Author: kannadanewsnow05

ವೀಳ್ಯದೆಲೆಯನ್ನು ಸಾಮಾನ್ಯವಾಗಿ ನಮ್ಮ ಮನೆಯಲ್ಲಿರುವ ಹಿರಿಯರು ತಿನ್ನುವುದನ್ನು ನೋಡಿದ್ದೇವೆ. ಆದರೆ ಇದನ್ನು ದೇವರಿಗೂ ಅರ್ಪಿಸಲಾಗುತ್ತದೆ ಎನ್ನುವುದು ಕೆಲವರಿಗೆ ಮಾತ್ರ ತಿಳಿದಿದೆ. ಕೆಲವೊಂದು ಸಂಪ್ರಧಾಯಗಳ ಪ್ರಕಾರ ಊಟದ ನಂತರ ವೀಳ್ಯದೆಲೆಯನ್ನು ಸೇವಿಸುತ್ತಾರೆ. ವೀಳ್ಯದೆಲೆಯಲ್ಲಿ ಔಷಧೀಯ ಗುಣವೂ ಕೂಡ ಇದೆ ಎಂಬೂದನ್ನು ವಿಜ್ಞಾನ ತಿಳಿಸಿದೆ. ಹಿಂದೂ ಧರ್ಮದಲ್ಲಿ ವೀಳ್ಯದೆಲೆ ಮತ್ತು ಅಡಿಕೆಯನ್ನು ಹೆಚ್ಚಿನ ಪೂಜೆ ಹಾಗೂ ದೇವರ ಕಾರ್ಯಕ್ರಮಗಳಲ್ಲಿ ಉಪಯೋಗಿಸುತ್ತಾರೆ. ಈ ವೀಳ್ಯದೆಲೆ ಮತ್ತು ಅಡಿಕೆಯನ್ನು ದೇವರಿಗೆ ಅರ್ಪಿಸುವುದರಿಂದಾಗುವ ಉಪಯೋಗವೇನು ಗೊತ್ತಾ.? ಯಾವ ಕಾರಣಕ್ಕಾಗಿ ವೀಳ್ಯದೆಲೆ ಹಾಗೂ ಅಡಿಕೆಯನ್ನು ದೇವರಿಗೆ ಅರ್ಪಿಸಲಾಗುತ್ತದೆ ನೋಡಿ: ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ…

Read More

ಬೆಂಗಳೂರು : ನಮ್ಮ ಕುಟುಂಬ ಮುಗಿಸೋಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮುಂದಾಗಿದ್ದಾರೆ. ಡಿಕೆಶಿ ನೀವು ಮುಂದೆ ಜೈಲಿಗೆ ಹೋಗುವ ದಿನ ಬರುತ್ತದೆ. ನೀವು ಯಾವ ರೀತಿ ಆಟ ಆಡುತ್ತಿದ್ದೀರಿ ನನಗೆ ಗೊತ್ತಿದೆ. ಎಲ್ಲದಕ್ಕೂ ದೇವರು ಮುಂದಿನ ದಿನಗಳಲ್ಲಿ ತಕ್ಕ ಉತ್ತರ ಕೊಟ್ಟೆ ಕೊಡುತ್ತಾನೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆ ಬಿಡದಿಯಲ್ಲಿ ಸರ್ಕಾರದಿಂದ ಮಾಡಲು ಉದ್ದೇಶಿಸಿರುವ ಇಂಟಿಗ್ರೇಟೆಡ್ ಟೌನ್​​ಶಿಪ್ ವಿರುದ್ಧ ರೈತರ ಹೋರಾಟಕ್ಕೆ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ, ವರ್ಚುವಲ್ ಲೈವ್ ಮೂಲಕ ಮಾತನಾಡಿದ ಹೆಚ್​ಡಿಕೆ, ನಾನು ಬದುಕಿರುವವರೆಗೂ ರೈತರ ಒಂದು ಇಂಚು ಭೂಮಿಯನ್ನು ವಶಪಡಿಸಿಕೊಳ್ಳುವುದಕ್ಕೆ ಬಿಡೋದಿಲ್ಲ. ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಜೈಲಿಗೆ ಹೋಗೋ ಕಾಲ ಕೂಡ ಸನ್ನಿಹಿತವಾಗಿದ್ದು, ರೈತರ ಜೊತೆ ನಾನು ನಿಲ್ಲುತ್ತೇನೆ. ಅನಿವಾರ್ಯವಾದರೆ ನಾನೇ ಬರುತ್ತೇನೆ ಎಂದರು. ಕಳೆದ ಹಲವು ದಿನಗಳಿಂದ ಬೆಂಗಳೂರು ದಕ್ಷಿಣ ಜಿಲ್ಲೆ ಬಿಡದಿಯಲ್ಲಿ ಸರ್ಕಾರದಿಂದ ಮಾಡಲು…

Read More

ಕೋಲಾರ : ಸಿಎಂ ಸಿದ್ದರಾಮಯ್ಯ ಅವರಿಗೆ ಸಾಮಾಜಿಕ ಬದ್ಧತೆ ಹಾಗೂ ಶೋಷಣೆ ಗೊತ್ತಿದೆ ಹಾಗಾಗಿಯೇ ಅವರು ಇಂದು ಜಾತಿಗಣತಿ ಮಾಡಿಸುತ್ತಿದ್ದಾರೆ. ಕುರುಬ ಸಮಾಜದವರು ಯಾಕೆ ಹಿಂದೂ ಧರ್ಮ ಬರೆಸಬೇಕು ಅಂದರೆ, ಹಿಂದೂ ಸಾಮ್ರಾಜ್ಯವನ್ನು ಕಟ್ಟಿ ಬೆಳೆಸಿದಂತವರು ಹಾಲುಮತಸ್ಥರು ಎಂದು ಕೋಲಾರದಲ್ಲಿ ಕಾಗಿನೆಲೆ ಶಾಖಾ ಮಠದ ಈಶ್ವರಾನಂದಪುರಿ ಶ್ರೀಗಳು ಹೇಳಿಕೆ ನೀಡಿದರು. ಕೋಲಾರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬೇರೆ ಯಾರೇ ಸಿಎಂ ಇದಿದ್ದರೆ ಗಣತಿ ನಡೆಯುತ್ತಿರಲಿಲ್ಲ ಜನರ ಆರ್ಥಿಕ ಸಾಮಾಜಿಕ ಶೈಕ್ಷಣಿಕ ಪರಿಸ್ಥಿತಿ ತಿಳಿಯಲು ಸಮೀಕ್ಷೆ ಮಾಡಲಾಗುತ್ತಿದೆ ಸಿಎಂ ಸಿದ್ದರಾಮಯ್ಯ ಕೈಗೊಂಡಿರುವ ಎರಡನೇ ಬಾರಿಯ ಸಮೀಕ್ಷೆ ಯಶಸ್ವಿಯಾಗಬೇಕು ರಾಜ್ಯದಲ್ಲಿ ಧರ್ಮ ಬರೆಸುವ ವಿಚಾರದಲ್ಲಿ ಸಾಕಷ್ಟು ಗೊಂದಲದಲ್ಲಿದ್ದಾರೆ. ಕೆಲವರು ವೀರಶೈವ ಅಂತ ಬರೆಸಿದರೆ ಕೆಲವರು ಲಿಂಗಾಯತ ಬರಿಸುತ್ತಾರೆ. ಕೆಲವರು ಹಿಂದೂ ಎಂದು ಮತ್ತೆ ಕೆಲವರು ಬೇರೆ ಧರ್ಮವನ್ನು ಬರೆಸುತ್ತಾರೆ. ಯಾವುದೇ ಗೊಂದಲ ಉಪಜಾತಿಗಳಿಲ್ಲದ ಜಾತಿ ಎಂದರೆ ಕುರುಬ ಸಮಾಜ. ಇಂದು ಅಖಂಡ ಕರ್ನಾಟಕದಲ್ಲಿ ಕುರುಬ ಸಮಾಜಕ್ಕೆ ಯಾವುದೇ ಗೊಂದಲ ಇಲ್ಲ. ಕುರುಬ ಸಮಾಜದವರು ಯಾಕೆ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಘೋರವಾದ ದುರಂತ ಒಂದು ಸಂಭವಿಸಿದ್ದು, ಮೀನಿಗೆ ಬಲೆ ಹಾಕಲು ಹೋಗಿ ಕೆರೆಯಲ್ಲಿ ಮುಳುಗಿ ಇಬ್ಬರು ಸಾವನಪ್ಪಿದ್ದಾರೆ. ಬೆಂಗಳೂರು ಹೊರವಲಯದ ಹೆಸರಘಟ್ಟದ ಕೆರೆಯಲ್ಲಿ ಈ ಒಂದು ಘಟನೆ ನಡೆದಿದೆ. ಕೆರೆಯಲ್ಲಿ ಮುಳುಗಿ ಆನಂದ (32) ಹಾಗೂ ಅನಂತ (27) ಮೃತರು ಎಂದು ತಿಳಿದು ಬಂದಿದೆ. ಮೀನಿಗೆ ಬಲೆ ಹಾಕಲು ಇಬ್ಬರು ತೆಪ್ಪದಲ್ಲಿ ಕೆರೆಯ ಮಧ್ಯೆ ತೆರಳಿದ್ದಾರೆ. ಕೆರೆಯ ಮಧ್ಯದಲ್ಲಿ ತೆಪ್ಪದ ಹುಟ್ಟು ಕೈ ತಪ್ಪಿ ಕೆರೆಗೆ ಬಿದ್ದಿತ್ತು. ಈ ವೇಳೆ ಆನಂದ ನೀರಿಗೆ ಧುಮುಕಿ ತೆಪ್ಪವನ್ನು ಹಿಡಿದುಕೊಂಡಿದ್ದ. ಆನಂದ ನನ್ನ ಮೇಲೆ ಎತ್ತಲು ಅನಂತ ಸಹ ನೀರಿಗೆ ಧುಮುಕಿದ್ದಾನೆ. ಈ ವೇಳೆ ಆನಂದ್ ಮತ್ತು ಅನಂತ ನೀರಿನಲ್ಲಿ ಮುಳುಗಿ ಸಾವನಪ್ಪಿದ್ದಾರೆ. ಸ್ಥಳಕ್ಕೆ ಸೋಲದೇವನಹಳ್ಳಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಮೈಸೂರು : ಬಾಲಕಿಯರನ್ನ ವೇಶ್ಯಾವಾಟಿಕೆಗೆ ತಳುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮೈಸೂರಿನ ವಿಜಯನಗರ ಠಾಣೆ ಪೋಲಿಸರಿಂದ ಇಬ್ಬರು ಆರೋಪಿಗಳ ಬಂಧನವಾಗಿದೆ. ಶೋಭಾ ಹಾಗೂ ತುಳಸಿಕುಮಾರ್ ಎನ್ನುವ ಆರೋಪಿಗಳು ಅರೆಸ್ಟ್ ಆಗಿದ್ದಾರೆ. ಒಡನಾಡಿ ಸಂಸ್ಥೆಯ ಮಾಹಿತಿಯನ್ನು ಆಧರಿಸಿ ವಿಜಯನಗರ ಠಾಣೆ ಪೋಲೀಸರು ಈ ಒಂದು ಕಾರ್ಯಾಚರಣೆ ನಡೆಸಿದ್ದಾರೆ.ವಾಟ್ಸಪ್ ವಿಡಿಯೋ ಮೂಲಕ ಬಾಲಕಿಯನ್ನು ಆರೋಪಿಗಳು ತೋರಿಸಿದ್ದರು.ಆರೋಪಿಗಳು 12 ರಿಂದ 13 ವರ್ಷದ ಬಾಲಕಿ ತೋರಿಸಿ 20 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಪೊಲೀಸರು ಇಬ್ಬರು ಬಾಲಕಿಯರನ್ನು ರಕ್ಷಿಸಿ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.

Read More

ಬೆಂಗಳೂರು : ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ. 7.69 ಕೋಟಿ ಅಂದಾಜು ಮೌಲ್ಯದ ಒಟ್ಟು 5 ಎಕರೆ 0.07.20 ಗುಂಟೆ ಸರ್ಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ.ಜಗದೀಶ ಅವರ ನೇತೃತ್ವದಲ್ಲಿ ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಯಿತು. ಇಂದು ಬೆಂಗಳೂರು ನಗರ ಜಿಲ್ಲೆಯಾದ್ಯಂತ ವಿವಿಧ ತಾಲ್ಲೂಕುಗಳ ತಹಶೀಲ್ದಾರ್ ಗಳು ತಮ್ಮ ವ್ಯಾಪ್ತಿಯಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ ಗುಂಡುತೋಪು, ಸ್ಮಶಾನ, ಸರ್ಕಾರಿ ಓಣಿ, ಬಿಳಿಕೆರೆ ಜಾಜಿಮುಳಗಡೆ, ಖರಾಬು, ಗೋಮಾಳ ಮತ್ತು ಕೆರೆ ಜಾಗಗಳಿಗೆ ಭೇಟಿ ನೀಡಿ ತೆರವು ಕಾರ್ಯಾಚರಣೆ ಕೈಗೊಂಡರು. ಬೆಂಗಳೂರು ದಕ್ಷಿಣ ತಾಲ್ಲೂಕಿನ ಕೆಂಗೇರಿ ಹೋಬಳಿಯ ದೇವಗೆರೆ ಗ್ರಾಮದ ಸ.ನಂ 71 ರ ಗುಂಡುತೋಪು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.22 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ.0.50 ಲಕ್ಷಗಳಾಗಿರುತ್ತದೆ. ತಾವರೆಕೆರೆ ಹೋಬಳಿಯ ದೊಡ್ಡೇರಿ ಗ್ರಾಮದ ಸ.ನಂ 62 ರ ಸ್ಮಶಾನ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.05 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ.0.19 ಲಕ್ಷಗಳಾಗಿರುತ್ತದೆ. ಬೆಂಗಳೂರು ಉತ್ತರ ತಾಲ್ಲೂಕಿನ ದಾಸನಪುರ…

Read More

ದಾವಣಗೆರೆ : ದಾವಣಗೆರೆಯಲ್ಲಿ ಭೀಕರವಾದ ಅಗ್ನಿ ಅವಘಡ ಸಂಭವಿಸಿದ್ದು, ವಿದ್ಯುತ್ ಅವಘಡದಿಂದ ಮನೆಯಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ಕಟ್ಟದಲ್ಲಿದ್ದ ತಾಯಿ ಮಗಳನಿ ರಕ್ಷಣೆ ಮಾಡಲಾಗಿದೆ. ಈ ಒಂದು ಘಟನೆ ಘಟನೆ ದಾವಣಗೆರೆಯ ಅರುಣಾ ಸರ್ಕಲ್, ಬಳಿಯ ರೈಲ್ವೆ ಗೇಟ್ ನ ಸಮೀಪದ ಮನೆಯಲ್ಲಿ ಈ ಒಂದು ಅಗ್ನಿ ಅವಗಡ ಸಂಭವಿಸಿದೆ. ಕಟ್ಟಡದ ಎರಡನೇ ಫ್ಲೋರ್ ನಲ್ಲಿ ಸಿಲುಕಿದ್ದ ಗೀತಾ ಗಂಗಾಧರ್ ಮತ್ತು ಪುತ್ರಿ ಮಧು ರಕ್ಷಣೆ ಮಾಡಲಾಗಿದೆ. ವಿದ್ಯುತ್ ಅವಘಡದಿಂದ ಮನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿದ್ದು, ತಾಯಿ ಮಗಳನ್ನು ರಕ್ಷಣೆ ಮಾಡಲಾಗಿದೆ. ಏಣಿಯ ಸಹಾಯದಿಂದ ತಾಯಿ ಮತ್ತು ಮಗಳನ್ನು ಅಗ್ನಿಶಾಮಕ ಸಿಬ್ಬಂದಿಗಳು ರಕ್ಷಿಸಿದ್ದಾರೆ. ವಿದ್ಯುತ್ ಅವಘಡದಿಂದ ಮೂರು ಮಹಡಿಯ ಮನೆ ಸಂಪೂರ್ಣವಾಗಿ ಭಸ್ಮವಾಗಿದೆ. ಮನೆಯಲ್ಲಿದ್ದ ಸುಮಾರು 3 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ. ಘಟನೆ ಕುರಿತು ಬಸವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು : ಪ್ಲ್ಯಾಟ್​ನಲ್ಲಿ 12 ಕೆ.ಜಿ ಗಾಂಜಾ ಶೇಖರಿಸಿಟ್ಟು ಸರಬರಾಜು ಮಾಡಲು ಯೋಜಿಸಿದ್ದ ಕೇರಳದ 11 ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ವಿದ್ಯಾರ್ಥಿಗಳನ್ನು ಅದ್ವೈತ್ ಶ್ರೀಕಾಂತ್, ಮುಹಮ್ಮದ್ ಅಪ್ಸಿನ್, ಮುಹಮ್ಮದ್ ಸ್ವಾನೀದ್, ನಿಬಿನ್.ಟಿ. ಕುರಿಯನ್, ಮುಹಮ್ಮದ್ ಕೆ.ಕೆ., ಮುಹಮ್ಮದ್ ಹನಾನ್, ಮುಹಮ್ಮದ್ ಶಾಮಿಲ್, ಅರುಣ್ ತೋಮಸ್, ಮುಹಮ್ಮದ್ ನಿಹಾಲ್ ಸಿ, ಮೊಹಮ್ಮದ್ ಜಾಸೀಲ್ ವಿ ಮತ್ತು ಸಿದಾನ್.ಪಿ. ಎಂದು ತಿಳಿದುಬಂದಿದೆ. ಸೆ.26ರಂದು ಅದ್ವೈತ್ ಶ್ರೀಕಾಂತ್, ಮುಹಮ್ಮದ್ ಅಫ್ಸಿನ್, ಮೊಹಮ್ಮದ್ ಸ್ವಾನೀದ್ ಹಾಗೂ ಇತರರು ಗಾಂಜಾವನ್ನು ವಾಣಿಜ್ಯ ಪ್ರಮಾಣದಲ್ಲಿ ಖರೀದಿಸಿಕೊಂಡು ಬಂದಿದ್ದರು. ಇದನ್ನು ಸಾರ್ವಜನಿಕರಿಗೆ ಮಾರಾಟ ಮಾಡುವ ಸಲುವಾಗಿ ಮಂಗಳೂರು ನಗರದ ಅತ್ತಾವರ ಕಾಪಿಗುಡ್ಡೆ ಮಸೀದಿ ಬಳಿಯಿರುವ ಕಿಂಗ್ಸ್ ಕೋರ್ಟ್ ಅಪಾರ್ಟ್‌ಮೆಂಟ್‌ನ ಪ್ಲಾಟ್​ನಲ್ಲಿ ಇರಿಸಿದ್ದರು. ಈ ಕುರಿತು ಮಾಹಿತಿ ಪಡೆದ ಮಂಗಳೂರು ದಕ್ಷಿಣ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳೆಲ್ಲರೂ ಮಂಗಳೂರಿನ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿ.ಬಿ.ಎ ವ್ಯಾಸಂಗ ಮಾಡುತ್ತಿದ್ದಾರೆ. ಒಡಿಶಾ ಮೂಲಕ ಖರೀದಿಸಿ ತಂದಿದ್ದ 2,45,280 ರೂ. ಅಂದಾಜು…

Read More

ಬೆಂಗಳೂರು : ಬೆಂಗಳೂರಿನಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು, ಪೌಡರ್ ಮಿಕ್ಸಿಂಗ್ ಯಂತ್ರಕ್ಕೆ ಸಿಲುಕಿ ಕಾರ್ಮಿಕ ನೊಬ್ಬ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬಾಗಲಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಯಂತ್ರಕ್ಕೆ ಸಿಲುಕಿ ಬಿಹಾರ ಮೂಲದ ರಾಜು ಪಾಸ್ವಾನ್ (23) ಎನ್ನುವ ಕಾರ್ಮಿಕ ಸಾವನ್ನಪ್ಪಿದ್ದಾನೆ. ಸಂತೋಷ್ ಎಂಬವರಿಗೆ ಸೇರಿದ ಪೌಡರ್ ಕಂಪನಿಯಲ್ಲಿ ಈ ಒಂದು ದುರ್ಘಟನೆ ನಡೆದಿದೆ. ಇಂದು ಮಧ್ಯಾಹ್ನ 12:30 ಕಂಪನಿಯಲ್ಲಿ ರಾಜು ಕೆಲಸ ಮಾಡುತ್ತಿದ್ದ ವೇಳೆ ಪೌಡರ್ ಮಿಕ್ಸಿಂಗ್ ಮಾಡುವ ಯಂತ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಬಾಗಲಕುಂಟೆ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

Read More

ಬಾಗಲಕೋಟೆ : ರಾಜ್ಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು ಅದರಲ್ಲೂ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಳೆಯಿಂದಾಗಿ ಜನ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಇದೀಗ ಬಾಗಲಕೋಟೆಯಲ್ಲಿ ಮನೆಯ ಮೇಲ್ಚಾವಣಿ ಕುಸಿದು ವೃದ್ದೆ ಸಾವನಪ್ಪಿದ್ದಾರೆ. ನಗರದ ಕಿಲ್ಲಾ ಓಣಿಯಲ್ಲಿ ಭಾರಿ ಮಳೆಯಿಂದಾಗಿ ಮನೆಗಳು ಕುಸಿದು ಬಿದ್ದಿದ್ದು, ಈ ವೇಳೆ ಮನೆಯ ಮೇಲ್ಚಾವಣಿ ಕುಸಿದು ವೃದ್ದೆ ಒಬ್ಬರಿಗೆ ತಲೆಗೆ ಮತ್ತು ಕೈಗಳಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ. ಶಶಿಕಲಾ ದಾಬಡೆ ಎನ್ನುವವರಿಗೆ ಗಂಭೀರವಾದ ಗಾಯಗಳಾಗಿದ್ದು, ಪುತ್ರ ವೆಂಕಟೇಶ್ ಸ್ವಲ್ಪದರಲ್ಲಿ ಬಚಾವ್ ಆಗಿದ್ದಾರೆ. ಇದುವರೆಗೂ ಬಾಗಲಕೋಟೆ ಜಿಲ್ಲೆಯ ಅದ್ಯಂತ 340ಕ್ಕೂ ಹೆಚ್ಚು ಮನೆಗಳು ಕುಸಿದು ಬಿದ್ದಿವೆ ಎಂದು ವರದಿಯಾಗಿದೆ.

Read More