Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು : ಬೆಂಗಳೂರಿನಲ್ಲಿ ಕೇರಳ ಮೂಲದ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ, ಬೆಂಗಳೂರಿನ ನಂದಿನಿ ಲೇಔಟ್ ಪೋಲಿಸರಿಂದ ಸೌಗೇಶ್ ಮತ್ತು ಅಲ್ತಾಫ್ ಎಂಬ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.. ಹೈಡ್ರೋ ಗಾಂಜಾ ತರಿಸಿ ಸ್ಥಳೀಯರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದರು. 5.75 ಕೋಟಿ ರೂಪಾಯಿ ಮೌಲ್ಯದ 5 ಕೆಜಿ 700 ಗ್ರಾಂ ಹೈಡ್ರೋ ಗಾಂಜಾವನ್ನು ಇದೀಗ ವಶಕ್ಕೆ ಪಡೆದುಕೊಂಡಿದ್ದಾರೆ. ಕೇರಳದಲ್ಲಿ ಆರೋಪಿಗಳು ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದರು. ಬಂಧಿತರ ವಿರುದ್ಧ ಕೇರಳದಲ್ಲಿ ಸಹ ಎನ್.ಡಿಪಿಎಸ್ ಕೇಸ್ ದಾಖಲಾಗಿದೆ. ನಂದಿನಿ ಲೇಔಟ್ ಠಾಣೆ ಪೋಲೀಸರಿಂದ ಮುಂದುವರೆದಿದೆ.

Read More

ತಮಿಳುನಾಡು : ತಮಿಳುನಾಡು ಚುನಾವಣೆಯಲ್ಲಿ ಹಲವು ಕ್ಷೇತ್ರಗಳಲ್ಲಿ ಅಚ್ಚರಿಯ ಫಲಿತಾಂಶ ಕೂಡ ಬಂದಿದೆ. ಕೇವಲ ಒಂದೇ ಒಂದು ಮತದಿಂದ ಡಿಎಂಕೆ ಸಚಿವ ಪೆರಿಯಾಕರುಪ್ಪನ್ ಸೋಲು ಕಂಡಿದ್ದಾರೆ. ಒಂದು ಮತದಿಂದ ಟಿವಿಕೆ ಅಭ್ಯರ್ಥಿ ಶ್ರೀನಿವಾಸ್ ಸೇತುಪತಿ ಗೆಲುವು ಕಂಡಿದ್ದಾರೆ. ಹೌದು ತಮಿಳುನಾಡಿನ ತಿರುಪುತ್ತೂರ್ ನಲ್ಲಿ ಈ ಅಚ್ಚರಿ ಫಲಿತಾಂಶ ಬಂದಿದೆ. ಸಚಿವ ಕೆ ಆರ್ ಪೆರಿಯಾಕರುಪ್ಪನ್ ಪಡೆದಿದ್ದು ಒಟ್ಟು 83, 374 ಮತಗಳು. ಇನ್ನು ಟಿ ವಿ ಕೆ ಅಭ್ಯರ್ಥಿ ಶ್ರೀನಿವಾಸ ಸೇತುಪತಿ ಪಡೆದಿದ್ದು 83,375 ಮತಗಳು ಪಡೆದಿದ್ದಾರೆ.ಹಾಗಾಗಿ ಒಂದು ಮತ ಅಂತರದಿಂದ ಟಿ ವಿ ಕೆ ಶ್ರೀನಿವಾಸ ಸೇತುಪತಿ ಗೆದ್ದಿದ್ದಾರೆ. ತಮಿಳುನಾಡು ಚುನಾವಣೆಯಲ್ಲಿ ಹಲವು ಕ್ಷೇತ್ರಗಳಲ್ಲಿ ಈ ರೀತಿ ಅಚ್ಚರಿ ಫಲಿತಾಂಶ ಬಂದಿದೆ.

Read More

ಬೆಂಗಳೂರು : ಸಚಿವ ಜಮೀರ್ ಅಹ್ಮದ್ ಖಾನ್ ನಿವಾಸದಲ್ಲಿ ಚಿನ್ನಾಭರಣ ಕದಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನ ಶಿವಾಜಿನಗರ ಠಾಣೆ ಪೋಲೀಸರು ಇದೀಗ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದು, ಬಂಧಿತ ಆರೋಪಿಗಳನ್ನು ಸಯ್ಯದ್ ಅಮೀರ್ ಹಾಗೂ ಅಮೀರ್ ಅಹ್ಮದ್ ಎಂದು ತಿಳಿದು ಬಂದಿದೆ. ಬಿಜಿನೆಸ್ ಲಾಸ್ ಆಗಿದ್ದಕ್ಕೆ ಪರಿಚಯಸ್ಥರಿಂದಲೇ ಕಳ್ಳತನ ಮಾಡಿದ್ದಾರೆ. ಸೈಯದ್ ಜೊತೆಗೆ ಅಮೀರ್ ಅಹ್ಮದ್ ಟ್ರಾವೆಲ್ಸ್ ನಲ್ಲಿ ಕೆಲಸ ಮಾಡುತ್ತಿದ್ದ. ಜಮೀರ್ ಮನೆಯಲ್ಲಿ ಸಯ್ಯದ್ ಮತ್ತು ಅಮೀರ್ ಇಬ್ಬರು ಕಳ್ಳತನ ಮಾಡಿದ್ದರು. ಮನೆಯಲ್ಲಿ ಬಂದು ಚಿನ್ನಾಭರಣ ಕಳ್ಳತನ ಮಾಡಿದ್ದರು. ಜಮೀರ್ ತಾಯಿಯ ಚಿನ್ನಾಭರಣ ಕಳ್ಳತನ ಮಾಡಿದ ಆರೋಪಿಗಳು, 1.13 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದರು. ಚಿನ್ನ ಕಳ್ಳತನ ಮಾಡಿ ಆಭರಣ ಅಡವಿಟ್ಟು ಆರೋಪಿಗಳು ಹಣ ಪಡೆದಿದ್ದರು. ಆ ಹಣವನ್ನು ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಮಾಡಿ ಲಾಭಕ್ಕೆ ಪ್ಲಾನ್ ಮಾಡಿದರು. ಕಾಲ್ ಮಾಡಿದಾಗ ರಿಸೀವ್ ಮಾಡಲಿಲ್ಲ. ಇಬ್ಬರ ಮೇಲೆ ಅನುಮಾನ ವ್ಯಕ್ತವಾಗಿದೆ. ಸದ್ಯ…

Read More

ದಾವಣಗೆರೆ : ಇದೆ ಮೇ 31ರವರೆಗೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹನುಗವಾಡಿ ಬಳಿ ಇರುವ ಪಂಚಮಸಾಲಿ ಮಠದ ಆವರಣದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮಠದಲ್ಲಿ ಶಾಂತಿ ಕಾಪಾಡುವ ಹಿತ ದೃಷ್ಟಿಯಿಂದ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮೇ 31 ರವರೆಗೆ ಯಾವುದೇ ಸಭೆ ಸಮಾರಂಭ ಮತ್ತು ಸುದ್ದಿಗೋಷ್ಠಿ ನಡೆಸುವಂತಿಲ್ಲ. ಟ್ರಸ್ಟಿಗಳು ಆಗಿರಬಹುದು, ಸ್ವಾಮೀಜಿ ಬೆಂಬಲಿಗರು ಸಭೆ ನಡೆಸಿ ಹೇಳಿಕೆ ನೀಡುತ್ತಿದ್ದಾರೆ. ಉದ್ರಿಕ್ತ ಹೇಳಿಕೆಗಳನ್ನು ನೀಡಿ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಡಲಾಗುತ್ತಿದೆ. ಇದರಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗುತ್ತದೆ ಎಂದು ವರದಿ ಬಂದಿದ್ದು, ಹಾಗಾಗಿ ದಾವಣಗೆರೆ ಎಸ್ಪಿ ಶೇಖರ್ ನೀಡಿದ ವರದಿ ಅನ್ವಯ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮಠದಲ್ಲಿ ದೈನಂದಿನ ಪೂಜಾ ಕಾರ್ಯಕ್ಕೆ ಯಾವುದೇ ಅಡ್ಡಿ ಇಲ್ಲವೆಂದು ಡಿಸಿ ಸ್ಪಷ್ಟಪಡಿಸಿದ್ದಾರೆ.

Read More

ಬೆಂಗಳೂರು : ವಾಣಿಜ್ಯ ಬಳಕೆ ಅನಿಲದ ಸಿಲಿಂಡ‌ರ್ ದರ ದಿಢೀ‌ರ್ ಹೆಚ್ಚಳವಾಗಿದ್ದು, ಹೋಟೆಲ್‌ಗಳಲ್ಲಿ ಊಟ-ಉಪಹಾರದ ದರ ಏರಿದೆ. ಕೆಲವು ಸಣ್ಣ ಹೋಟೆಲ್‌, ದರ್ಶಿನಿಗಳು ಶನಿವಾರದಿಂದಲೇ ದರ ಹೆಚ್ಚಿಸಿವೆ. ವಾಣಿಜ್ಯ ಬಳಕೆಯ 19ಕೆ.ಜಿ ಅನಿಲದ ಸಿಲಿಂಡ‌ರ್ ಈ ಮೊದಲು ರೂ. 2,140ಕ್ಕೆ ದೊರೆಯುತ್ತಿತ್ತು, ಇದೀಗ ಒಂದು ಸಿಲಿಂಡರ್‌ಗೆ ಒಮ್ಮೆಲೆ ರೂ.993 ಹೆಚ್ಚಳವಾಗಿದೆ. ಇದರ ಪರಿಣಾಮ ಇಡ್ಲಿ, ವಡಾ, ಉಪ್ಪಿಟ್ಟು, ಪುಲಾವ್, ದೋಸೆ, ಊಟ ಹೀಗೆ ಎಲ್ಲ ಬಗೆಯ ಖಾದ್ಯದ ಬೆಲೆ ಹೆಚ್ಚಾಗಿದೆ. ಟೀ, ಕಾಫಿ ಬೆಲೆಯೂ ರೂ. 2ರಿಂದ ರೂ. 5 ಏರಿಕೆಯಾಗಿದೆ. ಇದು ಗ್ರಾಹಕರ ಕಂಗೆಡಿಸಿದೆ. ಒಂದೇ ಬಾರಿಗೆ 993 ರೂಪಾಯಿ ಏರಿಕೆ! ವಾಣಿಜ್ಯ ಬಳಕೆಯ 19 ಕೆ.ಜಿ ತೂಕದ ಅನಿಲ ಸಿಲಿಂಡರ್ ಬೆಲೆಯಲ್ಲಿ ಈ ಹಿಂದೆಂದೂ ಕಾಣದ ರೀತಿಯಲ್ಲಿ ಏರಿಕೆ ಕಂಡುಬಂದಿದೆ. ಈ ಮೊದಲು 2,140 ರೂಪಾಯಿಗಳಿಗೆ ದೊರೆಯುತ್ತಿದ್ದ ಸಿಲಿಂಡರ್ ಬೆಲೆ ಈಗ ಬರೋಬ್ಬರಿ 993 ರೂಪಾಯಿಗಳಷ್ಟು ಹೆಚ್ಚಳವಾಗಿದೆ. ಅನಿಲ ದರದಲ್ಲಿನ ಈ ದಿಢೀರ್ ಬದಲಾವಣೆಯು ಹೋಟೆಲ್ ಮಾಲೀಕರನ್ನು ಕಂಗೆಡಿಸಿದ್ದು,…

Read More

ಬೆಂಗಳೂರು : ಇಸ್ರೋದ ಕ್ಯಾಂಪಸ್‌ ಮೇಲೆ ಡ್ರೋನ್ ಹಾರಾಟ ನಡೆಸಿರುವ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಮೇ 2ರಂದು ಬೆಳಿಗ್ಗೆ 8:16ರ ಸುಮಾರಿಗೆ ಕಾರ್ತಿಕ್ ನಗರದ ಇಸ್ರೋದ ಉಪಗ್ರಹ ಏಕೀಕರಣ ಮತ್ತು ಪರೀಕ್ಷಾ ಕೇಂದ್ರದ ಮೇಲೆ ಸುಮಾರು 80ರಿಂದ 100 ಅಡಿಗಳ ಮೇಲೆ 10-12 ಸೆಕೆಂಡ್‌ಗಳ ಕಾಲ ಅಪರಿಚಿತರು ಡ್ರೋನ್ ಹಾರಿಸಿರುವುದು ವರದಿಯಾಗಿದೆ. ಸಿಐಎಸ್‌ಎಫ್ ಸಬ್ ಇನ್ಸ್‌ಪೆಕ್ಟರ್ ನೀಡಿರುವ ದೂರಿನನ್ವಯ ಹೆಚ್ಎಎಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ವಿವರ: ಕಳೆದ ಮೇ 2ರಂದು ಬೆಳಿಗ್ಗೆ ಸುಮಾರು 8:16ರ ವೇಳೆಗೆ ಈ ಘಟನೆ ಸಂಭವಿಸಿದೆ. ಅತೀ ಹೆಚ್ಚು ಭದ್ರತೆ ಹೊಂದಿರುವ ಈ ಪ್ರದೇಶದ ಮೇಲೆ ಸುಮಾರು 80 ರಿಂದ 100 ಅಡಿ ಎತ್ತರದಲ್ಲಿ ಅಪರಿಚಿತ ಡ್ರೋನ್ ಕಾಣಿಸಿಕೊಂಡಿದೆ. ಸುಮಾರು 10 ರಿಂದ 12 ಸೆಕೆಂಡ್‌ಗಳ ಕಾಲ ಈ ಡ್ರೋನ್ ಇಸ್ರೋ ಆವರಣದ ಮೇಲೆ ಹಾರಾಟ ನಡೆಸಿ ಮಾಯವಾಗಿದೆ ಎಂದು ವರದಿಯಾಗಿದೆ. ಭದ್ರತಾ ಲೋಪದ ಆತಂಕ: ಇಸ್ರೋದ ಈ ಕೇಂದ್ರವು ಅತ್ಯಂತ ಸೂಕ್ಷ್ಮ ಪ್ರದೇಶವಾಗಿದ್ದು,…

Read More

ಹಾವೇರಿ: ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮದ ಸಮೀಪ ರಾಜ್ಯ ಹೆದ್ದಾರಿಯಲ್ಲಿ ಇಂದು ಮುಂಜಾನೆ ಕೆಎಸ್‌ಆರ್‌ಟಿಸಿ ಬಸ್ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಬೆಂಗಳೂರಿನಿಂದ ಗದಗಕ್ಕೆ ಪ್ರಯಾಣಿಸುತ್ತಿದ್ದ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ಬಸ್ ಸಂಪೂರ್ಣ ಜ್ವಾಲೆಗೆ ಆಹುತಿಯಾಗಿದೆ. ತಪ್ಪಿದ ಭಾರಿ ಪ್ರಾಣಾಪಾಯ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಸಮಯದಲ್ಲಿ ಒಟ್ಟು 17 ಪ್ರಯಾಣಿಕರು ಇದ್ದರು ಎನ್ನಲಾಗಿದೆ. ಬಸ್‌ನ ಎಂಜಿನ್ ಭಾಗದಲ್ಲಿ ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆಯೇ ಎಚ್ಚೆತ್ತ ಚಾಲಕ ಪಕ್ಕೀರಪ್ಪ, ಕೂಡಲೇ ವಾಹನವನ್ನು ರಸ್ತೆ ಬದಿಗೆ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗೆ ಇಳಿಯುವಂತೆ ಸೂಚಿಸಿದ್ದಾರೆ. ಚಾಲಕನ ಈ ಸಮಯಪ್ರಜ್ಞೆಯಿಂದಾಗಿ ಎಲ್ಲಾ 17 ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಸುರಕ್ಷಿತವಾಗಿ ಹೊರಬಂದಿದ್ದಾರೆ. ನಂದಿಸಲು ಸಿಬ್ಬಂದಿ ಹರಸಾಹಸ ಬೆಂಕಿ ಕಾಣಿಸಿಕೊಂಡ ತಕ್ಷಣ ಬಸ್ ಸಿಬ್ಬಂದಿ ಲಭ್ಯವಿದ್ದ ಅಗ್ನಿಶಾಮಕ ಉಪಕರಣಗಳ ಮೂಲಕ ಜ್ವಾಲೆಯನ್ನು ನಂದಿಸಲು ಹರಸಾಹಸ ಪಟ್ಟಿದ್ದಾರೆ. ಆದರೆ, ಬೆಂಕಿಯ ತೀವ್ರತೆ ಹೆಚ್ಚಿದ್ದರಿಂದ ಕ್ಷಣಾರ್ಧದಲ್ಲಿ ಬಸ್ ಪೂರ್ತಿಯಾಗಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದೆ. ಬಸ್‌ನ ಬಹುತೇಕ ಭಾಗ ಸುಟ್ಟು ಕರಕಲಾಗಿದ್ದು, ಪ್ರಯಾಣಿಕರ ಲಗೇಜುಗಳಿಗೂ…

Read More

ಬೆಳಗಾವಿ : ಬೆಳಗಾವಿಯಲ್ಲಿ ಘೋರವಾದ ಕೃತ್ಯ ನಡೆದಿದ್ದು ವಿಡಿಯೋ ಕಾಲ್ ನಲ್ಲಿ ಮಗು ತೋರಿಸಿಲ್ಲ ಎಂದು ಕುಪ್ಪಿತಕೊಂಡ ಅಳಿಯನೊಬ್ಬ ತನ್ನ ಅತ್ತೆಗೆ ಚಾಕು ಇರಿದಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಆಲದಕಟ್ಟಿಯಲ್ಲಿ ನಡೆದಿದೆ. ಅಷ್ಟೆ ಅಲ್ಲದೇ ಇಂದು ಜೈಲು, ನಾಳೆ ಬೇಲ್’ ಎಂದು ಸ್ಟೇಟಸ್ ಹಾಕಿ ವಿಕೃತಿ ಮೆರೆದಿದ್ದಾನೆ. ಇದೀಗ ಆರೋಪಿ ಜೈಲು ಸೇರಿದ್ದಾನೆ. ಘಟನೆಯ ಹಿನ್ನೆಲೆ ಅರವಿಂದ ಗವಳಿಯ ಪತ್ನಿಗೆ ಎರಡು ತಿಂಗಳ ಹಿಂದೆಯಷ್ಟೇ ಹೆರಿಗೆಯಾಗಿದ್ದು, ಆಕೆ ಸದ್ಯ ತವರು ಮನೆಯಲ್ಲಿದ್ದಳು. ಅಲ್ಲಿಯೂ ಪತ್ನಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದ ಅರವಿಂದ, ಪದೇಪದೆ ವಿಡಿಯೋ ಕಾಲ್ ಮಾಡಿ ಮಗುವನ್ನು ತೋರಿಸುವಂತೆ ಪಟ್ಟು ಹಿಡಿಯುತ್ತಿದ್ದ. ಇದಕ್ಕೆ ಪ್ರತಿಕ್ರಿಯಿಸಿದ್ದ ಅತ್ತೆ ಮಹಾದೇವಿ, ‘ಕೆಲಸ ಬಿಟ್ಟು ಸದಾ ಮೊಬೈಲ್ ಹಿಡಿದು ಕೂರಲು ಸಾಧ್ಯವಿಲ್ಲ, ದಿನಕ್ಕೆ ಒಂದು ಬಾರಿ ಮಾತ್ರ ಕಾಲ್ ಮಾಡು ಎಂದು ಬುದ್ಧಿ ಹೇಳಿದ್ದರು. ಚಾಕುವಿನಿಂದ ಇರಿದು ಕ್ರೌರ್ಯ: ಮಗುವನ್ನು ನೋಡಲು ಬಿಡುತ್ತಿಲ್ಲ ಎಂಬ ಆಕ್ರೋಶದಲ್ಲಿ ಅತ್ತೆಯ ಮನೆಗೆ ನುಗ್ಗಿದ ಅಳಿಯ, ಮನೆಯವರೊಂದಿಗೆ…

Read More

ಚೆನ್ನೈ: ತಮಿಳುನಾಡು ರಾಜಕೀಯದ ಇತಿಹಾಸದಲ್ಲಿ ಇಂದು ಅಭೂತಪೂರ್ವ ತಿರುವು ಕಂಡುಬಂದಿದೆ. ಚಿತ್ರರಂಗದಿಂದ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷವು ರಾಜ್ಯದ ಪ್ರಬಲ ದ್ರಾವಿಡ ಪಕ್ಷಗಳಾದ ಡಿಎಂಕೆ ಮತ್ತು ಎಐಡಿಎಂಕೆಗೆ ಭರ್ಜರಿ ಶಾಕ್ ನೀಡಿದೆ. ಚೊಚ್ಚಲ ಚುನಾವಣೆಯಲ್ಲೇ ವಿಜಯ್ ಅಬ್ಬರದ ಪ್ರದರ್ಶನ ನೀಡುವ ಮೂಲಕ ತಮಿಳುನಾಡಿನ ರಾಜಕೀಯ ಸಮೀಕರಣವನ್ನೇ ಬದಲಿಸಿದ್ದಾರೆ. ಮುಖ್ಯಮಂತ್ರಿ ಸ್ಟಾಲಿನ್‌ಗೆ ಮುಖಭಂಗ ಈ ಬಾರಿಯ ಚುನಾವಣೆಯ ಅತ್ಯಂತ ದೊಡ್ಡ ಅಚ್ಚರಿ ಎಂದರೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಸೋಲು. ತಮ್ಮ ಭದ್ರಕೋಟೆಯೆಂದೇ ಪರಿಗಣಿಸಲ್ಪಟ್ಟಿದ್ದ ಕೊಳತ್ತೂರು ಕ್ಷೇತ್ರದಲ್ಲಿ ಸ್ಟಾಲಿನ್ ಅವರು ಪರಾಜಯಗೊಂಡಿದ್ದಾರೆ. ವಿಜಯ್ ಅವರ TVK ಪಕ್ಷದ ಅಭ್ಯರ್ಥಿ ವಿ.ಎಸ್. ಬಾಬು ಅವರು ಸ್ಟಾಲಿನ್ ವಿರುದ್ಧ ಐತಿಹಾಸಿಕ ಜಯ ಸಾಧಿಸುವ ಮೂಲಕ ಇಡೀ ದೇಶದ ಗಮನ ಸೆಳೆದಿದ್ದಾರೆ. ಇದು ಡಿಎಂಕೆ ಪಾಲಿಗೆ ಜೀರ್ಣಿಸಿಕೊಳ್ಳಲಾಗದ ದೊಡ್ಡ ಹಿನ್ನಡೆಯಾಗಿ ಪರಿಣಮಿಸಿದೆ. ಚೆಪಾಕ್‌ನಲ್ಲಿ ಉದಯನಿಧಿ ಭರ್ಜರಿ ಜಯ ಒಂದೆಡೆ ಸ್ಟಾಲಿನ್ ಸೋಲನುಭವಿಸಿದ್ದರೆ, ಮತ್ತೊಂದೆಡೆ ಅವರ ಪುತ್ರ ಹಾಗೂ…

Read More

ಬೆಂಗಳೂರು : ಶೃಂಗೇರಿ ವಿಧಾನಸಭಾ ಚುನಾವಣೆಯಲ್ಲಿ ಅಂಚೆ ಮತ ಎಣಿಕೆಯಲ್ಲಿ ಟ್ವಿಸ್ಟ್ ಸಿಕ್ಕಿದ್ದು, ಬಿಜೆಪಿಯ ಡಿ.ಎನ್ ಜೀವರಾಜ್ ಶಾಸಕರ ಪ್ರಮಾಣ ಪತ್ರ ನೀಡಲಾಗಿದೆ. ಇನ್ನು ಈ ವಿಚಾರವಾಗಿ ಶೃಂಗೇರಿ ಕ್ಷೇತ್ರದ ಮರು ಎಣಿಕೆ ಫಲಿತಾಂಶ ಇಡೀ ದೇಶಕ್ಕೆ ಮಾರಕವಾಗಿದೆ. ಶೃಂಗೇರಿ ಚುನಾವಣೆಯಲ್ಲಿ ನಡೆದಿರೋದು ಷಡ್ಯಂತ್ರ, ಸರ್ಕಾರದ ಮಟ್ಟದಲ್ಲಿ ತನಿಖೆ ನಡೆಸುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಬೆಂಗಳೂರಲ್ಲಿ KPCC ಕಚೇರಿಯಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲಿ ಇಷ್ಟರಮಟ್ಟಿಗೆ ಕ್ರಿಮಿನಲ್ ಗಳಿದ್ದರೆಂದು ಅನ್ನಿಸಿರಲಿಲ್ಲ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸೋಲು ಗೆಲುವು ಸಾಮಾನ್ಯ. ಆದರೆ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವುದು ಷಡ್ಯಂತ್ರ. ಈ ಬಗ್ಗೆ ನಾವು ಸರ್ಕಾರದ ಮಟ್ಟದಲ್ಲಿ ತನಿಖೆ ಮಾಡಿಸುತ್ತೇವೆ. ನಮಗೆ ಅನುಮಾನ ಇದ್ದರೆ ಸುಪ್ರೀಂ ಕೋರ್ಟ್ ಗೆ ಹೋಗುತ್ತಿದ್ದೆವು. ಶೃಂಗೇರಿಯಲ್ಲಿ ಮತ ಎಣಿಕೆ ಬಾಕ್ಸ್ ಗಳನ್ನು ತೆರೆಯಲಾಗಿದೆ. ನಮಗೆ ಹಾಕಿದ್ದ ಬ್ಯಾಲೆಟ್ ಪೇಪರ್ ಗಳ ಮೇಲೆ ಮತ್ತೊಂದು ಗುರುತು. ಎಲ್ಲ ಬಂಡಲ್ ಮಾನ್ಯ ಎಂದ ಮೇಲೆ ಈ ತಿದ್ದುಪಡಿ ಹೇಗಾಯಿತು. ಹಿಂದೆ ಫಲಿತಾಂಶ…

Read More