Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೆಂಗಳೂರಿನಲ್ಲಿ ಮೊಮೋಸ್ ಶಾಪ್ ಹುಡುಗನ ಮೇಲೆ ಪುಂಡರು ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಬೈಕ್ ನಲ್ಲಿ ಬಂದಿದ್ದ ಮೂವರ ಪೈಕಿ ಓರ್ವ ಈ ಕೃತ್ಯ ಎಸಗಿದ್ದಾನೆ. ಮೊಮೋಸ್ ಶಾಪ್ ಹುಡುಗನ ಮೇಲೆ ಹಲ್ಲೆ ಮಾಡಿ ಅಂಗಡಿ ಧ್ವಂಸಗೊಳಿಸಿದ್ದಾನೆ. ಬೆಳ್ಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದ್ದು ಯಾವ ಕಾರಣಕ್ಕಾಗಿ ಗಲಾಟೆ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದ್ದು, ಯುವತಿಗೆ ಮದುವೆಯಾಗೋದಾಗಿ ನಂಬಿಸಿ ಲವ್ ಸೆಕ್ಸ್ ದೋಖಾ ಮಾಡಿರುವ ಪ್ರಕರಣ ಇದೀಗ ತದವಾಗಿ ಬೆಳಕಿಗೆ ಬಂದಿದೆ. ಪ್ರಕರಣ ದಾಖಲಾಗಿ 9 ತಿಂಗಳಾದ್ರು ಕ್ರಮ ಕೈಗೊಳ್ಳದ ಪೋಲೀಸರ ವಿರುದ್ಧ ಆರೋಪ ಕೇಳಿಬಂದಿದೆ. ಬೆಂಗಳೂರಿನ ಸುದ್ದಗುಂಟೆಪಾಳ್ಯ ಠಾಣೆ ವಿರುದ್ಧಆರೋಪ ಕೇಳಿಬಂದಿದೆ. ಯುವತಿಗೆ ಸ್ನೇಹಿತರ ಮೂಲಕ ಪರಿಚಯವಾಗಿದ್ದ ಆರೋಪಿ ಉಮ್ಮಾನ್. ಬಳಿಕ ಪ್ರೀತಿ ಮಾಡುವಂತೆ ಯುವತಿಯ ಹಿಂದೆ ಉಮ್ಮಾನ್ ಬಿದ್ದಿದ್ದಾನೆ. ಪ್ರೀತಿ ಮಾಡುವುದಾಗಿ ನಂಬಿಸಿ ಲಕ್ಷಾಂತರ ಹಣ, ಚಿನ್ನಾಭರಣ ಪಡೆದಿದ್ದ. ಅಲ್ಲದೇ ಯುವತಿಯ ಜೊತೆಗೆ ಬಲವಂತವಾಗಿ ಲೈಂಗಿಕ ಸಂಪರ್ಕ ಮಾಡಿರೋ ಆರೋಪ ಕೇಳಿಬಂದಿದೆ. 13 ಲಕ್ಷ ಹಣ ಮತ್ತು ಚಿನ್ನ ಪಡೆದು ವಂಚನೆ ಮಾಡಿರೋ ಆರೋಪ ಕೇಳಿಬಂದಿದೆ. ಇಸ್ಲಾಂ ಧರ್ಮಕ್ಕೆ ಮತಾಂತಗೊಳ್ಳುವಂತೆ ಯುವತಿಗೆ ಬೆದರಿಕೆ ಹಾಕಿದ್ದಾನೆ. ಬಲವಂತವಾಗಿ ಕೊಲೆ ಮಾಡೋದಾಗಿ ಬೆದರಿಕೆ ಹಾಕಿದ್ದಾನೆ. ದೆಹಲಿ ಕೇಸ್ ನಂತೆ ನಿನ್ನನ್ನು ಪೀಸ್ ಪೀಸ್ ಮಾಡ್ತೀನಿ ಎಂದು ಬೆದರಿಕೆ ಹಾಕಿದ್ದಾನೆ.ಇದರಿಂದ ನೊಂದು ಮಾರ್ಚ್ ತಿಂಗಳಲ್ಲಿ ಎಸ್.ಜಿ…
ಬೆಂಗಳೂರು : ನಟ ದರ್ಶನ್ ಆರೋಪಿಯಾಗಿರುವ ಕೊಲೆ ಪ್ರಕರಣದಲ್ಲಿ ಸಾಕ್ಷ್ಯ ನುಡಿಯಲು ಕೊಲೆಯಾದ ರೇಣುಕಾಸ್ವಾಮಿಯ ಪಾಲಕರಿಗೆ ಸಮನ್ಸ್ ಜಾರಿಗೊಳಿಸಿರುವ ನಗರದ 57ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ, ಡಿಸೆಂಬರ್ 17ರಂದು ವಿಚಾರಣೆಗೆ ಹಾಜರಾಗುವಂತೆ ನಿರ್ದೇಶಿಸಿದೆ. ಪ್ರಕರಣ ಸಂಬಂಧ ಸಾಕ್ಷ್ಯ ನುಡಿಯಲು ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಮತ್ತು ತಾಯಿ ರತ್ನಮ್ಮಗೆ (ಸಾಕ್ಷಿ ಸಂಖ್ಯೆ 7 ಹಾಗೂ 8) ಸಮನ್ಸ್ ಜಾರಿಗೊಳಿಸಬೇಕು ಎಂದು ಕೋರಿ ತನಿಖಾಧಿಕಾರಿಗಳು (ಪ್ರಾಸಿಕ್ಯೂಷನ್) ಸಲ್ಲಿಸಿದ್ದ ಅರ್ಜಿಯನ್ನು ಗುರುವಾರ ಪುರಸ್ಕರಿಸಿರುವ ನ್ಯಾಯಾಧೀಶ ಐ.ಪಿ.ನಾಯಕ್ ಅವರು ಈ ಆದೇಶ ಮಾಡಿದ್ದಾರೆ. ದರ್ಶನ್ ಸೇರಿ ಪ್ರಕರಣದ 17 ಆರೋಪಿಗಳ ವಿರುದ್ಧ ಕೊಲೆ, ಅಪಹರಣ, ಹಲ್ಲೆ, ಅಪರಾಧಿಕ ಒಳಸಂಚು, ಅಕ್ರಮ ಕೂಟ ರಚನೆ, ಹಣ ವಸೂಲಿ, ಅಕ್ರಮ ಬಂಧನ ಇನ್ನಿತರ ಆರೋಪಗಳನ್ನು ನಿಗದಿಪಡಿಸಿ ನವೆಂಬರ್ 3ರಂದು ನ್ಯಾಯಾಲಯ ಆದೇಶಿಸಿತ್ತು. ಜತೆಗೆ ನವೆಂಬರ್ 10ರಿಂದ ಪ್ರಕರಣದ ಮುಖ್ಯ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಿತ್ತು. ಅದಾದ ಬಳಿಕ ಪ್ರಕರಣ ಕುರಿತು ನ್ಯಾಯಾಲಯ ನಡೆಸುತ್ತಿರುವ ಮೊದಲ ಸಾಕ್ಷಿ ವಿಚಾರಣೆ…
ಬೆಂಗಳೂರು : ಬೆಂಗಳೂರಿನಲ್ಲಿ ಕತ್ತು ಕೊಯ್ದ ರೀತಿಯಲ್ಲಿ ವ್ಯಕ್ತಿಯ ಶವ ಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರ ತನಿಖೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಹಿಮಾಚಲ ಪ್ರದೇಶ ಮೂಲದ ತಿಲಕ ಕುಮಾರ್ (32) ಆತ್ಮಹತ್ಯೆಗೆ ಶರಣಾಗಿದ್ದಾನೆ. ಗಂಟಲು ನೋವಿನಿಂದ ಬಳಲುತ್ತಿದ್ದರಿಂದ ತಿಲಕ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ತಿಲಕ್ 5000 ಕೊಡು ವಾಪಸ್ ಕೊಡುತ್ತೇನೆ ಎಂತ ತನ್ನ ಅಣ್ಣನ ಬಳಿ ಕೇಳಿದ್ದ. ಈಗ ಹಣ ಎಲ್ಲ ಒಂದು ವಾರ ಬಿಟ್ಟಕೊಡುವುದಾಗಿ ಅಣ್ಣ ಹೇಳಿದ್ದ. ಬಳಿಕ ಚಾಕುನಿಂದ ಕತ್ತು ಕೊಯ್ದ ರೀತಿಯಲ್ಲಿ ತಿಲಕ್ ಶವ ಪತ್ತೆಯಾಗಿದೆ. ನವೆಂಬರ್ 29ರಂದು ಜೆಪಿ ನಗರದ ಮೊದಲನೇ ಹಂತದಲ್ಲಿ ಈ ಒಂದು ಘಟನೆ ನಡೆದಿದೆ. ಫುಟ್ಪಾತ್ ಬಳಿಯ ಮರದ ಕೆಳಗೆ ಕುಳಿತಿದ್ದ ರೀತಿ ಶವ ಪತ್ತೆಯಾಗಿತ್ತು ರಕ್ತದ ಕಲೆ ನೋಡಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಜೆಪಿ ನಗರ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿದ್ದಾರೆ. ಕೊಲೆ ಶಂಕೆ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.…
ಬೆಂಗಳೂರು : ಕಳೆದ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಸುಳ್ಳು ಹೇಳಿಕೆ ನೀಡಿ ಚುನಾವಣಾ ನೀತಿ ಸಂಹಿತೆ ಉಲ್ಲಘನೆ ಮಾಡಿದ ಆರೋಪ ಪ್ರಕರಣದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮನ್ಸ್ ನೀಡಿದ್ದ ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ನಿನ್ನೆ ವಿಚಾರಣಾ ನ್ಯಾಯಾಲಯದ ಸಮನ್ಸ್ ಪ್ರಶ್ನಿಸಿ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಏಕ ಸದಸ್ಯಪೀಠ ಈ ಮಧ್ಯಂತರ ಆದೇಶ ನೀಡಿದೆ. ವಿಚಾರಣೆ ವೇಳೆ ಕುಮಾರಸ್ವಾಮಿ ಪರ ವಕೀಲರು, ಚುನಾವಣೆಯಲ್ಲಿ ಪ್ರತಿಸ್ಪರ್ಧಿಯ ಹೆಸರನ್ನು ಅರ್ಜಿದಾರರು ತಮ್ಮ ಹೇಳಿಕೆಯಲ್ಲಿ ಎಲ್ಲೂ ಉಲ್ಲೇಖಿಸಿಲ್ಲ. ಆದರೂ ಕೋರ್ಟ್ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ತಿರಸ್ಕರಿಸಿ ಸಮನ್ಸ್ ಜಾರಿಗೊಳಿಸಿದೆ. ಹಾಗಾಗಿ ಸಮನ್ಸ್ಗೆ ತಡೆ ನೀಡಬೇಕು ಎಂದು ಕೋರಿದರು. ವಾದ ಆಲಿಸಿದ ಪೀಠ ಈ ಆದೇಶ ನೀಡಿದೆ. ಅಲ್ಲದೇ, ನಗರದ 42 ನೇ ಎಸಿಜೆಎಂ ಕೋರ್ಟ್ನಲ್ಲಿ ನಡೆಯುತ್ತಿರುವ ವಿಚಾರಣೆ ಮತ್ತು ಆ ಸಂಬಂಧದ ಎಲ್ಲಾ ಪ್ರಕ್ರಿಯೆಗಳಿಗೆ ಮಧ್ಯಂತರ…
ಚಾಮರಾಜನಗರ : ಚಾಮರಾಜನಗರದಲ್ಲಿ ಚಿರತೆ ದಾಳಿ ಮುಂದುವರೆದಿದ್ದು, ಜಮೀನಿನಲ್ಲಿ ಕೆಲಸ ಮಾಡುತ್ತಿದ್ದವರ ಮೇಲೆ ಏಕಾಏಕಿ ಚಿರತೆ ದಾಳಿ ನಡೆಸಿದೆ. ಚಾಮರಾಜನಗರ ತಾಲೂಕಿನ ವಿ.ಸಿ ಹೊಸೂರು ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದ್ದು, ಜಮೀನಿನಲ್ಲಿ ಜಡೆಸ್ವಾಮಿ ಮತ್ತು ಅರ್ಚಕ ಶಿವಮಲ್ಲಪ್ಪನ ಮೇಲೆ ಏಕಾಏಕಿ ದಾಳಿ ನಡೆಸಿದೆ. ಚಾಮರಾಜನಗರದ ಸಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಿರತೆ ದಾಳಿ ಹಿನ್ನೆಲೆ ಜಮೀನಿಗೆ ತೆರಳಲು ಗ್ರಾಮಸ್ಥರಲ್ಲಿ ಭಯ ಮನೆ ಮಾಡಿದ್ದು ಘಟನಾ ಸ್ಥಳಕ್ಕೆ ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್ ಅಧಿಕಾರಿಗಳು ಆಗಮಿಸಿದ್ದಾರೆ. ಸದ್ಯ ಬೊನ್ ಇಟ್ಟು ಚಿರತೆ ಸೆರೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ಮುಂದಾಗಿದ್ದಾರೆ.
ಕಲಬುರಗಿ : ಬೈಕ್ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಯುವತಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಯಡ್ರಾಮಿಯ ರಾಸಣಗಿ ಕ್ರಾಸ್ ಬಳಿ ನಡೆದಿದೆ. ಭೂಮಿಕಾ ಹಂಗರಗಾ (20) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಬೈಕ್ ಸವಾರ ಅಮೋಘಸಿದ್ದ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಯುವಕ ಮತ್ತು ಯುವತಿ ಜೇವರ್ಗಿ ಪಟ್ಟಣದಿಂದ ತಮ್ಮ ಸ್ವಗ್ರಾಮಕ್ಕೆ ಹೋಗುತ್ತಿದ್ದಾಗ, ಹಿಂಬದಿಯಿಂದ ವೇಗವಾಗಿ ಬಂದ ಎನ್ಇಕೆಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಭೂಮಿಕಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಈ ಸಂಬಂಧ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಹಾವೇರಿ : ರಾಜ್ಯದಲ್ಲಿ ಮತ್ತೆ ಹಿಜಾಬ್ ವಿವಾದ ಭುಗಿಲೆದ್ದಿದೆ. ಹಾವೇರಿ ಜಿಲ್ಲೆ ಅಕ್ಕಿಆಲೂರಿನ ಸಿ.ಜಿ.ಬೆಲ್ಲದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೆಲ ವಿದ್ಯಾರ್ಥಿನಿಯರು ಬುರ್ಖಾ ಧರಿಸಿ ಬಂದಿದ್ದನ್ನು ಖಂಡಿಸಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದ್ದು, ವಿವಾದಕ್ಕೆ ಕಾರಣವಾಗಿದೆ. ಬಳಿಕ, ಕಾಲೇಜಿನ ಪ್ರಾಚಾರ್ಯ ಡಾ.ವೀರೇಶ ಕುಮ್ಮೂರ ಅವರು ವಿದ್ಯಾರ್ಥಿಗಳ ಮನವೊಲಿಸಿದ್ದು, ಕಾಲೇಜಿನ ಸಮವಸ್ತ್ರ ಪಾಲನೆಗೆ ವಿದ್ಯಾರ್ಥಿಗಳು ಒಪ್ಪಿದ್ದಾರೆ. ಆ ಮೂಲಕ ವಿವಾದ ಸುಖಾಂತ್ಯಗೊಂಡಿದೆ. ಹಾನಗಲ್ಲ ತಾಲೂಕಿನ ಅಕ್ಕಿಆಲೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಮಧ್ಯಾಹ್ನ 12.30ರ ವೇಳೆಗೆ ಕೆಲ ವಿದ್ಯಾರ್ಥಿನಿಯರು ಬುರ್ಕಾ ಧರಿಸಿ ಬಂದಿದ್ದರು. ಇದರಿಂದ ಆಕ್ರೋಶಗೊಂಡ ಅಕ್ಕಿ ಆಲೂರು ಕಾಲೇಜಿನಲ್ಲಿ ಹಿಜಾಬ್ ವಿರೋಧಿಸಿ ಶಾಲು ಧರಿಸಿ ಕಾಲೇಜಿಗೆ ಬಂದಿದ್ದ ವಿದ್ಯಾರ್ಥಿಗಳು, ಕೆಲ ವಿದ್ಯಾರ್ಥಿಗಳು, ಕೇಸರಿ ಶಾಲು ಧರಿಸಿ ಬಂದರು. ಇದು ಕಾಲೇಜಿನಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯರ ನಡುವಿನ ಚರ್ಚೆಗೆ ಕಾರಣವಾಯಿತು. ವಿಷಯ ತಿಳಿದ ಪ್ರಾಚಾರ್ಯ ಡಾ. ವೀರೇಶ ಕುಮ್ಮೂರ, ಬುರ್ಕಾ ಧರಿಸಿದ ವಿದ್ಯಾರ್ಥಿನಿಯರು ಹಾಗೂ ಕೇಸರಿ ಶಾಲು ಧರಿಸಿದ…
ಬೆಂಗಳೂರು : ನಗರ ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲಿ ನಿಲ್ಲಿಸಲಾಗಿದ್ದ ವಂಚನೆ ಪ್ರಕರಣದ ಆರೋಪಿಗೆ ಸೇರಿದ ಕಾರಿನಲ್ಲಿದ್ದ ಕ11 ಲಕ್ಷ ಕಳವು ಮಾಡಿದ ಆರೋಪಕ್ಕೆ ಸಿಸಿಬಿ ಸೈಬರ್ಠಾಣೆ ಕಾನ್ಸ್ಟೇಬಲ್ ಜಬಿವುಲ್ಲಾ ತುತ್ತಾಗಿದ್ದು, ಆರೋಪದ ಬೆನ್ನಲ್ಲೆ ಕಾನ್ಸ್ಟೇಬಲ್ ಸಂಪೂರ್ಣ ಹಣವನ್ನು ಮರಳಿಸಿದ್ದಾರೆ. ಕೆಲ ದಿನಗಳ ಹಿಂದೆ ವಂಚನೆ ಪ್ರಕರಣ ಸಂಬಂಧ ಇನ್ಸ್ಪೆಕ್ಟರ್ ಉಮೇಶ್ ಕುಮಾರ್ತಂಡ ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಠಾಣೆಗೆ ಕರೆತಂದಿದ್ದು, ಆ ವೇಳೆ ಈ ಹಣ ಕಳ್ಳತನವಾಗಿದೆ. ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದ ಆರೋಪಿ, ತನ್ನ ಕಾರನ್ನು ಪರಿಶೀಲಿಸಿದಾಗ ಅದರಲ್ಲಿದ್ದ 11 ಲಕ್ಷ ಕಳ್ಳತನವಾಗಿದೆ ಎಂದು ದೂರಿದ್ದಾನೆ. ಈ ಕಳ್ಳತನ ಬಗ್ಗೆ ಸಿಸಿಬಿ ಡಿಸಿಪಿ ಅವರಿಗೆ ಸಹ ಆರೋಪಿಯು ದೂರು ನೀಡಿದ್ದಾನೆ. ಆಗ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ ಕಾರಿನಲ್ಲಿದ್ದ ಹಣವನ್ನು ಜಬೀವುಲ್ಲಾ ಕಳ್ಳತನ ಮಾಡಿರುವುದು ಗೊತ್ತಾಗಿದೆ. ಆದರೆ, ಈ ಕುರಿತು ತನಿಖೆ ನಡೆಸದೆ ಅಧಿಕಾರಿಗಳು ನಿರ್ಲಕ್ಷ್ಯತನ ತೋರಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಆಯುಕ್ತ ಸೀಮಂತ್ ಕುಮಾರ್ಸಿಂಗ್ ಪ್ರತಿಕ್ರಿಯಿಸಿ, ಕಾರಿನಲ್ಲಿ ಹಣ…
ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಪ್ರತಿಬಂಧಕ ವಿಧೇಯಕಕ್ಕೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ. ಇದಲ್ಲದೇ ಧಾರ್ಮಿಕ ದತ್ತಿ ವಿಧೇಯಕಕ್ಕೂ ರಾಜ್ಯ ಸಚಿವ ಸಂಪುಟ ಸಭೆಯು ಒಪ್ಪಿಗೆಯನ್ನು ನೀಡಲಾಗಿದೆ. ನಿನ್ನೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯ ಬಳಿಕ ಕಾನೂನು ಸಚಿವ ಹೆಚ್ ಕೆ ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಸಂಪುಟದ ನಿರ್ಣಯಗಳನ್ನು ಮಾಧ್ಯಮಗಳಿಗೆ ತಿಳಿಸಿದರು. ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕ್ಕೆ ಒಪ್ಪಿಗೆಯನ್ನು ನೀಡಲಾಗಿದೆ. ಬಯಲುಸೀಮೆ ತಿದ್ದುಪಡಿ ವಿಧೇಯಕಕ್ಕೆ ಒಪ್ಪಿಗೆ ಸೂಚಿಸಿದೆ. ಮಲೆನಾಡು ಅಭಿವೃದ್ಧಿ ಪ್ರಾಧಿಕಾರ ವಿಧೇಯಕಕ್ಕೆ ಒಪ್ಪಿಗೆ ನೀಡಲಾಗಿದೆ. ಧಾರ್ಮಿಕ ದತ್ತಿ ವಿಧೇಯಕಕ್ಕೆ ಒಪ್ಪಿಗೆ ನೀಡಲಾಗಿದೆ. ಜಾನುವಾರು ಹತ್ಯೆ ಪ್ರತಿಬಂಧಕ ಹತ್ಯೆ ಸಂರಕ್ಷಣೆ ವಿಧೇಯಕಕ್ಕೆ ಒಪ್ಪಿಗೆ ನೀಡಿದೆ ಎಂಬುದಾಗಿ ಹೇಳಿದರು. ಇನ್ನೂ ಸಾಮಾಜಿಕ ಬಹಿಷ್ಕಾರ ನಿಷೇಧ ವಿಧೇಯಕಕ್ಕೆ ಒಪ್ಪಿಗೆ ನೀಡಲಾಗಿದೆ. ಒಟ್ಟು 8 ಬಿಲ್ ಗೆ ಅನುಮೋದನೆ ಮಾಡಿದ್ದೇವೆ. ಮತೀಯ ದ್ವೇಷ ಭಾಷಣವೂ ಇದರಲ್ಲಿ ಸೇರಿದೆ. ದ್ವೇಷ ಭಾಷಣ,ಸೈದ್ಧಾಂತಿಕ ನಿಲುವುಗಳ ಬಗ್ಗೆ ಸ್ಪಷ್ಟವಾಗಿದೆ. ವಿಧೇಯಕದಲ್ಲಿ ಬಹಳ ಸ್ಪಷ್ಟವಾಗಿ ತಿಳಿಸಲಾಗಿದೆ ಎಂದರು.…














