Subscribe to Updates
Get the latest creative news from FooBar about art, design and business.
Author: kannadanewsnow05
ಮೈಸೂರು : ಗಂಗಾವತಿ ಶಾಸಕ ಜನಾರ್ದನ ರೆಡ್ಡಿಯದ್ದು ಗೂಂಡಾ ಸಂಸ್ಕೃತಿ ಆತನಿಗೆ ಯಾವುದೇ ಸಂಸ್ಕಾರ ಇಲ್ಲ ಎಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜನಾರ್ಧನ ರೆಡ್ಡಿ ವಿರುದ್ಧ ವಾಗ್ದಾಳಿ ನಡೆಸಿದರು. ಮೈಸೂರು ಏರ್ಪೋರ್ಟ್ ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಿಪಬ್ಲಿಕ್ ಆಫ್ ಬಳ್ಳಾರಿ ಮಾಡಿದ್ದು ಶಾಸಕ ಜನಾರ್ದನ ರೆಡ್ಡಿ, ನಾನು ವಿಪಕ್ಷ ನಾಯಕನಾಗಿದ್ದಾಗ ಪ್ರಚಾರಕ್ಕೆ ಜಾಗ ಕೊಡಲಿಲ್ಲ. ಕೊನೆಗೆ ಕುರುಬರ ದೇಗುಲದಲ್ಲಿ ನಿಂತು ಪ್ರಚಾರ ಮಾಡಿ ಬಂದೆ. ಇಂತಹ ಜನಾರ್ಧನ ರೆಡ್ಡಿ ನಮಗೇನು ಪಾಠ ಮಾಡುತ್ತಾರೆ? ಎಂದು ರೆಡ್ಡಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ದಾವಣಗೆರೆ : ದಾವಣಗೆರೆಯಲ್ಲಿ ಗಾಂಜಾ ಮತ್ತು ಸಿಂಥೆಟಿಕ್ ಡ್ರಗ್ ಪೂರೈಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ಮತ್ತೊಬ್ಬ ಉದ್ಯಮಿಯನ್ನು ಅರೆಸ್ಟ್ ಮಾಡಿದ್ದಾರೆ. ದಾವಣಗೆರೆಯ ವಿದ್ಯಾನಗರ ಪೊಲೀಸರು ಉದ್ಯಮಿ ಶಿವರಾಜನನ್ನು ಬಂಧಿಸಿದ್ದಾರೆ. ದಾವಣಗೆರೆಯ ಎಸ್ ಎಸ್ ಲೇಔಟ್ ನಿವಾಸಿಯಾಗಿರುವ ಶಿವರಾಜ್ ಈ ಹಿಂದೆ ಆರ್ಟಿಓ ಕಚೇರಿಯಲ್ಲಿ ಏಜೆಂಟ್ ಆಗಿದ್ದ. ಸಂಘಟನೆ ಒಂದರಲ್ಲಿ ಆರೋಪಿ ಶಿವರಾಜ್ ಗುರುತಿಸಿಕೊಂಡಿದ್ದ. ಈಗಾಗಲೇ ಉದ್ಯಮಿ ಶಾಮನೂರು ವೇದಮೂರ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್ ಮುಖಂಡ ಮತ್ತು ವೀರಶೈವ ಮಹಾಸಭಾ ಸದಸ್ಯರಾಗಿರುವ ಒಬ್ಬ ವೇದಮೂರ್ತಿಯನ್ನು ಇದೇ ಪ್ರಕರಣದಲ್ಲಿ ಅರೆಸ್ಟ್ ಮಾಡಿದ್ದರು. ಈ ಒಂದು ಪ್ರಕರಣ ಸಂಬಂಧ ಪೊಲೀಸರು ಇದುವರೆಗೂ 11 ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ದಾವಣಗೆರೆಯ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಗಾಂಜಾ ಮತ್ತು ಸಿಂಥೆಟಿಕ್ ಡ್ರಗ್ ಪ್ರಕರಣ ದಾಖಲಾಗಿತ್ತು.
ಗದಗ : ಗದಗದಲ್ಲಿ ಮನೆ ಕಟ್ಟಲು ಪಾಯ ಅಗೆಯುವಾಗ ಯಾವಾಗ ನಿಧಿ ಸಿಕ್ಕಿತೊ, ತಕ್ಷಣ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಉತ್ಖನನ ಕಾರ್ಯ ಆರಂಭಿಸಿತು. ಕಳೆದ ಎರಡು ದಿನಗಳಿಂದ ಉತ್ಖನನ ಕಾರ್ಯ ನಡೆಯುತ್ತಿದ್ದು, ಇದೀಗ ಎಂದು ಮೂರನೇ ದಿನ ಉತ್ಖನನ ವೇಳೆ ಕೋಟೆ ಗೋಡೆಯಲ್ಲಿ ಶಿವಲಿಂಗ ಪತ್ತೆಯಾಗಿದೆ. ಹೌದು ಲಕ್ಕುಂಡಿಯಲ್ಲಿ ಮೂರನೇ ದಿನವೂ ಉತ್ಕನ ಕಾರ್ಯ ನಡೆಯುತ್ತಿದ್ದು ಕೋಟೆ ಗೋಡೆಯಲ್ಲಿ ಪುರಾತನ ಕಾಲದ ಶಿವಲಿಂಗ ಪತ್ತೆಯಾಗಿದೆ. ಗ್ರಾಮದ ವೀರಭದ್ರೇಶ್ವರ ದೇಗುಲದ ಪಕ್ಕದ ಕೋಟೆ ಗೋಡೆಯಲ್ಲಿ ಶಿವಲಿಂಗ ಪತ್ತೆಯಾಗಿದೆ. ತೀವ್ರ ಕುತೂಹಲದಿಂದ ಗ್ರಾಮಸ್ಥರು ಇದೀಗ ಶಿವಲಿಂಗವನ್ನು ವೀಕ್ಷಣೆ ಮಾಡುತ್ತಿದ್ದಾರೆ. ಈ ಪತ್ತೆಯಾದ ಶಿವಲಿಂಗ ಯಾವ ಕಾಲದಂದು ಎಂದು ಪುರಾತತ್ವ ಇಲಾಖೆ ಅಧಿಕಾರಿಗಳು ಪರಿಶೀಲನೆ ಮಾಡುತ್ತಿದ್ದಾರೆ. ನಿನ್ನೆಯೂ ಸಹ ಲಕ್ಕುಂಡಿ ಗ್ರಾಮದಲ್ಲಿ ಒಂದು ಪುರಾತನ ವಸ್ತು ಪತ್ತೆಯಾಗಿತ್ತು. ಇದೀಗ ಎಂದು ಕೋಟೆಗೋಡಿಯಲ್ಲಿ ಮತ್ತೊಂದು ಶಿವಲಿಂಗ ಪತ್ತೆಯಾಗಿದೆ. ಅಕಸ್ಮಾತ್ ಲಕ್ಕುಂಡಿಯಲ್ಲಿ ನಿಧಿ ನಿಕ್ಷೇಪ ದೊರೆತರೆ ಇಡೀ ಗ್ರಾಮವನ್ನೇ ಸ್ಥಳಾಂತರಿಸುವ ಸಾಧ್ಯತೆ ಇದೆ…
ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಗೆ ಶಾಸಕ ಜನಾರ್ದನ ರೆಡ್ಡಿ ನಿಂದನೆ ಮಾಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಶಾಸಕ ಜನಾರ್ದನ ರೆಡ್ಡಿ ನಿವಾಸಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ರೆಡ್ಡಿ ಮನೆ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು ಬೆಂಗಳೂರಿನ ಸದಾಶಿವನಾಗರದಲ್ಲಿರುವ ಗಾಲಿ ಜನಾರ್ಧನ ರೆಡ್ಡಿ ನಿವಾಸದ ಮುಂದೆ ಪ್ರತಿಭಟನೆ ಮಾಡುತ್ತಿದ್ದಾರೆ. ಹೌದು ಡಿಸಿಎಂ ಡಿಕೆ ಶಿವಕುಮಾರ್ ಜನಾರ್ಧನ ರೆಡ್ಡಿ ನಿಂದನೆ ಮಾಡಿರುವ ಆರೋಪ ಹಿನ್ನೆಲೆಯಲ್ಲಿ ಬೆಂಗಳೂರಿನ ಜನಾರ್ಧನ ರೆಡ್ಡಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರಿಂದ ಭಾರಿ ಹೈಡ್ರಾಮಾ ನಡೆದಿದೆ. ಮನೋಹರ ನೇತೃತ್ವದಲ್ಲಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನ ನಡೆಸಲಾಗಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ ಮನೋಹರ್ ನೇತೃತ್ವದಲ್ಲಿ ಪ್ರತಿಭೆ ನಡೆಸುತ್ತಿದ್ದು ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇದೀಗ ಬೆದರಿಕೆ ಇ-ಮೇಲ್ ಸಂದೇಶ ಬಂದಿದೆ. ಆತ್ಮಹತ್ಯೆ ಬಾಂಬರ್ ಮೂಲಕ ದಾಳಿ ಮಾಡುವುದಾಗಿ ಈ ಮೇಲ್ ಸಂದೇಶ ಬಂದಿದೆ ಕೆಂಪೇಗೌಡ ಏರ್ಪೋರ್ಟ್ ಆಡಳಿತ ಮಂಡಳಿ ಇ-ಮೇಲ್ ಐಡಿಗೆ ಈ ಒಂದು ಬೆದರಿಕೆ ಸಂದೇಶ ಬಂದಿದೆ. ಮೂರು RDX, IED ಬಳಸಿ ಟರ್ಮಿನಲ್ ಸ್ಪೋಟಿಸುವುದಾಗಿ ಬೆದರಿಕೆ ಸಂದೇಶ ಬಂದಿದೆ. gaina_remesh@outlook.com ಹೆಸರಿನ ಇಮೇಲ್ ಐಡಿಯಿಂದ ಬೆದರಿಕೆ ಸಂದೇಶ ಬಂದಿದೆ. ಸಂದೇಶ ಬಂದ ತಕ್ಷಣ ಎಚ್ಚೆತ್ತುಕೊಂಡ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆಯ ವೇಳೆ ಯಾವುದೇ ಸ್ಪೋಟಕ ವಸ್ತು ಪತ್ತೆ ಆಗಿಲ್ಲ . ಹುಸಿ ಬಾಂಬ್ ಸಂದೇಶ ಎಂದು ಪೊಲೀಸರಿಗೆ ಸಿಬ್ಬಂದಿಗಳು ದೂರು ನೀಡಿದ್ದಾರೆ ಕೆಂಪೇಗೌಡ ಏರ್ಪೋರ್ಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಜನವರಿ 16ರಂದು ಏರ್ಪೋರ್ಟ್ ಆಡಳಿತ ಮಂಡಳಿ ಈ ಮೇಲ್ ಗೆ ಈ ಒಂದು ಬೆದರಿಕೆ ಸಂದೇಶ ಬಂದಿತ್ತು.
ದಾವಣಗೆರೆ : ರಾಜ್ಯದಲ್ಲಿ ಈಗಾಗಲೇ ನಾಯಕತ್ವ ಬದಲಾವಣೆ ವಿಚಾರವಾಗಿ ಮತ್ತೆ ಚರ್ಚೆ ಜೋರಾಗಿದ್ದು, ಯಾವಾಗ ರಾಹುಲ್ ಗಾಂಧಿ ಅವರನ್ನು ಮೈಸೂರು ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಭೇಟಿ ಮಾಡಿದರೋ ಇದಕ್ಕೆ ಮತ್ತಷ್ಟು ಪುಷ್ಟಿ ನೀಡಲಾಯಿತು. ಇದೀಗ ಮುಂದಿನ ಮುಖ್ಯಮಂತ್ರಿ ಸತೀಶ್ ಜಾರಕಿಹೊಳಿ ಎಂದು ಅಭಿಮಾನಿಗಳು ಘೋಷಣೆ ಕೂಗಿದ ವಿಚಾರವಾಗಿ, ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು ಅಭಿಮಾನದಿಂದ ಮುಂದಿನ ಸಿಎಂ ಎಂದು ಘೋಷಣೆ ಕೂಗುತ್ತಾರೆ. 2028ಕ್ಕೆ ಸಿಎಂ ಆಕಾಂಕ್ಷಿ ಎಂದು ಹೇಳಿದ್ದೇನೆ ಹೊರತು ಈಗ ನಾನು ಮುಖ್ಯಮಂತ್ರಿ ಅಂತ ಹೇಳಿಲ್ಲ ಎಂದು ಅವರು ತಿಳಿಸಿದರು. ನಾನು ಏನಿದ್ದರೂ ಮುಂದಿನ ಚುನಾವಣೆಗೆ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದೇನೆ. ಅಸ್ಸಾಂ ಚುನಾವಣೆ ಹಾಗೂ ಜಿಬಿಎ ಚುನಾವಣೆ ಸಹ ಬಂದಿದೆ. ಸಿಎಂ ಬದಲಾವಣೆ ಚರ್ಚೆ ನಿಲ್ಲಿಸುವುದು ಸೂಕ್ತ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಗೆ ಏನೋ ಕೆಲಸ, ಇರುತ್ತೆ ಹಾಗಾಗಿ ದೆಹಲಿಗೆ ಹೋಗುತ್ತಾರೆ. ಏನೇ ಇದ್ದರೂ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು…
ಕಲಬುರಗಿ : 10 ಸಾವಿರ ಲಂಚ ಸ್ವೀಕರಿಸುವಾಗ FDA ನೌಕರ ಒಬ್ಬ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಕಲಬುರ್ಗಿ ಜಿಲ್ಲೆಯ ಕಮಲಾಪುರ ತಹಸೀಲ್ದಾರ್ ಕಚೇರಿಯಲ್ಲಿ ನಡೆದಿದೆ. ಎಫ್ ಡಿ ಎ ನೌಕರ ಶಶಿಕುಮಾರ್ ಲಂಚ ಸ್ವೀಕರಿಸುತ್ತಿರುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ. ಜಮೀನು ದಾಖಲೆ ನೀಡುವುದಕ್ಕೆ ಶಶಿಕುಮಾರ್ ಲಂಚಕ್ಕೆ ಬೇಡಿಕೆ ಇಟ್ಟಿದ್ದ. 10 ಸಾವಿರ ಲಕ್ಷ ಸ್ವೀಕರಿಸುವಾಗ ಶಿವಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಕಿಶನ್ ರಾಥೋಡ್ ಎಂಬುವವರ ಬಳಿ ಶಶಿಕುಮಾರ್ 10 ಸಾವಿರ ಲಂಚ ಸ್ವೀಕರಿಸುತ್ತಿದ್ದ. ಲೋಕಾಯುಕ್ತ ಇನ್ಸ್ಪೆಕ್ಟರ್ ಅರುಣ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆದಿದೆ. ಸದ್ಯ ಶಶಿಕುಮಾರ್ ವಶಕ್ಕೆ ಪಡೆದ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
ಬೆಂಗಳೂರು : ಕನ್ನಡ ಬಿಗ್ ಬಾಸ್ ಸೀಸನ್ 12ರ ಫಿನಾಲೆ ಕಾರ್ಯಕ್ರಮ ಎಂದು ನಡೆಯಲಿದ್ದು ಗ್ರಾಂಡ್ ಫಿನಾಲೆಗೆ ಇನ್ನೇನು ಕೆಲವೇ ಗಂಟೆಗಳು ಬಾಕಿ ಇದೆ ನಟ ಕಿಚ್ಚ ಸುದೀಪ್ ಅವರು ಇಂದು ನಡೆಯುವ ಗ್ರಾಂಡ್ ಫಿನಾಲೆಯಲ್ಲಿ ವಿಜೇತರು ಯಾರು ಎಂಬುದನ್ನು ಘೋಷಿಸಲಿದ್ದಾರೆ ಈ ಒಂದು ಬಿಗ್ ಬಾಸ್ ವಿಜೇತರು 50 ಲಕ್ಷ ಹಣ ಹಾಗೂ ಬಿಗ್ ಬಾಸ್ ಸೀಸನ್ 12ರ ಕಪ್ ಪಡೆಯಲಿದ್ದಾರೆ. ಇನ್ನು ಈ ವಿಚಾರವಾಗಿ ನಟ ಕಿಚ್ಚ ಸುದೀಪ್ ಅವರು ಟ್ವೀಟ್ ಮಾಡಿದ್ದು, ಬಿಗ್ ಬಾಸ್ ವಿನ್ನರ್ ಯಾರು ಅನ್ನೋದು ಇಂದು ಸೂರ್ಯಸ್ತದ ಬಳಿಕ ತಿಳಿಯಲಿದೆ. ವಿನ್ನರ್ ಯಾರು ಎಂದು ಘೋಷಣೆ ಮಾಡಲಾಗುತ್ತದೆ. ಇಂದು ಸೂರ್ಯಾಸ್ತ ಬಳಿಕ ಬಿಗ್ ಬಾಸ್ ಸೀಸನ್ 12 ಅಂತ್ಯವಾಗಲಿದ್ದು 13ನೇ ಸೀಸನ್ ಆರಂಭದವರೆಗೂ ಮನೆ ಬಾಗಿಲುಗಳು ಮುಚ್ಚಲಾಗುತ್ತದೆ. ಇಂದಿಗೆ ಬಿಗ್ ಬಾಸ್ 12 ಸೀಸನ್ ಯಶಸ್ವಿಯಾಗಿಸಿದ ಎಲ್ಲರಿಗೂ ಧನ್ಯವಾದಗಳು. ಅದ್ಭುತ ಪ್ರಯಾಣದ ಹೆಸರಿಗೆ ಕಾರಣರಾದ ತಾಂತ್ರಿಕ ತಂಡದವರಿಗೆ ಧನ್ಯವಾದ ಎಂದು ಪ್ರತಿಯೊಬ್ಬರಿಗೂ ಕಿಚ್ಚ…
BREAKING : ರಾಜ್ಯದಲ್ಲಿ ಆನ್ಲೈನ್ ಬೆಟ್ಟಿಂಗ್ ಗೆ ಮತ್ತೊಂದು ಬಲಿ : ಬಾಗಲಕೋಟೆಯಲ್ಲಿ ನೇಣು ಬಿಗಿದುಕೊಂಡು ಯುವಕ ಸೂಸೈಡ್
ಬಾಗಲಕೋಟೆ : ರಾಜ್ಯದಲ್ಲಿ ಆನ್ಲೈನ್ ಬೆಟ್ಟಿಂಗ್ಗೆ ಇದೀಗ ಮತ್ತೊಂದು ಬಲಿಯಾಗಿದೆ. ಆನ್ಲೈನ್ ಬೆಟ್ಟಿಂಗ್ ನಿಂದ ಸಾಲದ ಸುಳಿಗೆ ಸಿಲುಕಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಪಟ್ಟಣದ ಚೌಡಯ್ಯ ನಗರದಲ್ಲಿ ಈ ಒಂದು ಘಟನೆ ಸಂಭವಿಸಿದೆ. ಮನೆಯಲ್ಲಿ ನೇಣು ತೆಗೆದುಕೊಂಡು ರಮೇಶ ಬಂಟನೂರು (21) ಆತ್ಮಹತ್ಯೆಗೆ ಶರಣಾರದ ಯುವಕ ಎಂದು ತಿಳಿದು ಬಂದಿದ್ದು, ರಮೇಶ್ ಬಂಟನೂರು ಜಮಖಂಡಿಯ ಖಾಸಗಿ ಕಾಲೇಜಿನಲ್ಲಿ ಬಿಸಿಎ ಪ್ರಥಮ ವರ್ಷದ ವಿದ್ಯಾರ್ಥಿಯಾಗಿದ್ದ. ಆನ್ಲೈನ್ ಬೆಟ್ಟಿಂಗ್ ನಿಂದ ರಮೇಶ್ ಲಕ್ಷಾಂತರ ಸಾಲ ಮಾಡಿಕೊಂಡಿದ್ದ. ಈ ಹಿಂದೆ ರಮೇಶ್ ಮಾಡಿಕೊಂಡಿದ್ದ ಸಾಲವನ್ನು ತಂದೆಯೇ ಎರಡು ಬಾರಿ ತೀರಿಸಿದ್ದರು. ಮತ್ತೆ ಆನ್ಲೈನ್ ಬೆಟ್ಟಿಂಗ್ ಆಡಬೇಡ ಎಂದು ತಂದೆ ಬುದ್ಧಿವಾದ ಸಹ ಹೇಳಿದ್ದರು. ಬೈದು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ರಮೇಶ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸ್ಥಳಕ್ಕೆ ಜಮಖಂಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ಇಂದು ಕನ್ನಡ ಬಿಗ್ ಬಾಸ್ ಸೀಸನ್ 12ರ ಗ್ರಾಂಡ್ ಫಿನಾಲೆ ನಡೆಯಲಿದ್ದು, ಈಗಾಗಲೇ ಫಿನಾಲೆಯಲ್ಲಿ ಆರು ಸ್ಪರ್ಧಿಗಳು ಬಂದು ಕುಳಿತಿದ್ದಾರೆ. ಇಂದು ನಡೆಯುವ ಫಿನಾಲೆಯಲ್ಲಿ ಯಾರು ಬಿಗ್ ಬಾಸ್ ಸೀಸನ್ 12ರ ಕಪ್ ಗೆಲ್ಲಲಿದ್ದಾರೆ ಎನ್ನುವುದು ಕೆಲವೇ ಗಂಟೆಗಳಲ್ಲಿ ತಿಳಿದು ಬರಲಿದೆ. ಆದರೆ ಅದಕ್ಕೂ ಮೊದಲು ಬಿಗ್ ಬಾಸ್ ಗೆ ಮತ್ತೊಂದು ಶಾಕ್ ಎದುರಾಗಿದ್ದವು ಅರಣ್ಯ ಇಲಾಖೆ ಬಿಗ್ ಬಾಸ್ ಆಯೋಜಕರಿಗೆ ನೋಟಿಸ್ ಜಾರಿ ಮಾಡಿದೆ. ಹೌದು ಕಳೆದ ಕೆಲವು ವಾರಗಳ ಹಿಂದೆ ವಾರದ ಕಥೆ ಕಿಚ್ಚನ ಜೊತೆ ಸಂಚಿಕೆಯೊಂದರಲ್ಲಿ ಕಂಟೆಸ್ಟೆಂಟ್ ಒಬ್ಬರು ರಣಹದ್ದು ಇರುವಂತಹ ಫೋಟೋವೊಂದನ್ನು ತೋರಿಸಿದ್ದರು. ಆಗ ಕಿಚ್ಚ ಸುದೀಪ್ ಇದಕ್ಕೆ ಪ್ರತಿಕ್ರಿಯಿಸಿ, ಹೊಂಚು ಹಾಕಿ ಸಂಚು ಮಾಡಿ ಸರಯಾದ ಸಮಯಕ್ಕೆ ಲಬಕ್ ಎಂದು ಹಿಡಿಯುತ್ತದೆ ಎಂದಿದ್ದರು. ಇದಕ್ಕೆ ಕರ್ನಾಟಕ ರಣಹದ್ದು ಸಂರಕ್ಷಣಾ ಟ್ರಸ್ಟ್ ವಿರೋಧ ವ್ಯಕ್ತಪಡಿಸಿದ್ದರು. ಈ ಸಂಬಂಧ ಸುದೀಪ್ ಅವರು ರಣಹದ್ದುಗಳ ಕುರಿತು ತಪ್ಪಾಗಿ ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ಅರಣ್ಯ ಇಲಾಖೆಯ…














