Author: kannadanewsnow05

ಬೆಂಗಳೂರು : ಈಗಾಗಲೇ ಡಿ ದೇವರಾಜು ಅರಸು ಅವರ ದಾಖಲೆ ಮುರಿದು ದೀರ್ಘಾವಧಿ ಮುಖ್ಯಮಂತ್ರಿ ಎಂದು ಸಿಎಂ ಸಿದ್ದರಾಮಯ್ಯ ದಾಖಲೆ ಬರೆದಿದ್ದಾರೆ.ಇದೀಗ ಮತ್ತೊಂದು ದಾಖಲೆ ಬರೆಯಲು ಸಜ್ಜಾಗಿರುವ ಸಿಎಂ ಸಿದ್ದರಾಮಯ್ಯ ಮಾರ್ಚ್ 6 ರಂದು 17ನೇ ಬಾರಿ ಬಜೆಟ್ ಮಂಡನೆ ಮಾಡುವ ಮೂಲಕ ಅತಿ ಹೆಚ್ಚು ಬಜೆಟ್ ಮಂಡನೆ ಮಾಡಿದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಮಾರ್ಚ್ 6 ರಂದು ಸಿಎಂ ಸಿದ್ದರಾಮಯ್ಯರಿಂದ ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ಸಂಜೆ ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆಗೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. ಇಂದು ಸಂಜೆ 4:00 ಯಿಂದ 7:00 ವರೆಗೆ ಈ ಒಂದು ಆರ್ಥಿಕ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಮಾರ್ಚ್ 6 ರಂದು ಬೆಳಿಗ್ಗೆ 9:45 ಕ್ಕೆ ಸಿಎಂ ನೇತೃತ್ವದಲ್ಲಿ ವಿಶೇಷ ಸಂಪುಟ ಸಭೆ ನಡೆಯಲಿದೆ ಸಚಿವ ಸಂಪುಟದ ಅನುಮೋದನೆ ಪಡೆಯಲಿದ್ದಾರೆ ಕಳೆದ ವರ್ಷ ಬಜೆಟ್ ಗಾತ್ರ 4.9 ಲಕ್ಷ ಕೋಟಿ ರೂಪಾಯಿ ಇತ್ತು ಕಳೆದ ವರ್ಷಕ್ಕಿಂತ ಈ ಬಾರಿ ಶೇಕಡ…

Read More

ಆಂಧ್ರಪ್ರದೇಶ : ಆಂಧ್ರಪ್ರದೇಶದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಚಿತ್ತೂರು ಜಿಲ್ಲೆಯಲ್ಲಿ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕರ್ನಾಟಕದ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಹೌದು ಬೆಂಗಳೂರಿನಿಂದ ತಿರುಪತಿಗೆ ಕಾರು ತೆರಳುತ್ತಿತ್ತು.ಈ ವೇಳೆ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಇದ್ದ ಐದು ಜನ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಬೆಂಗಳೂರು ಮೂಲದ ಐದು ಜನ ಸಾವನ್ನಪ್ಪಿದ್ದಾರೆ. ಮೃತರ ಬಗ್ಗೆ ಇನ್ನೂ ಸ್ಪಷ್ಟವಾದ ಮಹಿತಿ ಇಲ್ಲ. ಆದರೆ ಕರ್ನಾಟಕದವರು ಎನ್ನುವುದು ಮಾತ್ರ ಸ್ಪಷ್ಟವಾಗಿದೆ. ಚಿತ್ತುರಿನ ಪಲಮನೇರು ಬಳಿ ಈ ಒಂದು ಅಪಘಾತ ಸಂಭವಿಸಿದೆ. ಪಲಮನೆರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.a

Read More

ಬೆಂಗಳೂರು : ಅಧಿಕಾರ ಹಂಚಿಕೆಯ ವಿಚಾರವಾಗಿ ಬಜೆಟ್ ನಂತರ ಕ್ರಾಂತಿ ಮಾಡುತ್ತೀರಾ ಎನ್ನುವ ಪ್ರಶ್ನೆಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ನಾನು ಯಾಕೆ ಕ್ರಾಂತಿ ಮಾಡಲಿ?. ನನಗೆ ನನ್ನ ಮೇಲೆ ನಂಬಿಕೆ ಇದೆ. ನಾನು ಭರವಸೆ ಮೇಲೆ ಬದುಕುತ್ತೇನೆ. ನಾನು ಪ್ರಯತ್ನ ಮಾಡುವ ಅಗತ್ಯವಿಲ್ಲ. ನನಗೆ ಯಾವಾಗ ಯಾವುದು ಬರಬೇಕೋ ಅದು ಬರುತ್ತದೆ. ಆ ಆತ್ಮವಿಶ್ವಾಸ ನನಗಿದೆ. ಸದ್ಯದಲ್ಲೇ ನಾನು ನಿಮ್ಮನ್ನು ಭೇಟಿ ಮಾಡುತ್ತೇನೆ ಎಂದು ತಿಳಿಸಿದರು. ನಾನು ಇದುವರೆಗೂ ಸಿಎಂ ವಿಚಾರವಾಗಿ ಮಾತನಾಡಿಲ್ಲ. ನನ್ನ ವಿಚಾರದಲ್ಲಿ ನಾನುಂಟು, ಸಿಎಂ ಉಂಟು, ಪಕ್ಷದ ಹೈಕಮಾಂಡ್ ಉಂಟು. ಕೆಲವು ನಿರ್ಧಾರ ಕೈಗೊಂಡಾಗ ನಾನು ಭಾಗಿಯಾಗಿದ್ದೆ ಎಂದು ಹೇಳಿರುವುದನ್ನು ಬಿಟ್ಟು ಉಳಿದಂತೆ ನಾನು ಯಾವುದೇ ಹೇಳಿಕೆ ನೀಡಿಲ್ಲ. ಸಿಎಂ ಹುದ್ದೆ ಖಾಲಿಯಾಗುತ್ತದೆ. ಸಿಎಂ ಹುದ್ದೆಯಿಂದ ಇಳಿಯುತ್ತಾರೆ. ದಲಿತರಿಗೆ ಸಿಎಂ ಹುದ್ದೆ ಸಿಗಬೇಕು, ಬೇರೆಯವರಿಗೆ ಸಿಗಬೇಕು ಎಂದು ಎಲ್ಲಿಯೂ ಹೇಳಿಲ್ಲ ಎಂದು ಸ್ಪಷ್ಟಪಡಿಸಿದರು. ನಾನು ಸ್ಟ್ರೀಟ್ ಫೈಟರ್. ಹೇಗೆ ಹೋರಾಟ ಮಾಡಬೇಕೆಂದು ಗೊತ್ತಿದೆ. ನನ್ನ…

Read More

ಉಡುಪಿ : ಜಿಲ್ಲಾ ಬಿಜೆಪಿ ಹಾಗೂ ಹಿಂದೂ ಸಂಘಟನೆಯ ಮುಖಂಡ ಮಂಜುನಾಥ ಕೊಳ (ಮಂಜು ಕೊಳ) ಅವರಿಗೆ ಚೂರಿ ಇರಿದ ಘಟನೆ ಮಂಗಳ ವಾರ ರಾತ್ರಿ ಮಲ್ಪೆಯಲ್ಲಿ ನಡೆದಿದೆ. ತೀವ್ರ ಗಾಯಗೊಂಡ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಜು ಕೊಳ ಅವರು ಮಂಗಳವಾರ ಬೀಚ್ ಬಳಿ ಜೋಡಿಯೊಂದರ ಪ್ರೇಮದ ವಿಚಾರವಾಗಿ ರಾಜಿ ಮಾತುಕತೆಗೆ ಕರೆದಿದ್ದರು. ಈ ಸಂದರ್ಭ ಮಾತಿಗೆ ಮಾತು ಬೆಳೆದಾಗ ಯುವಕ ಚೂರಿ ಇರಿದಿದ್ದಾನೆ ಎಂದು ತಿಳಿದುಬಂದಿದೆ. ಆರೋಪಿ ಬಂಧನ ಚೂರಿ ಇರಿತ ನಡೆಸಿದವನ ಬಂಧನ ಮಾಡಲಾಗಿದೆ. ಚೂರಿ ಇರಿತಕ್ಕೆ ಒಳಗಾದ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದು ವೈಯಕ್ತಿಕ ಕಾರಣಕ್ಕೆ ನಡೆದ ಇರಿತವಾಗಿದ್ದು ಇದರಲ್ಲಿ ಕೋಮು ಸಂಘರ್ಷ ಇಲ್ಲ. ಅದನ್ನು ತರುವ ಪ್ರಯತ್ನಕ್ಕೂ ಅವಕಾಶ ನೀಡುವುದಿಲ್ಲ. ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.

Read More

ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇದೀಗ 5 ಐಪಿಎಲ್ ಪಂದ್ಯ ಆಡಲು ಆರ್ಸಿಬಿ ಮ್ಯಾನೇಜ್ಮೆಂಟ್ ಇದೀಗ ಸಮ್ಮತಿ ಸೂಚಿಸಿದೆ ಈ ಮೂಲಕ ಆರ್ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಂತಾಗಿದೆ. ಹೌದು 5 ಪಂದ್ಯಗಳನ್ನು ಆಡಲು ಆರ್ಸಿಬಿ ಆಡಳಿತ ಮಂಡಳಿ ಇದೀಗ ಒಪ್ಪಿಗೆ ಸೂಚಿಸಿದೆ. ಆರ್‌ಸಿಬಿ ಮೂಲಗಳಿಂದ ಇದೀಗ ಈ ಒಂದು ಮಾಹಿತಿ ಲಭ್ಯವಾಗಿದ್ದು, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 5 ಪಂದ್ಯ ಹಾಡಲು ಆರ್ಸಿಬಿ ಆಡಳಿತ ಮಂಡಳಿ ಸಮ್ಮತಿ ಸೂಚಿಸಿದೆ. ಛತ್ತೀಸ್ಗಡದ ರಾಯಪುರದಲ್ಲಿ ಎರಡು ಪಂದ್ಯ ಆಡಲು ಒಪ್ಪಿಗೆ ಸೂಚಿಸಿದೆ ರಾಜ್ಯ ಸರ್ಕಾರ ಮತ್ತು ಕೆಎಸ್ಸಿಎ ನಿರ್ಧಾರಕ್ಕೆ ಆರ್‌ಸಿಬಿ ಒಪ್ಪಿಗೆ ನೀಡಿದೆ. 2026ರ ಐಪಿಎಲ್ (IPL 2026) ಉದ್ಘಾಟನಾ ಪಂದ್ಯವನ್ನು ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲೇ ನಡೆಸಲು ಕರ್ನಾಟಕ ಸರ್ಕಾರ ಮತ್ತು ಆರ್‌ಸಿಬಿ ಮ್ಯಾನೇಜ್‌ಮೆಂಟ್ ಗ್ರೀನ್ ಸಿಗ್ನಲ್ ನೀಡಿರುವುದು ಬಹುತೇಕ ಖಚಿತವಾಗಿದೆ. ಕಳೆದ ವರ್ಷ (2025) ಆರ್‌ಸಿಬಿ ಚಾಂಪಿಯನ್ ಆದ ಸಂಭ್ರಮದ ವೇಳೆ ನಡೆದ ಸಣ್ಣ ಅಹಿತಕರ ಘಟನೆಯಿಂದಾಗಿ ಮೈದಾನದ ಸುರಕ್ಷತೆಯ ಬಗ್ಗೆ ಪ್ರಶ್ನೆಗಳು…

Read More

ಯಾದಗಿರಿ : ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ಸಂಬಂಧಪಟ್ಟಂತೆ ಇದೀಗ ಪ್ರಕರಣ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಾಪಸ್ ಪಡೆದಿದ್ದಾರೆ. ಕಲಬುರ್ಗಿ ಹೈಕೋರ್ಟ್ ಪೀಠದಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ವಾಪಾಸ್ ಪಡೆದಿದ್ದಾರೆ. ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದ ಹಿನ್ನೆಲೆ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ FIR ದಾಖಲಾಗಿತ್ತು.ಅದನ್ನ ರದ್ದುಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಇದೀಗ ಮಲ್ಲಿಕಾರ್ಜುನ ಮುತ್ಯಾ ಪರ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ವಾಪಸ್ ಪಡೆದಿದ್ದಾರೆ.

Read More

ಬೆಂಗಳೂರು : ನಗರದ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಮಹಿಳೆ ಸಾವನ್ನಪ್ಪಿದರೆ, ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುಬ್ರಮಣ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗಾಯತ್ರಿ ನಗರದಲ್ಲಿ ಸೋಮವಾರ ರಾತ್ರಿ ಅಗ್ನಿ ಅವಾಂತರ ಸಂಭವಿಸಿದೆ. ಸವಿತಾ (53) ಸಾವನ್ನಪ್ಪಿದ ಮಹಿಳೆ. ಮನೆಯಲ್ಲಿದ್ದ ರಮೇಶ್ ಬಾಬು, ಇವರ ತಾಯಿ ಸಣ್ಣವ್ವ ಹಾಗೂ ಪುತ್ರನನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೋಮವಾರ ರಾತ್ರಿ 9 ಗಂಟೆಯ ಸುಮಾರಿಗೆ ಘಟನೆ ನಡೆದಿದೆ. ಕಂಟ್ರಾಕ್ಟರ್ ರಮೇಶ್ ಬಾಬು ಕುಟುಂಬ ನಾಲ್ಕು ಅಂತಸ್ತಿನ ಮನೆಯಲ್ಲಿ ವಾಸವಾಗಿದ್ದರು. ಮನೆಯ ಮೊದಲ ಹಾಗೂ ಎರಡನೇ ಫ್ಲೋರ್ ಬಾಡಿಗೆಗೆ ಕೊಟ್ಟಿದ್ದರು. ಮೂರು ಮತ್ತು ನಾಲ್ಕನೇ ಫ್ಲೋರ್‌ನಲ್ಲಿ ರಮೇಶ್ ಬಾಬು ತಾಯಿ, ಹೆಂಡತಿ ಜೊತೆ ವಾಸವಾಗಿದ್ದರು. ಮೂರನೇ ಫ್ಲೋರ್‌ನ ಅಡುಗೆ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ರಮೇಶ್ ಬಾಬು ಪತ್ನಿ ಸವಿತಾ ಬೆಂಕಿಗೆ ಸಿಲುಕಿ ಮೃತಪಟ್ಟಿದ್ದಾರೆ. ಅಗ್ನಿಶಾಮಕ ಸಮಯ…

Read More

ಇಂದು ಸಂಭವಿಸಲಿರುವ ಈ ವರ್ಷದ ಏಕೈಕ ಚಂದ್ರಗ್ರಹಣದ ಬಗ್ಗೆ ಭಯ ಬೇಡ. ಇದು ಪ್ರಕೃತಿಯ ಸುಂದರ ವಿದ್ಯಮಾನ. ಹೊಸ ಅಲೆಗಳು ಅಥವಾ ಹೊಸ ಕಿರಣಗಳು ಉಂಟಾಗುವುದಿಲ್ಲ ಎಂದು ಖಗೋಳ ವಿಜ್ಞಾನಿ ಡಾ. ಎಪಿ ಭಟ್ ಸ್ಪಷ್ಟಪಡಿಸಿದ್ದಾರೆ. ಭಾರತದವರಿಗೆ ಸುಮಾರು ಶೇ. 8 ರಿಂದ 15 ರವರೆಗೆ ಮಾತ್ರ ಗ್ರಹಣ ಗೋಚರಿಸಲಿದೆ. ವಿಶೇಷವಾಗಿ ಭಾರತದ ಪೂರ್ವ ತೀರ ಭಾಗದವರಿಗೆ ಸುಮಾರು ಶೇ.15 ಗೋಚರವಾಗಬಹುದು. ಆದರೆ, ಆಸ್ಟ್ರೇಲಿಯಾದ ಕೆಲವು ಭಾಗಗಳಲ್ಲಿ ಸಂಪೂರ್ಣ ಖಗ್ರಾಸ ಗ್ರಹಣ ಸ್ಪಷ್ಟವಾಗಿ ಕಾಣಿಸಿಕೊಳ್ಳಲಿದೆ. ಉತ್ತರ ಅಮೆರಿಕ ಮತ್ತು ಕೆನಡಾ ಪ್ರದೇಶಗಳಲ್ಲಿ ಸಹ ಗ್ರಹಣ ಸ್ಪಷ್ಟವಾಗಿ ಗೋಚರಿಸಲಿದೆ. ಗ್ರಹಣವು ಮಧ್ಯಾಹ್ನ 3.20ಕ್ಕೆ ಆರಂಭವಾಗಿ, 4.34ಕ್ಕೆ ಖಗ್ರಾಸ ಹಂತ ಪ್ರವೇಶಿಸಲಿದೆ. ಸಂಜೆ 5.32ಕ್ಕೆ ಖಗ್ರಾಸ ಹಂತ ಮುಗಿದು, 6.47ಕ್ಕೆ ಗ್ರಹಣ ಸಂಪೂರ್ಣ ಅಂತ್ಯಗೊಳ್ಳಲಿದೆ. ಉಡುಪಿಯಂತಹ ಭಾಗಗಳಲ್ಲಿ ಚಂದ್ರೋದಯವು ಸಂಜೆ 6.38ಕ್ಕೆ ನಡೆಯುವುದರಿಂದ, 6.38ರಿಂದ 6.47ರವರೆಗೆ ಕೇವಲ 9 ನಿಮಿಷಗಳ ಕಾಲ ಮಾತ್ರ ಗ್ರಹಣದ ಚಂದ್ರನನ್ನು ಕಾಣಲು ಸಾಧ್ಯವಾಗುತ್ತದೆ. ಗ್ರಹಣವನ್ನು ಬರಿ ಕಣ್ಣಿನಿಂದಲೇ ನೋಡಬಹುದು.…

Read More

ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರ ಆರೋಪ ‘’ತಾ ಕಳ್ಳ ಇತರರ ನಂಬ’’ ಎಂಬ ಗಾದೆಯಂತಿದೆ. ಇದೊಂದು ಅತೃಪ್ತ ಆತ್ಮಗಳ ಹತಾಶ ಹೇಳಿಕೆ. ಈ ಬಾರಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದ ನಂತರ ಈ ನಿರುದ್ಯೋಗಿ ವಿರೋಧ ಪಕ್ಷದ ನಾಯಕರು ನನ್ನ ಮತ್ತು ಡಿ.ಕೆ.ಶಿವಕುಮಾರ್ ಅವರ ನಡುವಿನ ಸಂಬಂಧಕ್ಕೆ ಹುಳಿ ಹಿಂಡಲು ಪ್ರಯತ್ನಿಸುತ್ತಲೇ ಇದ್ದಾರೆ, ಇದರಿಂದ ಅವರೊಳಗೆ ತುಂಬಿಕೊಂಡಿರುವ ಹುಳಿ ಖಾಲಿಯಾಗಬಹುದೇ ಹೊರತು ನಮ್ಮ ಹಾಲು-ಜೇನಿನಂತಹ ಸಂಬಂಧದ ಮೇಲೆ ಯಾವ ಪರಿಣಾಮವೂ ಆಗುವುದಿಲ್ಲ ಎನ್ನುವುದು ಇಬ್ಬರಿಗೂ ತಿಳಿದಿರಲಿ.‌ ಆರೋಪ ಮಾಡಿರುವ ಒಬ್ಬರು ರಾಜ್ಯದ ಮುಖ್ಯಮಂತ್ರಿಗಳಾಗಿದ್ದವರು, ಇನ್ನೊಬ್ಬರು ಉಪಮುಖ್ಯಮಂತ್ರಿ ಮತ್ತು ಗೃಹ ಸಚಿವರಾಗಿದ್ದವರು. ಅವರ ಕಾಲದಲ್ಲಿ ಕೂಡಾ ಗುಪ್ತಚರ ವಿಭಾಗ ಮುಖ್ಯಮಂತ್ರಿಯವರ ಬಳಿಯೇ ಇತ್ತು. ಅವರ ಹೇಳಿಕೆಗಳನ್ನು ಗಮನಿಸಿದರೆ ಇವರಿಬ್ಬರೂ ತಮ್ಮ ಅನುಭವದ ಬಲದಿಂದಲೇ ಈ ಆರೋಪ ಮಾಡುತ್ತಿರುವಂತೆ ಕಾಣಿಸುತ್ತಿದೆ. ನಮ್ಮದು ಆಂತರಿಕ…

Read More

ಬೆಂಗಳೂರು : ಬೆಂಗಳೂರಲ್ಲಿ ಇವಿ ಬೈಕ್ ಮಾಲೀಕನಿಂದ ಇದೀಗ 35 ಕೋಟಿಗೂ ಹೆಚ್ಚು ವಂಚನೆ ಆರೋಪ ಕೇಳಿ ಬರುತ್ತಿದೆ. ಸುಮಾರು 3,750 ಜನರಿಗೆ 35 ಕೋಟಿಗೂ ಅಧಿಕ ವಂಚನೆ ಎಸಗಿರುವ ಆರೋಪ ಕೇಳಿ ಬಂದಿದೆ. ಸ್ಕೀಮ್ ಗಳ ಕಥೆ ಹೇಳಿ ಈಗ 35 ಕೋಟಿಗೂ ಹೆಚ್ಚು ವಂಚನೆ ಎಸಗಿದ್ದಾನೆ. ಈ ಒಂದು ಸ್ಕೀಂ ನಂಬಿ ಜನರು ದುಡ್ಡು ಕಟ್ಟಿ ಕೋಟ್ಯಾಂತರ ರೂಪಾಯಿ ಕಳೆದುಕೊಂಡಿದ್ದಾರೆ. ಆಪ್ ಕಿ ಇವಿ ಶೋರೂಮ್ ಮಾಲೀಕ ರವಿ ಮತ್ತು ಹನುಮಂತರಾಜು ಮತ್ತೋರ್ವ ರಾಜು ವಿರುದ್ಧ ಮೋಸ ಮಾಡಿರುವ ಆರೋಪ ಕೇಳಿ ಬಂದಿದೆ. ದಾಖಲೆ ಪಡೆದು ಕೋಟಾಕ್ ಮಹಿಂದ್ರ ಬ್ಯಾಂಕ್ ನಲ್ಲಿ ಲೋನ್ 1,50,000 ಲೋನ್ ಮಾಡಿಸುತ್ತಿದ್ದ. ಶೋರೂಮ್ ಮಾಲೀಕ ರವಿ 20,000 ಕಟ್ಟಿ ಉಳಿದ ಮೊತ್ತ ಸಬ್ಬಸಿಡಿಯಲ್ಲಿ ಬಿಡಲಾಗುತ್ತದೆ. ಒಂದು ವೇಳೆ ಹಣ ಕಟ್ಟುವುದಾದರೆ ನಾವೇ ಕಟ್ಟುತ್ತೇವೆ ಎಂದು ಜನರನ್ನು ನಂಬಿಸಿದ್ದಾನೆ. ಇವಿ ಬೈಕ್ ಶೋರೂಮ್ ಮಾಲೀಕನ ವಿರುದ್ಧ ಇದೀಗ ಗ್ರಾಹಕರು ಪ್ರತಿಭಟನೆ ಮಾಡುತ್ತಿದ್ದಾರೆ.ಜಾಲಹಳ್ಳಿಯಿಂದ ಎಂಜಿ ರಸ್ತೆವರಿಗೂ…

Read More