Subscribe to Updates
Get the latest creative news from FooBar about art, design and business.
Author: kannadanewsnow05
ಚಿತ್ರದುರ್ಗ : ಉರುಸ್ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಓರ್ವನಿಗೆ ಚಾಕು ಇರಿದಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ದೊಡ್ಡೇರಿ ಗ್ರಾಮದಲ್ಲಿ ನಡೆದಿದೆ. ಈ ಬೆಳೆ ಗಲಾಟೆಯನ್ನು ತಡೆಯಲು ಹೋಗಿದ್ದ ಇಬ್ಬರು ಕಾನ್ಸ್ಟೇಬಲ್ ಸೇರಿದಂತೆ ಒಟ್ಟು ನಾಲ್ವರಿಗೆ ಈ ಒಂದು ಘರ್ಷಣೆಯಲ್ಲಿ ಗಾಯಗಳಾಗಿರುವ ಘಟನೆ ವರದಿಯಾಗಿದೆ. ದೊಡ್ಡೇರಿ ಗ್ರಾಮದಲ್ಲಿ ನಿನ್ನೆ ರಾತ್ರಿ ಗರಿಬಿಸಾವೇ ಮೆರವಣಿಗೆಯಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿದೆ.ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ದೊಡ್ಡೇರಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ದೊಡ್ಡೇರಿ ಗ್ರಾಮದಿಂದ ಚಳ್ಳಕೆರೆ ಪಟ್ಟಣದವರೆಗೆ ಈ ಒಂದು ಮೆರವಣಿಗೆ ನಡೆದಿದೆ. ಮೆರವಣಿಗೆ ಸಂದರ್ಭದಲ್ಲಿ ನಿನ್ನೆ ರಾತ್ರಿ ಉರುಸ್ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿದೆ. ಮೆರವಣಿಗೆ ವೇಳೆ ಯುವಕರಿಗೆ ಬ್ಲೆಡ್ ನಿಂದ ಇರಿದು ಹಲ್ಲೆ ನಡೆಸಲಾಗಿದೆ. ಗಾಯಾಳು ಅಜ್ಗರ್ ಗೆ ಚಿತ್ರದುರ್ಗದ ಜಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮತ್ತೊಬ್ಬ ಗಾಯಾಳು ಮುಸ್ತಫಾ ಚಳಕೆರೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘರ್ಷಣೆ ತಡೆಯಲು ಹೋದಾಗ…
ತುಮಕೂರು : ಇತ್ತೀಚಿಗೆ ಯುವಜನತೆ ಕ್ಷುಲ್ಲಕ ಕಾರಣಕ್ಕಾಗಿ ಆತ್ಮಹತ್ಯೆಗೆ ಶರಣಾಗುತ್ತಿರುವ ಘಟನೆ ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ.ಇದೀಗ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನಲ್ಲಿ ಬೆಂಗಳೂರಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಯುವತಿ ಒಬ್ಬಳು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ದೊಡ್ಡಕೆರೆಗೆ ಸಾಫ್ಟ್ವೇರ್ ಎಂಜಿನಿಯರ್ ಯುವತಿಯೊಬ್ಬಳು ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಕುಣಿಗಲ್ ತಾಲ್ಲೂಕು ಸೊಬಗಾನಹಳ್ಳಿ ಗ್ರಾಮದ ನಿವಾಸಿ ಸುಮಾ ಎಂದು ಗುರುತಿಸಲಾಗಿದೆ. ಸುಮಾ ಬೆಂಗಳೂರಿನಲ್ಲಿ ಸಾಫ್ಟವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸುಮಾ ನಿನ್ನೆ ಬೆಂಗಳೂರಿನಿಂದ ಗ್ರಾಮಕ್ಕೆ ವಾಪಸ್ ಆಗಿದ್ದಾಳೆ. ಬಸ್ ಬಂದು ಸುಮಾರು ಹೊತ್ತು ಕಳೆದರೂ ಮಗಳು ಇನ್ನು ಬರಲಿಲ್ಲ ಎಂದು ಪೋಷಕರು ಗಾಬರಿಗೆ ಒಳಗಾಗಿದ್ದಾರೆ.ಈ ವೇಳೆ ಹುಡುಕಾಟ ನಡೆಸಿದಾಗ ಗ್ರಾಮದ ಕೆರೆಯ ಬಳಿ ಸುಮಾಳ ಬ್ಯಾಗ್ ಮೊಬೈಲ್ ಸೇರಿ ಹಲವು ವಸ್ತುಗಳು ಪತ್ತೆಯಾಗಿವೆ. ಸದ್ಯ ಸುಮಾ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕೆ ವ್ಯಕ್ತವಾಗಿದ್ದು, ಈ ಹಿನ್ನಲೆ ದೊಡ್ಡಕೆರೆಯಲ್ಲಿ…
ದಕ್ಷಿಣಕನ್ನಡ : ಕಾಲೇಜು ವಿದ್ಯಾರ್ಥಿನಿಯೋರ್ವಳು ಹಾಸ್ಟೆಲ್ ನಲ್ಲಿ ವೇಲ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಕಳೆದ ಫೆಬ್ರವರಿ 26ರಂದು ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೃತ ವಿದ್ಯಾರ್ಥಿನಿಯನ್ನು ಖಾಸಗಿ ಡೆಂಟಲ್ ಕಾಲೇಜಿನ ಬಿ.ಡಿ.ಎಸ್. ವಿದ್ಯಾರ್ಥಿನಿ ಬೆಳಗಾವಿ ಮೂಲದ ಕೃತಿಕಾ ನಿಡೋಣಿ (21) ಎಂದು ತಿಳಿದುಬಂದಿದೆ.ಕಳೆದ ಫೆಬ್ರವರಿ 26 ರಂದು ರಾತ್ರಿ 7 ಗಂಟೆ ಸುಮಾರಿಗೆ ಯಾರಿಗೋ ಫೋನ್ ಮಾಡಿ ತಾನು ಸಾಯುತ್ತೇನೆ ಎಂದು ಕೃತಿಕಾ ಸಾಯುವ ಮೊದಲು ಹೇಳುತ್ತಿದ್ದಳು ಎನ್ನಲಾಗಿದೆ. ರಾತ್ರಿ 7.10ರಿಂದ 7.30ರ ಅವಧಿಯಲ್ಲಿ ವಸತಿ ನಿಲಯದ ತನ್ನ ಕೊಠಡಿಯಲ್ಲಿ ನೇಣು ಬಿಗಿದುಕೊಂಡಿದ್ದ ಸ್ಥಿತಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು : ನಿನ್ನೆ ತಾನೆ ಇಡ್ಲಿಯಲ್ಲಿ ಆರೋಗ್ಯದ ಮೇಲೆ ಮರಣಾಂತಿಕ ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಹುಣಿಸಿ ರಾಜ್ಯ ಸರ್ಕಾರ ಆದೇಶ ನೀಡಿತು ಇದೀಗ ಟ್ಯಾಟು ಹಾಕಿಸಿಕೊಳ್ಳುವುದರಿಂದ ಎಚ್ಐವಿ ಹಾಗೂ ಚರ್ಮದ ಕ್ಯಾನ್ಸರ್ ಆಗುವ ಆತಂಕದಿಂದ ಇದೀಗ ರಾಜ್ಯ ಸರ್ಕಾರ ರಾಜ್ಯದಲ್ಲಿ ಟ್ಯಾಟೂ ನಿಷೇಧ ಮಾಡಲು ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಹೌದು ಟ್ಯಾಟು ಪ್ರಿಯರಿಗೆ ಇದೀಗ ರಾಣಿ ಸರಕಾರ ಬಿಗ್ ಶಾಕ್ ನೀಡಲು ಮುಂದಾಗಿದ್ದು, ಟ್ಯಾಟೂನಿಂದ ಎಚ್ಐವಿ ಚರ್ಮದ ಕ್ಯಾನ್ಸರ್ ಆಗುವ ಸಂಭವವಿದೆ ಎನ್ನಲಾಗಿದ್ದು, ಟ್ಯಾಟು ಪ್ರಿಯರಿಗೂ ಆರೋಗ್ಯ ಇಲಾಖೆ ಇದೀಗ ಶಾಕ್ ನೀಡಿದೆ. ಟ್ಯಾಟೂ ಕಡಿವಾಣಕ್ಕೆ ಇದೀಗ ರಾಜ್ಯ ಸರ್ಕಾರ ಕಾನೂನು ಜಾರಿ ಮಾಡಲು ಚಿಂತೆನೇ ನಡೆಸಿದೆ. ಹೊಸ ಕಾನೂನು ರಚನೆಗೆ ರಾಜ್ಯ ಸರ್ಕಾರ ಇದ್ದಾಗ ಮುಂದಾಗಿದೆ. ದೇಶದಲ್ಲಿ ಮೊದಲ ಬಾರಿಗೆ ಟ್ಯಾಟುಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಹೊಸ ಕಾನೂನು ತರಲು ಆರೋಗ್ಯ ಇಲಾಖೆ ಇದೀಗ ಮುಂದಾಗಿದ್ದು, ಟ್ಯಾಟೂ ಕಡಿವಾಣಕ್ಕೆ ಕಾನೂನು ತರಲು ಸರ್ಕಾರಕ್ಕೆ…
ಯಾದಗಿರಿ : ಕುಡಿದ ಮತ್ತಿನಲ್ಲಿ ರಾಂಗ್ ಸೈಡ್ ಬಂದು ಸಾರಿಗೆ ಚಾಲಕ ಮತ್ತು ನಿರ್ವಾಹಕನ ಮೇಲೆ ಹಲ್ಲೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಮಾಳನೂರು ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ತಾಳಿಕೋಟೆಯಿಂದ ಹುಣಸಗಿ ಮಾರ್ಗವಾಗಿ ಬಸ್ ಶಹಾಪುರಕ್ಕೆ ಹೊರಟಿತ್ತು. ಪ್ರಯಾಣಿಕರು ಇಳಿಯುತ್ತಿದ್ದರಿಂದ ಮಾಳನೂರಿನಲ್ಲಿ ಬಸ್ ಅನ್ನು ನಿಲ್ಲಿಸಲಾಗಿತ್ತು. ಈ ವೇಳೆ ಕುಡಿದ ಮತ್ತಿನಲ್ಲಿ ಬೈಕ್ ನಲ್ಲಿ ಸವಾರ ಮದನಪ್ಪ ರಾಂಗ್ ಸೈಡ್ ಬಂದಿದ್ದಾನೆ. ಅಶ್ಲೀಲ ಪದಗಳಿಂದ ನಿಂದಿಸಿ ಕಂಡಕ್ಟರ್ ಕಪಾಳಕ್ಕೆ ಬೈಕ್ ಸವಾರ ಹೊಡೆದಿದ್ದಾನೆ. ಗ್ರಾಮದ ಮದನಪ್ಪ ಎಂಬಾತನಿಂದ ಸಾರಿಗೆ ಸಿಬ್ಬಂದಿಗಳ ಮೇಲೆ ಇದೀಗ ಹಲ್ಲೆ ನಡೆದಿದೆ. ಹಲ್ಲೆಗೊಳಗಾದ ಚಾಲಕ ಮತ್ತು ಕಂಡಕ್ಟರ್ ಗೆ ಹುಣಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ ಆರೋಪಿಯ ಮದನಪ್ಪ ವಿರುದ್ಧ ಹುಣಸಗಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಕೊಪ್ಪಳ : ಜೀವನದಲ್ಲಿ ಜಿಗುಪ್ಸೆಗೊಂಡು ಯುವಕನೊಬ್ಬ ರೆಸಾರ್ಟ್ ಒಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದ ಹೊರ ವಲಯದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನುಕೊಪ್ಪಳ ನಿವಾಸಿ ಶಾಮಿಯಾನ ಕೆಲಸ ಮಾಡುತ್ತಿದ್ದ ಹಳೇಬಂಡಿ ಹರ್ಲಾಪುರದ ವಸೀಮ್ (28) ಎಂದು ತಿಳಿದುಬಂದಿದೆ. ಕಳೆದ ಬುಧವಾರ ವಸೀಂ ವೈಯಕ್ತಿಕ ಕೆಲಸಕ್ಕೆ ಪಟ್ಟಣಕ್ಕೆ ಆಗಮಿಸಿ ಕಲಕೇರಿ ರಸ್ತೆಯಲ್ಲಿನ ಜಂಗಲ್ ರೆಸಾರ್ಟ್ ನಲ್ಲಿ ರೂಂ ಪಡೆದ್ದಾನೆ. ಜೀವನದಲ್ಲಿ ಜಿಗುಪ್ಸೆ ಕಾರಣ ಬಟ್ಟೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉತ್ತರಕನ್ನಡ : ಪ್ರೀತಿಸಿ ಮದುವೆಯಾಗಿದ್ದ ಮಗಳ ನಡೆಗೆ ಕೋಪಗೊಂಡಿದ್ದ ತಂದೆಯೊಬ್ಬ ಮಗಳು ಹಾಗು ಅಳಿಯನಿಗೆ ಚಾಕು ಇರಿದು ಹತ್ಯೆಗೆ ಯತ್ನಾಸಿದ್ದಾನೆ. ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ರಂಗಾಪುರದಲ್ಲಿ ನಡೆದಿದೆ. ಬದನಗೋಡಿನ ಯುವತಿ ಪೋಷಕರಿಗೆ ತಿಳಿಸದೇ ರಂಗಾಪುರದ ಯುವಕನೊಂದಿಗೆ ಕಳೆದ ಮೂರು ತಿಂಗಳ ಹಿಂದೆ ರಿಜಿಸ್ಟರ್ ಮ್ಯಾರೇಜ್ ಆಗಿದ್ದಳು. ಅನ್ಯ ಜಾತಿಯ ಯುವಕ ಎಂದು ಶಂಕರ ಕಮ್ಮಾರ ವಿರೋಧ ವ್ಯಕ್ತಪಡಿಸಿದ್ದ. ಆದರೆ, ಯುವಕನ ಮನೆಗೆ ಮಗಳನ್ನು ನೋಡುವ ನೆಪದಲ್ಲಿ ಬಂದು, ನಿಮ್ಮ ಮದುವೆಗೆ ಸಾಕ್ಷಿ ಹಾಕಿದವರ ಹೆಸರು ಹೇಳುವಂತೆ ಮಗಳ ಮೇಲೆ ಹಲ್ಲೆ ಮಾಡಿದ್ದಾನೆ. ಈ ವೇಳೆ ಮಗಳು ಹೆಸರು ಹೇಳದೇ ಇದ್ದುದಕ್ಕೆ ಹತ್ಯೆಗೆ ಯತ್ನಿಸಿದ್ದಾನೆ. ತಡೆಯಲು ಬಂದ ಅಳಿಯನಿಗೂ ಎದೆ ಹಾಗೂ ಕೈಗೆ ಚಾಕುವಿನಿಂದ ಇರಿದಿದ್ದಾನೆ.ನಂತರ ಅಲ್ಲಿಂದ ತಪ್ಪಿಸಿಕೊಂಡು ತನ್ನೂರಿಗೆ ಬಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.ಹಲ್ಲೆಗೆ ಒಳಗಾದ ಇಬ್ಬರೂ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದೃಷ್ಟವಶಾತ್ ಮೂವರೂ ಬದುಕುಳಿದಿದ್ದು, ಇರಿತಕ್ಕೊಳಗಾದ ಇಬ್ಬರೂ…
ಬೆಂಗಳೂರು : ಶಿವರಾತ್ರಿಯ ನಿಮಿತ್ಯ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಕೊಯಮತ್ತೂರಿನ ಇಶಾ ಫೌಂಡೇಶನ್ ನ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆಶಿ ಭಾಗಿಯಾಗಿದ್ದು , ಆಧ್ಯಾತ್ಮಿಕ ಲೋಕದಲ್ಲಿ ಮಿಂದೆದ್ದು ಪುನೀತರಾಗಿದ್ದಾರೆ. ಈ ನಡುವೆ ತಮ್ಮ ಬಾಲ್ಯದ ನೆನಪನ್ನು ಪೋಸ್ಟ್ ಮೂಲಕ ಬಿಚ್ಚಿಟ್ಟಿದ್ದಾರೆ. ಸಾಮಾಜಿಕ ಜಾಲತಾಣ ಟ್ವೀಟ್ ನಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿದ್ದು, ಕೊಯಮತ್ತೂರಿನ ಇಶಾ ಯೋಗ ಕೇಂದ್ರದಲ್ಲಿ ನಡೆದ ಶಿವರಾತ್ರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡೆ.ಸದ್ಗುರು ಅವರು ಪ್ರತಿ ಶಿವರಾತ್ರಿಯಂದು ನಡೆಸಿಕೊಡುವ ಈ ಕಾರ್ಯಕ್ರಮದ ಬಗ್ಗೆ ಕೇಳಿದ್ದೆ, ಕಣ್ಣಾರೆ ನೋಡಿ ಇದು ಶಿವಭಕ್ತಿಯ ಶಿಖರ ಅನಿಸಿತು. ನನ್ನ ಹೆಸರಲ್ಲೇ ಶಿವನಿದ್ದಾನೆ. ಅದರ ಹಿಂದೆ ಸ್ವಾರಸ್ಯಕರ ಸಂಗತಿ ಇದೆ. ದೊಡ್ಡ ಆಲಹಳ್ಳಿಯಲ್ಲಿ ಶಿವಾಲ್ದಪ್ಪನ ಬೆಟ್ಟ ಇದೆ. ನಮ್ಮ ಮನೆಯಲ್ಲಿ ಯಾರೇ ಹುಟ್ಟಿದರೂ ಮೊದಲು ಹೆಣ್ಮಕ್ಕಳಿಗೆ ಕೆಂಪಮ್ಮ ಅಂತ ಹೆಸರಿಡುತ್ತಾರೆ. ಗಂಡು ಮಕ್ಕಳಿಗೆ ಕೆಂಪೇಗೌಡ ಅಂತ ಹೆಸರಿಡುತ್ತಾರೆ. ಅದು ಪದ್ದತಿ. ಶಿವಾಲ್ದಪ್ಪನಿಗೆ ನನ್ನ ತಾಯಿ ಹರಕೆ ಮಾಡಿಕೊಂಡಿದ್ದರು. ನಾನು ಹುಟ್ಟಿದ್ದಕ್ಕೆ ನನಗೆ ಮೊದಲು ಕೆಂಪರಾಜ್ ಅಂತ…
ಹುಬ್ಬಳ್ಳಿ : ಚಲಿಸುತ್ತಿದ್ದ ಸಾರಿಗೆ ಬಸ್ ನ ಪಾಟಾ ಕಟ್ ಆಗಿ ಬಸ್ ಪಲ್ಟಿ ಹೊಡೆದ ಪರಿಣಾಮ ಬಸ್ ನಲ್ಲಿದ್ದ 15 ಕ್ಕೂ ಹೆಚ್ಚು ಜನ ಪ್ರಯಾಣಿಕರು ಗಾಯಗೊಂಡ ಘಟನೆ ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿ ಗ್ರಾಮದ ಬಳಿ ನಡೆದಿದೆ. ತಾಲೂಕಿನ ಬ್ಯಾಹಟ್ಟಿ ಬಳಿ ಬಸ್ ಚಲಿಸುತ್ತಿರುವಾಗಲೇ ಬಸ್ಸಿನ ಪಾಟಾ ಕಟ್ ಆಗಿದೆ. ಕೂಡಲೇ ಬಸ್ ಅನ್ನು ಚಾಲಕ ಎಷ್ಟೇ ನಿಯಂತ್ರಣಕ್ಕೆ ತರಬೇಕೆಂದರು ಸಾಧ್ಯವಾಗಿಲ್ಲ. ತಕ್ಷಣ ಬಸ್ ಪಲ್ಟಿಯಾಗಿದೆ. ಈ ವೇಳೆ ಬಸ್ ನಲ್ಲಿದ್ದ ಸುಮಾರು 15 ಪ್ರಯಾಣಿಕರಿಗೆ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.ಇನ್ನು ಗಾಯಗೊಂಡ ಪ್ರಯಾಣಿಕರನ್ನು ತಕ್ಷಣ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಗ್ರಾಮೀಣ ಠಾಣೆಯಲ್ಲಿ ಅಪಘಾತದ ಕುರಿತು ಪ್ರಕರಣ ದಾಖಲಾಗಿದೆ.
ಕೊಪ್ಪಳ : ತಾಯಿ ಹೆಸರಲ್ಲಿ ಇರುವ ಆಸ್ತಿಯನ್ನು ಪುತ್ರನ ಹೆಸರಲ್ಲಿ ಮಾಡಿಕೊಡುವಂತೆ ಒತ್ತಾಯಿಸಿ ಪಂಚಾಯತಿ ಕಚೇರಿಯಲ್ಲೇ ಮಹಿಳಾ PDO ಅಧಿಕಾರಿ ಮೇಲೆ ಗ್ರಾಂ ಪಂಚಾಯತ್ ಸದಸ್ಯೆ ಹಾಗು ಆಕೆಯ ಮಗ ಚಪ್ಪಲಿಯಿಂದ ಹಲ್ಲೆ ನಡೆಸಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಹೌದು ಈ ಒಂದು ಘಟನೆ ನಡೆದಿದ್ದು ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹಿರೇಮಾಗೇರಿ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ.ಹಲ್ಲೆಗೆ ಒಳಗಾದಂತ ಮಹಿಳಾ ಅಧಿಕಾರಿಯನ್ನು ಪಿಡಿಒ ರತ್ನಮ್ಮ ಗುಂಡಣ್ಣನವರ ಎಂದು ತಿಳಿದುಬಂದಿದೆ. ಇನ್ನು ಹಲ್ಲೆ ಮಾಡಿದವರನ್ನು ಗ್ರಾಮ ಪಂಚಾಯಿತಿ ಸದಸ್ಯೆ ಶಾಂತಮ್ಮ ಬಂಡಿವಂಡರ, ಪುತ್ರ ಭೀಮೇಶ್ ಎನ್ನಲಾಗಿದೆ. ತಾಯಿ ಹೆಸರಲ್ಲಿ ಇದ್ದ ಆಸ್ತಿಯನ್ನು ಪುತ್ರನ ಹೆಸರಿಗೆ ಮಾಡಿಕೊಡುವಂತೆ ಒತ್ತಾಯಿಸಿ ಹಲ್ಲೆ ಮಾಡಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.