Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಅಭಿನಯ ಸರಸ್ವತಿಯಂದೆ ಖ್ಯಾತಿ ಪಡೆದಿದ್ದ ಬಹುಭಾಷಾ ಹಿರಿಯ ನಟಿ ಬಿ.ಸರೋಜಾದೇವಿ ಅವರ ಅಂತ್ಯಕ್ರಿಯೆ ಅವರ ಹುಟ್ಟುರಾದ ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ದಶವಾರ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿತು. ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ದಶವಾರ ಗ್ರಾಮದಲ್ಲಿ ಹಿರಿಯ ನಟಿ ಬಿ ಸರೋಜಾ ದೇವಿ ಪಂಚಭೂತಗಳಲ್ಲಿ ಲೀನವಾದರು. ಸಕಲ ಸರ್ಕಾರಿ ಗೌರವದೊಂದಿಗೆ ಬಿ ಸರೋಜಾದೇವಿ ಅಂತ್ಯಕ್ರಿಯೆ ನೆರವೇರಿತು. ತಾಯಿ ರುದ್ರಮ್ಮ ಸಮಾಧಿ ಪಕ್ಕದಲ್ಲಿ ನೆರವೇರಿತು. ಈ ವೇಳೆ ಪತ್ರ ಗೌತಮ್ ಅಂತಿಮ ವಿಧಿ ವಿಧಾನ ಪೂರೈಸಿದ್ದು, ಒಕ್ಕಲಿಗ ಸಂಪ್ರದಾಯದಂತೆ ಆತ್ಯಕ್ರಿಯೆ ನೆರವೇರಿತು. ಈ ವೇಳೆ ಬೆಂಗಳೂರು ದಕ್ಷಿಣ ಜಿಲ್ಲಾಡಳಿತ ಮೂರು ಸುತ್ತು ಕುಶಾಲ ತೋಪು ಸಿಡಿಸಿ ಗೌರವ ಸಲ್ಲಿಸಿತು. ಅಂತ್ಯಕ್ರಿಯೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶಾಸಕ ಸಿಪಿ ಯೋಗೇಶ್ವರ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು.
ನವದೆಹಲಿ : ಭಾರತೀಯ ಗಗನಯಾತ್ರಿ ಮತ್ತು ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು ಸುಮಾರು ಮೂರು ವಾರಗಳ ಕಾಲ ಬಾಹ್ಯಾಕಾಶದಲ್ಲಿ ಕಳೆದ ನಂತರ ಭೂಮಿಗೆ ಮರಳಿದ್ದಾರೆ.. ಹ್ಯಾಚ್ ಮುಚ್ಚಿದೆ, ಮತ್ತು ಗಗನಯಾತ್ರಿಗಳು ಈಗ ಬಾಹ್ಯಾಕಾಶ ನಿಲ್ದಾಣದಿಂದ ಅನ್ಲಾಕ್ ಮಾಡಲು ಮತ್ತು ಮನೆಗೆ ತಮ್ಮ ಪ್ರಯಾಣವನ್ನು ಪ್ರಾರಂಭಿಸಿ, ಇದೀಗ ಭೂಮಿಗೆ ಸುರಕ್ಷಿತವಾಗಿ ಮರಳಿದ್ದಾರೆ. ತಮ್ಮ ಐತಿಹಾಸಿಕ ಬಾಹ್ಯಾಕಾಶ ಯಾತ್ರೆಯಿಂದ ಭೂಮಿಗೆ ಮರಳುತ್ತಿರುವ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರನ್ನು ಸ್ವಾಗತಿಸಲು ನಾನು ದೇಶದೊಂದಿಗೆ ಸೇರುತ್ತೇನೆ. ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ ಭಾರತದ ಮೊದಲ ಗಗನಯಾತ್ರಿಯಾಗಿ, ಅವರು ತಮ್ಮ ಸಮರ್ಪಣೆ, ಧೈರ್ಯ ಮತ್ತು ಪ್ರವರ್ತಕ ಮನೋಭಾವದ ಮೂಲಕ ಶತಕೋಟಿ ಕನಸುಗಳಿಗೆ ಸ್ಫೂರ್ತಿ ನೀಡಿದ್ದಾರೆ. ಇದು ನಮ್ಮದೇ ಆದ ಮಾನವ ಬಾಹ್ಯಾಕಾಶ ಹಾರಾಟ ಮಿಷನ್ – ಗಗನಯಾನಕ್ಕೆ ಮತ್ತೊಂದು ಮೈಲಿಗಲ್ಲನ್ನು ಸೂಚಿಸುತ್ತದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. https://twitter.com/narendramodi/status/1945057763899605164?t=I8b0FFZyhV3BsGbvmsy-VA&s=19 ಶುಕ್ಲಾ ಮತ್ತು ಆಕ್ಸಿಯಮ್ -4 ಕಾರ್ಯಾಚರಣೆಯ ಇತರ ಮೂವರು ಗಗನಯಾತ್ರಿಗಳು ಸೋಮವಾರ ಡ್ರ್ಯಾಗನ್ ಗ್ರೇಸ್ ಬಾಹ್ಯಾಕಾಶ…
ಬೆಂಗಳೂರು : 3 ವರ್ಷಗಳಿಂದ ನಡೆಯುತ್ತಿದ್ದ ದೇವನಹಳ್ಳಿಯ ಚನ್ನರಾಯಪಟ್ಟಣ ಜಮೀನು ಭೂಸ್ವಾಧೀನ ವಿವಾದ ಕೊನೆಗೂ ಅಂತ್ಯವಾಗಿದೆ. 1,777 ಎಕರೆ ಭೂಸ್ವಾಧೀನಕ್ಕೆ ಸರ್ಕಾರ ಹೊರಡಿಸಿದ್ದ ಫೈನಲ್ ನೋಟಿಫಿಕೇಶನ್ಅನ್ನು ರಾಜ್ಯ ಸರ್ಕಾರ ರದ್ದು ಮಾಡೋದಾಗಿ ಘೋಷಣೆ ಮಾಡಿದೆ. ಹೌದು, ರಾಜ್ಯ ಸರ್ಕಾರದ ದೇವನಹಳ್ಳಿ ಭೂಸ್ವಾಧೀನ ಪ್ರಕ್ರಿಯೆ ಸಂಬಂಧ ವಿಧಾನಸೌಧದಲ್ಲಿ ರೈತರ ಜೊತೆಗಿನ ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಈ ನಿರ್ಧಾರ ಪ್ರಕಟಿಸಿದ್ದಾರೆ. ದೇವನಹಳ್ಳಿ ರೈತರ ಹೋರಾಟಕ್ಕೆ ಅತಿದೊಡ್ಡ ಜಯ ಸಿಕ್ಕಿದ್ದು, ಭೂಸ್ವಾಧೀನ ಪ್ರಕ್ರಿಯೆ ಕೈಬಿಡಲು ರೈತರ ಜೊತೆಗಿನ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ನಿರ್ಧಾರ ಪ್ರಕಟಿಸಿದ್ದಾರೆ. ದೇವನಹಳ್ಳಿಯಲ್ಲಿ ರೈತರ ಭೂಮಿ ಸ್ವಾಧೀನ ವಿರೋಧಿಸಿ ರೈತರು ಇತ್ತೀಚೆಗೆ ತಾವು ಬೆಳೆದ ಬೆಳೆ, ತರಕಾರಿ, ಹೂವು, ಹಣ್ಣುಗಳ ಬುಟ್ಟಿ ಸಮೇತ ವಿಧಾನಸೌಧಕ್ಕೆ ಆಗಮಿಸಿದ ರೈತರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರೈತರ ಜಮೀನು ಸಾಧೀನ ಪಡಿಸಿಕೊಳ್ಳದಂತೆ ಮನವಿ ಮಾಡಿದ್ದರು. ದೇವನಹಳ್ಳಿ ಭಾಗದ 13 ಹಳ್ಳಿಗಳ ಸುತ್ತ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದೆ. ಇದರ ವಿರುದ್ಧ ರೈತರು ಸಿಡಿದೆದ್ದಿದ್ದು, ತಮ್ಮ ಜಮೀನು…
ಬೆಂಗಳೂರು : ಒಬ್ಬರಿಗೆ ಹಲವು ಹುದ್ದೆ ಪಡೆದಿರುವುದರಿಂದ ಸಮಸ್ಯೆ ಆಗುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರ ಬಳಿ ಪಿಡಬ್ಲ್ಯೂಡಿ ಸಚಿವ ಸತೀಶ್ ಜಾರಕಿಹೊಳಿ ಈ ಕುರಿತು ಪ್ರಸ್ತಾಪಿಸಿದ್ದಾರೆ ಎಂದು ತಿಳಿದುಬಂದಿದೆ. ಈ ಮೂಲಕ ಕೆಪಿಸಿಸಿ ಅಧ್ಯಕ್ಷ ಸ್ಥಾನ ಹಾಗೂ ಸಚಿವ ಸ್ಥಾನ ಎರಡನ್ನೂ ನನಗೆ ಕೊಟ್ಟರು ನಿಭಾಯಿಸುತ್ತೇನೆ ಎಂದು ಹೊಸ ದಾಳ ಉರುಳಿಸಿದ್ದಾರೆ. ಹೌದು ರಾಜ್ಯಕ್ಕೆ ಆಗಮಿಸಿದ ಸುರ್ಜೆವಾಲಾ ಇಂದು ಬೆಂಗಳೂರಲ್ಲಿ ಒನ್ ಟು ಒನ್ ಸಭೆ ನಡೆಸಿದ್ದು, ಸುರ್ಜೆವಾಲಾ ಜೊತೆ ಚರ್ಚೆಯ ವೇಳೆ ಸತೀಶ್ ಜಾರಕಿಹೊಳಿ ಒಬ್ಬರಿಗೆ ಹಲವು ಹುದ್ದೆ ಪಡೆದಿರುವುದರಿಂದ ಸಮಸ್ಯೆ ಆಗುತ್ತಿದೆ. ಮುಂದೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಬರುತ್ತಿದೆ. ಈಗಿನಿಂದಲೇ ಪಕ್ಷ ಸಂಘಟನೆ ಆಗಬೇಕು. ತಳಮಟ್ಟದಲ್ಲಿ ಸಂಘಟನೆ ಆದರೆ ಸೀಟು ಗೆಲ್ಲಲು ಸಾಧ್ಯವಾಗುತ್ತದೆ ಒಬ್ಬರೇ ಹಲವುದೇ ಇರುವುದರಿಂದ ಕಷ್ಟ ಆಗಲಿದೆ. ಹಿತ ಪಕ್ಷ ಸಂಘಟನೆ ಕಡೆಗೂ ನೋಡೋದಕ್ಕೆ ಆಗಲ್ಲ ಹಾಗಾಗಿ ನಮ್ಮ ಅಭಿಪ್ರಾಯ ಬದಲಾವಣೆ ಒಳ್ಳೆಯದು ಎಂದು ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.…
ಬೆಂಗಳೂರು : ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ನೋಯಿ ಹೆಸರಿನಲ್ಲಿ ಉದ್ಯಮಿಗೆ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸರು ನಾಲ್ವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಆರೋಪಿಗಳಾದ ಮೊಹಮ್ಮದ್ ರಫೀಕ್, ಶಿಶುಪಾಲ್ ಸಿಂಗ್ ವನ್ಶ್ ದೇವ್ ಹಾಗೂ ಅಮಿತ್ ಚೌದರಿ ಬಂಧಿತ ಆರೋಪಿಗಳು ಎನ್ನಲಾಗಿದೆ. ಬಂಧಿತ ಮೊಹಮ್ಮದ್ ರಫೀಕ್ ಬೆಂಗಳೂರಿನ ಮಾವಳ್ಳಿ ನಿವಾಸಿಯಾಗಿದ್ದು, ದೆಹಲಿಯಲ್ಲಿ ಮಹಮ್ಮದ್ ವಿರುದ್ಧ ಕೇಸ್ ದಾಖಲಾಗಿತ್ತು. ತಿಹಾರ್ ಜೈಲಿನಲ್ಲಿದ್ದಾಗ ಆರೋಪಿಗಳು ನಡುವೆ ಪರಿಚಯವಿತ್ತು. ಜೈಲಿನಿಂದ ಹೊರಬಂದ ಬಳಿಕ ಸುಲಿಗೆ ಮಾಡಲು ಸಂಚು ರೂಪಿಸಿದ್ದು ಲಾರೆನ್ಸ್ ವಿಷ್ಣು ಹೆಸರಿನಲ್ಲಿ ಸುಲಿಗೆ ಮಾಡಲು ಯತ್ನಿಸಿದ್ದಾರೆ. ಲಾರೆನ್ಸ್ ಬಿಷ್ನೋಯಿ ಗ್ಯಾಂಗ್ ಗು ಬಂಧಿತರಿಗೂ ಯಾವುದೇ ರೀತಿಯ ಸಂಬಂಧವಿಲ್ಲ. ಸದ್ಯ ಆರೋಪಿಗಳನ್ನು ಪೊಲೀಸರು ಕೋರ್ಟಿಗೆ ಹಾಜರುಪಡಿಸಿ ವಶಕ್ಕೆ ಪಡೆದಿದ್ದಾರೆ.
ಬೆಂಗಳೂರು : ರೈತರ ಹೋರಾಟಕ್ಕೆ ಕೊನೆಗೂ ಮಣಿದಿರುವ ರಾಜ್ಯ ಸರ್ಕಾರವು ಭೂಸ್ವಾಧೀನ ಪ್ರಕ್ರಿಯೆನ್ನು ಕೈಬಿಡಲು ಮುಂದಾಗಿದೆ.ಹೌದು, ರಾಜ್ಯ ಸರ್ಕಾರದ ದೇವನಹಳ್ಳಿ ಭೂಸ್ವಾಧೀನ ಪ್ರಕ್ರಿಯೆ ಸಂಬಂಧ ವಿಧಾನಸೌಧದಲ್ಲಿ ರೈತರ ಜೊತೆಗಿನ ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಈ ನಿರ್ಧಾರ ಪ್ರಕಟಿಸಿದ್ದಾರೆ. ಈ ವಿಚಾರವಾಗಿ ಬಹುಭಾಷಾ ನಟ ಪ್ರಕಾಶ್ ರೈ ಪ್ರತಿಕ್ರಿಯೆ ನೀಡಿದ್ದು, 3 ವರ್ಷಗಳ ಕಾಲ ನಿರಂತರವಾಗಿ ನಡೆದ ಹೋರಾಟಕ್ಕೆ ಜಯ ಸಿಕ್ಕಿದೆ.ರೈತರ ಹೋರಾಟಕ್ಕೆ ಕೊನೆಗೂ ಜಯ ದೊರಕಿದೆ ರೈತರು ಮತ್ತು ರೈತ ಸಂಘಟನೆಗಳ ಜೊತೆಗೆ ಸಿಎಂ ಸಿದ್ದರಾಮಯ್ಯ ಚರ್ಚಿಸಿ ಈ ಒಂದು ನಿರ್ಧಾರ ತೆಗೆದುಕೊಂಡಿದ್ದಾರೆ. ಹಾಗಾಗಿ ರಾಜ್ಯ ಸರ್ಕಾರ ಒಳ್ಳೆಯ ನಿರ್ಧಾರ ಪ್ರಕಟಿಸಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಮತ್ತು ರಾಜ್ಯ ಸರ್ಕಾರಕ್ಕೆ ಧನ್ಯವಾದಗಳು ಎಂದು ವಿಧಾನಸೌಧದಲ್ಲಿ ಬಹುಭಾಷಾ ನಟ ಪ್ರಕಾಶ್ ರೈ ಹೇಳಿಕೆ ನೀಡಿದರು. ದೇವನಹಳ್ಳಿ ರೈತರ ಹೋರಾಟಕ್ಕೆ ಅತಿದೊಡ್ಡ ಜಯ ಸಿಕ್ಕಿದ್ದು, ಭೂಸ್ವಾಧೀನ ಪ್ರಕ್ರಿಯೆ ಕೈಬಿಡಲು ರೈತರ ಜೊತೆಗಿನ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ನಿರ್ಧಾರ ಪ್ರಕಟಿಸಿದ್ದಾರೆ. ದೇವನಹಳ್ಳಿಯಲ್ಲಿ ರೈತರ ಭೂಮಿ ಸ್ವಾಧೀನ…
ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಕಾಲೇಜು ವಿದ್ಯಾರ್ಥಿನಿಯ ಮೇಲೆ ಉಪನ್ಯಾಸಕರಿಂದಲೇ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬೆಂಗಳೂರಿನ ಮಾರತಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಒಂದು ಘಟನೆ ನಡೆದಿದೆ. ಹೌದು ಮೂಡುಬಿದಿರೆ ಖಾಸಗಿ ಕಾಲೇಜಿನ ಫಿಸಿಕ್ಸ್ ಉಪನ್ಯಾಸಕ ನರೇಂದ್ರ, ಬಯೋಲಜಿ ಉಪನ್ಯಾಸಕ ಸಂದೀಪ್ ಎನ್ನುವ ಉಪನ್ಯಾಸಕರು ಮತ್ತು ವಿದ್ಯಾರ್ಥಿನಿ ಗೆಳೆಯ ಅನೂಪ್ ಎನ್ನುವ ಮೂವರಿಂದ ಅತ್ಯಾಚಾರ ಎಸಗಲಾಗಿದೆ. ಈ ಕುರಿತು ಮಹಿಳಾ ಆಯೋಗಕ್ಕೆ ದೂರು ನೀಡಲಾಗಿತ್ತು. ಮಹಿಳಾ ಆಯೋಗದ ಸೂಚನೆಯ ಮೇರೆಗೆ ಠಾಣೆಗೆ ದೂರು ನೀಡಲಾಗಿದೆ. ಈ ಸಂಬಂಧ ಈಗಾಗಲೇ ಪೊಲೀಸರು ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ಸಂತ್ರಸ್ತ ವಿದ್ಯಾರ್ಥಿನಿ ಪಿಯುಸಿ ವ್ಯಾಸಂಗ ಮಾಡುತಿದ್ದ ಸಂದರ್ಭದಲ್ಲಿ ನರೇಂದ್ರ ಮತ್ತು ಸಂದೀಪ್ ಉಪನ್ಯಾಸಕರು ಆಕೆಯ ಸಂಪರ್ಕದಲ್ಲಿ ಇದ್ದಾರೆ. ಅದಾದ ಮೇಲೆ ಸಂಪರ್ಕ ಮುಂದುವರೆದಿದ್ದು, ನೋಟ್ಸ್ ಕೊಡುವ ಮೂಲಕ ಹಾಗೂ ಸಹಾಯ ಮಾಡುವ ಮೂಲಕ ಉಪನ್ಯಾಸಕ ನರೇಂದ್ರ ಆಕೆಯನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಾನೆ. ನಿರಂತರವಾಗಿ ನರೇಂದ್ರ ಅತ್ಯಾಚಾರ ಎಸಗುತ್ತಾನೆ. ಮತ್ತು ಯುವತಿಯನ್ನು ಬಳಸಿಕೊಂಡ ವಿಚಾರ…
ಬೆಂಗಳೂರು : ರಾಜ್ಯದಲ್ಲಿ ಎಸ್ಸಿ ಎಸ್ಟಿ ಮತ್ತು ಹಿಂದುಳಿದ ವರ್ಗಗಳ ಸರ್ಕಾರಿ ನೌಕರರಿಗೆ ಮುಂಬಡ್ತಿಯಲ್ಲಿ ನಿಯಮ ಪಾಲನೆ ಆಗುತ್ತಿಲ್ಲ ಎಂದು AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಈ ಕುರಿತು ತಕ್ಷಣ ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಹೌದು ಎಸ್ಸಿ ಎಸ್ಟಿ ನೌಕರರ ಮುಂಬಡ್ತಿಯಲ್ಲಿ ರೋಸ್ಟರ್ ನಿಯಮ ಉಲ್ಲಂಘನೆಯಾಗುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಕೆಲವು ಇಲಾಖೆಗಳು ಸರ್ಕಾರದ ಆದೇಶವನ್ನು ಪಾಲಿಸುತ್ತಿಲ್ಲ ಎಂದು ಆರೋಪಿಸಲಾಗಿದೆ. ಖರ್ಗೆ ಅವರು ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ ಎಂದು ತಿಳಿದುಬಂದಿದೆ. ರಾಜ್ಯ ಸರ್ಕಾರಿ ಎಸ್.ಸಿ. ಎಸ್.ಟಿ. ನೌಕರರ ಸಂಘದವರು ಎಸ್.ಸಿ.ಎಸ್.ಟಿ ನೌಕರರಿಗೆ ಮುಂಬಡ್ತಿಯನ್ನು ನೀಡುವಲ್ಲಿ ರೋಸ್ಟರ್ ಬಿಂದುವನ್ನು ಸರ್ಕಾರದ ಆದೇಶದ ಪ್ರಕಾರ ನಗದಿಪಡಿಸಿದ್ದರೂ, ಅದನ್ನು ಕಟುನಿಟ್ಟಾಗಿ ಪಾಲನೆ ಮಾಡಬೇಕೆಂಬ ನಿರ್ದೇಶನವಿದ್ದರೂ ಕೆಲವು ಇಲಾಖೆಗಳ ಅಧಿಕಾರಿಗಳು ಪಾಲನೆ ಮಾಡದಿರುವ ಬಗ್ಗೆ ಪತ್ರಿಕೆಯಲ್ಲಿ ಬಂದಿರುವ ಕೆಲವು ಪ್ರಮುಖ ಅಂಶಗಳ ಜೊತೆಗೆ…
ಬೆಂಗಳೂರು : ಅಭಿನಯ ಸರಸ್ವತಿ ಎಂದೇ ಖ್ಯಾತಿ ಪಡೆದಿದ್ದ ಬಹುಭಾಷಾ ಹಿರಿಯ ನಟಿ ಬಿ ಸರೋಜಾ ದೇವಿ ಅವರು ನಿನ್ನೆ ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಡೀ ಕನ್ನಡ ಚಿತ್ರರಂಗದ ಎಲ್ಲಾ ಕಲಾವಿದರು ಸರೋಜಾ ದೇವಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದು, ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ಗಣ್ಯಾತಿ ಗಣ್ಯರು ಇದೀಗ ಬಿ.ಸರೋಜಾದೇವಿಯವರ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಸರೋಜಾ ದೇವಿಯವರ ಅಂತಿಮ ದರ್ಶನ ಪಡೆಯದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮಗಳೊಂದಿಗೆ ಮಾತನಾಡಿ, ಬಹಳ ಚಿಕ್ಕ ವಯಸ್ಸಿನಲ್ಲಿ ಸರೋಜಾ ದೇವಿಯವರು ಸಿನಿಮಾರಂಗ ಪ್ರವೇಶಿಸಿದ್ದರು. ಕನ್ನಡ ಚಲನಚಿತ್ರರಂಗ ಬೆಳೆಯಲು ಸರೋಜಾ ದೇವಿ ಅವರ ಕೊಡುಗೆ ಅಪಾರ. ಹಿರಿಯ ನಟಿ ಬಿ ಸರೋಜಾ ದೇವಿ ನಿಧನದಿಂದ ಅಪಾರ ನಷ್ಟವಾಗಿದೆ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ ನಟಿ ಸರೋಜಾದೇವಿ ಅವರಿಗೆ ಚಿರಶಾಂತಿ ಸಿಗಲಿ ನಾನು ಈ ಹಿಂದೆ ಹಲವು…
ಉಡುಪಿ : ಉಡುಪಿಯಲ್ಲಿ ಇಂದು ಘೋರವಾದ ದುರಂತ ಒಂದು ಸಂಭವಿಸಿದ್ದು, ನಾಡ ದೋಣಿ ಮಗುಚಿ ಮೂವರುಮರುಕಾರರು. ಮೀನುಗಾರರು ನೀರು ಪಾಲಾಗಿರುವ ಘಟನೆ ನಡೆದಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗಂಗೊಳ್ಳಿಯಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ರಾಜ್ಯದಲ್ಲಿ ಅಪಾರ ಪ್ರಮಾಣದ ಮಳೆಯಾಗುತ್ತಿರುವುದರಿಂದ ಭಾರಿ ಪ್ರಮಾಣದಲ್ಲಿ ಹಳ್ಳಕೊಳ್ಳ ಮತ್ತು ನದಿಗಳು ತುಂಬಿ ಹರಿಯುತ್ತಿದ್ದು, ಆದರೂ ನಿರ್ಲಕ್ಷ ವಹಿಸಿ ಮೀನುಗರಾರು ಮೀನು ಹಿಡಿಯೋದಕ್ಕೆ ತೆರಳಿದ್ದಾರೆ.ನೀರು ಪಾಲಾದ ಮೂವರು ಮೀನುಗಾರರನ್ನು ಸುರೇಶ್ ಖಾರ್ವಿ (45) ರೋಹಿತ್ ಖಾರ್ವಿ (38) ಹಾಗೂ ಜಗ್ಗು ಅಲಿಯಾಸ್ ಜಗದೀಶ್ ಖಾರ್ವಿ (36) ಎಂದು ತಿಳಿದುಬಂದಿದೆ. ಮೀನುಗಾರಿಕೆಗೆ ಮೂವರು ಮೀನುಗಾರರು ಸಮುದ್ರಕ್ಕೆ ಇಳಿದಿದ್ದರು. ಕಡಲಬ್ಬರ ಕಂಡು ಮೀನುಗಾರರು ವಾಪಸ್ ಆಗುತ್ತಿದ್ದರು. ಈ ವೇಳೆ ಓರ್ವ ಮೀನುಗಾರ ಅಲೆಗಳ ಅಬ್ಬರಕ್ಕೆ ಸಮುದ್ರಕ್ಕೆ ಬಿದ್ದಿದ್ದಾನೆ. ನೀರಿಗೆ ಬಿದ್ದ ಒಬ್ಬನನ್ನು ರಕ್ಷಿಸಲು ಇನ್ನಿಬ್ಬರು ಮುಂದಾಗಿದ್ದಾರೆ. ಈ ವೇಳೆ ಮೂವರು ಸಮುದ್ರ ಪಾಲಾಗಿದ್ದಾರೆ. ನಾ ಪತ್ತೆಯಾದ ಮೂರಿಗಾಗಿ ಸಮುದ್ರದಲ್ಲಿ ಹುಡುಕಾಟ ನಡೆಸಲಾಗುತ್ತಿದೆ. ಈ ಕುರಿತು ಗಂಗೊಳ್ಳಿ ಪೊಲೀಸ್…













