Author: kannadanewsnow05

ಬೆಂಗಳೂರು : ಸರ್ಕಾರಿ ನೌಕರರ ನಕಲಿ ದಾಖಲೆ ಸೃಷ್ಟಿಸಿ ಸುಮಾರು 7 ಕೋಟಿಗೂ ಅಧಿಕ ಹಣ ಪಡೆದು ವಂಚನೆ ಎಸಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಯನ್ನು ದೋಷಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಈ ಪ್ರಕರಣದ ಕುರಿತು ವಿಚಾರಣೆ ನಡೆಸಿದ ನ್ಯಾಯಾಧೀಶರು, ಬ್ಯಾಂಕ್ ವಂಚನೆ ಕೇಸ್ ನಲ್ಲಿ ಕೃಷ್ಣಯ್ಯ ಶೆಟ್ಟಿ ದೋಷಿ ಎಂದು ಆದೇಶ ಹೊರಡಿಸಿದರು. ಸಿಬಿಐ ಪ್ರಕರಣದಲ್ಲಿ ಮಾಜಿ ಸಚಿವ ಕೃಷ್ಣ ಶೆಟ್ಟಿ ದೋಷಿ ಎಂದು ಇದೀಗ ಕೋರ್ಟ್ ಆದೇಶ ಹೊರಡಿಸಿದೆ. 2008ರಲ್ಲಿ ಎಸ್‌ಬಿಎಂ ಬ್ಯಾಂಕ್ ದಾಖಲಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ವಂಚನೆ, ಫೋರ್ಜರಿ ಪ್ರಕರಣದಲ್ಲಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ದೋಷಿ ಎಂದು ಆದೇಶ ನೀಡಿದೆ. 7.17 ಕೋಟಿ ಸಾಲ ಪಡೆಯಲು ನಕಲಿ ದಾಖಲೆ ಸೃಷ್ಟಿಸಲಾಗಿತ್ತು. ಸರ್ಕಾರಿ ನೌಕರರ ನಕಲಿ ದಾಖಲೆ ಸೃಷ್ಟಿ ಮಾಡಿ ಸಾಲ ಪಡೆದ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆ ಬ್ಯಾಂಕ್ ವಂಚನೆ ಪ್ರಕರಣದಲ್ಲಿ…

Read More

ಬೆಂಗಳೂರು : ಇದೇ ಫೆಬ್ರವರಿ 8ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (CCL) ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಸದಾಶಿವನಗರದಲ್ಲಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಮನೆಗೆ ನಟ ಕಿಚ್ಚ ಸುದೀಪ್ ಅವರು ಭೇಟಿ ನೀಡಿ ಆಹ್ವಾನಿಸಿದ್ದಾರೆ. ಇಂದು ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ಕಿಚ್ಚ ಸುದೀಪ್ ಭೇಟಿ ನೀಡಿದ್ದು, ಸಿಸಿಎಲ್ 11ನೇ ಆವೃತ್ತಿ ಉದ್ಘಾಟನೆಗೆ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಸುದೀಪ ಅವರು ಆಹ್ವಾನ ನೀಡಿದ್ದಾರೆ. ಫೆಬ್ರವರಿ 8 ರಿಂದ ಬೆಂಗಳೂರಿನಲ್ಲಿ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಆರಂಭವಾಗಲಿದೆ. ಫೆಬ್ರವರಿ 8ರಿಂದ ಈ ಒಂದು ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಆರಂಭವಾಗಲಿವೆ. ಫೆಬ್ರವರಿ 8 ಮತ್ತು 9ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯಗಳು ನಡೆಯಲಿವೆ.ಮೊದಲ ಪಂದ್ಯ ಕರ್ನಾಟಕದ ಮತ್ತು ಹೈದ್ರಾಬಾದ್ ನಡುವೆ ನಡೆಯಲಿದೆ.ಅನೂಪ್ ಭಂಡಾರಿ ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಈ ವೇಳೆ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮದ್ ಕೂಡ ನಟ ಸುದೀಪ್ ಕಾರಿನಲ್ಲೇ ತೆರಳಿದರು. https://twitter.com/KicchaSudeep/status/1886728124215517572?t=_orGnURH9iEZQLYl9BovNA&s=19

Read More

ಬೆಂಗಳೂರು : ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಪಟ್ಟಂತೆ SIT ಅಧಿಕಾರಿಗಳು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ನಲಪಾಡ್ ಗೆ ಎರಡನೇ ಬಾರಿ ನೋಟಿಸ್ ನೀಡಿದ ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ್ ಅವರು ಇದು ತನಿಖೆಯ ಒಂದು ಭಾಗ ಅಷ್ಟೇ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದು ತನಿಖೆಯ ಒಂದು ಭಾಗ ಅಷ್ಟೇ. ಯಾರನ್ನು ಕರೆದು ಹೇಳಿಕೆ ದಾಖಲು ಮಾಡಿಕೊಳ್ಳಬೇಕು ಆ ಪ್ರಕ್ರಿಯೆ ಮಾಡುತ್ತಿದ್ದಾರೆ. ಅದರಲ್ಲಿ ಮೊಹಮ್ಮದ್ ನಲಪಾಡ್ ಒಬ್ಬರು ಎಂದು ಸಚಿವ ಜಿ.ಪರಮೇಶ್ವರ್ ಅವರು ತಿಳಿಸಿದರು. ಈ ಒಂದು ಪ್ರಕರಣದಲ್ಲಿ ಯಾವ ರೀತಿ ವ್ಯವಹಾರ ಇದೆ ಎಂದು ಅಧಿಕಾರಿಗಳು ಪತ್ತೆ ಮಾಡುತ್ತಿದ್ದಾರೆ. ಹಣಕಾಸಿನ ವ್ಯವಹಾರ ಇದೆಯಾ ಅಥವಾ ಇಲ್ವಾ ಅಂತ ತನಿಖೆ ನಡೆಸುತ್ತಾರೆ ಎಂದು ಬೆಂಗಳೂರಿನಲ್ಲಿ ಗ್ರಹ ಇಲಾಖೆಯ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು.SIT ಅಧಿಕಾರಿಗಳು ನೋಟಿಸ್ ನೀಡಿದ್ದರ ಹಿನ್ನೆಲೆಯಲ್ಲಿ ಮೊಹಮ್ಮದ್ ನಲಪಾಡ್ ಗೆ ಬಂಧನದ ಭೀತಿ ಕೂಡ ಎದುರಾಗಿದೆ.

Read More

ಮಂಗಳೂರು : ಮಸಾಜ್​ ಪಾರ್ಲರ್​ ಮೇಲಿನ ದಾಳಿ ಪ್ರಕರಣದಲ್ಲಿ ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ರಾಮಸೇನಾ ಕರ್ನಾಟಕ ಸಂಸ್ಥಾಪಕ ಪ್ರಸಾದ್ ಅತ್ತಾವರ ಸೇರಿದಂತೆ 11 ಮಂದಿಗೆ ಜಾಮೀನು ಸಿಕ್ಕಿದೆ. ಬಂಧಿತರಿಗೆ ಮಂಗಳೂರು 6ನೇ ಜೆಎಂಎಫ್ ಸಿ ನ್ಯಾಯಾಲಯ ಫೆ.7ರವರೆಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಬಳಿಕ ಆರೋಪಿಗಳ ಪರ ವಕೀಲರು ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಜಾಮೀನು‌ ಅರ್ಜಿ ಸಲ್ಲಿಸಿದ್ದರು. 14ಮಂದಿ ಆರೋಪಿಗಳಲ್ಲಿ ಜಾಮೀನು‌ ಅರ್ಜಿ ಸಲ್ಲಿಸದ ಮೂರು ಮಂದಿ‌ ಆರೋಪಿಗಳನ್ನು ಹೊರತುಪಡಿಸಿ ನ್ಯಾಯಾಲಯವು 11 ಮಂದಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಪ್ರಕರಣ ಹಿನ್ನೆಲೆ? ಕಳೆದ ಜನೆವರಿ 23 ರಂದು ನಗರದ ಬಿಜೈ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಇರುವ ಕಲರ್ಸ್ ಪಾರ್ಲರ್ ಮೇಲೆ ರಾಮಸೇನೆ ಕಾರ್ಯಕರ್ತರು ದಾಳಿ ಮಾಡಿ ಪೀಠೋಪಕರಣಗಳನ್ನು ಪುಡಿಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ರಾಮಸೇನೆ ಮುಖ್ಯ…

Read More

ವಿಜಯನಗರ : ನರೇಗಾ ಡೇ ಎಂಬ ಹೆಸರಿನಲ್ಲಿ ತಾಲೂಕು ಪಂಚಾಯಿತಿ ಅಧಿಕಾರಿಗಳು, ಪಿಡಿಒಗಳು ಸೇರಿದಂತೆ ಮಹಿಳಾ ಅಧಿಕಾರಿಗಳು ಕುಣಿದು ಕುಪ್ಪಳಿಸಿ ಮೋಜು ಮಸ್ತಿ ಮಾಡಿರುವ ಘಟನೆ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಈ ಒಂದು ಘಟನೆ ನಡೆದಿದ್ದು, ಇದೀಗ ಅಧಿಕಾರಿಗಳು ಭರ್ಜರಿ ಡ್ಯಾನ್ಸ್ ಮಾಡಿರುವ ವಿಡಿಯೋ ವೈರಲ್ ಆಗಿದ್ದು, ಈ ಕುರಿತು ಡಿಸಿಗೆ ದೂರು ಸಲ್ಲಿಕೆಯಾಗಿದೆ. ಹೌದು ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಅಧಿಕಾರಿಗಳು ಮಸ್ತ್ ಡಾನ್ಸ್ ಮಾಡಿದ್ದಾರೆ. ತಾಲೂಕು ಪಂಚಾಯತಿ ಅಧಿಕಾರಿ ಹಾಗೂ ಪಿಡಿಒಗಳಿಂದ ಭರ್ಜರಿ ಡ್ಯಾನ್ಸ್ ಮಾಡಲಾಗಿದೆ. ನರೇಗಾ ಡೇ ದಿನದಂದು ಅಧಿಕಾರಿಗಳು ಎಂಜಾಯ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಈ ಸಂದರ್ಭದಲ್ಲಿ ಅಧಿಕಾರಿ ಜೊತೆಗೆ ಮಹಿಳಾ ಸಿಬ್ಬಂದಿಗಳು ಕೂಡ ಭರ್ಜರಿ ಟೈಪ್ಸ್ ಹಾಕಿದ್ದಾರೆ. ಅಧಿಕಾರಿಗಳ ಡ್ಯಾನ್ಸ್ಗೆ ಸಿಬ್ಬಂದಿಗಳು ಶಿಳ್ಳೆ ಮತ್ತು ಚಪ್ಪಾಳೆ ಹೊಡೆದಿದ್ದು, ಅಧಿಕಾರಿಗಳ ಡ್ಯಾನ್ಸ್ ವಿಡಿಯೋ ವೈರಲ್ ಆಗಿದೆ. ಈ ಕುರಿತು ವಿಜಯನಗರ ಜಿಲ್ಲಾಧಿಕಾರಿಗೆ ದೂರು ನೀಡಲಾಗಿದೆ. ವಿಜಯನಗರ ಜಿಲ್ಲೆಯ ಹೂವಿನಹಡಗಲಿ…

Read More

ಬೆಂಗಳೂರು : ಎಡಗಾಲಿನ ಮಂಡಿ ನೋವು ಸಮಸ್ಯೆಯಿಂದ ಬಳಲುತ್ತಿರುವ ಸಿಎಂ ಸಿದ್ದರಾಮಯ್ಯ ಅವರು ಕಳೆದ ಕೆಲವು ದಿನಗಳಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವಿಶ್ರಾಂತಿ ಪಡೆಯುತ್ತಿದ್ದಾರೆ. ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡನೆ ಮಾಡುವ ಹಿನ್ನೆಲೆಯಲ್ಲಿ ಇದೀಗ ಇಂದಿನಿಂದ ವಿವಿಧ ಇಲಾಖೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ತಮ್ಮ ಕಾವೇರಿ ನಿವಾಸದಲ್ಲಿ ಬಜೆಟ್ ಪೂರ್ವಭಾವಿ ಸಭೆ ನಡೆಸಲಿದ್ದಾರೆ. ಹೌದು ಇಂದಿನಿಂದ ಬಜೆಟ್ ಪೂರ್ವಭಾವಿ ಸಭೆ ನಡೆಸುವ ಸಿಎಂ ಸಿದ್ದರಾಮಯ್ಯ ಕೆಲವು ದಿನಗಳಿಂದ ಸಿದ್ದರಾಮಯ್ಯ ವಿಶ್ರಾಂತಿ ಪಡೆಯುತ್ತಿದ್ದರು. ಎಡಗಾಲಿನ ಮಂಡಿನ ನೋವಿನ ಕಾರಣದಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ವಿಶ್ರಾಂತಿ ಪಡೆಯುತ್ತಿದ್ದರು. ಇದೀಗ ಬಜೆಟ್ ಪೂರ್ವ ಸಿದ್ಧತಾ ಸಭೆ ನಡೆಸಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ. ಕಾವೇರಿ ನಿವಾಸದಲ್ಲಿ ಬಜೆಟ್ ಪೂರ್ವಭಾವಿ ಸಭೆ ನಡೆಸಲಿದ್ದಾರೆ. ಇಂದು ವಿವಿಧ ಇಲಾಖೆಗಳೊಂದಿಗೆ ಪೂರ್ವ ಸಿದ್ಧತಾ ಸಭೆ ನಡೆಸಲಿದ್ದಾರೆ. ಮಾರ್ಚ್ ಮೊದಲ ವಾರದಲ್ಲಿ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದು, ಹಾಗಾಗಿ ಮುಂದಿನ ಸಂಪುಟ ಸಭೆಯಲ್ಲಿ ಬಜೆಟ್ ದಿನಾಂಕ ನಿಗದಿಪಡಿಸಲಾಗುತ್ತೆ.

Read More

ಮಡಿಕೇರಿ : ಪರಿಸರದ ಮೇಲೆ ಪ್ಲಾಸ್ಟಿಕ್ ಬಳಕೆಯಿಂದ ಆಗುವ ಗಂಭೀರ ಹಾನಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರಿ ಕಚೇರಿಗಳಲ್ಲಿ ಮತ್ತು ಸರ್ಕಾರಿ ಕಾರ್ಯಕ್ರಮಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಾಟಲ್​​ಗಳಲ್ಲಿ ಕುಡಿಯುವ ನೀರು ಕೊಡುವಂತಿಲ್ಲ ಎಂಬ ಆದೇಶವನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ. ಇದರ ಬೆನ್ನಲ್ಲೆ ಮಡಿಕೇರಿಯಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲ್ ಮಾರಾಟ ನಿಷೇಧ ಮಾಡಲಾಗಿದ್ದು, ಪ್ಲಾಸ್ಟಿಕ್ ನೀರಿನ ಬಾಟಲ್ ಮಾರಾಟ ನಿಷೇಧಿಸಿ ಮಡಿಕೇರಿಯ ನಗರ ಸಭೆ ಈ ಒಂದು ಆದೇಶ ಹೊರಡಿಸಿದೆ. ಕಲ್ಯಾಣ ಮಂಟಪ ಸಭೆ ಸಮಾರಂಭಗಳಲ್ಲೂ ನೀರಿನ ಬಾಟಲ್ ನಿಷೇಧಿಸಿದೆ. ಜಿಲ್ಲೆಯಲ್ಲಿ ಪ್ರವಾಸಿಗರಿಂದ ಪ್ಲಾಸ್ಟಿಕ್ ನೀರಿನ ಬಾಟಲ್ ಬಳಕೆ ಮಾಡಲಾಗುತ್ತಿದ್ದು, ಈಗಾಗಲೇ ಖರೀದಿಸಿರುವ ನೀರಿನ ಬಾಟಲ್ ಮಾರಾಟಕ್ಕೆ ಸಮಯ ನಿಗದಿಪಡಿಸಲಾಗಿದೆ ಎಂದು ತಿಳಿದುಬಂದಿದೆ. ಸರ್ಕಾರಿ ಆದೇಶದಲ್ಲೇನಿದೆ? ಪ್ಲಾಸ್ಟಿಕ್‌ ವಸ್ತುಗಳ ಅತಿಯಾದ ಬಳಕೆಯಿಂದ ಆರೋಗ್ಯ ಮತ್ತು ಪರಿಸರದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳನ್ನು ತಡೆಯುವ ದೃಷ್ಟಿಯಿಂದ ಸಚಿವಾಲಯ ಸೇರಿದಂತೆ ರಾಜ್ಯಾದ್ಯಾಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ…

Read More

ರಾಯಚೂರು : ರಾಜ್ಯದಲ್ಲಿ ಕಾಮಾಂಧರ ಅಟ್ಟಹಾಸ ಮಿತಿಮೀರುತ್ತಿದ್ದು ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿವೆ.ಇದೀಗ ರಾಯಚೂರಲ್ಲಿ ಖಾಸಗಿ ಶಾಲೆಯಲ್ಲಿ 2ನೇ ತರಗತಿ ಓದುತ್ತಿದ್ದ ಬಾಲಕಿ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ವರದಿಯಾಗಿದೆ. ಹೌದು ಖಾಸಗಿ ಶಾಲೆಯ 2ನೇ ವಿದ್ಯಾರ್ಥಿನಿ ಮೇಲೆ ಕಾಮುಕನೋರ್ವ ಅತ್ಯಾಚಾರ ನಡೆಸಿದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಪೋತ್ನಾಳ ಗ್ರಾಮದಲ್ಲಿ ನಡೆದಿದೆ. ಪೋತ್ನಾಳ್ ಗ್ರಾಮದ ಖಾಸಗಿ ಶಾಲೆಯಲ್ಲಿ 2ನೇ ತರಗತಿಯಲ್ಲಿ ಓದುತ್ತಿರುವ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಕಾಮುಕ ಶಿವನಗೌಡನನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪ್ರತಿದಿನ ಊರಿನಿಂದ ಶಾಲೆಗೆ ಸ್ಕೂಲ್‌ ಬಸ್‌ನಲ್ಲಿ ತೆರಳುತ್ತಿದ್ದ ಬಾಲಕಿ. ಬಂಧಿತ ಆರೋಪಿ ಶಿವನಗೌಡ ಎಂಬಾತ ಅದೇ ಊರಿನವನಾಗಿದ್ದು ಬಾಲಕಿಗೆ ಪರಿಚಿತನಾಗಿದ್ದಾನೆ. ಮಧ್ಯಾನ ಶಾಲೆಗೆ ಬರುತ್ತಿದ್ದ ಆರೋಪಿ ಊಟದ ಸಮಯಕ್ಕೆ ಬಾಲಕಿಯನ್ನ ಹೊರಗಡೆ ಕರೆದುಕೊಂಡು ಹೋಗಿದ್ದಾನೆ. ಹೊರಗಡೆ ಕರೆದೊಯ್ದ ವೇಳೆ ಆರೋಪಿ ಶಿವನಗೌಡ ಅತ್ಯಾಚಾರ…

Read More

ಕೊಪ್ಪಳ : ಕೊಪ್ಪಳದ ಆನೆಗುಂದಿ ತೂಗು ಸೇತುವೆ ಕಾಮಗಾರಿ ನಷ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಷ್ಟ ಪರಿಹಾರದಲ್ಲಿ ಕಾನೂನು ಸಂಘರ್ಷ ಎದುರಾಗಿದ್ದು, 6 ಕೋಟಿಯ ಕಾಮಗಾರಿಗೆ 5219 ಕೋಟಿ ಪರಿಹಾರಕ್ಕೆ ಕೋರ್ಟ್ ಇದೀಗ ಆದೇಶ ನೀಡಿದೆ. ಸರ್ಕಾರಕ್ಕೆ ಹೊರ ರಾಜ್ಯದ ಗುತ್ತಿಗೆದಾರ ಇದೀಗ ಸೆಡ್ಡು ಹೊಡೆದಿದ್ದಾನೆ. ಹೀಗಾಗಿ ಸರ್ಕಾರದ ಲೆಕ್ಕಪತ್ರ ಸಮಿತಿಯು ಗುತ್ತಿಗೆದಾರಣ ಅರ್ಜಿಯಲ್ಲಿ ಪರಿಹಾರದ ಮತ್ತ ನೋಡಿ ಶಾಕ್ ಆಗಿದೆ. ಹೌದು ಸರ್ಕಾರದ ವಿರುದ್ಧವೇ ಗುತ್ತಿಗೆದಾರ ಕಾನೂನು ಸಮರ ಹೂಡಿದ್ದು, ಪ್ರಕರಣ ಸಂಬಂಧ ಇದೀಗ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಕೋರ್ಟ್ ಅರೆಸ್ಟ್ ವಾರೆಂಟ್ ಜಾರಿ ಮಾಡಿದೆ. 5219 ಕೋಟಿ ಪರಿಹಾರ ಕೊಡಬೇಕು ಎಂದು ಅರ್ಜಿ ಸಲ್ಲಿಸಲಾಗಿತ್ತು. ಕಂಟ್ರಾಕ್ಟರ್ ವರಸೆಗೆ ಸಾರ್ವಜನಿಕ ಲೆಕ್ಕ ಪತ್ರ ಸಮಿತಿ ಇದೀಗ ಕಂಗಾಲಾಗಿದೆ. ಆನೆಗುಂದಿ ತುಂಗಭದ್ರಾ ನದಿಗೆ ಅಡ್ಡಲಾಗಿ ತೂಗು ಸೇತುವೆ ನಿರ್ಮಾಣ ಮಾಡಲಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗುಂದಿ ಬಳಿ ಸೇತುವೆ ನಿರ್ಮಾಣ ಮಾಡಲಾಗಿದೆ. ನವೆಂಬರ್ 1993ರಲ್ಲಿ ಈ ಒಂದು ಕಾಮಗಾರಿಗೆ ಶಂಕುಸ್ಥಾಪನೆ ಮಾಡಲಾಗಿತ್ತು.…

Read More

ಕೊಪ್ಪಳ : ಏಪ್ರಿಲ್ 1ರಿಂದ ತುಂಗಭದ್ರಾ ಡ್ಯಾಮ್ ನಿಂದ ಬೆಳೆಗೆ ನೀರು ಹರಿಸುವುದಿಲ್ಲ ಎಂದು ತುಂಗಭದ್ರಾ ನೀರಾವರಿ ನಿಗಮದ ಮುನಿರಾಬಾದ್ ವಲಯ ಅಧಿಕಾರಿಗಳು ಈ ಕುರಿತು ಮಾಹಿತಿ ನೀಡಿದ್ದಾರೆ. ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಡ್ಯಾಮ್ ನಿಂದ ನೀರು ಹರಿಸುವುದಿಲ್ಲ. ರೈತರು ಭತ್ತ ನಾಟಿ ಮಾಡಿದರೆ ನೀರು ಸಿಗಲ್ಲ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ನೀರಾವರಿ ಸಲಹಾ ಸಮಿತಿ ಸಭೆಯ ಪ್ರಕಾರ ಎರಡನೇ ಬೆಳೆಗೆ ನೀರು ಬಿಡಲಾಗುತ್ತದೆ. ಮಾರ್ಚ್ 31ರವರೆಗೆ ಪ್ರತಿದಿನ ಕಾಲುವಿಗೆ ನೀರುಹರಿಸಲಾಗುತ್ತದೆ. ಏಪ್ರಿಲ್ 1ರ ನಂತರ ಬೆಳೆಗೆ ನೀರು ಹರಿಸಲ್ಲ ಆದರೆ ಕುಡಿಯುವುದಕ್ಕೆ ಮಾತ್ರ ನೀರು ಬಳಕೆ ಮಾಡಬಹುದಾಗಿದೆ. ಹಾಗಾಗಿ ಭತ್ತದ ನಾಟಿ ಮಾಡದಂತೆ ಅಧಿಕಾರಿಗಳು ರೈತರಿಗೆ ಸೂಚನೆ ನೀಡಿದ್ದಾರೆ.ತುಂಗಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಭತ್ತದ ನಾಟಿ ನಡೆಯುತ್ತಿದ್ದು, ಕೊಪ್ಪಳ, ರಾಯಚೂರು, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಯಲ್ಲಿ ಭತ್ತದ ನಾಟಿ ಆರಂಭವಾಗಿದೆ. ಹಾಗಾಗಿ ಅಧಿಕಾರಿಗಳು ಭತ್ತ ನಾಟಿ ಮಾಡಬೇಡಿ ಎಂದು ರೈತರಿಗೆ ಸೂಚಿಸಿದ್ದಾರೆ.

Read More