Author: kannadanewsnow05

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮಾರ್ಚ್ 10 ರಂದು ಉಪಮುಖ್ಯಮಂತ್ರಿಯ ಡಿಕೆ ಶಿವಕುಮಾರ್ ಪಕ್ಷದ ಎಲ್ಲಾ ಶಾಸಕರಿಗೆ ಡಿನ್ನರ್ ಪಾರ್ಟಿ ಆಯೋಜನೆ ಮಾಡಿದ್ದಾರೆ. ಹೌದು ಕೆಪಿಸಿಸಿ ಅಧ್ಯಕ್ಷರಾಗಿ ಡಿಸಿಎಂ ಡಿಕೆ ಶಿವಕುಮಾರ್ 6 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪಕ್ಷದ ಶಾಸಕರಿಗೆ ಡಿಕೆ ಶಿವಕುಮಾರ್ ಪಾರ್ಟಿ ಆಯೋಜನೆ ಮಾಡಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಡಿಕೆ ಶಿವಕುಮಾರ್ ಈ ಒಂದು ಔತಣಕೂಟ ಏರ್ಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ, ಸಚಿವರು ಹಾಗೂ ಪಕ್ಷದ ಶಾಸಕರಿಗೆ ಡಿಸಿಎಂ ಡಿಕೆ ಶಿವಕುಮಾರ್ ಅಹ್ವಾನ ನೀಡಿದ್ದಾರೆ. ಈ ಒಂದು ಡಿನ್ನರ್ ಪಾರ್ಟಿ ಆಯೋಜನೆ ಮೂಲಕ ವಿಶ್ವಾಸಕ್ಕೆ ಸಳೆಯಲು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಬಜೆಟ್ ನಂತರ ರಾಜ್ಯದಲ್ಲಿ ಹಲವು ಬದಲಾವಣೆ ಆಗುವ ಸಾಧ್ಯತೆ ಇದೆ ಎಂದು ಸಹ ಹೇಳಲಾಗುತ್ತಿದೆ.

Read More

ಮಂಗಳೂರು : ಪ್ರೇಯಸಿಯಿಂದ ಯಾವುದೇ ಕರೆಗಳು ಹಾಗೂ ಮೆಸೇಜ್ ಬರದ ಹಿನ್ನೆಲೆಯಲ್ಲಿ ಪ್ರೇಮ ವೈಫಲ್ಯ ಹಿನ್ನೆಲೆಯಲ್ಲಿ ಮಂಗಳೂರು ಮೂಲದ ಯುವಕನೊಬ್ಬ ವಿದೇಶದಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇದೀಗ ವರದಿಯಾಗಿದೆ. ಮೃತ ಯುವಕನನ್ನು ಪುನೀತ್ ಪೂಜಾರಿ (32) ಎಂದು ತಿಳಿದುಬಂದಿದೆ. ಮಂಗಳೂರಿನ ಸೋಮೇಶ್ವರದ ಪುನೀತ್ ಕೆಲಸದ ನಿಮಿತ್ ಒಮನ್ ದೇಶದಲ್ಲಿದ್ದನು. ಕಳೆದ ಒಂದೂವರೆ ವರ್ಷಗಳಿಂದ ಪುನೀತ್ ಪೂಜಾರಿ ಒಮನ್ ದೇಶದಲ್ಲಿ ಲಿಫ್ಟ್ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದನು. ಪುನೀತ್ ಪೂಜಾರಿ ಒಂದೂವರೆ ತಿಂಗಳ ಹಿಂದೆಯಷ್ಟೇ ಊರಿಗೆ ಬಂದು ಹಿಂದಿರುಗಿದ್ದನು. ಇದೀಗ ಪ್ರೇಮ ವೈಫಲ್ಯದಿಂದ ಆತ್ಮ-ಹತ್ಯೆ ಮಾಡಿಕೊಂಡಿದ್ದಾನೆ. ಕಳೆದ ನಾಲ್ಕು ವರ್ಷಗಳಿಂದ ಉರ್ವಾ ನಿವಾಸಿ ಯುವತಿಯನ್ನು ಪ್ರೀತಿಸುತ್ತಿದ್ದನು. ಸೋಶಿಯಲ್ ಮೀಡಿಯಾ ಖಾತೆಗಳಲ್ಲಿಯೂ ಯುವತಿ ಜೊತೆಗಿನ ಫೋಟೋಗಳನ್ನು ಸಹ ಶೇರ್ ಮಾಡಿಕೊಂಡಿದ್ದನು. ಕಳೆದ ಕೆಲವು ದಿನಗಳಿಂದ ಯುವತಿ ಫೋನ್ ಕರೆಗಳನ್ನು ಸ್ವೀಕರಿಸದೇ, ಸಂದೇಶಗಳಿಗೆ ಪ್ರತಿಕ್ರಿಯೆ ನೀಡಿರಲಿಲ್ಲ. ಇದರಿಂದ ಮನನೊಂದು ಪುನೀತ್ ಪ್ರಾಣ ಕಳೆದುಕೊಂಡಿದ್ದಾನೆ.

Read More

ಉಡುಪಿ : ನಗರದಲ್ಲಿ ಆಯೋಜನೆಗೊಂಡಿದ್ದ ಪೊಲೀಸ್ ಮ್ಯಾರಥಾನ್ ವೇಳೆ PSI ಒಬ್ಬರು ಇದ್ದಕ್ಕಿದ್ದಂತೆ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಕುಂದಾಪುರ ಗ್ರಾಮಾಂತರ ಠಾಣಾಧಿಕಾರಿ ನಾಸೀರ್ ಹುಸೇನ್ (58) ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲಾ ಪೊಲೀಸ್ – ನಮ್ಮ ಪೊಲೀಸ್ ನಮ್ಮ ಹೆಮ್ಮೆ, ಎಲ್ಲರಿಗೂ ಫಿಟ್ನೆಸ್, ಡ್ರಗ್ಸ್ ಫ್ರೀ ಕರ್ನಾಟಕ ಎಂಬ ಧ್ಯೇಯದೊಂದಿಗೆ ಜಿಲ್ಲಾ ಪೊಲೀಸ್ ಇಲಾಖೆ ಭಾನುವಾರ 5 ಕಿ.ಮೀ ಮ್ಯಾರಥಾನ್ ಓಟ ಆಯೋಜಿಸಿತ್ತು. ಮ್ಯಾರಥಾನ್​ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಠಾಣಾಧಿಕಾರಿ ನಾಸೀರ್ ಹುಸೇನ್ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ. ಮ್ಯಾರಥಾನ್‌ ವೇಳೆ ನಾಸೀರ್ ಹುಸೇನ್ ಅವರು, ಜೋಡುಕಟ್ಟೆಯ ಟಿ.ಎಂ.ಎ. ಪೈ ಆಸ್ಪತ್ರೆ ಎದುರು ಏಕಾಏಕಿ ಕುಸಿದು ಬಿದ್ದರು. ತಕ್ಷಣವೇ ಸಹೋದ್ಯೋಗಿಗಳು ಅವರನ್ನು ಆಸ್ಪತ್ರೆಗೆ ದಾಖಲಿಸಿದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ ಎಂದು ತಿಳಿದುಬಂದಿದೆ. ನಾಸಿರ್ ಅವರ ಹಠಾತ್ ನಿಧನದಿಂದ ಕುಟುಂಬಸ್ಥರ ಆಕ್ರಂದನ ಇದೀಗ ಮುಗಿಲುಮುಟ್ಟಿದೆ.

Read More

ಬೆಂಗಳೂರು : ಬೆಂಗಳೂರಲ್ಲಿ 10 ಕೋಟಿ ಮೌಲ್ಯದ ಡ್ರಗ್ಸ್ ಅನ್ನು ಸಿಸಿಬಿ ಪೊಲೀಸರು ಸೀಜ್ ಮಾಡಿದ್ದಾರೆ. ಪ್ರತಿಷ್ಠಿತ ಅಪಾರ್ಟ್ಮೆಂಟ್ನಲ್ಲಿ 10 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆಯಾಗಿತ್ತು. ಬಾಗಲೂರಿನ ಪ್ರೆಸ್ಟೀಜ್ ಫೈಂಡ್ ವೆರಿ ಪಾರ್ಕ್ ನ ಪ್ಲಾಟ್ನಲ್ಲಿ 10 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆಯಾಗಿದೆ. 10 ಕೋಟಿ ರೂಪಾಯಿ ಮೌಲ್ಯದ LSD ಹೈಡ್ರೋಗಂಜ, ಚರಸ್ ಅನ್ನು ಜಪ್ತಿ ಮಾಡಿಕೊಂಡಿದ್ದು. ಕೇರಳ ಮೋಡದ ಅಶ್ವಿನ್ (27) ಹಾಗೂ ಮೊಬಿನ (25) ಎನ್ನುವ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ ಸಿಸಿಬಿ ನಾರ್ಕ್ಕೋಟಿಕ್ ವಿಭಾಗದಿಂದ ಈ ಒಂದು ಕಾರ್ಯಾಚರಣೆ ನಡೆದಿದೆ. ಪೆಡ್ಲಿಂಗ್ ಅನ್ನೆ ಇಬ್ಬರು ಆರೋಪಿಗಳು ವೃತ್ತಿಯನ್ನಾಗಿ ಮಾಡಿಕೊಂಡಿದ್ದರು. ಮೊದಲ ಬಾರಿಗೆ ಕರ್ನಾಟಕದಲ್ಲಿ 8335 LSD ಸೀಜ್ ಮಾಡಲಾಗಿದೆ. ಒಂದು ಎಲ್ ಎಸ್ ಡಿ ಸ್ಕ್ರಿಪ್ಸ್ ಬೆಲೆ ರೂ.6,000 ಬೆಲೆ ಬಾಳುತ್ತದೆ. ದೇವರ ಚಿತ್ರ ಸೇರಿದಂತೆ ವಿವಿಧ ಚಿತ್ರಕಲಾ ರೂಪದಲ್ಲಿ LSD ಸ್ಕ್ರಿಪ್ಟ್ ಮಾರಾಟ ಮಾಡಲಾಗುತ್ತಿತ್ತು. ಜೊತೆಗೆ ಚಿರಸ್ 534 ಗ್ರಾಂ ಹೈಡ್ರೋ ಗಾಂಜಾ 5 ಕೆಜಿ ವಶಕ್ಕೆ…

Read More

ಕಲಬುರ್ಗಿ : ಕಲ್ಬುರ್ಗಿ ಡಿಸಿ ಇಮೇಲ್ ಐಡಿಗೆ ಕಿಡಿಗೇಡಿಗಳು ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಕಳುಹಿಸಿದ್ದಾರೆ.ಕೋರ್ಟ್ ನಲ್ಲಿ ಬಾಂಬ್ ಇಟ್ಟಿರೋದಾಗಿ ಬೆದರಿಕೆ ಸಂದೇಶ ಕಳಿಸಿದ್ದಾರೆ. ತಕ್ಷಣ ಬೆದರಿಕೆ ಸಂದೇಶ ಬಂದಿದ್ದನ್ನು ಜಿಲ್ಲಾಧಿಕಾರಿಗಳು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಈ ವೇಳೆ ತಕ್ಷಣ ಕೋರ್ಟ್ ಹಾಲ್ನಲ್ಲಿದ್ದ ಎಲ್ಲಾ ಸಿಬ್ಬಂದಿಗಳನ್ನು ಹೊರಗಡೆ ಕಳುಹಿಸಲಾಗಿದೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಚಂದ್ರಗ್ರಹಣ ಮತ್ತು ದೇವಸ್ಥಾನಗಳ ಮುಚ್ಚುವಿಕೆಯ ನಡುವೆ ಧಾರ್ಮಿಕ, ವೈಜ್ಞಾನಿಕ ಹಾಗೂ ಆಧ್ಯಾತ್ಮಿಕ ಕಾರಣಗಳ ದೊಡ್ಡ ಪಟ್ಟಿಯೇ ಇದೆ. ಅದರಲ್ಲೂ ಕೇತುಗ್ರಸ್ತ ಚಂದ್ರಗ್ರಹಣ ಎಂದರೆ ರಾಹು ಅಥವಾ ಕೇತು ಎಂಬ ಛಾಯಾ ಗ್ರಹಗಳು ಚಂದ್ರನನ್ನು ಆವರಿಸುವ ಸಮಯ ಎಂದು ನಂಬಲಾಗುತ್ತದೆ. ಇದರ ಕುರಿತಾದ ಸಮಗ್ರ ಮಾಹಿತಿ ಇಲ್ಲಿದೆ: ೧. ಶಾಸ್ತ್ರೀಯ ಮತ್ತು ಧಾರ್ಮಿಕ ಹಿನ್ನೆಲೆ ಹಿಂದೂ ಧರ್ಮದ ಪ್ರಕಾರ, ಗ್ರಹಣದ ಸಮಯವನ್ನು ‘ಸೂತಕ’ ಅಥವಾ ಅಶುಚಿಯ ಕಾಲ ಎಂದು ಪರಿಗಣಿಸಲಾಗುತ್ತದೆ. ಋಣಾತ್ಮಕ ಶಕ್ತಿ: ಗ್ರಹಣದ ಅವಧಿಯಲ್ಲಿ ವಿಶ್ವದಲ್ಲಿ ನಕಾರಾತ್ಮಕ ಶಕ್ತಿಗಳ ಪ್ರಭಾವ ಹೆಚ್ಚಿರುತ್ತದೆ ಎಂಬ ನಂಬಿಕೆಯಿದೆ. ದೇವಸ್ಥಾನವು ಸಕಾರಾತ್ಮಕ ಶಕ್ತಿಯ ಕೇಂದ್ರವಾಗಿರುವುದರಿಂದ, ಈ ಋಣಾತ್ಮಕ ಕಿರಣಗಳು ವಿಗ್ರಹದ ಪ್ರಭಾವವನ್ನು ಕಡಿಮೆ ಮಾಡಬಾರದು ಎಂಬ ಉದ್ದೇಶದಿಂದ ಬಾಗಿಲು ಹಾಕಲಾಗುತ್ತದೆ. ದೇವರಿಗೂ ವಿಶ್ರಾಂತಿ: ಗ್ರಹಣ ಕಾಲದಲ್ಲಿ ದೇವರಿಗೆ ‘ಗ್ರಹಣ ಪೀಡೆ’ ಇರುತ್ತದೆ ಎಂದು ಭಾವಿಸಲಾಗುತ್ತದೆ. ಆ ಸಮಯದಲ್ಲಿ ಪೂಜೆ, ಪುನಸ್ಕಾರಗಳನ್ನು ಮಾಡದೆ ದೇವರಿಗೆ ವಿಶ್ರಾಂತಿ ನೀಡುವ ಸಂಪ್ರದಾಯವಿದೆ. ೨. ವೈಜ್ಞಾನಿಕ ಮತ್ತು ಕಾಸ್ಮಿಕ್ ಕಿರಣಗಳ ಪ್ರಭಾವ…

Read More

ಬೆಂಗಳೂರು : ನಟ ರಿಷಬ್ ಶೆಟ್ಟಿ ನಟನೆಯ ಕಾಂತರಾ ಚಾಪ್ಟರ್ 1 ಚಿತ್ರದ ದೈವ ಪಾತ್ರದ ಬಗ್ಗೆ ಅವಮಾನಕಾರಿ ಸನ್ನೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಹೈಕೋರ್ಟ್ ಮತ್ತೆ ರಿಲೀಫ್ ನೀಡಿದೆ. ಈ ಒಂದು ಪ್ರಕರಣವನ್ನು ರದ್ದುಗೊಳಿಸುವಂತೆ ರಣವೀರ್ ಸಿಂಗ್ ಕಳೆದ ವಾರ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಮುಂದಿನ ವಿಚಾರಣೆಯವರೆಗೂ ರಣವೀರ್ ಸಿಂಗ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ನೀಡಿದ್ದ ಆದೇಶವನ್ನು ಹೈಕೋರ್ಟ್ ವಿಸ್ತರಿಸಿದೆ. ತನ್ನ ವಿರುದ್ಧ ದಾಖಲಾಗಿರುವ ಖಾಸಗಿ ದೂರು ಮತ್ತು ಅದರ ಮುಂದುವರಿದ ಭಾಗವಾಗಿ ಬೆಂಗಳೂರಿನ ಹೈಗ್ರೌಂಡ್ಸ್‌ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ರಣವೀರ್‌ ಸಿಂಗ್‌ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ಈ ಹಿಂದೆ ನೀಡಿದ್ದ ಆದೇಶ ವಿಸ್ತರಿಸಿ ಆದೇಶಿಸಿತು. ಪ್ರಕರಣದ ಹಿನ್ನೆಲೆ ಗೋವಾದಲ್ಲಿ ಕಳೆದ 2025ರ ನ.28ರಂದು ನಡೆದಿದ್ದ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಮಾರೋಪ ಸಮಾರಂಭದಲ್ಲಿ ರಣವೀರ್‌ ಸಿಂಗ್‌, ಕಾಂತಾರ…

Read More

ಹಾಸನ : ಹಾಸನದಲ್ಲಿ ಕ್ಷುಲ್ಲಕ ವಿಚಾರವಾಗಿ ಕೊಲೆ ನಡೆದಿದ್ದು, ನಿಧಾನವಾಗಿ ಕಾರು ಓಡಿಸು ಎದ್ದಿದ್ದಕ್ಕೆ ಯುವಕನಿಗೆ ಗುದ್ದಿಸಿ, ಭೀಕರವಾಗಿ ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಸುರನಹಳ್ಳಿ ಎಂಬ ಗ್ರಾಮದಲ್ಲಿ ನಡೆದಿದೆ.ಹತ್ಯೆಯಾದ ಯುವಕನನ್ನು ಮನು (27) ಎಂದು ಗುರುತಿಸಲಾಗಿದೆ. ತಡರಾತ್ರಿ 12 ಗಂಟೆ ಸಮಯದಲ್ಲಿ ಮನು, ಅಭಿಷೇಕ್, ರಾಕೇಶ್ ಹಾಗೂ ಕುಶಾಲ್ ರಸ್ತೆ ಪಕ್ಕದಲ್ಲಿ ನಿಂತು ಮಾತನಾಡುತ್ತಿದ್ದರು. ಈ ವೇಳೆ KA-01-ಎಂಎಫ್-2883 ನಂಬರ್‌ನ ಕಾರಿನಲ್ಲಿ ಅತಿ ವೇಗವಾಗಿ ಅಪರಿಚಿತ ವ್ಯಕ್ತಿ ಬಂದಿದ್ದಾನೆ. ಇದನ್ನು ಕಂಡ ಯುವಕರ ತಂಡ, ಕಾರು ಚಾಲಕನಿಗೆ ನಿಧಾನವಾಗಿ ಹೋಗು ಎಂದು ಹೇಳಿದ್ದರು. ಇದರಿಂದ ಕೋಪಗೊಂಡ ಕಾರು ಚಾಲಕ ಸ್ಬಲ್ಪ ದೂರು ಹೋಗಿ ತಿರುಗಿಸಿಕೊಂಡು ಬಂದು, ಮಾತನಾಡುತ್ತ ನಿಂತಿದ್ದವರಿಗೆ ಡಿಕ್ಕಿ ಹೊಡೆಸಿದ್ದಾನೆ. ಬಳಿಕ ಅಲ್ಲಿಂದ ಪರಾರಿಯಾಗಿದ್ದಾನೆ. ಡಿಕ್ಕಿ ರಭಸಕ್ಕೆ ಮನು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಅಭಿಷೇಕ್ ಸೇರಿ ಮೂವರು ಯುವಕರಿಗೆ ಗಾಯಗಳಾಗಿವೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಾಲ್ವರು…

Read More

ಬೆಂಗಳೂರು : ಹೋಳಿ ಹುಣ್ಣಿಮೆಯ ಗ್ರಹಣಕ್ಕೂ ಯುದ್ಧಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಗವಿ ಗಂಗಾಧರೇಶ್ವರ ಪ್ರಧಾನ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿಕೆ ನೀಡಿದರು. ಈ ಗ್ರಹಣ ಇರಾನ್ ಇಸ್ರೇಲ್ ಯುದ್ಧಕ್ಕೆ ಪ್ರಭಾವವಾಗಿಲ್ಲ. ಆದರೆ ಇದು ಭಾರತಕ್ಕೆ ಬರಬಾರದು ಎಂದು ಶಾಂತಿ ಹೋಮ ಮಾಡಲಾಗುತ್ತಿದೆ. ಗವಿ ಗಂಗಾಧರೇಶ್ವರ ದೇಗುಲದಲ್ಲಿ ಶಾಂತಿ ಹೋಮ ಮಾಡಲಾಗುತ್ತೆ. ಈ ವರ್ಷ ಜಲಕಂಟಕ ಮತ್ತು ಅಗ್ನಿ ಅವಘಡ ಆಗಲಿದೆ ಉತ್ತರ ಭಾರತದಲ್ಲಿಯೇ ಹೆಚ್ಚು ಸಮಸ್ಯೆ ಆಗಲಿದೆ ಎಂದು ಬೆಂಗಳೂರಿನ ಗವಿಪುರಂ ಗುಟ್ಟಹಳ್ಳಿಯಲ್ಲಿರುವ ಗವಿ ಗಂಗಾಧರೇಶ್ವರ ದೇಗುಲದ ಅರ್ಚಕ ಸೋಮ ಸುಂದರ್ ದೀಕ್ಷಿತ್ ಹೇಳಿಕೆ ನೀಡಿದರು.

Read More

ಮಂಡ್ಯ : ತಮ್ಮ ಮಗನ ಏಳಿಗೆಗಾಗಿ, ಅಣ್ಣನ ಮಗ ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿ ಕಾರಣ ಎಂದು ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಕಾಂಗ್ರೆಸ್ ಶಾಸಕ ಕದಲೂರು ಉದಯ್ ಆರೋಪ ಮಾಡಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಮಾತನಾಡಿದ ಅವರು, ಅಣ್ಣನ ಮಗನನ್ನೇ ಸಹಿಸಿಕೊಳ್ಳಲಿಲ್ಲ ಇನ್ನು ನಮ್ಮನ್ನು ಸಹಿಸಿಕೊಳ್ಳುತ್ತಾರ? ಇವರ ಮಗ ಗೆದ್ದಿಲ್ಲ ಅಂತ ಅಣ್ಣನ ಮಗನ ಜೈಲಿಗೆ ಕಳುಹಿಸಿದರು. ಕ್ರಿಯೇಟ್ ಮಾಡಿ ಪ್ರಜ್ವಲ್ ರೇವಣ್ಣನನ್ನು ಜೈಲಿಗೆ ಕಳುಹಿಸಿದರು. ಪ್ರಜ್ವಲ್ ಜೈಲಿಗೆ ಹೋಗಲು ನೂರಕ್ಕೆ ನೂರರಷ್ಟು ಹೆಚ್ ಡಿ ಕುಮಾರಸ್ವಾಮಿ ಕಾರಣ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಮನಸು ಮಾಡಿದರೆ ಬಿಡಿಸಬಹುದಾಗಿತ್ತು. ಆದರೆ ಷಡ್ಯಂತರ ಮಾಡಿ ಪ್ರಜ್ವಲ್ ನನ್ನು ಜೈಲಿಗೆ ಹಾಕಿಸಿದ್ದಾರೆ. ಮಗನ ಏಳಿಗೆಗೆ ಹೆಚ್ ಡಿ ಕುಮಾರಸ್ವಾಮಿ ಅಣ್ಣನ ಮಗನನ್ನು ಜೈಲಿಗೆ ಕಳುಹಿಸಿದ್ದಾರೆ. ಎಂದು ಮದ್ದೂರಿನಲ್ಲಿ ಕಾಂಗ್ರೆಸ್ ಶಾಸಕ ಕದಲೂರು ಉದಯ ಹೇಳಿಕೆ ನೀಡಿದರು.

Read More