Author: kannadanewsnow05

ಕೋಲಾರ : ವೇತನ ಹೆಚ್ಚಳ ಸೇರದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಅಗ್ರಹಿಸಿ, ಇಂದು ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ಆರಂಭಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಸ್ ಗಳು ಇದುವರೆಗೂ ರಸ್ತೆಗೆ ಇಳಿದಿಲ್ಲ. ಆದರೆ ಕೆಲವು ಭಾಗಗಳಲ್ಲಿ ಮಾತ್ರ ಕೆಲವು ಸಿಬ್ಬಂದಿಗಳು ಮುಷ್ಕರದಲ್ಲಿ ಪಾಲ್ಗೊಳ್ಳದೆ ಕರ್ತವ್ಯದಲ್ಲಿ ನಿರತರಾಗಿದ್ದಾರೆ. ಇದೀಗ ಕೋಲಾರದಲ್ಲಿ ಕೆಎಸ್ಆರ್ಟಿಸಿ ಬಸ್ ಮೇಲೆ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿರುವ ಘಟನೆ ವರದಿಯಾಗಿದೆ ಹೌದು ಕೋಲಾರದಲ್ಲಿ ಕೆಎಸ್ಆರ್ಟಿಸಿ ಬಸ್ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ. ಕೋಲಾರ ನಗರದ ಬಸ್ ನಿಲ್ದಾಣದಲ್ಲಿ ಈ ಒಂದು ಘಟನೆ ನಡೆದಿದೆ. ಮುಂಜಾನೆಯಿಂದ ಕೋಲಾರದಲ್ಲಿ ಬಸ್ ನಿಲ್ದಾಣ ಸಂಪೂರ್ಣವಾಗಿ ಸ್ತಬ್ಧವಾಗಿತ್ತು. ಈಗ ಒಂದೆರಡು ಬಸ್ ಗಳನ್ನು ನಿಲ್ದಾಣಕ್ಕೆ ಅಧಿಕಾರಿಗಳು ಕಳುಹಿಸಿದ್ದಾರೆ. ಬಸ್ ನಿಲ್ದಾಣಕ್ಕೆ ಬರುತ್ತಿದ್ದಂತೆ ಕಿಡಿಗೇಡಿಗಳು ಕಲ್ಲುತೂರಾಟ ಮಾಡಿದ್ದಾರೆ. ಕೋಲಾರದಲ್ಲಿ ಕೆಎಸ್ಆರ್ಟಿಸಿ ಬಸ್ಸಿನ ಕಿಟಕಿ ಗಾಜು ಪುಡಿಪುಡಿ ಆಗಿವೆ.

Read More

ಬೆಂಗಳೂರು : ಸ್ಯಾಂಡಲ್ ವುಡ್ ನಟ ಸಂತೋಷ್ ಬಾಲರಾಜ್ (34) ನಿಧನರಾಗಿದ್ದಾರೆ. ಅನಾರೋಗ್ಯದಿಂದ ನಟ ಸಂತೋಷ್ ಬಾಲರಾಜ್ ಬಳಲುತ್ತಿದ್ದರು ಇದೀಗ ಅವರು ಇಂದು ನಿಧನರಾಗಿದ್ದಾರೆ.ನಟ ಸಂತೋಷ್ ಬಾಲರಾಜ್ ಜಾಂಡಿಸ್ ನಿಂದ ಬಳಲುತ್ತಿದ್ದರು. ಇತ್ತೀಚಿಗೆ ಚಿಕಿತ್ಸೆಗಾಗಿ ಬೆಂಗಳೂರಿನ ಬನಶಂಕರಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಸಂತೋಷ್ ಬಾಲರಾಜ್ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ. ಕಿರಿಯ ವಯಸ್ಸಿಗೆ ಜಾಂಡೀಸ್​ನಿಂದ ನಟ ಸಂತೋಷ್ ಬಾಲರಾಜ್ ಬಳಲುತ್ತಿದ್ದರು. ಹೀಗಾಗಿ 34 ವಯಸ್ಸಿನ ನಟ ಸಂತೋಷ್ ಬಾಲರಾಜ್ ಕುಮಾರಸ್ವಾಮಿ ಲೇಔಟ್​ನ ಸಾಗರ್ ಅಫೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದ್ರೆ, ಜಾಂಡೀಸ್​ನಿಂದಾಗಿ ನಟ ಸಂತೋಷ್ ಕೋಮಗೆ ಹೋಗಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಸಂತೋಷ್ ಬಾಲ್ರಾಜ್ ಸಾವನಪ್ಪಿದ್ದಾರೆ. 2 ದಿನಗಳ ಹಿಂದೆ ಸಂತೋಷ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.ಸಂತೋಷ್ ಬೇಗ ಚೇತರಿಸಿಕೊಳ್ಳಲಿ ಅಂತ ಆಪ್ತರು, ಕುಟುಂಬ ವರ್ಗ ಪ್ರಾರ್ಥಿಸುತ್ತಿತ್ತು. ಇನ್ನೂ, ಸಂತೋಷ್ ಬಾಲ್​ರಾಜ್ ಅವರು ಅಮ್ಮನ ಜೊತೆಗೆ ವಾಸವಾಗಿದ್ದರು. ನಟನ ಅಪ್ಪ ಅನೇಕಲ್ ಬಾಲರಾಜ್ ದರ್ಶನ್​ಗೆ ಕರಿಯ ಸಿನಿಮಾ ಮಾಡಿದ್ದರು. ಕರಿಯ-2…

Read More

ತುಮಕೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆ ರಾಜ್ಯಾದ್ಯಂತ ಇಂದು ಬಸ್ ಗಳು ರಸ್ತೆಗೆ ಇಳಿಯುತ್ತಿಲ್ಲ. ಹಾಗಾಗಿ ಪ್ರಯಾಣಿಕರು ತೀವ್ರ ಪರದಾಟ ನಡೆಸಿದ್ದಾರೆ. ಈ ಹಿನ್ನೆಲೆ ಇದೀಗ ತುಮಕೂರಿಂದ ಬೆಂಗಳೂರಿಗೆ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ. ಇಂದು ಬೆಳಿಗ್ಗೆ 9.20 ರಲ್ಲಿ ತುಮಕೂರಿನಿಂದ ಬೆಂಗಳೂರಿಗೆ ಹೊರಟಿರುವ ರೈಲು, ಬಳಿಕ ಬೆಳಿಗ್ಗೆ 11.20 ಗಂಟೆಗೆ KRS ನಿಂದ ಮತ್ತೆ ತುಮಕೂರಿಗೆ ರೈಲು ಹೋರಡಲಿದೆ. ಸಾರಿಗೆ ಮುಷ್ಕರ ಮುಗಿಯುವವರೆಗೆ ಮಾತ್ರ ವಿಶೇಷ ರೈಲಿನ ವ್ಯವಸ್ಥೆ ಕಲ್ಪಿಸಲಾಗಿದೆ.

Read More

ಚಿತ್ರದುರ್ಗ : ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಇಂದು ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ಆರಂಭಿಸಿದ್ದು ಹಿನ್ನಲೆಯಲ್ಲಿ ರಾಜ್ಯದ ಜನರು ಬಸ್ ಗಳಿಲ್ಲದೆ ತೀವ್ರ ಪರದಾಟ ನಡೆಸುತ್ತಿದ್ದಾರೆ ಇದೀಗ ಚಿತ್ರದುರ್ಗದಲ್ಲಿ ಬಾಣಂತಿಯೊಬ್ಬರು ಬಸ್ ಇಲ್ಲದೆ ಪರದಾಟ ನಡೆಸಿದ್ದಾರೆ. ಹೌದು ಚಿತ್ರದುರ್ಗದಲ್ಲಿ ಸಾರಿಗೆ ಬಸ್ ಇಲ್ಲದೆ ಬಾಣಂತಿ ಒಬ್ಬರು ಪರದಾಟ ನಡೆಸಿದ್ದಾರೆ ಹೆರಿಗೆ ಬಳಿಕ ಮೊದಲ ಸಲ ಬಾಣತಿ ಪತಿ ಊರಿಗೆ ತೆರಳುತ್ತಿದ್ದರು. ಮಗು ಮತ್ತು ಅತ್ತೆಯ ಜೊತೆಗೆ ಬಾಣತಿ ಪತಿ ಊರಿಗೆ ಹೊರಟಿದ್ದರು. ಆದರೆ ಬಸ್ ಗಳಿಲ್ಲದೆ ಇದೀಗ ಬಾಣಂತಿ ಪರದಾಡಿದ್ದಾರೆ. ಜಗಳೂರು ಹತ್ರ ಹೊಸದುರ್ಗ ಊರಿಗೆ ನಾವು ಹೋಗಬೇಕಿತ್ತು, ಆದರೆ ಬಸ್ ಇಲ್ಲ ಮೊದಲ ಬಾರಿ ಹೆರಿಗೆಯಾದ ಬಳಿಕ ಪತಿಯ ಮನೆಗೆ ಹೊರಟಿದ್ದೆ. ನಮ್ಮ ಅತ್ತೆಯ ಜೊತೆ ಪತಿಯ ಮನೆಗೆ ಹೊರಟಿದ್ದೆ ಇದೀಗ ಖಾಸಗಿ ವಾಹನಗಳನ್ನು ನೋಡಿಕೊಳ್ಳಬೇಕು. ಸರ್ಕಾರಿ ಬಸ್ ಇಲ್ದೆ ಇದ್ರೆ ಖಾಸಗಿ ವಾಹನಗಳಿಗೆ ದುಡ್ಡು ಕೊಡಲೇಬೇಕು ಎಂದು ಬಾಣಂತಿ ತಿಳಿಸಿದರು.

Read More

ಆಂಧ್ರಪ್ರದೇಶ : ಗಂಡನ ಮನೆಯವರ ಕಿರುಕುಳ ತಾಳಲಾರದೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಈ ಸಲ ನನಗೆ ರಾಖಿ ಕಟ್ಟೋಕೆ ಆಗಲ್ಲ, ಕ್ಷಮಿಸಿಬಿಡು ಎಂದು ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಘಟನೆ ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯಲ್ಲಿ ನಡೆದಿದೆ. 24 ವರ್ಷದ ಶ್ರೀವಿದ್ಯಾ ಎಂಬುವವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರು ಕಾಲೇಜು ಉಪನ್ಯಾಸಕಿಯಾಗಿದ್ದರು. ಆರು ತಿಂಗಳ ಹಿಂದಷ್ಟೇ ರಾಂಬಾಬು ಎಂಬುವವರನ್ನು ಮದುವೆಯಾಗಿದ್ದರು. ಮದುವೆಯಾಗಿ ತಿಂಗಳಿನಿಂದಲೇ ಗಂಡನ ಮನೆಯವರಿಂದ ಕಿರುಕುಳ ಶುರುವಾಗಿತ್ತು ಎಂದು ಶ್ರೀವಿದ್ಯಾ ಪತ್ರದಲ್ಲಿ ಬರೆದಿದ್ದಾರೆ. ರಾಂಬಾಬು ಕುಡಿದು ಮನೆಗೆ ಬರುತ್ತಿದ್ದ. ದೈಹಿಕ ಹಿಂಸೆ ನೀಡುತ್ತಿದ್ದ, ಮಾತಿನಲ್ಲಿ ನಿಂದಿಸುತ್ತಿದ್ದ. ತನ್ನನ್ನು ಅಪಹಾಸ್ಯ ಮಾಡುತ್ತಿದ್ದ. ಬೇರೆ ಮಹಿಳೆಯರ ಮುಂದೆ ತನ್ನನ್ನು ನಿಷ್ಪ್ರಯೋಜಕ ಎಂದು ಕರೆಯುತ್ತಿದ್ದ ಎಂದು ಆಕೆ ಬರೆದಿದ್ದಾರೆ. ನಿರಂತರ ಕಿರುಕುಳದಿಂದ ಬೇಸತ್ತು ಮಹಿಳೆ ಈ ತಪ್ಪು ಹೆಜ್ಜೆ ಇಡಬೇಕಾಯಿತು.

Read More

ಕೊಪ್ಪಳ : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದಿನಿಂದ ರಾಜ್ಯಾದ್ಯಂತ ಸಾರಿಗೆ ನೌಕರರು ಅನಿರ್ದಿಷ್ಟವಧಿ ಮುಷ್ಕರ ಆರಂಭಿಸಿದ್ದಾರೆ. ಮತ್ತೊಂದೆಡೆ ಕೆಎಸ್‍ಆರ್‌ಟಿಸಿ ಬಸ್‍ಗೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವುದು ಕುಕನೂರ ತಾಲೂಕಿನ ಮಸಬಹಂಚಿನಾಳದಲ್ಲಿ ನಡೆದಿದೆ. ಬಸ್ ತಡರಾತ್ರಿ ಯಲಬುರ್ಗಾದಿಂದ ಬೆಂಗಳೂರಿಗೆ ಹೊರಟಿತ್ತು. ಬಸ್ ಮಸಬಹಂಚಿನಾಳ ಬಳಿ ತಲುಪಿದ್ದಾಗ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಪರಿಣಾಮ ಬಸ್‍ನ ಗಾಜು ಪುಡಿಪುಡಿಯಾಗಿದೆ. ಕಲ್ಲು ತೂರಾಟದ ಬಳಿಕ ಬಸ್‍ನ್ನು ಚಾಲಕ ವಾಪಸ್ ಡಿಪೋಗೆ ಕೊಂಡೊಯ್ದಿದ್ದಾರೆ. ಇದರಿಂದ ಪ್ರಯಾಣಿಕರು ರಾತ್ರಿ ವೇಳೆ ಪರದಾಡುವಂತಾಯಿತು. ಇನ್ನು ಬಸ್ ಸಂಚಾರ ಸ್ಥಗಿತವಾದ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಜನರು ಊರಿಗೆ ತೆರಳಲು ಪರದಾಡಿದರು.

Read More

ನವದೆಹಲಿ: ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್‌ ವಿರುದ್ಧ ಸಚಿವ ಶಿವಾನಂದ ಪಾಟೀಲ್ ಹೂಡಿದ್ದ ಮಾನನಷ್ಟ ಮೊಕದ್ದಮೆ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ. 2023ರ ವಿಧಾನಸಭಾ ಚುನಾವಣೆ ವೇಳೆ ನನ್ನ ವಿರುದ್ಧ ಯತ್ನಾಳ್ ಅವಹೇಳನಕಾರಿ ಹೇಳಿಕೆ ನೀಡಿದ್ದರು ಎಂದು ಆರೋಪಿಸಿ ಮಾನನಷ್ಟ ಮೊಕದ್ದಮೆ ಹೂಡಿದ್ದರು. ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರು, ‘ನ್ಯಾಯಾಲಯದ ಹೊರಗೆ ರಾಜಕೀಯ ಹೋರಾಟ ಮಾಡಿ, ಇಲ್ಲಿ ಅಲ್ಲ’ ಎಂದರು. ಈ ವೇಳೆ ಶಿವಾನಂದ ಪಾಟೀಲ್‌ ಪರ ವಕೀಲ, ಅವರು ಕ್ಯಾಬಿನೆಟ್ ದರ್ಜೆ ಸಚಿವರು ಎಂದರು. ಹಾಗಾದರೆ ಏನು? 25 ಸಾವಿರ ದಂಡದೊಂದಿಗೆ ಅರ್ಜಿ ವಜಾಗೊಳಿಸಲಾಗಿದೆ ಎಂದು ಸಿಜೆಐ ಹೇಳಿದರು. ವಕೀಲ, ‘ಆದರೆ ವಿಷಯ’ ಎಂದು ವಾದಿಸಲು ಯತ್ನಿಸಿದರು. ಇದರಿಂದ ಆಕ್ರೋಶಗೊಂಡ ನ್ಯಾಯಪೀಠ, ದಂಡದ ಮೊತ್ತವನ್ನು ₹1 ಲಕ್ಷದಿಂದ 1 ಕೋಟಿಗೆ ಏರಿಸಿತು. ತಕ್ಷಣ ವಕೀಲ, ಅರ್ಜಿ ಹಿಂತೆಗೆದುಕೊಳ್ಳುತ್ತಿದ್ದೇನೆ ಎಂದರು.

Read More

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಇಂದು ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ಆರಂಭಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದಿನಿಂದ ರಸ್ತೆಗೆ ಬಸ್ ಇಳಿಯುವುದು ಬಹುತೇಕ ಡೌಟ್ ಎನ್ನಲಾಗುತ್ತಿದೆ. ಇದರ ಬೆನ್ನೆಲ್ಲೆ ನೌಕರರಿಗೆ ಸಾರಿಗೆ ಇಲಾಖೆ ಶಾಕ್ ನೀಡಿದ್ದು, ಮುಷ್ಕರದಲ್ಲಿ ಪಾಲ್ಗೊಳ್ಳುವ ನೌಕರರ ರಜೆ ರದ್ದುಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಹೌದು ಇಂದಿನಿಂದ ರಾಜ್ಯಾದ್ಯಂತ ನಾಲ್ಕು ನಿಗಮಗಳ ಸಾರಿಗೆ ಸಿಬ್ಬಂದಿ ಮುಷ್ಕರ ಆರಂಭವಾಗಿದ್ದು, ಸಾರಿಗೆ ನೌಕರರ ರಜೆ ರದ್ದು ಮಾಡಿದ ಇಲಾಖೆ. ಮುಷ್ಕರದಲ್ಲಿ ಭಾಗಿಯಾದರೆ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ. ಡ್ಯೂಟಿ ಮಾಡಿಲ್ಲ ಅಂದರೆ ಸಂಬಳ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದೆ ಸಾರಿಗೆ ನೌಕರರಿಗೆ ಯಾವುದೇ ರಜೆ ಇರುವುದಿಲ್ಲ ನೌಕರರಿಗೆ ಯಾವುದೇ ರಜೆ ಮಂಜೂರು ಮಾಡದಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರಜೆ ರದ್ದು ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

Read More

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಇದೀಗ ಮುಷ್ಕರ ಆರಂಭಿಸಿದ್ದಾರೆ. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರ ಜೊತೆ ನಡೆದ ಸಂಧಾನ ಸಭೆ ಕೂಡ ವಿಫಲವಾಗಿದ್ದು, ಇಂದಿನಿಂದ ಸಾರಿಗೆ ನೌಕರರ ಮುಷ್ಕರ ಆರಂಭವಾಗಿದೆ. ಬೆಂಗಳೂರು, ಮೈಸೂರು, ಹುಬ್ಬಳ್ಳಿ ಬೆಳಗಾವಿ, ಮಂಡ್ಯ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಹುತೇಕ ಸಾರಿಗೆ ನೌಕರರು ಮುಷ್ಕರದಲ್ಲಿ ಭಾಗವಹಿಸಿದ್ದಾರೆ. ಆದರೆ ಇನ್ನೂ ಕೆಲವು ನೌಕರರು ಎಸ್ಮ ಜಾರಿ, ಕೋರ್ಟ್ ಆದೇಶ ಹಾಗೂ ಅಮಾನತ್ತಿನ ಆತಂಕ ಇರುವುದರ ಹಿನ್ನೆಲೆಯಲ್ಲಿ ಕೆಲವು ನೌಕರರು ಮುಷ್ಕರದಲ್ಲಿ ಭಾಗಿಯಾಗದೆ ಕರ್ತವ್ಯಕ್ಕೆ ಹಾಜರಾಗಲು ನಿರ್ಧರಿಸಿದ್ದಾರೆ. ಸಾರಿಗೆ ನೌಕರರು ಮುಷ್ಕರ ಮಾಡುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೂ ಕೂಡ ತೊಂದರೆ ಉಂಟಾಗಲಿದೆ. ನಿತ್ಯ ಸಾರಿಗೆ ಬಸ್ಗಳಲ್ಲಿ ಸಂಚರಿಸುವ ಶಾಲಾ ಕಾಲೇಜು ವಿದ್ಯಾರ್ಥಿಗಳು ಇಂದು ಪರದಾಟ ನಡೆಸುವ ಸಾಧ್ಯತೆ ಇದ್ದು, ಖಾಸಗಿ ವಾಹನಗಳ ಮೊರೆ ಹೋಗುವ ಅನಿವಾರ್ಯತೆ ಎದುರಾಗಿದೆ. ಸಾರಿಗೆ ಮುಷ್ಕರ ಹಿನ್ನೆಲೆಯಲ್ಲಿ ರಾಜ್ಯದ ಯಾವುದೇ ಶಾಲಾ ಕಾಲೇಜುಗಳಿಗೆ ಇಂದು ರಜೆ ಇರುವುದಿಲ್ಲ ಎಂದು…

Read More

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದಿನಿಂದ ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ಆರಂಭಿಸುತ್ತಿದ್ದಾರೆ ಹೈಕೋರ್ಟ್ ದೇಶದ ನಡುವೆಯೂ ಕೂಡ ಸಾರಿಗೆ ಮುಷ್ಕರರು ಇಂದು ಬೆಳಿಗ್ಗೆ 6:00 ಯಿಂದ ಸಾರಿಗೆ ನೌಕರರ ಮುಷ್ಕರ ಆರಂಭವಾಗಲಿದೆ. ಆದರೆ ಇವನು ಮುಷ್ಕರದಲ್ಲಿ ಭಾಗವಹಿಸಲು ಸಾರಿಗೆ ನೌಕರರಲ್ಲೇ ಹಲವು ಗೊಂದಲಗಳಿವೆ. ಹೌದು ಸಾರಿಗೆ ಮುಷ್ಕರದಲ್ಲಿ ಭಾಗಿಯಾಗಲು ಕೆಲವರಿಗೆ ಆತಂಕ ಶುರುವಾಗಿದೆ. 2021 ಪ್ರತಿಭಟನೆಯ ವೇಳೆ ಆದಂತಹ ಅನುಭವದ ಆತಂಕ ಎದುರಾಗಿದ್ದು, ಎಸ್ಮಾ ಜಾರಿ, ಕೋರ್ಟ್ ಆದೇಶ ಮತ್ತು ಅಮಾನತಿನ ಆತಂಕ ಎದುರಾಗಿದೆ. ಮತ್ತೆ ಸಸ್ಪೆಂಡ್ ಮಾಡಿದರೆ ವರ್ಷಗಳ ಕಾಲ ಕೆಲಸ ಇಲ್ಲ ಹೀಗಾಗಿ ಮುಷ್ಕರದಲ್ಲಿ ಭಾಗಿಯಾಗಲು ಹಲವರು ಹಿಂದೇಟು ಹಾಕುತ್ತಿದ್ದಾರೆ. ಜೊತೆಗೆ ಮತ್ತೊಂದು ಸಂಘಟನೆಯಿಂದ ಬೆಂಬಲ ಇಲ್ಲ ಸಂಘಟನೆಯ ಕೆಲ ನೌಕರರು ಬೆಂಬಲಿಸುವ ಸಾಧ್ಯತೆ ಇದೆ. ಇದರಿಂದ ನೌಕರರಲ್ಲೇ ಗೊಂದಲ ನಿರ್ಮಾಣ ಆಗುವ ಸಾಧ್ಯತೆ ಇದೆ ಸಾರಿಗೆ ಮುಷ್ಕರದಲ್ಲಿ ಭಾಗಿಯಾಗಲು ಕೆಲವರಿಗೆ ಆತಂಕ 2021 ಪ್ರತಿಭಟನೆ ವೇಳೆ ಆದಂತ ಅನುಭವದ ಆತಂಕ ಎದುರಾಗಿದೆ.

Read More