Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆಗೆ ಸರ್ಕಾರದ ಸಮ್ಮತಿ ಪಡೆದಿದ್ದನ್ನು ಪ್ರಶ್ನಿಸಿ ಸಿಬಿಐ ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಸಲ್ಲಿಸಿರುವ ಅರ್ಜಿಯನ್ನು ಇದೀಗ ಹೈಕೋರ್ಟ್ ವಿಚಾರಣೆ ನಡೆಸಿದೆ. ಇಂದು ಈ ಪ್ರಕರಣದ ಕುರಿತಂತೆ ಹೈಕೋರ್ಟ್ ನಲ್ಲಿ, ನ್ಯಾ ಕೆ. ಸೋಮಶೇಖರ್ ನ್ಯಾ ಉಮೇಶ್ ಎಂ ಅಡಿಗರಿದ್ದ ಪೀಠದಲ್ಲಿ ವಿಚಾರಣೆ ನಡೆಸಲಾಯಿತು.ಸಿಬಿಐ ಪರ ವಿಶೇಷ ಅಭಿವೊಜಕ ಪ್ರಸನ್ನ ಕುಮಾರ್ ವಾದ ಮಂಡಿಸಿದ್ದು, ಒಮ್ಮೆ ಸಿಬಿಐ ತನಿಖೆಗೆ ವಹಿಸಿದ ನಂತರ ಹಿಂಪಡೆಯುವಂತಿಲ್ಲ. ತನಿಖೆಗೆ ಸಮ್ಮತಿ ಪಡೆದ ಸರ್ಕಾರದ ಕ್ರಮ ಕಾನೂನುಬಾಹಿರವೆಂದು ವಾದಿಸಿದರು. ಲೋಕಾಯುಕ್ತ ತನಿಖೆಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಪರ ವಕೀಲ ವೆಂಕಟೇಶ ದಳವಾಯಿ ಆಕ್ಷೇಪ ವ್ಯಕ್ತಪಡಿಸಿದ್ದು, ಡಿಕೆ ಶಿವಕುಮಾರ್ ಗೆ ಅನುಕೂಲವಾಗಲೆಂದೆ ಲೋಕಾಯುಕ್ತ ತನಿಖೆ ನಡೆಸಲಾಗುತ್ತದೆ ಹೀಗಾಗಿ ಸರ್ಕಾರದ ಆದೇಶವನ್ನು ರದ್ದು ಪಡಿಸಲು ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಪರ ವಕೀಲ ವೆಂಕಟೇಶ್ ದಳವಾಯಿ ಮನವಿ ಮಾಡಿದರು. ಈ ವೇಳೆ…
ಚಿಕ್ಕಬಳ್ಳಾಪುರ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ರಕ್ಷಾ ರಾಮಯ್ಯ ಪರವಾಗಿ ಚುನಾವಣೆ ಪ್ರಚಾರ ಮಾಡಿದರು ಈ ವೇಳೆ ಮಾತನಾಡಿದ ಅವರು ರಾಜ್ಯದ ಜನರಿಗೆ ಮೋದಿ ಅವರ ಮೇಲೆ ವಿಶ್ವಾಸವಿಲ್ಲ ರಾಜ್ಯದಲ್ಲಿ ಮೋದಿಯಲೇ ಯಾವುದು ಇಲ್ಲ ಎಂದು ವಾಗ್ದಾಳಿ ನಡೆಸಿದರು. ರಾಜ್ಯದ ಜನರಿಗೆ ನಾವು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ. ರಾಜ್ಯದ ಜನರಿಗೆ ಕಾಂಗ್ರೆಸ್ ಮೇಲೆ ನಂಬಿಕೆ ಹೆಚ್ಚಾಗಿದೆ.ಈ ಬಾರಿ ಭರವಸೆ ಕೊಟ್ಟಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ಮಾಡಿದ್ದೇವೆ. ರಾಜ್ಯದ ಜನರು ಮತ್ತೊಮ್ಮೆ ನಮ್ಮ ಕೈಹಿಡಿಯುತ್ತಾರೆ ಎಂಬ ವಿಶ್ವಾಸವಿದೆ.ರಾಜ್ಯದಲ್ಲಿ ಮೋದಿ ಅಲೆ ಇಲ್ಲ ಅವರು ಮ್ಯಾಜಿಕ್ ಮಾಡಲು ಆಗಲ್ಲ. ರಾಜ್ಯದ ಜನರಿಗೆ ಪ್ರಧಾನಿ ಮೋದಿ ಅವರ ಮೇಲೆ ವಿಶ್ವಾಸವಿಲ್ಲ ಎಂದರು. ಹೆಣ್ಣು ಮಕ್ಕಳ ಬಗ್ಗೆ ಅವರ ಭಾವನೆ ಏನಿದೆ ಅಂತ ತೋರಿಸುತ್ತದೆ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಅನ್ನೋದು ಕೆಟ್ಟ ಭಾಷೆ ಎಚ್ ಡಿ ಕುಮಾರಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು…
ಕೊಪ್ಪಳ : ದೇವಸ್ಥಾನ ಒಂದರಲ್ಲಿ ಏಕಾಏಕಿ ಕರಡಿ ಆಗಮಿಸಿದ್ದು ಈ ವೇಳೆ ವೃದ್ಧನ ಮೇಲೆ ಕರಡಿ ದಾಳಿ ನಡೆಸಿದೆ.ಆದರೆ ಗಾಯಾಳು ವೃದ್ಧನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ವೃದ್ಧ ಸಾವನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ರಾಂಪುರ್ ದಲ್ಲಿ ನಡೆದಿದೆ. ಹೌದು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಚೆನ್ನಪ್ಪ ಮಡಿವಾಳರ್ (74) ಸಾವನ್ನಪ್ಪಿದ್ದಾರೆ.ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ರಾಂಪುರ್ ದಲ್ಲಿ ದಾಳಿ ನಡೆಸಿತ್ತು ಗ್ರಾಮದ ಆಂಜನೇಯ ದೇವಸ್ಥಾನಕ್ಕೆ ನುಗ್ಗಿದ್ದ ಕರಡಿಯನ್ನು ಸೆರೆ ಹಿಡಿದಿದ್ದರು.ದೇವಸ್ಥಾನದಲ್ಲಿ ದೀಪದ ಎಣ್ಣೆ ನೀರು ಕುಡಿಯಲು ಕರಡಿ ಬಂದಿತ್ತು ಎಂದು ಹೇಳಲಾಗುತ್ತಿತ್ತು. ಇದನ್ನು ಗಮನಿಸಿ ಜನರು ಬಾಗಿಲು ಮುಚ್ಚಿದ್ದರು.ದೇವಸ್ಥಾನದ ಎಲ್ಲಾ ಬಾಗಿಲು ಮುಚ್ಚಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಕರಡಿ ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಬೋನ್ ಇರಿಸಿದ್ದು ಕರಡಿ ಈ ವೇಳೆ ತಪ್ಪಿಸಿಕೊಂಡು ವೃದ್ಧ ಚೆನ್ನಪ್ಪ ಮಡಿವಾಳರ ಎನ್ನುವ ವೃದ್ಧನ ಮೇಲೆ ದಾಳಿ ಮಾಡಿತ್ತು. ಈ ವೇಳೆ ಗಾಯಾಳು ಚೆನ್ನಪ್ಪ ಮಡಿವಾಳರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಆದರೆ…
ಚಿಕ್ಕಬಳ್ಳಾಪುರ : ಈ ಬಾರಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರು ಎಷ್ಟೇ ಸಾಲ ಮಾಡಿದ್ದರು ಕೂಡ ಅವರ ಸಾಲವನ್ನು ಮನ್ನಾ ಮಾಡಲಾಗುತ್ತದೆ ಎಂದು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನಲ್ಲಿ ಸಿಎಂ ಸಿದ್ದರಾಮಯ್ಯ ಭಾಷಣದಲ್ಲಿ ತಿಳಿಸಿದರು. ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ರಕ್ಷಾ ರಾಮಯ್ಯ ಪರವಾಗಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿ ನಿಮ್ಮ ಬಾಯಿಗೆ ಸಕ್ಕರೆ ಹಾಕುತ್ತೇನೆ 40,000 ಮತಗಳ ಲೀಡ್ ಕೊಡಿ ಮತದಾರರ ಬಾಯಿಗೆ ಸಕ್ಕರೆ ಹಾಕುತ್ತೇನೆ ಶಾಸಕ ಸುಬ್ಬ ರೆಡ್ಡಿಗೆ ಶಕ್ತಿ ಬರಬೇಕು ಅಂದರೆ ಕಾಂಗ್ರೆಸ್ ಗೆ ಮತ ಹಾಕಿ ಎಂದು ಸಿಎಂ ಸಿದ್ದರಾಮಯ್ಯ ಭಾಷಣದಲ್ಲಿ ತಿಳಿಸಿದರು. ಜಾತಿಗಣತಿಯಲ್ಲಿ ಏನಿದೆ ಎಂದು ನಾನು ಇನ್ನೂ ನೋಡಿಲ್ಲ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಆಯೋಗ ರಾಜ್ಯ ಸರ್ಕಾರಕ್ಕೆ ಜಾತಿಗಣತಿ ವರದಿಯನ್ನು ಸಲ್ಲಿಸಿದೆ. ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾತಿಗಣತಿ ಮಾಡಿದೆ ಸಂವಿಧಾನ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಕಳವಳ ವ್ಯಕ್ತಪಡಿಸಿದರು.…
ಕೋಲಾರ : ಲೋಕಸಭೆ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರಿಗೆ ಎಐಸಿಸಿ ದೊಡ್ಡ ಜವಾಬ್ದಾರಿ ನೀಡಿದ್ದು ಕನಿಷ್ಠ ಪಕ್ಷ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲದೆ ಹೋದರೆ ಸಿರಿವ ಸ್ಥಾನಕ್ಕೆ ಕುತ್ತು ಬರುತ್ತದೆ ಎಂದು ಖಡಕ್ ಎಚ್ಚರಿಕೆ ನೀಡಿತು ಕೂಡ ಕಾಂಗ್ರೆಸ್ ಅಭ್ಯರ್ಥಿಗಳು ಸೋತರೆ ಸಿಎಂ ಸಿದ್ದರಾಮಯ್ಯ ಸ್ಥಾನಕ್ಕೆ ಕಂಟಕ ಬರಲಿದೆ ಎಂದು ಸ್ಪೋಟಕ ಹೇಳಿಕೆ ನೀಡಿದರು. ಕೋಲಾರ ಜಿಲ್ಲೆಯಲ್ಲಿ ಕುರುಬ ಸಮುದಾಯದ ಮುಖಂಡರ ಸಭೆಯಲ್ಲಿ ಮಾತನಾಡಿದ ನಗರಭಿವೃದ್ಧಿ ಸಚಿವ ಬೈರತಿ ಸುರೇಶ್, ಕಾಂಗ್ರೆಸ್ ಅಭ್ಯರ್ಥಿಗಳು ಸೋತರೆ ಸಿದ್ದರಾಮಯ್ಯ ಸ್ಥಾನಕ್ಕೆ ಕಂಟಕವಿದೆ. ಕುರುಬ ಸಮುದಾಯದ ಮುಖಂಡರ ಸಭೆಯಲ್ಲಿ ಭೈರತಿ ಸುರೇಶ್ ಮಾತನಾಡಿದರು. ಕುರುಬ ಸಮುದಾಯ ಸಿಎಂ ಸಿದ್ದರಾಮಯ್ಯ ಕೈ ಬಲಪಡಿಸಬೇಕು ನಿಮ್ಮ ಬೆಂಬಲ ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ ಮೇಲಿರಲಿ ಬೇರೆ ಅಭ್ಯರ್ಥಿ ಗೆದ್ದರೆ ಸಿದ್ದರಾಮಯ್ಯ ಸ್ಥಾನಕ್ಕೆ ಕಂಟಕವಾಗಲಿದೆ ಕೋಲಾರದಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಹೇಳಿಕೆ ನೀಡಿದರು.
ಚಿಕ್ಕಬಳ್ಳಾಪುರ : ಬಿಜೆಪಿ ಅಭ್ಯರ್ಥಿ ಸುಧಾಕರ್ ಜೈಲಿಗೆ ಹೋಗುವುದು ಗ್ಯಾರಂಟಿ ಎಂದು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಲ್ಲಿಯಲ್ಲಿ ಸಿಎಂ ಸಿದ್ದರಾಮಯ್ಯ ಭಾಷಣದಲ್ಲಿ ಡಾ. ಕೆ ಸುಧಾಕರ್ ವಿರುದ್ಧ ವಾಗ್ದಾಳಿ ನಡೆಸಿದರು. ವೈದಕೀಯ ಸಲಕರಣೆಗಳ ಖರೀದಿಯಲ್ಲಿ ಭಾರಿ ಲಂಚ ಹೊಡೆಯಲಾಗಿದೆ.ದುಬಾರಿ ಬೆಲೆಗೆ ಕೋವಿಡ್ ವೈದ್ಯಕೀಯ ಸಲಕರಣೆ ಖರೀದಿ ಮಾಡಿದ್ದಾರೆ. ಕೋವಿಡ ಹಗರಣದ ಸಾಕ್ಷ್ಯಾಧಾರ ಸಿಕ್ಕಿವೆ ಸುಧಾಕರ್ ಜೈಲಿಗೆ ಹೋಗುತ್ತಾರೆ ಮಾಜಿ ಸಚಿವರಕ್ಕೆ ಸುಧಾಕರ್ ಹೆಸರು ಹೇಳಲು ನನಗೆ ನಾಚಿಕೆ ಆಗುತ್ತದೆ ಯಾವುದೇ ಕಾರಣಕ್ಕೂ ಡಾಕ್ಟರ್ ಕೆ ಸುಧಾಕರಿಗೆ ಮತ ನೀಡಬೇಡಿ ಎಂದರು. ಮಾಜಿ ಸಚಿವ ಡಾಕ್ಟರ್ ಸುಧಾಕರ್ ಜೈಲಿಗೆ ಹೋಗುವ ಸ್ಥಿತಿ ಬರಲಿದೆ ಎಂದು ಚಿಕ್ಕಬಳ್ಳಾಪುರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಡಾಕ್ಟರ್ ಕೆ ಸುಧಾಕರ್ ವಿರುದ್ಧ ವಾಗ್ದಾಳಿ ನಡೆಸಿದರು. ಭ್ರಷ್ಟರು ಸಂಸತ್ತಿಗೆ ಹೋದರೆ ಭ್ರಷ್ಟಾಚಾರ ಮತ್ತಷ್ಟು ಹೆಚ್ಚಾಗುತ್ತದೆ, ಡಾಕ್ಟರ್ ಕೆ ಸುಧಾಕರ್ ಹಗರಣದ ತನಿಖೆಗೆ ಆಯೋಗ ರಚಿಸಿದ್ದೇವೆ ಎಂದರು. ಮಾಹಿತಿ ಪ್ರಕಾರ ದಾಖಲೆಗಳು ಡಾಕ್ಟರ್ ಸುಧಾಕರ್ ವಿರುದ್ಧವೇ ಇದೆ.ಹಾಗಾಗಿ ಸುಧಾಕರ್ ನೂರಕ್ಕೆ ನೂರರಷ್ಟು ಜೈಲಿಗೆ ಹೋಗುತ್ತಾರೆ.ಸುಧಾಕರ್…
ಬೆಂಗಳೂರು : ನಿನ್ನೆ ಡಿಕೆ ಸುರೇಶ್ ಆಪ್ತನ ಮನೆಯ ಮೇಲೆ ಐಟಿ ಅಧಿಕಾರಿಗಳ ದಾಳಿ ನಡೆಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಡಿಕೆ ಸುರೇಶ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು ಐಟಿ ಹಾಗೂ ಇಡಿ ಬಿಜೆಪಿ ಹಾಗೂ ದೇವೇಗೌಡರ ಕೈಗೊಂಬೆಯಾಗಿವೆ ಎಂದು ಆಕ್ರೋಶ ಹೊರಹಾಕಿದರು. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಸರ್ಜಾಪುರದಲ್ಲಿ ಡಿಕೆ ಸುರೇಶ್ ಹೇಳಿಕೆ ನೀಡಿದ್ದು, ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ನಮ್ಮ ಮೇಲೆ ಐಡಿ ಇಡಿ ದಾಳಿ ನಡೆಸುತ್ತಿದ್ದಾರೆ ಎಂದು ಸರ್ಜಾಪುರ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ತೀವ್ರವಾಗಿ ವಾಗ್ದಾಳಿ ನಡೆಸಿದರು. ಐಟಿ ಇಡಿ ಅಧಿಕಾರಿಗಳ ಮುಖಾಂತರ ಕಾರ್ಯಕರ್ತರನ್ನು ಬೆದರಿಸುತ್ತಿದ್ದಾರೆ.ನಿನ್ನೆ ಐಟಿ ಅಧಿಕಾರಿಗಳು ನಮ್ಮ ಮುಖಂಡರನ್ನು ಟಾರ್ಗೆಟ್ ಮಾಡಿದ್ದರು. ಐಟಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡುತ್ತಿದ್ದೇನೆ. ಬೆದರಿಕೆ ಹಾಕುವುದು ಬಿಜೆಪಿ ಪರವಾಗಿ ಕೆಲಸ ಮಾಡುವುದು ಸರಿಯಲ್ಲ. ಬಿಜೆಪಿಗವ್ರು ಮಾಡುವ ತಂತ್ರಗಾರಿಕೆ ಅಕ್ಷಮ್ಯ ಅಪರಾಧ. ಎಂದು ವಾಗ್ದಾಳಿ ನಡೆಸಿದರು. ಐಟಿ ಹಾಗೂ ಇಡಿ ಬಿಜೆಪಿ ಮತ್ತು ಎಚ್ ಡಿ ದೇವೇಗೌಡರ ಕೈಗೊಂಬೆಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ…
ರಾಯಚೂರು : ರಾಯಚೂರಿನ ಸಿಂಧನೂರಿನಿಂದ ಮುದಗಲ್ಲಿಗೆ ಮದುವೆಗೆ ಎಂದು ತೆರಳುತ್ತಿದ್ದ ಬೈಕಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದ ಅಶೋಕ ಶಿಲಾ ಶಾಸನ ರಸ್ತೆ ಬಳಿ ಈ ಘಟನೆ ನಡೆದಿದೆ. ಲಾರಿ ಡಿಕ್ಕಿಯಾಗಿ ಬೈಕಿನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಾಪ್ಪಿದ್ದರೆ. ರಾಯಚೂರಿನ ಮಸ್ಕಿಯ ಅಶೋಕ ಶಿಲಾ ಶಾಸನ ರಸ್ತೆ ಬಳಿ ಈ ಘಟನೆ ಸಂಭವಿಸಿದೆ. ಸಿಂಧನೂರು ಮೂಲದ ಸಮೀರ್ (22) ಸಲ್ಮಾ (10) ಮೃತ ದುರ್ದೈವಿಗಳು ಎಂದು ಹೇಳಲಾಗುತ್ತಿದೆ. ಸಿಂಧನೂರಿನಿಂದ ಸವಾರರು ಮದುವೆಗೆ ಮುದುಗಲ್ಗೆ ತೆರಳುತ್ತಿದ್ದರು ಎಂದು ತಿಳಿದುಬಂದಿದ್ದು, ಮಸ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಬಾಗಲಕೋಟೆ : ಮದುವೆಗೆ ಎಂದು ಹೊರಟಿದ್ದ ಕ್ರೂಜರ್ ಹಾಗೂ ಖಾಸಗಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನಾಗಸಾಪಾಟ ಬಳಿ ಈ ಅಪಘಾತ ಸಂಭವಿಸಿದೆ. ಮಹಾರಾಷ್ಟ್ರದ ರಸ್ತೆ ಅಪಘಾತದಲ್ಲಿ ನಾಲ್ವರು ದುರ್ಮರಣ ಹೊಂದಿದ್ದು, ಭೀಕರವಾದ ಅಪಘಾತದಲ್ಲಿ ಬಾಗಲಕೋಟೆ ಜಿಲ್ಲೆಯ ನಾಲ್ವರು ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮೃತರು ಮದುವೆಗೆ ಎಂದು ಹೊರಟಿದ್ದರು ಈ ವೇಳೆ ಖಾಸಗಿ ಬಸ್ ಹಾಗೂ ಕ್ರೂಸರ್ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರದ ಜತ್ತ ಬಳಿಯ ನಾಗ ಸಾಪಾಟ ಬಳಿ ಈ ಅಪಘಾತ ಸಂಭವಿಸಿದೆ.ಖಾಸಗಿ ಬಸ್ಗೆ ಕ್ರೂಜರ್ ಡಿಕ್ಕಿಯಾಗಿ ನಾಲ್ವರು ದುರ್ಮರಣ ಹೊಂದಿದ್ದಾರೆ. ವಧುವಿನ ತಂಗಿ ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಬಾಗಲಕೋಟೆ ಜಿಲ್ಲೆಯ ಭಾಗ್ಯಶ್ರೀ ಅಂಬೇಕರ್ (18) ನಿವೇದಿತ (17) ಉಜ್ವಲ ಶಿಂದೆ (19) ಸ್ಥಳದಲ್ಲಿ ಸಾವನಪ್ಪಿದ್ದಾರೆ.ವಿಜಯಪುರ ಜಿಲ್ಲೆಯ ಅನುಸೂಯ ಮೊರೆ (56) ಎನ್ನುವ ಮಹಿಳೆ ಕೂಡ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಬೆಂಗಳೂರು : ಕನ್ನಡ ಚಿತ್ರರಂಗದಲ್ಲಿ ಕುಳ್ಳ ಎಂದೆ ಖ್ಯಾತಿ ಹೊಂದಿದ್ದ ನಟ ನಿರ್ಮಾಪಕ ಹಾಗೂ ನಿರ್ದೇಶಕರಾಗಿದ್ದ ದ್ವಾರಕೀಶ್ ಅವರ ಅಂತ್ಯಕ್ರಿಯೆ ಚಾಮರಾಜಪೇಟೆಯ ಟಿ ಆರ್ ಮಿಲ್ ಬಳಿ ಇರೋ ಹಿಂದೂ ರುದ್ರಭೂಮಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯ ಸಂಸ್ಕಾರ ನೆರವೇರಿತು. ರಾಜ್ಯ ಸರ್ಕಾರದ ಆದೇಶದಂತೆ ದ್ವಾರಕೀಶ್ ಅವರ ಅಂತ್ಯಕ್ರಿಯೆಯು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ದ್ವಾರಕೀಶ ಜೊತೆಗೆ ಹಿರಿಯ. ಮಗನಿಂದ ಅಗ್ನಿ ಸ್ಪರ್ಶ ನೆರವೇರಿತು.ಚಾಮರಾಜಪೇಟೆಯಲ್ಲಿ ದ್ವಾರಕೀಶ್ ಅಂತ್ಯಕ್ರಿಯೆ ನಡೆಯೋಕ್ಕೂ ಮುಂಚೆ ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿತು. ಮೊದಲಿಗೆ ಪ್ರೇತತ್ಮ ಸಂಸ್ಕಾರ. ಕಿವಿಯಲ್ಲಿ ನಾರಾಯಣ ಸ್ಮರಣೆ, ಚಿತ ಅಗ್ನಿ ಹೋಮದ ನಂತರ ಚಿತಾ ಶುದ್ದಿ ಕಾರ್ಯ ನಡೆಯಲಿದೆ ಬಳಿಕ ದಹನ ಮಾಡಿ ಅಗ್ನಿ ದಿಗ್ಬಂಧನ ನೆರವೇರಲಿತು. ನಂತರ ಅವರ ಹಿರಿಯ ಮಗ ಅಗ್ನಿ ಸ್ಪರ್ಶ ಮಾಡಿ ನೆರವೇರಿಸಿದರು. ನಿನ್ನೆ ದ್ವಾರಕೀಶ್ ಅವರಿಗೆ ಹೃದಯಾಘಾತ ಆಗಿತ್ತು. ಕಾಫಿ ಕುಡಿದು ಮಲಗಿದ ನಟ ಮತ್ತೆ ಏಳಲೇ ಇಲ್ಲ. ದ್ವಾರಕೀಶ್ ನಿಧನದ ಬಗ್ಗೆ ಅವರ ಮಗ ಗಿರಿ…