Author: kannadanewsnow05

ಬೆಳಗಾವಿ : ಬೆಳಗಾವಿಯಲ್ಲಿ ಬೀದಿ ನಾಯಿಗೆ ಹೆದರಿ ಬೈಕ್ ಸವಾರ ಒಬ್ಬ ಸಾವನ್ನಪ್ಪಿರುವ ವಿಚಿತ್ರ ಘಟನೆ ವರದಿಯಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಕುಂಬಾರ ಗಲ್ಲಿಯಲ್ಲಿ ಈ ಒಂದು ಕಡೆ ನಡೆದಿದ್ದು, ವಿಶ್ವನಾಥ ಶಿರೋಳ ಎಂಬ ಬೈಕ್ ಸವಾರ ಸಾವನಪ್ಪಿದ್ದಾನೆ. ಬೈಕ್ ಅಪಘಾತ ಎಂದು ಭಾವಿಸಿ ಪೊಲೀಸರು ಸುಮ್ಮನಾಗಿದ್ದರು. ಆದರೆ ಸಿಸಿಟಿವಿ ಕ್ಯಾಮೆರಾದಲ್ಲಿ ದೃಶ್ಯ ನೋಡಿ ಸಾವಿನ ರಹಸ್ಯ ಇದೀಗ ಬಯಲಾಗಿದೆ.ಬೀದಿ ನಾಯಿ ಒಂದು ವಿಶ್ವನಾಥನನ್ನು ಅಟ್ಟಾಡಿಸಿಕೊಂಡು ಬಂದಾಗ ಸ್ಕೂಟಿಯಲ್ಲಿ ತೆರಳುತ್ತಿದ್ದ. ವಿಶ್ವನಾಥ್ ವೇಗವಾಗಿ ಓಡಿಸಿದ್ದಾರೆ. ಈ ವೇಳೆ ಮನೆಯ ಗೋಡೆಗೆ ಸ್ಕೂಟಿ ಡಿಕ್ಕಿ ಹೊಡೆದು ಸ್ಥಳದಲ್ಲೇ ವಿಶ್ವನಾಥ್ ಸಾವನಪ್ಪಿದ್ದಾರೆ.

Read More

ಬೆಂಗಳೂರು : ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರವಾಗಿ ಗಲಾಟೆ ನಡೆದು ಫೈರಿಂಗ್ ವೇಳೆ ಕಾಂಗ್ರೆಸ್ ಕಾರ್ಯಕರ್ತನು ಒಬ್ಬ ಸಾವನ್ನಪ್ಪಿದ್ದ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಶಾಸಕ ಜನಾರ್ಧನ ರೆಡ್ಡಿ ಶ್ರೀರಾಮುಲು ಅವರು ಬಳ್ಳಾರಿಯಲ್ಲಿ ಸಮಾವೇಶ ನಡೆಸಲು ಮುಂದಾಗಿದ್ದಾರೆ. ಇನ್ನು ಈ ಒಂದು ಸಮಾವೇಶದ ಕುರಿತಾಗಿ ಬೆಂಗಳೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು ಬಳ್ಳಾರಿಯಲ್ಲಿ ಸಮಾವೇಶಕ್ಕೆ ಇದುವರೆಗೂ ಪರ್ಮಿಷನ್ ಕೊಟ್ಟಿಲ್ಲ. ಅವಕಾಶ ಕೊಡೋ ವಿಚಾರ ಸ್ಥಳೀಯ ಪೊಲೀಸರಿಗೆ ಬಿಟ್ಟಿದ್ದೇವೆ. ಅಲ್ಲಿನ ಸ್ಥಿತಿಗತಿ ನೋಡಿಕೊಂಡು ನೀವು ಅವರಿಗೆ ಪರ್ಮಿಷನ್ ಕೊಡಬೇಕ ಬೇಡ್ವಾ ಅನ್ನೋದನ್ನ ನೀವೇ ತೀರ್ಮಾನ ಮಾಡಿ ಅಂತ ಹೇಳಿದ್ದೇವೆ. ಹಾಗಾಗಿ ಅಲ್ಲಿನ ಸ್ಥಳೀಯ ಪೊಲೀಸರು ಪರ್ಮಿಷನ್ ಕೊಡುವ ವಿಚಾರವಾಗಿ ನಿರ್ಧರಿಸುತ್ತಾರೆ ಎಂದರು.

Read More

ಗದಗ : ಜಿಲ್ಲೆಯ ಐತಿಹಾಸಿಕ ಗ್ರಾಮ ಲಕ್ಕುಂಡಿಯಲ್ಲಿ ಉತ್ಖನನ ಕಾರ್ಯ ನಡೆಯುತ್ತಿದೆ. ಈಗ ಗ್ರಾಮವನ್ನು ಸ್ಥಳಾಂತರಿಸುವ ಯಾವುದೇ ಪ್ರಸ್ತಾಪವಿಲ್ಲ. ನಡೆಯುತ್ತಿರುವ ಉತ್ಖನನದ ವೇಳೆ ಮಹತ್ವದ ಅವಶೇಷ ಸಿಕ್ಕರೆ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸಿ.ಎನ್‌ ಶ್ರೀಧರ್‌ ಅವರು ತಿಳಿಸಿದ್ದಾರೆ. ಈ ಮೂಲಕ ಗ್ರಾಮವನ್ನು ಸ್ಥಳಾಂತರಿಸುವ ಮುನ್ಸೂಚನೆ ನೀಡಿದ್ದಾರೆ. ಇದೀಗ ಲಕ್ಕುಂಡಿಯಲ್ಲಿ ಉತ್ಖನನ ಕಾರ್ಯ ನಡೆಯುತ್ತಿದೆ. ಉತ್ಖನನ ವೇಳೆ ಪುರಾತನ ವಸ್ತು ಒಂದು ಪತ್ತೆಯಾಗಿದ್ದು, ಕೋಟೆ ವೀರಭದ್ರೇಶ್ವರ ದೇವಸ್ಥಾನದ ಬಳಿ ಉತ್ಖನನ ಕಾರ್ಯ ನಡೆಸಲಾಯಿತು. ಈ ವೇಳೆ ಎರಡನೇ ದಿನದ ಉತ್ಕನ ಕಾರ್ಯದ ವೇಳೆ ಪುರಾತನ ಮಸ್ತು ಒಂದು ಪತ್ತೆಯಾಗಿದೆ. ನಿಧಿ ಪತ್ತೆಯ ಬಳಿಕ ಲಕ್ಕುಂಡಿಯಲ್ಲಿ ಪುರಾತನ ಮತ್ತು ಪತ್ತೆಯಾಗಿದೆ. ಪತ್ತೆಯಾದ ಪುರಾತನ ವಸ್ತು ಕುತೂಹಲಕ್ಕೆ ಕಾರಣವಾಗಿದೆ. ಈ ಹಿನ್ನೆಲೆ ಮತ್ತಷ್ಟು ನಿಧಿ ಸಿಕ್ಕರೆ, ಇಡೀ ಗ್ರಾಮವೇ ಸ್ಥಳಾಂತರಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇಂದು ಸಹ ಉತ್ಖನನ ಕಾರ್ಯ ಮುಂದುವರೆಲಿದೆ. ಲಕ್ಕುಂಡಿಯ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಅಂಗಳದಲ್ಲಿ ಉತ್ಖನನ ನಡೆಯುತ್ತಿದೆ. ಈ…

Read More

ಹುಬ್ಬಳ್ಳಿ : ಜನವರಿ 24ರಂದು ಸರ್ಕಾರದಿಂದ 42,345 ಮನೆಗಳ ಹಂಚಿಕೆ ಮಾಡಲಾಗುತ್ತದೆ ಎಂದು ಹುಬ್ಬಳ್ಳಿಯಲ್ಲಿ ವಸತಿ ಸಚಿವ ಜಮೀರ್ ಅಹ್ಮದ್ಕನ್ ಹೇಳಿಕೆ ನೀಡಿದರು. ಹುಬ್ಬಳ್ಳಿಯಲ್ಲಿ ಬೃಹತ್ ಕಾರ್ಯಕ್ರಮ ಮಾಡಿ ಮನೆಗಳ ಹಂಚಿಕೆ ಮಾಡಲಾಗುತ್ತದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಿಎಂ ಸಿದ್ದರಾಮಯ್ಯ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದರು. ಹಿಂದಿನ ಬಿಜೆಪಿ ಸರ್ಕಾರ ಬಡವರಿಗೆ ಒಂದು ಮನೆ ಕೂಡ ನೀಡಲಿಲ್ಲ ಬಡವರ ಮನೆಗೆ ಕೇಂದ್ರ ಸರ್ಕಾರ ಶೇಕಡ 18ರಷ್ಟು ಜಿಎಸ್‌ಟಿ ಹಾಕುತ್ತಿದೆ. 2024 ರಲ್ಲಿ ನಾವು 36,789 ಮನೆಗಳನ್ನು ನೀಡಿದ್ದೆವು . ಬಿಜೆಪಿಯವರು ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಾರೆ. ಆದರೆ ಗ್ಯಾರಂಟಿಗಳ ಜೊತೆಗೆ ಬಡವರಿಗೆ ಮನೆಗಳನ್ನು ನೀಡುತ್ತಿದ್ದೇವೆ. ಬಿಜೆಪಿ ಅವಧಿಯಲ್ಲಿ ಯಾವುದೇ ಗ್ಯಾರಂಟಿ ಯೋಜನೆಗಳು ಇರಲಿಲ್ಲ ಆದರೂ ಬಿಜೆಪಿಯವರು ಬಡವರಿಗೆ ಒಂದೇ ಒಂದು ಮನೆ ಕೊಡಲಿಲ್ಲ ಎಂದು ವಾಗ್ದಾಳಿ ನಡೆಸಿದರು.

Read More

ಬೀದರ್ : ಶತಾಯುಷಿ ಹಾಗೂ ಮಾಜಿ ಸಚಿವ ಭೀಮಣ್ಣ ಖಂಡ್ರೆ (102) ಅವರು ನಿನ್ನೆ ವಿಧಿವಶರಾಗಿದ್ದಾರೆ. ಭೀಮಣ್ಣ ಕಂಡ್ರಿ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಎಲ್ಲಾ ರಾಜಕೀಯ ಗಣ್ಯರು ಸಂತಾಪ್ ಸೂಚಿಸಿದ್ದು, ಇದೀಗ ಕಾಂಗ್ರೆಸ್ ನಾಯಕರ ರಾಹುಲ್ ಗಾಂಧಿ ಅವರು ಕೂಡ ಸಂತಾಪ ಸೂಚಿಸಿದ್ದಾರೆ. ಟ್ವೀಟ್ ನಲ್ಲಿ ರಾಹುಲ್ ಗಾಂಧಿ ಸಂತಾಪಸೂಚಿಸಿದ್ದು ಭೀಮಣ್ಣ ಕಂಡ್ರೆ ಅವರ ನಿಧನ ನನಗೆ ತೀವ್ರ ನೋವು ತಂದಿದೆ. ಅವರು ಸ್ವತಂತ್ರ ಹೋರಾಟಗಾರ ಹಾಗೂ ಶಿಕ್ಷಣ ತಜ್ಞರಾಗಿದ್ದರು. ತಮ್ಮ ಸೇವೆಯನ್ನ ಕರ್ನಾಟಕ ಜನರಿಗೆ ಮುಡುಪಾಗಿಟ್ಟಿದ್ದರು. ಖಂಡ್ರೆ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಆ ಭಗವಂತ ನೀಡಲಿ ಎಂದು ಟ್ವೀಟ್ ಖಾತೆಯ ಮೂಲಕ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ. https://twitter.com/RahulGandhi/status/2012378703851061651?t=2bDjT1zv4kwC3fIHmtcnWg&s=19

Read More

ಬೆಂಗಳೂರು : ವಲಸೆ ಕಾರ್ಮಿಕರು ಇರುವ ಮನೆಗೆ ತೆರಳಿ ಅಕ್ರಮವಾಗಿ ನುಗ್ಗಿ ಅವರ ಪೌರತ್ವ ಹಾಗೂ ಗುರುತಿನ ದಾಖಲೆಗಳನ್ನು ಕೇಳಿ ಬೆದರಿಕೆ ಹಾಗೂ ಭೀತಿಯನ್ನುಂಟು ಮಾಡುತ್ತಿದ್ದಾನೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಪುನೀತ್ ಕೆರೆಹಳ್ಳಿಯನ್ನು ಬನ್ನೇರುಘಟ್ಟ ಪೊಲೀಸ್‌ ಠಾಣಾ ಪೊಲೀಸರು ತಡರಾತ್ರಿ ಬಂಧಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಎಸ್ಪಿ ಅವರ ಮಾರ್ಗದರ್ಶನದಲ್ಲಿ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಬಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು ಎನ್ನಲಾಗಿದೆ. ಪುನೀತ್ ಕೆರೆಹಳ್ಳಿಯ ಬಂಧನ ಸುದ್ದಿ ತಿಳಿದ ಬಳಿಕ, ಆತನ ಬೆಂಬಲಿಗರು ಠಾಣೆಯ ಬಳಿ ಜಮಾಯಿಸಲು ಯತ್ನಿಸಿದರೂ, ಪೊಲೀಸರು ಅವರನ್ನು ಒಳಗೆ ಬಿಡದೆ ನಿಯಂತ್ರಿಸಿದರು. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ತಿಳಿದು ಬಂದಿದೆ.

Read More

ಬೀದರ್ : ಶತಾಯುಷಿ, ಮಾಜಿ ಸಚಿವ ಡಾ. ಭೀಮಣ್ಣ ಖಂಡ್ರೆ (102) ವಿಧಿವಶ ಹಿನ್ನೆಲೆಯಲ್ಲಿ ಬೀದರ್ ಜಿಲ್ಲೆಯ ಸರ್ಕಾರಿ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ. ಇಂದು ಎಲ್ಲಾ ಸರ್ಕಾರಿ ಶಾಲಾ ಕಾಲೇಜುಗಳಿಗೆ ರಜೆ ಗೋಪಿಸಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮ ಆದೇಶ ಹೊರಡಿಸಿದ್ದಾರೆ. ಕಳೆದ 10-12 ದಿನಗಳಿಂದ ವಯೋಸಹಜವಾದ ಕಾಯಿಲೆ ಮತ್ತು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಬೀದರ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಭಾಲ್ಕಿಯ ಮನೆಯಲ್ಲೇ ಚಿಕಿತ್ಸೆ ಮುಂದುವರಿಸಲಾಗಿತ್ತು, ಇಂದು ರಾತ್ರಿ ಅವರ ಆತ್ಮ ದೇಹವನ್ನು ತ್ಯಜಿಸಿತು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದರು. ಕಳೆದ ಒಂದು ವಾರದಿಂದ ನಾಡಿನ ವಿವಿಧ ಮಠಗಳ ಪೀಠಾಧಿಪತಿಗಳು, ಹರಚರ ಗುರುಮೂರ್ತಿಗಳು, ಸಚಿವರು, ಶಾಸಕರು, ಸಮಾಜದ ಗಣ್ಯರು, ವಿವಿಧ ಪಕ್ಷಗಳ ನಾಯಕರು, ಕಾರ್ಯಕರ್ತರು, ಅಭಿಮಾನಿಗಳು, ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಭಾಲ್ಕಿಗೆ ಆಗಮಿಸಿ ಭೀಮಣ್ಣ ಖಂಡ್ರೆ ಅವರನ್ನು ನೋಡಿ, ಆರೋಗ್ಯ ವಿಚಾರಿಸಿದ್ದರು. ಹಲವರು ದೇವಾಲಯಗಳಲ್ಲಿ ವಿಶೇಷ ಪೂಜೆ…

Read More

ಬೆಂಗಳೂರು : ಇನ್ಸ್ಟಿಟ್ಯೂಟ್ ಆಫ್ ವುಡ್ ಸೈನ್ಸ್ ಟೆಕ್ನಾಲಜಿ (IWST) ಪರೀಕ್ಷೆಯಲ್ಲಿ ಇದೀಗ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ಭಾರತೀಯ ಅರಣ್ಯ ಸಂಶೋಧನೆ ಮತ್ತು ಶಿಕ್ಷಣ ಮಂಡಳಿ ಈ ಒಂದು ಪರೀಕ್ಷೆ ನಡೆಸಿದ್ದು, ಬೇರೆ ವ್ಯಕ್ತಿಗಳಿಂದ ಆರೋಪಿಗಳು ಪರೀಕ್ಷೆ ಬರೆದಿದ್ದಾರೆ ಎಂದು ತನಿಖೆ ವೇಳೆ ಬಯಲಾಗಿದೆ. ಈ ಕುರಿತು ಆಂತರಿಕ ತನಿಖೆ ನಡೆಸಿದ ಅರಣ್ಯ ಸಂಶೋಧನಾ ಮತ್ತು ಶಿಕ್ಷಣ ಮಂಡಳಿ ಪರೀಕ್ಷೆಗೆ ಹಾಜರಾದ ವ್ಯಕ್ತಿಗಳ ಫೋಟೋ ಮತ್ತು ಸಿಸಿಟಿವಿಗಳನ್ನು ಪರಿಶೀಲನೆ ಮಾಡಿದ್ದು, ನೇಮಕಾತಿ ವೇಳೆ ಅರ್ಹ ವ್ಯಕ್ತಿಗಳು ಸಲ್ಲಿಸಿದ ದಾಖಲೆಗಳನ್ನು ಪರಿಶೀಲನೆ ಮಾಡಿತ್ತು. ಕೆಲಸಕ್ಕೆ ಸೇರಿದ ವೇಳೆ ಸಲ್ಲಿಸಿದ ದಾಖಲೆಗಳನ್ನು ಸಂಸ್ಥೆ ಪರಿಶೀಲನೆ ಮಾಡಿದ್ದು ಎಲ್ಲಾ ದಾಖಲೆಗಳ ಸಹಿಗಳಲ್ಲಿ ವ್ಯತ್ಯಾಸ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಫೋಟೋ ಮತ್ತು ಸಿಸಿಟಿವಿ ಹಾಗೂ ವಿಡಿಯೋ ಗ್ರಾಫಿ ಪರಿಶೀಲನೆ ನಡೆಸುತ್ತಿದ್ದು, ಎಲ್ಲಾ ದಾಖಲೆಗಳನ್ನು ಮಂಡಳಿ FSL ಗೆ ಕಳುಹಿಸಿದೆ. FSL ವರದಿಯಲ್ಲಿ ಬೇರೆ ಬೇರೆ ವ್ಯಕ್ತಿಗಳು ಪರೀಕ್ಷೆ ಬರೆದಿರುವುದು ದೃಢವಾಗಿದೆ. ಈ ಹಿನ್ನೆಲೆ…

Read More

ಬೆಂಗಳೂರು : ಸಿಎಂ ಸಿದ್ದರಾಮಯ್ಯ ತೆರಳಬೇಕಿದ್ದ ಹೆಲಿಕಾಪ್ಟರ್​ನಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ. ಇಂದು ಕರ್ನಾಟಕ ಕ್ರೀಡಾಕೂಟ ಉದ್ಘಾಟನೆಗೆಂದು ಸಿಎಂ ಸಿದ್ದರಾಮಯ್ಯನವರು ಬೆಂಗಳೂರಿನ HAL ಏರ್​ಪೋರ್ಟ್​ನಿಂದ ವಿಶೇಷ ಹೆಲಿಕಾಪ್ಟರ್ ನಲ್ಲಿ ತುಮಕೂರಿಗೆ ತೆರಳಬೇಕಿತ್ತು. ಆದರೆ, ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಟೇಕಾಫ್ ಆಗಿಲ್ಲ. ಇದರಿಂದ ಸಿದ್ದರಾಮಯ್ಯ ಬೆಂಗಳೂರಿನಿಂದ ರಸ್ತೆ ಮೂಲಕವೇ ತುಮಕೂರಿಗೆ ತೆರಳಿದರು. ಬಳಿಕ ಮಾಜಿ ಸಚಿವ ಕೆ ಎನ್ ರಾಜಣ್ಣ ಅವರು ಏರ್ಪಡಿಸಿದ್ದ ಔತಣಕೂಟದಲ್ಲಿ ಭಾಗವಹಿಸಿ ಕರ್ನಾಟಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಇನ್ನು ಡಿಸಿಎಂ ಡಿಕೆ ಶಿವಕುಮಾರ್ ದೆಹಲಿ ಪ್ರವಾಸ ಕೈಗೊಂಡಿರುವ ವಿಚಾರವಾಗಿ ನನಗೆ ಗೊತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಜಾರಿಕೊಂಡರು.

Read More

ಬೆಂಗಳೂರು : ಬಿಎಂಟಿಸಿ ಬಸ್ ನಲ್ಲಿ ಮಹಿಳೆ ಉದ್ಧಟತನ ತೋರಿದ್ದಾರೆ. ಶಕ್ತಿ ಯೋಜನೆಯ ಟಿಕೆಟ್ ಬಿಸಾಕಿ ಮಹಿಳೆ ದರ್ಪ ಮೆರೆದಿರುವ ಘಟನೆ ಬೆಂಗಳೂರಿನ ಮೆಜೆಸ್ಟಿಕ್ ಟು ದಾಬಸ್ ಪೇಟೆ ಬಸ್ ನಲ್ಲಿ ಈ ಒಂದು ಘಟನೆ ನಡೆದಿದೆ. ಹಣಕೊಟ್ಟು ಟಿಕೆಟ್ ತೆಗೆದುಕೊಳ್ಳುವಂತೆ ಕಂಡಕ್ಟರ್ ಹೇಳಿದ್ದಾರೆ. ಆದರೂ ಸಹ ಟಿಕೆಟ್ ಪಡೆಯದೆ ಮಹಿಳೆ ಉದ್ಧಟತನ ತೋರಿದ್ದಾರೆ. ಚೆಕಿಂಗ್ ನವರು ಬರುತ್ತಾರೆ ಅಂತ ಹೇಳಿದರೆ, ಯಾರಾದರೂ ಬರಲಿ ನಾನು ಮಾತನಾಡುತ್ತೇನೆ ಅಂತ ಉದ್ಧಟತನ ತೋರಿದ್ದಾರೆ. ಇನ್ನೋರ್ವ ಮಹಿಳೆ ಮೇಡಂ ಟಿಕೆಟ್ ತೊಗೊಳ್ಳಿ ನಿಮ್ ಜೊತೆ ನಮಗೂ ಲೇಟ್ ಆಗುತ್ತೆ ಎಂದಿದ್ದಾರೆ. ಏನ್ ಮಾಡ್ತೀರಾ ಮಾಡಿ ಬೇಕಾದ್ ಮಾಡಿ ಅಂತ ಅವಾಜ್ ಹಾಕಿದ್ದಾರೆ.

Read More