Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ನಂದಿ ಬೆಟ್ಟದಲ್ಲಿ 2 ಭಾರತೀಯ ಮೀಸಲು ಪಡೆ ಆರಂಭಕ್ಕೆ ಒಪ್ಪಿಗೆ ನೀಡಲಾಗಿದೆ. ರಾಜ್ಯದ ಶಾಂತಿ ಸುವ್ಯವಸ್ಥೆ ಕಾಡುವುದು ಪೊಲೀಸರ ಕರ್ತವ್ಯವಾಗಿದೆ ಎಂದು ಪೊಲೀಸ್ ಸಂಸ್ಮರಣ ದಿನಾಚರಣೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಬೆಂಗಳೂರು ಮೈಸೂರು ರಸ್ತೆಯ ಸಿ ಇ ಆರ್ ಕೇಂದ್ರದಲ್ಲಿ ಈ ಒಂದು ಕಾರ್ಯಕ್ರಮ ಆಯೋಜನೆ ಮಾಡಿದ್ದು, ಕರ್ತವ್ಯದ ವೇಳೆ ಅನೇಕ ಪೊಲೀಸರು ಗಾಯಗೊಂಡಿದ್ದಾರೆ. ಗಾಯಗೊಂಡ ಪೊಲೀಸ್ರಿಗೆ ರಾಜ್ಯ ಸರ್ಕಾರ ನೆರವು ನೀಡಲಿದೆ. ಹಿಂಸಾಚಾರ, ನೈತಿಕ ಪೊಲೀಸ್ ಗಿರಿ ತಡೆಗೆ ಸ್ಪೆಷಲ್ ಆಕ್ಷನ್ ಫೋರ್ಸ್ ಜಾರಿ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಗಲಭೆ ಕಡಿಮೆಯಾಗಿದೆ. ಹಾಗಾಗಿ ಪೊಲೀಸರಿಗೆ ಅಭಿನಂದನೆ ಹೇಳುತ್ತೇನೆ ಎಂದರು. ನಂದಿ ಬೆಟ್ಟದಲ್ಲಿ ಎರಡು ಭಾರತೀಯ ಮೀಸಲು ಪಡೆ ಆರಂಭಕ್ಕೆ ಒಪ್ಪಿಗೆ ನೀಡಲಾಗಿದೆ. ನಾಗರೀಕರಿಗಾಗಿ ಮನೆ ಮನೆಗೆ ಪೊಲೀಸ್ ಜಾರಿ ಮಾಡಿದ್ದೇವೆ. ಎಸ್ ಸಿ, ಎಸ್ ಟಿ ಜನರ ರಕ್ಷಣೆಗೆ ಡಿಸಿಆರ್ಎ ಠಾಣೆ ತೆರೆದಿದ್ದೇವೆ. ನಿವೃತ್ತ ಪೊಲೀಸ್ ಅಧಿಕಾರಿ ಸಿಬ್ಬಂದಿ ಗಾಗಿ 10…
ಬೆಂಗಳೂರು : ರಾಜ್ಯದಲ್ಲಿ ಇನ್ನು ನಾಲ್ಕು ದಿನ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ 4 ದಿನ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಹವಾಮಾನ ಇಲಾಖೇ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಹೀಗಾಗಿ ರಾಜ್ಯದಲ್ಲಿ ಅಕ್ಟೋಬರ್ 25 ರವರಗೆ ಮಳೆ ಸುರಿಯುವ ಸಾಧ್ಯತೆಯಿದೆ. ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಸಂಜೆ ನಂತರ ಗುಡುಗು ಸಹಿತ ಮಳೆ ಸಾಧ್ಯತೆ ಇದ್ದು ಗಂಟೆಗೆ 30-40ಕಿ.ಮೀ ವೇಗದಲ್ಲಿ ಗಾಳಿ ಸಹಿತ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇನ್ನು ದಕ್ಷಿಣ, ಉತ್ತದ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಗಂಟೆಗೆ 55 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ
ಕೋಲಾರ : ಕೋಲಾರದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯಣ್ಣು ಬರ್ಬರವಾಗಿ ಕೊಲೆ ಮಾಡಲಾಗಿದೆ. ಕೋಲಾರ ತಾಲೂಕಿನ ರಾಷ್ಟ್ರೀಯ ಹೆದಾರಿ 75 ರ ಕೆಂದಟ್ಟಿ ಬಳಿ ಈ ಒಂದು ಭೀಕರ ಕೊಲೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಬಂಗಾರಪೇಟೆ ತಾಲೂಕಿನ ಎಳೆಸಂದ್ರ ಗ್ರಾಮದ (26) ಕೊಲೆಯಾದ ವ್ಯಕ್ತಿಯನ್ನು ತಿಳಿದು ಬಂದಿದೆ ಕೊಲೆ ಮಾಡಿ ಆಟೋದಲ್ಲಿ ಶವ ಬೀಸಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕೊಲೆಗೆ ಇನ್ನೂ ನಿಖರವಾದ ಕಾರಣ ತಿಳಿದು ಬಂದಿಲ್ಲ. ಘಟನೆ ಕುರಿತಂತೆ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಪಟಾಕಿ ಕಿಡಿ ತಗುಲಿದಕ್ಕೆ ಮಾರಕಾಸ್ತ್ರ ತೋರಿಸಿ ಬೆದರಿಕೆ ಹಾಕಲಾಗಿದೆ. ಪಟಾಕಿಯ ವಿಚಾರಕ್ಕೆ ಲಾಂಗು ಮಚ್ಚು ಹಿಡಿದು ಅವಾಜ್ ಹಾಕಲಾಗಿದೆ. ಈ ಒಂದು ಘಟನೆ ಬೆಂಗಳೂರಿನ ಹೆಣ್ಣುರಿನಲ್ಲಿ ನಡೆದಿದ್ದು ಶರೀಫ್ ಮತ್ತು ಗ್ಯಾಂಗ್ ಅಟ್ಟಹಾಸ ಮೆರೆದಿದ್ದಾರೆ. ಅಕ್ಟೋಬರ್ 19 ರಂದು ರಾತ್ರಿ ಬೈಕ್ ನಲ್ಲಿ ಶರೀಫ್ ತೆರಳುತ್ತಿದ್ದ. ಈ ವೇಳೆ ಶರೀಫ್ ಗೆ ಪಟಾಕಿಯ ಕಿಡಿ ತಗುಲಿದ್ದಕ್ಕೆ ಸ್ಥಳೀಯರ ಜೊತೆಗೆ ಆತ ಕಿರಿಕ್ ಮಾಡಿಕೊಂಡಿದ್ದಾನೆ. ದೊಡ್ಡ ರಾಮಣ್ಣ ಬಡಾವಣೆಯ ಬಳಿ ಗ್ಯಾಂಗ್ ಪುಂಡಾಟ ಮೆರೆದಿದೆ. ಶರೀಫ್ ತನ್ನ ಸಹಚರನ್ನು ಸ್ಥಳಕ್ಕೆ ಕರೆಸಿ ಮಾರಕಾಸ್ತ್ರ ತೋರಿಸಿ ಬೆದರಿಕೆ ಹಾಕಿದ್ದಾನೆ. ಬೆದರಿಕೆ ಹಾಕುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಚಿತ್ರದುರ್ಗ : ಅಜ್ಜಿಗೆ ಕರೆ ಮಾಡಿದಕ್ಕೆ ವಿದ್ಯಾರ್ಥಿ ಮೇಲೆ ಮುಖ್ಯ ಶಿಕ್ಷಕನೊಬ್ಬ ಮನಸೋ ಇಚ್ಛೆ ಹಲ್ಲೆ ನಡೆಸಿರುವ ಘಟನೆ ನಾಯಕನಹಳ್ಳಿಯಲ್ಲಿ ನಡೆದಿದೆ. ಸಂಸ್ಕೃತ ವೇದ ಅಧ್ಯಯನ ಶಾಲಾ ಮುಖ್ಯ ಶಿಕ್ಷಕ ಹಲ್ಲೆ ನಡೆಸಿದ್ದಾನೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದಲ್ಲಿ ಗುರು ತಿಪ್ಪೇರುದ್ರಸ್ವಾಮಿ ದೇಗುಲಕ್ಕೆ ಸೇರಿದ ವೇದ ಅಧ್ಯಯನ ಶಾಲೆಯಲ್ಲಿ ಈ ಒಂದು ಘಟನೆ ನಡೆದಿದೆ. ವಿದ್ಯಾರ್ಥಿಯ ಮೇಲೆ ಮುಖ್ಯ ಶಿಕ್ಷಕ ವೀರೇಶ್ ಹಿರೇಮಠ ಹಲ್ಲೆ ಮಾಡಿ ದೌರ್ಜನ್ಯ ಮೆರೆದಿದ್ದಾರೆ. ವಿದ್ಯಾರ್ಥಿಯ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿದ್ದಾನೆ. ಕಾಲಲ್ಲಿ ಇವತ್ತು ವಿಕೃತಿ ಮೆರೆದಿದ್ದಾನೆ. ಶಿಕ್ಷಕ ವಿರೇಶ ಹಿರೇಮಠ್ ಕ್ರೌರ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪುಟ್ಟ ವಿದ್ಯಾರ್ಥಿ ಮೇಲೆ ಶಿಕ್ಷಕ ಕ್ರೌರ್ಯ ಮೆರೆದಿರುವ ವಿಡಿಯೋ ವೈರಲ್ ಆಗಿದೆ. ಉತ್ತರ ಕರ್ನಾಟಕ ಮೊಲದ ವಿದ್ಯಾರ್ಥಿಯ ಮೇಲೆ ಶಿಕ್ಷಕ ದೌರ್ಜನ್ಯ ಎಸಗಿದ್ದಾನೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಶಿಕ್ಷಕ ವೀರೇಶ್ ನಾಪತ್ತೆಯಾಗಿದ್ದಾನೆ. ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಶಿಕ್ಷಣ ಇಲಾಖೆಯು ವೃಂದ ಮತ್ತು ನೇಮಕಾತಿ ನಿಯಮ-2017ಕ್ಕೆ ತಿದ್ದುಪಡಿ ಮಾಡಿ ಪ್ರಾಥಮಿಕ ಶಾಲಾ ಶಿಕ್ಷಕರಿಗೂ (ಪಿಎಸ್ಟಿ) 6 ಮತ್ತು 7ನೇ ತರಗತಿ ಮಕ್ಕಳಿಗೂ ಪಾಠ ಮಾಡಲು ಅವಕಾಶ ಕಲ್ಪಿಸಿ ಅಧಿಸೂಚನೆ ಹೊರಡಿಸಿದೆ. ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶ ಕಲ್ಪಿಸಿದೆ. 2017ರಲ್ಲಿ ಶಿಕ್ಷಕರ ವೃಂದ ಮತ್ತು ನೇಮಕಾತಿಗೆ ತಿದ್ದುಪಡಿ ತಂದು 2016ಕ್ಕಿಂತ ಮೊದಲು 1ರಿಂದ 7 ಹಾಗೂ 1ರಿಂದ 8ನೇ ತರಗತಿ ಪಾಠ ಮಾಡಲು ನೇಮಕವಾಗಿದ್ದ ಎಲ್ಲ ಪ್ರಾಥಮಿಕ ಶಾಲಾ ಶಿಕ್ಷಕರನ್ನೂ 1ರಿಂದ 5ನೇ ತರಗತಿ ಮಾತ್ರ ಪಾಠ ಮಾಡಬೇಕೆಂದು ಸೀಮಿತಗೊಳಿಸಾಗಿತ್ತು. ಇದರಿಂದ ಹಲವಾರು ವರ್ಷಗಳಿಂದ ಕರ್ತವ್ಯ ಸಲ್ಲಿಸುತ್ತಿರುವ ಪ್ರಾಥಮಿಕ ಶಾಲಾ ಶಿಕ್ಷಕರು, ಇತ್ತೀಚಿಗೆ ಬಂದ ಪದವೀಧರ ಶಿಕ್ಷಕರ ಕೈ ಕೆಳಗೆ ಸಲ್ಲಿಸುವಂತಾಗಿತ್ತು. ಅಲ್ಲದೆ, ಪ್ರಾಥಮಿಕ ಶಾಲೆಗಳ ಮುಖ್ಯ ಶಿಕ್ಷಕರ ಹುದ್ದೆ ಹಾಗೂ ಪ್ರೌಢಶಾಲಾ ಸಹಶಿಕ್ಷಕರ ಹುದ್ದೆಗಳ ಬಡ್ತಿಯಲ್ಲೂ ಪದವೀಧರ ಶಿಕ್ಷಕರಿಗೆ ಹೆಚ್ಚಿನ ಆದ್ಯತೆ ನೀಡಲಾಗಿತ್ತು. ಹುದ್ದೆಗಳ ಮರುವಿಂಗಡಣೆಯಲ್ಲೂ ಪದವೀಧರ ಶಿಕ್ಷಕರಿಗೆ ಆದ್ಯತೆ ನೀಡಿದ್ದರಿಂದ ಪ್ರಾಥಮಿಕ ಶಾಲಾ…
ಅಮೇರಿಕಾದಲ್ಲಿ ಜನಪ್ರಿಯ ಚೆಸ್ ಗ್ರಾಂಡ್ ಮಾಸ್ಟರ್ ಶವವಾಗಿ ಪತ್ತೆಯಾಗಿದ್ದಾರೆ. ಎಸ್ ಗ್ರಾಂಡ್ ಮಾಸ್ಟರ್ ಡೆನಿಯಲ್ ನರೋಡಿಟ್ಸ್ಕಿ (29) ಸಾವನಪ್ಪಿದ್ದು ಚಾರ್ಲೆಟ್ ಮೂಲದ ಜಸ್ ಗ್ರಾಂಡ್ ಮಾಸ್ಟರ್ ಡ್ಯೂನಿಯಲ್ ಶವವಾಗಿ ಪ್ರತಿಯಾಗಿದ್ದಾರೆ ಅಮೆರಿಕದಲ್ಲಿ ಜನಪ್ರಿಯ ಗ್ರಾಂಡ್ ಮಾಸ್ಟರ್ ಆಗಿದ್ದಾರೆ, ನಿರೂಪಕ ಮತ್ತು ಶಿಕ್ಷಣ ತಜ್ಞ ಲೇಖಕರಾಗಿಯೂ ಪ್ರಸಿದ್ಧಿ ಪಡೆದಿದ್ದರು. ಡೆನಿಯಲ್ ನರೋಡಿಟ್ಸ್ಕಿ ಒಬ್ಬ ಅಮೆರಿಕನ್ ಚೆಸ್ ಗ್ರ್ಯಾಂಡ್ಮಾಸ್ಟರ್, ಬರಹಗಾರ, ನಿರೂಪಕ ಮತ್ತು ಸ್ಟ್ರೀಮರ್ ಆಗಿದ್ದಾರೆ. ಅವರು ಮಾಜಿ ವಿಶ್ವ ಯುವ ಚಾಂಪಿಯನ್ ಆಗಿದ್ದು, 2014 ರಲ್ಲಿ ಮಿಲಿಯನೇರ್ ಚೆಸ್ ಓಪನ್ನಲ್ಲಿ ಮೊದಲ ಸ್ಥಾನ ಗಳಿಸಿದರು ಮತ್ತು ಮೇ 2017 ರಲ್ಲಿ ತಮ್ಮ ಗರಿಷ್ಠ FIDE ರೇಟಿಂಗ್ 2647 ತಲುಪಿದರು. ಅವರು 2019 ರಲ್ಲಿ ಸ್ಟ್ಯಾನ್ಫೋರ್ಡ್ ವಿಶ್ವವಿದ್ಯಾಲಯದಿಂದ ಪದವಿ ಪಡೆದರು ಮತ್ತು 2020 ರಿಂದ ಉತ್ತರ ಕೆರೊಲಿನಾದ ಷಾರ್ಲೆಟ್ನಲ್ಲಿ ವಾಸಿಸುತ್ತಿದ್ದರು. ಇದೀಗ ಅವರು ಶವವಾಗಿ ಪತ್ತೆಯಾಗಿದ್ದಾರೆ.
ಬೆಂಗಳೂರು : ರಾಜ್ಯಾದ್ಯಂತ 13000 ಶಿಕ್ಷಕರ ನೇಮಕಾತಿಗೆ ಸರ್ಕಾರ ನಿರ್ಧರಿಸಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಸೂಚನೆ ಹೊರಡಿಸಲಾಗಿದೆ. ಅಕ್ಟೋಬರ್ 23ರಿಂದ ನವೆಂಬರ್9 ರವರೆಗೆ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಡಿಸೆಂಬರ್7 ರಂದು ಟಿಇಟಿ ಪರೀಕ್ಷೆ ನಡೆಸಿ, ಡಿಸೆಂಬರ್31ರಂದು ಫಲಿತಾಂಶ ಪ್ರಕಟಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ 4,780 ಶಿಕ್ಷಕರನ್ನು ನೇಮಕಾತಿ ಮಾಡಿದ್ದರು. ನಾನು ಶಿಕ್ಷಣ ಸಚಿವನಾಗಿ ಅಧಿಕಾರ ಸ್ವೀಕರಿಸಿದ ಪ್ರಥಮ ವರ್ಷದಲ್ಲಿ 13000 ಶಿಕ್ಷಕರನ್ನು ನೇಮಕ ಮಾಡಿದ್ದೆ. ಈಗ ಮತ್ತೆ 13000 ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದೇನೆ. ಕಳೆದ ಎರಡೂವರೆ ವರ್ಷದಲ್ಲಿ 26000 ಹೊರಡಿಸಿದೆ ಶಿಕ್ಷಕರ ನೇಮಕಾತಿ ಮಾಡಿದಂತಾಗುತ್ತದೆ ಎಂದು ಹೇಳಿದರು. ಶೀಘ್ರದಲ್ಲಿ ಅನುದಾನಿತ ಶಾಲೆಯ ಶಿಕ್ಷಕರ ನೇಮಕಾತಿಗೂ ಸರ್ಕಾರ ಆದೇಶ ಹೊರಡಿಸಲಿದೆ. ರಾಜ್ಯದಲ್ಲಿ 800 ಕೆಪಿಎಸ್ ಶಾಲೆಯನ್ನು ಪ್ರಾರಂಭಿಸಲಾಗುವುದು ಎಂದು ಅವರು ಹೇಳಿದರು.
ದಕ್ಷಿಣಕನ್ನಡ : ರಾಜ್ಯದಲ್ಲಿ ಕೋಮು ಸೌಹಾರ್ದತೆಗೆ ಧಕ್ಕ ತರುವವರು. ಅಪಪ್ರಚಾರಮಾಡುವವರು ಮತ್ತು ಸುಳ್ಳು ಹೇಳುವವರ ವಿರುದ್ಧ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲು ಮಸೂದೆಯನ್ನು ಜಾರಿಗೆ ತರಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಕ್ರೀಡಾಂಗಣದಲ್ಲಿ ಕೈ ಎಸ್ಟೇಟ್ ಆ್ಯಂಡ್ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶಾಸಕ ಅಶೋಕ್ ಕುಮಾರ್ ಆಯೋಜಿಸಲಾಗಿದ್ದ ‘ಅಶೋಕ ಜನಮನ ವಸ್ತ್ರ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜಾತಿ-ಧರ್ಮದ ಹೆಸರಿನಲ್ಲಿ ಕಚ್ಚಾಟ ನಡೆಸುವುದರಲ್ಲಿ ದ.ಕ. ಜಿಲ್ಲೆ ನಂಬರ್ 1ಆಗಿತ್ತು. ಇದನ್ನು ಸರಿಪಡಿಸುವ ನಿಟ್ಟಿನಲ್ಲಿ ಜಿಲ್ಲೆಯ ಪೊಲೀಸ್ ಅಧಿಕಾರಿಗಳನ್ನು ಬದಲಾವಣೆ ಮಾಡಿದ್ದು, ಇದಕ್ಕೆ ಕಡಿವಾಣ ಪಾಕಲು ಜಿಲ್ಲೆಗೆ ದಕ್ಷ ಅಧಿಕಾರಿಗಳನ್ನು ನೇಮಿಸಲಾಗಿದೆ. ಕೋಮುಸೌಹಾರ್ದತೆಗೆ ಧಾತನುವವರು, ಅಪಪ್ರಚಾರ ಮಾಡುವ ವರು ಮತ್ತು ಸುಳ್ಳು ಹೇಳುವವರ ವಿರುದ್ಧ ಕಾನೂನು ಕ್ರಮಕ್ಕೆ ಮಸೂದೆ ಜಾರಿಗೋಳಿಸಲಾಗುವುದು ಎಂದು ತಿಳಿಸಿದರು. ಸಮ ಸಮಾಜ ನಿರ್ಮಾಣ ಸಂವಿಧಾನದ ಆಶಯವಾಗಿದೆ. ಉಳ್ಳವರು ಇಲ್ಲದವರಿಗೆ 12 ಶತಮಾನದಲ್ಲಿ ಬಸವಣ್ಣನವರು ಕಾಯಕ ದಾಸೋಹ ಮೂಲಕ ತಿಳಿಸಿದ್ದು, ಉತ್ಪಾದಿಸಿದ್ದನ್ನು ಹಂಚಿಕೊಂಡು ತಿನ್ನಬೇಕು. ಇದು ಸಮ ಸಮಾಜಕ್ಕೆ ಪೂರಕವಾಗಿದೆ.…
ಬೆಂಗಳೂರು: ನಗರದಲ್ಲಿ ದೀಪಾವಳಿ ಆರಂಭದಲ್ಲೇ ಪಟಾಕಿ ಸಿಡಿತದಿಂದ ಅವಘಡ ಸಂಭವಿಸಿದೆ. ಬೆಂಗಳೂರಲ್ಲಿ ಪಟಾಕಿ ಸಿಡಿದು ಮಕ್ಕಳು ಸೇರಿದಂತೆ ಒಟ್ಟು 8 ಜನರು ಗಾಯಗೊಂಡಿದ್ದಾರೆ. ಬೆಂಗಳೂರಲ್ಲಿ ಬಿಜಿಲಿ ಪಟಾಕಿ ಸಿಡಿದು 11 ವರ್ಷದ ಬಾಲಕ ಗಾಯಗೊಂಡಿದ್ದಾನೆ. ಪಟಾಕಿ ಸಿಡಿಸುವುದನ್ನು ನೋಡುತ್ತಿದ್ದಾಗ ಮತ್ತೊಬ್ಬನಿಗೆ ಗಾಯವಾಗಿದೆ. ಆಟಂ ಬಾಂಬ್ ಪಟಾಕಿ ಸಿಡಿದು 48 ವರ್ಷದ ವ್ಯಕ್ತಿಯ ಕಣ್ಣಿಗೆ ಗಾಯವಾಗಿದೆ. ಅದೇ ರೀತಿಯಾಗಿ ಇನ್ನು 6 ಜನರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಮಿಂಟೋ ಹಾಗು ನಾರಾಯಣ ನೇತ್ರಾಲಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.














