Subscribe to Updates
Get the latest creative news from FooBar about art, design and business.
Author: kannadanewsnow05
ಆಂಧ್ರಪ್ರದೇಶ : ಗಂಡನ ಮನೆಯವರ ಕಿರುಕುಳ ತಾಳಲಾರದೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಈ ಸಲ ನನಗೆ ರಾಖಿ ಕಟ್ಟೋಕೆ ಆಗಲ್ಲ, ಕ್ಷಮಿಸಿಬಿಡು ಎಂದು ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಘಟನೆ ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯಲ್ಲಿ ನಡೆದಿದೆ. 24 ವರ್ಷದ ಶ್ರೀವಿದ್ಯಾ ಎಂಬುವವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರು ಕಾಲೇಜು ಉಪನ್ಯಾಸಕಿಯಾಗಿದ್ದರು. ಆರು ತಿಂಗಳ ಹಿಂದಷ್ಟೇ ರಾಂಬಾಬು ಎಂಬುವವರನ್ನು ಮದುವೆಯಾಗಿದ್ದರು. ಮದುವೆಯಾಗಿ ತಿಂಗಳಿನಿಂದಲೇ ಗಂಡನ ಮನೆಯವರಿಂದ ಕಿರುಕುಳ ಶುರುವಾಗಿತ್ತು ಎಂದು ಶ್ರೀವಿದ್ಯಾ ಪತ್ರದಲ್ಲಿ ಬರೆದಿದ್ದಾರೆ. ರಾಂಬಾಬು ಕುಡಿದು ಮನೆಗೆ ಬರುತ್ತಿದ್ದ. ದೈಹಿಕ ಹಿಂಸೆ ನೀಡುತ್ತಿದ್ದ, ಮಾತಿನಲ್ಲಿ ನಿಂದಿಸುತ್ತಿದ್ದ. ತನ್ನನ್ನು ಅಪಹಾಸ್ಯ ಮಾಡುತ್ತಿದ್ದ. ಬೇರೆ ಮಹಿಳೆಯರ ಮುಂದೆ ತನ್ನನ್ನು ನಿಷ್ಪ್ರಯೋಜಕ ಎಂದು ಕರೆಯುತ್ತಿದ್ದ ಎಂದು ಆಕೆ ಬರೆದಿದ್ದಾರೆ. ನಿರಂತರ ಕಿರುಕುಳದಿಂದ ಬೇಸತ್ತು ಮಹಿಳೆ ಈ ತಪ್ಪು ಹೆಜ್ಜೆ ಇಡಬೇಕಾಯಿತು.
ಕೊಪ್ಪಳ : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದಿನಿಂದ ರಾಜ್ಯಾದ್ಯಂತ ಸಾರಿಗೆ ನೌಕರರು ಅನಿರ್ದಿಷ್ಟವಧಿ ಮುಷ್ಕರ ಆರಂಭಿಸಿದ್ದಾರೆ. ಮತ್ತೊಂದೆಡೆ ಕೆಎಸ್ಆರ್ಟಿಸಿ ಬಸ್ಗೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವುದು ಕುಕನೂರ ತಾಲೂಕಿನ ಮಸಬಹಂಚಿನಾಳದಲ್ಲಿ ನಡೆದಿದೆ. ಬಸ್ ತಡರಾತ್ರಿ ಯಲಬುರ್ಗಾದಿಂದ ಬೆಂಗಳೂರಿಗೆ ಹೊರಟಿತ್ತು. ಬಸ್ ಮಸಬಹಂಚಿನಾಳ ಬಳಿ ತಲುಪಿದ್ದಾಗ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಪರಿಣಾಮ ಬಸ್ನ ಗಾಜು ಪುಡಿಪುಡಿಯಾಗಿದೆ. ಕಲ್ಲು ತೂರಾಟದ ಬಳಿಕ ಬಸ್ನ್ನು ಚಾಲಕ ವಾಪಸ್ ಡಿಪೋಗೆ ಕೊಂಡೊಯ್ದಿದ್ದಾರೆ. ಇದರಿಂದ ಪ್ರಯಾಣಿಕರು ರಾತ್ರಿ ವೇಳೆ ಪರದಾಡುವಂತಾಯಿತು. ಇನ್ನು ಬಸ್ ಸಂಚಾರ ಸ್ಥಗಿತವಾದ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಜನರು ಊರಿಗೆ ತೆರಳಲು ಪರದಾಡಿದರು.
ನವದೆಹಲಿ: ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಸಚಿವ ಶಿವಾನಂದ ಪಾಟೀಲ್ ಹೂಡಿದ್ದ ಮಾನನಷ್ಟ ಮೊಕದ್ದಮೆ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ. 2023ರ ವಿಧಾನಸಭಾ ಚುನಾವಣೆ ವೇಳೆ ನನ್ನ ವಿರುದ್ಧ ಯತ್ನಾಳ್ ಅವಹೇಳನಕಾರಿ ಹೇಳಿಕೆ ನೀಡಿದ್ದರು ಎಂದು ಆರೋಪಿಸಿ ಮಾನನಷ್ಟ ಮೊಕದ್ದಮೆ ಹೂಡಿದ್ದರು. ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರು, ‘ನ್ಯಾಯಾಲಯದ ಹೊರಗೆ ರಾಜಕೀಯ ಹೋರಾಟ ಮಾಡಿ, ಇಲ್ಲಿ ಅಲ್ಲ’ ಎಂದರು. ಈ ವೇಳೆ ಶಿವಾನಂದ ಪಾಟೀಲ್ ಪರ ವಕೀಲ, ಅವರು ಕ್ಯಾಬಿನೆಟ್ ದರ್ಜೆ ಸಚಿವರು ಎಂದರು. ಹಾಗಾದರೆ ಏನು? 25 ಸಾವಿರ ದಂಡದೊಂದಿಗೆ ಅರ್ಜಿ ವಜಾಗೊಳಿಸಲಾಗಿದೆ ಎಂದು ಸಿಜೆಐ ಹೇಳಿದರು. ವಕೀಲ, ‘ಆದರೆ ವಿಷಯ’ ಎಂದು ವಾದಿಸಲು ಯತ್ನಿಸಿದರು. ಇದರಿಂದ ಆಕ್ರೋಶಗೊಂಡ ನ್ಯಾಯಪೀಠ, ದಂಡದ ಮೊತ್ತವನ್ನು ₹1 ಲಕ್ಷದಿಂದ 1 ಕೋಟಿಗೆ ಏರಿಸಿತು. ತಕ್ಷಣ ವಕೀಲ, ಅರ್ಜಿ ಹಿಂತೆಗೆದುಕೊಳ್ಳುತ್ತಿದ್ದೇನೆ ಎಂದರು.
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಇಂದು ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ಆರಂಭಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದಿನಿಂದ ರಸ್ತೆಗೆ ಬಸ್ ಇಳಿಯುವುದು ಬಹುತೇಕ ಡೌಟ್ ಎನ್ನಲಾಗುತ್ತಿದೆ. ಇದರ ಬೆನ್ನೆಲ್ಲೆ ನೌಕರರಿಗೆ ಸಾರಿಗೆ ಇಲಾಖೆ ಶಾಕ್ ನೀಡಿದ್ದು, ಮುಷ್ಕರದಲ್ಲಿ ಪಾಲ್ಗೊಳ್ಳುವ ನೌಕರರ ರಜೆ ರದ್ದುಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಹೌದು ಇಂದಿನಿಂದ ರಾಜ್ಯಾದ್ಯಂತ ನಾಲ್ಕು ನಿಗಮಗಳ ಸಾರಿಗೆ ಸಿಬ್ಬಂದಿ ಮುಷ್ಕರ ಆರಂಭವಾಗಿದ್ದು, ಸಾರಿಗೆ ನೌಕರರ ರಜೆ ರದ್ದು ಮಾಡಿದ ಇಲಾಖೆ. ಮುಷ್ಕರದಲ್ಲಿ ಭಾಗಿಯಾದರೆ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ. ಡ್ಯೂಟಿ ಮಾಡಿಲ್ಲ ಅಂದರೆ ಸಂಬಳ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದೆ ಸಾರಿಗೆ ನೌಕರರಿಗೆ ಯಾವುದೇ ರಜೆ ಇರುವುದಿಲ್ಲ ನೌಕರರಿಗೆ ಯಾವುದೇ ರಜೆ ಮಂಜೂರು ಮಾಡದಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರಜೆ ರದ್ದು ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಇದೀಗ ಮುಷ್ಕರ ಆರಂಭಿಸಿದ್ದಾರೆ. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರ ಜೊತೆ ನಡೆದ ಸಂಧಾನ ಸಭೆ ಕೂಡ ವಿಫಲವಾಗಿದ್ದು, ಇಂದಿನಿಂದ ಸಾರಿಗೆ ನೌಕರರ ಮುಷ್ಕರ ಆರಂಭವಾಗಿದೆ. ಬೆಂಗಳೂರು, ಮೈಸೂರು, ಹುಬ್ಬಳ್ಳಿ ಬೆಳಗಾವಿ, ಮಂಡ್ಯ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಹುತೇಕ ಸಾರಿಗೆ ನೌಕರರು ಮುಷ್ಕರದಲ್ಲಿ ಭಾಗವಹಿಸಿದ್ದಾರೆ. ಆದರೆ ಇನ್ನೂ ಕೆಲವು ನೌಕರರು ಎಸ್ಮ ಜಾರಿ, ಕೋರ್ಟ್ ಆದೇಶ ಹಾಗೂ ಅಮಾನತ್ತಿನ ಆತಂಕ ಇರುವುದರ ಹಿನ್ನೆಲೆಯಲ್ಲಿ ಕೆಲವು ನೌಕರರು ಮುಷ್ಕರದಲ್ಲಿ ಭಾಗಿಯಾಗದೆ ಕರ್ತವ್ಯಕ್ಕೆ ಹಾಜರಾಗಲು ನಿರ್ಧರಿಸಿದ್ದಾರೆ. ಸಾರಿಗೆ ನೌಕರರು ಮುಷ್ಕರ ಮಾಡುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೂ ಕೂಡ ತೊಂದರೆ ಉಂಟಾಗಲಿದೆ. ನಿತ್ಯ ಸಾರಿಗೆ ಬಸ್ಗಳಲ್ಲಿ ಸಂಚರಿಸುವ ಶಾಲಾ ಕಾಲೇಜು ವಿದ್ಯಾರ್ಥಿಗಳು ಇಂದು ಪರದಾಟ ನಡೆಸುವ ಸಾಧ್ಯತೆ ಇದ್ದು, ಖಾಸಗಿ ವಾಹನಗಳ ಮೊರೆ ಹೋಗುವ ಅನಿವಾರ್ಯತೆ ಎದುರಾಗಿದೆ. ಸಾರಿಗೆ ಮುಷ್ಕರ ಹಿನ್ನೆಲೆಯಲ್ಲಿ ರಾಜ್ಯದ ಯಾವುದೇ ಶಾಲಾ ಕಾಲೇಜುಗಳಿಗೆ ಇಂದು ರಜೆ ಇರುವುದಿಲ್ಲ ಎಂದು…
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದಿನಿಂದ ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ಆರಂಭಿಸುತ್ತಿದ್ದಾರೆ ಹೈಕೋರ್ಟ್ ದೇಶದ ನಡುವೆಯೂ ಕೂಡ ಸಾರಿಗೆ ಮುಷ್ಕರರು ಇಂದು ಬೆಳಿಗ್ಗೆ 6:00 ಯಿಂದ ಸಾರಿಗೆ ನೌಕರರ ಮುಷ್ಕರ ಆರಂಭವಾಗಲಿದೆ. ಆದರೆ ಇವನು ಮುಷ್ಕರದಲ್ಲಿ ಭಾಗವಹಿಸಲು ಸಾರಿಗೆ ನೌಕರರಲ್ಲೇ ಹಲವು ಗೊಂದಲಗಳಿವೆ. ಹೌದು ಸಾರಿಗೆ ಮುಷ್ಕರದಲ್ಲಿ ಭಾಗಿಯಾಗಲು ಕೆಲವರಿಗೆ ಆತಂಕ ಶುರುವಾಗಿದೆ. 2021 ಪ್ರತಿಭಟನೆಯ ವೇಳೆ ಆದಂತಹ ಅನುಭವದ ಆತಂಕ ಎದುರಾಗಿದ್ದು, ಎಸ್ಮಾ ಜಾರಿ, ಕೋರ್ಟ್ ಆದೇಶ ಮತ್ತು ಅಮಾನತಿನ ಆತಂಕ ಎದುರಾಗಿದೆ. ಮತ್ತೆ ಸಸ್ಪೆಂಡ್ ಮಾಡಿದರೆ ವರ್ಷಗಳ ಕಾಲ ಕೆಲಸ ಇಲ್ಲ ಹೀಗಾಗಿ ಮುಷ್ಕರದಲ್ಲಿ ಭಾಗಿಯಾಗಲು ಹಲವರು ಹಿಂದೇಟು ಹಾಕುತ್ತಿದ್ದಾರೆ. ಜೊತೆಗೆ ಮತ್ತೊಂದು ಸಂಘಟನೆಯಿಂದ ಬೆಂಬಲ ಇಲ್ಲ ಸಂಘಟನೆಯ ಕೆಲ ನೌಕರರು ಬೆಂಬಲಿಸುವ ಸಾಧ್ಯತೆ ಇದೆ. ಇದರಿಂದ ನೌಕರರಲ್ಲೇ ಗೊಂದಲ ನಿರ್ಮಾಣ ಆಗುವ ಸಾಧ್ಯತೆ ಇದೆ ಸಾರಿಗೆ ಮುಷ್ಕರದಲ್ಲಿ ಭಾಗಿಯಾಗಲು ಕೆಲವರಿಗೆ ಆತಂಕ 2021 ಪ್ರತಿಭಟನೆ ವೇಳೆ ಆದಂತ ಅನುಭವದ ಆತಂಕ ಎದುರಾಗಿದೆ.
ಬೆಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿರುವ ಆರೋಪಕ್ಕೆ ಸಂಬಂಧಿಸಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ, ಡಿ.ಹರ್ಷೇಂದ್ರ ಕುಮಾರ್ ವಿರುದ್ಧ ಯಾವುದೇ ಮಾನಹಾನಿ ವಿಷಯ ಪ್ರಸಾರ ಅಥವಾ ಪ್ರಕಟ ಮಾಡದಂತೆ ನಿರ್ದೇಶಿಸಲು ಅಸಲು ದಾವೆಯ ವಿಚಾರಣೆ ಬೇರೊಂದು ನ್ಯಾಯಾಲಯಕ್ಕೆ ವರ್ಗಾಯಿಸಲು ಬೆಂಗಳೂರು ನಗರ ಜಿಲ್ಲಾ ಮತ್ತು ಪ್ರಧಾನ ಸೆಷನ್ಸ್ ನ್ಯಾಯಾಧೀಶರಿಗೆ 10ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶ ವಿಜಯಕುಮಾರ್ರೈ ಕೋರಿದ್ದಾರೆ. ಪ್ರಕರಣ ಸಂಬಂಧ ತಮ್ಮ ಹಾಗೂ ತಮ್ಮ ಕುಟುಂಬ ಸದಸ್ಯರ ವಿರುದ್ಧ ಯಾವುದೇ ಮಾನಹಾನಿ ವಿಷಯ ಪ್ರಸಾರ ಅಥವಾ ಪ್ರಕಟ ಮಾಡದಂತೆ ಮಾಧ್ಯಮಗಳಿಗೆ ನಿರ್ದೇಶಿಸುವಂತೆ ಕೋರಿ ಕೋರಿ ಡಿ.ಹರ್ಷೇಂದ್ರ ಕುಮಾರ್ ಅವರು ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋಟ್ ಕೋರಿದ್ದರ್ ಗೆ ಅಸಲು ದಾವೆ ಸಲ್ಲಿಸಿದ್ದರು. ಅದನ್ನು 2025ರ ಜು.18ರಂದು ವಿಚಾರಣೆ ನಡೆಸಿದ್ದ ನ್ಯಾಯಾಧೀಶ ವಿಜಯ್ಕುಮಾರ್ ರೈ, ಮಾಧ್ಯಮಗಳ ವಿರುದ್ಧ ಏಕ ಪಕ್ಷೀಯ ನಿರ್ಬಂಧಕಾಜ್ಞೆ ಹೊರಡಿಸಿತ್ತು.ಇದರಿಂದ ಪತ್ರಕರ್ತ ನವೀನ್ ಸೂರಿಂಜೆ, ಸಾಮಾಜಿಕ ಹೋರಾಟಗಾರ ಮುನೀರ್ಕಾಟಿಪಳ್ಳ ಹಾಗೂ ಬೈರಪ್ಪ…
ಬೆಂಗಳೂರು : ಕಡಿಮೆ ಗುಣಮಟ್ಟದ ಔಷಧಿಗಳನ್ನು ಮಾರುಕಟ್ಟೆಯಿಂದ ಕೇವಲ ಎರಡು ದಿನಗಳಲ್ಲಿ ಹಿಂಪಡೆಯುವ ವ್ಯವಸ್ಥೆ ಜಾರಿ ಮಾಡಲಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ನಿನ್ನೆ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿ, ಹಿಂದೆ ಕಡಿಮೆ ಗುಣಮಟ್ಟದ ಔಷಧಿಗಳನ್ನು ಮಾರುಕಟ್ಟೆಯಿಂದ ಹಿಂಪಡೆಯಲು ಕನಿಷ್ಠ 30 ದಿನ ಆಗುತ್ತಿತ್ತು. ಈಗ ಆ ವ್ಯವಸ್ಥೆ ಬದಲಾಗಿದೆ ಎಂದರು. ಪ್ರಯೋಗಾಲಯದಲ್ಲಿ ಕಡಿಮೆ ಗುಣಮಟ್ಟದ ಔಷಧಿಗಳ ಬಗ್ಗೆ ಬಗ್ಗೆ ವರದಿ ಬಂದ ದ ತಕ್ಷಣ ತಕ್ಷಣ ಇ-ಸಹಿ ಇ-ಸಹಿ ಮಾಡಿ ಆ್ಯಪ್ನಲ್ಲಿ ವರದಿ ಹಾಕಲಾಗುತ್ತದೆ. ಬಳಿಕ ಜಿಲ್ಲಾ ಸಹಾಯಕ ಔಷಧ ನಿಯಂತ್ರಕ (ಎಡಿಸಿ) ಆ ವರದಿಯನ್ನು ಔಷಧ ವಿತರಕರಿಗೆ ರವಾನಿಸುತ್ತಾರೆ. ಇದರಿಂದ ಕಡಿಮೆ ಗುಣಮಟ್ಟದ ಔಷಧಿಗಳನ್ನು ಕೇವಲ ದಿನಗಳಲ್ಲಿ ಮಾರುಕಟ್ಟೆಯಿಂದ ಎರಡು ದಿನಗಳಲ್ಲಿ ಹಿಂಪಡೆಯಲಾಗುತ್ತದೆ ಎಂದು ಮಾಹಿತಿ ನೀಡಿದರು. 59 ಔಷಧಿ ಕಡಿಮೆ ಗುಣಮಟ್ಟ: ಕಳೆದ ಜುಲೈ ತಿಂಗಳಲ್ಲಿ ಬೆಂಗಳೂರು, ಹುಬ್ಬಳ್ಳಿ ಹಾಗೂ ಬಳ್ಳಾರಿ ಔಷಧ ಪರೀಕ್ಷಾ ಪ್ರಯೋಗಾಲಯಗಳಲ್ಲಿ ಒಟ್ಟು 1,433…
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಬೆಳಿಗ್ಗೆ 6 ಗಂಟೆಯಿಂದ ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ಆರಂಭಿಸಿದ್ದು, ಈ ಹಿನ್ನೆಲೆಯಲ್ಲಿ ಇಂದು ಸಾರಿಗೆ ಬಸ್ಗಳು ರಸ್ತೆಗೆ ಹಿಡಿಯಲ್ಲ ಹಾಗಾಗಿ ಇದರ ಪರಿಣಾಮ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳ ಮೇಲು ಬಿರುದು ಆದರೂ ಕೂಡ ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಿಗೆ ಯಾವುದೇ ರಜೆ ಇಲ್ಲ ಎನ್ನಲಾಗಿದೆ. ಹೌದು ರಾಜ್ಯದಲ್ಲಿ ಇಂದು ಶಾಲೆಗಳಿಗೆ ಯಾವುದೇ ರಜೆ ಇಲ್ಲ. ಸರ್ಕಾರಿ ಮತ್ತು ಖಾಸಗಿ ಅನುದಾನಿತ ಶಾಲೆಗಳಿಗೆ ರಜೆ ಇಲ್ಲ ಎಂದನಂತೆ ಇದು ಶಾಲಾ-ಕಾಲೇಜುಗಳಿಗೆ ಗಳು ತೆರೆಯಲಿವೆ. ಬಸ್ಗಳಲ್ಲಿ ಆಶ್ರಯಿಸಿರುವ ವಿದ್ಯಾರ್ಥಿಗಳು ಪರದಾಟ ಸಾಧ್ಯತೆ ಎದುರಾಗಿದೆ. ಬಸ್ ಗಳ ಸಂಚಾರ ಬಂದ್ ಇರುವುದರಿಂದ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆ ಉಂಟಾಗಲಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಶಾಲಾ ಕಾಲೇಜುಗಳಿಗೆ ಇಂದು ಯಾವುದೇ ರಜೆ ಇಲ್ಲ. ಮುಷ್ಕರಕ್ಕೆ ಸರ್ಕಾರಿ, ಖಾಸಗಿ ಹಾಗು ಅನುದಾನಿತ ಶಾಲೆಗಳ ಬೆಂಬಲ ಇಲ್ಲ ಹೀಗಾಗಿ ರಾಜ್ಯಾದ್ಯಂತ ಎಂದಿನಂತೆ ಶಾಲಾ ಕಾಲೇಜುಗಳು ನಡೆಯಲಿದೆ. ಕೆಲವು ಖಾಸಗಿ ಶಾಲೆಗಳಿಂದ…
ಬೆಂಗಳೂರು : ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಾಳೆ ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ನಾಳೆ ಸಾರಿಗೆ ಬಸ್ ರಸ್ತೆಗೆ ಇಳಿಯೋದಿಲ್ಲ ಎಂಬುದಾಗಿ ತಿಳಿಸಿದ್ದಾರೆ. ಇದರ ನಡುವೆ ನಿಮ್ಮ ಬೇಡಿಕೆ ಈಡೇರಿಕೆಗೆ ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಸಾರಿಗೆ ಸಂಸ್ಥೆಗಳು ಸಾರ್ವಜನಿಕ ಅಗತ್ಯ ಸೇವಾ ಸಂಸ್ಥೆಗಳಾಗಿದ್ದು ಮುಷ್ಕರದಲ್ಲಿ ಪಾಲ್ಗೊಳ್ಳದಂತೆ ಕೆ ಎಸ್ ಆರ್ ಟಿಸಿ ಎಂಡಿ ಅಕ್ರಂ ಪಾಷಾ ಮನವಿ ಮಾಡಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಆತ್ಮೀಯ ನೌಕರ ಬಾಂಧವರೇ, ಮಾನ್ಯ ಉಚ್ಛ ನ್ಯಾಯಾಲಯವು ನಾಳಿನ ( ದಿನಾಂಕ: 05-08-2025ರ) ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಮುಷ್ಕರಕ್ಕೆ ತಡೆಯಾಜ್ಞೆ ನೀಡಿರುವುದರಿಂದ, ಮಾನ್ಯ ಉಚ್ಛ ನ್ಯಾಯಾಲಯದ ಆದೇಶವನ್ನು ಗೌರವಿಸಬೇಕು. ಹಾಗೂ ಈಗಾಗಲೇ ಮಾನ್ಯ ಮುಖ್ಯಮಂತ್ರಿಗಳು ಸಹ ಸಕಾರಾತ್ಮಕವಾಗಿ ಸ್ಪಂದಿಸಿರುವುದರಿಂದ, ಸಾರ್ವಜನಿಕ ಅಗತ್ಯ ಸೇವಾ ಸಂಸ್ಥೆಯಾಗಿರುವ ಸಾರಿಗೆ ಸಂಸ್ಥೆಯ ನೌಕರರು ನಾಳಿನ ಮುಷ್ಕರದಲ್ಲಿ ಪಾಲ್ಗೊಳ್ಳಬಾರದೆಂದು ಮನವಿ ಮಾಡಿದ್ದಾರೆ.