Author: kannadanewsnow05

ಬೆಂಗಳೂರು : ನಗರದಲ್ಲಿ ನಾಳೆ 4ನೇ ದಿನದ ಗಣೇಶ ಮೂರ್ತಿ ವಿಸರ್ಜನೆ ಮಾಡಲಾಗುತ್ತಿದೆ. ಪ್ರಮುಖ ಕೆರೆ, ಕಲ್ಯಾಣಿಗಳನಲ್ಲಿ ಗಣೇಶ ಮೂರ್ತಿಯನ್ನು ಬಿಡಲಾಗುತ್ತಿದೆ. ಈ ಹಿನ್ನಲೆಯಲ್ಲಿ ನಾಳೆ ಬೆಂಗಳೂರು ಜಿಲ್ಲೆಯಾಧ್ಯಂತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಈ ಕುರಿತಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್.ಜಿ ಅವರು ಆದೇಶ ಹೊರಡಿಸಿದ್ದು, ಪೊಲೀಸ್ ಅಧೀಕ್ಷಕರು, ಬೆಂಗಳೂರು ಜಿಲ್ಲೆ ರವರು ಉಲ್ಲೇಖ (1) ರಂತೆ ಪತ್ರ ಸಲ್ಲಿಸಿ, ದಿನಾಂಕ 31-08-2025 ರಂದು ಆನೇಕಲ್ ತಾಲ್ಲೂಕು ವ್ಯಾಪ್ತಿಯಲ್ಲಿ ಹೆಚ್ಚಿನ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ ಕಾರ್ಯಕ್ರಮಗಳು ನಡೆಯಲಿರುವುದರಿಂದ ಹಾಗೂ ದಿನಾಂಕ 31-08-2025 ರಂದು ಭಾನುವಾರ ರಜಾ ದಿನ ಆಗಿರುವುದರಿಂದ ಗಣೇಶ ಮೂರ್ತಿಗಳ ವಿಸರ್ಜನ ಮೆರವಣಿಗೆ ಕಾರ್ಯಕ್ರಮದಲ್ಲಿ ಹೆಚ್ಚಿನ ಜನರು ಭಾಗವಹಿಸುವ ಸಾಧ್ಯತೆ ಇರುವುದರಿಂದ ಕೆಲವರು ಮದ್ಯಪಾನ ಮಾಡಿ ಅನುಚಿತ ವರ್ತನೆ ಮಾಡುವ ಸಾಧ್ಯತೆ ಇರುತ್ತದೆಂದು ಮುಂಜಾಗ್ರತಾ ಕ್ರಮವಾಗಿ ಆನೇಕಲ್ ತಾಲ್ಲೂಕಿನಲ್ಲಿರುವ ಎಲ್ಲಾ ಬಾರ್ ಗಳನ್ನು ದಿನಾಂಕ 31-08-2025 ರಂದು ಮುಚ್ಚಿಸಬೇಕೆಂದು ಕೋರಿರುತ್ತಾರೆ. ಅದರಂತೆ ಅಬಕಾರಿ ಉಪ ಆಯುಕ್ತರು…

Read More

ಚಾಮರಾಜನಗರ : ಕುರುಕಲು ತಿಂಡಿ ಪ್ರಿಯರನ್ನು ನೋಡಿರುತ್ತೀರಿ, ಹೆಚ್ಚು ತಿನ್ನುವ ತಿಂಡಿಪೋತರನ್ನು ಕಂಡಿರುತ್ತೀರಿ. ಆದರೆ, ಇಲ್ಲೋರ್ವ ಹಣ್ಣಿನ ರಸದಂತೆ ಎಂಜಿನ್ ಆಯಿಲ್ ಕುಡಿದು ಎಲ್ಲರನ್ನೂ ಅಚ್ಚರಿಗೆ ಒಳಗಾ ಗುವಂತೆ ಮಾಡಿದ ಘಟನೆ ಚಾಮರಾಜನಗರ ನಡೆದಿದೆ. ಜಿಲ್ಲೆಯ ಕೊಳ್ಳೇಗಾಲದಲ್ಲಿ ಮೈಸೂರಿನ ಕುಮಾರ್‌ಎಂಬ ಅಯ್ಯಪ್ಪಸ್ವಾಮಿ ಭಕ್ತ ಕೊಳ್ಳೇಗಾಲದ ಮೂಲಕ ಶಬರಿಮಲೆ ಯಾತ್ರೆಗೆ ತೆರಳುವಾಗ ಕೊಳ್ಳೇಗಾಲದಲ್ಲಿ ಹಣ್ಣಿನ ರಸದಂತೆ ಎಂಜಿನ್ ಆಯಿಲ್ ಅನ್ನು ಗಟಗಟನೇ ಕುಡಿದು ಅಚ್ಚರಿ ಮೂಡಿಸಿದ್ದಾರೆ. ಈ ಬಗ್ಗೆ ಕುಮಾರ್‌ ಮಾತನಾಡಿ, ಕಳೆದ 29 ವರ್ಷದಿಂದ ಇದನ್ನೇ ಕುಡಿದು ಜೀವಿಸುತ್ತಿದ್ದೇನೆ. ಊಟ-ತಿಂಡಿ ಯಾವುದೂ ಸೇರುವುದಿಲ್ಲ. ಕುಡಿದರೇ ಟೀ-ಕಾಫಿ ಹಾಗೂ ಎಂಜಿನ್ ಆಯಿಲ್ ಅಷ್ಟೇ. ಕಾಪಾಡಲು ದೇವರು ಇದ್ದಾಗ ಯಾಕೆ ಚಿಂತೆ. ಕಳೆದ 29 ವರ್ಷದಿಂದ ಇದೇ ನನಗೆ ಆಹಾರ ಎಂದರು. ಕುಮಾ‌ರ್ ಅವರನ್ನು ಕಂಡ ಸ್ಥಳೀಯರು ಅಚ್ಚರಿಗೆ ಒಳಗಾದರು.

Read More

ಕೊಡಗು : ಕೊಡಗಿನಲ್ಲಿ ಪ್ರವಾಸಿಗರಿಗೆ ಹುಡುಗಿಯರು ಮತ್ತು ಆಂಟಿಯರು ಡೇಟಿಂಗ್‌ ಮಾಡಲು ಲಭ್ಯವಿದ್ದಾರೆ ಅಂತ ಸೋಷಿಯಲ್‌ ಮೀಡಿಯಾ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್‌ ಹಾಕಿದ್ದ ಯುವಕನನ್ನ ಕೊಡಗು ಪೊಲೀಸರು ಬಂಧಿಸಿದ್ದಾರೆ. ಬಾಗಲಕೋಟೆ ನಿವಾಸ ನಾಗಪ್ಪ (26) ಬಂಧಿತ ಯುವಕ. ಕಿಡಿಗೇಡಿ, ಮಡಿಕೇರಿ ನಗರದ ವ್ಯಾಪ್ತಿಯಲ್ಲಿ ಆಂಟಿಯರು, ಹುಡುಗಿಯರು ಡೇಟಿಂಗ್‌ಗೆ ಸಿಕ್ತಾರೆ, ಎಲ್ಲಾ ವ್ಯವಸ್ಥೆ ಮಾಡಲಾಗುತ್ತದೆ ಅಂತ ಮೊಬೈಲ್‌ ನಂಬರ್‌ ಕೂಡ ಹಾಕಿದ್ದ. ಇದರ ವಿರುದ್ಧ ಪ್ರವಾಸಿಗರು ಮಾತ್ರವಲ್ಲದೇ ಕೊಡಗಿನ ಸ್ಥಳೀಯರಿಂದಲೂ ಆಕ್ರೋಶ ವ್ಯಕ್ತವಾಗಿತ್ತು. ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ.

Read More

ಡ್ಯ : ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರಿಗೆ ನೈತಿಕ ಬೆಂಬಲ ನೀಡುವ ಸಲುವಾಗಿ ಆ.31ರಂದು ಜೆಡಿಎಸ್ ವತಿಯಿಂದ ಧರ್ಮಸ್ಥಳ ಸತ್ಯ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷನಿಖಿಲ್‌ ಕುಮಾರಸ್ವಾಮಿ ತಿಳಿಸಿದ್ದಾರೆ. ಹಾಸನದಿಂದ ಜೆಡಿಎಸ್ ಶಾಸಕರು, ಮಾಜಿ ಶಾಸಕರು, ಮುಖಂಡರು, ಕಾರ್ಯಕರ್ತರು ಬಸ್‌ಗಳ ಮೂಲಕ ಧರ್ಮಸ್ಥಳಕ್ಕೆ ತೆರಳಿ ಬಳಿಕ ನೇತ್ರಾವತಿ ನದಿ ದಡದಿಂದ ಶ್ರೀ ಮಂಜುನಾಥನ ದೇವಾಲಯದವರೆಗೆ ಪಾದಯಾತ್ರೆ ನಡೆಸು ತ್ತೇವೆ. ಅಲ್ಲಿ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ನೈತಿಕ ಸ್ಟೈರ್ಯ ತುಂಬಲಾಗುವುದು ಎಂದು ತಿಳಿಸಿದರು. ಜೆಡಿಎಸ್‌ ನಡೆಸುತ್ತಿರುವ ಯಾತ್ರೆ ಹಿಂದೆ ಯಾವುದೇ ರಾಜಕೀಯ ದುರುದ್ದೇಶವಿಲ್ಲ. ಇದರೊಳಗೆ ರಾಜಕಾರಣವನ್ನು ಬೆರೆಸುವುದೂ ಇಲ್ಲ. ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ಹಲವಾರು ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಕೋಟ್ಯಂತರ ಭಕ್ತರ ನಂಬಿಕೆಗೆ ಪಾತ್ರವಾಗಿರುವ ಧರ್ಮಸ್ಥಳ ಕ್ಷೇತ್ರದಪಾವಿತ್ರ್ಯತೆ ಕಾಪಾಡುವುದು ಮುಖ್ಯ ಉದ್ದೇಶವಾಗಿದೆ ಎಂದು ಸ್ಪಷ್ಟಪಡಿಸಿದರು. ಬುರುಡೆ ಪ್ರಕರಣ ಸಂಘಟಿತ ಪಿತೂರಿಯಾಗಿದ್ದು, ಧರ್ಮಸ್ಥಳದ ಪಾವಿತ್ರ್ಯತೆಗೆ ಧಕ್ಕೆ ತರುವ ಸಂಚು ಕಂಡುಬರುತ್ತಿದೆ. ಪಿತೂರಿಗಾರರಿಗೆ ವಿದೇಶದಿಂದ…

Read More

ನವದೆಹಲಿ : ಸಾಮಾಜಿಕ ಜಾಲತಾಣದಲ್ಲಿ ರಾಹುಲ್ ಗಾಂಧಿ ಪ್ರಭಾವ ಇದೀಗ ಹೆಚ್ಚಾಗಿದ್ದು, ವ್ಯೂವ್ಸ್ ನಲ್ಲಿ ನರೇಂದ್ರ ಮೋದಿಯನ್ನು ರಾಹುಲ್ ಗಾಂಧಿ ಇದೀಗ ಮೀರಿಸಿದ್ದಾರೆ. ಇನ್ಸ್ಟಾಗ್ರಾಮ್ ನಲ್ಲಿ ರಾಹುಲ್ ಗಾಂಧಿ ವಿಡಿಯೋಗಳು 601 ಮಿಲಿಯನ್ ವೀಕ್ಷಣೆ ಗಳಿಸಿದರೆ, ಪ್ರಧಾನಿ ನರೇಂದ್ರ ಮೋದಿ ಅವರ ವಿಡಿಯೋಗಳು 350 ಮಿಲಿಯನ್ ವೀಕ್ಷಣೆ ಗಳಿಸಿವೆ. ಅದೇ ರೀತಿ ಫಾಲೋವರ್ಸ್ ಸೇರ್ಪಡೆಯಲು ಕೂಡ ರಾಹುಲ್ ಗಾಂಧಿ ಮೋದಿಗಿಂತ ಮುಂಚೂಣಿಯಲ್ಲಿದ್ದಾರೆ. ರಾಹುಲ್ ಗಾಂಧಿಗೆ 13 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆಯಾಗಿದ್ದರೆ, ನರೇಂದ್ರ ಮೋದಿಗೆ 2.2 ಲಕ್ಷ ಸೇರ್ಪಡೆಯಾಗಿದ್ದಾರೆ. ಇನ್ನು ಫೇಸಬುಕ್ಕಿನಲ್ಲಿ ಸಹ ರಾಹುಲ್ ಗಾಂಧಿ ವಿಡಿಯೋಗಳಿಗೆ 148 ಮಿಲಿಯನ್ ವೀಕ್ಷಣೆಗಳು ಬಂದರೆ ನರೇಂದ್ರ ಮೋದಿ ವಿಡಿಯೋಗಳಿಗೆ 72 ಮಿಲಿಯನ್ ವೀಕ್ಷಣೆ ಗಳಿಸಿವೆ. ಫೇಸ್ಬುಕ್ ಫಾಲೋವರ್ಸ್ ಸೇರ್ಪಡೆಯಲ್ಲೂ ಕೂಡ ರಾಹುಲ್ ಮುನ್ನಡೆ ಸಾಧಿಸಿದ್ದು ರಾಹುಲ್ ಗಾಂಧಿ 6 ಲಕ್ಷ ಫಾಲೋವರ್ಸ್ ಗಳಿಸಿದರೆ, ಫೇಸ್ಬುಕ್ ನಲ್ಲಿ ನರೇಂದ್ರ ಮೋದಿ 1.8 ಲಕ್ಷ ಗಳಿಸಿದ್ದಾರೆ. ಇನ್ನು ಯುಟ್ಯೂಬ್ ನಲ್ಲೂ ಸಹ ರಾಹುಲ್ ಗಾಂಧಿ ವಿಡಿಯೋಗಳಿಗೆ…

Read More

ಬೆಂಗಳೂರು : ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಹೆಸರು ಸೇರ್ಪಡೆ/ತಿದ್ದುಪಡಿಗೆ ಇಂದು ಕೊನೆಯ ದಿನವಾಗಿದೆ. ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ,ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದೆ. ಬೆಂಗಳೂರು ಒನ್, ಸೈಬರ್ ಸೆಂಟರ್ ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ವೆಬ್ ಸೈಟ್ ಸ್ವಯಂ ಆಗಿ ಅರ್ಜಿ ಸಲ್ಲಿಸಬಹುದು. ಎಪಿಎಲ್ ಕಾರ್ಡ್ ಪಡೆಯುವವರು ಕೂಡ ಆನ್ನೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗುವುದು. http://ahara.kar.nic.in ವೆಬ್ಟ್ ಗಮನಿಸಬಹುದಾಗಿದೆ. ಆರಂಭ ದಿನಾಂಕ: ಆಗಸ್ಟ್ 01, 2025 ಕೊನೆಯ ದಿನಾಂಕ: ಆಗಸ್ಟ್ 31, 2025 (ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ) ಹೊಸ ಸದಸ್ಯರ ಸೇರ್ಪಡೆ * ಪೋಟೋ ಬದಲಾವಣೆ * ಹೆಸರು ಡಿಲೆಟ್ * ಅಂಗಡಿ. ನಂ. ಬದಲಾವಣೆ * ಹೆಸರು ತಿದ್ದುಪಡಿ * ಮುಖ್ಯಸ್ಥರ…

Read More

ಬೆಂಗಳೂರು : ವಿದ್ಯುತ್, ನೀರು, ಹಾಲು, ಬಸ್ಸು ಹಾಗೂ ಮೆಟ್ರೋ ಪ್ರಯಾಣ ದರ, ಮುದ್ರಾಂಕ ಶುಲ್ಕ ಸೇರಿ ವಿವಿಧ ದರ ಹೆಚ್ಚಳ ಬೆನ್ನಲ್ಲೇ ಇದೀಗ ಆಸ್ತಿಗಳ ನೋಂದಣಿ ಶುಲ್ಕವನ್ನೂ ದುಪ್ಪಟ್ಟು ಮಾಡಿ ಕಂದಾಯ ಇಲಾಖೆ ಆದೇಶ ಹೊರಡಿಸಿದ್ದು, ಇಂದಿನಿಂದ ಅನ್ವಯವಾಗುವಂತೆ ನೋಂದಣಿ ಶುಲ್ಕ ಶೇ.1 ರಿಂದ ಶೇ.2ಕ್ಕೆ ಹೆಚ್ಚಳ ಆಗಲಿದೆ. ಸ್ಥಿರಾಸ್ತಿ ಶುದ್ಧ ಕ್ರಯ ಪತ್ರ, ಸ್ವಾಧೀನ ಭೋಗ್ಯ ಪತ್ರ, ಕ್ರಯ ಉದ್ದೇಶದ ಜಿಪಿಎ ಸೇರಿ ವಿವಿಧ ಆಸ್ತಿ ಖರೀದಿ ನೋಂದಣಿಗೆ ಈ ಶುಲ್ಕ ಅನ್ವಯವಾಗಲಿದೆ. ಈವರೆಗೆ ರಾಜ್ಯದಲ್ಲಿ ನಿವೇಶನ, ಭೂಮಿ, ಫ್‌ಲ್ಯಾಟ್, ಮನೆ ಸೇರಿ ಯಾವುದೇ ಸ್ಥಿರಾಸ್ತಿ ಖರೀದಿ ವೇಳೆ ಶೇ.1 ರಷ್ಟು ನೋಂದಣಿ ಶುಲ್ಕ ಹಾಗೂ ಶೇ.5.6 ರಷ್ಟು ಮುದ್ರಾಂಕ ಶುಲ್ಕ ಸೇರಿ ಒಟ್ಟು ಶೇ.6.6 ರಷ್ಟು ಶುಲ್ಕ ಭರಿಸಬೇಕಾಗಿತ್ತು. ಇದೀಗ ನೋಂದಣಿ ಶುಲ್ಕ ರಷ್ಟಾಗಿರುವುದರಿಂದ ಆಸ್ತಿಯ ಮಾರುಕಟ್ಟೆ ಬೆಲೆಯ ಶೇ.7.6 ರಷ್ಟನ್ನು ನೋಂದಣಿ ಮತ್ತು ಮುದ್ರಾಂಕ ಶುಲ್ಕಕ್ಕೆ ಭರಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಲಿದೆ. ಈ ಬಗ್ಗೆ ಕಂದಾಯ ಇಲಾಖೆ…

Read More

ಅಲಹಾಬಾದ್ : ವಿವಾಹ ನೋಂದಣಿ ಇಲ್ಲದಿರುವುದು ಅಮಾನ್ಯಗೊಳಿಸುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ. ರಾಜ್ಯ ಸರ್ಕಾರಗಳು ವಿವಾಹ ನೋಂದಣಿಗೆ ನಿಯಮ ರೂಪಿಸಬ ಹುದಾದರೂ, ಅಂತಹ ನೋಂದಣಿ ಉದ್ದೇಶ ಕೇವಲ ಮದುವೆಯ ಸುಲಭ ಸಾಕ್ಷ್ಯವನ್ನು ಒದಗಿಸುವುದಕ್ಕೆ ಮಾತ್ರ. ನೋಂದಣಿ ಆಗದಿದ್ದರೆ ಮದುವೆಯ ಸಿಂಧುತ್ವಕ್ಕೆ ಯಾವುದೇ ಧಕ್ಕೆಯಾಗಲ್ಲ’ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಅರ್ಜಿದಾರ ಸುನೀಲ್ ದುಬೆ ದಂಪತಿ ವಿಚ್ಛೇದನಕ್ಕಾಗಿ ಅರ್ಜಿಸಲ್ಲಿಸಿದ್ದರು. ಆದರೆವಿವಾಹನೋಂದಣಿ ಪ್ರಮಾಣಪತ್ರ ಸಲ್ಲಿಸು ವಂತೆ ಆಜಂಗಢದ ಕೌಟುಂಬಿಕ ನ್ಯಾಯಾಲಯ ಗಡುವು ನೀಡಿತ್ತು. ವಿವಾಹ ನೋಂದಣಿ ಪ್ರಮಾಣ ಪತ್ರದಿಂದ ವಿನಾಯಿತಿ ಕೊಡು ವಂತೆ ಕೋರಿ ಸಲ್ಲಿಸಿದ್ದ ಅರ್ಜಿ ಯನ್ನೂ ವಿವಾಹ ವನ್ನು ಕೋರ್ಟ್ ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ದುಬೆ ಹೈಕೋಟ್ ಹಾಬಾದ್ರ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಪೀಠ, ‘ಹಿಂದೂ ವಿವಾಹ ಕಾಯ್ದೆ, 1955ರ ನಿಬಂಧನೆಗಳ ಪ್ರಕಾರ ಹಿಂದೂ ವಿವಾಹ ನಡೆದರೆ, ಅಂತಹ ಮದುವೆಯ ಸಾಕ್ಷ್ಯವನ್ನು ಸುಗಮಗೊಳಿಸಲು ರಾಜ್ಯ ಸರ್ಕಾರಗಳಿಗೆ ನೋಂದಣಿಗಾಗಿ ನಿಯಮ ರೂಪಿಸುವ ಅಧಿಕಾರವಿದೆ. ಆದರೆ, ಮದು…

Read More

ಬೆಂಗಳೂರು : ನಾಡಿನ ನದಿಯ ಅಚ್ಚುಮೆಚ್ಚಿನ ನಂದಿನಿ ಉತ್ಪನ್ನಗಳು ಇತ್ತೀಚಿಗೆ ರಾಜ್ಯ ಅಷ್ಟೇ ಅಲ್ಲದೆ ದೈಲಿಯವರೆಗೂ ತನ್ನ ಹವಾ ಎಬ್ಬಿಸಿತ್ತು ಆದರೆ ಇದೀಗ ನಂದಿನಿ ಪ್ರಾಡಕ್ಟ್ ಗಳು ಕೇವಲ ರಾಷ್ಟ್ರ ಅಷ್ಟೇ ಅಲ್ಲದೆ ಅಂತರಾಷ್ಟ್ರೀಯ ಮಟ್ಟದಲ್ಲೂ ಕೂಡ ತನ್ನ ಹೆಸರುವಾಸಿಯಾಗಿದ್ದು ಅಮೆರಿಕಾದಲ್ಲಿ ನಡೆದ ನಾವಿಕ ಸಮ್ಮೇಳನದಲ್ಲಿ ನಂದಿನಿ ಬ್ರಾಂಡಿನ ಎಲ್ಲಾ ಉತ್ಪನ್ನಗಳನ್ನು ಬಿಡುಗಡೆ ಮಾಡಲಾಯಿತು. ಹೌದು ಕನ್ನಡ ನಾಡಿನ ಹೆಮ್ಮೆಯ ಕೆಎಂಎಫ್ ನಂದಿನಿ ಬ್ರಾಂಡಿನ ಎಲ್ಲ ಉತ್ಪನ್ನಗಳನ್ನು ಅಮೆರಿಕ ದೇಶದ ಫ್ಲೋರಿಡಾದ ಲೇಕ್ ಲ್ಯಾಂಡ್ ನಲ್ಲಿ ನಿನ್ನೆ ಅಧಿಕೃತವಾಗಿ ನಡೆದ ನಾವಿಕ ಸಮ್ಮೇಳನದಲ್ಲಿ ಬಿಡುಗಡೆ ಮಾಡಲಾಯಿತು. ಕೆಎಂಎಫ್ MD ಶಿವಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಅಭೂತಪೂರ್ವ ಕಾರ್ಯಕ್ರಮದಲ್ಲಿ ಸಚಿವರಾದ ಶಿವರಾಜ್ ತಂಗಡಗಿ, ಶಾಸಕರಾದ ರವಿ ಗಾಣಿಗ, ಅರವಿಂದ ಬೆಲ್ಲದ್ ನಟಿ ರಮ್ಯ, ನಟರಾದ ಶ್ರೀನಾಥ್,ರಕ್ಷಿತ್ ಶೆಟ್ಟಿ ಇನ್ನೂ ಹಲವು ಗಣ್ಯರು ಉಪಸ್ಥಿತರಿದ್ದರು. ನಾವಿಕದ ಶಿವಕುಮಾರ್ ಮತ್ತು ಹರ್ಷಿತ್ ಗೌಡ ಹಾಗೂ ಪದಾಧಿಕಾರಿಗಳು ಹಾಜರಿದ್ದರು.

Read More

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನಿಂದ ಜಾಮೀನು ರದ್ದು ಹಿನ್ನೆಲೆಯಲ್ಲಿ ಸದ್ಯ ನಟ ದರ್ಶನ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಅವರನ್ನು ಬಳ್ಳಾರಿಗೆ ಸ್ಥಳಾಂತರಿಸಬೇಕು ಎಂದು ಪ್ರಸಿಕ್ಯೂಶನ್ ಅರ್ಜಿ ಸಲ್ಲಿಸಿದ್ದು ಇಂದು ಬೆಂಗಳೂರಿನ ಸೇಷನ್ಸ್ ಕೋರ್ಟ್ ನಲ್ಲಿ ಈ ಕುರಿತು ವಿಚಾರಣೆ ನಡೆಯಿತು. ವಿಚಾರಣೆ ಬಳಿಕ ನ್ಯಾಯಾಧೀಶರು ಸೆಪ್ಟೆಂಬರ್ 2ಕ್ಕೆ ಅರ್ಜಿಯ ವಿಚಾರಣೆ ಮುಂದೂಡಿದರು. ಹೌದು ನಟ ದರ್ಶನ್ ಅವರನ್ನು ಬಳ್ಳಾರಿಗೆ ಸ್ಥಳಾಂತರಿಸಬೇಕು ಎಂದು ಪ್ರಾಸಿಕ್ಯೂಶನ್ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದು, ಈ ವಿಚಾರವಾಗಿ ಇಂದು ಕೋರ್ಟ್ ನಲ್ಲಿ ವಿಚಾರಣೆ ನಡೆಯಿತು. ಬಳಿಕ ಜಡ್ಜ್ ವಿಚಾರಣೆಯನ್ನು ಸೆಪ್ಟೆಂಬರ್ 2ಕ್ಕೆ ಮುಂದೂಡಿದರು. ಇದೆ ಸಂದರ್ಭದಲ್ಲಿ ನಟ ದರ್ಶನ್ ಅವರಿಗೆ ದಿಂಬು, ಬೆಡ್ ಶೀಟ್ ಸೇರಿದಂತೆ ಇತರೆ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ದರ್ಶನ್ ಪರವಾಗಿ ಅರ್ಜಿ ಸಲ್ಲಿಸಿದ್ದು ಆ ವಿಚಾರಣೆ ಕೂಡ ಮುಂದೂಡಿ ಕೋರ್ಟ್ ಆದೇಶಿಸಿದೆ.

Read More