಂಡಿದ್ದು, ಔಷದ ನಿಯಂತ್ರಣ ಇಲಾಖೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಪತ್ರ ಬರೆದಿದ್ದು, ಮುಕ್ತವಾಗಿ ಮಾರಾಟ ಮಾಡಲು ಅವಕಾಶ ನೀಡಿದಂತೆ ಪತ್ರ ಬರೆದಿದೆ. Gemini said ‘ಬಜ್ ಬಾಲ್ಸ್’ (BuzzBallz) ಎಂಬ ರೆಡಿ-ಟು-ಡ್ರಿಂಕ್ ಕಾಕ್ಟೈಲ್ ಪಾನೀಯಕ್ಕೆ ಸಂಬಂಧಿಸಿದಂತೆ ಇತ್ತೀಚಿನ…
ಬೆಳಗಾವಿ : ಇರಾನ್ ಇಸ್ರೇಲ್ ಯುದ್ಧದ ಸಂಘರ್ಷದ ಹಿನ್ನೆಲೆಯಲ್ಲಿ ಇದೀಗ ಬೆಳಗಾವಿಯ ಸಾಮ್ರಾ ವಿಮಾನ ನಿಲ್ದಾಣವನ್ನು ರೆಡ್ ಝೋನ್ ಎಂದು ಘೋಷಿಸಲಾಗಿದೆ. ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ (DGCA) ಮಾರ್ಗಸೂಚಿಯಂತೆ ಈ ಕ್ರಮ ಕೈಗೊಳ್ಳಲಾಗಿದೆ. ಹೌದು ಇರಾನ್-ಇಸ್ರೇಕ್ ಸಂಘರ್ಷದ ಬಿಸಿ ಹಿಂದೂ ಮಹಾಸಾಗರಕ್ಕೂ ತಟ್ಟಿದ್ದಾಯ್ತು. ಇದೀಗ ಮುನ್ನೆಚ್ಚರಿಕಾ ಕ್ರಮವಾಗಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣವನ್ನು ‘ರೆಡ್ ಝೋನ್’ ಎಂದು ಘೋಷಿಸಲಾಗಿದೆ. ಅಲ್ಲದೆ, ಏರ್ಪೋರ್ಟ್ ಸುತ್ತಲಿನ 8 ಕಿಲೋಮೀಟರ್ ವ್ಯಾಪ್ತಿಯಲ್ಲಿ ಡ್ರೋನ್ ಹಾರಾಟ ನಿಷೇಧಿಸಲಾಗಿದೆ. ಉಲ್ಲಂಘಿಸಿದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿ ನಗರದ ಸಾಂಬ್ರಾ ವಿಮಾನ ನಿಲ್ದಾಣವನ್ನು ಹಾಗೂ ನಿಲ್ದಾಣದ ಸುತ್ತಮುತ್ತಲಿನ 08 ಕಿಲೋಮೀಟರ್ ವ್ಯಾಪ್ತಿಯನ್ನು ನಾಗರಿಕ ವಿಮಾನಯಾನ ಮಹಾ ನಿರ್ದೇಶಕರು (DGCA) ಈಗಾಗಲೇ ರೆಡ್ ಜೋನ್ ಎಂದು ಘೋಷಿಸಿರುತ್ತಾರೆ. ವಿಮಾನ ನಿಲ್ದಾಣದ ಸುತ್ತಮುತ್ತಲಿನ 08 ಕಿಲೋಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಪ್ರೋನ್ /ಅನ್ಮ್ಯಾನಡ್ ಏರಿಯಲ್ ವಾಹನ ಹಾರಾಟವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
ಬೆಂಗಳೂರು : ಮನೆ ಖಾಲಿ ಮಾಡುವ ವಿಚಾರಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ ಹತ್ಯೆಗೈದಿದ್ದ ಆರೋಪಿಯನ್ನು ವಿವೇಕ್ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇನಾಯತ್ ಪಾಷಾ ಎಂಬಾತನನ್ನು ಹತ್ಯೆಗೈದಿದ್ದ ಆರೋಪದಡಿ ಮಸ್ರೂರ್ ಅಹಮದ್ ಎಂಬವನನ್ನು ಬಂಧಿಸಲಾಗಿದೆ. ಮಾರ್ಚ್ 1ರಂದು ರಾತ್ರಿ ಆಸ್ಟಿನ್ ಟೌನ್ನಲ್ಲಿ ಇನಾಯತ್ ಪಾಷಾನ ಹತ್ಯೆಯಾಗಿತ್ತು. ಒಂಟಿಯಾಗಿದ್ದ ಇನಾಯತ್ ಪಾಷಾ, ಕಳೆದ 11 ವರ್ಷಗಳಿಂದ ಬೆಂಗಳೂರಿನ ವಿವೇಕ ನಗರದ ಆಸ್ಟಿನ್ ಟೌನ್ನಲ್ಲಿ ತನ್ನ ಮಾವನ ಮನೆಯಲ್ಲಿ ಇನಾಯತ್ ವಾಸವಾಗಿದ್ದ. ಇತ್ತೀಚಿಗೆ ಕೌಟುಂಬಿಕ ಕಲಹದಿಂದಾಗಿ ಇನಾಯತ್ಗೆ ಡಿವೋರ್ಸ್ ಆಗಿತ್ತು. ಬಳಿಕ ಒಂಟಿಯಾಗಿ ವಾಸವಿದ್ದ. ಆದರೆ ಈಗೀಗ ಮಾವ ಮಸೂರ್ ಅಹ್ಮದ್ ಮನೆ ಖಾಲಿ ಮಾಡುವಂತೆ ಇನಾಯತ್ಗೆ ಕಿರುಕುಳ ನೀಡೋಕೆ ಶುರು ಮಾಡಿದ್ದ. ಕಳೆದ ಭಾನುವಾರ ಮನೆಗೆ ಬಂದ ಇನಾಯತ್ ಮಾವ ಮಸೂರ್ ಅಹ್ಮದ್ ಇದೇ ವಿಚಾರಕ್ಕೆ ಗಲಾಟೆ ಮಾಡಿದ್ದಾರೆ. ಇಬ್ಬರು ಕೂಡ ಪರಸ್ಪರ ಜೋರು ಗಲಾಟೆ ಮಾಡ್ಕೊಂಡು, ಹೊಡೆದಾಡಿದ್ದಾರೆ. ಈ ಗಲಾಟೆಯಲ್ಲಿ ಇನಾಯತ್ಗೆ ಹಿಗ್ಗಾಮುಗ್ಗ ಥಳಿಸಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದ. ತಕ್ಷಣ…
ಬೆಂಗಳೂರು : ಕೆಪಿಎಸ್ಸಿ ಪರೀಕ್ಷೆ ಫಲಿತಾಂಶದಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಕೆಪಿಎಸ್ಸಿ ಕಾರ್ಯದರ್ಶಿ ಜ್ಯೋತಿ ಸ್ಪಷ್ಟಿಕರಣ ಕೊಟ್ಟಿದ್ದಾರೆ. ಪರೀಕ್ಷೆಯನ್ನು ಅತಂತ್ರ ಪಾರದರ್ಶಕವಾಗಿ ನಡೆಸಿದ್ದು ಫಲಿತಾಂಶವನ್ನು ಸಹ ಬಿಡುಗಡೆ ಮಾಡಲಾಗಿದೆ ಆಧಾರದ ಇಲ್ಲದೆ ಭ್ರಷ್ಟಾಚಾರ ಆರೋಪ ಮಾಡಲು ಸರಿಯಲ್ಲ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ವರದಿ ಕೇಳಿದ್ದಾರೆ ಇನ್ನೆರಡು ದಿನಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಲಿದ್ದೇವೆ. ಫಲಿತಾಂಶದ ಕುರಿತು ಹಲವಾರು ಜನ ತುಂಬಾ ತಪ್ಪುಗಳು ನಡೆದಿದೆ ಎಂದು ಹೇಳುತ್ತಿದ್ದಾರೆ. ಈ ಕುರಿತು ಮುಖ್ಯ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೇವೆ. ಯಾವುದೇ ತಪ್ಪುಗಳು ಇದರಲ್ಲಿ ನಡೆದಿಲ್ಲ. ಮಾಹಿತಿಯನ್ನು ಅರ್ಥ ಮಾಡಿಕೊಳ್ಳುವರಲ್ಲಿ ಸ್ವಲ್ಪ ಗೊಂದಲಕ್ಕೆ ಈಡಾಗಿದ್ದಾರೆ. ಯಾವುದೇ ಮಾಹಿತಿ ಇದ್ದರೂ ಕೂಡ ಅವರು ನಮ್ಮನ್ನು ಕೇಳಬಹುದು ನಾವು ಅದನ್ನು ಪರಿಶೀಲನೆ ಮಾಡಿ ಅವರಿಗೆ ಉತ್ತರ ಕೊಡುತ್ತೇವೆ. ಒಂದೇ ಕೊಠಡಿಯಲ್ಲಿ ಇರುವವರು 15, 16 ಜನ ಆಯ್ಕೆ ಮಾಡಿದ್ದಾರೆ ಎನ್ನುವುದು ಅದನ್ನು ಕೂಡ ನಾವು ಆಂತರಿಕವಾಗಿ ಪರಿಶೀಲನೆ ಮಾಡುತ್ತಿದ್ದಾರೆ. ಒಂದೇ ಪರೀಕ್ಷೆ ಕೇಂದ್ರದಿಂದ…
ಬಿಹಾರ್ : ಬಿಹಾರದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಪೂರ್ವ ಚಂಪಾರಣ್ ಜಿಲ್ಲೆಯ ಗ್ರಾಮವೊಂದರಲ್ಲಿ ನೀರು ತುಂಬಿದ ಹೊಂಡದಲ್ಲಿ ಸ್ನಾನ ಮಾಡಲು ಹೋಗಿ ಐವರು ಬಾಲಕಿಯರು ಸೇರಿ ಆರು ಮಕ್ಕಳು ಮುಳುಗಿ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತರನ್ನು ದೀಕ್ಷಾ ಕುಮಾರಿ(12), ಆರಾಯಾಧ್ಯ ಕುಮಾರಿ(11), ಚೋಟಿ ಕುಮಾರಿ(8), ಸೋನಾಕ್ಷಿ ಕುಮಾರಿ(9), ಪ್ರಿಯಾ ಕುಮಾರಿ(7) ಹಾಗೂ ಪ್ರಿನ್ಸ್ ಕುಮಾರ್(11) ಎಂದು ಗುರುತಿಸಲಾಗಿದೆ.ಪೂರ್ವ ಚಂಪಾರಣ್ ಜಿಲ್ಲೆಯ ಕೇಸರಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಲೋಹರ್ಗವ ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದೆ. ಸ್ನಾನ ಮಾಡಲು ಓರ್ವ ಬಾಲಕಿ ಮೊದಲು ಹೊಂಡಕ್ಕೆ ಇಳಿದು ಮುಳುಗಿದಾಗ, ಆಕೆಯನ್ನು ಕಾಪಾಡಲು ಉಳಿದ ಬಾಲಕಿಯರು ಸಹ ನೀರಿ ಹಾರಿ ಮುಳುಗಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದು, ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.














