Subscribe to Updates
Get the latest creative news from FooBar about art, design and business.
Author: kannadanewsnow05
ಕಲಬುರ್ಗಿ : ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ ಅಥವಾ ಪತ್ನಿ ಇಬ್ಬರಲ್ಲಿ ಒಬ್ಬರು ಕೊಲೆಯಾಗುವುದನ್ನು ನೋಡಿದ್ದೇವೆ. ಆದರೆ ಇಲ್ಲೊಂದು ಘಟನೆಯಲ್ಲಿ ಪತ್ನಿಯೊಬ್ಬಳು ಪರಸ್ತ್ರಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಪತಿಯ ಕಾಲನ್ನು ಮುರಿಸಿರುವ ಘಟನೆ ಕಲಬುರ್ಗಿ ನಗರದಲ್ಲಿ ನಡೆದಿದೆ. ಹೌದು ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿ ಉಮಾದೇವಿ ಎನ್ನುವವರು ತಮ್ಮ ಪತಿ ವೆಂಕಟೇಶ್ ಅವರ ಕಾಲನ್ನು ಮುರಿಸಿರುವ ಘಟನೆ ಕಲಬುರ್ಗಿ ನಗರದ ಅತ್ತರ ಕಾಂಪೌಂಡ್ ಬಳಿ ಈ ಒಂದು ಘಟನೆ ನಡೆದಿದೆ. ಪರಸ್ತ್ರೀ ಜೊತೇ ಸಲುಗೆಯಿಂದ ಇದ್ದಾ ಪತಿ ವೆಂಕಟೇಶ್ ವೆಂಕಟೇಶ್ ನಡೆಯಿಂದ ಪತ್ನಿ ಉಮಾದೇವಿ ಕೋಪಗೊಂಡಿದ್ದರು. ದಂಪತಿಗಳ ಮಧ್ಯ ಹಲವು ಬಾರಿ ಜಗಳವಾದರೂ ಕೂಡ ಪತಿ ವೆಂಕಟೇಶ್ ಪರಸ್ತ್ರೀ ಸ್ನೇಹವನ್ನು ಬಿಟ್ಟಿರಲಿಲ್ಲ. ಹೀಗಾಗಿ ಪತ್ನಿ ಉಮಾದೇವಿ ಸುಪಾರಿ ನಡಿ ಪತಿಯ ಎರಡು ಕಾಲುಗಳನ್ನು ಮುರಿಸಿದ್ದಾರೆ. ಎರಡು ಕಾಲು ಮುರಿದರೆ ಗಂಡ ಮನೆಯಲ್ಲಿ ಇರುತ್ತಾನೆ ಎಂದು ಉಹಾದೇವಿ ಸುಪಾರಿ ನೀಡಿ ಈ ಕೃತ್ಯ ಎಸಗಿದ್ದಾರೆ. 5 ಲಕ್ಷ ರೂಪಾಯಿಗೆ ಸುಪಾರಿ ನೀಡಿ ಎರಡು…
ಚಿಕ್ಕಮಗಳೂರು : ಚಿಕ್ಕಮಂಗಳೂರು ಜಿಲ್ಲೆಯ ಕಳಸ ಪಟ್ಟಣದ ಮಾವಿನಕೆರೆ ಎಂಬ ಗ್ರಾಮದಲ್ಲಿ ನಿನ್ನೆ ಕಾಡುಕೋಣ ದಾಳಿಗೆ ರೈತ ರಘುಪತಿ ಎನ್ನುವವರು ಸಾವನ್ನಪ್ಪಿದ್ದರು. ಚಿಕ್ಕಮಂಗಳೂರು ಜಿಲ್ಲೆಯ ಕಳಸ ಪಟ್ಟಣದ ವ್ಯಾಪ್ತಿಯಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿದ್ದರಿಂದ ಇಂದು ಕಳಸ ಪಟ್ಟಣ ಬಂದ್ ಗೆ ಕರೆ ನೀಡಲಾಗಿದೆ. ಎಲ್ಲಾ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದು, ಅಲ್ಲದೆ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹೌದು ಕಳಸ ವ್ಯಾಪಿಯಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದ್ದರಿಂದ ಇಂದು ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣ ಬಂದ್ ಗೆ ಕರೆ ನೀಡಲಾಗಿದೆ. ರೈತ ಸಂಘ, ಸರ್ವಪಕ್ಷಗಳಿಂದ ಕಳಸ ಪಟ್ಟಣ ಬಂದ್ ಗೆ ಕರೆ ನೀಡಲಾಗಿದೆ. ಬೆಳಿಗ್ಗೆ 7 ರಿಂದ ಸಂಜೆ 4 ರ ವರೆಗೂ ಕಳಸ ಪಟ್ಟಣ ಬಂದ್ ಗೆ ಸಂಘಟನೆಗಳು ಕರೆ ನೀಡಿವೆ. ಕಾಡುಕೋಣ ದಾಳಿಯಿಂದ ರೈತ ರಘುಪತಿ ಮೃತಪಟ್ಟಿದ್ದರು. ಮಾವಿನಕೆರೆ ಗ್ರಾಮದಲ್ಲಿ ಕಾಡುಕೋಣ ದಾಳಿಗೆ ರೈತ ಬಲಿಯಾಗಿದ್ದರು.ಹಾಗಾಗಿ ಸರ್ಕಾರ ಮತ್ತು ಅರಣ್ಯ ಇಲಾಖೆಯ ವಿರುದ್ಧ ರೈತರು…
ಬೆಂಗಳೂರು : ಗೂಗಲ್ ಮ್ಯಾಪ್ ಬಳಸಿ ಇತ್ತೀಚಿಗೆ ಅದೆಷ್ಟು ಅಪಘಾತಗಳು ಸಂಭವಿಸುತ್ತಿದ್ದು ಕೆಲವರು ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಕೂಡ ಅಂತಹ ಘಟನೆ ನಡೆದಿದ್ದು, ವೈದ್ಯರೊಬ್ಬರು ಗೂಗಲ್ ಮ್ಯಾಪ್ ನಲ್ಲಿ ಮಗ್ನರಾಗಿ ವೇಗವಾಗಿ ಕಾರು ಚಾಲನೆ ಮಾಡುತ್ತ ರಸ್ತೆ ಬದಿಯಲ್ಲಿ ನಿಂತಿದ್ದ ಕ್ಯಾಂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಮೃತ ವೈದ್ಯನನ್ನು ಹೈದ್ರಾಬಾದ್ ಮೂಲದ ಅಮರ್ ಪ್ರಸಾದ ಎಂದು ಗುರುತಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಬಳಿಯ ರಾಷ್ಟ್ರೀಯ ಹೆದ್ದಾರಿ 648 ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಗೂಗಲ್ ಮ್ಯಾಪ್ ಮಗ್ನನಾಗಿದ್ದ ಕಾರು ಚಾಲಕ ವೇಗವಾಗಿ ಹೋಗಿ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಕಾರಿನಲ್ಲಿ ವೈದ್ಯ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾನೆ. ಹೈದ್ರಾಬಾದ್ ಮೂಲದ ಅಮರ್ ಪ್ರಸಾದ್, ವೇಣು ಮತ್ತು ಪ್ರವಳಿಕಾ ಅನ್ನೋ ಮೂವರು ಸ್ನೇಹಿತರು ತಮಿಳುನಾಡಿನ ಪಳನಿ ದೇವಸ್ಥಾನಕ್ಕೆ ಹೋಗಬೇಕು ಎಂದು ಕಾರು ಏರಿದ್ದಾರೆ . ಬೆಳಗಿನಜಾವ 2 ಗಂಟೆಗೆ…
ಚಿಕ್ಕಮಗಳೂರು : ಚಿಕ್ಕಮಂಗಳೂರು ಜಿಲ್ಲೆಯ ಕಳಸ ಪಟ್ಟಣದ ಮಾವಿನಕೆರೆ ಎಂಬ ಗ್ರಾಮದಲ್ಲಿ ನಿನ್ನೆ ಕಾಡುಕೋಣ ದಾಳಿಗೆ ರೈತ ರಘುಪತಿ ಎನ್ನುವವರು ಸಾವನ್ನಪ್ಪಿದ್ದರು. ಚಿಕ್ಕಮಂಗಳೂರು ಜಿಲ್ಲೆಯ ಕಳಸ ಪಟ್ಟಣದ ವ್ಯಾಪ್ತಿಯಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿದ್ದರಿಂದ ಇಂದು ಕಳಸ ಪಟ್ಟಣ ಬಂದ್ ಗೆ ಕರೆ ನೀಡಲಾಗಿದೆ. ಹೌದು ಕಳಸ ವ್ಯಾಪಿಯಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದ್ದರಿಂದ ಇಂದು ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣ ಬಂದ್ ಗೆ ಕರೆ ನೀಡಲಾಗಿದೆ. ರೈತ ಸಂಘ, ಸರ್ವಪಕ್ಷಗಳಿಂದ ಕಳಸ ಪಟ್ಟಣ ಬಂದ್ ಗೆ ಕರೆ ನೀಡಲಾಗಿದೆ. ಬೆಳಿಗ್ಗೆ 7 ರಿಂದ ಸಂಜೆ 4 ರ ವರೆಗೂ ಕಳಸ ಪಟ್ಟಣ ಬಂದ್ ಗೆ ಸಂಘಟನೆಗಳು ಕರೆ ನೀಡಿವೆ. ಕಾಡುಕೋಣ ದಾಳಿಯಿಂದ ರೈತ ರಘುಪತಿ ಮೃತಪಟ್ಟಿದ್ದರು. ಮಾವಿನಕೆರೆ ಗ್ರಾಮದಲ್ಲಿ ಕಾಡುಕೋಣ ದಾಳಿಗೆ ರೈತ ಬಲಿಯಾಗಿದ್ದರು.ಹಾಗಾಗಿ ಸರ್ಕಾರ ಮತ್ತು ಅರಣ್ಯ ಇಲಾಖೆಯ ವಿರುದ್ಧ ರೈತರು ಅಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಡು ಪ್ರಾಣಿಗಳ ಸ್ಥಳಾಂತರ ಮತ್ತು ಸೂಕ್ತ ಪರಿಹಾರಕ್ಕೆ ಆಗ್ರಹಿಸಿ ಇಂದು ಕಳಸ ಪಟ್ಟಣ ಬಂದ್…
ಬೆಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ (RGUHS) ಸೆನೆಟ್ ಚುನಾವಣೆ ಅಕ್ರಮ ಕುರಿತಂತೆ ಕೇಂದ್ರ ತನಿಖಾ ದಳ (CBI) ತನಿಖೆಗೆ ಸಿಟಿಜನ್ ರೈಟ್ಸ್ ಫೌಂಡೇಷನ್ ಆಗ್ರಹಿಸಿದೆ.ಅಲ್ಲದೇ ರಾಜ್ಯಪಾಲರು ಫಲಿತಾಂಶ ತಡೆಹಿಡಿದ ಬೆನ್ನಲ್ಲೇ, ಸಿಬಿಐ ತನಿಖೆಗೆ ಕೋರಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ CRF ದೂರು ನೀಡಿದೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿ ಅಕ್ರಮಗಳ ಬೆನ್ನತ್ತಿರುವ ಸಿಟಿಜನ್ ಸಿಟಿಜನ್ ರೈಟ್ಸ್ ಫೌಂಡೇಷನ್, ಮೆಡಿಕಲ್ ಕಾಲೇಜುಗಳಲ್ಲಿನ ಅಕ್ರಮ ಪ್ರವೇಶ, ನರ್ಸಿಂಗ್ ಕಾಲೇಜುಗಳ ವಿಚಾರದಲ್ಲಿನ ಭ್ರಷ್ಟಾಚಾರಗಳ ವಿರುದ್ದ ಸರಣಿ ದಾವೆಗಳ ಮೂಲಕ ಕಾನೂನು ಸಮರವನ್ನು ಬಿರುಸುಗೊಳಿಸಿದೆ. ಇದೀಗ RGUHS ಸೆನೆಟ್ ಸದಸ್ಯರ ಚುನಾವಣೆ ಅಕ್ರಮ ವಿರುದ್ದ ಕಾನೂನು ಹೋರಾಟಕ್ಕಿಳಿದಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಿಟಿಜನ್ ರೈಟ್ಸ್ ಫೌಂಡೇಷನ್ ಅಧ್ಯಕ್ಷ ಕೆ.ಎ.ಪಾಲ್ ಅವರು ಸಲ್ಲಿಸಿರುವ ದೂರು ರಾಜ್ಯದ ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಸಂಚಲನ ಸೃಷ್ಟಿಸಿದೆ. ಸೆನೆಟ್ ಚುನಾವಣಾ ಅಕ್ರಮ ಆರೋಪವು ಕೋಲಾಹಲ ಸೃಷ್ಟಿಸಿದ್ದು, ರಾಜ್ಯಪಾಲರು ಫಲಿತಾಂಶವನ್ನು ತಡೆಹಿಡಿದ ಬೆನ್ನಲ್ಲೇ ಸಿಬಿಐ…
ಮಂಗಳೂರು : ರಾಜ್ಯದಲ್ಲಿ ಕೆಲವು ದಿನಗಳಿಂದ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿವೆ. ಇದೀಗ ಮಂಗಳೂರಲ್ಲಿ ಸ್ನ್ಯಾಪ್ಚಾಟ್ನಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಅಶ್ಲೀಲ ವೀಡಿಯೋ ಫೈಲ್ ಕಳುಹಿಸಿ ಬೆದರಿಕೆ ಹಾಕಿದ್ದಾನೆ. ಬಾಲಕಿಯ ದೂರಿನ ಮೇರೆಗೆ ಬೆದರಿಕೆ ಹಾಕಿದಾವನ ವಿರುದ್ಧ ಮಂಗಳೂರಿನ ಸೆನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನ್ನ ಸ್ನ್ಯಾಪ್ಚಾಟ್ ಖಾತೆಗೆ ಓರ್ವ ವ್ಯಕ್ತಿ ಆತನ ಸ್ನ್ಯಾಪ್ಚಾಟ್ ಖಾತೆಯಿಂದ ಅಶ್ಲೀಲತೆಯ ವೀಡಿಯೋ ಕಾಲ್ನ ಸ್ಕ್ರೀನ್ ರೆಕಾರ್ಡ್ ಮಾಡಿರುವ ವೀಡಿಯೋ ಫೈಲ್ ಅನ್ನು ಕಳುಹಿಸಿ ಬೆದರಿಕೆ ಹಾಕಿದ್ದಾನೆ ಎಂದು ಅಪ್ರಾಪ್ತ ವಯಸ್ಸಿನ ಬಾಲಕಿ ನ್ಯಾಷನಲ್ ಸೈಬರ್ ಕ್ರೈಂ ರಿಪೋರ್ಟಿಂಗ್ ಪೋರ್ಟಲ್ಗೆ (ಎನ್ಸಿಸಿಆರ್ಪಿ) ದೂರು ನೀಡಿದ್ದಳು.ಅದರಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು : ಇಡೀ ದೇಶದಲ್ಲೇ ಭಾರಿ ಚರ್ಚೆಗೆ ಗ್ರಾಸವಾಗಿದ್ದ PSI ನೇಮಕಾತಿ ಹಗರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ನಾಯಕರ ವಿರುದ್ಧ ಯಾವುದೇ ಸಾಕ್ಷಿ ಸಿಗದ ಹಿನ್ನೆಲೆಯಲ್ಲಿ ಈ ಒಂದು ಪ್ರಕರಣ ತಾರ್ಕಿಕ ಅಂತ್ಯಕ್ಕೆ ಬಂದಿದ್ದು, ಬಿಜೆಪಿ ನಾಯಕರಿಗೆ ಕ್ಲೀನ್ ಚಿಟ್ ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ. ಹೌದು ಈ ಸಂಬಂಧ ಶೀಘ್ರ, ಸರ್ಕಾರಕ್ಕೆ ತನ್ನ ಅಂತಿಮ ವಿಚಾರಣಾ ವರದಿಯನ್ನು ಎಸ್ಐಟಿ ಸಲ್ಲಿಸಲಿದ್ದು, ಎಫ್ ಎಸ್ಎಲ್ ವರದಿಗೆ ಎಸ್ಐಟಿ ಕಾಯುತ್ತಿದೆ ಎಂದು ತಿಳಿದುಬಂದಿದೆ.ಆರೋಪಕ್ಕೆ ತುತ್ತಾಗಿದ್ದ ಬಿ.ವೈ.ವಿಜಯೇಂದ್ರ, ಬಸವರಾಜ್ ಬೊಮ್ಮಾಯಿ, ಅಶ್ವತ್ ನಾರಾಯಣ್, ಆರಗ ಜ್ಞಾನೇಂದ್ರ ಮತ್ತಿತರ ನಾಯಕರು ಕಳಂಕ ಮುಕ್ತರಾಗುವ ಸಾಧ್ಯತೆಗಳಿವೆ. ಇವರ ಕುರಿತ ಆರೋಪ ಗಳಿಗೆ ಯಾರೊ ಬ್ಬರೂ ಪುರಾವೆ ಒದಗಿಸಿಲ್ಲ ಎಂದು ತಿಳಿದುಬಂದಿದೆ. ಪ್ರಕರಣ ಹಿನ್ನೆಲೆ? 545 ಪಿಎಸ್ಐ ಹುದ್ದೆಗಳ ಭರ್ತಿಗಾಗಿ 2021 ಅಕ್ಟೋಬರ್ 3 ರಂದು ಬೆಂಗಳೂರು ಸೇರಿದಂತೆ ರಾಜ್ಯದ 7 ಜಿಲ್ಲೆಗಳಲ್ಲಿನ 93 ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಯಲ್ಲಿ ಕೆಲವು ಅಭ್ಯರ್ಥಿಗಳು ಹುದ್ದೆಗಳನ್ನು ಅಕ್ರಮವಾಗಿ…
ಬೆಂಗಳೂರು : ಎನ್ಪಿಎಸ್ ಕೈ ಬಿಟ್ಟು ಓಪಿಎಸ್ ಮರು ಜಾರಿಗೆ ಆಗ್ರಹಿಸಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ರಾಜ್ಯ ಸರ್ಕಾರಿ ನೌಕರರು ಪ್ರತಿಭಟನೆ ನಡೆಸುತ್ತಿದ್ದು, ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಇಂದು ಸರ್ಕಾರಿ ನೌಕರರು ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ. ರಾಜ್ಯ ಎನ್ಪಿಎಸ್ ನೌಕರರ ಸಂಘದ ಅಧ್ಯಕ್ಷ ಶಾಂತಾರಾಮ್ ಉಪವಾಸ ಸತ್ಯಾಗ್ರಹದ ಕುರಿತು ಮಾಹಿತಿ ನೀಡಿದರು. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಇಂದು ಸರ್ಕಾರಿ ನೌಕರರ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಸಂಘದ ಅಧ್ಯಕ್ಷ ಶಾಂತರಾಮ್ ಈ ಕುರಿತು ಮಾಹಿತಿ ನೀಡಿದ್ದು, 2020-21 ನೇ ಸಾಲಿನ ಎನ್ಪಿಎಸ್ ರದ್ದುಪಡಿಸಿ, ಒಪಿಎಸ್ ಜಾರಿ ಮಾಡುವಂತೆ ಆಗ್ರಹಿಸಿದ್ದೆವು. ಸಿಎಂ, ಡಿ ಸಿ ಎಂ, ಗೃಹಮಂತ್ರಿ ಅವರನ್ನು ಭೇಟಿಯಾಗಿದ್ದಾಗ ಬೇಡಿಕೆ ಈಡೇರಿಸುವ ಭರವಸೆಯನ್ನು ನೀಡಿದ್ದರು. ಆದರೆ ರಾಜ್ಯ ಸರ್ಕಾರ ಕೊಟ್ಟ ಭಾಷೆಯನ್ನು ಈಡೇರಿಸುವ ಕೆಲಸ ಇದುವರೆಗೂ ಮಾಡಿಲ್ಲ. ನಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಇಂದು 1 ದಿನ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದೇವೆ. ಓಪಿಎಸ್ ಜಾರಿ 6ನೇ ಗ್ಯಾರಂಟಿ…
ಕೊಡಗು : ಇಂದು ಕೊಡವಾಮೆ ಬಾಳು ಪಾದಯಾತ್ರೆ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಮಡಿಕೇರಿ ನಗರದಲ್ಲಿ ಇಂದು ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಇಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ. ಅಲ್ಲದೆ ಮಡಿಕೇರಿ ನಗರದಲ್ಲಿ ಇಂದು ವಾಹನಗಳ ಪಾರ್ಕಿಂಗ್ ಗೆ ನಿರ್ಬಂಧ ವಿಧಿಸಲಾಗಿದೆ. ಮಡಿಕೇರಿ ನಗರದಾದ್ಯಂತ ಭದ್ರತೆಗಾಗಿ 700 ಪೊಲೀಸರನ್ನು ನೀಯೋಜನೆ ಮಾಡಲಾಗಿದೆ. ಸಂಸ್ಕೃತಿ ರಕ್ಷಣೆಗಾಗಿ ಕೊಡವಾಮೆ ಬಾಳು ಪಾದಯಾತ್ರೆ ಆಯೋಜನೆ ಮಾಡಲಾಗಿದ್ದು, ಮಡಿಕೇರಿ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ.
ಢಾಕಾ : ದೇಶದ ವಿರುದ್ಧ ಪಿತೂರಿ ನಡೆಸಿದ ಆರೋಪದ ಮೇಲೆ ಬಾಂಗ್ಲಾದೇಶದ ಖ್ಯಾತ ಸಂಗೀತಗಾರ್ತಿ ಹಾಗೂ ನಟಿ ಮೆಹರ್ ಅಫ್ರೋಜ್ ಶಾನ್ ಅವರನ್ನು ಢಾಕಾ ಮೆಟ್ರೋಪಾಲಿಟನ್ ಪೊಲೀಸರ ಪತ್ತೇದಾರಿ ಶಾಖೆ (ಡಿಬಿ) ಬಂಧಿಸಿದೆ.ವರದಿಗಳ ಪ್ರಕಾರ, ಶಾನ್ ಬಾಂಗ್ಲಾದೇಶದಲ್ಲಿನ “ದೌರ್ಜನ್ಯ”ಗಳ ವಿರುದ್ಧ ಧ್ವನಿ ಎತ್ತಿದ್ದಾರೆ ಮತ್ತು ಮೊಹಮ್ಮದ್ ಯೂನಸ್ ಸರ್ಕಾರವನ್ನು ಟೀಕಿಸಿದ್ದಾರೆ. ಜಮಾಲ್ಪುರದಲ್ಲಿರುವ ಆಕೆಯ ಹಳ್ಳಿಯ ಮನೆಯ ಮೇಲೆ ದಾಳಿ ಮಾಡಿ ಬೆಂಕಿ ಹಚ್ಚಿದ ಕೆಲವೇ ಗಂಟೆಗಳ ನಂತರ ಆಕೆಯ ಬಂಧನವಾಗಿದೆ.ಸಂಜೆ 6 ಗಂಟೆ ಸುಮಾರಿಗೆ ಜಮಾಲ್ಪುರ್ ಸದರ್ ಉಪಜಿಲ್ಲಾದ ನೊರುಂಡಿ ರೈಲು ನಿಲ್ದಾಣದ ಬಳಿಯ ಮನೆಗೆ ವಿದ್ಯಾರ್ಥಿಗಳು ಮತ್ತು ಸ್ಥಳೀಯರು ಬೆಂಕಿ ಹಚ್ಚಿದ್ದಾರೆ ಎಂದು ವರದಿಯಾಗಿದೆ. ಕಳೆದ ಆಗಸ್ಟ್ನಿಂದ ವಿವಿಧ ಸಮಯಗಳಲ್ಲಿ ಬಾಂಗ್ಲಾದೇಶದಲ್ಲಿನ ಪ್ರಕ್ಷುಬ್ಧ ಪರಿಸ್ಥಿತಿಯ ಬಗ್ಗೆ ಶಾನ್ ಧ್ವನಿ ಎತ್ತಿದ್ದಾರೆ. ಕೆಲವು ದಿನಗಳ ಹಿಂದೆ, ಅವರು ಶೇಖ್ ಹಸೀನಾ ಅವರನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಸೂಚಿತ ಪೋಸ್ಟ್ಗಳನ್ನು ಸಹ ಮಾಡಿದ್ದರು. ಇತ್ತೀಚೆಗೆ, ಅವರು ‘ಡಿಫೆನ್ಸ್ ಪಾಕಿಸ್ತಾನ್’ ಎಂಬ ಮಾಜಿ ಹ್ಯಾಂಡಲ್ನಿಂದ…