Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್ ಗೆ ಆಗಾಗ ಅನೇಕ ಬೈಕ್ ಸವಾರರು ಸಾವನಪುತ್ತಿರುವ ಘಟನೆಗಳು ಸಂಭವಿಸುತ್ತಲೇ ಇರುತ್ತವೆ. ಇದೀಗ ಹಿಟ್ ಅಂಡ್ ರನ್ ಗೆ ವಿದ್ಯಾರ್ಥಿನಿ ಬಲಿಯಾಗಿದ್ದಾಳೆ. ದ್ವಿತೀಯ ವರ್ಷದ ಬಿಕಾಂ ಪದವಿ ಓದುತ್ತಿದ್ದ ವಿದ್ಯಾರ್ಥಿನಿ ದುರ್ಮರಣ ಹೊಂದಿದ್ದಾಳೆ. ಬೆಂಗಳೂರಿನ ಬೂದಿಗೆರೆ ಕ್ರಾಸ್ ಬಳಿ ಈ ಒಂದು ಅಪಘಾತ ಸಂಭವಿಸಿದೆ. ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ವೇಳೆ ಟಿಪ್ಪರ್ ಡಿಕ್ಕಿ ಹೊಡೆದಿದೆಯಾ? ಅಥವಾ ರಸ್ತೆಯಲ್ಲಿ ಗುಂಡಿ ಇರುವುದರಿಂದ ಅದನ್ನು ತಪ್ಪಿಸಲು ಹೋಗಿ ವಿದ್ಯಾರ್ಥಿಗೆ ಕೆಳಗೆ ಬಿದ್ದಿದ್ದಾಳೆ. ಈ ವೇಳೆ ಟಿಪ್ಪರ್ ಏನಾದರೂ ವಿದ್ಯಾರ್ಥಿನಿ ಮೇಲೆ ಹರಿದಿದೆಯಾ ಎನ್ನುವ ಅನುಮಾನ ವ್ಯಕ್ತವಾಗುತ್ತಿದೆ. ಸದ್ಯ ಘಟನಾ ಸ್ಥಳಕ್ಕೆ ಕೆಆರ್ ಪುರಂ ಸಂಚಾರಿ ಠಾಣೆ ಪೋಲಿಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲುತೂರಾಟ ನಡೆಸಿದ ಘಟನೆ ಇಡಿ ರಾಜ್ಯಾದ್ಯಂತ ಹಿಂದೂ ಕಾರ್ಯಕರ್ತರನ್ನು ಕೆರಳಿಸಿತ್ತು. ಇದೀಗ ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪೂರ್ವಯೋಜಿತ ಕೃತ್ಯವೆಂಬುದು ಪೊಲೀಸರ ತನಿಖೆಯಲ್ಲಿ ಬಟಾಬಯಲಾಗಿದೆ. ಘಟನೆಗೆ ಸಂಬಂಧಿಸಿದಂತೆ 32 ಆರೋಪಿಗಳನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಯುತ್ತಿದೆ. ಹೌದು ಪೊಲೀಸರ ತನಿಖೆಯಲ್ಲಿ ಕಲ್ಲುತೂರಾಟ ಪೂರ್ವ ನಿಯೋಜಿತ ಎನ್ನುವ ಸ್ಫೋಟಕ ಅಂಶ ಬಯಲಾಗಿದೆ ಈ ವಿಚಾರವಾಗಿ, ತನಿಖೆಯ ವೇಳೆ ಆರೋಪಿಗಳು ಬಾಯಿ ಬಿಟ್ಟಿದ್ದು, ಸ್ವಾಮಿ ಎಂಬುವವರ ನೇತೃತ್ವದಲ್ಲಿ ಕೂರಿಸಿದ್ದ ಗಣೇಶ ಮೂರ್ತಿ ಮೇಲೆ ಕಲ್ಲು ತೂರಲು ಪೂರ್ವಯೋಜನೆ ಮಾಡಲಾಗಿತ್ತು ಎಂದು ಒಪ್ಪಿಕೊಂಡಿದ್ದಾರೆ. ಆದರೆ ಟಾರ್ಗೆಟ್ ಮಾಡಿದ್ದ ಗಣೇಶ ಮೆರವಣಿಗೆಯ ಬದಲು ಬೇರೆ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆದಿರುವುದು ಪತ್ತೆಯಾಗಿದೆ. ಮದ್ದೂರಿನ ರಾಮ್ ರಹೀಮ್ ನಗರದಲ್ಲಿ ಗಣೇಶ ಮೆರವಣಿಗೆ ವೇಳೆ ಸೆಪ್ಟೆಂಬರ್ 7 ರಂದು ಸಂಜೆ ಮಸೀದಿಯಿಂದ ಕಲ್ಲು ತೂರಾಟ ಮಾಡಲಾಗಿತ್ತು. ಘಟನೆ ನಂತರ ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ…
ಬಾಗಲಕೋಟೆ : ಬಾಗಲಕೋಟೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರವಾದ ಅಪಘಾತ ಸಂಭವಿಸಿದ್ದು, ಇನೋವಾ ಕಾರು ಹಾಗೂ ಟಂಟಂ ವಾಹನ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಅನಗವಾಡಿ ಬ್ರಿಡ್ಜ್ ಬಳಿ ಒಂದು ಘಟನೆ ನಡೆದಿದೆ. ಮಹೇಶ್ ನಾಯ್ಕರ್ (27) ಹಾಗೂ ಮಹಬೂಬ್ ಶೇಖ್ (30) ಮೃತ ದುರ್ದವಿಗಳು, ಇನ್ನು ಅಪಘಾತದಲ್ಲಿ ವಿಶಾಲ ವರತಿಲ್ಲೆ, ವಿಜಯಕುಮಾರ್ ಹಾಗೂ ಗುರುಪ್ರಸಾದ್ ಎನ್ನುವವರಿಗೆ ಗಂಭೀರವಾದ ಗಾಯಗಳಾಗಿವೆ. ಮೃತರು ಮತ್ತು ಗಾಯಾಳುಗಳು ನವನಗರದ 45 ನೇ ಸೆಕ್ಟರ್ ನಿವಾಸಿಗಳೇ ಆಗಿದ್ದು, ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಘಟನೆಗೆ ಇನ್ನೋವಾ ಕಾರು ಚಾಲಕನ ಅಜಾಗರೂಕತೆ ಚಾಲನೆ ಕಾರಣ ಎಂದು ಹೇಳಲಾಗುತ್ತಿದೆ. ಮುಂದೆ ಹೋಗುತ್ತಿದ್ದ ಮಹಿಂದ್ರಾ ಪಿಕ್ ಅಪ್ ವಾಹನ್ ಡಿಕ್ಕಿ ತಪ್ಪಿಸಲು ಹೋಗಿ ಎದುರಿಗೆ ಬರುತ್ತಿದ್ದ ಟಂ ಟಂ ಗೆ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಕಲಾದಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಬಿಡಿಎ ನಿವೇಶನ ಖರೀದಿಯಲ್ಲಿ ಭಾರಿ ಗೋಲ್ಮಾಲ್ ನಡೆದಿದ್ದು, ಮೂಲ ಮಾಲೀಕನ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸಲ್ಲಿಕೆ ಮಾಡಿ ಬಿಡಿಎ ನಿವೇಶನ ನೋಂದಣಿ ಮಾಡಿಕೊಂಡಿದ್ದ ಮೂವರು ಆರೋಪಿಗಳನ್ನು ಶೇಷಾದ್ರಿಪುರಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬಿಡಿಎನ ನಿವೃತ್ತ ವಿಶೇಷ ಸಹಾಯಕ ಚಿಕ್ಕರಾಯಿ ಕೆ.ಎನ್. (62), ಮುರುಳೀಧರ್ (60) ಹಾಗೂ ಮಂಜುನಾಥ್ (48) ಎಂದು ತಿಳಿದುಬಂದಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಿಜಿಲೆನ್ಸ್ ಅಧಿಕಾರಿಗಳು ನೀಡಿದ ದೂರಿನನ್ವಯ ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಹಿನ್ನೆಲೆ? ಅರ್ಕಾವತಿ ಬಡಾವಣೆಯ 2ನೇ ಬ್ಲಾಕ್ನಲ್ಲಿರುವ 40×60ರ ನಿವೇಶನ 2006ರಲ್ಲಿ ಬೈಲಪ್ಪ ಎಂಬುವರಿಗೆ ಹಂಚಿಕೆಯಾಗಿತ್ತು. ನಂತರ ಆ ನಿವೇಶನಕ್ಕೆ ಬದಲಿಯಾಗಿ ನಾಡಪ್ರಭು ಕೆಂಪೇಗೌಡ ಬಡಾವಣೆಯ 3ನೇ ಬ್ಲಾಕ್ನಲ್ಲಿರುವ ನಿವೇಶನವನ್ನು 2018ರಲ್ಲಿ ಮಂಜೂರು ಮಾಡಲಾಗಿತ್ತು. ಈ ನಡುವೆ 2019ರಲ್ಲಿ ಬೈಲಪ್ಪ ಅವರು ಮೃತಪಟ್ಟಿದ್ದರು. ಆದ್ದರಿಂದ ನಿವೇಶನದ ಹಕ್ಕು ವರ್ಗಾವಣೆ ಕೋರಿ ಅವರ ಪತ್ನಿ ಲಕ್ಷ್ಮೀದೇವಮ್ಮ ಅವರು ಬಿಡಿಎಗೆ ಅರ್ಜಿ ಸಲ್ಲಿಸಿದ್ದರು. ಆದರೆ ಬಿಡಿಎ…
ತಮಿಳುನಾಡು : ತಮಿಳುನಾಡಿನಲ್ಲಿ ನಟ ವಿಜಯ್ ರ್ಯಾಲಿಯಲ್ಲಿ 40 ಜನರು ಸಾವನಪ್ಪಿದು 50 ಜನರ ಸತಿ ಗಂಭೀರವಾಗಿದೆ. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಕರೂರಿನಲ್ಲಿ ತಮಿಳುನಾಡು ಬಿಜೆಪಿ ನಾಯಕ ಅಣ್ಣಮಲೈ ಇದರಲ್ಲಿ ನಟ ವಿಜಯ್ ಅವರ ಯಾವುದೇ ತಪ್ಪು ಇಲ್ಲ ಈ ಒಂದು ದುರಂತಕ್ಕೆ ರಾಜ ಸರ್ಕಾರ ಹಾಗೂ ಪೊಲೀಸರ ವೈಫಲ್ಯವೇ ಕಾರಣ ಈ ಒಂದು ಪ್ರಕರಣದ ತನಿಖೆಯನ್ನು ತಕ್ಷಣ ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ. ಕರೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ದುರಂತಕ್ಕೆ ರಾಜ್ಯ ಸರ್ಕಾರ ಹಾಗೂ ಪೊಲೀಸರೇ ನೇರ ಹೊಣೆಯಾಗಿದ್ದಾರೆ. ಇದರಲ್ಲಿ ನಟ ರಾಜಕಾರಣಿ, ವಿಜಯ್ ತಪ್ಪು ಏನು ಇಲ್ಲ. ವಿಜಯ್ ರ್ಯಾಲಿಗೆ ಅನುಮತಿ ನೀಡಿದ್ದು ಸ್ಥಳೀಯ ಆಡಳಿತ 10,000 ಜನ ಸೇರುತ್ತಾರೆ ಎಂದು ಅನುಮತಿ ಕೇಳಿದ್ರು ಅಂತಾರೆ. ಹಾಗಾದರೆ ಗುಪ್ತಚರ ದಳ ಇದರಲ್ಲಿ ವಿಫಲ ಆಗಿದೆಯಾ?ಪೊಲೀಸರಿಗೆ ಗೊತ್ತಿಲ್ವಾ ವಿಜಯ್ ದೊಡ್ಡ ಸ್ಟಾರ್ ಎಂದು? ಇಲ್ಲಿನ ಡಿಸಿ ಮತ್ತು ಎಸ್ ಪಿ ಯನ್ನು ತಕ್ಷಣ ಸಸ್ಪೆಂಡ್ ಮಾಡಬೇಕು…
ತುಮಕೂರು : ತುಮಕೂರಿನ ಕೈಗಾರಿಕಾ ಪ್ರದೇಶದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ತುಮಕೂರು ನಗರದ ವಸಂತ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಈ ಒಂದು ಬೆಂಕಿ ದುರಂತ ಸಂಭವಿಸಿದೆ. ಫೋಮ್ ಮ್ಯಾನು ಫ್ಯಾಕ್ಟರಿಂಗ್ ಫ್ಯಾಕ್ಟರಿಯಲ್ಲಿ ಬೆಂಕಿ ದುರಂತ ಸಂಭವಿಸಿದೆ. ಇಂದು ಭಾನುವಾರ ಆದುದ್ದರಿಂದ ಯಾವುದೇ ಕಾರ್ಮಿಕರು ಫ್ಯಾಕ್ಟರಿಯಲ್ಲಿ ಇರಲಿಲ್ಲ. ಹಾಗಾಗಿ ಯಾವುದೇ ರೀತಿಯಾದ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.ಆದರೆ ಫ್ಯಾಕ್ಟರಿಯಲ್ಲಿ ಇದ್ದಂತಹ ವಸ್ತುಗಳು ಸಂಪೂರ್ಣವಾಗಿ ಸುಟ್ಟು ತರಕಲಾಗಿದೆ. ಘಟನೆ ಕುರಿತಂತೆ ಕೋರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಾಸನ : ಈಗ ಹಬ್ಬದ ಸೀಸನ್ ದಸರಾ, ದೀಪಾವಳಿ ಸೇರಿದಂತೆ ಸಾಲು ಸಾಲು ಹಬ್ಬಗಳು ಆರಂಭವಾಗಿದ್ದು, ಇದೇ ಸಮಯದಲ್ಲಿ ಜನರು ಬಟ್ಟೆ ಖರೀದಿಸಲು ಬಟ್ಟೆ ಅಂಗಡಿಗಳಲ್ಲಿ ಆಫರ್ ಗಳ ಮೊರೆ ಹೋಗುತ್ತಾರೆ. ಇಲ್ಲಿ ಹಾಸನದಲ್ಲಿ ಬಟ್ಟೆ ಆಫರ್ ಗೋಸ್ಕರ ಮುಗಿದ ಜನರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಹೌದು ಬಟ್ಟೆ ಆಫರ್ಗೆ ಮುಗಿಬಿದ್ದ ಜನರನ್ನು ನಿಯಂತ್ರಿಸುವ ಸಲುವಾಗಿ ಪೊಲೀಸರು ಲಾಠಿ ಪ್ರಹಾರನಡೆಸಿದ ಘಟನೆ ಹಾಸನ ನಗರದ ಉದಯಗಿರಿ ಬಡಾವಣೆಯಲ್ಲಿ ನಡೆದಿದೆ. ಲಕ್ಷಿ ಬ್ಯಾಡ್ಮಿಂಟನ್ ಅಕಾಡೆಮಿ ಕಟ್ಟಡದಲ್ಲಿ ಬಟ್ಟೆ ಖರೀದಿಗೆ ಆಫರ್ ನೀಡಲಾಗಿತ್ತು. ಅರುಣ್ ಅಡ್ಡ ಮೆನ್ಸ್ ವೇರ್ನವರು ಈ ಬಿಗ್ ಆಫರ್ ನೀಡಿದ್ದು, ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಖರೀದಿಗೆ ನೂಕುನುಗ್ಗಲು ಉಂಟಾದ ಹಿನ್ನೆಲೆ ಪೊಲೀಸರು ಖರೀದಿಗೆ ಬಂದಿದ್ದ ಯುವಕರಿಗೆ ಲಾಠಿ ರುಚಿ ತೋರಿಸಿದ್ದಾರೆ. ಬಟ್ಟೆ ಖರೀದಿಸಲು ನೂಕುನುಗ್ಗಲು ಹೆಚ್ಚಾದ ಹಿನ್ನೆಲೆ ಖರೀದಿಗೆ ಬಂದಿದ್ದವರ ಮೇಲೆ ಪೊಲೀಸರಿಂದ ಲಾಠಿ ಪ್ರಹಾರ ನಡೆಸಿದ್ದಾರೆ.
ಬೆಂಗಳೂರು : ಬೀದರ್ ನಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಭಾರೀ ಪ್ರಮಾಣದ ಬೆಳೆ, ಮನೆ ಹಾನಿಯ ಜೊತೆಗೆ ಮೂಲಸೌಕರ್ಯಕ್ಕೂ ಹಾನಿ ಆಗಿದ್ದು, ವೈಮಾನಿಕ ಸಮೀಕ್ಷೆ ನಡೆಸಿ, ವಿಶೇಷ ಪ್ಯಾಕೇಜ್ ನೀಡುವಂತೆ ಮುಖ್ಯಮಂತ್ರಿಗಳಿಗೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ ಮನವಿ ಮಾಡಿದ್ದಾರೆ. ಭಾನುವಾರ ರಾತ್ರಿ ಸಚಿವ ರಹೀಂಖಾನ್ ಜೊತೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಅರ್ಪಿಸಿದ ಬಳಿಕ ಮಾತನಾಡಿದ ಈಶ್ವರ ಖಂಡ್ರೆ, ತಮ್ಮ ಮನವಿಗೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದು 3 ದಿನಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸುವ ಭರವಸೆ ನೀಡಿದ್ದಾರೆ ಎಂದರು. ಹವಾಮಾನ ಬದಲಾವಣೆ ಮತ್ತು ಜಾಗತಿಕ ತಾಪಮಾನ ಏರಿಕೆಯ ಪರಿಣಾಮವಾಗಿ ಋತುಮಾನಗಳಲ್ಲಿ ಏರುಪೇರಾಗುತ್ತಿದ್ದು, ಇದರ ಪರಿಣಾಮ ಗಡಿ ಜಿಲ್ಲೆ ಬೀದರ್ ಮೇಲೂ ಆಗುತ್ತಿದೆ. ಹೆಚ್ಚಿನ ಕೈಗಾರಿಕೆ, ವಾಣಿಜ್ಯ ಚಟುವಟಿಕೆ ಇಲ್ಲದ ನಮ್ಮ ಜಿಲ್ಲೆಯ ಶೇ.75ರಷ್ಟು ಜನರ ಬದುಕು ಕೃಷಿಯನ್ನೇ ಅವಲಂಬಿಸಿದ್ದು, ಈ ವರ್ಷ 4.31 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ನಡೆದಿದೆ.…
ನವದೆಹಲಿ : ಆನ್ಲೈನ್ ಬೆಟ್ಟಿಂಗ್ ಪ್ಲಾಟ್ಫಾರ್ಮ್ ಪ್ರಚಾರ ಪ್ರಕರಣದಲ್ಲಿ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗರಾದ ಯುವರಾಜ್ ಸಿಂಗ್, ಶಿಖರ್ ಧವನ್ ಸೇರಿದಂತೆ ಹಲವು ಸೆಲೆಬ್ರಿಟಿಗಳ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಜಾರಿ ನಿರ್ದೇಶನಾಲಯ ಮುಂದಾಗಿದೆ. ಬೆಟ್ಟಿಂಗ್ನಿಂದ ಬಂದ ಆದಾಯವನ್ನು ಅಪರಾಧದ ಆದಾಯ ಎಂದು ಪರಿಗಣಿಸಿ ಇಡಿ ಈ ಕ್ರಮ ಕೈಗೊಂಡಿದೆ. ಹೌದು ಆನ್ಲೈನ್ ಬೆಟ್ಟಿಂಗ್ ಮತ್ತು ಗೇಮಿಂಗ್ ಪ್ಲಾಟ್ಫಾರ್ಮ್ 1xBet ಪ್ರಚಾರಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ತನಿಖೆ ಎದುರಿಸುತ್ತಿರುವ ಮಾಜಿ ಕ್ರಿಕೆಟಿಗರಾದ ಯುವರಾಜ್ ಸಿಂಗ್ ಶಿಖರ್ ಧವನ್, ಸುರೇಶ್ ರೈನಾ ಮತ್ತು ರಾಬಿನ್ ಉತ್ತಪ್ಪ ಅವರ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಇಡಿ ಮುಂದಾಗಿದೆ ಎಂದು ವರದಿಯಾಗಿದೆ. ಇಡಿ ತನಿಖೆಯ ಪ್ರಕಾರ, ಟೀಂ ಇಂಡಿಯಾದ ಕೆಲವು ಆಟಗಾರರು ಮತ್ತು ಸೆಲೆಬ್ರೆಟಿಗಳು ಈ ಅಪ್ಲಿಕೇಶನ್ ಅನ್ನು ಪ್ರಚಾರ ಮಾಡುವ ಮೂಲಕ ಕೋಟ್ಯಂತರ ರೂಪಾಯಿಗಳನ್ನು ಗಳಿಸಿದ್ದಾರೆ. ಈ ಆದಾಯದಿಂದ ಹಲವು ಆಸ್ತಿಗಳನ್ನು ಖರೀದಿಸಲಾಗಿದೆ. ಭಾರತದಲ್ಲಿ ಮಾತ್ರವಲ್ಲದೆ ವಿದೇಶಗಳಲ್ಲಿಯೂ ಆಸ್ತಿಗಳನ್ನು ಖರೀದಿಸಲಾಗಿದೆ ಎಂಬುದು ಇಡಿ…
ಚಿತ್ರದುರ್ಗ : ಭಾರತದಲ್ಲಿರುವ ಎಲ್ಲಾ ಧರ್ಮದ ಅನುಯಾಯಿಗಳು ಹಿಂದೂಗಳೇ ಎಂದು ಸಾಣೆಹಳ್ಳಿ ತರಳಬಾಳು ಮಠದ ಪಂಡಿತರಾಧ್ಯ ಸ್ವಾಮೀಜಿ ಹೇಳಿಕೆ ನೀಡಿದರು.ಚಿತ್ರದುರ್ಗದ ಮುರುಘಾ ಮಠದಲ್ಲಿ ಬಸವ ಸಂಸ್ಕೃತಿ ಅಭಿಯಾನ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಈ ಒಂದು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಖಂಡಿತ ಪ್ರಾದೇಶಿಕವಾಗಿ ಲಿಂಗಾಯತರು ಕೂಡ ಹಿಂದೂಗಳೇ, ಲಿಂಗಾಯತರು ಮಾತ್ರ ಅಲ್ಲ ಜೈನರು, ಬೌದ್ಧರು, ಕ್ರೈಸ್ತರು ಭಾರತದಲ್ಲಿರುವ ಎಲ್ಲಾ ಧರ್ಮದ ಅನುಯಾಯಿಗಳು ಹಿಂದೂಗಳು. ಬಸವಣ್ಣನವರು ದಯೆ ಮೂಲದ ಲಿಂಗಾಯತ ಧರ್ಮ ಕೊಟ್ಟಿದ್ದಾರೆ. ನಾವು ಲಿಂಗವಂತರೆಂದು ಹೆಮ್ಮೆಯಿಂದ ಹೇಳಿಕೊಳ್ಳಬೇಕು. ಹೇಳಿಕೊಳ್ಳುವುದರಲ್ಲಿ ಮುಂದೆ ಇದ್ದೇವೆ. ಆಚರಣೆಯಲ್ಲಿ ಹಿಂದಿದ್ದೇವೆ ಎಂದು ಬಸವ ಸಂಸ್ಕೃತಿ ಅಭಿಯಾನದಲ್ಲಿ ಪಂಡಿತರಾಧ್ಯ ಸ್ವಾಮೀಜಿ ಹೇಳಿಕೆ ನೀಡಿದರು.