Author: kannadanewsnow05

ಬೆಂಗಳೂರು : ಬೆಂಗಳೂರಿನಲ್ಲಿ MBBS ಸೀಟ್ ಕೊಡಿಸುವುದಾಗಿ ನಂಬಿಸಿ ಯುವತಿಗೆ 25 ಲಕ್ಷ ರೂಪಾಯಿ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಬನಶಂಕರಿ ಪೊಲೀಸರು ಡಾ. ಕೆ.ಪಿ. ಶರತ್ ಸೇರಿದಂತೆ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಆಯೇಷಾ ಖಥುಮ್​ ಎಂಬಾಕೆಗೆ ಸೀಟ್ ಕೊಡಿಸುವುದಾಗಿ ನಂಬಿಸಿದ್ದ ಡಾ.ಕೆ.ಪಿ. ಶರತ್ ಸೇರಿದಂತೆ ನಾಲ್ವರ ವಿರುದ್ಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಶಂಶೇರ್ ಬೇಗ್, ಸೈಯದ್ ತಬ್ರೇಜ್ ಮೂಲಕ ಸಂತ್ರಸ್ತ ಯುವತಿಗೆ ಡಾ.ಶರತ್ ಪರಿಚಯವಾಗಿದ್ದು, ಕಿಮ್ಸ್ ಕಾಲೇಜಿನಲ್ಲಿ ಸೀಟ್ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚಿಸಲಾಗಿದೆ ಎಂದು ಆರೋಪಿಸಲಾಗಿದೆ. ಆರೋಪಿಗಳ ವಿರುದ್ಧ BNS 318(4), 318(2) ಸೇರಿ ಒಟ್ಟು 8 ಸೆಕ್ಷನ್​​ಗಳ ಅಡಿ ಪ್ರಕರಣ ದಾಖಲಾಗಿದೆ. ದ್ವಿತೀಯ ಪಿಯುಸಿ ಮತ್ತು NLT ಪರೀಕ್ಷೆಗಳನ್ನು ಬರೆದಿದ್ದ ಯುವತಿ MBBSಗೆ ಸೇರಿಕೊಳ್ಳುವ ಬಗ್ಗೆ ಯೋಚಿಸಿ, ಒಳ್ಳೆಯ ಕಾಲೇಜಿನಲ್ಲಿ ಸೀಟ್​​ಗಾಗಿ ಪ್ರಯತ್ನಿಸುತ್ತಿದ್ದರು. ಈ ನಡುವೆ ಪರಿಚಯದ ಸೈಯದ್‌ ತಬ್ರೇಜ್ ಮೂಲಕ ಶಂಶೇರ್ ಬೇಗ್ ಎಂಬಾತನ ಪರಿಚಯವಾಗಿತ್ತು. ಈತ…

Read More

ಬೆಂಗಳೂರು : ಕರ್ನಾಟಕದಲ್ಲಿ ಇತ್ತೀಚಿನ ದಿನಗಳಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಉದ್ದೇಶದ ವಿದ್ಯುತ್ ದರಗಳಲ್ಲಿ ಗಣನೀಯ ಏರಿಕೆ ಕಂಡುಬಂದಿದ್ದು, ಇದು ಸಣ್ಣ ಮತ್ತು ಮಧ್ಯಮ ಗಾತ್ರದ ಕೈಗಾರಿಕೆಗಳ (MSMEs) ಮೇಲೆ ತೀವ್ರ ಪರಿಣಾಮ ಬೀರಿದೆ. ಹಾಗಾಗಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (KERC) 2025-26ನೇ ಹಣಕಾಸು ವರ್ಷಕ್ಕೆ ಅನ್ವಯವಾಗುವಂತೆ ವಾಣಿಜ್ಯ ಮತ್ತು ಕೈಗಾರಿಕಾ ಬಳಕೆದಾರರಿಗೆ ವಿದ್ಯುತ್ ದರವನ್ನು ಏರಿಕೆ ಮಾಡಿ ಆದೇಶ ಹೊರಡಿಸಿದೆ. ಹೌದು, ರಾಜ್ಯದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಘಟಕಗಳ ವಿದ್ಯುತ್ ದರ ಏರಿಕೆಯಾಗಿರುವುದು ಉದ್ಯಮಿಗಳಲ್ಲಿ ಮತ್ತು ಸಣ್ಣ ಕೈಗಾರಿಕೆಗಳ ಮಾಲೀಕರಲ್ಲಿ ಸಾಕಷ್ಟು ಆತಂಕ ಮೂಡಿಸಿದೆ. ಇದು ಉತ್ಪಾದನಾ ವೆಚ್ಚದ ಮೇಲೆ ನೇರ ಪರಿಣಾಮ ಬೀರಲಿದ್ದು, ಮಾರುಕಟ್ಟೆಯಲ್ಲಿ ವಸ್ತುಗಳ ಬೆಲೆ ಏರಿಕೆಗೂ ಕಾರಣವಾಗಬಹುದು. ವಾಣಿಜ್ಯ ಬಳಕೆ (LT-3A): ಸ್ಥಿರ ಶುಲ್ಕವನ್ನು ಪ್ರತಿ ಕಿಲೋವ್ಯಾಟ್‌ಗೆ 235 ರೂ.ಗೆ ಮತ್ತು ಇಂಧನ ಶುಲ್ಕವನ್ನು ಪ್ರತಿ ಯೂನಿಟ್‌ಗೆ 7.10 ರೂ.ಗೆ ನಿಗದಿಪಡಿಸಲಾಗಿದೆ. ಕೈಗಾರಿಕೆಗಳು (LT-5): ಪ್ರತಿ ಯೂನಿಟ್ ಇಂಧನ ಶುಲ್ಕ 5.20 ರೂ.ಗೆ ನಿಗದಿಪಡಿಸಲಾಗಿದೆ.…

Read More

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯಲ್ಲಿ ಕಾವೇರಿ ನದಿಗೆ ಹಾರಿ ಮಹಿಳೆ ಒಬ್ರು ಆತ್ಮಹತ್ಯೆಗೆ ಶರಣಾಗಿದ್ದಾರೆ, ಕೌಟುಂಬಿಕ ಕಲಹದಿಂದ ಅಭ್ಯಾಸದ ಮಹಿಳೆ ಇದೀಗ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಹ್ಯಾಂಡ್ ಪೋಸ್ಟ್ ಬಳಿ, ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ರಶ್ಮಿ (39) ಎಂದು ಗುರುತಿಸಲಾಗಿದೆ. ಈಕೆ ಪತಿ ಲೋಕೇಶ್ ಹಾಗೂ ಮಕ್ಕಳ ಜೊತೆ ಬೆಂಗಳೂರಿನಲ್ಲಿ ನೆಲೆಸಿದ್ದಳು. ಸಂಸಾರದ ವಿಚಾರದಲ್ಲಿ ಬೇಸತ್ತು ವೆಸ್ಲಿ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಈ ಕುರಿತು ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ವಾಷಿಂಗ್ಟನ್: ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಭೀಕರತೆ ಸಾರುತ್ತಿರುವ ಹೊತ್ತಲ್ಲೇ ಇರಾನ್‌ನಿಂದ ಜಗತ್ತೇ ನಡುಗುವ ಸುದ್ದಿಯೊಂದು ಹೊರಬಿದ್ದಿದೆ. ದಶಕಗಳ ಕಾಲ ಇರಾನ್ ಅನ್ನು ಮುನ್ನಡೆಸಿದ್ದ ಸರ್ವೋಚ್ಚ ನಾಯಕ (Supreme Leader) ಅಲಿ ಖಮೇನಿ ಅವರು ಯುದ್ಧದ ಸಂದರ್ಭದಲ್ಲಿ ಹತರಾಗಿದ್ದಾರೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ಬೆಳವಣಿಗೆ ಬೆನ್ನಲ್ಲೇ ಅವರ ಪುತ್ರ ಮೊಜ್ತಬಾ ಖಮೇನಿ (Mojtaba Khamenei) ಅವರನ್ನು ಇರಾನ್‌ನ ನೂತನ ಸುಪ್ರೀಂ ಲೀಡರ್ ಆಗಿ ನೇಮಿಸಲಾಗಿದೆ ಎಂಬ ಸುದ್ದಿ ಸಂಚಲನ ಸೃಷ್ಟಿಸಿದೆ. ಇದೀಗ ಮೊಜ್ತಬಾ ಖಮೇನಿ ಮೇಲೆ ಇಸ್ರೇಲ್ ದಾಳಿ ನಡೆಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆದರೆ ದಾಳಿಯಲ್ಲಿ ಮೋಜ್ತಾಬಾ ಬದುಕುಳಿದ ಮಾಹಿತಿ ಕೂಡ ತಿಳಿದು ಬಂದಿದೆ. ​ರಹಸ್ಯ ಕಾರ್ಯಾಚರಣೆಯಲ್ಲಿ ಅಂತ್ಯ? ​ವರದಿಗಳ ಪ್ರಕಾರ, ಅಮೆರಿಕ ಮತ್ತು ಇರಾನ್ ನಡುವಿನ ಭೀಕರ ಸಂಘರ್ಷದ ನಡುವೆ ಅಲಿ ಖಮೇನಿ ಅವರನ್ನು ಗುರಿಯಾಗಿಸಿ ನಡೆಸಿದ ದಾಳಿಯಲ್ಲಿ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇರಾನ್ ಸರ್ಕಾರವು ಈ ಬಗ್ಗೆ ಅಧಿಕೃತವಾಗಿ ಯಾವುದೇ ಹೇಳಿಕೆ ನೀಡದಿದ್ದರೂ, ಟೆಹ್ರಾನ್‌ನಲ್ಲಿ…

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ದರ್ಶನ್ ಗೆಳತಿ ಪವಿತ್ರಗೌಡಗೆ ಜೈಲುಟವೇ ಗತಿಯಾಗಿದೆ. ಮನೆ ಊಟಕ್ಕೆ ಬೇಡಿಕೆ ಇಟ್ಟು ಅರ್ಜಿ ಸಲ್ಲಿಸಿದ್ದರು ಆದರೆ ಹೈಕೋರ್ಟ್ ಇದೀಗ ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್ ನೀಡಿದ್ದ ಆದೇಶವನ್ನು ರದ್ದುಗೊಳಿಸಿದೆ. ಹೌದು ಪವಿತ್ರಗೌಡ, ಲಕ್ಷ್ಮಣ ಮತ್ತು ನಾಗರಾಜಗೆ ಮನೆ ಊಟ ಕುರಿತು ಪ್ರಶ್ನಿಸಿ ಒಂದು ಅರ್ಜಿ ಸಲ್ಲಿಸಲಾಗಿತ್ತು. ವೈದ್ಯಕೀಯ ಸಲಹೆ ಇದ್ದರೆ ಮಾತ್ರ ಮನೆ ಊಟಕ್ಕೆ ಅವಕಾಶ ಇದೇ. ಕೈದಿ ಕೇಳಿದ ಕೂಡಲೇ ಮನೆ ಊಟ ಒದಗಿಸಲು ಅವಕಾಶ ಇಲ್ಲ ಎಂದು ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇನ್ನು ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್ ನೀಡಿದ ಆದೇಶವನ್ನು ಹೈಕೋರ್ಟ್ ಇದೀಗ ರದ್ದುಪಡಿಸಿದೆ. ಹಾಗಾಗಿ ದರ್ಶನ್ ಮತ್ತು ಗ್ಯಾಂಗ್ ಗೆ ಇದೀಗ ಜೈಲೂಟವೇ ಗತಿಯಾಗಿದೆ.

Read More

ಬೆಂಗಳೂರು : ಅಶ್ಲೀಲ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಕೆಲವು ಯೂಟ್ಯೂಬರ್ಸ್ ವಿರುದ್ಧ ಸ್ಯಾಂಡಲ್ ವುಡ್ ನಟಿ ಸಪ್ತಮಿ ಗೌಡ ಇದೀಗ ಅಕ್ರೋಶ ಹೊರಹಾಕಿದ್ದಾರೆ. ಕೆಲ ಯೂಟ್ಯೂಬರ್ಸ್ ಸಪ್ತಮಿ ಗೌಡಗೆ ಮುಜುಗರ ತಂದಿಟ್ಟಿದ್ದು ಅಸಭ್ಯ ರೀತಿಯಲ್ಲಿ ಫೋಟೋಸ್ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಅಪ್ಲೋಡ್ ಮಾಡಿದ್ದಕ್ಕೆ ಕಿಡಿ ಕಾರಿದ್ದಾರೆ. ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಸ್ಟೋರಿ ಹಾಕಿಕೊಂಡಿರುವ ಅವರು, ಚಿತ್ರರಂಗದಲ್ಲಿರುವ ಮಹಿಳೆಯರಾಗಿ,ನಿರಂತರವಾಗಿ ನಡೆಯುತ್ತಿರುವ ಒಂದು ಗಂಭೀರ ಸಮಸ್ಯೆಯನ್ನು ಎದುರಿಸಲು ಒಟ್ಟಾಗಿ ನಿಂತಿದ್ದೇವೆ. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮಹಿಳಾ ಕಲಾವಿದರ ವಿಡಿಯೋಗಳು ಮತು ಫೋಟೋಗಳನ್ನು ಅಸಭ್ಯ ಕೋನಗಳಿಂದಚಿತ್ರೀಕರಿಸಿ, ನಮ್ಮ ಕಲೆಯಿಗಿಂತೆ ನಮ್ಮ ದೇಹದ ಮೇಲೆ ಅನಾವಶ್ಯಕವಾಗಿ ಜೂಮ್ ಮಾಡಿ ಪ್ರಸಾರ ಮಾಡುವ ಘಟನೆಗಳು ಪುನಃ ಪುನಃ ನಡೆಯುತ್ತಿವೆ. ಇಂತಹವರ್ತನೆ,ಕೆಲವರಿಂದ ನಡೆಯುತ್ತಿರುವುದಾದರೂ, ಅದು ಅಸಭ್ಯ, ಅವಮಾನಕಾರಿ ಮತ್ತುಸ್ತೆಂಪೂರ್ಣವಾಗಿ ಅಸ್ವೀಕಾರಾರ್ಹವಾಗಿದೆ. ನಾವು ಇಲ್ಲಿ ನಮ್ಮ ಕಲೆಗಾಗಿ ಬಂದಿದ್ದೇವೆ.ನಾವು ಇಲ್ಲಿನಮ್ಮ ಸೆನೆಮಾಕ್ಕಾಗಿ ಬಂದಿದ್ದೇವೆ. ಉದ್ದೇಶಪೂರ್ವಕವಾಗಿ ಜೂಮ್ ಮಾಡುವುದು ಮತ್ತು ಅಸಭ್ಯ ಕೋನಗಳಿಂದ ಬಳಸುವುದು ನಮ್ಮಗೌರವಕ್ಕೆ ಸ್ಪಷ್ಟಧಕ್ಕೆ.ಇದನ್ನು ಸಾಮಾನ್ಯವೆಂದು ಸ್ವೀಕರಿಸುವುದಿಲ್ಲ,…

Read More

ಬೆಂಗಳೂರು : ಬೆಂಗಳೂರಲ್ಲಿ ಅಘಾತಕಾರಿ ಘಟನೆಯೊಂದು ನಡೆದಿದ್ದು, ಅಡುಗೆ ಮಾಡುವ ವಿಚಾರಕ್ಕೆ ಅತ್ತೆ ಸೊಸೆ ನಡುವೆ ಜಗಳ ನಡೆದು ಸೊಸೆ ಸಾವಿಗೆ ಶರಣಾದಂತಹ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತ ಮಹಿಳೆಯನ್ನು 35 ವರ್ಷದ ಸುಷ್ಮಾ ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಇಂಜಿನಿಯರ್ ಆಗಿರುವ ಸುಷ್ಮಾ ಅರಿಗೆ 5 ವರ್ಷದ ಹಿಂದೆ ಪುನೀತ್ ಕುಮಾರ್ ಎಂಬುವವರ ಜತೆ ಮದುವೆಯಾಗಿತ್ತು. ದಂಪತಿಗೆ 4 ವರ್ಷದ ಮಗನೂ ಇದ್ದಾನೆ. ಈ ಹಿಂದೆ ಸುಷ್ಮಾ ಅವರು ಡೆಲ್ ಕಂಪನಿಯಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಮನೆಯಲ್ಲಿ ಅತ್ತೆ ಸೊಸೆ ಮಧ್ಯೆ ಆಗಾಗ ಸಣ್ಣ ಪುಟ್ಟ ವಿಚಾರಗಳಿಗೆ ಸಂಬಂಧಿಸಿದಂತೆ ಗಲಾಟೆ ನಡೆಯುತ್ತಿತ್ತು. ಅಡುಗೆ ವಿಚಾರವಾಗಿ ಸೊಸೆ ಸುಷ್ಮಾ ಹಾಗು ಅತ್ತೆ ಕಲ್ಪನಾ ಮಧ್ಯೆ ಕಿತ್ತಾಟಗಳಾಗುತ್ತಿದ್ದವು. ಮಂಗಳವಾರ ಸಂಜೆ ಇದೇ ವಿಚಾರವಾಗಿ ಆರಂಭವಾದ ಜಗಳ ವಿಕೋಪಕ್ಕೆ ಹೋಗಿದ್ದು, ಸುಷ್ಮಾ ಆಘಾತಕಾರಿ ನಿರ್ಧಾರ ಕೈಗೊಂಡಿದ್ದಾರೆ. ಸುಷ್ಮಾ ಅವರ ಕುಟುಂಬದವರ ಪ್ರಕಾರ ಅತ್ತೆ ಕಲ್ಪನಾ ಸೊಸೆ ಸುಷ್ಮಾ ಅವರಿಗೆ ಅಡುಗೆ ಮಾಡುವುದಕ್ಕೆ ಬಿಡುತ್ತಿರಲಿಲ್ಲ,…

Read More

ಬೆಂಗಳೂರು : ಕಳೆದ ವರ್ಷ ಜೂನ್ ನಲ್ಲಿ ನಗರದ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಳೆದ ವರ್ಷ ಜೂನ್‌ನಲ್ಲಿ ಆರ್‌ಸಿಬಿ (RCB) ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತದಲ್ಲಿ 11 ಜನರ ಸಾವನ್ನಪಿದ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸದಂತೆ ವಿಧಿಸಿರುವ ಮಧ್ಯಂತರ ಆದೇಶವನ್ನು ಹೈಕೋರ್ಟ್ ವಿಸ್ತರಣೆ ಮಾಡಿದೆ. ಎಫ್‌ಐಆ‌ರ್ ರದ್ದು ಕೋರಿ ಆರ್‌ಸಿಬಿ, ಕೆಎಸ್‌ಸಿಎ ಮತ್ತು ಡಿಎನ್‌ಎ ಸಂಸ್ಥೆಗಳು ಸಲ್ಲಿಸಿರುವ ಅರ್ಜಿ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು. ಈ ವೇಳೆ ಎಸ್‌ಪಿಪಿ ಬಿ.ಟಿ.ವೆಂಕಟೇಶ್, ಪ್ರಕರಣದಲ್ಲಿ ಆರೋಪ ಪಟ್ಟಿ ಸಲ್ಲಿಸಲು ಅನುಮತಿ ಕೋರಿ ಸರ್ಕಾರ ಮೆಮೋ ಸಲ್ಲಿಸಿದೆ. ಅದನ್ನು ಪರಿಗಣಿಸಿ ಅನುಮತಿ ನೀಡಬೇಕು ಎಂದು ಮನವಿ ಮಾಡಿದರು. ಅದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಆರ್‌ಸಿಬಿ ಪರ ವಕೀಲರು, ಅಂತಿಮ ವರದಿ ಸಲ್ಲಿಸದಂತೆ ಹೈಕೋರ್ಟ್ ಮಧ್ಯಂತರ ಆದೇಶವಿದೆ. ಹಾಗಾಗಿ ಎಫ್‌ಐಆರ್ ರದ್ದು ಕೋರಿರುವ ನಮ್ಮ ವಾದ ಮೊದಲು ಪರಿಗಣಿಸಬೇಕು. ಕ್ರೀಡಾಂಗಣದ ಹೊರಗಿನ ಘಟನೆಗೆ ಸಂಸ್ಥೆಗಳನ್ನು ಹೊಣೆ ಮಾಡಬಾರದು.…

Read More

ಬೆಂಗಳೂರು : ಬೆಂಗಳೂರಿನಲ್ಲಿ ಇಬ್ಬರು ಪಿಯುಸಿ ವಿದ್ಯಾರ್ಥಿನಿಯರು ನಾಪತ್ತೆಯಾಗಿದ್ದಾರೆ ವಿದ್ಯಾರಣ್ಯಪುರ ವ್ಯಾಪ್ತಿಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆಯಾಗಿದ್ದಾರೆ. ದ್ವಿತೀಯ ಪಿಯುಸಿ ಓದುತ್ತಿರುವ ವಿದ್ಯಾರ್ಥಿನಿ ತನಿಷ್ಕ ಮತ್ತು ಪ್ರಥಮ ಪಿಯುಸಿ ಓದುತ್ತಿರುವ ವಿದ್ಯಾರ್ಥಿನಿ ತೇಜಸ್ವಿನಿ ನಾಪತ್ತೆಯಾಗಿದ್ದಾರೆ. ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು ಮನೆ ಬಿಟ್ಟು ಹೋದರ ಎನ್ನುವ ಅನುಮಾನ ಶುರುವಾಗಿದೆ. ಒಂದು ತಿಂಗಳಿನಿಂದ ಪೊಲೀಸರು ಮತ್ತು ಪೋಷಕರು ಹುಡುಕಾಡುತ್ತಿದ್ದಾರೆ. ಮನೆಯಲ್ಲಿಯೇ ಇಬ್ಬರು ಯುವತಿಯರು ಮೊಬೈಲ್ ಬಿಟ್ಟು ನಾಪತ್ತೆಯಾಗಿದ್ದಾರೆ. ಎಟಿಎಂ ಸೇರಿದಂತೆ ಏನನ್ನು ಕೂಡ ಇವತಿರು ಕೊಂಡು ಹೋಗಿಲ್ಲ ಆಧಾರ್ ಕಾರ್ಡ್ ಕಾಲೇಜು ಬ್ಯಾಗು ಜೊತೆ ಇಬ್ಬರು ನಾಪತ್ತೆಯಾಗಿದ್ದಾರೆ. ಜನವರಿ 31ರಂದು ಇಬ್ಬರು ವಿದ್ಯಾರ್ಥಿನಿಯರು ಕಾಣೆಯಾಗಿದ್ದಾರೆ. ಈ ಬಗ್ಗೆ ಕೂಡಲೇ ಪೋಷಕರು ವಿಚಾರಣೆಗೆ ದೂರು ನೀಡಿದ್ದಾರೆ ಕಳೆದ ವರ್ಷ ತಪ್ಪಿಸಿಕೊಳ್ಳಲು ಯುವತಿ ಕೈ ಕುಯ್ದುಕೊಂಡಿದ್ದಳು. ಈ ವರ್ಷ ಪರೀಕ್ಷೆ ಸಮೀಪಿಸುತ್ತಿದಂತೆ ಕಿರಿಯ ವಿಧ್ಯಾರ್ಥಿನಿ ಜೊತೆಗೆ ಕಾಣೆಯಾಗಿದ್ದಾರೆ.

Read More

ಬೆಂಗಳೂರು : ಸರ್ಕಾರ ನಿಯಮಿತವಾಗಿ ಕಾಲಕಾಲಕ್ಕೆ ಖಾಲಿ ಇರುವ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳುತ್ತಿಲ್ಲ ಎಂದು ಇತ್ತೀಚಿಗೆ ಉದ್ಯೋಗ ಆಕಾಂಕ್ಷಿಗಳು ಧಾರವಾಡದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದರು. ಆದರೆ ಇದೀಗ ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿರುವ ಶಂಕೆ ವ್ಯಕ್ತವಾಗಿದೆ. ಹೌದು ಕರ್ನಾಟಕ ಲೋಕಸೇವಾ ಆಯೋಗ ವಿವಾದದ ಸುಳಿಯಲ್ಲಿ ಸಿಲುಕಿದ್ದು, ಗೆಜೆಟೆಡ್ ಪ್ರೊಬೆಷನರ್ ಹುದ್ದೆಯಲ್ಲಿ ಗೋಲ್ಮಾಲ್ ನಡೆದಿದೆ. ಒಂದೇ ಕೊಠಡಿಯಲ್ಲಿ ಮುಖ್ಯ ಪರೀಕ್ಷೆ ಬರೆದ 15 ಮಂದಿ ಆಯ್ಕೆಯಾಗಿದ್ದಾರೆ. ಒಂದೇ ಕುಟುಂಬದ ಹಲವರು ಆಯ್ಕೆ ಆಗಿರುವ ಆರೋಪ ಕೇಳಿ ಬರುತ್ತಿದೆ. ಕೆಪಿಎಸ್ಸಿ ವಿರುದ್ಧ ಪರೀಕ್ಷ ಬರೆದ ಹಲವು ಅಭ್ಯರ್ಥಿಗಳು ಆರೋಪ ಮಾಡಿದ್ದಾರೆ. ಕೆಪಿಎಸ್ಸಿ ಫಲಿತಾಂಶದ ವಿರುದ್ಧ ಅಭ್ಯರ್ಥಿಗಳು ಅಸಮಾಧಾನ ಹೊರಹಾಕಿದ್ದಾರೆ. ಮುಖ್ಯ ಪರೀಕ್ಷೆ ಬರೆದು ಸಂದರ್ಶನಕ್ಕೆ ಆಯ್ಕೆಯಾದ ಆರೋಪ ಕೇಳಿ ಬಂದಿದೆ. ಪ್ರಭಾವಿಗಳ ಮಕ್ಕಳಿಗೆ ಬುದ್ಧಿ ಕೊಡಿಸಲು ಕುತಂತ್ರ ನಡೆದಿದೆ ಎಂದು ಆರೋಪ ಕೇಳಿಬಂದಿದೆ. ಸೀರಿಯಲ್ ನಂಬರ್ ಸಾಲಾಗಿ ಸೆಲೆಕ್ಟ್ ಆಗಿದ್ದು ಹೇಗೆ? ಅಲ್ಲದೆ ಒಂದೇ ಪರೀಕ್ಷಾ ಕೇಂದ್ರದಿಂದ 15 ಮಂದಿ ಆಯ್ಕೆಯಾಗಿದ್ದಾರೆ. ರಿಜಿಸ್ಟರ್…

Read More