Author: kannadanewsnow05

ಬೆಂಗಳೂರು : ಇತ್ತೀಚೆಗೆ ಹೆಂಡತಿಯರ ಕಾಟಕ್ಕೆ ಅದೆಷ್ಟೋ ಗಂಡಂದಿರು ಕಿರುಕುಳ ತಾಳದೆ ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇದೀಗ ಬೆಂಗಳೂರಿನಲ್ಲಿ ಪತ್ನಿಯ ಕಾಟಕ್ಕೆ ಬೇಸತ್ತು ವ್ಯಕ್ತಿಯೊಬ್ಬ ಬೆಂಗಳೂರಿನ ರಾಜಭವನದ ಎದುರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆತಿಸಿರುವ ಘಟನೆ ಇದೀಗ ವರದಿಯಾಗಿದೆ. ಹೌದು ಪೆಟ್ರೋಲ್ ಸುರವಿಕೊಂಡು ವ್ಯಕ್ತಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ. ಹೆಂಡತಿ ಕಿರುಕುಳಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಅಲ್ಲದೇ ಈ ಕುರಿತು ಪೊಲೀಸರು ಸ್ವೀಕರಿಸದಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ನನ್ನ ಮೇಲೆ ಕೊಲೆ ಯತ್ನ ನಡೆದಿದೆ. ನನಗೆ ಬದುಕಲು ದಾರಿ ಇಲ್ಲ. ಸಾಯುವುದೊಂದೇ ದಾರಿ ಎಂದು ವ್ಯಕ್ತಿ ಹೇಳಿದ್ದಾನೆ. ಕೂಡಲ್ಸ್ ವ್ಯಕ್ತಿಯನ್ನು ವಿಧಾನಸೌಧ ಠಾಣೆ ಪೊಲೀಸರು ತಕ್ಷಣ ಕರೆದೊಯ್ಯದಿದ್ದಾರೆ.

Read More

ಬಳ್ಳಾರಿ : ಹಿಂದುಳಿದ ನಾಯಕನಾಗಿ ಬೆಳೆಯಬೇಕೆಂದರೆ ಅಷ್ಟು ಸುಲಭವಲ್ಲ. ಬೆಂಕಿಯ ಮೇಲೆ ಹಗ್ಗದ ಮೇಲೆ ನಡೆದ ಹಾಗೆ ಇರುತ್ತದೆ ಎಂದುಸಂಗೊಳ್ಳಿ ರಾಯಣ್ಣ ಕನಕದಾಸರ ಮೂರ್ತಿ ಉದ್ಘಾಟನೆ ಕಾರ್ಯಕ್ರಮದಲ್ಲಿ MLC ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಬಳ್ಳಾರಿ ಜಿಲ್ಲೆಯ ಕಂಪ್ಲಿ ಕ್ಷೇತ್ರದ ಕಲ್ಲಕಂಬ ಗ್ರಾಮದಲ್ಲಿ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಸಿದ್ದರಾಮಯ್ಯ ಹಿಂದುಳಿದ ಸಮುದಾಯ ನಾಯಕರಾಗಿ ಬೆಳೆಯಬೇಕಾದರೆ ಸಣ್ಣ ಪುಟ್ಟ ತಪ್ಪುಗಳನ್ನು ನೋಡುವವರೇ ಹೆಚ್ಚು ಸಿದ್ದರಾಮಯ್ಯ ಎಲ್ಲವನ್ನೂ ಎದುರಿಸಿ ಬೆಳೆದು ನಿಂತು ಮುಖ್ಯಮಂತ್ರಿ ಆಗಿದ್ದರು. ಈಗ ಮತ್ತೊಮ್ಮೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾರೆ. ಸಿದ್ದರಾಮಯ್ಯನವರ ಶಕ್ತಿಯನ್ನು ಕುಂದಿಸುವ ಕುತಂತ್ರ ನಡೆಯುತ್ತಿದೆ. ಬಿಜೆಪಿ ಜೆಡಿಎಸ್ ಮೈತ್ರಿ ಮಾಡಿಕೊಂಡು ಕುತಂತ್ರ ನಡೆಸುತ್ತಿವೆ. ಕೇಂದ್ರ ಸರ್ಕಾರದ ಮೂಲಕ ಒತ್ತಡ ಹಾಕಿಸಿ ಕುತಂತ್ರ ಮಾಡುತ್ತಿದ್ದಾರೆ.ನಿಮ್ಮ ಯಾವುದೇ ಕುತಂತ್ರಗಳಿಂದ ಸಿದ್ದರಾಮಯ್ಯ ಜಗ್ಗಲ್ಲ ಬಗ್ಗಲ್ಲ. ಸಿದ್ದರಾಮಯ್ಯನವರ ಮೇಲೆ ನಿಮ್ಮ ಪ್ರೀತಿ ಬೆಂಬಲ ಹೀಗೆ ಇರಲಿ. ಎಂದು ಕಲ್ಲಕಂಬ ಗ್ರಾಮದಲ್ಲಿ ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದರು.

Read More

ಬೆಳಗಾವಿ : ಆಸ್ಪತ್ರೆಯವರು, ಸಂಬಳ ನೀಡದೇ ಸತಾಯಿಸುತ್ತಿದ್ದರಿಂದ ನೊಂದ ಆಂಬುಲೆನ್ಸ್ ಚಾಲಕನೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಶಹಾಪುರ ಠಾನೆ ವ್ಯಾಪ್ತಿಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಚಾಲಕನನ್ನು ಓಂಕಾರ್ ಪವಾರ್ (25) ಎಂದು ತಿಳಿದುಬಂದಿದೆ.ಈತ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಸಂಬಳ ನೀಡದೇ ಆಸ್ಪತ್ರೆಯವರು ಸತಾಯಿಸುತ್ತಿದ್ದರು.ಹಲವು ಬಾರಿ ಮನವಿ ಮಾಡಿದರೂ ನಿರ್ಲಕ್ಷ್ಯ ಮಾಡಿದ್ದರು. ಇದರಿಂದ ನೊಂದ ಓಂಕಾರ್, ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದೀಗ ಆತ್ಮಹತ್ಯೆಗೆ ಶರಣಾಗಿರುವ ಓಂಕಾರ್ ಕುಟುಂಬಸ್ಥರು ಖಾಸಗಿ ಆಸ್ಪತ್ರೆಯ ವಿರುದ್ಧ ಆಕ್ರೋಶ ಹೊರಹಾಕಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Read More

ಹಾವೇರಿ : ನೀರಾವರಿ ಇಲಾಖೆಯಲ್ಲಿ ಶೇ. 10 ರಿಂದ 12 ರಷ್ಟು ಕಮಿಷನ್ ಕೇಳುತ್ತಾರೆ. ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 8 ರಿಂದ 10 ರಷ್ಟು ಕಮಿಷನ್ ಫಿಕ್ಸ್ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹಾವೇರಿ ಜಿಲ್ಲೆಯಲ್ಲಿ ಬಾಕಿ ಹಣ ಬಿಡುಗಡೆಗೆ ಈಗಾಗಲೇ ಕಮಿಷನ್ ಪಾವತಿ ಮಾಡಲಾಗಿದೆ. ಸರ್ಕಾರ ಕೂಡಲೇ ಗುತ್ತಿಗೆದಾರರಿಗೆ ಬಾಕಿ ಹಣವನ್ನು ಬಿಡುಗಡೆ ಮಾಡಬೇಕು ಎಂದು ಹಾವೇರಿ ಜಿಲ್ಲಾ ಗುತ್ತಿಗೆದಾರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಒತ್ತಾಯಿಸಿದರು. ಈ ಕುರಿತು ಸರ್ಕಾರದ ವಿರುದ್ಧ ಹಾವೇರಿ ಜಿಲ್ಲಾ ಗುತ್ತಿಗೆದಾರರ ಸಂಘ ಆರೋಪ ಮಾಡುತ್ತಿದ್ದು, ಮುಂಗಡವಾಗಿ ಕಮಿಷನ್ ನೀಡಿದರು ಬಾಕಿ ಹಣ ಪಾವತಿ ಮಾಡಿಲ್ಲ ಬಾಕಿ ಬಿಲ್ ನೀಡುವ ಬಗ್ಗೆ ಸಿವಿಲ್ ಗುತ್ತಿಗೆದಾರರಿಗೆ ಅನ್ಯಾಯವಾಗಿದೆ. ಮಾರ್ಚ್ ಅಂತ್ಯದಲ್ಲಿ ಪಿಡಬ್ಲ್ಯೂಡಿ ಇಂದ ಅನುದಾನ ಬಿಡುಗಡೆ ಆಗಿದೆ. ಆದರೆ ಉಳಿದ ಇಲಾಖೆಗಳಲ್ಲಿ ಗುತ್ತಿಗೆದಾರರಿಗೆ ಬಹಳ ಸಮಸ್ಯೆಯಾಗಿದೆ. ಮಾರ್ಚ್ ತಿಂಗಳಲ್ಲಿ ಸಣ್ಣ ಗುತ್ತಿಗೆದಾರರಿಗೆ ಬಾಕಿ ಹಣ ಬಂದಿದೆ. ಇನ್ನು ಎರಡು ಕೋಟಿಯಿಂದ 5 ಕೋಟಿ ರೂಪಾಯಿ ಬಾಕಿ ಬಿಲ್ ಬರಬೇಕಿದೆ…

Read More

ಬೆಂಗಳೂರು : ಡೀಸೆಲ್‌ ದರ ಹಾಗೂ ಟೋಲ್‌ ಶುಲ್ಕ ಹೆಚ್ಚಳ ವಿರೋಧಿಸಿ, ಪರಿಷ್ಕರಣೆ ಮಾಡುವಂತೆ ಆಗ್ರಹಿಸಿ ಎ.14 ಅಂದರೆ ನಾಳೆ ಮಧ್ಯರಾತ್ರಿಯಿಂದಲೇ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ರಾಜ್ಯ ಲಾರಿ ಮಾಲೀಕರ ಸಂಘ ಸಜ್ಜಾಗಿದೆ. ಈ ಕುರಿತು ಜಿ.ಆರ್‌. ಷಣ್ಮುಖಪ್ಪ ಮಾತನಾಡಿ, ಏ.14 ರಿಂದ ಅನಿರ್ದಿಷ್ಟಾವಧಿ ಲಾರಿ ಮುಷ್ಕರಕ್ಕೆ ಈಗಾಗಲೇ ಕರೆ ನೀಡಲಾಗಿದೆ. ಹೊರ ರಾಜ್ಯಗಳ ಲಾರಿ ಮಾಲೀಕರು ಸೇರಿದಂತೆ ರಾಜ್ಯವ್ಯಾಪಿ ಬೆಂಬಲಿಸಿದ್ದಾರೆ. ಯಾವುದೇ ಕಾರಣಕ್ಕೂ ಮುಷ್ಕರ ಹಿಂಪಡೆಯುವುದಿಲ್ಲ. ಕೆಲ ಬಣದ ನಾಯಕರು ಸರ್ಕಾರದೊಟ್ಟಿಗೆ ಕೈಜೋಡಿಸಿದ್ದು ವಿರೋಧ ಮಾಡುತ್ತಿದ್ದಾರೆ. ಈಗಾಗಲೇ ಹಲವು ಪೆಟ್ರೋಲ್‌ ಬಂಕ್‌ ಸಂಘಟನೆಗಳು ಸೇರಿದಂತೆ ರಾಜ್ಯವ್ಯಾಪಿ ಮುಷ್ಕರಕ್ಕೆ ಬೆಂಬಲ ಸೂಚಿಸಿವೆ. ಹಾಗಾಗಿ ಮುಷ್ಕರ ನಡೆಸುವುದು ನಿಶ್ಚಿತ ಎಂದು ಹೇಳಿದರು. ಅಲ್ಲದೇ ನಾಳೆಯಿಂದ ರಾಜ್ಯದಲ್ಲಿ 6 ಲಕ್ಷಕ್ಕೂ ಹೆಚ್ಚು ಲಾರಿಗಳಿದ್ದು ಮುಷ್ಕರಕ್ಕೆ ಬೆಂಬಲಿಸುವ ಮೂಲಕ ಸಂಚಾರವನ್ನು ಸ್ಥಗಿತಗೊಳಿಸಲಿವೆ. ಹೊರರಾಜ್ಯಗಳಿಂದಲೂ ಲಾರಿಗಳು ಬರಲು ಬಿಡುವುದಿಲ್ಲ ಅಂದು ವಾಣಿಜ್ಯ ಸೇರಿದಂತೆ ಎಲ್ಲ ಮಾದರಿಯ ಸರಕು ಸೇವೆಗಳು ಸ್ತಬ್ಧಗೊಳ್ಳಲಿವೆ ಎಂದರು.

Read More

ತುಮಕೂರು : ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನ ವಿಧಾನಸೌಧದಲ್ಲಿ ಜಾತಿ ಗಣತಿ ವರದಿಯನ್ನು ಮಂಡಿಸಲಾಯಿತು. ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಜಾದಿಗಣತಿ ವರದಿ ಮಂಡನೆ ಆಯಿತು. ಬಳಿಕ ಎಪ್ರಿಲ್ 17ರಂದು ವಿಶೇಷ ಸಂಪುಟ ಸಭೆ ಕರೆದಿದ್ದು ಆ ಒಂದು ಸಭೆಯಲ್ಲಿ ಜಾತಿಗಣತಿ ವರದಿ ಜಾರಿ ಕುರಿತು ಮಹತ್ವದ ಚರ್ಚೆ ನಡೆಯಲಿದೆ. ಇನ್ನು ಜಾತಿಗಣತಿ ವರದಿ ವಿಚಾರವಾಗಿ ತುಮಕೂರು ಜಿಲ್ಲೆಯಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಏಪ್ರಿಲ್ 17ರಂದು ಸಚಿವ ಸಂಪುಟದಲ್ಲಿ ಜಾತಿಗಣತಿ ವರದಿ ಚರ್ಚೆ ಬಳಿಕ ವರದಿಯನ್ನು ಸರ್ಕಾರ ಒಪ್ಪಬಹುದು ಅಥವಾ ತಿರಸ್ಕರಿಸಬಹುದು.ಜಾತಿ ಗಣತಿ ವರದಿ ಶೇಕಡ 95 ರಷ್ಟು ಸರಿ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಹೀಗಾಗಿ ಜಾತಿಗಣತಿಯ ವರದಿಯನ್ನು ಒಪ್ಪುವ ಸಾಧ್ಯತೆ ಹೆಚ್ಚಿದೆ ಎಂದರು. ನಾನು ವರದಿಯನ್ನು ಓದುತ್ತಿದ್ದೇನೆ ಇನ್ನು ಪೂರ್ತಿಯಾಗಿ ಓದಿಲ್ಲ. 2015ರಿಂದ ಜಾತಿ ಗೆಳತಿ ಸಮೀಕ್ಷೆ ಮಾಡಲಾಗಿದೆ. ವರದಿಯನ್ನು ಒಪ್ಪಲಿ ಅಥವಾ ಬಿಡಲಿ ಅದು ಬೇರೆ…

Read More

ಹುಬ್ಬಳ್ಳಿ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದ್ದು, 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.ಹುಬ್ಬಳ್ಳಿಯ ಅಶೋಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಬೆಳಕಿಗೆ ಬಂದಿದ್ದು, ಬಿಹಾರ ಮೂಲದ ವ್ಯಕ್ತಿಯೊಬ್ಬ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಸದ್ಯ ಬಾಲಕಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಬಿಹಾರ್ ಮೂಲದ ವ್ಯಕ್ತಿಯಿಂದ ಈ ಒಂದು ಕೃತ್ಯ ನಡೆದಿದೆ ಎಂದು ಹೇಳಲಾಗುತ್ತಿದ್ದು, ಘಟನೆ ಖಂಡಿಸಿ ಅಶೋಕ್ ನಗರ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಲಾಗುತ್ತಿದೆ. ಮನೆಯ ಹೊರಗಡೆ ಬಾಲಕಿ ಆಟವಾಡುತ್ತಿರುತ್ತಿದ್ದಾಳೆ ಈ ವೇಳೆ ಪಾಪಿ ಬಾಲಕಿಗೆ ಚಾಕ್ಲೇಟ್ ಆಸೆ ತೋರಿಸಿ ಅಪಹರಿಸಿ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ.

Read More

ಬೆಳಗಾವಿ : ಇತ್ತೀಚಿಗೆ ವಯಸ್ಸಿನ ಮಿತಿ ಇಲ್ಲದೆ ಈ ಒಂದು ಹೃದಯಘಾತ ಎನ್ನುವುದು ಸಾಮಾನ್ಯವಾದ ಕಾಯಿಲೆಯಾಗಿ ಬಿಟ್ಟಿದೆ. ಅದರಲ್ಲೂ ಸಣ್ಣ ವಯಸ್ಸಿನ ಮಕ್ಕಳು ಹಾಗೂ ಯುವಕರಿಗೆ ಹೃದಯಾಘಾತ ಬಹಳ ದೊಡ್ಡ ಸಮಸ್ಯೆಯಾಗಿದೆ. ಇದೀಗ ಬೆಳಗಾವಿಯಲ್ಲಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಒಬ್ಬರು ಕರ್ತವ್ಯ ಮುಗಿಸಿ ಮನೆಗೆ ಬಂದು ಮಲಗಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಮೃತರನ್ನು ಮಲ್ಲಸರ್ಜ ಅಂಕಲಗಿ (45) ಎಂದು ತಿಳಿದುಬಂದಿದೆ. ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಎಂದಿನಂತೆ ಡ್ಯೂಟಿ ಮುಗಿಸಿ ಮನೆಗೆ ಬಂದ ಮಲ್ಲಸರ್ಜ ಅಂಕಲಗಿ, ಊಟ ಮಾಡಿ ರಾತ್ರಿ ಮಲಗಿದ್ದರು. ಇಂದು ಬೆಳಿಗ್ಗೆ ಎಷ್ಟು ಹೊತ್ತಾದರೂ ಕೂಡ ಏಳದೆ ಇದ್ದಾಗ ಮನೆಯವರು ಗಾಬರಿಗೊಂಡು ಎಬ್ಬಿಸಿದಾಗ ಮಲ್ಲಸರ್ಜಾ ಅವರು ಹೃದಯಾಘಾತದಿಂದ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ.

Read More

ನವದೆಹಲಿ : ಮೆಸೇಜಿಂಗ್ ಪ್ಲಾಟ್ಫಾರ್ಮ್ ವಾಟ್ಸಾಪ್ ಶನಿವಾರ ಕೆಲವು ಬಳಕೆದಾರರಿಗೆ ಕಾರ್ಯನಿರ್ವಹಿಸುತ್ತಿಲ್ಲ. ಕೆಲವು ಬಳಕೆದಾರರು ಇಂದು ಸಂಜೆ ಮೆಟಾ-ಮಾಲೀಕತ್ವದ ಅಪ್ಲಿಕೇಶನ್ನಲ್ಲಿ ತಮ್ಮ ಸ್ಟೇಟಸ್ಗಳನ್ನು ಅಪ್ಲೋಡ್ ಮಾಡಲು ಅಥವಾ ಸಂದೇಶಗಳನ್ನು ಕಳುಹಿಸಲು ತೊಂದರೆಗಳನ್ನು ಕಳುಹಿಸಲಿ ಸಾಧ್ಯವಾಗುತ್ತಿಲ್ಲ ಎಂದು ವರದಿ ಮಾಡಿದ್ದಾರೆ.ಇದೀಗ ಮತ್ತೆ ಭಾರತ ಸೇರಿದಂತೆ ವಿಶ್ವದಾದ್ಯಂತ ಮತ್ತೆ ವಾಟ್ಸ್ ಆಪ್ ಸೇವೆ ಡೌನ್ ಆಗಿದೆ. ತನ್ನ ಪ್ಲಾಟ್ಫಾರ್ಮ್ನಲ್ಲಿ ಬಳಕೆದಾರರು ಸಲ್ಲಿಸಿದ ದೋಷಗಳು ಸೇರಿದಂತೆ ಹಲವಾರು ಮೂಲಗಳಿಂದ ಸ್ಟೇಟಸ್ ವರದಿಗಳನ್ನು ಒಟ್ಟುಗೂಡಿಸುವ ಮೂಲಕ ಸ್ಥಗಿತಗಳನ್ನು ಪತ್ತೆಹಚ್ಚುವ ಡೌನ್ಡೆಟೆಕ್ಟರ್ ಪ್ರಕಾರ, ಸಂಜೆ 5:13 ರವರೆಗೆ ವಾಟ್ಸಾಪ್ ವಿರುದ್ಧ ಕನಿಷ್ಠ 463 ದೂರುಗಳು ದಾಖಲಾಗಿವೆ ಎಂದಿದೆ.ಶೇ.80% ಕ್ಕೂ ಹೆಚ್ಚು ದೂರುಗಳು ಸಂದೇಶಗಳನ್ನು ಕಳುಹಿಸುವುದಕ್ಕೆ ಸಂಬಂಧಿಸಿವೆ. 15% ಜನರು ಅಪ್ಲಿಕೇಶನ್ನಲ್ಲಿ ತೊಂದರೆಗಳನ್ನು ಅನುಭವಿಸಿದ್ದಾರೆ ಮತ್ತು 4% ಲಾಗಿನ್ ಸಮಯದಲ್ಲಿ ಎಂಬುದಾಗಿ ತಿಳಿಸಿದೆ. “ಇದು ನಾನು ಮಾತ್ರವೇ ಅಥವಾ ನಿಮ್ಮ ವಾಟ್ಸಾಪ್ ಕೂಡ ಡೌನ್ ಆಗಿದೆಯೇ? ನಾನು ಸ್ಟೇಟಸ್ ಅಪ್ಲೋಡ್ ಮಾಡಲು ಪ್ರಯತ್ನಿಸುತ್ತಿದ್ದೇನೆ ಮತ್ತು ಹಾಗೆ ಮಾಡಲು ಶಾಶ್ವತವಾಗಿ ತೆಗೆದುಕೊಳ್ಳುತ್ತಿದೆ”…

Read More

ಬೆಂಗಳೂರು : ಇತ್ತೀಚಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆ ಆಯಿತು. ಅಲ್ಲದೇ ರಾಜ್ಯದಲ್ಲಿ ಜಾತಿ ಗಣತಿ ವರದಿ ಜಾರಿಗೆ ಮಾಡಲು ರಾಜ್ಯ ಸರ್ಕಾರ ಏಪ್ರಿಲ್ 17 ರಂದು ವಿಶೇಷ ಸಂಪುಟ ಸಭೆ ಕರೆದಿದೆ. ಈಗಾಗಲೇ ಜಾತಿ ಗಣತಿ ವರದಿ ಜಾರಿ ಕುರಿತು ಪರ ವಿರೋಧ ಚರ್ಚೆಗಳು ಆರಂಭವಾಗಿದ್ದು ಇದರ ಬೆನ್ನಲ್ಲೇ ರಾಜ್ಯದಲ್ಲಿ ಜಾತಿವಾರು ಜನಸಂಖ್ಯೆ ಪ್ರಮಾಣದ ಮಾಹಿತಿ ಬಹಿರಂಗವಾಗಿದೆ. ಹೌದು ರಾಜ್ಯದಲ್ಲಿ ಜಾತಿವಾರು ಜನಸಂಖ್ಯೆ ಪ್ರಮಾಣದ ಬಗ್ಗೆ ಇದೀಗ ಮಾಹಿತಿ ಬಹಿರಂಗವಾಗಿದೆ. ರಾಜ್ಯದಲ್ಲಿ ಜಾತಿ ಸಮೀಕ್ಷೆಗೆ ಒಳಪಟ್ಟ ಜನಸಂಖ್ಯೆ 5,98,14,942 ಎಂದು ತಿಳಿದುಬಂದಿದೆ. ರಾಜ್ಯದಲ್ಲಿ ಎಸ್​ಸಿ ಜನಸಂಖ್ಯೆ 1,09,29,347, ಎಸ್​ಟಿ ಜನಸಂಖ್ಯೆ 42,81,289, ಪ್ರವರ್ಗ 1ಎ ಜನಸಂಖ್ಯೆ 34,96,638, ಪ್ರವರ್ಗ 1ಬಿ ಜನಸಂಖ್ಯೆ 73,92,313, ಪ್ರವರ್ಗ 2ಎ ಜನಸಂಖ್ಯೆ 77,78,209 ಇದ್ದು ಪ್ರವರ್ಗ 2B ಜನಸಂಖ್ಯೆ 75,25,880 ಇದೆ. ಪ್ರವರ್ಗ 3A ಜನ ಸಂಖ್ಯೆ 72,99,577 ಇದ್ದು, 3B ಜನಸಂಖ್ಯೆ 81,37,536 ಇದೆ ಎಂದು…

Read More