Subscribe to Updates
Get the latest creative news from FooBar about art, design and business.
Author: kannadanewsnow05
ದಕ್ಷಿಣಕನ್ನಡ : ಅನನ್ಯ ಭಟ್ ನಬತ್ತೆ ಆಗಿರುವ ಕುರಿತು ದೂರು ನೀಡಿದ ವಿಚಾರಕ್ಕೆ ಸಂಬಂಧಪಟ್ಟಂತೆ ಸತತ ನಾಲ್ಕು ದಿನಗಳಿಂದ ಸುಜಾತ ಭಟ್ ಅವರನ್ನು ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು ಎಸ್ಐಟಿ ವಿಚಾರಣೆಗೆ ಸುಜಾತ ಭಟ್ ತಬ್ಬಿಬಾಗಿದ್ದು ಸತ್ಯವನ್ನು ಬಾಯಿಬಿಟ್ಟಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಎಸ್ಐಟಿ ವಿಚಾರಣೆಗೆ ಒಳಪಟ್ಟಿದ ಸುಜಾತ ಭಟ್ ಅವರಿಗೆ ಇದೀಗ ಬಿಗ್ ರಿಲೀಫ್ ಸಿಕ್ಕಿದೆ. ಸುಜಾತ ಭಟ್ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳದೆ ಅಧಿಕಾರಿಗಳು ವಿಚಾರಣೆಗೆ ಕರೆದಾಗ ಬರುವಂತೆ ಸೂಚನೆ ನೀಡಿ ಕಳುಹಿಸಿದ್ದಾರೆ ಹಾಗಾಗಿ ಸುಜಾತ ಭಟ್ ಈ ಒಂದು ಪ್ರಕರಣದಿಂದ ನಿಟ್ಟುಸಿರು ಬಿಟ್ಟಿದ್ದಾರೆ. ಮೊದಲಿಗೆ ಅನನ್ಯ ಭಟ್ ನನ್ನ ಮಗಳು ಎಂದು ಹೇಳಿ ದೂರು ನೀಡಿದ್ದರು. ಇದೇ ಪ್ರಕರಣದ ಕುರಿತು ಎಸ್ಐಟಿ ಅಧಿಕಾರಿಗಳು ತೀವ್ರ ವಿಚಾರಣೆ ಒಳಪಡಿಸಿದಾಗ ಸುಜಾತ ಭಟ್ ನನಗೇನು ತಪ್ಪಿಲ್ಲ ಕೆಲವರು ಹೇಳಿದಂತೆ ನಾನು ಕೇಳಿದ್ದೇನೆ ನನ್ನನ್ನು ಬಿಟ್ಟುಬಿಡಿ ಎಂದು ಅಧಿಕಾರಿಗಳ ಮುಂದೆ ಅಳಲು ತೋಡಿಕೊಂಡಿದ್ದರು. ಇದೀಗ ಈ ಒಂದು ಪ್ರಕರಣದಿಂದ ಸುಜಾತಾ ಭಟ್…
ಬೆಂಗಳೂರು : ದರ್ಶನ್ ಅಂಡ್ ಗ್ಯಾಂಗ್ನಿಂದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದ್ಯ ನಟ ದರ್ಶನ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಲ್ಲಿ ಇದ್ದಾರೆ. ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಕುರಿತು ಪ್ರಾಸಿಕ್ಯೂಶನ್ ಅರ್ಜಿ ಸಲ್ಲಿಸಿದ್ದಾರೆ. ಈ ಒಂದು ಅರ್ಜಿಯ ಕುರಿತು ಇಂದು ಬೆಂಗಳೂರಿನ ಸೆಷನ್ಸ್ ಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ. ಆಕ್ಷೇಪಣೆ ಸಲ್ಲಿಸಲು ದರ್ಶನ್ ಪರ ವಕೀಲರು ಕಾಲಾವಕಾಶ ಕೊರಿದ್ದರು ಎ ಪೋರ್ಟಿನ್ ಪ್ರಧೋಷ್ ಪರ ವಕೀಲರು ಅಕ್ಷೇಪಣೆ ಸಲ್ಲಿಸಿದರು. ಕಳೆದ ಬಾರಿ ದರ್ಶನ್ ಜೈಲಿನಲ್ಲಿದ್ದಾಗ ವಿಶೇಷ ಸವಲತ್ತು ನೀಡಲಾಗಿತ್ತು. ಜೇಲಿನಲ್ಲಿ ರೌಡಿಗಳೊಂದಿಗೆ ಸಿಗರೇಟ್ ಸೇದುತ್ತಿದ್ದ ಫೋಟೋ ವೈರಲ್ ಆಗಿತ್ತು. ಘಟನೆ ಮರುಕಳಿಸಿದರೆ ಕ್ರಮದ ಎಚ್ಚರಿಕೆ ಸುಪ್ರೀಂ ಕೋರ್ಟ್ ನೀಡಿತ್ತು. ಇದೀಗ ದರ್ಶನ್ ಬಳ್ಳಾರಿ ಜೈಲಿಗೆ ಸ್ಥಳಾಂತರ ಆಗುವ ಕುರಿತು ಇಂದು ವಿಚಾರಣೆ ನಡೆಯಲಿದೆ.
ಬೆಳಗಾವಿ : ಬಂಧಿಸಲು ತೆರಳಿದ್ದಾಗ ಕಾನ್ಸ್ಟೇಬಲ್ ಗೆ ಚಾಕು ಇರಿದು ಪರಾರಿ ಯಾಗಲು ಯತ್ನಿಸಿದ ದರೋಡೆ ಹಾಗು ಗ್ಯಾಂಗ್ ರೇಪ್ ಆರೋಪಿ ಕಾಲಿಗೆ ಪೊಲೀಸರಿಂದ ಫೈರಿಂಗ್ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದ ಹೊರವಲಯದಲ್ಲಿ ನಡೆದಿದೆ. ರಮೇಶ್ ಕಿಲ್ಲಾರ್ ಕಾಲಿಗೆ ಕಿತ್ತೂರು ಠಾಣೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಬಂಧಿಸಲು ತೆರಳಿದ್ದಾಗ ಪಿಸಿಗೆ ಚಾಕು ಇರಿದು ಪರಾರಿ ಯಾಗಲು ಯತ್ನಿಸಿದ್ದಾನೆ. ಕಾನ್ಸ್ಟೇಬಲ್ ಷರೀಫ್ ಗೆ ಚಾಕು ಇರಿದು ರಮೇಶ್ ಪರಾರಿಯಾಗಲು ಯತ್ನಿಸಿದ್ದಾನೆ. ಆತ್ಮ ರಕ್ಷಣೆಗಾಗಿ ಪಿಎಸ್ಐ ಪ್ರವೀಣ್ ಗಂಗೊಳ್ಳಿ ರಮೇಶ್ ಮೇಲೆ ಫೈರಿಂಗ್ ನಡೆಸಿದ್ದಾರೆ ಗಾಯಗೊಂಡ ಆರೋಪಿ ರಮೇಶ್ ಗೆ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ದರೋಡೆ ಸಾಮೂಹಿಕ ಅತ್ಯಾಚಾರ ಸೇರಿದಂತೆ ಅಕ್ರಮ ಶಸ್ತ್ರಾಸ್ತ್ರ ಸೇರಿದಂತೆ ಹಲವು ಪ್ರಕರಣಗಳಲ್ಲಿ ರಮೇಶ್ ಕಿಲ್ಲರ್ ಭಾಗಿಯಾಗಿದ್ದ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಡ್ಯ : “ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ಹಾಲು ಉತ್ಪನ್ನ ಘಟಕ, ಗೆಜ್ಜಲಗೆರೆ ಕಚೇರಿ ಆವರಣ” ದಲ್ಲಿ ಸೆಪ್ಟೆಂಬರ್ 12 ರಂದು ಬೆಳಗ್ಗೆ 10:25 ಗಂಟೆಗೆ ಒಕ್ಕೂಟದ ಅಧ್ಯಕ್ಷರಾದ ಯು.ಸಿ. ಶಿವಕುಮಾರ್(ಶಿವಪ್ಪ ಉಮ್ಮಡಹಳ್ಳಿ) ಅಧ್ಯಕ್ಷತೆಯಲ್ಲಿ ಜಿಲ್ಲಾ ಹಾಲು ಉತ್ಪಾದಕರ ವಾರ್ಷಿಕ ಸಾಮಾನ್ಯ ಸಭೆಯನ್ನು ಆಯೋಜಿಸಲಾಗಿದೆ. ಸದರಿ ಸಭೆಗೆ ಸದಸ್ಯ ಸಂಘಗಳ ಪ್ರತಿನಿಧಿಗಳು ವಾರ್ಷಿಕ ಸಾಮಾನ್ಯ ಸಭೆಗೆ ಸಕಾಲದಲ್ಲಿ ಹಾಜರಾಗಬೇಕಾಗಿ ಕೋರಿದೆ. ಪೂರ್ಣ ವಿವರಗಳನ್ನೊಳಗೊಂಡ ವಾರ್ಷಿಕ ಸಾಮಾನ್ಯ ಸಭೆಯ ನೋಟೀಸನ್ನು ಎಲ್ಲಾ ಸದಸ್ಯ ಸಂಘಗಳಿಗೂ ಅಂಚೆ ಮೂಲಕ ಈಗಾಗಲೇ ಕಳುಹಿಸಲಾಗಿದೆ. ಅಂಚೆ ಮೂಲಕ ನೋಟೀಸು ತಲುಪದೇ ಇದ್ದ ಪಕ್ಷದಲ್ಲಿ ಪತ್ರಿಕಾ ಪ್ರಕಟಣೆಯನ್ನು ಅಧಿಕೃತ ನೋಟಿಸ್ ಎಂದು ಪರಿಗಣಿಸುವುದು ಹಾಗೂ ಹಾಲು ಉತ್ಪಾದಕರ ಸಹಕಾರ ಸಂಘದ ಪ್ರತಿನಿಧಿಗಳು ಕಡ್ಡಾಯವಾಗಿ ಸಂಘದ ನಿರ್ಣಯದ ಪ್ರತಿಯೊಂದಿಗೆ ಹಾಜರಾಗುವಂತೆ ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರ್ಗಿ : ರಾಜ್ಯದಲ್ಲಿ ಮತ್ತೆ ಮರ್ಯಾದೆ ಹತ್ಯೆ ಸದ್ದು ಮಾಡಿದೆ.ಅನ್ಯಜಾತಿ ಹುಡಗನನ್ನ ಲವ್ ಮಾಡಿದ್ದಕ್ಕೆ ತಂದೆ ತನ್ನ ಸ್ವಂತ 18 ವರ್ಷದ ಮಗಳನ್ನು ಕೊಂದು ಸುಟ್ಟು ಹಾಕಿರುವಂತಹ ಘಟನೆ ಕಲಬುರಗಿ ತಾಲೂಕಿನ ಮೇಳಕುಂದಾ ಗ್ರಾಮದಲ್ಲಿ ನಡೆದಿದೆ. ಲಿಂಗಾಯತ ಸಮಾಜದ ಯುವತಿ ಅದೇ ಗ್ರಾಮದ ಕುರುಬ ಸಮಾಜದ ಯುವಕ ಮಾಳಪ್ಪ ಪೂಜಾರಿಯನ್ನು ಪ್ರೀತಿಸುತ್ತಿದ್ದಳು. ಕಲಬುರಗಿ ನಗರಕ್ಕೆ ಪಿಯುಸಿ ಅಧ್ಯಯನಕ್ಕೆ ಬರುತ್ತಿದ್ದ ವೇಳೆ ಪ್ರೀತಿ ಮಾಡಿದ್ದರು. ಮೂರ್ನಾಲ್ಕು ತಿಂಗಳ ಹಿಂದೆ ಮನೆಯವರಿಗೆ ಪ್ರೀತಿ ವಿಷಯ ತಿಳಿದಿದ್ದು, ಕಾಲೇಜು ಬಿಡಿಸಿದ್ದರು. ಈ ಮಧ್ಯೆ ಕವಿತಾ ಮಾಳಪನನ್ನು ಮದುವೆ ಆಗುತ್ತೇನೆ. ಮದುವೆ ಮಾಡದಿದ್ದರೆ ಓಡಿ ಹೋಗುತ್ತೇನೆ ಎಂದು ಹೇಳಿದ್ದಳು. ಮನೆಯವರು ಅನ್ಯ ಜಾತಿಯ ಯುವಕನನ್ನು ಮದುವೆ ಆಗುವುದನ್ನು ನಿರಾಕರಿಸಿದ್ದು, ಹೆದರಿಸಿದ್ದಾರೆ. ಆದರೂ ಕವಿತಾ ಪಟ್ಟು ಬಿಡದೇ ಮದುವೆ ಆಗುತ್ತೇನೆಂದು ಹಠ ಹಿಡಿದಿದ್ದಳು. ಈ ನಡುವೆ ಮಧ್ಯರಾತ್ರಿ ಯುವತಿ ತಂದೆ ಶಂಕರ್, ಸಹೋದರ ಶರಣು, ಸಂಬಂಧಿ ದತ್ತು ಆಕೆಯ ಕತ್ತು ಹಿಸುಕಿ ಕೊಲೆ ಮಾಡಿ, ಕ್ರಿಮಿನಾಶಕ ಸಿಂಪಡಿಸಿ ವಿಷ…
ದಕ್ಷಿಣಕನ್ನಡ : ಅಕ್ರಮ ಸಕ್ರಮದಡಿ ಮಂಜೂರಾಗಿರುವ ಜಮೀನು ಪರಭಾರೆ ಮಾಡಲು ನಿರಾಕ್ಷೇಪಣಾ ಪತ್ರ ನೀಡಲು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ತಹಶೀಲ್ದಾರ್ ಕಚೇರಿಯ ಭೂಸುಧಾರಣಾ ಶಾಖೆಯ ಕೇಸ್ ವರ್ಕರ್ ಸುನಿಲ್ ಎಂಬವರನ್ನು ರೆಡ್ಹ್ಯಾಂಡ್ ಆಗಿ ಹಿಡಿದಿರುವ ಘಟನೆ ಗುರುವಾರ ನಡೆದಿದೆ. ಈಶ್ವರಮಂಗಲದ ಅಜಿತ್ ಎಂಬವರ ಚಿಕ್ಕಪ್ಪನವರಿಗೆ ನೆಟ್ಟಣಿಗೆ ಮುಡೂರು ಗ್ರಾಮದಲ್ಲಿ 65 ಸೆಂಟ್ಸ್ ಜಮೀನು ಅಕ್ರಮ ಸಕ್ರಮದನ್ವಯ ದರ್ಖಾಸ್ತು ಮಂಜೂರಾಗಿತ್ತು. ಮಂಜೂರಾಗಿ 27 ವರ್ಷ ಆಗಿರುವ ಸದರಿ ಜಮೀನನ್ನು ಪರಭಾರೆ ಮಾಡಲೆಂದು ಅಜಿತ್ ಅವರ ಚಿಕ್ಕಪ್ಪ 2024ರ ಡಿಸೆಂಬರ್ನಲ್ಲಿ ನಿರಾಕ್ಷೇಪಣಾ ಪತ್ರ ಕೋರಿ ಪುತ್ತೂರು ತಹಶೀಲ್ದಾರರಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ಇಲ್ಲಿಯವರೆಗೆ ನಿರಾಕ್ಷೇಪಣಾ ಪತ್ರ ಸಿಕ್ಕಿರದೇ ಇದ್ದುದ್ದರಿಂದ ಸದರಿ ಅರ್ಜಿಯ ಬಗ್ಗೆ ವಿಚಾರಿಸಲೆಂದು ಅವರು ಅಜಿತ್ ಅವರಿಗೆ ಹೇಳಿದ್ದರು. ಅಜಿತ್ ಅವರು, ಕಳೆದ ಜೂನ್ 26ರಂದು ಪುತ್ತೂರು ತಹಶೀಲ್ದಾರ್ ಕಚೇರಿಯ ಭೂ ಸುಧಾರಣಾ ಶಾಖೆಗೆ ಹೋಗಿ ಕೇಸ್ ವರ್ಕರ್ ಸುನೀಲ್ರವರಲ್ಲಿ ತನ್ನ ಚಿಕ್ಕಪ್ಪ ಸಲ್ಲಿಸಿದ ನಿರಾಕ್ಷೇಪಣಾ ಪತ್ರದ…
ಯಾದಗಿರಿ : ಇಲ್ಲಿನ ಸರ್ಕಾರಿ ವಸತಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಶಾಲೆಯ ಶೌಚಾಲಯದಲ್ಲಿ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ನಡೆದಿದೆ. ಆಗಸ್ಟ್ 27ರಂದು ಮಧ್ಯಾಹ್ನ 2 ಗಂಟೆಯ ಸುಮಾರಿಗೆ ಘಟನೆ ನಡೆದಿದೆ. ಈ ಒಂದು ಘಟನೆಗೆ ಸಂಬಂಧಿಸಿದಂತೆ ಇದೀಗ ಪ್ರಾಂಶುಪಾಲ ಸೇರಿದಂತೆ ನಾಲ್ವರನ್ನು ಸಸ್ಪೆಂಡ್ ಮಾಡಲಾಗಿದೆ. ಹೌದು ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಆರೋಗ್ಯ ಸ್ಥಿತಿಗತಿಗಳನ್ನು ಮೇಲ್ವಿಚಾರಣೆ ಮಾಡುವಲ್ಲಿ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯದ ಆರೋಪದ ಮೇಲೆ ಪ್ರಾಂಶುಪಾಲರು ಮತ್ತು ಹಾಸ್ಟೆಲ್ ವಾರ್ಡನ್ ಸೇರಿದಂತೆ ಶಾಲೆಯ ನಾಲ್ವರು ಉದ್ಯೋಗಿಗಳನ್ನು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (KREIS) ಅಮಾನತುಗೊಳಿಸಿದೆ. ಪ್ರಕರಣ ಹಿನ್ನೆಲೆ? ಸರ್ಕಾರಿ ವಸತಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಶಾಲೆಯ ಶೌಚಾಲಯದಲ್ಲಿ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ನಡೆದಿದೆ.ಬಾಲಕಿಗೆ ಹೆರಿಗೆ ನೋವು ಕಾಣಿಸಿಕೊಂಡಿರುವುದನ್ನು ಗಮನಿಸಿದ ಸಹಪಾಠಿಗಳು ಶಾಲಾ ಆಡಳಿತ ಮಂಡಳಿಗೆ ಮಾಹಿತಿ ನೀಡಿದ ನಂತರ, ಈ ವಿಷಯ ಬೆಳಕಿಗೆ…
ಬೆಂಗಳೂರು : ಬೆಂಗಳೂರಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಗಣೇಶ ಮೆರವಣಿಗೆಯಲ್ಲಿ ಪಟಾಕಿ ಸ್ಫೋಟಗೊಂಡು ಬಾಲಕನೊಬ್ಬ ಸಾವನ್ನಪ್ಪಿ, ಪೋಲೀಸ್ ಸಿಬ್ಬಂದಿ ಸೇರಿದಂತೆ 6 ಮಂದಿ ಗಾಯಗೊಂಡಿರುವ ಘಟನೆ ದೊಡ್ಡಬಳ್ಳಾಪುರ ನಗರದಲ್ಲಿ ಸಂಭವಿಸಿದೆ. ದೊಡ್ಡಬಳ್ಳಾಪುರ ನಗರದ ಮುತ್ತೂರು ವಾರ್ಡ್ನಲ್ಲಿ ಶುಕ್ರವಾರ ಸಂಜೆ 6 ಗಂಟೆ ಸಮಯದಲ್ಲಿ ಘಟನೆ ನಡೆದಿದೆ. ಫ್ರೆಂಡ್ಸ್ ವಿನಾಯಕ ಬಳಗ ಗಣೇಶನ ವಿಸರ್ಜನೆ ಮಾಡಲು ಮೆರವಣಿಗೆಯಲ್ಲಿ ಹೊರಟಿತ್ತು. ಪೋರ್ ಲಿಫ್ಟ್ ವಾಹನದಲ್ಲಿ ಗಣೇಶನ ಮೆರವಣಿಗೆ ಮಾಡಲಾಗುತ್ತಿತ್ತು. ಈ ವೇಳೆ ಪೋರ್ ಲಿಫ್ಟ್ ವಾಹನದಲ್ಲಿ ಇಡಲಾಗಿದ್ದ ಪಟಾಕಿಗಳು ಸ್ಫೋಟಗೊಂಡು ಅನಾಹುತಕ್ಕೆ ಕಾರಣವಾಗಿದೆ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಬಸವರಾಜು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬು ಭೇಟಿ ನೀಡಿ ಪರಿಶೀಲನೆ ನಡೆಸಿದರು, ಆಸ್ಪತ್ರೆಯಲ್ಲಿ ಗಾಯಾಳುಗಳನ್ನ ಭೇಟಿ ಮಾಡಿದರು. ವಾಹನದಲ್ಲಿ ಗಣೇಶನನ್ನ ಮೆರವಣಿಗೆ ಮಾಡುವಾಗ, ಕಾರ್ಯಕ್ರಮದ ಆಯೋಜಕರು ವಾಹನದ ಸೈಲೆಂಸ್ಸರ್ ಪಕ್ಕದಲ್ಲಿಯೇ ಪಟಾಕಿ ಇಟ್ಟಿದ್ದರು. ಸೈಲೆಂಸ್ಸರ್ ತಾಪಕ್ಕೆ ಪಟಾಕಿಗಳು ಸ್ಫೋಟಗೊಂಡಿವೆ. ರಾಕೆಟ್ ಗಳು ಸುತ್ತಮುತ್ತ ಹಾಗೂ ಕೆಲವು ವ್ಯಕ್ತಿಗಳ ಮೇಲೆ ನುಗ್ಗಿವೆ. ರಾಕೆಟ್ ಗಳು 12…
ಬೆಂಗಳೂರು : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ನಗರದಲ್ಲಿ ಪತಿಯೊಬ್ಬ ತನ್ನ ಪತ್ನಿಯನ್ನು ಕೊಲೆ ಮಾಡಿ ನೇಣು ಬಿಗಿದ ಸ್ಥಿತಿಯಲ್ಲಿ ಬಿಟ್ಟು ಪರಾರಿಯಾಗಿದ್ದ ಘಟನೆ ವರದಿಯಾಗಿದೆ. ವರ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಈ ಘಟನೆಗೆ ಸಂಬಂಧಿಸಿದಂತೆ ಆರೋಪಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಮಹಿಳೆಯನ್ನು 30 ವರ್ಷದ ಪೂನಂ ಸಿಂಗ್ ಎಂದು ಗುರುತಿಸಲಾಗಿದ್ದು, ಆರೋಪಿ ಪತಿಯನ್ನು ರವೀಂದ್ರ ಸಿಂಗ್ ಎಂದು ಗುರುತಿಸಲಾಗಿದೆ. ಇಬ್ಬರೂ ಮೂಲತಃ ಉತ್ತರ ಪ್ರದೇಶದ ಗೋರಖ್ಪುರದವರಾಗಿದ್ದು, ಕೆಲಸ ಅರಸಿ ಬೆಂಗಳೂರಿಗೆ ಬಂದು ದೊಮ್ಮಸಂದ್ರ ಸಮೀಪದ ಬಾಲಾಜಿ ಲೇಔಟ್ನ ಬಾಡಿಗೆ ಮನೆಯಲ್ಲಿ ಕಳೆದ ಒಂದು ವರ್ಷದಿಂದ ವಾಸವಾಗಿದ್ದರು. ಆರೋಪಿ ರವೀಂದ್ರ ಸಿಂಗ್ ವೃತ್ತಿಯಲ್ಲಿ ಕಾರ್ಪೆಂಟರ್ ಆಗಿದ್ದು, ಮದ್ಯ ವ್ಯಸನಿಯಾಗಿದ್ದ ಎನ್ನಲಾಗಿದೆ. ಈ ಕಾರಣಕ್ಕಾಗಿ ದಂಪತಿಗಳ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು. ಮದ್ಯ ಸೇವಿಸಿ ಬಂದಾಗ ಪತ್ನಿಯ ಮೇಲೆ ಹಲ್ಲೆ ನಡೆಸುತ್ತಿದ್ದನೆಂದು ತಿಳಿದುಬಂದಿದೆ. ನಿನ್ನೆ ಮಧ್ಯಾಹ್ನ ಈ ಘಟನೆ ಬೆಳಕಿಗೆ ಬಂದಿದೆ. ಪೂನಂ ಸಿಂಗ್ ಅವರ ಚಿಕ್ಕಪ್ಪ ಮನೆಗೆ ಬಂದಾಗ, ಆಕೆ…
ಚಿಕ್ಕಮಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಕರ್ನಾಟಕದ ಮೇಲೆ ಬಿದ್ದಿದೆ. ಹೀಗಾಗಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವರುಣ ಅಬ್ಬರ ಮುಂದುವರೆದಿದೆ. ಇದರಿಂದ ಮುಂಜಾಗ್ರತೆ ಕ್ರಮವಾಗಿ ರಾಜ್ಯದ ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಮಳೆಯ ಪ್ರಮಾಣ ತೀವ್ರವಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲೆಯ ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ (ಆಗಸ್ಟ್ 30) ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರು ತಾಲೂಕಿನ ಜಾಗರ, ಖಾಂಡ್ಯ, ಆಲ್ದೂರು, ಕಸಬಾ, ಅಂಬಳೆ, ವಸ್ತಾರೆ, ಆವತಿ ಹೋಬಳಿ ಹಾಗೂ ತರೀಕೆರೆ ತಾಲೂಕಿನ ಲಕ್ಕವಳ್ಳಿ ಹೋಬಳಿಯ ಲಿಂಗದಹಳ್ಳಿ ಹೋಬಳಿಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ ರಜೆ ನೀಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ. ಇನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಮಳೆಯ ಆರ್ಭಟ ಮುಂದುರಿದೆ. ಹೀಗಾಗಿ ಹೊನ್ನಾವರ ತಾಲೂಕಿನ ಪ್ರಾಥಮಿಕ, ಪ್ರೌಢ…