Subscribe to Updates
Get the latest creative news from FooBar about art, design and business.
Author: kannadanewsnow05
ಕೋಲಾರ ಸೆ 28: ನಮ್ಮ ಸಮುದಾಯದ ಪ್ರತಿಭೆಗಳು ಸಮಾಜದ ಆಸ್ತಿಗಳಾಗಿ ಅರಳಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಕರೆ ನೀಡಿದರು. ಕರ್ನಾಟಕ ರಾಜ್ಯ ಕನಕನೌಕರರ ಸಂಘ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪ್ರತಿಭಾವಂತ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು. ನಮ್ಮ ಕುಲಕ್ಕೆ, ಸಮುದಾಯಕ್ಕೆ ಒಂದು ಶ್ರಮಿಕ ಪರಂಪರೆ ಇದೆ. ಈ ಪರಂಪರೆಯ ಒಳಗೆ ಅದ್ಭುತವಾದ ಮಾದರಿ ವ್ಯಕ್ತಿತ್ವಗಳೂ ಇವೆ. ಛಲ ಮತ್ತು ಹೋರಾಟಕ್ಕೆ ಸಂಗೊಳ್ಳಿ ರಾಯಣ್ಣ ಮಾದರಿ ಆದರೆ, ವಿಶ್ವಪ್ರಜ್ಞೆಗೆ ಕನಕದಾಸರು ಮಾದರಿ ಆಗಿದ್ದಾರೆ. ಶಿಕ್ಷಣಕ್ಕೆ ಅಹಲ್ಯಾಬಾಯಿ ಹೋಳ್ಕರ್ ಮಾದರಿಯಾದರೆ ಸಾಮಾಜಿಕ ಬದ್ಧತೆಗೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾದರಿಯಾಗಿದ್ದಾರೆ. ಈ ಎಲ್ಲಾ ಹಿರಿಯ ಮಾದರಿಗಳು ಸಮಾಜದ ಆಸ್ತಿ ಆಗಿರುವುದು ನಮಗೆಲ್ಲಾ ಹೆಮ್ಮೆ ತರುವ ಜೊತೆಗೆ ಪ್ರೇರಣೆ ಕೂಡ ಆಗಲಿ ಎಂದು ಕರೆ ನೀಡಿದರು. ಪ್ರತಿಭೆ ಎನ್ನುವುದು ಒಟ್ಟು ಸಮಾಜದ ಕೊಡುಗೆ. ಹೀಗಾಗಿ ಪ್ರತಿಭಾವಂತರು ಸಮಾಜದ ಆಸ್ತಿ ಆಗಬೇಕು ಎನ್ನುವುದು ನನ್ನ ಭಾವನೆ. ಪ್ರತಿಭೆ ಪ್ರತಿಯೊಬ್ಬರ ಒಳಗೂ ಇರುತ್ತದೆ. ಈ…
ಕೊಪ್ಪಳ : ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ & ಆರ್ಥಿಕ ಸಮೀಕ್ಷೆ ವಿಚಾರವಾಗಿ ಕರ್ತವ್ಯಲೋಪ ಹಿನ್ನೆಲೆಯಲ್ಲಿ ಕೊಪ್ಪಳದ ಓರ್ವ ಶಿಕ್ಷಕನನ್ನು ಅಮಾನತು ಮಾಡಿ, ಅಮಾನತು ಮಾಡಿ ಕೊಪ್ಪಳ ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್ ಆದೇಶ ಹೊರಡಿಸಿದ್ದಾರೆ. ಜೂಲಕುಂಟಿ ಸರ್ಕಾರಿ ಶಾಲೆಯ ಸಹಾಯಕ ಶಿಕ್ಷಕ ರಾಮಪ್ಪ ಸಸ್ಪೆಂಡ್ ಆಗಿದ್ದು, ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಜೂಲಕುಂಟಿ ಗ್ರಾಮದಲ್ಲಿ ಶಿಕ್ಷಕರಾಗಿ ಕೆಲಸ ನಿರ್ವಹಿಸುತ್ತಿದ್ದು, ಸಮೀಕ್ಷೆಯಲ್ಲಿ ಶೂನ್ಯ ಪ್ರಗತಿ ಸಾಧಿಸಿದ ಹಿನ್ನೆಲೆಯಲ್ಲಿ ರಾಮಪ್ಪನನ್ನು ಅಮಾನತುಗೊಳಿಸಲಾಗಿದೆ. ಕೆಲದಿನಗಳಿಂದ ಮೊಬೈಲ್ ಸ್ವಿಚ್ ಆಫ್ ಮಾಡಿ ಕೊಂಡಿರುವ ರಾಮಪ್ಪ ಇದುವರೆಗೂ ಯಾವುದೇ ಮನೆಗೆ ಸಮೀಕ್ಷೆಗೆ ತೆರಳದ ಕರ್ತವ್ಯ ಲೋಪ ಎಸಗಿಸಿದ್ದಾನೆ. ಹೀಗಾಗಿ ಸಹಾಯಕ ಶಿಕ್ಷಕನನ್ನು ಅವನತ ಮಾಡಿ ಡಿಸಿ ಆದೇಶ ಹೊರಡಿಸಿದ್ದಾರೆ.
ಉಡುಪಿ : ಇತ್ತೀಚಿಗೆ ಉಡುಪಿಯಲ್ಲಿ, ರೌಡಿ ಶೀಟರ್ ಸೈಫ್ ಯಾನೆ ಸೈಫುದ್ದೀನ್ ಅತ್ರಾಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಲ್ಪೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಉಡುಪಿ ಮಿಷನ್ ಕಂಪೌಂಡ್ ಬಳಿಯ ನಿವಾಸಿ ಮುಹಮ್ಮದ್ ಫೈಸಲ್ ಖಾನ್ (27), ಉಡುಪಿ ಕರಂಬಳ್ಳಿ ಜನತಾ ಕಾಲೋನಿಯ ಮುಹಮದ್ ಶರೀಫ್ (37) ಹಾಗೂ ಸುರತ್ಕಲ್ ಕೃಷಾಪುರದ ಅಬ್ದುಲ್ ಶುಕೂರು ಯಾನೆ ಅದ್ದು(43) ಬಂಧಿತ ಆರೋಪಿಗಳು. ಯಾವುದೋ ವ್ಯವಹಾರದ ಕಾರಣಕ್ಕಾಗಿ ಸಹಚರರೇ ಸೇರಿಕೊಂಡು ಎಕೆಎಂಎಸ್ ಬಸ್ ಮಾಲೀಕ ಸೈಫುದ್ದೀನ್ನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಶನಿವಾರ ಮಣಿಪಾಲದಿಂದ ಕೊಡವೂರಿಗೆ ಒಂದೇ ಕಾರಿನಲ್ಲಿ ತೆರಳಿದ್ದ ಮೂವರು ಸಹಚರರು, ಸೈಫುದ್ದೀನ್ ತನ್ನ ಕೊಡವೂರಿನ ಮನೆಯ ಬಾಗಿಲು ತೆಗೆಯುತ್ತಿದ್ದಂತೆ ಹಿಂದಿನಿಂದ ಚೂರಿ ಹಾಗೂ ತಲವಾರಿನಿಂದ ಇರಿದು ಕೊಲೆಗೈದಿದ್ದರು. ಅಲ್ಲದೆ, ಈ ಹಿಂದೆ ಸೈಫುದ್ದೀನ್ ಮುಂದಾಳತ್ವದಲ್ಲಿ ನಡೆದ ಕೊಲೆ ಪ್ರಕರಣಗಳಲ್ಲಿಯೂ ಈ ಮೂವರು ಭಾಗಿಯಾಗಿದ್ದರು. ಈ ಮೂವರು ಆರೋಪಿಗಳು ಸೈಫುದ್ದೀನ್ನ ಜೊತೆಗಿದ್ದು, ವ್ಯವಹಾರಗಳಲ್ಲಿ ಸಹಕಾರ ನೀಡುತ್ತಿದ್ದರು. ಈ ನಿಟ್ಟಿನಲ್ಲಿ ಪೊಲೀಸರು ಮೂರು ತಂಡ…
ವೀಳ್ಯದೆಲೆಯನ್ನು ಸಾಮಾನ್ಯವಾಗಿ ನಮ್ಮ ಮನೆಯಲ್ಲಿರುವ ಹಿರಿಯರು ತಿನ್ನುವುದನ್ನು ನೋಡಿದ್ದೇವೆ. ಆದರೆ ಇದನ್ನು ದೇವರಿಗೂ ಅರ್ಪಿಸಲಾಗುತ್ತದೆ ಎನ್ನುವುದು ಕೆಲವರಿಗೆ ಮಾತ್ರ ತಿಳಿದಿದೆ. ಕೆಲವೊಂದು ಸಂಪ್ರಧಾಯಗಳ ಪ್ರಕಾರ ಊಟದ ನಂತರ ವೀಳ್ಯದೆಲೆಯನ್ನು ಸೇವಿಸುತ್ತಾರೆ. ವೀಳ್ಯದೆಲೆಯಲ್ಲಿ ಔಷಧೀಯ ಗುಣವೂ ಕೂಡ ಇದೆ ಎಂಬೂದನ್ನು ವಿಜ್ಞಾನ ತಿಳಿಸಿದೆ. ಹಿಂದೂ ಧರ್ಮದಲ್ಲಿ ವೀಳ್ಯದೆಲೆ ಮತ್ತು ಅಡಿಕೆಯನ್ನು ಹೆಚ್ಚಿನ ಪೂಜೆ ಹಾಗೂ ದೇವರ ಕಾರ್ಯಕ್ರಮಗಳಲ್ಲಿ ಉಪಯೋಗಿಸುತ್ತಾರೆ. ಈ ವೀಳ್ಯದೆಲೆ ಮತ್ತು ಅಡಿಕೆಯನ್ನು ದೇವರಿಗೆ ಅರ್ಪಿಸುವುದರಿಂದಾಗುವ ಉಪಯೋಗವೇನು ಗೊತ್ತಾ.? ಯಾವ ಕಾರಣಕ್ಕಾಗಿ ವೀಳ್ಯದೆಲೆ ಹಾಗೂ ಅಡಿಕೆಯನ್ನು ದೇವರಿಗೆ ಅರ್ಪಿಸಲಾಗುತ್ತದೆ ನೋಡಿ: ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ…
ಬೆಂಗಳೂರು : ನಮ್ಮ ಕುಟುಂಬ ಮುಗಿಸೋಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮುಂದಾಗಿದ್ದಾರೆ. ಡಿಕೆಶಿ ನೀವು ಮುಂದೆ ಜೈಲಿಗೆ ಹೋಗುವ ದಿನ ಬರುತ್ತದೆ. ನೀವು ಯಾವ ರೀತಿ ಆಟ ಆಡುತ್ತಿದ್ದೀರಿ ನನಗೆ ಗೊತ್ತಿದೆ. ಎಲ್ಲದಕ್ಕೂ ದೇವರು ಮುಂದಿನ ದಿನಗಳಲ್ಲಿ ತಕ್ಕ ಉತ್ತರ ಕೊಟ್ಟೆ ಕೊಡುತ್ತಾನೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆ ಬಿಡದಿಯಲ್ಲಿ ಸರ್ಕಾರದಿಂದ ಮಾಡಲು ಉದ್ದೇಶಿಸಿರುವ ಇಂಟಿಗ್ರೇಟೆಡ್ ಟೌನ್ಶಿಪ್ ವಿರುದ್ಧ ರೈತರ ಹೋರಾಟಕ್ಕೆ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ, ವರ್ಚುವಲ್ ಲೈವ್ ಮೂಲಕ ಮಾತನಾಡಿದ ಹೆಚ್ಡಿಕೆ, ನಾನು ಬದುಕಿರುವವರೆಗೂ ರೈತರ ಒಂದು ಇಂಚು ಭೂಮಿಯನ್ನು ವಶಪಡಿಸಿಕೊಳ್ಳುವುದಕ್ಕೆ ಬಿಡೋದಿಲ್ಲ. ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಜೈಲಿಗೆ ಹೋಗೋ ಕಾಲ ಕೂಡ ಸನ್ನಿಹಿತವಾಗಿದ್ದು, ರೈತರ ಜೊತೆ ನಾನು ನಿಲ್ಲುತ್ತೇನೆ. ಅನಿವಾರ್ಯವಾದರೆ ನಾನೇ ಬರುತ್ತೇನೆ ಎಂದರು. ಕಳೆದ ಹಲವು ದಿನಗಳಿಂದ ಬೆಂಗಳೂರು ದಕ್ಷಿಣ ಜಿಲ್ಲೆ ಬಿಡದಿಯಲ್ಲಿ ಸರ್ಕಾರದಿಂದ ಮಾಡಲು…
ಕೋಲಾರ : ಸಿಎಂ ಸಿದ್ದರಾಮಯ್ಯ ಅವರಿಗೆ ಸಾಮಾಜಿಕ ಬದ್ಧತೆ ಹಾಗೂ ಶೋಷಣೆ ಗೊತ್ತಿದೆ ಹಾಗಾಗಿಯೇ ಅವರು ಇಂದು ಜಾತಿಗಣತಿ ಮಾಡಿಸುತ್ತಿದ್ದಾರೆ. ಕುರುಬ ಸಮಾಜದವರು ಯಾಕೆ ಹಿಂದೂ ಧರ್ಮ ಬರೆಸಬೇಕು ಅಂದರೆ, ಹಿಂದೂ ಸಾಮ್ರಾಜ್ಯವನ್ನು ಕಟ್ಟಿ ಬೆಳೆಸಿದಂತವರು ಹಾಲುಮತಸ್ಥರು ಎಂದು ಕೋಲಾರದಲ್ಲಿ ಕಾಗಿನೆಲೆ ಶಾಖಾ ಮಠದ ಈಶ್ವರಾನಂದಪುರಿ ಶ್ರೀಗಳು ಹೇಳಿಕೆ ನೀಡಿದರು. ಕೋಲಾರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬೇರೆ ಯಾರೇ ಸಿಎಂ ಇದಿದ್ದರೆ ಗಣತಿ ನಡೆಯುತ್ತಿರಲಿಲ್ಲ ಜನರ ಆರ್ಥಿಕ ಸಾಮಾಜಿಕ ಶೈಕ್ಷಣಿಕ ಪರಿಸ್ಥಿತಿ ತಿಳಿಯಲು ಸಮೀಕ್ಷೆ ಮಾಡಲಾಗುತ್ತಿದೆ ಸಿಎಂ ಸಿದ್ದರಾಮಯ್ಯ ಕೈಗೊಂಡಿರುವ ಎರಡನೇ ಬಾರಿಯ ಸಮೀಕ್ಷೆ ಯಶಸ್ವಿಯಾಗಬೇಕು ರಾಜ್ಯದಲ್ಲಿ ಧರ್ಮ ಬರೆಸುವ ವಿಚಾರದಲ್ಲಿ ಸಾಕಷ್ಟು ಗೊಂದಲದಲ್ಲಿದ್ದಾರೆ. ಕೆಲವರು ವೀರಶೈವ ಅಂತ ಬರೆಸಿದರೆ ಕೆಲವರು ಲಿಂಗಾಯತ ಬರಿಸುತ್ತಾರೆ. ಕೆಲವರು ಹಿಂದೂ ಎಂದು ಮತ್ತೆ ಕೆಲವರು ಬೇರೆ ಧರ್ಮವನ್ನು ಬರೆಸುತ್ತಾರೆ. ಯಾವುದೇ ಗೊಂದಲ ಉಪಜಾತಿಗಳಿಲ್ಲದ ಜಾತಿ ಎಂದರೆ ಕುರುಬ ಸಮಾಜ. ಇಂದು ಅಖಂಡ ಕರ್ನಾಟಕದಲ್ಲಿ ಕುರುಬ ಸಮಾಜಕ್ಕೆ ಯಾವುದೇ ಗೊಂದಲ ಇಲ್ಲ. ಕುರುಬ ಸಮಾಜದವರು ಯಾಕೆ…
ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಘೋರವಾದ ದುರಂತ ಒಂದು ಸಂಭವಿಸಿದ್ದು, ಮೀನಿಗೆ ಬಲೆ ಹಾಕಲು ಹೋಗಿ ಕೆರೆಯಲ್ಲಿ ಮುಳುಗಿ ಇಬ್ಬರು ಸಾವನಪ್ಪಿದ್ದಾರೆ. ಬೆಂಗಳೂರು ಹೊರವಲಯದ ಹೆಸರಘಟ್ಟದ ಕೆರೆಯಲ್ಲಿ ಈ ಒಂದು ಘಟನೆ ನಡೆದಿದೆ. ಕೆರೆಯಲ್ಲಿ ಮುಳುಗಿ ಆನಂದ (32) ಹಾಗೂ ಅನಂತ (27) ಮೃತರು ಎಂದು ತಿಳಿದು ಬಂದಿದೆ. ಮೀನಿಗೆ ಬಲೆ ಹಾಕಲು ಇಬ್ಬರು ತೆಪ್ಪದಲ್ಲಿ ಕೆರೆಯ ಮಧ್ಯೆ ತೆರಳಿದ್ದಾರೆ. ಕೆರೆಯ ಮಧ್ಯದಲ್ಲಿ ತೆಪ್ಪದ ಹುಟ್ಟು ಕೈ ತಪ್ಪಿ ಕೆರೆಗೆ ಬಿದ್ದಿತ್ತು. ಈ ವೇಳೆ ಆನಂದ ನೀರಿಗೆ ಧುಮುಕಿ ತೆಪ್ಪವನ್ನು ಹಿಡಿದುಕೊಂಡಿದ್ದ. ಆನಂದ ನನ್ನ ಮೇಲೆ ಎತ್ತಲು ಅನಂತ ಸಹ ನೀರಿಗೆ ಧುಮುಕಿದ್ದಾನೆ. ಈ ವೇಳೆ ಆನಂದ್ ಮತ್ತು ಅನಂತ ನೀರಿನಲ್ಲಿ ಮುಳುಗಿ ಸಾವನಪ್ಪಿದ್ದಾರೆ. ಸ್ಥಳಕ್ಕೆ ಸೋಲದೇವನಹಳ್ಳಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಮೈಸೂರು : ಬಾಲಕಿಯರನ್ನ ವೇಶ್ಯಾವಾಟಿಕೆಗೆ ತಳುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮೈಸೂರಿನ ವಿಜಯನಗರ ಠಾಣೆ ಪೋಲಿಸರಿಂದ ಇಬ್ಬರು ಆರೋಪಿಗಳ ಬಂಧನವಾಗಿದೆ. ಶೋಭಾ ಹಾಗೂ ತುಳಸಿಕುಮಾರ್ ಎನ್ನುವ ಆರೋಪಿಗಳು ಅರೆಸ್ಟ್ ಆಗಿದ್ದಾರೆ. ಒಡನಾಡಿ ಸಂಸ್ಥೆಯ ಮಾಹಿತಿಯನ್ನು ಆಧರಿಸಿ ವಿಜಯನಗರ ಠಾಣೆ ಪೋಲೀಸರು ಈ ಒಂದು ಕಾರ್ಯಾಚರಣೆ ನಡೆಸಿದ್ದಾರೆ.ವಾಟ್ಸಪ್ ವಿಡಿಯೋ ಮೂಲಕ ಬಾಲಕಿಯನ್ನು ಆರೋಪಿಗಳು ತೋರಿಸಿದ್ದರು.ಆರೋಪಿಗಳು 12 ರಿಂದ 13 ವರ್ಷದ ಬಾಲಕಿ ತೋರಿಸಿ 20 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಪೊಲೀಸರು ಇಬ್ಬರು ಬಾಲಕಿಯರನ್ನು ರಕ್ಷಿಸಿ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.
ಬೆಂಗಳೂರು : ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ. 7.69 ಕೋಟಿ ಅಂದಾಜು ಮೌಲ್ಯದ ಒಟ್ಟು 5 ಎಕರೆ 0.07.20 ಗುಂಟೆ ಸರ್ಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ.ಜಗದೀಶ ಅವರ ನೇತೃತ್ವದಲ್ಲಿ ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಯಿತು. ಇಂದು ಬೆಂಗಳೂರು ನಗರ ಜಿಲ್ಲೆಯಾದ್ಯಂತ ವಿವಿಧ ತಾಲ್ಲೂಕುಗಳ ತಹಶೀಲ್ದಾರ್ ಗಳು ತಮ್ಮ ವ್ಯಾಪ್ತಿಯಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ ಗುಂಡುತೋಪು, ಸ್ಮಶಾನ, ಸರ್ಕಾರಿ ಓಣಿ, ಬಿಳಿಕೆರೆ ಜಾಜಿಮುಳಗಡೆ, ಖರಾಬು, ಗೋಮಾಳ ಮತ್ತು ಕೆರೆ ಜಾಗಗಳಿಗೆ ಭೇಟಿ ನೀಡಿ ತೆರವು ಕಾರ್ಯಾಚರಣೆ ಕೈಗೊಂಡರು. ಬೆಂಗಳೂರು ದಕ್ಷಿಣ ತಾಲ್ಲೂಕಿನ ಕೆಂಗೇರಿ ಹೋಬಳಿಯ ದೇವಗೆರೆ ಗ್ರಾಮದ ಸ.ನಂ 71 ರ ಗುಂಡುತೋಪು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.22 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ.0.50 ಲಕ್ಷಗಳಾಗಿರುತ್ತದೆ. ತಾವರೆಕೆರೆ ಹೋಬಳಿಯ ದೊಡ್ಡೇರಿ ಗ್ರಾಮದ ಸ.ನಂ 62 ರ ಸ್ಮಶಾನ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.05 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ.0.19 ಲಕ್ಷಗಳಾಗಿರುತ್ತದೆ. ಬೆಂಗಳೂರು ಉತ್ತರ ತಾಲ್ಲೂಕಿನ ದಾಸನಪುರ…
ದಾವಣಗೆರೆ : ದಾವಣಗೆರೆಯಲ್ಲಿ ಭೀಕರವಾದ ಅಗ್ನಿ ಅವಘಡ ಸಂಭವಿಸಿದ್ದು, ವಿದ್ಯುತ್ ಅವಘಡದಿಂದ ಮನೆಯಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ಕಟ್ಟದಲ್ಲಿದ್ದ ತಾಯಿ ಮಗಳನಿ ರಕ್ಷಣೆ ಮಾಡಲಾಗಿದೆ. ಈ ಒಂದು ಘಟನೆ ಘಟನೆ ದಾವಣಗೆರೆಯ ಅರುಣಾ ಸರ್ಕಲ್, ಬಳಿಯ ರೈಲ್ವೆ ಗೇಟ್ ನ ಸಮೀಪದ ಮನೆಯಲ್ಲಿ ಈ ಒಂದು ಅಗ್ನಿ ಅವಗಡ ಸಂಭವಿಸಿದೆ. ಕಟ್ಟಡದ ಎರಡನೇ ಫ್ಲೋರ್ ನಲ್ಲಿ ಸಿಲುಕಿದ್ದ ಗೀತಾ ಗಂಗಾಧರ್ ಮತ್ತು ಪುತ್ರಿ ಮಧು ರಕ್ಷಣೆ ಮಾಡಲಾಗಿದೆ. ವಿದ್ಯುತ್ ಅವಘಡದಿಂದ ಮನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿದ್ದು, ತಾಯಿ ಮಗಳನ್ನು ರಕ್ಷಣೆ ಮಾಡಲಾಗಿದೆ. ಏಣಿಯ ಸಹಾಯದಿಂದ ತಾಯಿ ಮತ್ತು ಮಗಳನ್ನು ಅಗ್ನಿಶಾಮಕ ಸಿಬ್ಬಂದಿಗಳು ರಕ್ಷಿಸಿದ್ದಾರೆ. ವಿದ್ಯುತ್ ಅವಘಡದಿಂದ ಮೂರು ಮಹಡಿಯ ಮನೆ ಸಂಪೂರ್ಣವಾಗಿ ಭಸ್ಮವಾಗಿದೆ. ಮನೆಯಲ್ಲಿದ್ದ ಸುಮಾರು 3 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ. ಘಟನೆ ಕುರಿತು ಬಸವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.