Subscribe to Updates
Get the latest creative news from FooBar about art, design and business.
Author: kannadanewsnow05
ಚಿಕ್ಕಬಳ್ಳಾಪುರ : ಜಿಲ್ಲೆಯ ಎ. ಕೊತ್ತೂರಲ್ಲಿ ದಲಿತರು ಮತ್ತು ಸವರ್ಣಿಯರ ನಡುವೆ ಘರ್ಷಣೆ ಉಂಟಾಗಿದೆ. ಚಿಕ್ಕಬಳ್ಳಾಪುರ ತಾಲೂಕಿನ ಎ ಕುತ್ತೂರು ಗ್ರಾಮದಲ್ಲಿ ಒಂದು ಘಟನೆ ನಡೆದಿದ್ದು, ಗ್ರಾಮ ದೇವತೆ ಮೆರವಣಿಗೆ ಮಾಡುವ ವಿಚಾರದಲ್ಲಿ ಗಲಾಟೆ ನಡೆದಿದೆ. ದಲಿತರು ಉತ್ಸವ ಮೂರ್ತಿ ಹೊರದಂತೆ ಸವರ್ಣೀಯರು ದಲಿತರನ್ನು ತಡೆದಿದ್ದಾರೆ ಜಗಳದಲ್ಲಿ ಕೊನೆಗೆ ದೇವರ ವಿಗ್ರಹವನ್ನು ನಡು ರಸ್ತೆಯಲ್ಲಿ ಜನರು ಬಿಟ್ಟಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಎ ಕೊತ್ತೂರಿನಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ : ರಾಜ್ಯದಲ್ಲಿ ಒಂದೇ ದಿನ ಗೌರವದ ದುರಂತ ಸಂಭವಿಸಿದ್ದು ಪ್ರತ್ಯೇಕ ಘಟನೆಗಳಲ್ಲಿ ಎರಡು ಜಿಲ್ಲೆಗಳಲ್ಲಿ ಸಂಭವಿಸಿದ ಪ್ರತ್ಯೇಕ ಪ್ರಕರಣದಲ್ಲಿ ಒಟ್ಟು ಆರು ಮಂದಿ ನೀರು ಪಾಲಾಗಿದ್ದಾರೆ. ಶಿವಮೊಗ್ಗ ಹಾಗೂ ದಕ್ಷಿಣ ಕನ್ನಡದಲ್ಲಿ ಒಂದೇ ದಿನ ಆರು ಜನರು ಜಲಸಮಾಧಿಯಾಗಿದ್ದಾರೆ. ಮೊದಲ ಘಟನೆ ನಡೆದಿದ್ದು, ಕಾಲುವೆಯಲ್ಲಿ ಬಟ್ಟೆ ತೊಳೆಯಲು ಹೋದ ಒಂದೇ ಕುಟುಂಬದ ನಾಲ್ವರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ಘಟನೆ ಶಿವಮೊಗ್ಗದ ಭದ್ರಾವತಿ ತಾಲೂಕಿನ ಅರಬಿಳಚಿ ಕ್ಯಾಂಪ್ನಲ್ಲಿ ಭಾನುವಾರ ನಡೆದಿದೆ. ಅರಬಿಳಚಿ ಕ್ಯಾಂಪ್ನ ನಿವಾಸಿ ನೀಲಬಾಯಿ (50), ಮಗ ರವಿ ಕುಮಾರ್ (21), ಮಗಳು ಶ್ವೇತಾ (28) ಹಾಗೂ ಅಳಿಯ ಪರಶುರಾಮ (33) ನೀರು ಪಾಲಾದವರು ಎಂದು ತಿಳಿದುಬಂದಿದೆ. ಹೊಳೆಹೊನ್ನೂರು ಪೊಲೀಸರು ಶಿವಮೊಗ್ಗದಿಂದ ಅಗ್ನಿಶಾಮಕದಳದವರನ್ನು ಕರೆಯಿಸಿ ಹುಡುಕಾಟ ನಡೆಸಿದ್ದಾರೆ. ನಿನ್ನೆ ಕತ್ತಲಾದ ಕಾರಣ ಇಂದು ಹುಡುಕಾಟ ಮುಂದುವರೆಯಲಿದೆ. ರಾಜರಾವ್ ಅವರು ನೀಡಿದ ದೂರಿನಂತೆ ಹೊಳೆಹೊನ್ನೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜಿಲ್ಲಾ ಹೆಚ್ಚುವರಿ ರಕ್ಷಣಾಧಿಕಾರಿ ಕಾರ್ಯಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸ್ನೇಹಿತನನ್ನು…
ಬಾಗಲಕೋಟೆ : ರಾಜ್ಯದಲ್ಲಿ ಆನ್ಲೈನ್ ಬೆಟ್ಟಿಂಗ್ಗೆ ಇದೀಗ ಮತ್ತೊಂದು ಬಲಿಯಾಗಿದೆ. ಆನ್ಲೈನ್ ಬೆಟ್ಟಿಂಗ್ ನಿಂದ ಸಾಲದ ಸುಳಿಗೆ ಸಿಲುಕಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಪಟ್ಟಣದ ಚೌಡಯ್ಯ ನಗರದಲ್ಲಿ ಈ ಒಂದು ಘಟನೆ ಸಂಭವಿಸಿದೆ. ಮನೆಯಲ್ಲಿ ನೇಣು ತೆಗೆದುಕೊಂಡು ರಮೇಶ ಬಂಟನೂರು (21) ಆತ್ಮಹತ್ಯೆಗೆ ಶರಣಾರದ ಯುವಕ ಎಂದು ತಿಳಿದು ಬಂದಿದ್ದು, ರಮೇಶ್ ಬಂಟನೂರು ಜಮಖಂಡಿಯ ಖಾಸಗಿ ಕಾಲೇಜಿನಲ್ಲಿ ಬಿಸಿಎ ಪ್ರಥಮ ವರ್ಷದ ವಿದ್ಯಾರ್ಥಿಯಾಗಿದ್ದ. ಆನ್ಲೈನ್ ಬೆಟ್ಟಿಂಗ್ ನಿಂದ ರಮೇಶ್ ಲಕ್ಷಾಂತರ ಸಾಲ ಮಾಡಿಕೊಂಡಿದ್ದ. ಈ ಹಿಂದೆ ರಮೇಶ್ ಮಾಡಿಕೊಂಡಿದ್ದ ಸಾಲವನ್ನು ತಂದೆಯೇ ಎರಡು ಬಾರಿ ತೀರಿಸಿದ್ದರು. ಮತ್ತೆ ಆನ್ಲೈನ್ ಬೆಟ್ಟಿಂಗ್ ಆಡಬೇಡ ಎಂದು ತಂದೆ ಬುದ್ಧಿವಾದ ಸಹ ಹೇಳಿದ್ದರು. ಬೈದು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ರಮೇಶ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸ್ಥಳಕ್ಕೆ ಜಮಖಂಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ನಡು ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿಯೇ ಹೊತ್ತಿ ಉರಿದಿರುವ ಘಟನೆ ನಡೆದಿದೆ. ನಡುರಸ್ತೆಯಲ್ಲೇ ಬೆಳಗ್ಗೆ 7:30 ರ ಸುಮಾರಿಗೆ ವರ್ಣ ಕಾರು ಧಗಧಗನೆ ಬೆಂಕಿಗೆ ಆಹುತಿಯಾಗಿದೆ. ಯಶವಂತಪುರದಿಂದ ಟಾಟಾ ಇನ್ಸ್ಟಿಟ್ಯೂಟ್ ಕಡೆಗೆ ಹೋಗುವ ರಸ್ತೆಯಲ್ಲಿ ಘಟನೆ ನಡೆದಿದೆ. ಕಾರಿನಲ್ಲಿದ್ದ ಮೂವರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.ಬೆಂಕಿಗಾಹುತಿಯಾದ ವೈಟ್ ಬೋರ್ಡ್ ವರ್ಣ ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದರು. ಕಾರನ್ನು ಸ್ಟಾರ್ಟ್ ಮಾಡಿ ಕೇವಲ ಒಂದು ಕಿಮೀ ದೂರ ಕ್ರಮಿಸಲಾಗಿತ್ತು. ಕಾರಿನ ಇಂಜಿನ್ ಭಾಗದಲ್ಲಿ ಬೆಂಕಿ, ಹೊಗೆ ಕಾಣಿಸೊಕೊಂಡಿದೆ. ಕೂಡಲೇ ಕಾರಿನಲ್ಲಿದ್ದವರು ಇಳಿದು ಬಚಾವ್ ಆಗಿದ್ದಾರೆ. ಬೆಂಕಿಯನ್ನ ನಂದಿಸಲು ಪ್ರಯತ್ನ ಪಟ್ಟರೂ ಸಾಧ್ಯವಾಗಿಲ್ಲ. ಅಗ್ನಿಶಾಮಕದಳ ಸ್ಥಳಕ್ಕೆ ಬರುವ ಹೊತ್ತಿಗೆ ಬೆಂಕಿ ಸಂಪೂರ್ಣ ಕಾರನ್ನು ಆವರಿಸಿತ್ತು. ಕೇವಲ 5 ನಿಮಿಷದಲ್ಲಿ ಸಂಪೂರ್ಣ ಕಾರು ಹೊತ್ತಿ ಉರಿದಿದೆ.ಬೆಂಕಿಗೆ ಕಾರು ಆಹುತಿಯಾಗಲು ಕಾರಣವೇನು ಅಂತ ತನಿಖೆಯಿಂದಷ್ಟೇ ತಿಳಿಯಬೇಕಿದೆ. ಯಶವಂತಪುರ ಪೊಲೀಸರು ಸ್ಥಳಕ್ಕೆ ಬಂದು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಬೆಂಗಳೂರು : ವೇತನ ಮತ್ತು ವೇತನ ಪರಿಷ್ಕರಣೆಗೆ ಸಂಬಂಧಿಸಿದ ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಗಳನ್ನು ಈಡೇರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ, ಕೆಎಸ್ಆರ್ಟಿಸಿ ಸೇರಿದಂತೆ ರಾಜ್ಯದ ನಾಲ್ಕು ಸರ್ಕಾರಿ ಸಾರಿಗೆ ನಿಗಮಗಳ ನೌಕರರು ಜನವರಿ 29 ರಂದು ‘ಬೆಂಗಳೂರು ಚಲೋ’ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ್ದಾರೆ. ಜನವರಿ 29 ರಂದು ಬೆಳಗ್ಗೆ 10 ರಿಂದ ಸಂಜೆ 4 ರವರೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಯಲಿದೆ. ಈ ಪ್ರತಿಭಟನೆ ಶಾಂತಿಯುತವಾಗಿರುತ್ತದೆ ಎಂದು ಒಕ್ಕೂಟಗಳು ತಿಳಿಸಿವೆ. ಸಂಘಟನೆಗಳು ಅಧಿಕೃತವಾಗಿ ಮುಷ್ಕರವನ್ನು ಘೋಷಿಸಿಲ್ಲವಾದರೂ, ತಮ್ಮ ಬೇಡಿಕೆಗಳನ್ನು ನಿರಂತರವಾಗಿ ನಿರ್ಲಕ್ಷಿಸುವುದರಿಂದ ಸಾರಿಗೆ ಸೇವೆಗಳ ಮೇಲೆ ಪರಿಣಾಮ ಬೀರಬಹುದು ಎಂದು ಅವರು ಎಚ್ಚರಿಸಿದರು. ಒಂದು ದಿನದ ಅಡಚಣೆ ಕೂಡ ಕರ್ನಾಟಕದಾದ್ಯಂತ ದೈನಂದಿನ ಪ್ರಯಾಣಿಕರ ಮೇಲೆ ಪರಿಣಾಮ ಬೀರಬಹುದು ಎಂದು ಒಕ್ಕೂಟದ ನಾಯಕರು ತಿಳಿಸಿದರು. ಜನವರಿ 29 ರಂದು ಬೆಳಗ್ಗೆ 10 ರಿಂದ ಸಂಜೆ 4 ರವರೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಯಲಿದೆ. ಈ ಪ್ರತಿಭಟನೆ ಶಾಂತಿಯುತವಾಗಿರುತ್ತದೆ…
ಬೆಂಗಳೂರು : ಜಗತ್ತಿನಲ್ಲಿ ಎಂತೆಂತಹ ಜನರು ಇರುತ್ತಾರೆ ಅಂದರೆ, ಮದುವೆಯಾಗುವುದಾಗಿ ನಂಬಿಸಿ ಆಸಾಮಿ ಒಬ್ಬ ತನ್ನ ಪತ್ನಿಯನ್ನೇ ಅಕ್ಕ ಎಂದು ಯುವತಿಗೆ ಪರಿಚಯಿಸಿ ಆಕೆಗೆ ಕೋಟ್ಯಾಂತರ ರೂಪಾಯಿ ಹಣ ವಂಚನೆ ಎಸಗಿದ್ದಾನೆ. ಬೆಂಗಳೂರಿನ ಯುವತಿಗೆ ವಂಚನೆ ಎಸಗಿದ್ದು, ಬೆಂಗಳೂರಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿರುವ ಯುವತಿ ವಂಚನೆಗೆ ಒಳಗಾಗಿದ್ದಾಳೆ. ಹೌದು ಮ್ಯಾಟರ್ ಮೋನಿಯಲ್ಲಿ ಆರುಪಿ ವಿಜಯ್ ರಾಜೇಗೌಡ ಪರಿಚಯವಾಗಿದ್ದ. 2024 ಮಾರ್ಚ್ ನಲ್ಲಿ ವಿಜಯ್ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದ. ತಾನು ಉದ್ಯಮಿ 715 ಕೋಟಿ ಮಾಡಿದ ಆಸ್ತಿ ಒಡೆಯ ಇದ್ದೇನೆ ಎಂದು ಪರಿಚಯ ಮಾಡಿಕೊಂಡಿದ್ದಾನೆ. ನಿನ್ನನ್ನೇ ಮದುವೆಯಾಗುತ್ತೇನೆ ಎಂದು ಕುಟುಂಬದ ಸದಸ್ಯರನ್ನು ಪರಿಚಯಿಸಿದ. ಕೆಂಗೇರಿ ಬಳಿ ಯುವತಿಯ ಕುಟುಂಬ ಸದಸ್ಯರನ್ನು ಪರಿಚಯಿಸಿದ್ದಾನೆ. ಅಲ್ಲದೆ ಇನ್ನೊಂದು ಬೆಚ್ಚಿ ಬೀಳಿಸೋ ವಿಷಯ ಏನೆಂದರೆ ಆರೋಪಿ ವಿಜಯ್ ತನ್ನ ಪತ್ನಿಯನ್ನು ಅಕ್ಕ ಎಂದು ಯುವತಿಗೆ ಪರಿಚಯಿಸಿದ್ದಾನೆ. ನಂತರ ಆಸ್ತಿ ಸಂಬಂಧ ಜಾರಿ ನಿರ್ದೇಶನಾಲಯದಲ್ಲಿ ಕೇಸ್ ಆಗಿದೆ ಎಂದು ಯುವತಿಗೆ ಆರೋಪಿ ಹೇಳಿ ನಂಬಿಸಿ lದ್ದಾನೆ. ಈ ಬಗ್ಗೆ…
ಬೆಂಗಳೂರು : ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಾರಾ ಮಹೇಶ್ ಸ್ಪರ್ಧೆ ವಿಚಾರವಾಗಿ ಚುನಾವಣೆಗೆ ಇನ್ನು ಎರಡು ವರ್ಷ ಬಾಕಿ ಇದೆ ಚಾಮುಂಡೇಶ್ವರಿ ಕ್ಷೇತ್ರದ ಶಾಸಕರು ನಮ್ಮ ಜೊತೆ ಸಕ್ರಿಯವಾಗಿಲ್ಲ. ಕೆ.ಆರ್ ನಗರ ಕ್ಷೇತ್ರದ ಜನರು ನನ್ನನ್ನು 3 ಬಾರಿ ಆಯ್ಕೆ ಮಾಡಿದ್ದಾರೆ ಎಂದು ಬೆಂಗಳೂರಿನಲ್ಲಿ ಜೆಡಿಎಸ್ ಮಾಜಿ ಶಾಸಕ ಸಾರಾ ಮಹೇಶ್ ಹೇಳಿಕೆ ನೀಡಿದರು ಯಾರು ಯಾವಾಗ ಸ್ಪರ್ಧಿಸಬೇಕು ಎಂದು ಎಚ್ ಡಿ ದೇವೇಗೌಡ ಹಾಗೂ ಕುಮಾರಸ್ವಾಮಿ ನಿರ್ಧರಿಸುತ್ತಾರೆ ಎಲ್ಲಿ ಸ್ಪರ್ಧೆ ಮಾಡಬೇಕು ಎಂದು ನನಗೆ ಹೇಳುತ್ತಾರೆ ನಾನು ಅಲ್ಲಿಂದ ಸ್ಪರ್ಧೆ ಮಾಡುತ್ತೇನೆ ಎರಡು ಪಕ್ಷದ ನಾಯಕರು ಯಾವ ತೀರ್ಮಾನ ಮಾಡುತ್ತಾರೆ ಎಂದು ನೋಡಬೇಕು. ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಅವರ ಮನವೊಲಿಸುವ ವಿಚಾರವಾಗಿ ಎಚ್ ಡಿ ದೇವೇಗೌಡ ಅವರನ್ನು ಭೇಟಿ ಮಾಡಿದ ಬಳಿಕ ಸಾರಾ ಮಹೇಶ್ ಹೇಳಿಕೆ ನೀಡಿದ್ದು, 2006ರಲ್ಲಿ ಸಮಸ್ಯೆ ಆಯಿತು. 2013ರಲ್ಲೂ ಬೇಸರ ಮಾಡಿಕೊಂಡರು. ಆಗ ಕುಮಾರಸ್ವಾಮಿ ನಮ್ಮ ಮನೆ ಬಾಗಿಲು ಮುಚ್ಚಿದೆ ಅಂತ ಅಂದರು. ಮತ್ತೆ ನಾವೆಲ್ಲ…
ಬೆಂಗಳೂರು : ಕಳೆದ 112 ದಿನಗಳಿಂದ ಬಿಗ್ ಬಾಸ್ ಕನ್ನಡ ಸೀಸನ್ 12 ಇಂದಿಗೆ ತಾರಾಬಳಗದ ಅಂತಿಮ ಘಟ್ಟದೊಂದಿಗೆ ತನ್ನ ಪ್ರಯಾಣಕ್ಕೆ ತೆರೆ ಎಳೆಯಲಿದೆ. ಈ ಸಂಚಿಕೆಯು ಕಲರ್ಸ್ ಕನ್ನಡದಲ್ಲಿ ಸಂಜೆ 6 ಗಂಟೆಗೆ ಪ್ರಸಾರವಾಗಲಿದ್ದು, ವೀಕ್ಷಕರಿಗೆ ಬ್ಲಾಕ್ಬಸ್ಟರ್ ಮನರಂಜನೆಯ ಭರವಸೆ ನೀಡುತ್ತದೆ. ವೀಕ್ಷಕರು ಈಗಾಗಲೇ ಕೌಂಟ್ಡೌನ್ ಪ್ರಾರಂಭಿಸಿರುವುದರಿಂದ ಬಿಬಿಕೆ 12 ನೇ ಸೀಸನ್ ನ ಸುತ್ತಲಿನ ಉತ್ಸಾಹವು ಉತ್ತುಂಗಕ್ಕೇರಿದೆ. ಇದರ ಮಧ್ಯ ಇಂದು ವಿನ್ನರ್ ಯಾರು ಎಂದು ನಟ ಕಿಚ್ಚ ಸುದೀಪ್ ಘೋಷಿಸಲಿದ್ದು ಅದಕ್ಕೂ ಮುನ್ನ ಈ ಒಂದು ಸೀಸನ್ 12ರ ರನ್ನರ್ ಅಪ್ ಹೆಸರು ಲೀಕಾಗಿದೆ. ಕೆಲವೊಂದು ಮೂಲಗಳ ಸಮೀಕ್ಷೆಯ ಪ್ರಕಾರ, ಗಿಲ್ಲಿ ನಟಾ ಮತ್ತು ಅಶ್ವಿನಿ ಗೌಡ ಗ್ರ್ಯಾಂಡ್ ಫಿನಾಲೆಯಲ್ಲಿ ಸ್ಥಾನ ಪಡೆಯುವ ಗರಿಷ್ಠ ಅವಕಾಶಗಳನ್ನು ಹೊಂದಿದ್ದಾರೆ. ವಾರಾಂತ್ಯದ ಫಿನಾಲೆಯಲ್ಲಿ ಗಿಲ್ಲಿ ನಟಾ ಬಿಗ್ ಬಾಸ್ ಕನ್ನಡ 12 ರ ವಿಜೇತರಾಗಿ ಹೊರಹೊಮ್ಮುವ ನಿರೀಕ್ಷೆಯಿದೆ. ಆದಾಗ್ಯೂ, ಹಾನೆಸ್ಟ್ ರಿವ್ಯೂನ ಎಕ್ಸ್ ಹ್ಯಾಂಡಲ್ನ ಇತ್ತೀಚಿನ ಟ್ವೀಟ್, ಬಿಬಿಕೆ 12…
ಬೆಳಗಾವಿ : ಬೆಳಗಾವಿಯಲ್ಲಿ ಲವ್ ಜಿಹಾದ್ ಕೇಸ್ ಒಂದು ಬೆಳಕಿಗೆ ಬಂದಿದ್ದು, ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತಿಯನ್ನು ಕಿಡ್ನ್ಯಾಪ್ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬೆಂಗಳೂರಿನಲ್ಲಿ ಅಥಣಿ ಪೊಲೀಸ್ರು ಆರೋಪಿ ಶಾಹಿಲ್ ನನ್ನ ಅರೆಸ್ಟ್ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ಪೊಲೀಸರಿಂದ ಆರೋಪಿ ಶಾಹಿಲ್ ಇದೀಗ ಅರೆಸ್ಟ್ ಆಗಿದ್ದಾನೆ. ಕಳೆದ ವಾರ ಅಪ್ರಾಪ್ತೆಯನ್ನು ಅಪಹರಿಸಿ ಆರೋಪಿ ಶಾಹಿಲ್ ಕರೆದೋಯ್ದಿದ್ದ. ಬೆಳಗಾವಿ ಜಿಲ್ಲೆಯ ಅಥಣಿಯಿಂದ ಅಪ್ರಾಪ್ತೇ ಬಾಲಕಿಯನ್ನು ಅಪಹರಿಸಿದ್ದ ಶಾಹಿಲ್ ಆತನ ಕಪಿಮುಷ್ಠಿಯಲ್ಲಿ ಇದ್ದ ಬಾಲಕಿಯನ್ನು ಇದೀಗ ಅಥಣಿ ಪೊಲೀಸರು ರಕ್ಷಣೆ ಮಾಡಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಪೊಲೀಸರು ಎರಡು ವಿಶೇಷ ತನ್ನ ರಚಿಸಿದ್ದರು. ಬೆಂಗಳೂರಿನಲ್ಲಿ ಇದೀಗ ಬಾಲಕಿಯನ್ನು ರಕ್ಷಣೆ ಮಾಡಿದ್ದಾರೆ. ತನ್ನ ಸಂಬಂಧಿ ಹುಡುಗಿ ಇಂದ ಅಪ್ರಾಪ್ತೆಯನ್ನು ಆರೋಪಿ ಶಾಹಿಲ್ ಪರಿಚಯ ಮಾಡಿಕೊಂಡಿದ್ದ. ದ್ವಿತೀಯ ಪಿಯುಸಿ ಓದುತ್ತಿದ್ದ ಬಾಲಕಿಯ ಜೊತೆಗೆ ಶಾಹಿಲ್ ಸ್ನೇಹ ಮಾಡಿದ್ದ. ಸಂಬಂಧಿಕರ ಹುಡುಗಿ ಮತ್ತು ಅಪ್ರಾಪ್ತ ಬಾಲಕಿಯನ್ನು ಎರಡು ಮೂರು ಬಾರಿ ಹೋಟೆಲ್ಗೆ ಕರೆದುಕೊಂಡು ಹೋಗಿದ್ದ. ಆರಂಭದಲ್ಲಿ ನಂಬಿಕೆ…
ಬೆಂಗಳೂರು : ಕಾಂಗ್ರೆಸ್ ನಲ್ಲಿ ಇರುವ ನಾಯಕರೆಲ್ಲ ನಕಲಿ ಗಾಂಧಿಗಳು ನಾನು ಪೊಲೀಸರೇ ಕಳ್ಳರು ಅಂತ ವಿಧಾನಸಭೆಯಲ್ಲಿಯೇ ಹೇಳಿದ್ದೆ. ಕರ್ನಾಟಕ ರಾಜ್ಯದಲ್ಲಿ ಡ್ರಗ್ ಮಾಫಿಯಾ ಆವರಿಸಿದೆ ಕಾಲೇಜಿಗೆ ಹೋಗುವ ಶೇಕಡ 12ರಷ್ಟು ಮಕ್ಕಳು ಡ್ರಗ್ಸ್ ಸೇವಿಸುತ್ತಾರೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ತಿಳಿಸಿದರು. ಈ ವಿಚಾರವನ್ನು ವಿಧಾನಸಭೆ ಅಧಿವೇಶನದಲ್ಲಿ ಪ್ರಸ್ತಾಪಿಸಿದ್ದೆ. ಡ್ರಗ್ಸ್ ಕಾನೂನು ಸುವ್ಯವಸ್ಥೆಗಳ ಬಗ್ಗೆ ಮಾತನಾಡಿದೆ. ನನ್ನ ಪ್ರಶ್ನೆಗಳಿಗೆ ರಾಜ್ಯ ಸರ್ಕಾರ ಈಗ ಉತ್ತರ ನೀಡಿದೆ. ಎಲ್ಲಾ ಚೆನ್ನಾಗಿದೆ ಎಂದು ಸರ್ಕಾರ ಮಾಹಿತಿ ನೀಡಿದೆ. ಪೊಲೀಸ್ ಇಲಾಖೆಗೆ ಬೆತ್ತಲಾಗಿದೆ ಅಂತ ಸಿಎಂ ಸಿದ್ದರಾಮಯ್ಯ ತೋರಿಸಿದ್ದಾರೆ. ನಿದ್ದೆರಾಮಯ್ಯನವರೇ ಎಂದು ಇಲಾಖೆಯ ವೈಫಲ್ಯ ಎದ್ದು ತೋರಿಸಿದ್ದಾರೆ. ಮಹಾರಾಷ್ಟ್ರ ಪೊಲೀಸರು ಇಲ್ಲಿಗೆ ಬಂದು ಡ್ರಗ್ ಫೆಡ್ಲರ್ ಗಳನ್ನು ಬಂಧಿಸುತ್ತಾರೆ ಅಂದರೆ ಈ ಸರ್ಕಾರಕ್ಕೆ ಮಾನ ಮರ್ಯಾದೆ ಇದೆಯಾ? ಎಂದು ಬೆಂಗಳೂರಲ್ಲಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದರು.














