Subscribe to Updates
Get the latest creative news from FooBar about art, design and business.
Author: kannadanewsnow05
ಕೆನಡಾ : ಕೆನಡಾದ ಉತ್ತರ ಬ್ರಿಟಿಷ್ ಕೊಲಂಬಿಯಾದ ಪ್ರೌಢಶಾಲೆಯನ್ನು ಗುರಿಯಾಗಿಸಿಕೊಂಡು ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ ಶಂಕಿತ ಸೇರಿದಂತೆ 10 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೆನಡಾದ ಇತಿಹಾಸದಲ್ಲಿ ಈ ರೀತಿಯ ಮಾರಕ ಘಟನೆಗಳಲ್ಲಿ ಒಂದೆಂದು ಪರಿಗಣಿಸಲಾದ “ಊಹಿಸಲಾಗದ ದುರಂತ” ಎಂದು ಪ್ರಧಾನ ಮಂತ್ರಿ ಡೇವಿಡ್ ಎಬಿ ಕರೆದ ಘಟನೆಯಲ್ಲಿ ಎರಡು ಡಜನ್ಗಿಂತಲೂ ಹೆಚ್ಚು ಬಲಿಪಶುಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಟಂಬ್ಲರ್ ರಿಡ್ಜ್ ಮಾಧ್ಯಮಿಕ ಶಾಲೆಯೊಳಗೆ ಆರು ಜನರು ಮೃತಪಟ್ಟಿರುವುದು ಪತ್ತೆಯಾಗಿದೆ ಎಂದು ಪೊಲೀಸರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮತ್ತೊಬ್ಬ ವ್ಯಕ್ತಿ ಸಾವನ್ನಪ್ಪಿದ್ದು, 2,500 ಕ್ಕಿಂತ ಕಡಿಮೆ ಜನಸಂಖ್ಯೆಯಿರುವ ಸಮುದಾಯದಲ್ಲಿ ಇಬ್ಬರು ಮೃತಪಟ್ಟಿರುವುದು ಪತ್ತೆಯಾಗಿದೆ. ಶಂಕಿತ ವ್ಯಕ್ತಿ ಸ್ವಯಂ-ಏಸಗಿಕೊಂಡ ಗಾಯಗಳೊಂದಿಗೆ ಸಾವನ್ನಪ್ಪಿರುವುದು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಧಾನಿ ಮಾರ್ಕ್ ಕಾರ್ನಿ ಅವರು ಗುಂಡಿನ ದಾಳಿಯಿಂದ ದುಃಖಿತರಾಗಿದ್ದು, “ಇಂದು ತಮ್ಮ ಜೀವನವನ್ನು ಬದಲಾಯಿಸಲಾಗದಂತೆ ಬದಲಾಯಿಸಿದವರ ದುಃಖದಲ್ಲಿ ನಾನು ಕೆನಡಿಯನ್ನರೊಂದಿಗೆ ಸೇರುತ್ತೇನೆ ಮತ್ತು ತಮ್ಮ ಸಹವರ್ತಿ ನಾಗರಿಕರನ್ನು ರಕ್ಷಿಸಲು ತಮ್ಮ…
ಹಾಸನ : ಲೋಕಾಯುಕ್ತಕ್ಕೆ ದೂರು ಕೊಟ್ಟಿದ್ದಕ್ಕೆ ರೈತನ ಮೇಲೆ ಹಲ್ಲೆ ನಡೆಸಲಾಗಿದೆ ಅನುದಾನ ದುರ್ಬಳಕೆ ಆರೋಪ ಮಾಡಿದ್ದ ರೈತ ರವಿ ಗ್ರಾಮ ಪಂಚಾಯಿತಿ ಸದಸ್ಯ ಆನಂದ್ ವಿರುದ್ಧ ಆರೋಪ ಮಾಡಿದ್ದರು. ರೈತನ ಮೇಲೆ ಗ್ರಾಮ ಪಂಚಾಯಿತಿ ಸದಸ್ಯ ಆನಂದ್ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಅರಕಲಗೂಡಿನ ಕಾಳೆನಹಳ್ಳಿ ಗ್ರಾಮದಲ್ಲಿ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ದುಡ್ಡಿಲ್ಲದೆ ಹಸು ಮಾರಿ ಆರ್ಟಿಐಗೆ ಅರ್ಜಿ ಹಾಕಿರುತ್ತಾರೆ ಅರ್ಜಿ ಹಾಕಿ 32,340 ಪಾವತಿಸಿರುತ್ತಾರೆ. ಹಸು ಮಾರಾಟ ಮಾಡಿ ಜೆರಾಕ್ಸ್ ಗೆ ಹಣ ಕಟ್ಟಿರುತ್ತಾರೆ. ಹೀಗಾಗಿ ರೈತನ ನಡೆಯಿಂದ ಸಿಟ್ಟಿಗೆದ್ದು ಗ್ರಾಮ ಪಂಚಾಯಿತಿ ಸದಸ್ಯ ಆನಂದ್ ರೈತ ರವಿ ಮೇಲೆ ಹಲ್ಲೆ ಮಾಡಿದ್ದಾರೆ. ಹಾಸನ ಜಿಲ್ಲಾ ಆಸ್ಪತ್ರೆಯಲ್ಲಿ ಸದ್ಯ ರೈತ ರವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ರೈತರ ರವಿ ದುಡ್ಡಿಲ್ಲದೆ ಹಸು ಮಾರಿ ಆರ್ಟಿಐಗೆ ಅರ್ಜಿ ಹಾಕಿರುತ್ತಾರೆ ಅರ್ಜಿ ಹಾಕಿ 32,340 ರೂಪಾಯಿ ಪಾವತಿಸುತ್ತಾರೆ. ಅಲ್ಲದೇ 16, 370 ಪುಟದ ದಾಖಲೆಗಳನ್ನು ಕೊಟ್ಟಿದ್ದಕ್ಕೆ ಇದೀಗ ಗ್ರಾಮ ಪಂಚಾಯಿತಿ…
ಮಂಗಳೂರು : ಮಂಗಳೂರಿನಲ್ಲಿ ಮ್ಯಾಟ್ರಿಮೋನಿ ಮನ್ಮಥನ ಲೀಲೆ ಇದೀಗ ಬಯಲಾಗಿದ್ದು, ಒಂದಲ್ಲ ಎರಡಲ್ಲ ಬರೋಬ್ಬರಿ 9 ಯುವತಿಯರನ್ನು ಮದುವೆಯಾಗಿದ್ದಾನೆ 9 ಯುವತಿಯರ ಬಾಳಲ್ಲಿ ಚೆಲ್ಲಾಟವಾಡಿದ ಕಿಲಾಡಿ, ಮದುವೆಯಾಗಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚನೆ ಎಸಗಿದ್ದಾನೆ ಸುಶಾಂತ್ ಪೂಜಾರಿ ಎಂಬ ಆರೋಪಿಯಣ್ಣ ಇದೀಗ ಅರೆಸ್ಟ್ ಮಾಡಲಾಗಿದೆ. ಮಹಿಳೆಯೊಬ್ಬರಿಗೆ ಸುಶಾಂತ್ ಪೂಜಾರಿ ಎಂಬ ವ್ಯಕ್ತಿಯು ಆನ್ಲೈನ್ ಮದುವೆ ಪ್ಲಾಟ್ ಫಾರಂ ಮೂಲಕ ಪರಿಚಯವಾಗಿ ಮಹಾರಾಷ್ಟ್ರದ ಘನಸೋಳಿಯ ನವ ಮುಂಬೈನಲ್ಲಿ 2025 ಫೆ. 2 ರಂದು ಮದುವೆಯಾಗಿದ್ದರು. ಈ ಮಹಿಳೆಯನ್ನು ನಂಬಿಸಿ ಸುಶಾಂತ್ ಪೂಜಾರಿ ಹಂತ ಹಂತವಾಗಿ 6,60,000/- ಹಣವನ್ನು ಪಡೆದುಕೊಂಡಿದ್ದನು. ಮೋಸ ಮಾಡುವ ಉದ್ದೇಶದಿಂದ 2025ರ ನವೆಂಬರ್ 15 ರಿಂದ ನಾಪತ್ತೆಯಾಗಿದ್ದನು. ನಂತರದ ದಿನಗಳಲ್ಲಿ ಈ ಬಗ್ಗೆ ಅನುಮಾನಗೊಂಡು ಆತನ ಬಗ್ಗೆ ವಿಚಾರಿಸಿದಾಗ ಇದೇ ರೀತಿ ಹಲವು ಕಡೆಗಳಲ್ಲಿ ಮದುವೆ ಮಾಡಿಕೊಳ್ಳುತ್ತೇನೆಂದು ನಂಬಿಸಿ ವಂಚಿಸಿರುವ ಹಾಗೂ ಈ ಮೊದಲು ಒಂದು ಮದುವೆ ಆಗಿರುವ ವಿಚಾರ ತಿಳಿದಿದೆ. ಹೀಗಾಗಿ ನೊಂದ ಮಹಿಳೆಯು ಕಾವೂರು ಪೊಲೀಸ್…
ನವದೆಹಲಿ : ನಾಳೆ ವಿವಿಧ ಕಾರ್ಮಿಕ ಸಂಘಟನೆಗಳಿಂದ ಭಾರತ ಬಂದ್ ಗೆ ಕರೆ ನೀಡಲಾಗಿದೆ. ಕೇಂದ್ರದ ಕಾರ್ಮಿಕ ವಿರೋಧಿ ನೀತಿ ಕಂಡಿಹಿಸಿ ಭಾರತ ಬಂದಿಗೆ ಕರೆ ನೀಡಲಾಗಿದೆ. ಸಿಐಟಿಯು, ಎಐಟಿಯುಸಿ, ಐಎನ್ ಟಿಯುಸಿ, ಹೆಚ್ಎಂಎಸ್, ಎಐಸಿಸಿಟಿಯು, ಎಲ್ಪಿಎಫ್, ಯುಟಿಯುಸಿ ಇಂದ ಬಂದ್ ಗೆ ಕರೆ ನೀಡಲಾಗಿದೆ. ಹೊಸದಾಗಿ ಪರಿಚಯಿಸಿರುವ ನಾಲ್ಕು ಕಾರ್ಮಿಕ ಸಂಹಿತೆಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಇದರಿಂದ ಕಾರ್ಮಿಕರ ಹಕ್ಕು ಮತ್ತು ಉದ್ಯೋಗ ಭದ್ರತೆ ಕಡಿಮೆ ಮಾಡಲಿವೆ ಕಾರ್ಮಿಕ ಸಂಸ್ಥೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಬಂದ್ ಗೆ ಕರೆ ನೀಡಲಾಗಿದೆ. ಪ್ರತಿಭಟನೆಯಲ್ಲಿ ೩೦ ಕೋಟಿಗೂ ಹೆಚ್ಚು ಕಾರ್ಮಿಕರು ಭಾಗವಹಿಸಬಹುದು ಎಂದು ಸಂಘಟಕರು ಹೇಳಿದ್ದಾರೆ. ಹತ್ತು ಕೇಂದ್ರ ಕಾರ್ಮಿಕ ಸಂಘಗಳನ್ನು ಪ್ರತಿನಿಧಿಸುವ ಜಂಟಿ ವೇದಿಕೆಯು ಮುಷ್ಕರವು ಯೋಜಿಸಿದಂತೆ ಮುಂದುವರಿಯುತ್ತದೆ ಎಂದು ದೃಢಪಡಿಸಿದೆ. ರೈತ ಸಂಘಟನೆಗಳ ಬೆಂಬಲವು ಪ್ರತಿಭಟನೆಯ ಪ್ರಮಾಣವನ್ನು ಬಲಪಡಿಸುವ ನಿರೀಕ್ಷೆಯಿದೆ. ಅಗತ್ಯ ಸೇವೆಗಳು ಅಡಚಣೆಗಳನ್ನು ಎದುರಿಸುವ ಸಾಧ್ಯತೆಯಿರುವುದರಿಂದ, ಅಧಿಕಾರಿಗಳು ಸಾರ್ವಜನಿಕ ಸೇವೆಗಳು ಮತ್ತು ದೈನಂದಿನ ಚಟುವಟಿಕೆಗಳಲ್ಲಿ ಸಂಭವನೀಯ ಅಡಚಣೆಗಳಿಗೆ ತಯಾರಿ ನಡೆಸುತ್ತಿದ್ದಾರೆ.
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಬಿಜೆಪಿ ಶಾಸಕ ಭೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತು. ಇದರ ಬೆನ್ನಲ್ಲೇ ಭೈರತಿ ಬಸವರಾಜ್ ತಲೆಮರೆಸಿಕೊಂಡಿದ್ದು ಸಿಐಡಿ ಪೋಲೀಸರು ಅವರ ಬಂಧನಕ್ಕೆ ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ಇದೇ ವಿಚಾರವಾಗಿ ಬೆಂಗಳೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು ಬಿಜೆಪಿ ಶಾಸಕ ಭೈರತಿ ಬಸವರಾಜ್ ತಲೆಮರೆಸಿಕೊಂಡಿದ್ದು, ಅವರಾಗಿಯೇ ಬಂದು ಸರೆಂಡರ್ ಆದರೆ ಒಳ್ಳೆಯದು ಇಲ್ಲದಿದ್ದರೆ ಪೊಲೀಸರು ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರನ್ನು ಹುಡುಕುತ್ತಾರೆ ಎಂದು ಎಚ್ಚರಿಕೆ ನೀಡಿದರು.
ಬೆಂಗಳೂರು : ರಾಮನಗರದಲ್ಲಿ ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಬಿಡದಿಯ ಮನೆಯ ಬಳಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ವಿನೋದ (34) ಎಂಬ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ. ಮನೆಯ ಬಳಿ ಕೆಮ್ಮಿದ್ದಕ್ಕೆ ವಿನೋದ್ ಜೊತೆಗೆ ಹೊಂಬಯ್ಯ ಮತ್ತು ವಿಜಯ್ ಸೇರಿದಂತೆ ಇತರರು ಜಗಳ ತೆಗೆದು, ಹಲ್ಲೆ ಮಾಡಿದ್ದಾರೆ. ಮೂರು ದಿನಗಳ ಕೆಳಗೆ ವಿನೋದ್ ಮೇಲೆ ಹಲ್ಲೆ ಮಾಡಿದ್ದರು.ತೀವ್ರ ಹಲ್ಲೆಗೆ ಒಳಗದಂತಹ ವಿನೋದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ಮೂರು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ರಾಜಸ್ಥಾನ ಮೂಲದ ವಿನೋದ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಬೆಂಗಳೂರು : ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಟೀಸರ್ ಬಿಡುಗಡೆ ಆದ ಬಳಿಕ, ಸಿನೆಮಾದಲ್ಲಿ ಅಶ್ಲೀಲತೆ ತೋರಿಸಲಾಗಿದೆ ಎಂದು ಚಿತ್ರತಂಡಕ್ಕೆ ಮೇಲಿಂದ ಮೇಲೆ ಸಂಕಷ್ಟ ಎದುರಾಗಿತ್ತು. ಇದೀಗ ಟಾಕ್ಸಿಕ್ ಚಿತ್ರ ತಂಡಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದ್ದು ರಾಷ್ಟ್ರೀಯ ಕ್ರೈಸ್ತರ ಒಕ್ಕೂಟ ದೂರು ಸಲ್ಲಿಸಿವೆ. ಹೌದು ಕೆಲ ದಿನಗಳ ಹಿಂದಷ್ಟೇ ಟೀಸರ್ ವಿರುದ್ಧ ಮಹಿಳಾ ಒಕ್ಕೂಟಗಳು ಸಿಡಿದೆದ್ದಿದವು. ಇದೀಗ ರಾಷ್ಟ್ರೀಯ ಕ್ರೈಸ್ತರ ಒಕ್ಕೂಟ ತಿರುಗಿಬಿದ್ದಿದೆ.ಟಾಕ್ಸಿಕ್ ಸಿನಿಮಾ ದೃಶ್ಯಗಳಲ್ಲಿ ಕ್ರೈಸ್ತ ಧರ್ಮಕ್ಕೆ ಅಪಮಾನ ಮಾಡಲಾಗಿದೆ, ಕ್ರೈಸ್ತರಿಗೆ ಮುಜುಗರ ತರಲಾಗಿದೆ ಎಂದು ಆರೋಪಿಸಿ, ನ್ಯಾಷನಲ್ ಕ್ರಿಶ್ಚಿಯನ್ ಫೆಡರೇಷನ್ ಚಲನಚಿತ್ರ ವಾಣಿಜ್ಯ ಮಂಡಳಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಗೃಹಸಚಿವರು ಹಾಗೂ ಸೆನ್ಸಾರ್ ಬೋರ್ಡ್ಗೆ ದೂರು ನೀಡಿದೆ. ಟಾಕ್ಸಿಕ್ ಸಿನಿಮಾದಲ್ಲಿ ಕ್ರೈಸ್ತರ ದೇವದೂತ ಸಂತ ಮಿಕಯೇಲ್ಗೆ ಅಪಮಾನ ಮಾಡಲಾಗಿದೆ. ದೇವದೂತರ ಮುಂದೆ ಅಶ್ಲೀಲ ಚಿತ್ರೀಕರಣ ಮಾಡಿದ್ದಾರೆ. ಹೀಗಾಗಿ ಯೂಟ್ಯೂಬ್ ಪೋಸ್ಟ್ಗಳನ್ನ ತೆಗೆಯಬೇಕು, ಸಿನಿಮಾದಲ್ಲಿ ಚಿತ್ರೀಕರಣ ಮಾಡಿರುವ ದೃಶ್ಯಗಳನ್ನ ತೆಗೆಯುವಂತೆ ಸೂಚನೆ ನೀಡಬೇಕು ಎಂದು ರಾಷ್ಟ್ರೀಯ ಕ್ರೈಸ್ತರ…
ಬೆಂಗಳೂರು : ಬೆಂಗಳೂರಲ್ಲಿ ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಶಾಸಕ ಬೈರತಿ ಬಸವರಾಜುಗೆ ನಿನ್ನೆ ಹೈಕೋರ್ಟ್ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾ ಮಾಡಿದೆ. ಅದರ ಬೆನ್ನಲ್ಲೇ, ಭೈರತಿ ಬಸವರಾಜ್ ತಲೆಮರಿಸಿಕೊಂಡಿದ್ದು ಅವರ ಬಂಧನಕ್ಕಾಗಿ ಸಿಐಡಿ ಪೋಲೀಸರು ಇದೀಗ ಲುಕೌಟ್ ನೋಟಿಸ್ ಜಾರಿ ಮಾಡಿದ್ದಾರೆ. ರೌಡಿ ಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವು ಕೊಲೆ ಪ್ರಕರಣದ ಐದನೇ ಆರೋಪಿಯಾಗಿರುವ ಕೆ.ಆರ್.ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ ಅವರಿಗೆ ಹೈಕೋರ್ಟ್ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಲು ನಿರಕಾರಣೆ ಮಾಡಿದೆ. ನ್ಯಾಯಾಧೀಶರಾದ ಸುನೀಲ್ ದತ್ತು ಅವರಿದ್ದ ನ್ಯಾಯಪೀಠವು ಈ ಆದೇಶವನ್ನು ಹೊರಡಿಸಿದೆ. ಇದರೊಂದಿಗೆ ಮತ್ತೆ . ಬಿಕ್ಲು ಶಿವು ಕೊಲೆಯಲ್ಲಿ ಅವರಿಗೆ ಬಂಧನದ ಭೀತಿ ಎದರುಆಗಿದೆ. ಪ್ರಕರಣ ಹಿನ್ನೆಲೆ? ಬೆಂಗಳೂರಿನ ಹಲಸೂರು ಕೆರೆ ಸಮೀಪದ ಮನೆಯೊಂದರ ಎದುರು 2025ರ ಜುಲೈನಲ್ಲಿ ರೌಡಿಶೀಟರ್ ಬಿಕ್ಲು ಶಿವ ಅಲಿಯಾಸ್ ಶಿವಪ್ರಕಾಶ್ ಕೊಲೆ ಆರೋಪದ ಮೇರೆಗೆ ಜಗದೀಶ್, ಕಿರಣ್, ವಿಮಲ್, ಅನಿಲ್…
ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟಕ್ಕೆ ಬೈಕ್ ಮತ್ತು ತ್ರಿಚಕ್ರ ವಾಹನಗಳಿಗೆ ಪ್ರವೇಶ ನಿರ್ಭಂಧಿಸಲಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಾದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಬೈಕ್ ಮತ್ತು ತ್ರಿಚಕ್ರ ವಾಹನಗಳಿಗೆ ನಿರ್ಬಂಧ ವಿಧಿಸಲಾಗಿದೆ. ಫೆಬ್ರವರಿ 13 ರಿಂದ 18ರವರೆಗೆ ಬೈಕ ಹಾಗೂ ತ್ರಿಚಕ್ರ ವಾಹನಗಳಿಗೆ ಪ್ರವೇಶ ಇಲ್ಲ. ಮಹಾಶಿವರಾತ್ರಿ ಹಿನ್ನೆಲೆ ಲಕ್ಷಾಂತರ ಭಕ್ತರು ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸುತ್ತಾರೆ. ಕಿರಿದಾದ ರಸ್ತೆ ಹಾಗೂ ಕಾಡು ರಸ್ತೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ದ್ವಿಚಕ್ರ ವಾಹನ ಮತ್ತು ತ್ರಿಚಕ್ರ ವಾಹನಗಳಿಗೆ ನಿರ್ಬಂಧ ವಿಧಿಸಿದೆ. ರಾಜ್ಯದ ವಿವಿಧಡೆ ಹಾಗೂ ಹೊರ ರಾಜ್ಯದಿಂದಲೂ ಕೂಡ ಭಕ್ತರು ಆಗಮಿಸುತ್ತಾರೆ.ಹಾಗಾಗಿ ತಾತ್ಕಾಲಿಕವಾಗಿ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ.
ವಿಜಯನಗರ : ವಿಜಯನಗರ ಜಿಲ್ಲೆಯ ಹೊಸಪೇಟೆಯ ಪಿಡಬ್ಲ್ಯೂಡಿ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. 1 ಲಕ್ಷ ಲಂಚ ಪಡೆಯುತ್ತಿದ್ದ ಪಿಡಬ್ಲ್ಯೂಡಿ ಎಕ್ಸಿಕ್ಯೂಟಿವ್ ಇಂಜಿನಿಯರ್ ದೇವದಾಸ್ ಮತ್ತು ಅಕೌಂಟೆಂಟ್ ಮಾರುತಿಯನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೂವಿನಹಡಗಲಿಯ ನಿವಾಸಿ ಮಹೇಶ್ ಹಲಗೇರಿ ದೂರಿನ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕಾಮಗಾರಿ ಬಿಲ್ ಮಾಡಿಕೊಡಲು 1 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಮಾಜ ಲೋಕಾಯುಕ್ತ ಪೊಲೀಸರಿಗೆ ಮಹೇಶ್ ದೂರು ನೀಡಿದ್ದ. ಲಂಚ ಪಡೆಯುತ್ತಿದ್ದ ಎಕ್ಸಿಕ್ಯೂಟಿವ್ ಇಂಜಿನಿಯರ್ ದೇವದಾಸ್ ಮತ್ತು ಅಕೌಂಟೆಂಟ್ ಮಾರುತಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ ಈ ವೇಳೆ ದಾಳಿ ನಡೆಸಿ ಇಬ್ಬರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.














