Subscribe to Updates
Get the latest creative news from FooBar about art, design and business.
Author: kannadanewsnow05
ಕಲಬುರ್ಗಿ : ಕಲ್ಬುರ್ಗಿಯಲ್ಲಿ ಇದೀಗ ಆರ್ ಎಸ್ ಎಸ್ ವಿರುದ್ಧ ಸಮರ ಮುಂದುವರೆದಿದೆ. ಜಿಲ್ಲೆಯ ಚಿತ್ತಾಪುರದಲ್ಲಿ ಅಷ್ಟೇ ಅಲ್ಲದೆ ಇನ್ನು ಎರಡು ಕಡೆಗೆ ಪಥ ಸಂಚಲನಕ್ಕೆ ಬ್ರೇಕ್ ಹಾಕಲಾಗಿದೆ. ಕಲಬುರ್ಗಿ ಜಿಲ್ಲೆಯ ಸೇಡಂ ಮತ್ತು ಕುಮ್ಮನಶಿರಸಿಗಿಯಲ್ಲಿ ಆರ್ ಎಸ್ ಎಸ್ ಪಥ ಸಂಚಲನಕ್ಕೆ ಅವಕಾಶ ನಿರಾಕರಿಸಲಾಗಿದೆ. ಕಲ್ಬುರ್ಗಿ ಜಿಲ್ಲೆಯ ಸೇಡಂ ಪಟ್ಟಣದಲ್ಲಿ ಈ ವಿಚಾರವಾಗಿ ನೆನ್ನೆ ದೊಡ್ಡ ಹೈಡ್ರಾಮಾನೆ ನಡೆದಿದ್ದು, ನಿರ್ಬಂಧದ ನಡುವೆಯೂ ಕಾರ್ಯಕರ್ತರು ಪತಸಂಚಲನಕ್ಕೆ ಹೊರಟಿದ್ದರು. ಸೇಡಂ ಪಟ್ಟಣದಲ್ಲಿ ಮತ ಸಂಚಲನಕ್ಕೆ ಹೊರಟಿದ್ದ ಗಣ ವೇಷಧರಿಗಳನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಈ ವೇಳೆ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ದೊಡ್ಡ ಹೈಡ್ರಾಮಾವೆ ಆಗಿದೆ ಹೀಗಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರವಾಗಿ ಆಕ್ರೋಶ ಹೆಚ್ಚಾಗಿದ್ದು, ಇದಕ್ಕೆಲ್ಲ ಸಚಿವ ಪ್ರಿಯಾಂಕ ಖರ್ಗೆ ಒತ್ತಡವೇ ಕಾರಣ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.
ಬೆಂಗಳೂರು : ಇಂದು ನಾಡಿನಾದ್ಯಂತ ಬೆಳಕಿನ ಹಬ್ಬ ದೀಪಾವಳಿ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತದೆ. ಆದರೆ ಪಟಾಕಿ ಸಿಡಿಸುವ ವೇಳೆ ಮಕ್ಕಳ ಜೊತೆಗೆ ಪೋಷಕರು ಇರಲೇಬೇಕು. ಏಕೆಂದರೆ ಪಟಾಕಿ ಸಿಡಿಸುವಾಗ ಮಕ್ಕಳಿಗೆ ಯಾವುದೇ ಅನಾಹುತ ಆಗದಂತೆ ಎಚ್ಚರದಿಂದ ಇರಬೇಕಾದದ್ದು ಪೋಷಕರ ಕರ್ತವ್ಯ. ಇದೀಗ ಪಟಾಕಿ ಸಿಡಿದ ಪರಿಣಾಮ ಬೆಂಗಳೂರಲ್ಲಿ ಐವರು ಬಾಲಕರ ಕಣ್ಣಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ವರದಿಯಾಗಿದೆ. ಹೌದು ಬೆಂಗಳೂರಲ್ಲಿ ಪಟಾಕಿ ಅವಘಡದಿಂದ ಇಬ್ಬರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ವರದಿಯಾಗಿದೆ. ಪಟಾಕಿ ಸಿಡಿಸಲು ಹೋಗಿ ಇಬ್ಬರು ಬಾಲಕರ ಕಣ್ಣಿಗೆ ಗಾಯವಾಗಿದೆ. 12 ಹಾಗೂ 14 ವರ್ಷದ ಬಾಲಕರ ಕಣ್ಣಿಗೆ ಗಂಭೀರವಾದ ಗಾಯಗಳಾಗಿವೆ. ಗಾಯಳು ಬಾಲಕರಿಗೆ ಸದ್ಯ ಮಿಂಟೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ಸಂಜೆ ರಾಕೆಟ್ ಪಟಾಕಿ ಸಿಡಿದು ಬಾಲಕರ ಕಣ್ಣಿಗೆ ಗಾಯವಾಗಿದೆ. ಇನ್ನು ನಾರಾಯಣ ನೇತ್ರಾಲಯದಲ್ಲಿ ಮೂರು ಪಟಾಕಿ ಸಿಡಿತದಿಂದ ಮೂವರು ಬಾಲಕರು ಗಾಯಗೊಂಡಿರುವ ಘಟನೆ ವರದಿಯಾಗಿದೆ. 15 ವರ್ಷದ ಮಕ್ಕಳಿಗೆ ಪಟಾಕಿ ಸಿಡಿದು ಗಂಭೀರವಾಗಿ ಗಾಯಗೊಂಡಿದ್ದಾರೆ. ಪಟಾಕಿ…
ಬಾಗಲಕೋಟೆ : ಜಮೀನು ವಿವಾದಕ್ಕೆ ಸಂಬಂಧಿಸಿದಂತೆ, ಎರಡು ಕುಟುಂಬಗಳ ನಡುವೆ ಮಾರಮಾರಿ ನಡೆದಿದೆ. ಈ ವೇಳೆ ಯುವಕನೋರ್ವನನ್ನು ರಾಡ್ ಇಂದ ಹೊಡೆದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬೆಳಕಿ ತಾಲೂಕಿನ ಲಿಂಗಾಪುರ ಗ್ರಾಮದಲ್ಲಿ ನಡೆದಿದೆ. ರಾಡ್ನಿಂದ ಹೊಡೆದು ಯುವಕನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ವಿಶ್ವನಾಥ್ ಹನುಮಂತಪ್ಪ (26) ಯುವಕನನ್ನ ಭೀಕರವಾಗಿ ಕೊಲೆ ಮಾಡಲಾಗಿದೆ. ಲಿಂಗಾಪುರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿದೆ. ಹೊಲದಿಂದ ಬರುವ ವೇಳೆ ವಿಶ್ವನಾಥ್ನನ್ನು ಅಡ್ಗಟ್ಟಿ ರಾಡ್ ನಿಂದ ಸಂಬಂಧಿಕರೇ ಹಲ್ಲೆ ಮಾಡಿದ್ದಾರೆ. ಅಕ್ಟೋಬರ್ 16 ರಂದು ವಿಶ್ವನಾಥ್ ಮೇಲೆ ಹಲ್ಲೆ ನಡೆದಿದೆ ರಾಡ್ ನಿಂದ ಆರು ಮಂದಿ ಹಲ್ಲೆ ಮಾಡಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧಪಟ್ಟಂತೆ ಎರಡು ಕುಟುಂಬಗಳ ನಡುವೆ ಮಾರಮಾರಿ ನಡೆದಿದೆ. ಗಲಾಟೆಯಲ್ಲಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗಿದೆ ಸಾವನ್ನಪ್ಪಿದ್ದಾನೆ. ಗಣೇಶ್ ಮರೆಮ್ಮನವರ, ಪ್ರಕಾಶ, ರಂಗಪ್ಪ, ಕುಮಾರ, ಯಲ್ಲಪ್ಪ ಬಸಪ್ಪ ಮತ್ತು ಯಂಕಪ್ಪ ಎಂಬುವವರು ವಿಶ್ವನಾಥ್ ಮೇಲೆ ಹಲ್ಲೆ ಮಾಡಿದ್ದಾರೆ. ಜಮೀನಿನಿಂದ ಮನೆಗೆ ತೆರುಳುವಾಗ…
ಕಲಬುರ್ಗಿ : ಕಲ್ಬುರ್ಗಿ ಜಿಲ್ಲೆಯ ಚಿತಾಪುರದಲ್ಲಿ ಆರ್ಎಸ್ಎಸ್ ಸಂಚಲನಕ್ಕೆ ನಿರಾಕರಣೆ ಹಿನ್ನೆಲೆಯಲ್ಲಿ, ಹೈ ಕೋರ್ಟ್ ಗೆ ಅರ್ಜಿ ಸಲ್ಲಿಸಿತು. ಈ ವೇಳೆ ಕಲ್ಬುರ್ಗಿ ಹೈಕೋರ್ಟ್ ಅರ್ಜಿದಾರರಿಗೆ ಮತ್ತೊಂದು ಅರ್ಜಿ ಸಲ್ಲಿಸಲು ಸೂಚನೆ ನೀಡಿತ್ತು. ನವೆಂಬರ್ 2 ರಂದು ಕಲ್ಬುರ್ಗಿ ಜಿಲ್ಲೆಯ ಚಿತಾಪುರದಲ್ಲಿ ಪಥಸಂಚಲನ ವಿಚಾರವಾಗಿ ಇದೀಗ ಕಲ್ಬುರ್ಗಿ ಹೈಕೋರ್ಟ್ ಪೀಠದ ಸೂಚನೆಯಂತೆ ಮುಖಂಡರು ಕಲ್ಬುರ್ಗಿ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಹೌದು ನಿನ್ನೆ ಹೊಸ ಅರ್ಜಿ ಸಲ್ಲಿಕೆಗೆ ಆರ್ ಎಸ್ ಎಸ್ ಮುಖಂಡರು ಮುಂದಾಗಿದ್ದರು.ನಿನ್ನೆ ಡಿಸಿ ಕಚೇರಿಗೆ ತೆರಳಿ ಅರ್ಜಿ ಸಲ್ಲಿಸಲು ಮುಂದಾಗಿದ್ದಾಗ ಮನವಿ ಪತ್ರ ಖುದ್ದಾಗಿ ನೀಡಲು ಜಿಲ್ಲಾಧಿಕಾರಿ ಕಚೇರಿ ಮತ್ತು ನಿವಾಸಕ್ಕೆ ತೆರಳಿದ್ದರು ಡಿಸಿ ಸಿಗದ ಹಿನ್ನೆಲೆಯಲ್ಲಿ ಸರ್ಕಾರಿ ನಿವಾಸದ ಸಿಬ್ಬಂದಿಗಳಿಂದ ಫೋನ್ ಮಾಡಿದ್ದಾರೆ. ಜಿಲ್ಲಾಧಿಕಾರಿ ಆಪ್ತ ಸಹಾಯಕರಿಗೆ ಫೋನ್ ಮಾಡಿಸಿದ್ದಾರೆ. ಆಪ್ತ ಸಹಾಯಕರು ಕೂಡ ಫೋನ್ ಕರೆ ಸ್ವೀಕರಿಸಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಅವರ ಅಧಿಕೃತ ಎರಡು ಇ-ಮೇಲ್ ಗೆ ಪತ್ರ ರವಾನಿಸಿದ್ದಾರೆ. ಪಥ ಸಂಚಲನಕ್ಕೆ ಅನುಮತಿ ನೀಡುವಂತೆ…
ಕಲಬುರ್ಗಿ : ನಾಡಿನಾದ್ಯಂತ ಇಂದು ಎಲ್ಲರು ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಇದ್ದರೆ, ಕಲ್ಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದ್ದು, ಜಿಲ್ಲೆಯ ಚಿಂಚೋಳಿ ತಾಲೂಕಿನ ಶಿರೋಳಿ ಗ್ರಾಮದಲ್ಲಿ ಭೂಮಿ ಕಂಪಿಸಿದೆ. ಬೆಳಗ್ಗೆ 8:00 ಸುಮಾರಿಗೆ ಈ ಒಂದು ಭೂಮಿ ಕಂಪಿಸಿದ ಅನುಭವ ಆಗಿದೆ ಈ ವೇಳೆ ತಕ್ಷಣ ಜನರು ಭಯದಿಂದ ಮನೆಯಿಂದ ಹೊರಗಡೆ ಹೊಡಿ ಬಂದಿದ್ದಾರೆ. ಅಲ್ಲದೆ ಆತಂಕದಿಂದ ಗ್ರಾಮಸ್ಥರು ಬಯಲು ಪ್ರದೇಶದಲ್ಲಿ ಕೆಲವು ಹೊತ್ತು ಕಾಲ ಕಳೆದಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಯಾವುದೇ ಅನಾಹುತ ಆಗಿರುವ ಕುರಿತು ಮಾಹಿತಿ ತಿಳಿದುಬಂದಿಲ್ಲ. ಘಟನೆಗೆ ಸಂಬಂಧಿಸಿದಂತೆ ಮತ್ತಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.
ಮಂಡ್ಯ : ರಾಜ್ಯದಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, 3 ಕೆ ಎಸ್ ಆರ್ ಟಿ ಸಿ ಬಸ್ಗಳ ನಡುವೆ ಡಿಕ್ಕಿಯಾಗಿ ಸುಮಾರು 30ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದ್ದು, 10 ಪ್ರಯಾಣಿಕರ ಸ್ಥಿತಿ ಗಂಭೀರವಾಗಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬಾಚನಹಳ್ಳಿ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಮಳವಳ್ಳಿ ಮತ್ತು ಕೊಳ್ಳೇಗಾಲ ಹೆದ್ದಾರಿಯಲ್ಲಿ ಮೂರು ಸರ್ಕಾರಿ ಬಸ್ ನಡುವೆ ಡಿಕ್ಕಿ ಸಂಭವಿಸಿ ಈ ಒಂದು ಅಪಘಾತ ಸಂಭವಿಸಿದೆ. ಮುಖಾಮುಖಿ ಡಿಕ್ಕಿಯಾಗಿತ್ತು. ಮೊದಲು ಎರಡು ಕೆಎಸ್ಆರ್ಟಿಸಿ ಬಸ್ ಗಳ ನಡುವೆ ಡಿಕ್ಕಿಯಾಗಿತ್ತು. ಅಪಘಾತಕ್ಕೆ ಈಡಾಗಿದ್ದ ಬಸ್ಗೆ ಮತ್ತೊಂದು ಕೆ ಎಸ್ ಆರ್ ಟಿ ಸಿ ಬಸ್ ಬಂದು ಡಿಕ್ಕಿ ಹೊಡೆದಿದೆ. ಮೂರು ಬಸ್ಗಳಲ್ಲಿದ್ದ 30ಕ್ಕೂ ಹೆಚ್ಚು ಜನರಿಗೆ ಗಯಗಳಾಗಿದ್ದು 10 ಜನರ ಸ್ಥಿತಿ ಗಂಭೀರವಾಗಿದೆ ಗಯಾಳುಗಳಿಗೆ ಮಳವಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತ ಸ್ಥಳಕ್ಕೆ ಮಳವಳ್ಳಿ ಗ್ರಾಮಾಂತರ ಠಾಣೆ ಪೊಲೀಸ್ರು ಭೇಟಿ ನೀಡಿ ಪರಿಶೀಲನೆ…
ಶಿವಮೊಗ್ಗ : ಬಿಹಾರ ಚುನಾವಣೆ ಹೆಸರಲ್ಲಿ ಅಧಿಕಾರಿಗಳಿಂದ ಸಚಿವರು ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಸಂಸದ ಬಿ. ವೈ. ರಾಘವೇಂದ್ರ ಅವರು ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ನಗರದಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ಸಚಿವರು ಬಿಹಾರದ ಚುನಾವಣೆಗೆ ಫಂಡ್ ಕಳುಹಿಸಬೇಕೆಂದು ಅಧಿಕಾರಿಗಳಿಂದ ಲೂಟಿ ಮಾಡುತ್ತಿದ್ದಾರೆ ಎಂದರು. ಸಚಿವರ ವಸೂಲಿಗೆ ಅಧಿಕಾರಿಗಳು ಕಣ್ಣೀರು ಹಾಕಿಕೊಂಡು ನಮ್ಮ ಎದುರಿಗೆ ಹೇಳುತ್ತಿದ್ದಾರೆ. ವರ್ಗಾವಣೆ ದಂಧೆ ಮುಗಿದಿದೆ. ಈಗ ರಿನಿವಲ್ ಅಂತ ಎಲ್ಲಾ ಇಲಾಖೆಯ ಮಂತ್ರಿಗಳು ವಸೂಲಿ ಮಾಡಿ ಬಿಹಾರ್ ಚುನಾವಣೆಗೆ ಹಣ ಸಂಗ್ರಹ ಮಾಡುತ್ತಿದ್ದಾರೆ. ಈಗ ದಂಧೆ ಆಗಿದೆ. ಅದು ಬಿಹಾರಕ್ಕೆ ತಲುಪಲ್ಲ, ಅದು ಎಲ್ಲಿ ತಲುಪಬೇಕೋ ಅಲ್ಲಿಗೆ ತಲುಪುತ್ತದೆ. ಬಿಹಾರದ ಚುನಾವಣೆ ಇಟ್ಟುಕೊಂಡು ರಾಜ್ಯದಲ್ಲಿ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ಜೈಲಿನಲ್ಲಿರುವ ಕೊಲೆ ಆರೋಪಿ ನಟ ದರ್ಶನ್ ಕನಿಷ್ಠ ಸೌಲಭ್ಯ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಈ ವಿಚಾರವಾಗಿ ಕಾನೂನು ಪ್ರಾಧಿಕಾರ ಜೈಲಲ್ಲಿ ಕನಿಷ್ಠ ಸೌಲಭ್ಯ ನೀಡಲಾಗುತ್ತದೆಯೋ ಇಲ್ಲವೋ ಎಂದು ಪರಿಶೀಲಿಸಿ ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟಿಗೆ ವರದಿಯನ್ನು ಸಲ್ಲಿಸಿದರು. ವರದಿ ಸಲ್ಲಿಸಿದ ಬಳಿಕ ನಟ ದರ್ಶನ್ ಜೈಲಿನಲ್ಲಿ ತನ್ನ ಸಹಚರರೊಂದಿಗೆ ಕೂಗಾಡಿದ್ದಾರೆ. ಜೈಲಿನ ನಿಯಮದ ಪ್ರಕಾರ ಸೌಲಭ್ಯ ನೀಡಿದರು, ದರ್ಶನ್ ಆರೋಪಿಸಿದ್ದಾರೆ. ಖುದ್ದು ನ್ಯಾಯಾಧೀಶರ ಭೇಟಿಗೂ ಆರೋಪಿ ದರ್ಶನ್ ಅರ್ಜಿ ಹಾಕಿದ್ದರು. ಕಾನೂನು ಸೇವೆಗಳ ಪ್ರಾಧಿಕಾರ ವರದಿ ವಿಚಾರ ಕೇಳಿ ದರ್ಶನಗೆ ಶಾಕ್ ಆಗಿದೆ. ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ.ವರದರಾಜ್ ವರದಿಯನ್ನು ನಿನ್ನೆ ಕೋರ್ಟಿಗೆ ಸಲ್ಲಿಸಿದ್ದರು. ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು. ಈ ವೇಳೆ ಬ್ಯಾರಕ್ ನಲ್ಲಿ ನಟ ದರ್ಶನ್ ವರದಿ ನನ್ನ ವಿರುದ್ಧ ಇದೆ ಎಂದು ಕೂಗಾಡಿದ್ದಾರೆ. ಸಹ ಕೈದಿಗಳ ಜೊತೆಗೆ ಕೊಲೆ ಆರೋಪಿ ದರ್ಶನ್ ಕೂಗಾಡಿದ್ದಾರೆ.…
ಬಾಗಲಕೋಟೆ : ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ಹಾಗೂ ಸಂಪುಟ ಪುನಾರಚನೆ ಕುರಿತು ಈಗಾಗಲೇ ಹಲವು ಚರ್ಚೆಗಳು ಆರಂಭವಾಗಿದ್ದು, ಇದರ ಬೆನ್ನಲ್ಲೇ ಅಬಕಾರಿ ಇಲಾಖೆ ಸಚಿವ ಆರ್.ಬಿ ತಿಮ್ಮಾಪುರ ಮುಂದಿನ ಮುಖ್ಯಮಂತ್ರಿ ಸಚಿವ ಸತೀಶ್ ಜಾರಕಿಹೊಳಿ ಆಗಲಿದ್ದಾರೆ ಎಂದು ಸ್ಪೋಟಕ ಭವಿಷ್ಯ ನೋಡಿದಿದ್ದಾರೆ. ಹೌದು ಮುಧೋಳದಲ್ಲಿ ಜಡಗಣ್ಣ- ಬಾಲಣ್ಣ ಕಂಚಿನ ಮೂರ್ತಿ ಅನಾವರಣ ಹಾಗೂ ವಾಲ್ಮೀಕಿ ಜಯಂತಿ ಕಾರ್ಯಕ್ರಮ ವೇಳೆ ಮಾತನಾಡಿದ ಆರ್ಬಿ ತಿಮ್ಮಾಪೂರ, ಈ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಮುಂದಿನ ಮುಖ್ಯಮಂತ್ರಿ ಸತೀಶ್ ಜಾರಕಿಹೊಳಿ ಎಂದಿದ್ದಾರೆ. ಸ್ವಾಗತ ಭಾಷಣ ಮಾಡುತ್ತಾ ಆರ್ಬಿ ತಿಮ್ಮಾಪೂರ, ವೇದಿಕೆಯಲ್ಲಿರುವ ನನ್ನ ನಾಯಕ, ಮುಂದಿನ ಎಲ್ಲರ ನಿರೀಕ್ಷೆಯಲ್ಲಿರುವ ಮುಖ್ಯಮಂತ್ರಿ ಸತೀಶ್ ಜಾರಕಿಹೊಳಿ ಎಂದಿದ್ದಾರೆ. ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿಯಾಗುವುದನ್ನು ಯಾರೂ ತಪ್ಪಿಸಲು ಸಾಧ್ಯವಿಲ್ಲ ಎಂದಿದ್ದಾರೆ. ಸತೀಶ್ ಜಾರಕಿಹೊಳಿ ಯಾರದೋ ಕೃಪೆಯಿಂದ ಮುಖ್ಯಮಂತ್ರಿ ಆಗುವುದಲ್ಲ, ಅವರ ಸ್ವಂತ ಶಕ್ತಿಯಿಂದ ಮುಖ್ಯಮಂತ್ರಿ ಆಗುತ್ತಾರೆ. ಅಭಿವೃದ್ಧಿ ಕಾರ್ಯಗಳ ಮೂಲಕ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗುತ್ತಾರೆ. ಸತೀಶ್ ಜಾರಕಿಹೊಳಿ ಒಂದಲ್ಲ ಒಂದು ದಿನ…
ಬೆಂಗಳೂರು : ಸರ್ಕಾರಿ ಸ್ಥಳಗಳಲ್ಲಿ ನಡೆಸುವ ಕಾರ್ಯಕ್ರಮಗಳಿಗೆ ಎಲ್ಲ ಸಂಘಟನೆಗಳು ಅನುಮತಿ ಪಡೆಯಬೇಕು. ಎಲ್ಲ ಸಂಘಟನೆಗಳು ಸರ್ಕಾರಿ ಸ್ಥಳಗಳಲ್ಲಿ ನಡೆಸುವ ಕಾರ್ಯಕ್ರಮಗಳಿಗೆ ಕಡ್ಡಾಯವಾಗಿ ಅನುಮತಿ ಪಡೆಯಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಈ ಕುರಿತು ಕಳೆದ ಸಚಿವ ಸಂಪುಟದಲ್ಲಿ ತೀರ್ಮಾನವಾಗಿದೆ. ಸರ್ಕಾರಿ ಸ್ಥಳಗಳಲ್ಲಿ ಖಾಸಗಿ ಸಂಘ, ಸಂಸ್ಥೆಗಳು ಕಾರ್ಯಕ್ರಮ ನಡೆಸಲು ಅವಕಾಶ ಇಲ್ಲ. ಈ ಬಗ್ಗೆ ನಿನ್ನೆ ಸಂಜೆ ಸರ್ಕಾರಿ ಆದೇಶ ಹೊರಡಿಸಲಾಗಿದೆ. ಇದೇ ಕಾರಣಕ್ಕೆ ಕಲಬುರಗಿಯಲ್ಲಿ ಪಥ ಸಂಚಲನಕ್ಕೆ ಅನುಮತಿ ನೀಡಿಲ್ಲ. ಆದೇಶವಾದ ಮೇಲೆ ಅವಕಾಶ ಕೊಟ್ಟರೆ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದರು. ಆರ್ಎಸ್ಎಸ್ ಹೊಸದೇನಲ್ಲ, ನೂರು ವರ್ಷವಾಗಿದೆ. ಆರ್ಎಸ್ಎಸ್ ವಿಚಾರಗಳು ಪ್ರಜಾಪ್ರಭುತ್ವ ವ್ಯವಸ್ಥೆಗೆ ಹೊಂದಾಣಿಕೆ ಆಗುವುದಿಲ್ಲ. ಅದರ ಬಗ್ಗೆ ಆಗಿಂದಾಗ್ಗೆ ಚರ್ಚೆಗಳು ನಡೆಯುತ್ತಿವೆ. ಹಾಗಾಗಿ ಕ್ರಮ ಕೈಗೊಳ್ಳಲಾಗುತ್ತಿದೆ. 2013ರಲ್ಲಿ ಜಗದೀಶ್ ಶೆಟ್ಟರ್ ಅವರು ಆದೇಶ ಮಾಡಿದ್ದರು. ನಾವು ಆದೇಶ ಮಾಡಿದರೆ ಮಾತ್ರ ಪ್ರಶ್ನೆ ಮಾಡುತ್ತಾರೆ. ಅವರು ಮಾಡಿದರೆ ಗೊಂದಲ ಆಯ್ತು ಅಂತಾರೆ. ಪ್ರಚೋದನೆ ಆಗಬಾರದೆಂದು ಇದು…
		













