Author: kannadanewsnow05

ಕೊಪ್ಪಳ : ರಾಜ್ಯದಲ್ಲಿ ಬೆಚ್ಚಿ ಬೆಳಿಸುವಂತಹ ಘಟನೆ ನಡೆದಿದ್ದು ಕೊಪ್ಪಳದಲ್ಲಿ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ್ದು, ಈ ಹಿನ್ನೆಲೆ ಕುಕನೂರು ಠಾಣೆ ಪೊಲೀಸರು ಪೋಕ್ಸೋ ಪ್ರಕರಣದ ಕಲಿಸಿಕೊಂಡು ಓರ್ವ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಈ ಒಂದು ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಬಿಸಿಎಂ ಬಾಲಕಿಯರ ವಿದ್ಯಾರ್ಥಿ ನಿಲಯದ ಹತ್ತನೇ ತರಗತಿ ಓದುತ್ತಿರುವ 16 ವರ್ಷದ ವಿದ್ಯಾರ್ಥಿನಿ ಬುಧವಾರ ಬೆಳಗಿನ ಜಾವ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಈ ಕುರಿತು ಕುಕನೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ. ವಸತಿ ನಿಲಯಗಳ ಮಕ್ಕಳ ಆರೋಗ್ಯದ ಮೇಲೆ ನಿಗಾ ವಹಿಸಲು ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದಡಿ ಪ್ರತೀ ತಿಂಗಳು ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ಮಗುವಿಗೆ ಜನ್ಮ ನೀಡಿದ ಬಾಲಕಿಯ ಆರೋಗ್ಯ ತಪಾಸಣೆಯನ್ನು ಎರಡು ತಿಂಗಳ ಹಿಂದೆ ಮಾಡಲಾಗಿದ್ದು, ಬಾಲಕಿ ಗರ್ಭಿಣಿಯಾದ ವಿಷಯವನ್ನು ವೈದ್ಯಾಧಿಕಾರಿಗಳು ಪತ್ತೆ ಹಚ್ಚಿಲ್ಲ. ಆದ್ದರಿಂದ ಕರ್ತವ್ಯ ಲೋಪದ ಮೇಲೆ ಇಬ್ಬರು ವೈದ್ಯಾಧಿಕಾರಿಗಳ ಮೇಲೂ ಎಫ್‌ಐಆ‌ರ್…

Read More

ಉಡುಪಿ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಖಾಕಿ ಸರ್ಪಗಾವಲು ಹಾಕಿದೆ. ಪ್ರಧಾನಿ ಸ್ವಾಗತಕ್ಕೆ ನಗರ ಸಿದ್ಧವಾಗಿದೆ. ಬನ್ನಂಜೆ ಕೆಎಸ್​ಆರ್​ಟಿಸಿ ಬಸ್‌ ನಿಲ್ದಾಣದ ಸಮೀಪದಿಂದ ಕಲ್ಸಂಕದವರೆಗೂ ಪ್ರಧಾನಿ ರೋಡ್‌ ಶೋ ನಡೆಯಲಿದ್ದು, ಎರಡು ಕಡೆಗಳಲ್ಲೂ ಬ್ಯಾರಿಕೇಡ್ ನಿರ್ಮಾಣ ಮಾಡಲಾಗಿದೆ. ಅಲ್ಲದೇ ಈ ರಸ್ತೆಯ ಎರಡೂ ಬದಿಗಳಲ್ಲಿರುವ ಅಂಗಡಿ ಮಾಲೀಕರಿಗೆ ಅಂದು ಅಂಗಡಿ ತೆರೆಯದಂತೆ ಸೂಚನೆಯನ್ನು ಜಿಲ್ಲಾಡಳಿತ ರವಾನಿಸಿದೆ. ಪ್ರಧಾನಿ ನರೇಂದ್ರ ಮೋದಿಯವರ ಆಗಮನದ ಹಿನ್ನೆಲೆಯಲ್ಲಿ ಸಂಚಾರ ವ್ಯವಸ್ಥೆಯಲ್ಲೂ ತುಸು ವ್ಯತ್ಯಾಸ ಆಗಲಿದೆ. ನ.28ಕ್ಕೆ ಸೀಮಿತವಾಗಿ ಉಡುಪಿ ನಗರ, ಮಲ್ಪೆ ಹಾಗೂ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬೆಂಗಳೂರು : ಕಾವೇರಿ 2.0 ಸದ್ಯ ಮಾರಾಟ, ಗಿಫ್ಟ್ ಡೀಡ್, ಅಡಮಾನ, ಪಿತ್ರಾರ್ಜಿತ ಆಸ್ತಿ ಕುರಿತ ವಹಿವಾಟುಗಳನ್ನು ಆಧರಿಸಿದೆ. ಅದರಲ್ಲಿ ಆಸ್ತಿ ವಿವಾದಗಳ ಕುರಿತಂತೆ ಸಿವಿಲ್ ನ್ಯಾಯಾಲಯಗಳ ತೀರ್ಪುಗಳನ್ನು ಪರಿಶೀಲಿಸಲು ಯಾವುದೇ ಅವಕಾಶವಿಲ್ಲ. ಹಾಗಾಗಿ ಹಾಗಾಗಿ ಅದರಲ್ಲಿ ‘ಮ್ಯುಟೇಷನ್ ಆಧಾರಿತ ಸಿವಿಲ್ ಕೋರ್ಟ್ ಡಿಕ್ರಿ’ ಎಂಬ ಹೊಸ ಕಾರ್ಯನಿರ್ವಹಣಾ ಶೀರ್ಷಿಕೆಯನ್ನು ಸೇರ್ಪಡೆ ಮಾಡಿ ಪರಿಷ್ಕರಣೆ ಮಾಡುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಪ್ರಸ್ತುತ ಚಾಲ್ತಿಯಲ್ಲಿರುವ ಕಾವೇರಿ 2.0 ತಂತ್ರಾಂಶ ಕಾನೂನು ಗೊಂದಲಗಳನ್ನು ಸೃಷ್ಟಿಸುತ್ತಿದೆ. ಆದ್ದರಿಂದ ಹಾಗಾಗಿ ಅದರಲ್ಲಿ ‘ಮ್ಯುಟೇಷನ್ ಆಧಾರಿತ ಸಿವಿಲ್ ಕೋರ್ಟ್ ಡಿಕ್ರಿ’ ಎಂಬ ಹೊಸ ಕಾರ್ಯನಿರ್ವಹಣಾ ಶೀರ್ಷಿಕೆಯನ್ನು ಸೇರ್ಪಡೆ ಮಾಡಿ ಪರಿಷ್ಕರಣೆ ಮಾಡುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಕಾವೇರಿ 2.0 ಸದ್ಯ ಮಾರಾಟ, ಗಿಫ್ಟ್ ಡೀಡ್, ಅಡಮಾನ, ಪಿತ್ರಾರ್ಜಿತ ಆಸ್ತಿ ಕುರಿತ ವಹಿವಾಟುಗಳನ್ನು ಆಧರಿಸಿದೆ ಮತ್ತು ಅದರಲ್ಲಿ ಆಸ್ತಿ ವಿವಾದಗಳ ಕುರಿತಂತೆ ಸಿವಿಲ್ ನ್ಯಾಯಾಲಯಗಳ ತೀರ್ಪುಗಳನ್ನು ಪರಿಶೀಲಿಸಲು ಯಾವುದೇ ಅವಕಾಶವಿಲ್ಲ. ಜೊತೆಗೆ ಇದು ನಾಗರಿಕರು ನ್ಯಾಯಾಲಯಗಳು ನಿರ್ಣಾಯಕವಾಗಿ…

Read More

ಬೆಂಗಳೂರು : ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಹೈಕಮಾಂಡ್ ಏನು ನಿಲುವು ತೆಗೆದುಕೊಳ್ಳುತ್ತೇನೆ ಎನ್ನುವುದು ಇದೀಗ ಸದ್ಯಕ್ಕೆ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ ಇದರ ಮಧ್ಯ ಡಿಸಿಎಂ ಡಿಕೆ ಶಿವಕುಮಾರ್ ಅವರು ತಮ್ಮ ಟ್ವೀಟ್ ಖಾತೆಯ ಮೂಲಕ ಕೊಟ್ಟ ಮಾತು ಉಳಿಸಿಕೊಳ್ಳುವುದು ವಿಶ್ವದಲ್ಲಿರುವ ದೊಡ್ಡ ಶಕ್ತಿ ಎಂದು ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ್ದಾರೆ. ಹೌದು ಕುರ್ಚಿ ಕಿತ್ತಾಟದ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ಕಾರ್ಮಿಕ ಟ್ವೀಟ್ ಮಾಡಿದ್ದು ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿ ದೊಡ್ಡ ಶಕ್ತಿ. ಯಾರೇ ಆಗಲಿ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು ಅದು ಜಡ್ಜ ಆಗಿರಲಿ ಅಧ್ಯಕ್ಷರಾಗಲಿ ಯಾರೇ ಆಗಿರಲಿ ನನ್ನನ್ನು ಸೇರಿಸಿ ಸಹ ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು ಕೊಟ್ಟ ಮಾತಿನ ಶಕ್ತಿಯೇ ಜಗತ್ತಿನ ಶಕ್ತಿಯಾಗಿದೆ ಎಂದು ಟ್ವೀಟ್ ಮೂಲಕ ಡಿಕೆ ಶಿವಕುಮಾರ್ ಮತ್ತೆ ಕೊಟ್ಟ ಮಾತು ಪ್ರಸ್ತಾಪಿಸಿದ್ದಾರೆ.

Read More

ಹಾಸನ : ಹಾಸನದಲ್ಲಿ ಭೀಕರವಾದ ಸಂಭವಿಸಿದ್ದು ರಸ್ತೆ ಬದಿಯಲ್ಲಿರುವ ವಿದ್ಯುತ್ ಕಂಬಕ್ಕೆ ಬೈಕ್ ಒಂದು ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ನಲ್ಲಿ ಇದ್ದಂತಹ ಇಬ್ಬರು ಸವಾರರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಮೃತರನ್ನು ಲೋಕೇಶ್ (25) ಹಾಗೂ ಕಿರಣ್ (32) ಎಂದು ತಿಳಿದುಬಂದಿದೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹೊನ್ನೇನಹಳ್ಳಿ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದ್ದು ಬೈಕ್ ನಲ್ಲಿ ಇಬ್ಬರು ಸವಾರರು ತೆರುಳುತ್ತಿದ್ದರು. ಆಗ ಬೈಕ್ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ ಪರಿಣಾಮ ಸ್ಥಳದಲ್ಲೇ ಲೋಕೇಶ್ ಹಾಗು ಕಿರಣ್ ಸಾವನ್ನಪ್ಪಿದ್ದು ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಪಘಾತದ ಕುರಿತು ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಜೋರಾಗಿದ್ದು, ಇದರ ನಡುವೆ ದಲಿತ ಸಿಎಂ ಕೂಗು ಕೇಳಿ ಬರುತ್ತಿದೆ ಇನ್ನು ನಾಯಕತ್ವ ವಿಚಾರವಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿ, ಎರಡೂವರೆ ವರ್ಷ ಅಂತ ಏನಿಲ್ಲ, ನನ್ನ ವೈಯಕ್ತಿಕ ಏನಿಲ್ಲ, ಪಕ್ಷದ ತೀರ್ಮಾನ. ನಾನು ಸಿಎಂ ಎಲ್ಲರೂ ಸೇರಿ ಸರ್ಕಾರವನ್ನು ತಂದಿದ್ದೇವೆ ಎಂದರು. ಕೆಪಿಸಿಸಿ ಕಚೇರಿಯಲ್ಲಿಂದು ಮಾತನಾಡಿದ ಅವರು, ದೆಹಲಿಗೆ ಹೋಗೋದು ನನಗೆ ಗೊತ್ತಿಲ್ಲ. ನ.28ರಂದು ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕಾರ್ಯಕ್ರಮ ಇದೆ. ನ.29 ಇನ್ನೂ ದೂರ ಇದೆ. ನಾನು ಒಕ್ಕಲಿಗ ನಾಯಕ ಅಂತ ಹೇಳಿಲ್ಲ. ನಾನು ಕಾಂಗ್ರೆಸ್ ನಾಯಕ. ನಾನು ಒಕ್ಕಲಿಗನಾಗಿ ಹುಟ್ಟಿದ್ದೇನೆ. ನಾವು ಬಿಟ್ಟರೂ ಜಾತಿ, ಧರ್ಮ ಬಿಡಲ್ಲ. ಅಶೋಕಣ್ಣ ಚಕ್ರವರ್ತಿ, ಸಾಮ್ರಾಟ್ ಎಂದು ಬೇಕಾದರೆ ಬೋರ್ಡ್ ಹಾಕಿಕೊಳ್ಳಲಿ ಎಂದು ತಿರುಗೇಟು ನೀಡಿದರು. ನಾನು ಸತೀಶ್ ಒಳ್ಳೆ ಸ್ನೇಹಿತರು, ನಮ್ಮಿಬ್ಬರ ಬಾಂಧವ್ಯ ಚೆನ್ನಾಗಿದೆ. ಇಬ್ಬರೂ ದುಡಿಯುತ್ತಿದ್ದೇವೆ. ಪಕ್ಷಕ್ಕೆ ಅವರು ಆಸ್ತಿ. ರಾಹುಲ್ ನನಗೆ ಏನು ಹೇಳಿದ್ದಾರೆ…

Read More

ಬೆಂಗಳೂರು : ನಾನು ಯಾವಾಗಲೂ ಸಾಮೂಹಿಕ ನಾಯಕತ್ವದ ಮೇಲೆ‌ ನಂಬಿಕೆಯಿಟ್ಟವನು. ಯಾವ ವ್ಯಕ್ತಿ ಪೂಜೆ ಇಲ್ಲ. ನನ್ನದೇನಿದ್ರೂ ಪಕ್ಷ ಪೂಜೆ ನನ್ನದು ಯಾವ ಬಣವೂ ಅಲ್ಲ, ಕಾಂಗ್ರೆಸ್ ಬಣ. ನನ್ನ ಸಂಖ್ಯೆ 140 ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿಂದು ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ‌ ಬೇರಾರು ಅಲ್ಲ, ನಮ್ಮ ಪಾರ್ಟಿಯ ಸೀನಿಯರ್ ಲೀಡರ್. ನಾನೊಬ್ಬನೇ ಪಾರ್ಟಿ ಕಟ್ಟಿಲ್ಲ. ಸಾಮೂಹಿಕ ನಾಯಕತ್ವದಲ್ಲಿ ಪಕ್ಷ ಕಟ್ಟಿರೋದು. ಸರ್ಕಾರವನ್ನು ಉಳಿಸಿಕೊಂಡು ಹೋಗಲು ಚರ್ಚೆ ಮಾಡಿದ್ದೇವೆ. ಬಿಜೆಪಿಯವರು ಏನೇನೋ ಹೇಳ್ತಾರೆ. ಆದರೆ ನಾವು 140 ಮಂದಿ ಒಟ್ಟಾಗಿದ್ದೇವೆ. ಯಾರೂ ಅಲ್ಲಾಡಿಸಲು ಆಗಲ್ಲ. ಸದಾನಂದ ಗೌಡ್ರು ಏನೋ ಹೇಳಿದ್ದಾರೆ. ಪಾಪ ಅವರಿಗೆ ನನ್ನ ಇತಿಹಾಸ ಗೊತ್ತಿಲ್ಲ. ನಾನು ಹುಟ್ಟು ಕಾಂಗ್ರೆಸ್ಸಿಗ ಸಚಿವ ಜಮೀರ್ ಅಹ್ಮದ್​, ಕೆ.ಹೆಚ್.ಮುನಿಯಪ್ಪ, ಪ್ರಿಯಾಂಕ್ ಖರ್ಗೆ, ಸತೀಶ್ ಜಾರಕಿಹೊಳಿ‌ ಎಲ್ಲ ಭೇಟಿ‌ ಮಾಡಿದ್ದರು. ಪಕ್ಷದ ಬಲವರ್ಧನೆಗೆ ಭೇಟಿಯಾಗಿದ್ದೇವೆ ಅಷ್ಟೇ ಎಂದರು.

Read More

ದಾವಣಗೆರೆ : ಪೋಕ್ಸೋ ಪ್ರಕರಣದ ಮೊದಲ ಕೇಸ್ನಲ್ಲಿ ಚಿತ್ರದುರ್ಗದ ಮುರುಘಾ ಶರಣರು ನಿರ್ದೋಷಿ ಎಂದು ಚಿತ್ರದುರ್ಗದ 2ನೇ ಅಪರ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ ಈ ಒಂದು ಪ್ರಕರಣದಲ್ಲಿ ಮುರುಘ ಶ್ರೀಗಳು ನಿರ್ದೋಷಿ ಎಂದು ಮಹತ್ವದ ತೀರ್ಪು ನೀಡಿತು. ಕೋರ್ಟ್ ನಿಂದ ನಿರ್ದೋಷಿ ಎಂದು ತೀರ್ಪು ಬಂದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮುರುಘಾ ಶ್ರೀಗಳು, ಈ ವೇಳೆ ಎರಡನೇ ಪೋಕ್ಸೋ ಪ್ರಕರಣದ ಬಗ್ಗೆ ಕೇಳಿದ ಪ್ರಶ್ನೆಗೆ, ಈಗ ಉತ್ತರ ನೀಡುವುದಿಲ್ಲ. ಮುಂದೆ ನಿಮ್ಮೆಲ್ಲರನ್ನು ಇಲ್ಲಿ ಕರೆಯುತ್ತೇವೆ. ಆಗ ಉತ್ತರ ನೀಡಲಾಗುವುದು. ಇವತ್ತಿಗೆ ಇಷ್ಟು ಸಾಕು ಎಂದು ತಿಳಿಸಿದರು. ಚಿತ್ರದುರ್ಗ ನ್ಯಾಯಾಲಯದಿಂದ ಖುಲಾಸೆಯಾದ ನಂತರ ದಾವಣಗೆರೆಯ ಶಿವಯೋಗಿ ಮಂದಿರಕ್ಕೆ ಮುರುಘಾಶ್ರೀಗಳು ಆಗಮಿಸಿದರು. ಮುರುಘಾ ಶ್ರೀ ಅವರ ಬರುವಿಕೆಗೆ ಕಾಯುತ್ತಿದ್ದ ಭಕ್ತರು ಶ್ರೀಗಳು ಬರುತ್ತಿದ್ದಂತೆ ಹೂವಿನ ಹಾರ ಹಾಕಿ ಸ್ವಾಗತಿಸಿದರು. ಮಂದಿರಕ್ಕೆ ಬಂದ ಬಳಿಕ ಜಯದೇವ ಜಗದ್ಗುರುಗಳ ಗದ್ದುಗೆಗೆ ಮುರುಘಾಶ್ರೀ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

Read More

ಬಾಗಲಕೋಟೆ : ಇತ್ತೀಚಿಗೆ ಬಾಗಲಕೋಟೆ ಜಿಲ್ಲೆಯ ಸಮೀರವಾಡಿ ಗೋದಾವರಿ ಸಕ್ಕರೆ ಕಾರ್ಖಾನೆ ಪ್ರತಿಭಟನೆ ವೇಳೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು 17 ಜನರನ್ನು ಅರೆಸ್ಟ್ ಮಾಡಿದ್ದಾರೆ. ಜೊತೆಗೆ ಘಟನೆಗೆ ಕಾರಣರಾದವರು ರೈತರಲ್ಲ, ಕಿಡಿಗೇಡಿಗಳು ಎಂಬುದು ತನಿಖೆಯಲ್ಲಿ ಬಹಿರಂಗಗೊಂಡಿದೆ. ವಿಡಿಯೋ ಸಾಕ್ಷ್ಯ ಆಧರಿಸಿ ಆರೋಪಿಗಳನ್ನು ಅರೆಸ್ಟ್​​ ಮಾಡಲಾಗಿದ್ದು, ಬಂಧಿತರು ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಪೊಲೀಸರು ಘಟನೆಯ ವಿಡಿಯೋವನ್ನೇ ಬ್ರಹ್ಮಾಸ್ತ್ರವಾಗಿ ಬಳಸಿಕೊಂಡು ಕಿಡಿಗೇಡಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಯಾವ ಆರೋಪಿ ಯಾವ ಕೃತ್ಯ ನಡೆಸಿದ್ದಾನೆಂದು ವಿಡಿಯೋ ಸಾಕ್ಷಿ ಕಲೆಹಾಕಿದ ಬಳಿಕವೇ ಅರೆಸ್ಟ್​​ ಮಾಡಲಾಗಿದೆ. ರೈತರ ಕಡೆ ನಿಂತು 13 ಜನ ಕಲ್ಲು ತೂರಿದ್ದರೆ, ಇನ್ನೊಂದೆಡೆ ಕಾರ್ಖಾನೆ ಕಡೆಯಿಂದ ಕಲ್ಲು ತೂರಾಟ ನಡೆಸಿರುವ 4 ಜನರು ಸೇರಿ ಒಟ್ಟು 17 ಮಂದಿಯನ್ನು ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ಬಂಧನದ ಬಗ್ಗೆ ಮಾಹಿತಿ ನೀಡಿರುವ ಬಾಗಲಕೋಟೆ ಎಸ್​​ಪಿ ಸಿದ್ದಾರ್ಥ್​​ ಗೋಯೆಲ್​, ಇದು ರೈತರ ಕೃತ್ಯ ಅಲ್ಲ. ಬಂಧಿತ ಕಿಡಿಗೇಡಿಗಳು ಘಟನೆ ಬಗ್ಗೆ ತಪ್ಪೊಪ್ಪಿಕೊಂಡಿದ್ದು, ಬೆಂಕಿ ಹಚ್ಚಿದ್ದು ಮತ್ತು ಕಲ್ಲು…

Read More

ಅಫ್ಘಾನಿಸ್ತಾನ್ : ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಜೈಲಿನಲ್ಲಿ ಹತ್ಯೆಯಾಗಿದ್ದಾರೆ ಎಂದು ಅಫ್ಘಾನಿಸ್ತಾನ್ ಟೈಮ್ಸ್ ಪತ್ರಿಕೆಗಳಲ್ಲಿ ವರದಿಯಾಗಿದೆ. ಜೈಲಿನಲ್ಲಿರುವ ನಾಯಕನನ್ನು ಭೇಟಿಯಾಗಲು ಒತ್ತಾಯಿಸಿದ್ದಕ್ಕಾಗಿ ಪೊಲೀಸರು ತಮ್ಮ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ್ದಾರೆ ಎಂದು ಅವರ ಮೂವರು ಸಹೋದರಿಯರು ಹೇಳಿದ್ದಾರೆ. ಇಮ್ರಾನ್ ಖಾನ್ ಅವರ ಸಹೋದರಿಯರಾದ ನೊರೀನ್ ಖಾನ್, ಅಲೀಮಾ ಖಾನ್ ಮತ್ತು ಉಜ್ಮಾ ಖಾನ್ – ಈ ವಾರ ರಾವಲ್ಪಿಂಡಿಯ ಅಡಿಯಾಲಾ ಜೈಲಿನ ಹೊರಗೆ ಜಮಾಯಿಸಿದ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಬೆಂಬಲಿಗರೊಂದಿಗೆ ಪೊಲೀಸರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಮಾಜಿ ಪ್ರಧಾನಿಯನ್ನು ಭೇಟಿಯಾಗಲು ಅಧಿಕಾರಿಗಳು ಅವಕಾಶ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ.

Read More