Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಅಬಕಾರಿ ಇಲಾಖೆಯಲ್ಲಿ ಕೋಟ್ಯಾಂತರ ರೂಪಾಯಿ ಹಗರಣ ನಡೆದಿರುವ ಆರೋಪಕ್ಕೆ ಸಂಬಂಧ ಪಟ್ಟಂತೆ ಸಚಿವ ಆರ್ ಬಿ ತಿಮ್ಮಾಪುರ್ ಇದರಲ್ಲಿ ನನ್ನದು ಏನೂ ತಪ್ಪು ಇಲ್ಲ ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಅಬಕಾರಿ ಇಲಾಖೆಯಲ್ಲಿ ಕೋಟ್ಯಾಂತರ ರೂಪಾಯಿ ಹಗರಣ ನಡೆದಿದೆ ಎನ್ನುವ ವಿಚಾರವಾಗಿ ಸದನದಲ್ಲಿ ವಿರೋಧ ಪಕ್ಷಗಳು ಈ ವಿಚಾರವನ್ನು ಪ್ರಸ್ತಾಪ ಮಾಡಲಿ. ನಾನು ಅಲ್ಲಿ ಉತ್ತರ ಕೊಡುತ್ತೇನೆ ಅದಕ್ಕೆ ಸಮರ್ಥನೆ ಕೊಡುತ್ತೇನೆ. ಆದರೆ ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ ಎಂದು ಸಚಿವ ಆರ್ ಬಿ ತಿಮ್ಮಾಪುರ್ ತಿಳಿಸಿದರು.
ಬೆಂಗಳೂರು : ಬೆಂಗಳೂರು ಹೊರಯದಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದು ಸಿನಿಮಾ ಶೈಲಿಯಲ್ಲಿ ಯುವಕನನ್ನು ಕಿಡ್ನ್ಯಾಪ್ಗೆ ಯತ್ನಿಸಿದ್ದಾರೆ. ಹಾಡ ಹಗಲೇ ನಡು ರಸ್ತೆಯಲ್ಲಿಯೇ ಹಲ್ಲೆ ನಡೆಸಿ ಕಿಡ್ನ್ಯಾಪ್ಗೆ ದುಷ್ಕರ್ಮಿಗಳ ಗ್ಯಾಂಗ್ ಯತ್ನಿಸಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನಲ್ಲಿ ನಡೆದಿದೆ. ಆನೇಕಲ್ ತಾಲೂಕಿನ ಇಂಡ್ಲವಾಡಿ ಕ್ರಾಸ್ ಬಳಿ ಈ ಒಂದು ಘಟನೆ ನಡೆದಿದೆ. ಮೂರು ಬೈಕ್ ಒಂದು ಕಾರ್ ನಲ್ಲಿ ಗ್ಯಾಂಗ್ ಬಂದಿದ್ದು ಸುಮಾರು ಎಂಟು ಜನರಿದ್ದ ಗ್ಯಾಂಗ್ ಯುವಕನನ್ನು ಕಿಡ್ನ್ಯಾಪ್ ಮಾಡಲು ಯತ್ನಿಸಿದ್ದಾರೆ. ಯುವಕ ಕ್ಷಮೆ ಕೇಳಿದರೂ ಗ್ಯಾಂಗ್ ಹಲ್ಲೆ ಮಾಡಿದೆ. ಕಾರ್ ಒಳಗೆ ಯುವಕನನ್ನು ಕೂರಿಸಲು ಯತ್ನಿಸುತ್ತಾರೆ ಆಪರೇಷನ್ ಆಗಿದೆ ಸರ್ ಬಿಟ್ಟುಬಿಡು ಎಂದು ಕೇಳಿದರು ಗ್ಯಾಂಗ್ ಬಿಟ್ಟಿಲ್ಲ. ಕಿರುಚಾಡಿ ಕೇಳಿಕೊಂಡರು, ಪುಡಿ ರೌಡಿಗಳ ಗ್ಯಾಂಗ್ ಬಿಡುವುದಿಲ್ಲ. ಯಾವಾಗ ಸಾರ್ವಜನಿಕರು ಪುಂಡರಿಗೆ ಪ್ರಶ್ನೆ ಮಾಡುತ್ತಾರೋ ಆಗ ಅಲ್ಲಿಂದ ಪರಾರಿಯಾಗಿದ್ದಾರೆ.
ಗದಗ : ಲಕ್ಕುಂಡಿಯಲ್ಲಿ ಉತ್ಖನ ಕಾರ್ಯ ಮುಂದುವರೆದಿದ್ದು ಇದೀಗ ಉತ್ಖನನ ಸ್ಥಳವಾದ A-1 ನಲ್ಲಿ ಬೃಹದ್ದಾಕಾರದ ಬಿರುಕು ಕಾಣಿಸಿಕೊಂಡಿದ್ದು ಯಾವುದೇ ಕ್ಷಣದಲ್ಲಿ ಮಣ್ಣು ಕುಸಿಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಘಟನೆ ಸ್ಥಳಕ್ಕೆ ರಾಜ್ಯ ಪುರಾತತ್ವ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ. ಇನ್ನು B-1 ಬ್ಲಾಕ್ ನಲ್ಲಿ ಬೃಹತ್ ಆಕಾರದ ಕಲ್ಲು ಪತ್ತೆಯಾಗಿದ್ದು ಬೃಹದಾಕರ ಕಲ್ಲು ಬೀಳುವ ಆತಂಕ ಎದುರಾಗಿದೆ ಈ ಹಿನ್ನೆಲೆಯಲ್ಲಿ ಮಣ್ಣು ಬಿರಿದುಕೊಂಡಿದ್ದು ಆತಂಕದಲ್ಲಿಯೇ ಕಾರ್ಮಿಕರು ಕೆಲಸದಲ್ಲಿ ತೊಡಗಿದ್ದಾರೆ. ಕಾರ್ಮಿಕರು ಅಪಾಯದ ಕೆಲಸದಲ್ಲಿ ಆತಂಕದಲ್ಲಿ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ಯಾವ ಕ್ಷಣದಲ್ಲಿ ಆದರೂ ಮಣ್ಣು ಕುಸಿಯುವ ಸಾಧ್ಯತೆಯಿದ್ದು ಸ್ಥಳದಲ್ಲಿ ಆತಂಕ ಮನೆ ಮಾಡಿದೆ.
ದಾವಣಗೆರೆ : ದಾವಣಗೆರೆಯಲ್ಲಿ ಮದುವೆಯಾದ 45 ದಿನದಲ್ಲೇ ನವವಿವಾಹಿತ ಹರೀಶ ಪತ್ನಿ ಬೇರೆ ಯುವಕನ ಜೊತೆ ಓಡಿ ಹೋಗಿದ್ದಕ್ಕೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದ ಘಟನೆ ನಡೆದಿತ್ತು. ದಾವಣಗೆರೆಯ ಗುಮ್ಮನೂರಿನಲ್ಲಿ ಈ ಒಂದು ಘಟನೆ ನಡೆದಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಮದುವೆ ಮಾಡಿಸಿದ ಯುವತಿಯ ಸೋದರ ಮಾವ ಕೂಡ ಇದೀಗ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹರೀಶ್ ಆತ್ಮಹತ್ಯೆ ಬೆನ್ನಲ್ಲೇ ಸೋದರ ಮಾವ ರುದ್ರೇಶ್ ಸಹ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಹರೀಶ್ ಮತ್ತು ಸರಸ್ವತಿ ಮದುವೆಯನ್ನು ರುದ್ರೇಶ್ ಮುಂದೆ ನಿಂತು ಮದುವೆ ಮಾಡಿಸಿದ್ದರು. ಆದರೆ ಯುವತಿ ಸರಸ್ವತಿ ಬೇರೆ ಯುವಕನ ಜೊತೆಗೆ ಓಡಿ ಹೋಗಿದ್ದಾಳೆ. ಇದರಿಂದ ಅವಮಾನ ತಾಳದೆ ರುದ್ರೇಶ್ ಸಹ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದಕ್ಕೂ ಮುನ್ನ ಹರೀಶ್ (30) ಎರಡು ಪುಟಗಳ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ತನ್ನ ಪತ್ನಿ ನಡತೆಯ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿದ್ದ. ಬೇರೆ ಯುವಕನ ಜೊತೆ ಓಡಿ ಹೋಗಿ ಕಿರುಕುಳ ನೀಡುತ್ತಿದ್ದ ಆರೋಪ ಕೇಳಿ ಬಂದಿದೆ.…
ಧಾರವಾಡ : ಧಾರವಾಡದಲ್ಲಿ ಗೂಡ ಘಟನೆ ಒಂದು ನಡೆದಿದ್ದು ಹುಚ್ಚುನಾಯಿ ದಾಳಿಯಿಂದ 15ಕ್ಕೂ ಹೆಚ್ಚು ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಕಲಘಟಗಿ ತಾಲೂಕಿನ ಮಿಶ್ರಿಕೋಟೆಯಲ್ಲಿ ನಡೆದಿದೆ. ನಿನ್ನೆ ರಾತ್ರಿ ರಸ್ತೆಯಲ್ಲಿ ತಿರುಗಾಡುತ್ತಿದ್ದವರ ಮೇಲೆ ಹುಚ್ಚು ನಾಯಿ ದಾಳಿ ಮಾಡಿದೆ ಹುಚ್ಚು ನಾಯಿ ದಾಳಿಯಿಂದ ಹಲವರ ಕೈ, ಕಾಲು ಮತ್ತು ಮುಖಕ್ಕೆ ಗಂಭೀರವಾದ ಗಾಯಗಳಾಗಿವೆ. ಗಾಯಾಳುಗಳಿಗೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಇನ್ನೂ ಕೆಲವರಿಗೆ ಹುಬ್ಬಳ್ಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದಾಳಿ ಮಾಡಿದ ಹುಚ್ಚು ನಾಯಿಯನ್ನು ಗ್ರಾಮಸ್ಥರು ಹಿಡಿದುಕೊಂಡಿದ್ದಾರೆ ಕಲಘಟಗಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಕೊಪ್ಪಳ : ಡಿಸಿಎಂ ಡಿಕೆ ಶಿವಕುಮಾರ್ ಅವರು ಒತ್ತಾಯಪೂರ್ವಕ ಆದರೂ ಸಿಎಂ ಕುರ್ಚಿಯಲ್ಲಿ ಕೂರುತ್ತಾರೆ ಎಂದು ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಶಾಸಕ ಜನಾರ್ಧನ ರೆಡ್ಡಿ ಹೇಳಿಕೆ ನೀಡಿದರು. ಅರಸು ಕಲೆಯನ್ನು ಮುರಿಯಲು ಸಿದ್ದರಾಮಯ ಕಾಯುತ್ತಿದ್ದರು. ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಮಾತುಕತೆ ನಡೆಯುತ್ತಿದೆ. ಆದರೆ ಅವರ ಆಸಕ್ತಿ ಏನು ಅಂದರೆ ಸೂಪರ್ ಸಿಎಂ ಆಗಿರಬೇಕು. ಹೀಗಾಗಿ ಸಿಎಂ ಬದಲಾವಣೆ ಸ್ವಲ್ಪ ತಡವಾಗುತಿದೆ ಎಂದು ಗಂಗಾವತಿಯಲ್ಲಿ ಶಾಸಕರಿನಾರ್ಧನ ರೆಡ್ಡಿ ಹೇಳಿಕೆ ನೀಡಿದರು
ಕೋಲಾರ : ರಾಜ್ಯದಲ್ಲಿ ಮತ್ತೊಂದು ಬೆಚ್ಚಿಬಿಳಿಸುವಂತಹ ಘಟನೆ ನಡೆದಿದ್ದು, ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ ಆರೋಪದ ಮೇಲೆ ರೈತ ಸಂಘದ ಕೋಲಾರ ಜಿಲ್ಲಾಧ್ಯಕ್ಷ ರಾಮೇಗೌಡನನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ಠಾಣೆ ಪೊಲೀಸರು ರಾಮೇಗೌಡನನು ಅರೆಸ್ಟ್ ಮಾಡಿದ್ದಾರೆ. 15 ವರ್ಷದ ಬಾಲಕಿಯನ್ನು ಬೆದರಿಸಿ ರಾಮೇಗೌಡ ಅತ್ಯಾಚಾರ ಎಸೆಗಿದ್ದಾನೆ ಎಂದು ಸಂತ್ರಸ್ತೆಯ ತಂದೆ ದೂರು ನೀಡಿದ್ದರು. ಈ ಹಿನ್ನೆಲೆ ಬಾಲಕಿಯ ತಂದೆ ನೀಡಿದ ದೂರನ್ನು ಆಧರಿಸಿ ರಾಮೇಗೌಡನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.a
ಬೆಂಗಳೂರು : ನಟಿ ಕಾವ್ಯ ಗೌಡಗೆ ಪತಿಯ ಸಂಬಂಧಿಕರಿಂದ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಕಾವ್ಯ ಜನಪ್ರಿಯತೆ ಸಹಿಸದೆ ಧಮ್ಕಿ ಮಾಡಿರುವ ಆರೋಪ ಕೇಳಿ ಬಂದಿದೆ. ಪತಿ ಸೋಮಶೇಖರ್ ಸಂಬಂಧಿಕರು ಕಾವ್ಯ ಗೌಡಗೆ ಬೆದರಿಕೆ ಹಾಕಿದ್ದಾರೆ. ಅಲ್ಲದೆ ರವಿಕುಮಾರ್ ಎಂಬಾತ ನಿನ್ನ ನೂರು ಜನರ ಮುಂದೆ ರೇಪ್ ಮಾಡಿ ಕೊಲ್ತಿನಿ ಎಂದು ಬೆದರಿಕೆ ಕೂಡ ಹಾಕಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ. ಈ ಕುರಿತು ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಕಾವ್ಯ ಗೌಡ ಅಕ್ಕ ಭವ್ಯ ಗೌಡ ದೂರು ನೀಡಿದ್ದಾರೆ. ಪ್ರೇಮ, ನಂದೀಶ್, ಪ್ರಿಯಾ ಹಾಗು ರವಿಕುಮಾರ್ ವಿರುದ್ಧ ದೂರು ದಾಖಲಾಗಿದೆ. ಘಟನೆಯಿಂದ ನಟಿ ಕಾವ್ಯ ಗೌಡ ಮಾನಸಿಕವಾಗಿ ನೊಂದಿದ್ದಾರೆ. ಸೋಮಶೇಖರ್ ನಂದೀಶ್ ಇಬ್ಬರು ಸಹೋದರರು ಒಂದೇ ಮನೆಯಲ್ಲಿ ಇಬ್ಬರು ವಾಸವಿದ್ದರು ಹೀಗಾಗಿ ಆಗಾಗ ಕಾವ್ಯ ಮತ್ತು ಪ್ರೇಮ ನಡುವೆ ಮನಸ್ತಾಪ ಆಗುತ್ತಿತ್ತು. ಮನೆಯಲ್ಲಿ ಸಣ್ಣಪುಟ್ಟ ವಿಚಾರಕ್ಕೂ ಗಲಾಟೆ ಆಗುತ್ತಿತ್ತು . ನಿನ್ನೆ ಕಾವ್ಯ ಪ್ರೇಮಾ ಸಂಬಂಧಿಕರು ಮನೆಗೆ ಬಂದಿದ್ದರು. ಈ…
ಚಿಕ್ಕಬಳ್ಳಾಪುರ : ಬ್ಯಾನರ್ ತೆರವು ಮಾಡಿದ ವಿಚಾರಕ್ಕೆ ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡಗೆ ನಿಂದಿಸಿ, ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 13 ದಿನಗಳ ಬಳಿಕ ಕೊನೆಗೆ ಆರೋಪಿ ರಾಜೀವ್ ಗೌಡನನ್ನು ಪೊಲೀಸರು ಬಂಧಿಸಿದ್ದಾರೆ.ತಲೆಮರೆಸಿಕೊಂಡಿದ್ದ ರಾಜೀವ್ ಗೌಡ ಕೇರಳ ಗಡಿಯಲ್ಲಿ ಸಿಕ್ಕಿಬಿದ್ದಿದ್ದಾನೆ. ಜನವರಿ12ರಂದು ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾ ಗೌಡಗೆ ಕಲ್ಟ್ ಸಿನಿಮಾ ಬ್ಯಾನರ್ ತೆರವು ಮಾಡಿದ್ದಕ್ಕೆ ರಾಜೀವ್ ಗೌಡ ಧಮ್ಕಿ ಹಾಕಿದ್ದ. ಜನವರಿ 14ರಂದು ಈ ಬಗ್ಗೆ ರಾಜೀವ್ ಗೌಡ ವಿರುದ್ಧ ಪ್ರಕರಣ ದಾಖಲಾಗಿತ್ತು. ಬಳಿಕ 13 ದಿನಗಳಿಂದ ಚಿಕ್ಕಬಳ್ಳಾಪುರ ಬಿಟ್ಟು ಪರಾರಿಯಾಗಿದ್ದ. ಬಂಧನದ ಭೀತಿಯಲ್ಲಿದ್ದ ರಾಜೀವ್ ಗೌಡನಿಗೆ ಮಂಗಳೂರಿನಲ್ಲಿ ಉದ್ಯಮಿಯೊಬ್ಬರ ಬಳಿ 3 ದಿನದಿಂದ ಆಶ್ರಯ ಪಡೆದಿದ್ದ. ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬ್ಯಾನರ್ ತೆರವು ಸಂಬಂಧ ಕೈ ಮುಖಂಡ ರಾಜೀವ್ ಗೌಡ ಅವಾಚ್ಯ ಶಬ್ದಗಳಿಂದ ನಿಂದಿಸಿ, ಧಮ್ಕಿ ಹಾಕಿದ್ದರು. ಈ ಸಂಬಂಧ ಅವರ ವಿರುದ್ದ ಪೌರಾಯುಕ್ತೆ ದೂರು ನೀಡಿದ್ದರಿಂದ ಎಫ್ಐಆರ್ ದಾಖಲಾಗಿತ್ತು. ದೂರಿನ ಬಳಿಕ ತಲೆಮರೆಸಿಕೊಂಡಿದ್ದಂತ ರಾಜೀವ್ ಗೌಡ…
ಬೆಂಗಳೂರು : ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲರಿಗೆ ಅಡ್ಡಿಪಡಿಸಿದ ವಿಚಾರಕ್ಕೆ ಸಂಬಂಧಪಟ್ಟಂತೆ ವಿಧಾನಸಭೆಯಲ್ಲಿ ನಡೆದಿದ್ದ ಬೆಳವಣಿಗೆಯ ಬಗ್ಗೆ ರಾಷ್ಟ್ರಪತಿಗೆ ವರದಿ ಸಲ್ಲಿಸಲಾಗಿದೆ. ದ್ರೌಪದಿ ಮುರ್ಮು ಅವರಿಗೆ ಗವರ್ನರ್ ಥಾವರ್ ಚಂದ್ ಗೆಹ್ಲೊಟ್ ವರದಿ ಸಲ್ಲಿಸಿದ್ದಾರೆ. ವಿಧಾನಸಭೆಯಲ್ಲಿ ನಡೆದಿದ್ದ ಘಟನೆ ಕುರಿತು ಇದೀಗ ರಾಷ್ಟ್ರಪತಿ ಭವನಕ್ಕೆ ವರದಿ ರವಾನಿಸಲಾಗಿದೆ. ವಾಸ್ತವ ಅಂಶಗಳ ಪ್ರತ್ಯೇಕ ವರ್ದಿಸಿದ ಪಡಿಸಿ ರಾಜ್ಯಪಾಲರು ರಾಷ್ಟ್ರಪತಿ ಅವರಿಗೆ ವರದಿ ಸಲ್ಲಿಸಿದ್ದಾರೆ. ರಾಜ್ಯದ ಬೆಳವಣಿ ಬಗ್ಗೆ ವಾರ ಮತ್ತು ತಿಂಗಳಿಗೋಮ್ಮೆ ರಾಷ್ಟ್ರಪತಿಗಳಿಗೆ ವರದಿ ಸಲ್ಲಿಸುತ್ತಾರೆ. ವಾರದ ವರದಿ ಅಲ್ಲದೆ ಪ್ರತ್ಯೇಕ ವರದಿ ಸಲ್ಲಿಸಿದ್ದಾರೆ. ಸದನದಲ್ಲಿ ರಾಜ್ಯಪಾಲರು ಭಾಷಣ ಮಾಡದೆ ತೆರಳುತ್ತಿದ್ದಾಗ ಘಟನೆ ನಡೆದಿದ್ದು, ಆನಂತರ ನಡೆದ ಬೆಳವಣಿಗೆಗಳ ಬಗ್ಗೆ ಪ್ರತ್ಯೇಕ ವರ್ದಿ ಸಲ್ಲಿಸಿದ್ದಾರೆ. ವರದಿಯಲ್ಲಿ ರಾಜಪಾಲರ ವಿರುದ್ಧ ಘೋಷಣೆ ಕೂಗಿದರ ಬಗ್ಗೆ, ಭಾಷಣ ಮಾಡಲು ಒತ್ತಡ ಹೇರಲು ಪ್ರಯತ್ನಿಸಿದ ಬಗ್ಗೆ ಹಾಗು ಕಾಂಗ್ರೆಸ್ ಸದಸ್ಯರ ವರ್ತನೆ ಬಗ್ಗೆಯೂ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಉಲ್ಲೇಖಿಸಿದ ಮಾತುಗಳ ಬಗ್ಗೆಯೂ ವಿವರಿಸಲಾಗಿದೆ.














