Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ತುಮಕೂರು : ರಾಜ್ಯದಲ್ಲಿ ಬೆಚ್ಚಿ ಬೀಳಿಸುವಂತಹ ಕೊಲೆಯಾಗಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಹತ್ಯೆಯ ಬಳಿಕ ವ್ಯಕ್ತಿಯ ಮರ್ಮಾಂಗ ಕತ್ತರಿಸಿ ದುಷ್ಕರ್ಮಿಗಳು ವಿಕೃತಿ ಮೆರೆದಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಹಿರೇನಂದಿಹಳ್ಳಿ ಈ ಒಂದು ಬರ್ಬರವಾದ ಹತ್ಯೆ ನಡೆದಿದೆ. ಗ್ರಾಮದ ಬಳಿ ಮೆಕ್ಕೆಜೋಳ ಗದ್ದೆಯಲ್ಲಿ ಕಲ್ಮೇಶ್ ಕೋಟಿ (50) ಭೀಕರವಾಗಿ ಕೊಲೆಯಾಗಿದ್ದಾರೆ. ಕಲ್ಮೇಶ ಹತ್ಯೆಯ ಬಳಿಕ ಮರ್ಮಾಂಗ ಕತ್ತರಿಸಿರುವ ದುಷ್ಕರ್ಮಿಗಳು ವಿಕೃತಿ ಮೆರೆದಿದ್ದಾರೆ. ತುಮಕೂರಿನಲ್ಲಿ ಹೋಂ ಕೇರ್ ನಲ್ಲಿ ಕಲ್ಮೇಶ್ ಕೋಟಿ ಕೆಲಸ ಮಾಡುತ್ತಿದ್ದರು. ಹತ್ತು ದಿನಗಳ ಹಿಂದೆ ಅಷ್ಟೇ ಕಲ್ಮೇಶ್ ಗ್ರಾಮಕ್ಕೆ ಬಂದಿದ್ದರು. ಕೊಲೆಯಾದ ಕಲ್ಮೇಶ್ ಕೋಟಿ ವಿರುದ್ಧ ತಾಯಿಯೊಂದಿಗೆ ವಾಸವಿದ್ದ. 10 ವರ್ಷಗಳ ಹಿಂದೆ ಕಲ್ಮೇಶ್ ಪತ್ನಿ ಕೂಡ ಬಿಟ್ಟು ಹೋಗಿದ್ದಳು. ಕೊಲೆ ವಿಚಾರ ತಿಳಿದು ಗ್ರಾಮಕ್ಕೆ ಪತ್ನಿ ಹಾಗೂ ಮಗ ಆಗಮಿಸಿದ್ದಾರೆ. ಘಟನೆಯಿಂದ ಹಿರೇನಂದಿಹಳ್ಳಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಸ್ಥಳಕ್ಕೆ ಎಸ್ ಪಿ ರಾಮರಾಜನ್ ಹಾಗೂ ಪೊಲೀಸ್ ಸಿಬ್ಬಂದಿ ಭೇಟಿ ನೀಡಿದ್ದಾರೆ. ಹಣಕಾಸು, ಆಸ್ತಿ…

Read More

ಪುಣೆ : ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಶರತ್ ಪವರ್ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಇದೀಗ ಇಂದು ಅವರು ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಅನಾರೋಗ್ಯ ಹಿನ್ನೆಲೆಯಲ್ಲಿ ಪುಣೆಯ ಖಾಸಗಿ ಆಸ್ಪತ್ರೆಗೆ ಶರತ್ ಪವರ್ ಅವರು ದಾಖಲಾಗಿದ್ದಾರೆ. ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ನಿಧನದ ನಂತರ, ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ ಎಲ್ಲಾ ಕಾರ್ಯಕರ್ತರು ಮತ್ತು ಪದಾಧಿಕಾರಿಗಳಿಗೆ ಆಧಾರವಾಗಿರುವ ಶರದ್ ಪವಾರ್ ಅವರ ಆರೋಗ್ಯ ಮತ್ತೆ ಹದಗೆಟ್ಟಿದೆ. ಈ ಕಾರಣದಿಂದಾಗಿ, ಶರದ್ ಪವಾರ್ ಅವರನ್ನು ಮತ್ತೊಮ್ಮೆ ಚಿಕಿತ್ಸೆಗಾಗಿ ಪುಣೆಯ ರೂಬಿ ಹಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಶರದ್ ಪವಾರ್ ಸ್ವಲ್ಪ ನಿಶ್ಯಕ್ತಿ ಅನುಭವಿಸುತ್ತಿದ್ದಾರೆ. ಅವರ ದೇಹದಲ್ಲಿ ನೀರಿನ ಮಟ್ಟ ಕಡಿಮೆ ಇರುವುದರಿಂದ ಅವರು ನಿಶ್ಯಕ್ತಿ ಅನುಭವಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆದ್ದರಿಂದ, ರೂಬಿ ಆಸ್ಪತ್ರೆಯಲ್ಲಿ ಅವರಿಗೆ ಸಲೈನ್ ನೀಡಲಾಗುವುದು ಎಂದು ತಿಳಿದುಬಂದಿದೆ. ನಿಶ್ಯಕ್ತಿ ಹೊರತುಪಡಿಸಿ, ಶರದ್ ಪವಾರ್ ಅವರ ಸ್ಥಿತಿ ಸಂಪೂರ್ಣವಾಗಿ ಸ್ಥಿರವಾಗಿದೆ.

Read More

ರಾಯಚೂರು : ನಗರದ ಎಲ್ ಬಿ ಎಸ್ ನಗರದಲ್ಲಿ ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ಅವಧಿ ಇರುವ ಔಷಧಿಗಳನ್ನು ತಿಪ್ಪೆಯಲ್ಲಿ ಬಿಸಾಡಿ ಹೋಗಿರುವ ಘಟನೆ ವರದಿಯಾಗಿದೆ. ಹೌದು ರಾಯಚೂರಿನಲ್ಲಿ ಸರ್ಕಾರಿ ಆಸ್ಪತ್ರೆಯ ಔಷಧಿಗಳು ತಿಪ್ಪೆ ಸೇರಿವೆ. ಅವಧಿ ಇರುವ ಔಷಧಿಗಳನ್ನು ಸಿಬ್ಬಂದಿಗಳು ತಿಪ್ಪೆಗೆ ಬಿಸಾಡಿದ್ದಾರೆ. ತಿಪ್ಪೆಯಲ್ಲಿನ ಸರ್ಕಾರಿ ಔಷಧಗಳು ಕಂಡು ಸ್ಥಳೀಯರು ಶಾಕ್ ಆಗಿದ್ದಾರೆ. ಅವಧಿ ಇರುವ ಲಕ್ಷಾಂತರ ರೂಪಾಯಿ ಮೌಲ್ಯದ ವಿವಿಧ ಬಗೆಯ ಸಿರಪ್ ಗಳು ಕಂಡು ಬಂದಿವೆ. ರಾಯಚೂರಿನ ಎಲ್ ಬಿ ಎಸ್ ನಗರದ ಸ್ಮಶಾನದ ಬಳಿಯ ತಿಪ್ಪೆಯಲ್ಲಿ ಪತ್ತೆಯಾಗಿದೆ. ಕ್ರಮಕ್ಕೆ ಸ್ಥಳೀಯರು ಒತ್ತಾಯಿಸಿದ್ದಾರೆ.

Read More

ಚಿಕ್ಕಮಗಳೂರು : ಚಿಕ್ಕಮಗಳೂರಲ್ಲಿ ಕಾಡಾನೆ ಉಪಟಳ ನಿಂತಿಲ್ಲ ಇದೀಗ ಕಾಡಾನೆದೊಳಗೆ ಮತ್ತೊಂದು ಬಲಿಯಾಗಿದೆ. ಹೌದು, ಕಾಡಾನೆ ದಾಳಿಗೆ ಹೊಸಪೇಟೆ ಮೂಲದ ಬೋರಮ್ಮ (34) ಇದ್ದಾರೆ. ಚಿಕ್ಕಮಗಳೂರು ತಾಲೂಕಿನ ಪುರ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ನಾಗೇಶ ಗೌಡಗೆ ಸೇರಿದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಕಾಡಾನೆ ದಾಳಿ ಮಾಡಿದೆ. ಏಳು ದಿನದ ಹಿಂದೆಯೂ ನಾಗೇಶಗೌಡ ತೋಟದಲ್ಲಿಯೇ ಕಾಡಾನೆ ದಾಳಿ ಮಾಡಿತ್ತು. ಕಾಡಾನೆ ದಾಳಿಗೆ ಬಲಿಯಾಗಿದ್ದ ಹಾವೇರಿ ಮೂಲದ ಕಾರ್ಮಿಕ ಯಲ್ಲಪ್ಪ. ಒಂದೆಡೆ ಕಾಡಾನೆ ಸೆರಿಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸುತ್ತಿದ್ದರೆ, ಮತ್ತೊಂದು ಕಡೆ, ಕಾರ್ಮಿಕ ಮಹಿಳೆಯನ್ನು ಬಳಿ ಪಡೆದಿದೆ. ಕಾಡಾನೆ ಸರಿಗೆ ಏಳು ಕುಮ್ಕಿ ಆನೆಗಳ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ಕಾರ್ಯಾಚರಣೆ ವೇಳೆ ದಾಳಿ ಮಾಡಿ ಮಹಿಳೆಯನ್ನು ಬಳಿ ಪಡೆದ ಕಾಡಾನೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ನಕಲಿ ಇನ್ಸ್ಟಾಗ್ರಾಮ್ ಖಾತೆ ತೆರೆದು ಮಹಿಳೆಯರಿಗೆ ಕಿರುಕುಳ ನೀಡಿರುವ ಘಟನೆ ವರದಿಯಾಗಿದೆ ಪಿ ಎಸ್ ಐ ಹನುಮೇಶ್ ವಿರುದ್ಧ ಹಿರಿಯ ಅಧಿಕಾರಿಗಳಿಗೆ ಈ ಕುರಿತು ದೂರು ನೀಡಲಾಗಿದೆ. ಬೆಂಗಳೂರಿನ ಮಹದೇವಪುರ ಠಾಣೆಯ ಪಿಎಸ್ಐ ಹನುಮೇಶ್ ನಕಲಿ ಇನ್ಸ್ಟಾಗ್ರಾಮ್ ಖಾತೆ ತೆರೆದು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಮಹಿಳೆಯರಿಗೆ ಲೈಂಗಿಕ ದೌರ್ಜನ್ಯಸೆಗಿರುವ ಆರೋಪದಲ್ಲಿ ಇದೀಗ ದೂರು ನೀಡಲಾಗಿದೆ. ಕಾನ್ಸ್ಟೇಬಲ್ ಪತ್ನಿಗೆ ಲೈಂಗಿಕ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ದೂರು ಸಲ್ಲಿಸಲಾಗಿದೆ. ವೈಟ್‌ಫೀಲ್ಡ್ ಉಪವಿಭಾಗದ ಎಸಿಪಿ ಯಿಂದ ಪ್ರಕರಣದ ವಿಚಾರಣೆ ನಡೆಯುತ್ತಿದೆ. ನಕಲಿ ಖಾತೆ ತೆರೆದು ಕ್ವಾಟರ್ಸ್ ಮಹಿಳೆಯರಿಗೆ ಪಿಎಸ್ಐ ಹನುಮೇಶ್ ಮೆಸೇಜ್ ಮಾಡುತ್ತಿದ್ದ ಎನ್ನುವ ಆರೋಪ ಕೇಳಿಬಂದಿದೆ.

Read More

ಮಂಡ್ಯ : ಮಾಜಿ ಶಾಸಕ ಸುರೇಶ್ ಗೌಡ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದೆ. ಮಂಡ್ಯ ಜಿಲ್ಲೆಯ ಬೊಂತೆಕೊಪ್ಪಲು ಸಮೀಪ ನಿನ್ನೆ ರಾತ್ರಿ ಒಂದು ಅಪಘಾತ ನಡೆದಿದೆ.ಅದೃಷ್ಟವಶಾತ್ ಅಪಘಾತದಲ್ಲಿ ಮಾಜಿ ಶಾಸಕ ಸುರೇಶ್ ಗೌಡ ಪ್ರಾಣಪಾಯದಿಂದ ಪಾರಾಗಿದ್ದಾರೆ. ಸುರೇಶ ಗೌಡ ಮಂಡ್ಯ ಜಿಲ್ಲೆಯ ನಾಗಮಂಗಲ ಕ್ಷೇತ್ರದ ಮಾಜಿ ಶಾಸಕರಾಗಿದ್ದಾರೆ. ಪಕ್ಷದ ಕಾರ್ಯಕರ್ತರ ಮದುವೆಗೆ ಸುರೇಶ್ ಗೌಡ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಅಪಘಾತದ ರಭಸಕ್ಕೆ ಭಾಗಶಹ ಕಾರು ಜಖಂಗೊಂಡಿದೆ. ಸುರೇಶ್ ಗೌಡ ಕೈಗೆ ಪೆಟ್ಟಾಗಿದ್ದು, ಚಾಲಕನಿಗೂ ಸಣ್ಣಪುಟ್ಟ ಗಾಯಗಳಾಗಿವೆ. ತಕ್ಷಣ ಗನ್ ಮ್ಯಾನ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸುರೇಶ್ ಗೌಡರನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ.

Read More

ಮೈಸೂರು : ಮಹಿಳೆಯರ ಮುಂದೆ ಶಿಕ್ಷಕ ಮೂತ್ರ ವಿಸರ್ಜನೆ ಮಾಡುತ್ತಿದ್ದ ಆರೋಪ ಹಿನ್ನೆಲೆಯಲ್ಲಿ, ಇದನ್ನು ಪ್ರಶ್ನಿಸಿದ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ನಡೆದಿದೆ ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಚಿಕ್ಕನಾಯಕನಹಳ್ಳಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಸಿಎಂ ಗೋಪಾಲ್ ಮತ್ತು ಆತನ ಪುತ್ರ ಅಭಿಷೇಕಗೆ ಚಾಕು ಇರಿಲಾಗಿದೆ. ಸರ್ಕಾರಿ ಪ್ರೌಢಶಾಲೆ ಶಿಕ್ಷಕ ಸಿಎಂ ಮಂಜುನಾಥನಿಂದ ಈ ಒಂದು ಕೃತ್ಯ ನಡೆದಿದೆ. ಸಿಎಂ ಗೋಪಾಲ ಸ್ಥಿತಿ ಗಂಭೀರವಾಗಿದ್ದು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿಕ್ಷಕ ಮಂಜುನಾಥನನ್ನು ಸಾಲಿಗ್ರಾಮ ಪೊಲೀಸರು ಇದೀಗ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಶಿಕ್ಷಕ ಮಂಜುನಾಥನನ್ನು ಅಮಾನತು ಮಾಡಿ ಡಿಡಿಪಿಐ ಆದೇಶ ಹೊರಡಿಸಿದ್ದಾರೆ.

Read More

ಚಿಕ್ಕಮಗಳೂರು : ಪತ್ನಿಯ ಅಕ್ರಮ ಸಂಬಂಧ ಮತ್ತು ಆಕೆ ತನ್ನ ವಿರುದ್ಧವೇ ನೀಡಿದ ಸುಳ್ಳು ದೂರಿನಿಂದ ಮನನೊಂದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಮನು ಎಂದು ತಿಳಿದುಬಂದಿದೆ. ವೃತ್ತಿಯಲ್ಲಿ ಚಾಲಕನಾಗಿದ್ದ ಮನು, ಸಖರಾಯಪಟ್ಟಣ ಮೂಲದ ಹರಿಣಿ ಎಂಬಾಕೆಯನ್ನು ಪ್ರೀತಿಸಿ ಮದುವೆಯಾಗಿದ್ದನು. ದಾಂಪತ್ಯ ಜೀವನ ಸುಗಮವಾಗಿಯೇ ಸಾಗುತ್ತಿತ್ತು. ಆದರೆ, ಇತ್ತೀಚಿನ ದಿನಗಳಲ್ಲಿ ಪತ್ನಿ ಹರಿಣಿಗೆ ಪಕ್ಕದ ಮನೆಯ ಅಶೋಕ್ ಎಂಬಾತನ ಜೊತೆ ಸಲುಗೆ ಬೆಳೆದಿತ್ತು. ಕಳೆದ ರಾತ್ರಿ ಮನು ತನ್ನ ಪತ್ನಿಯ ಮೊಬೈಲ್‌ನಲ್ಲಿ ಅಶೋಕ್ ಕಳುಹಿಸಿದ್ದ ಸಂದೇಶಗಳನ್ನು ನೋಡಿದ್ದನು. ಇದೇ ವಿಚಾರವಾಗಿ ಮನು ಮತ್ತು ಅಶೋಕ್ ನಡುವೆ ತೀವ್ರ ಗಲಾಟೆ ನಡೆದಿದೆ. ಈ ವೇಳೆ ಅಶೋಕ್, “ನಿನ್ನ ಹೆಂಡತಿ ಜೊತೆ ನನಗೆ ಸಂಬಂಧ ಇರುವುದು ನಿಜ” ಎಂದು ಹೇಳಿ ಮನುಗೆ ಅವಮಾನ ಮಾಡಿದ್ದಾನೆ ಎನ್ನಲಾಗಿದೆ. ಈ ಗಲಾಟೆಯ ಬೆನ್ನಲ್ಲೇ ಪತ್ನಿ ಹರಿಣಿ, ಗಂಡ ಮನು ವಿರುದ್ಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ…

Read More

ಮುಂಬೈ : ಕಳೆದ ವರ್ಷ ಬಾಲಿವುಡ್ ಸಿನಿಮಾ ಧುರಂಧರ್ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನಗೊಂಡಿತ್ತು. ಇದೀಗ ಮಾರ್ಚ್ 20ರಂದು ಧುರಂಧರ್-2 ಸಿನಿಮಾ ರಿಲೀಸ್ ಆಗಲಿದ್ದು ಸಿನಿಮಾ ಬಿಡುಗಡೆಗೆ ಮುನ್ನವೇ ಇದೀಗ ನಟ ರಣವೀರ್ ಸಿಂಗ್ ಗೆ ಬೆದರಿಕೆ ಸಂದೇಶ ಬಂದಿದೆ.. ಹೌದು ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಗೆ ಒಂದೇ ತಿಂಗಳಲ್ಲಿ ಎರಡನೇ ಬಾರಿ ಬೆದರಿಕೆ ಸಂದೇಶ ಬಂದಿದೆ. ಅವರಿಂದ 10 ಕೋಟಿ ರೂಪಾಯಿ ಸುಲಿಗೆ ಮಾಡುವ ಉದ್ದೇಶದಿಂದ ಈ ರೀತಿ ಬೆದರಿಕೆ ಹಾಕಲಾಗಿದೆ. ಹಾಗಾಗಿ ರಣವೀರ್ ಸಿಂಗ್ ಅವರಿಗೆ ಮುಂಬೈ ಪೊಲೀಸರು ಹೆಚ್ಚಿನ ಭದ್ರತೆ ನೀಡಿದ್ದಾರೆ. ವರದಿಗಳ ಪ್ರಕಾರ, ರಣವೀರ್ ಸಿಂಗ್ ಅವರ ಮ್ಯಾನೇಜರ್ ವಾಟ್ಸಪ್​​ಗೆ ಬೆದರಿಕೆ ಸಂದೇಶ ಬಂದಿದೆ. ಅಮೆರಿಕ ಮೂಲದ ಮೊಬೈಲ್ ಸಂಖ್ಯೆಯಿಂದ ಸಂದೇಶ ಕಳಿಸಿ ಬೆದರಿಕೆ ಹಾಕಲಾಗಿದೆ. ಮುಂಬೈ ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ತೀವ್ರಗೊಳಿಸಿದ್ದಾರೆ. ಇಂಥ ಪ್ರಕರಣಗಳು ಆಗಾಗ ನಡೆಯುತ್ತಿರುವುದರಿಂದ ಸೆಲೆಬ್ರಿಟಿಗಳಲ್ಲಿ ಆತಂಕ ಹೆಚ್ಚಾಗಿದೆ. ಗ್ಯಾಂಗ್​ಸ್ಟರ್ ಲಾರೆನ್ಸ್ ಬಿಷ್ಣೋಯ್ ಕಡೆಯಿಂದ ಈ ಮೊದಲು…

Read More

ಚಿತ್ರದುರ್ಗ : ಚಿತ್ರದುರ್ಗದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಪಟ್ಟರೆಹಳ್ಳಿ ಗ್ರಾಮದ ಬಳಿ ಹಿಟ್ ಅಂಡ್ ರನ್ ಗೆ ಇಬ್ಬರು ಬಲಿಯಾಗಿದ್ದಾರೆ, ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಪಟ್ಟರೆಹಳ್ಳಿ ಗ್ರಾಮದಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ರಸ್ತೆಬದಿ ನಿಂತಿದ್ದವರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಘಟನೆಯಲ್ಲಿ ಮತ್ತೆ ಇಬ್ಬರಿಗೆ ಗಂಭೀರವಾದ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರು ಕಟ್ಟಿದ್ದರಿಂದ ರಸ್ತೆ ಬದಿ ನಾಲ್ವರು ರಿಪೇರಿಗಾಗಿ ನಿಂತಿದ್ದರು. ಈ ವೇಳೆ ಅಪಚಿತವಾ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನಪ್ಪಿದ್ದರೆ,  ಇಬ್ಬರಿಗೆ ಗಾಯಗಳಾಗಿವೆ. ಅಪಘಾತದ ಬಳಿಕ ವಾಹನ ಸಮೇತ ಚಾಲಕ ಪರಾರಿಯಾಗಿದ್ದಾನೆ. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More