Author: kannadanewsnow05

ಬೆಳಗಾವಿ : ರಾಜ್ಯದಲ್ಲಿ ಹೃದಯಾಘಾತ ಸರಣಿ ಸಾವುಗಳು ಮುಂದುವರೆದಿದ್ದು, ಇಂದು ಬೆಳಿಗ್ಗೆ ತಾನೇ ಕನಕಪುರ, ಧಾರವಾಡ ಹಾಗೂ ದಾವಣಗೆರೆಯಲ್ಲಿ ಓರ್ವ ಯುವತಿ ಹಾಗೂ ಇಬ್ಬರು ಯುವಕರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ವರದಿಯಾಗಿತ್ತು. ಇದೀಗ ಅದರ ಬೆನ್ನಲ್ಲೇ ಬೆಳಗಾವಿಯಲ್ಲಿ ಕೂಡ ಹಾರ್ಟ್ ಅಟ್ಯಾಕ್ ಗೆ ಚಾಲಕರು ಒಬ್ಬರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಹೌದು ಬೆಳಗಾವಿ ಜಿಲ್ಲೆಯ ಸೌದತ್ತಿ ಪಟ್ಟಣದ ಎಪಿಎಂಸಿಯಲ್ಲಿ ಆವರಣದಲ್ಲಿ ಈ ಒಂದು ಘಟನೆ ನಡೆದಿದ್ದು, ಹೃದಯಾಘಾತದಿಂದ ಅಶೋಕ್ ಜೀರಿಗವಾಡ (40) ಎನ್ನುವ ವ್ಯಕ್ತಿ ಸಾವನಪ್ಪಿದ್ದಾರೆ. ಮೃತ ಅಶೋಕ್ ಸೌದತ್ತಿ ತಾಲೂಕಿನ ಚಿಕ್ಕ ಉಳ್ಳಿಗೇರಿ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ. ಸೌದತಿ ಪಟ್ಟಣದ ಎಪಿಎಂಸಿ ಮಾರುಕಟ್ಟೆಗೆ ಅಶೋಕ್ ಹೆಸರು ಕಾಳು ತಂದಿದ್ದರು. ಈ ವೇಳೆ ಎದೆನೋವಿನಿಂದ ಕುಸಿದು ಬಿದ್ದು ಚಾಲಕ ಅಶೋಕ್ ಸಾವನಪ್ಪಿದ್ದಾರೆ. ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಹಾಸನ : ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಿದ್ದು, ಇಂದು ಕೂಡ ರಾಜ್ಯದಲ್ಲಿ ಹಾಸನ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಒಟ್ಟು ಹೃದಯಾಘಾತಕ್ಕೆ 5 ಜನರು ಬಲಿಯಾಗಿದ್ದಾರೆ. ಕಳೆದ 46 ದಿನಗಳಲ್ಲಿ ಹಾಸನ ಜಿಲ್ಲೆಯಲ್ಲಿ 40ಕ್ಕೂ ಹೆಚ್ಚು ಜನರು ಹೃದಯಘಾತದಿಂದ ಸಾವನಪ್ಪಿದ್ದಾರೆ. ಇದೀಗ ಹಾಸನದಲ್ಲಿ ಈ ಒಂದು ಸರಣಿ ಸಾರಿಗೆ ಅತಿಯಾದ ಮಾಂಸ ಸೇವನೆ ಕಾರಣ ಎಂದು ಶಾಸಕ ಎಚ್.ಡಿ ರೇವಣ್ಣ ತಿಳಿಸಿದರು. ಹಾಸನ ಜಿಲ್ಲೆಯಲ್ಲಿ ಹೃದಯಘಾತದಿಂದ ಸರಣಿ ಸಾವು ವಿಚಾರವಾಗಿ ಹೃದಯಾಘಾರದಿಂದ ಸರಣಿ ಸಾವುಗಳಿಗೆ ಮಾಂಸಹಾರ ಸೇವನೆಯೇ ಕಾರಣ ಎಂದು ಹಾಸನ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಎಚ್.ಡಿ ರೇವಣ್ಣ ಈ ಒಂದು ಹೇಳಿಕೆ ನೀಡಿದ್ದು, ಬೀಗರೂಟದಲ್ಲಿ ಅತಿಯಾಗಿ ರೆಡ್ ಮೀಟ್ ಸೇವನೆ ಮಾಡುತ್ತಿದ್ದಾರೆ ಎಂದರು. ಅಲ್ಲದೇ ಹಾಸನ ಜಿಲ್ಲೆಯಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ಗಳ ಸಂಖ್ಯೆ ಹೆಚ್ಚಾಗಿದೆ. ಆದಾಯ ಬರುತ್ತೆ ಎಂದು ಹೆಚ್ಚಿನ ಸಂಖ್ಯೆಯಲ್ಲಿ ಬಾರ್ ತೆರೆದಿದ್ದಾರೆ. ಬಾರ್ ನಲ್ಲಿ ಕುಡಿದು ಅನಾಹುತವಾಗುತ್ತಿದೆ ಎಂದು ಕಿಡಿಕಾರಿದರು. ವೈದ್ಯರ ಜೊತೆ ಶಾಸಕ…

Read More

ಬೆಂಗಳೂರು : ರಾಜ್ಯದಲ್ಲಿ ಹೃದಯಾಘಾತ ಸರಣಿ ಸಾವುಗಳು ಮುಂದುವರೆದಿದ್ದು ಇಂದು ರಾಜ್ಯದಲ್ಲಿ ಒಂದೇ ದಿನ 6 ಜನ ಹೃದಯಘಾತಕ್ಕೆ ಬಲಿಯಾಗಿದ್ದಾರೆ. ಮಂಗಳೂರು, ದಾವಣಗೆರೆ, ವಿಜಯನಗರ ಮಂಡ್ಯ ಸೇರಿದಂತೆ ಒಟ್ಟು 6ಜನರು ಹೃದಯಘಾತಕ್ಕೆ ಬಲಿಯಾಗಿದ್ದಾರೆ. ರಾಯಚೂರಲ್ಲಿ ನರಳಾಡಿ ಪ್ರಣಾಬಿಟ್ಟ ವ್ಯಕ್ತಿ! ರಾಯಚೂರಿನ ಮಸ್ಕಿ ಪಟ್ಟಣದ ಆರೋಗ್ಯ ಕೇಂದ್ರದಲ್ಲಿ ಪಗಡದಿನ್ನಿ ಕ್ಯಾಂಪ್‌ನ ಶರಣಬಸವ (32) ಎಂಬ ವ್ಯಕ್ತಿ ಎದೆನೋವಿನಿಂದ ನರಳುತ್ತಿದ್ದ ಶರಣಬಸವನನ್ನು ಆತನ ಸ್ನೇಹಿತರು ಚಿಕಿತ್ಸೆಗಾಗಿ ಬೈಕ್‌ ನಲ್ಲಿಯೇ ಮಸ್ಕಿ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದರು. ಆದರೆ ಆ ಸಮಯದಲ್ಲಿ ಆಸ್ಪತ್ರೆಯಲ್ಲಿ ವೈದ್ಯರು ಇರಲಿಲ್ಲ. ಅಲ್ಲಿದ್ದ ನರ್ಸ್‌ಗಳು ಆತನಿಗೆ ಚಿಕಿತ್ಸೆ ನೀಡಲು ಪ್ರಯತ್ನಿಸಿದರೂ ಕೂಡ ಫಲಕಾರಿಯಾಗಿರಲಿಲ್ಲ. ಪ್ರಾಣ ಉಳಿಸಲು ಆತನ ಸ್ನೇಹಿತರು, ಸಂಬಂಧಿಕರು ನಾನಾ ಪ್ರಯತ್ನಗಳನ್ನು ಮಾಡಿದ್ದು, ಬಳಿಕ ಆರೋಗ್ಯ ಕೇಂದ್ರದಿಂದ ಸಿಂಧನೂರು ತಾಲೂಕಾಸ್ಪತ್ರೆಗೆ ಕರೆದೊಯ್ಯುತ್ತಿದ್ದರು. ಈ ವೇಳೆ ಮಾರ್ಗಮಧ್ಯೆ ನರಳಾಡಿ ಸಾವನ್ನಪ್ಪಿದ್ದಾರೆ. ಬಸ್ ನಲ್ಲಿ ಪ್ರಯಾಣಿಸುವಾಗಲೇ ಹಾರ್ಟ್ ಅಟ್ಯಾಕ್! ಹಾಸನ ಮೂಲದ ವ್ಯಕ್ತಿಯೊಬ್ಬ ಬಸ್ ನಲ್ಲಿ ಪ್ರಯಾಣಿಸುವಾಗಲೇ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ…

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಅವರಿಗೆ ಕೋರ್ಟ್ ನಿಂದ ಮತ್ತೊಂದು ರಿಲೀಫ್ ಸಿಕ್ಕಿದ್ದು, ಈ ಹಿಂದೆ ಜುಲೈ 1 ರಿಂದ 25 ರವರೆಗೆ ವಿದೇಶಕ್ಕೆ ತೆರಳಲು ಕೋರ್ಟ್ ಅನುಮತಿ ನೀಡಿತ್ತು. ಆದರೆ ದಿನಾಂಕ ಬದಲಾವಣೆ ಮಾಡಿ ಎಂದು ಅರ್ಜಿ ಸಲ್ಲಿಸಿದ್ದ ದರ್ಶನ್, ಇದೀಗ ಕೋರ್ಟ್ ಜುಲೈ 11 ರಿಂದ ಜುಲೈ 30 ರವರೆಗೆ ವಿದೇಶಕ್ಕೆ ತೆರಲು ಅನುಮತಿ ನೀಡಿದೆ. ಹೌದು ನಟ ದರ್ಶನ್ ವಿದೇಶ ಪ್ರಯಾಣದ ಹೊಸ ದಿನಾಂಕಕ್ಕೆ ಕೋರ್ಟ್ ಅನುಮತಿ ನೀಡಿದೆ. ಜುಲೈ 11 ರಿಂದ 30 ರವರೆಗೆ ವಿದೇಶಕ್ಕೆ ತೆರಳಲು ಅನುಮತಿ ನೀಡಿದ್ದು, ಅವರ ನಟನೆಯ ಡೆವಿಲ್ ಸಿನಿಮಾ ಶೂಟಿಂಗ್ ಗೆ ಯುರೋಪ್, ದುಬೈಗೆ ತೆರಳಲು ಅನುಮತಿ ನೀಡಿದೆ. ಈ ಹಿಂದೆ ಜುಲೈ 1 ರಿಂದ 25 ರವರೆಗೆ ತೆಳುವಂತೆ ಅನುಮತಿಸಿತ್ತು. ದಿನಾಂಕ ಬದಲಾವಣೆ ಮಾಡಿ ಎಂದು ಕೋರಿ ಕೋರ್ಟಿಗೆ ದರ್ಶನ್ ಅರ್ಜಿ ಸಲ್ಲಿಸಿದ್ದರು. ಹಾಗಾಗಿ ಜುಲೈ 13 ರಿಂದ…

Read More

ಬೆಂಗಳೂರು : ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ಒಂದನ್ನು ನೀಡಿದ್ದು, ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸಚಿವ ಈಶ್ವರ್ ಖಂಡ್ರೆ ಇಂದು ಅಧಿಕಾರಿಗಳಿಗೆ ಭರ್ತಿ ಮಾಡುವಂತೆ ಸೂಚನೆ ನೀಡಿದರು. ವಿಕಾಸ ಸೌಧದಲ್ಲಿ ಇಂದು ಅಧಿಕಾರಿಗಳಿಗೆ ಸಭೆಯಲ್ಲಿ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದರು. ಇಂದು ವಿಕಾಸ ಸಹೋದರದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವ ಈಶ್ವರ ಖಂಡ್ರೆ, ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಪಟ್ಟಿಮಾಡಿ. ನೇಮಕಾತಿ ಪ್ರಕ್ರಿಯೆ ಆರಂಭಿಸಲು ಮತ್ತು ತಕ್ಷಣ ಅಗತ್ಯವಿರುವ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದಲ್ಲಿ ಕೂಡಲೇ ನೇಮಕಾತಿ ಮಾಡಿಕೊಳ್ಳಲು ಹಾಗೂ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಗೆ ಅಗತ್ಯವಾದ ವಾಹನ ಮತ್ತು ಉಪಕರಣ ಖರೀದಿಗೆ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದರು. ಕಾಡಂಚಿನ ಗ್ರಾಮಸ್ಥರ ಜೊತೆಗೆ ಸೌಹಾರ್ದಯುತ ಸಂಬಂಧ ಹೊಂದಬೇಕು ಜನರಿಗೆ ಅರಣ್ಯ ಮತ್ತು ವನ್ಯಜೀವಿಗಳ ಮಹತ್ವ ತಿಳಿಸಿಕೊಡಬೇಕು ಕಾಡಂಚಿನ ಜನರ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡಬೇಕು. ಜೊತೆಗೆ ಕಾಡಂಚಿನ…

Read More

ಮಂಡ್ಯ : ರಾಜ್ಯದಲ್ಲಿ ಪ್ರತಿದಿನ ಹೃದಯಘಾತದಿಂದ ಸಾವನಪುತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಇಂದು ಸಹ ರಾಜ್ಯದಲ್ಲಿ ಹಾಸನ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಒಟ್ಟು 5 ಜನರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಇದೀಗ ಮಂಡ್ಯ ಜಿಲ್ಲೆಯಲ್ಲಿ ವ್ಯಕ್ತಿ ಒಬ್ಬರು ನೀರು ಕುಡಿಯುತ್ತಿರುವಾಗಲೇ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಹೌದು ನೀರು ಕುಡಿಯುತ್ತಿದ್ದಾಗ ವ್ಯಕ್ತಿಗೆ ಹಾರ್ಟ್ ಅಟ್ಯಾಕ್ ಆಗಿದೆ. ಮಂಡ್ಯ ಜಿಲ್ಲೆಯಲ್ಲಿ ಹೃದಯಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ನೀರು ಕುಡಿಯುವಾಗಲೇ ಬಿದ್ದು ಪುಟ್ಟಸ್ವಾಮಿ (55) ಎನ್ನುವ ವ್ಯಕ್ತಿ ಸಾವನ್ನಪ್ಪಿದ್ದಾರೆ.ಮಳವಳ್ಳಿ ತಾಲೂಕಿನ ಅಟ್ಟುವನಹಳ್ಳಿಯಲ್ಲಿ ಈ ಒಂದು ದುರಂತ ನಡೆದಿದೆ. ಜಮೀನಿನಿಂದ ಮೇಕೆಗೆ ಮೇವಿಗೆ ತಂದಿರುತ್ತಾರೆ. ಈ ವೇಳೆ ಮನೆಯವರ ಬಳಿ ನೀರು ಪಡೆದು ನೀರು ಕುಡಿಯುವಾಗಲೇ ಪುಟ್ಟಸ್ವಾಮಿ ಏಕಾಏಕಿ ಹೃದಯಾಘಾತದಿಂದ ಸಾವನಪ್ಪಿದ್ದಾರೆ.

Read More

ಬೆಳಗಾವಿ : ಬೆಳಗಾವಿಯಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು, ವಿದ್ಯುತ್ ಅಂತಿ ದುರಸ್ತಿ ಮಾಡುವ ವೇಳೆ ಶಾಕ್ ಹೊಡೆದು ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಮುಗಳಿಹಾಳ ಎಂಬ ಗ್ರಾಮದಲ್ಲಿ ನಡೆದಿದೆ. ಹೆಸ್ಕಾಂ ಸಿಬ್ಬಂದಿ ಮಾರುತಿ ಹವಲಿ (25) ಸಾವನ್ನಪ್ಪಿದ್ದಾರೆ. ವಿದ್ಯುತ್ ಕಂಬ ಹತ್ತಿ ವಿದ್ಯುತ್ ದುರಸ್ತಿ ಮಾಡುತ್ತಿದ್ದಾಗ ಈ ಒಂದು ಅವಘಡ ಸಂಭವಿಸಿದೆ. ವಿದ್ಯುತ್ ಕಂಬದಲ್ಲಿ ಹೆಸ್ಕಾಂ ಸಿಬ್ಬಂದಿ ಮೃತದೇಹ ನೇತಾಡುತ್ತಿದೆ. ಕಳೆದ 3 ಗಂಟೆಯಿಂದ ಮೃತದೇಹ ನೇತಾಡುತ್ತಿದ್ದರು ಶವ ಕೆಳಗೆ ಇಳಿಸಲು ಅಧಿಕಾರಿಗಳು ಇನ್ನೂ ಸಹ ಸ್ಥಳಕ್ಕೆ ಬಂದಿಲ್ಲ. ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ. ಸೌದತ್ತಿ ಪೊಲೀಸ್ ಠಾಣೆಯಲ್ಲಿ ಈ ಒಂದು ಪ್ರಕರಣ ದಾಖಲಾಗಿದೆ.

Read More

ಉಡುಪಿ : ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಬದಲಾವಣೆ ಆಗುತ್ತಾರೆ. ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ ಬದಲಾವಣೆ ಗಾಳಿ ರಾಜ್ಯದಲ್ಲಿ ಬೀಸಲಿದೆ ಎಂದು ಕಾಂಗ್ರೆಸ್ಸಿನ ಕೆಲವು ನಾಯಕರೇ ಹೇಳಿಕೆ ನೀಡಿದ್ದರು. ಬಳಿಕ ಸಿಎಂ ಸಿದ್ದರಾಮಯ್ಯ ನಾನೇ 5 ವರ್ಷಗಳ ಕಾಲ ಸಿಎಂ ಆಗಿರ್ತೀನಿ ಎಂದು ಸಹ ಹೇಳಿದರು. ಇದೀಗ ಜಿ ಪರಮೇಶ್ವರ್ ಅವರು ನಾವು ಯಾವುದೇ ಬದಲಾವಣೆ ಬಯಸುವುದಿಲ್ಲ ಎಂದು ಅಚ್ಚರಿ ಹೇಳಿಕೆ ನೀಡಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೆಳ್ಮನ್ನು ದೇವಾಲಯದಲ್ಲಿ ಮಾತನಾಡಿದ ಅವರು ನನಗೆ ಯಾವ ಬೇಸರವು ಇಲ್ಲ. ಮೂರನೇ ಬಾರಿಗೆ ನನಗೆ ಗೃಹ ಇಲಾಖೆ ಖಾತೆ ಕೊಟ್ಟಿದ್ದಾರೆ ಜವಾಬ್ದಾರಿಯಿಂದ ನಾನು ಇಲಾಖೆಯ ಕೆಲಸ ಮಾಡುತ್ತಿದ್ದೇನೆ. ಬೇಸರವಾಗುವ ಪ್ರಶ್ನೆಯೇ ಇಲ್ಲ ಎಂದು ಜಿ ಪರಮೇಶ್ವರ್ ತಿಳಿಸಿದರು. ನಾನೇ 5 ವರ್ಷ ಸಿಎಂ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ ಎಂದಾಗ ಸಿಎಂ ವಿಚಾರವಾಗಿ ಪದೇ ಪದೇ ಚರ್ಚೆ ಮಾಡುವುದು ಅನಗತ್ಯ ಎಂದು ತಿಳಿಸಿದರು.

Read More

ಕಲಬುರ್ಗಿ : ಕಳೆದ ಕೆಲವು ದಿನಗಳ ಹಿಂದೆ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆ ಆವರಣಗಳಲ್ಲಿ ಇರುವಂತಹ ಜನೌಷಧ ಕೇಂದ್ರ ಸ್ಥಗಿತಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿತ್ತು. ಇದೀಗ ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ತಡೆ ನೀಡಿದ್ದು, 16 ಅರ್ಜಿದಾರರಿಗೆ ಸಂಬಂಧಿಸಿದಂತೆ ಹೈಕೋರ್ಟ್ ಇದೀಗ ಮಧ್ಯಂತರ ಆದೇಶ ತಡೆ ನೀಡಿದೆ. ಹೌದು, ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸಿದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. 16 ಅರ್ಜಿದಾರರಿಗೆ ಸಂಬಂಧಿಸಿದಂತೆ ಹೈಕೋರ್ಟ್ ಮಧ್ಯಂತರ ದಡಿ ನೀಡಿ ಆದೇಶ ಹೊರಡಿಸಿದೆ. ಸರಕಾರಿ ಆಸ್ಪತ್ರೆಯ ಆವರಣದಲ್ಲಿನ ಜನ ಔಷಧ ಕೇಂದ್ರ ಸ್ಥಗಿತಗೊಳಿಸಿ ರಾಜ್ಯ ಸರ್ಕಾರ ಆದೇಶ ನೀಡಿತ್ತು. ಆದೇಶ ಪ್ರಶ್ನಿಸಿ ಕಲ್ಬುರ್ಗಿ ಹೈಕೋರ್ಟ್ ಬೀಟಕ್ಕೆ 16 ಅರ್ಜಿಗಳು ಸಲ್ಲಿಕೆಯಾಗಿದ್ದವು. ಜನೌಷಧ ಕೇಂದ್ರ ತೆರೆಯಲು ಮೂಲಸೌಕರ್ಯ ಕಲ್ಪಿಸಲು ವೆಚ್ಚವಾಗಿದೆ. ಜನರಿಗೆ ಶೇಕಡ 50 ರಿಂದ 96 ರಿಯಾಯಿತಿ ದರದಲ್ಲಿ ಔಷಧ ನೀಡಲಾಗುತ್ತಿದೆ. ಸರ್ಕಾರದ ಆದೇಶದಿಂದ ನಮ್ಮ ಮೂಲಭೂತ ಹಕ್ಕಿಗೆ ಧಕ್ಕೆ ಆಗಿದೆ ಎಂದು ಅರ್ಹೀದಾರರ ಪರ ವಾದಿಸಲಾಯಿತು.…

Read More

ಚಿಕ್ಕಮಗಳೂರು : ರಾಜ್ಯದಲ್ಲಿ ಮತ್ತೆ ಪ್ಲಾಸ್ಟಿಕ್ ಅಕ್ಕಿ ಜನರ ಹೊಟ್ಟೆ ಸೇರುತ್ತಿದೆ. ಚಿಕ್ಕಮಗಳೂರಿನ ನ್ಯಾಯಬೆಲೆ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಅಕ್ಕಿ ಮಾರಾಟ ಮಾಡಲಾಗುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬೊಮ್ಮೇನಹಳ್ಳಿಯಲ್ಲಿ ಪಡಿತರ ಫಲಾನುಭವಿಗಳಿಗೆ ನ್ಯಾಯಬೆಲೆ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಅಕ್ಕಿ ವಿತರಿಸಿರುವುದು ಬೆಳಕಿಗೆ ಬಂದಿದೆ. ಹೌದು ಚಿಕ್ಕಮಂಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಾದ್ಯಂತ ನ್ಯಾಯ ಬೆಲೆ ಅಂಗಡಿಗಳಲ್ಲಿ ನೀಡಿದ ಅಕ್ಕಿ ನೀರಿಗೆ ಹಾಕಿದರೆ ಪ್ಲಾಸ್ಟಿಕ್ ನಂತೆ ತೇಲುತ್ತಿವೆ. ತರೀಕೆರೆ ತಾಲೂಕಿನ ನೆರಲಕೆರೆ ನ್ಯಾಯಬೆಲೆ ಅಂಗಡಿಯಲ್ಲಿ ಅಕ್ಕಿ ವಿತರಿಸಲಾಗಿತ್ತು. 50 ಕೆಜಿ ಅಕ್ಕಿಯಲ್ಲಿ ಅರ್ಧದಷ್ಟು ಪ್ಲಾಸ್ಟಿಕ್ ಮಾದರಿ ಅಕ್ಕಿ ಕಂಡು ಬಂದಿದೆ. ನ್ಯಾಯಬೆಲೆ ಅಂಗಡಿ ವಿರುದ್ಧ ಇದೀಗ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ತರೀಕೆರೆ ತಾಲೂಕಿನಾದ್ಯಂತ ನ್ಯಾಯಬೆಲೆ ಅಂಗಡಿಗಳಲ್ಲಿ ಅರ್ಧದಷ್ಟು ಪ್ಲಾಸ್ಟಿಕ್ ವಿತರಿಸಲಾಗಿದೆ. ಪ್ಲಾಸ್ಟಿಕ್ ಮಾದರಿಯ ಅಕ್ಕಿ ನೋಡಿ ಫಲಾನುಭವಿಗಳು ಸಹಜವಾಗಿ ಆತಂಕಕ್ಕೆ ಒಳಗಾಗಿದ್ದಾರೆ. ನೀರಿಗೆ ಹಾಕಿದ ತಕ್ಷಣ ಅಕ್ಕಿ ನೀರಿನಲ್ಲಿ ತೇಲುತ್ತಿರುವುದು ಕಂಡು ಬಂದಿದೆ. ಈ ಕುರಿತು ತರೀಕೆರೆ ತಹಶೀಲ್ದಾರ್ ಗೆ ದೂರು ಸಹ ನೀಡಲಾಗಿದ್ದು, ಪ್ಲಾಸ್ಟಿಕ್…

Read More