Author: kannadanewsnow05

ಬೆಂಗಳೂರು : ಎನ್‌ಪಿಎಸ್ ಕೈ ಬಿಟ್ಟು ಓಪಿಎಸ್ ಮರು ಜಾರಿಗೆ ಆಗ್ರಹಿಸಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ರಾಜ್ಯ ಸರ್ಕಾರಿ ನೌಕರರು ಪ್ರತಿಭಟನೆ ನಡೆಸುತ್ತಿದ್ದು, ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಇಂದು ಸರ್ಕಾರಿ ನೌಕರರು ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ. ರಾಜ್ಯ ಎನ್‌ಪಿಎಸ್ ನೌಕರರ ಸಂಘದ ಅಧ್ಯಕ್ಷ ಶಾಂತಾರಾಮ್ ಉಪವಾಸ ಸತ್ಯಾಗ್ರಹದ ಕುರಿತು ಮಾಹಿತಿ ನೀಡಿದರು. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಇಂದು ಸರ್ಕಾರಿ ನೌಕರರ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಸಂಘದ ಅಧ್ಯಕ್ಷ ಶಾಂತರಾಮ್ ಈ ಕುರಿತು ಮಾಹಿತಿ ನೀಡಿದ್ದು, 2020-21 ನೇ ಸಾಲಿನ ಎನ್‌ಪಿಎಸ್ ರದ್ದುಪಡಿಸಿ, ಒಪಿಎಸ್ ಜಾರಿ ಮಾಡುವಂತೆ ಆಗ್ರಹಿಸಿದ್ದೆವು. ಸಿಎಂ, ಡಿ ಸಿ ಎಂ, ಗೃಹಮಂತ್ರಿ ಅವರನ್ನು ಭೇಟಿಯಾಗಿದ್ದಾಗ ಬೇಡಿಕೆ ಈಡೇರಿಸುವ ಭರವಸೆಯನ್ನು ನೀಡಿದ್ದರು. ಆದರೆ ರಾಜ್ಯ ಸರ್ಕಾರ ಕೊಟ್ಟ ಭಾಷೆಯನ್ನು ಈಡೇರಿಸುವ ಕೆಲಸ ಇದುವರೆಗೂ ಮಾಡಿಲ್ಲ. ನಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಇಂದು 1 ದಿನ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದೇವೆ. ಓಪಿಎಸ್ ಜಾರಿ 6ನೇ ಗ್ಯಾರಂಟಿ…

Read More

ಕೊಡಗು : ಇಂದು ಕೊಡವಾಮೆ ಬಾಳು ಪಾದಯಾತ್ರೆ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಮಡಿಕೇರಿ ನಗರದಲ್ಲಿ ಇಂದು ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಇಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ. ಅಲ್ಲದೆ ಮಡಿಕೇರಿ ನಗರದಲ್ಲಿ ಇಂದು ವಾಹನಗಳ ಪಾರ್ಕಿಂಗ್ ಗೆ ನಿರ್ಬಂಧ ವಿಧಿಸಲಾಗಿದೆ. ಮಡಿಕೇರಿ ನಗರದಾದ್ಯಂತ ಭದ್ರತೆಗಾಗಿ 700 ಪೊಲೀಸರನ್ನು ನೀಯೋಜನೆ ಮಾಡಲಾಗಿದೆ. ಸಂಸ್ಕೃತಿ ರಕ್ಷಣೆಗಾಗಿ ಕೊಡವಾಮೆ ಬಾಳು ಪಾದಯಾತ್ರೆ ಆಯೋಜನೆ ಮಾಡಲಾಗಿದ್ದು, ಮಡಿಕೇರಿ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ.

Read More

ಢಾಕಾ : ದೇಶದ ವಿರುದ್ಧ ಪಿತೂರಿ ನಡೆಸಿದ ಆರೋಪದ ಮೇಲೆ ಬಾಂಗ್ಲಾದೇಶದ ಖ್ಯಾತ ಸಂಗೀತಗಾರ್ತಿ ಹಾಗೂ ನಟಿ ಮೆಹರ್ ಅಫ್ರೋಜ್ ಶಾನ್ ಅವರನ್ನು ಢಾಕಾ ಮೆಟ್ರೋಪಾಲಿಟನ್ ಪೊಲೀಸರ ಪತ್ತೇದಾರಿ ಶಾಖೆ (ಡಿಬಿ) ಬಂಧಿಸಿದೆ.ವರದಿಗಳ ಪ್ರಕಾರ, ಶಾನ್ ಬಾಂಗ್ಲಾದೇಶದಲ್ಲಿನ “ದೌರ್ಜನ್ಯ”ಗಳ ವಿರುದ್ಧ ಧ್ವನಿ ಎತ್ತಿದ್ದಾರೆ ಮತ್ತು ಮೊಹಮ್ಮದ್ ಯೂನಸ್ ಸರ್ಕಾರವನ್ನು ಟೀಕಿಸಿದ್ದಾರೆ. ಜಮಾಲ್ಪುರದಲ್ಲಿರುವ ಆಕೆಯ ಹಳ್ಳಿಯ ಮನೆಯ ಮೇಲೆ ದಾಳಿ ಮಾಡಿ ಬೆಂಕಿ ಹಚ್ಚಿದ ಕೆಲವೇ ಗಂಟೆಗಳ ನಂತರ ಆಕೆಯ ಬಂಧನವಾಗಿದೆ.ಸಂಜೆ 6 ಗಂಟೆ ಸುಮಾರಿಗೆ ಜಮಾಲ್ಪುರ್ ಸದರ್ ಉಪಜಿಲ್ಲಾದ ನೊರುಂಡಿ ರೈಲು ನಿಲ್ದಾಣದ ಬಳಿಯ ಮನೆಗೆ ವಿದ್ಯಾರ್ಥಿಗಳು ಮತ್ತು ಸ್ಥಳೀಯರು ಬೆಂಕಿ ಹಚ್ಚಿದ್ದಾರೆ ಎಂದು ವರದಿಯಾಗಿದೆ. ಕಳೆದ ಆಗಸ್ಟ್‌ನಿಂದ ವಿವಿಧ ಸಮಯಗಳಲ್ಲಿ ಬಾಂಗ್ಲಾದೇಶದಲ್ಲಿನ ಪ್ರಕ್ಷುಬ್ಧ ಪರಿಸ್ಥಿತಿಯ ಬಗ್ಗೆ ಶಾನ್ ಧ್ವನಿ ಎತ್ತಿದ್ದಾರೆ. ಕೆಲವು ದಿನಗಳ ಹಿಂದೆ, ಅವರು ಶೇಖ್ ಹಸೀನಾ ಅವರನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಸೂಚಿತ ಪೋಸ್ಟ್‌ಗಳನ್ನು ಸಹ ಮಾಡಿದ್ದರು. ಇತ್ತೀಚೆಗೆ, ಅವರು ‘ಡಿಫೆನ್ಸ್ ಪಾಕಿಸ್ತಾನ್’ ಎಂಬ ಮಾಜಿ ಹ್ಯಾಂಡಲ್‌ನಿಂದ…

Read More

ದಾವಣಗೆರೆ : ನ್ಯಾಕ್ ಪರಿಶೀಲನಾ ಸಮಿತಿಯ ಲಂಚ ಪ್ರಕರಣದಲ್ಲಿ ಸಿಬಿಐನಿಂದ ಬಂಧನಕ್ಕೆ ಒಳಗಾಗಿರುವ ದಾವಣಗೆರೆ ವಿಶ್ವವಿದ್ಯಾಲಯದ ಮೈಕ್ರೊ ಬಯಾಲಜಿ ವಿಭಾಗದ ಪ್ರೊ.ಗಾಯತ್ರಿ ದೇವರಾಜ ಅವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ. ನಿನ್ನೆ ನಡೆದ ದಾವಣಗೆರೆ ವಿಶ್ವವಿದ್ಯಾಲಯದ ವಿಶೇಷ ಸಿಂಡಿಕೇಟ್ ಸಭೆಯಲ್ಲಿ ಈ ಕುರಿತು ಚರ್ಚಿಸಿ, ಗಾಯತ್ರಿ ಅವರನ್ನು 6 ತಿಂಗಳ ಅವಧಿಗೆ ಅಮಾನತು ಮಾಡಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.ನ್ಯಾಕ್‌ ತಪಾಸಣಾ ಸಮಿತಿಯ ಸದಸ್ಯರೂ ಆಗಿರುವ ಗಾಯತ್ರಿ ಅವರನ್ನು ಲಂಚ ಪಡೆದ ಆರೋಪದಲ್ಲಿ ಸಿಬಿಐ ಅಧಿಕಾರಿಗಳು ಇತ್ತೀಚಿಗೆ ವಿಚಾರಣೆಗೆ ಒಳಪಡಿಸಿ ಬಂಧಿಸಿದ್ದರು. ಪ್ರಕರಣ ಹಿನ್ನೆಲೆ? ಕಳೆದ ಫೆಬ್ರವರಿ 3 ರಂದು ಆಂಧ್ರಪ್ರದೇಶದ ಗುಂಟೂರಿನಲ್ಲಿ ಕೆಎಲ್‌ಇಎಫ್‌ ವಿವಿಗೆ ನ್ಯಾಕ್ ಕಮಿಟಿಯಿಂದ ಎ++ ಗ್ರೇಡ್ ನೀಡುವಲ್ಲಿ ಲಂಚ ಸ್ವೀಕರಿಸಿದ ಆರೋಪದ ಮೇಲೆ ದಾವಣಗೆರೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಗಾಯತ್ರಿ ದೇವರಾಜ ಸೇರಿದಂತೆ 10 ಜನರನ್ನು ಸಿಬಿಐ ಬಂಧಿಸಿತ್ತು. ನ್ಯಾಕ್ ತಂಡದ ಅಧ್ಯಕ್ಷರು ಮತ್ತು ಜೆ ಎನ್ ಯು ಪ್ರೊಫೆಸರ್ ಸೇರಿದಂತೆ ಶಿಕ್ಷಣ…

Read More

ಬೆಂಗಳೂರು : ಮುಡಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಾಲಿ ಸಿಎಂ ಸಿದ್ದರಾಮಯ್ಯ ಅವರ ಭವಿಷ್ಯ ಇಂದು ನಿರ್ಧಾರವಾಗಲಿದ್ದು ಧಾರವಾಡ ಹೈಕೋರ್ಟ್ ಪೀಠದಲ್ಲಿ ಇಂದು ತೀರ್ಪು ಪ್ರಕಟವಾಗಲಿದೆ ಅದೇ ರೀತಿಯಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೂಡ ಇಂದು ತೀರ್ಪು ಹೊರಬೀಳಲಿದೆ. ಹಾಗಾಗಿ ಇಂದು ಹಾಲಿ ಮತ್ತು ಮಾಜಿ ಸಿಎಂಗಳ ಭವಿಷ್ಯ ನಿರ್ಧಾರವಾಗಲಿದೆ. ಮುಡಾ ಕೇಸ್ ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆಗೆ ಕೋರಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಕೋರ್ಟ್, ಇಂದು ಆದೇಶ ಪ್ರಕಟಿಸಲಿದೆ. ಮುಡಾ ನಿವೇಶನ ಹಂಚಿಕೆ ಸಂಬಂಧ ಸಿದ್ದರಾಮಯ್ಯ ವಿರುದ್ಧದ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿದ್ದು, ಇಂದು ಬೆಳಗ್ಗೆ 10.30ಕ್ಕೆ ಧಾರವಾಡ ಹೈಕೋರ್ಟ್ ಪೀಠದಲ್ಲಿ ತೀರ್ಪು ಪ್ರಕಟವಾಗಲಿದೆ. ಸಿದ್ದರಾಮಯ್ಯ ಪರ ಹಿರಿಯ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಹಾಗೂ ಪ್ರೊ.ರವಿವರ್ಮ ಕುಮಾರ್ ವಾದ ಮಂಡಿಸಿದ್ದರು. ಇನ್ನು ದೂರುದಾರ ಸ್ನೇಹಮಯಿ ಕೃಷ್ಣ ಪರವಾಗಿ…

Read More

ಕಲಬುರ್ಗಿ : ಕಲಬುರ್ಗಿಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಕಬ್ಬು ತುಂಬಿದ ಟ್ರಾಕ್ಟರ್ ಗೆ ಕಾರು ಢಿಕ್ಕಿಯಾಗಿ ಸ್ಥಳದಲ್ಲೇ ಮಹಿಳೆ ಮೃತಪಟ್ಟಿದ್ದು, ಕಾರು ಮೂವರು ಗಾಯಗೊಂಡಿರುವ ಘಟನೆ ಅಫಜಲಪುರ ತಾಲ್ಲೂಕಿನ ಚೌಡಾಪುರ ತಾಂಡ ಬಳಿ ನಡೆದಿದೆ. ಕಲಬುರಗಿ ನಗರ ಪ್ರಶಾಂತ ನಗರ ನಿವಾಸಿ ವಿದ್ಯಾ (40) ಸ್ಥಳದಲ್ಲೇ ಮೃತಪಟ್ಟ ದುರ್ದೈವಿ, ನಿತಿನ್ ಕುಮಾರ್ (42) ಮಕ್ಕಲಾದ್ ವೈಷ್ಣವಿ (15) ಗಂಭೀರ ಗಾಯಗೊಂಡಿದ್ದು, ವೇದಾಂತ (10) ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಗಾಯಗೊಂಡವರಿಗೆ ಕಲಬುರ್ಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚೌಡಾಪುರ ತಾಂಡಾ ಬಳಿ ಕಬ್ಬು ತುಂಬಿಕೊಂಡು ಹೊರಟಿದ್ದ ಟ್ರಾಕ್ಟರ್ ಗೆ ಕಲಬುರ್ಗಿ ಕಡೆಯಿಂದ ವೇಗವಾಗಿ ಬಂದಂತಹ ಕಾರು ಡಿಕ್ಕಿ ಹೊಡೆದಿದೆ. ಹಾಗಾಗಿ ಈ ಒಂದು ದುರಂತ ಸಂಭವಿಸಿದೆ.ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರೀಶೀಲಿಸಿದರು. ಅಪಘಾತದ ಕುರಿತು ದೇವಲಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಧಾರವಾಡ : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹೈಕೋರ್ಟ್ ತೀರ್ಪು ಪ್ರಕಟಿಸಲಿದೆ. ಇಂದು ಧಾರವಾಡ ಹೈಕೋರ್ಟ್ ಪೀಠದಲ್ಲಿ ನ್ಯಾ. ಎಂ. ನಾಗಪ್ರಸನ್ನ ಅವರು ತೀರ್ಪು ಪ್ರಕಟಿಸಲಿದ್ದಾರೆ. ಇಂದು ಯಡಿಯೂರಪ್ಪ ವಿರುದ್ಧ ಪ್ರಕರಣದ ಬಗ್ಗೆ ತೀರ್ಪು ಹೊರಬೀಳಲಿದೆ.ಕೇಸ್ ರದ್ದು ಕೋರಿ ಅರ್ಜಿ ಬಗ್ಗೆ ಹೈಕೋರ್ಟ್ ತೀರ್ಪು ಪ್ರಕಟಿಸಲಿದೆ.ನ್ಯಾ ಎಂ ನಾಗಪ್ರಸನ್ನ ಅವರ ಪೀಠ ಈ ಒಂದು ತೀರ್ಪು ಪ್ರಕಟಿಸಲಿದೆ. ಪ್ರಕರಣದ ಕೋರಿ ಮಾಜಿ ಸಿಎಂ ಯಡಿಯೂರಪ್ಪ ಅವರು ಅರ್ಜಿ ಸಲ್ಲಿಸಿದ್ದರು ಬೆಳಗ್ಗೆ 10:30ಕ್ಕೆ ನ್ಯಾಯ ನಾಗಪ್ರಸನ್ ಅವರ ಪೀಠ ತೀರ್ಪು ನೀಡಲಿದೆ ಧಾರವಾಡ ಹೈಕೋರ್ಟ್ ಪೀಠದಿಂದ ಇಂದು ತೀರ್ಪು ಪ್ರಕಟವಾಗಲಿದೆ. ಪ್ರಕರಣ ರದ್ದು ಕೋರಿ ಬಿ.ಎಸ್. ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿದ್ದು. ನ್ಯಾ.ಎಂ.ನಾಗಪ್ರಸನ್ನ ಅವರ ಪೀಠ ನಾಳೆ ಬೆಳಗ್ಗೆ 10.30ಕ್ಕೆ ತೀರ್ಪು ನೀಡಲಿದೆ. ನಿರೀಕ್ಷಣಾ ಜಾಮೀನು ಬಗ್ಗೆಯೂ ತೀರ್ಮಾನಿಸಲಿದೆ. ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಿಎಂ ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣದ ದೋಷಾರೋಪ…

Read More

ನವದೆಹಲಿ : ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (PMGKAY) ಅಡಿಯಲ್ಲಿ ಅನರ್ಹ ಫಲಾನುಭವಿಗಳನ್ನು ಹೊರಹಾಕಲು ಆದಾಯ ತೆರಿಗೆ (IT) ಇಲಾಖೆಯು ಆಹಾರ ಸಚಿವಾಲಯಕ್ಕೆ ವಿವರಗಳನ್ನು ಒದಗಿಸಲಿದ್ದು, ಇನ್ಮುಂದೆ ಅನರ್ಹ ಪಡಿತರ ಚೀಟಿದಾರರಿಗೆ ಉಚಿತ ಪಡಿತರ ಸಿಗಲ್ಲ ಎನ್ನಲಾಗಿದೆ. ಆದಾಯ ತೆರಿಗೆ ಪಾವತಿಸದ ಬಡ ಕುಟುಂಬಗಳಿಗೆ ಸರ್ಕಾರ PMGKAY ಅಡಿಯಲ್ಲಿ ಉಚಿತ ಪಡಿತರವನ್ನು ನೀಡುತ್ತಿದೆ. 2026 ರ ಆರ್ಥಿಕ ವರ್ಷದಲ್ಲಿ PMGKAY ಗಾಗಿ ರೂ. ಕೇಂದ್ರ ಬಜೆಟ್‌ನಲ್ಲಿ 2.03 ಲಕ್ಷ ಕೋಟಿ ರೂ.ಗಳನ್ನು ಹಂಚಿಕೆ ಮಾಡಿದೆ. ಆದಾಯ ತೆರಿಗೆ (ವ್ಯವಸ್ಥೆಗಳು) ಮಹಾನಿರ್ದೇಶಕರು (ಡಿಜಿಐಟಿ) ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯ ಜಂಟಿ ಕಾರ್ಯದರ್ಶಿಗೆ (ಡಿಎಫ್‌ಪಿಡಿ) ಮಾಹಿತಿಯನ್ನು ಒದಗಿಸುತ್ತಾರೆ ಎಂದು ಸಿಬಿಡಿಟಿ ತಿಳಿಸಿದೆ. ಫಲಾನುಭವಿಗಳು ತಮ್ಮ ಆಧಾರ್ ಸಂಖ್ಯೆ ಅಥವಾ ಪ್ಯಾನ್ ಅನ್ನು ಮೌಲ್ಯಮಾಪನ ವರ್ಷದ ವಿವರಗಳೊಂದಿಗೆ ಸಲ್ಲಿಸಿದರೆ, ಡಿಜಿಐಟಿ ವ್ಯವಸ್ಥೆಗಳು ನಿಗದಿತ ಮೊತ್ತಕ್ಕಿಂತ ಹೆಚ್ಚಿನ ಆದಾಯ ಹೊಂದಿರುವವರ ಡೇಟಾವನ್ನು ಒದಗಿಸುತ್ತವೆ. ಅನರ್ಹರ ವಿವರಗಳನ್ನು ಗುರುತಿಸುವಲ್ಲಿ ಈ ದತ್ತಾಂಶವು ನಿರ್ಣಾಯಕವಾಗಿರುತ್ತದೆ.

Read More

ಧಾರವಾಡ : ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆಗೆ ಕೋರಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಕೋರ್ಟ್, ಇಂದು ಆದೇಶ ಪ್ರಕಟಿಸಲಿದೆ. ಮುಡಾ ನಿವೇಶನ ಹಂಚಿಕೆ ಸಂಬಂಧ ಸಿದ್ದರಾಮಯ್ಯ ವಿರುದ್ಧದ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿದ್ದು, ಇಂದು ಬೆಳಗ್ಗೆ 10.30ಕ್ಕೆ ಧಾರವಾಡ ಹೈಕೋರ್ಟ್ ಪೀಠದಲ್ಲಿ ತೀರ್ಪು ಪ್ರಕಟವಾಗಲಿದೆ. ಸಿದ್ದರಾಮಯ್ಯ ಪರ ಹಿರಿಯ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಹಾಗೂ ಪ್ರೊ.ರವಿವರ್ಮ ಕುಮಾರ್ ವಾದ ಮಂಡಿಸಿದ್ದರು. ಇನ್ನು ದೂರುದಾರ ಸ್ನೇಹಮಯಿ ಕೃಷ್ಣ ಪರವಾಗಿ ಸುಪ್ರೀಂಕೋರ್ಟ್‌ನ ಹಿರಿಯ ವಕೀಲರ ಮಣೀಂದ್ರ್ ಸಿಂಗ್ ಅವರು ವಾದ ಮಂಡಿಸಿದ್ದರು. ಕಳೆದ ವಿಚಾರಣೆಯಲ್ಲಿ ವಾದ ಪ್ರತಿವಾದಗಳನ್ನು ಆಲಿಸಿದ ಹೈಕೋರ್ಟ್ ಆದೇಶವನ್ನು ಕಾಯ್ದಿರಿಸಿತ್ತು ಹಾಗಾಗಿ ಇಂದು ಧಾರವಾಡ ಪೀಠ ಆದೇಶ ಪ್ರಕಟಿಸಲಿದ್ದು, ಸಿಎಂ ಸಿದ್ದರಾಮಯ್ಯ ಅವರ ಭವಿಷ್ಯ ಇಂದು ನಿರ್ಧಾರವಾಗಲಿದೆ.

Read More

ಬೆಂಗಳೂರು : ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ತೆರವಾಗಿರುವ ಬೋಧಕ ಸಿಬ್ಬಂದಿ ಹುದ್ದೆಗಳಿಗೆದುರಾಗಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವರ ಸಂಭಾವನೆಗಾಗಿ ಅನುದಾನ ಬಿಡುಗಡೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದ ತಾಲ್ಲೂಕು ಪಂಚಾಯತಿ ವ್ಯಾಪ್ತಿಯ ಶಿಕ್ಷಣ ಇಲಾಖೆಯಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ತೆರವಾಗಿರುವ ಶಿಕ್ಷಕರ ಹುದ್ದೆಗಳಿಗೆದುರಾಗಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರ ಸಂಭಾವನೆಗಾಗಿ ರೂ.8697.09ಲಕ್ಷಗಳನ್ನು ಲೆಕ್ಕ ಶೀರ್ಷಿಕೆ: 2202-00-101-0-61-005ರಡಿ ಲಭ್ಯವಿರುವ ಅನುದಾನದಿಂದ ಲೆಕ್ಕ ಶೀರ್ಷಿಕೆ: 2202-00-101-0-61-005ಗೆ ಮರುಹಂಚಿಕೆಗೊಳಿಸಿ ಬಿಡುಗಡೆ ಮಾಡಲು ಅನುಮೋದನೆ ನೀಡಲಾಗಿದ್ದು ಹಾಗೂ ಲೆಕ್ಕ ಶೀರ್ಷಿಕೆ: 2202-00-102-0-62-324ರಡಿ ಕೊರತೆಯಾಗಿರುವ ರೂ.6732.51ಲಕ್ಷಗಳನ್ನು ಪುನರ್ವಿನಿಯೋಗದ ಮೂಲಕ ಹೆಚ್ಚುವರಿಯಾಗಿ ಒದಿಸಲಾಗಿದ್ದು, ಸದರಿ ಅನುದನವನ್ನು ಸಂಬಂಧಪಟ್ಟ ತಾಲ್ಲೂಕು ಪಂಚಾಯಿತಿಗಳಿಗೆ ಬಿಡುಗಡೆಗೊಳಿಸಲು ಮೇಲೆ ಓದಲಾದ ಕಡತದಲ್ಲಿ ಪ್ರಸ್ತಾಪಿಸಿದೆ. ಪ್ರಸ್ತಾವನೆಯನ್ನು ಪರಿಶೀಲಿಸಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರ ಸಂಭಾವನೆಗಾಗಿ ಅಗತ್ಯವಿರುವ ರೂ.8697.09 ಲಕ್ಷಗಳನ್ನು ಅನುದಾನವನ್ನು ಲೆಕ್ಕ ಶೀರ್ಷಿಕ 2202-01-197-1-01-300 (2202-00-101-0-61-324)ರಡಿ ಮತ್ತು ಪ್ರೌಢಶಾಲೆಗಳ ಅತಿಥಿ ಶಿಕ್ಷಕರ ಸಂಭಾವನೆಗಾಗಿ ರೂ.6732.51ಲಕ್ಷಗಳನ್ನು ಲೆಕ್ಕ…

Read More