Author: kannadanewsnow05

ಚಿಕ್ಕಮಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಬಂದ ನಂತರ ಒಂದು ರೂಪಾಯಿ ಅಭಿವೃದ್ಧಿ ಕೂಡ ಆಗಿಲ್ಲ ಕಾಂಗ್ರೆಸ್ ಸರ್ಕಾರದ ಕೆಲಸ ಕೊಡುವುದಕ್ಕಿಂತ ಹೆಚ್ಚು ಕಿತ್ತುಕೊಳ್ಳುವುದಾಗಿದೆ ಎಂದು ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು. https://kannadanewsnow.com/kannada/breaking-will-not-join-hands-with-corrupt-rajkumar-anand-quits-aap/ ಚಿಕ್ಕಮಂಗಳೂರು ಜಿಲ್ಲೆಯ ತರೀಕೆರೆಯಲ್ಲಿ ಬಿವೈ ವಿಜಯೇಂದ್ರ ಮಾತನಾಡಿ, ಭ್ರಷ್ಟಾಚಾರ ರಹಿತ ಆಡಳಿತ ಕೊಟ್ಟ ಕೀರ್ತಿ ಪ್ರಧಾನಿ ಮೋದಿ ಅವರಿಗೆ ಸಲ್ಲುತ್ತದೆ. ಮೋದಿ ಅವರು ಭಾರತವನ್ನು ದೊಡ್ಡ ಆರ್ಥಿಕ ಶಕ್ತಿಯನ್ನಾಗಿ ಮಾಡಿದ್ದಾರೆ. ಮೋದಿ ಕೊಟ್ಟ ಪಡಿತರ ಅಕ್ಕಿಗೆ ತಮ್ಮ ಫೋಟೋ ಅಂಟಿಸಿದರು ಎಂದರು. ಫೋಟೋ ಆಂಟಿಸಿ ಕಾಂಗ್ರೆಸ್ ಕೊಡುಗೆ ಅಂತ ತೋರಿಸುತ್ತಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ಬಿ ವೈ ವಿಜೇಂದ್ರ ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ಪಿ ಎಮ್ ಕಿಸಾನ್ ಯೋಜನೆಯ ರಾಜ್ಯ ಸರ್ಕಾರದ ಪಾಲು ನಿಲ್ಲಿಸಿದರು.ಕಾಂಗ್ರೆಸ್ ಸರ್ಕಾರ ಕೊಡುತ್ತಿರುವುದಕ್ಕಿಂತ ಕಿತ್ತುಕೊಳ್ಳುತ್ತಿರುವುದೇ ಹೆಚ್ಚು ಎಂದು ಟೀಕಿಸಿದರು. https://kannadanewsnow.com/kannada/will-i-be-able-to-headoffice-the-congress-office-hd-kumaraswamy-hits-back-at-congress/ ದರೋಡೆ…

Read More

ಬೆಂಗಳೂರು: ಬಿಡದಿಯ ನನ್ನ ತೋಟವನ್ನು ಜೆಡಿಎಸ್ ಹೆಡ್ಡಾಫೀಸ್ ಎಂದು ಟೀಕೆ ಮಾಡಿರುವ ಕಾಂಗ್ರೆಸ್ ಪಕ್ಷಕ್ಕೆ ತಿರುಗೇಟು ಕೊಟ್ಟಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ನಾನು ಕಾಂಗ್ರೆಸ್ ಕಚೇರಿಯನ್ನು ಹೆಡ್ಡಾಫೀಸ್ ಮಾಡಿಕೊಳ್ಳಲು ಸಾಧ್ಯವೇ ಎಂದು ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತಾಡುತ್ತಾ ಕಾಂಗ್ರೆಸ್ ಪಕ್ಷವನ್ನು ತರಾಟೆಗೆ ತೆಗೆದುಕೊಂಡ ಅವರು; ಬಿಡದಿಯ ನನ್ನ ತೋಟವೇ ನನ್ನ ಪಕ್ಷದ ಹೆಡ್ಡಾಫೀಸ್. ಅದರಲ್ಲಿ ತಪ್ಪೇನಿದೆ? ನಾನು ಪಕ್ಷದ ಅಧ್ಯಕ್ಷನಿದ್ದೇನೆ. ಅಲ್ಲಿ ನಾನು ನಮ್ಮ ಪಕ್ಷದ ಕೆಲ ಮುಖಂಡರ ಸಭೆ ಕರೆದಿದ್ದೆ. ಅಲ್ಲದೆ, ನನ್ನ ತೋಟದಲ್ಲಿ 120 ಜನ ಈಗಲೂ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಊಟದ ವ್ಯವಸ್ಥೆ ಮಾಡಿದ್ದೆವು. ಮಾಡಬಾರದು ಅನ್ನೋಕೆ ಅದೇನು ಕಾಂಗ್ರೆಸ್ ಹೆಡ್ಡಾಫೀಸಾ? ಬಿಜೆಪಿಗೆ ಕೇಶವ ಕೃಪ ಹೇಗೋ ನಮ್ಮ ಪಕ್ಷಕ್ಕೆ ನಮ್ಮ ತೋಟದ ಮನೆಯೂ ಹಾಗೆಯೇ ಎಂದು ಕಾಂಗ್ರೆಸ್ ಪಕ್ಷವನ್ನು ಕುಟುಕಿದರು. https://kannadanewsnow.com/kannada/bjp-files-5-complaints-including-that-of-election-officer-serving-food-to-dk-shivakumar/ ಕಾಂಗ್ರೆಸ್ ನಾಯಕರು ವಿಧಾನಸಭೆ ಚುನಾವಣೆಗೆ ಮೊದಲು ಮೇಕೆದಾಟು ಪಾದಯಾತ್ರೆ ಮಾಡಿದ್ದರು. ಪಾದಯಾತ್ರೆಯಲ್ಲಿ ತೂರಾಡಿದ್ದು ಯಾರು? ನಾನು ತೂರಾಡಿದ್ನಾ? ನನಗೂ…

Read More

ಬೆಂಗಳೂರು : ಡಿಸಿಎಂ ಡಿಕೆಗೆ ಚುನಾವಣೆ ಅಧಿಕಾರಿ ಊಟ ಬಡಿಸಿದ್ದಕ್ಕೆ ಸೇರಿದಂತೆ ಕಾಂಗ್ರೆಸ್ ವಿರುದ್ಧ ಚುನಾವಣಾ ಆಯೋಗಕ್ಕೆ ಒಟ್ಟು 5 ದೂರುಗಳನ್ನು ಬಿಜೆಪಿ ದೂರು ಸಲ್ಲಿಸಿದೆ. ಡಿಸಿಎಂ ಡಿಕೆ ಶಿವಕುಮಾರ್ ಗೆ ಚುನಾವಣಾ ಅಧಿಕಾರಿ ಊಟ ಬಡಿಸಿದ್ದರಿಂದ ಇದೀಗ ಚುನಾವಣೆ ಅಧಿಕಾರಿ ವಿರುದ್ಧ ಬಿಜೆಪಿ ಮುಖಂಡರು ದೂರು ನೀಡಿದ್ದಾರೆ. ಬೆಂಗಳೂರು ಗ್ರಾಮಾಂತರ ಚುನಾವಣಾ ಅಧಿಕಾರಿ ವಿರುದ್ಧ ಇದೀಗ ದೂರು ಸಲ್ಲಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಚುನಾವಣಾ ಅಧಿಕಾರಿ ಯೋಜನೆಯಾಗಿದ್ದರು ಎಂದು ಹೇಳಲಾಗುತ್ತಿದೆ. ಅಲ್ಲದೆ ಗೀತಾ ನಿರ್ಮಿಸಿರುವ ರಣಗಲ್ ಚಿತ್ರದ ಜಾಹೀರಾತು ಮೊತ್ತವನ್ನು ಅಭ್ಯರ್ಥಿಯ ಚುನಾವಣಾ ವೆಚ್ಚಕ್ಕೆ ಸೇರಿಸಬೇಕೆಂದು ಬಿಜೆಪಿ ದೂರು ನೀಡಿದೆ. ಗೀತ ಶಿವರಾಜಕುಮಾರ್ ಅವರು ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಅಲ್ಲದೆ,,ಬಿಜೆಪಿ ಪ್ರಚಾರ ವಾಹನದಲ್ಲಿದ್ದ ಸಲಹಾ ಪೆಟ್ಟಿಗೆ ಸುಟ್ಟಿದ್ದಕ್ಕೆ ಬಿಜೆಪಿ ಮತ್ತೊಂದು ದೂರು ದಾಖಲಿಸಿದೆ.ಬೆಳಗಾವಿ ಜಿಲ್ಲೆಯ ಕುಡುಚಿಯಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಅಲ್ಲದೆ ದಾವಣಗೆರೆಯಲ್ಲಿ ಕಾಂಗ್ರೆಸ್ ನಿಂದ ಅಕ್ಕಿ ಹಂಚಿಕೆ ಆರೋಪ ಮಾಡಿದ್ದು ಕಾಂಗ್ರೆಸ್ನಿಂದ ಅಕ್ಕಿ ಹಂಚುತ್ತಿರುವ…

Read More

ಬೆಂಗಳೂರು : ಲೋಕಸಭೆ ಚುನಾವಣೆಗೆ ತಮ್ಮ ಮಗನಿಗೆ ಟಿಕೆಟ್ ನೀಡಿಲ್ಲವೆಂದು ಬಂಡಾಯ ಎದ್ದಿರುವ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರು ಶಿವಮೊಗ್ಗ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಈ ವೇಳೆ ಅವರು ಮೋದಿ ಅವರ ಭಾವಚಿತ್ರ ಹಾಗೂ ಹೆಸರನ್ನು ಬಳಸಿದಂತೆ ನಿರ್ಬಂಧಿಸಿ ಇದೀಗ ಬಿಜೆಪಿಯು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ. ಚುನಾವಣಾ ವೇಳೆ ಮೋದಿ ಭಾವಚಿತ್ರ ಹೆಸರು ಬಳಕೆಗೆ ಕೆಎಸ್ ಈಶ್ವರಪ್ಪಗೆ ನಿರ್ಬಂಧ ವಿಧಿಸುವಂತೆ ಕೋರಿ ಚುನಾವಣಾ ಆಯೋಗಕ್ಕೆ ಇದೀಗ ಬಿಜೆಪಿ ದೂರು ಸಲ್ಲಿಸಿದೆ. ರಾಜ್ಯ ಬಿಜೆಪಿ ಘಟಕದ ಪ್ರಧಾನ ಕಾರ್ಯದರ್ಶಿ ಪಿ ರಾಜೀವ್ ವಿಧಾನ ಪರಿಷತ್ ಸದಸ್ಯ ಚಲವಾದಿ ನಾರಾಯಣ ಸ್ವಾಮಿ ನೇತೃತ್ವದಲ್ಲಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗಿದೆ ಎಂದು ತಿಳಿದುಬಂದಿದೆ. ಈಶ್ವರಪ್ಪ ಚುನಾವಣಾ ಪ್ರಚಾರಕ್ಕೆ ಮೋದಿ ಫೋಟೋ ಬಳಸುತ್ತಿದ್ದಾರೆ. ಮೋದಿ ಭಾವಚಿತ್ರ ಬಳಸದಂತೆ ನಿರ್ಬಂಧಿಸಲು ಕೋರಿ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ಕೆಎಸ್ ಈಶ್ವರಪ್ಪ ಹೀಗೆ ಮುಂದುವರೆದರೆ ಅವರ ವಿರುದ್ಧ ಕಾನೂನು ಕ್ರಮ ಆಗುತ್ತದೆ. ಈಶ್ವರಪ್ಪ ಅವರು ಪಕ್ಷದ…

Read More

ಬೆಂಗಳೂರು : ಧಾರವಾಡ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಫಕೀರ ದಿಂಗಾಲೇಶ್ವರ ಶ್ರೀಗಳು ಸ್ಪರ್ಧಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನಲ್ಲಿ ಕಾಂಗ್ರೆಸ್ಸಿನ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಪ್ರತಿಕ್ರಿಯೆ ನೀಡಿದ್ದು, ಶ್ರೀಗಳ ಸ್ಪರ್ಧೆ ಕುರಿತಂತೆ ಮೊದಲೇ ನಮಗೆ ಮಾಹಿತಿ ಇದ್ದರೆ ಕಾಂಗ್ರೆಸ್ ಪಕ್ಷದಿಂದ ಅವರಿಗೆ ಆ ಕ್ಷೇತ್ರದಲ್ಲಿ ಟಿಕೆಟ್ ಕೊಡುತ್ತಿದ್ದೆವು ಎಂದು ತಿಳಿಸಿದರು. https://kannadanewsnow.com/kannada/breaking-2nd-puc-exam-2-final-schedule-released-karnataka-2nd-puc-exam-2024/ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾಮೀಜಿ ಸ್ಪರ್ಧಿಸುತ್ತಾರೆ ಅನ್ನೋದು ನಮಗೆ ಗೊತ್ತಿರಲಿಲ್ಲ. ಮೊದಲೆ ಗೋತ್ತಿದ್ದರೆ ನಾವೇ ಅವರಿಗೆ ಟಿಕೆಟ್ ಕೊಡುತ್ತಿದ್ದೆವು ಎಂದು ಬೆಂಗಳೂರಿನಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಹೇಳಿಕೆ ನೀಡಿದ್ದಾರೆ ಧಾರವಾಡದಲ್ಲಿ ಹಿಟ್ಲರ್ ಆಡಳಿತ ಆಗಿಬಿಟ್ಟಿದೆ. ಸ್ವಾಮೀಜಿಗಳು ಅನ್ಯಾಯದ ವಿರುದ್ಧ ಹೋರಾಡುತ್ತಿದ್ದಾರೆ. ಸ್ವಾಮೀಜಿಗಳ ನಿರ್ಧಾರ ಒಳ್ಳೆಯ ನಿರ್ಧಾರ ಎಂದು ಸಚಿವ ವಿನಯ್ ಕುಲಕರ್ಣಿ ತಿಳಿಸಿದರು. https://kannadanewsnow.com/kannada/bengaluru-another-fire-breaks-out-at-scrap-godown-2-tractors-bike-gutted/ ನಮ್ಮ ಜಿಲ್ಲೆಯಲ್ಲಿ ಹಿಟ್ಲರ್ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ವಾಮೀಜಿಗಳು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಕ್ಕೆ ನಾನು ಅವರಿಗೆ ಧನ್ಯವಾದ ಹೇಳುತ್ತೇನೆ.ಸಮಾಜದಲ್ಲಿ ಬದಲಾವಣೆ ತರಲು ಇಂಥ ಸ್ವಾಮೀಜಿಗಳು ಬೇಕೇ ಬೇಕು.…

Read More

ಬೆಂಗಳೂರು : ಬೆಂಗಳೂರಲ್ಲಿ ದಿನದಿಂದ ದಿನಕ್ಕೆ ಅಗ್ನಿ ದುರಂತ ಪ್ರಕರಣಗಳು ಹೆಚ್ಚುತ್ತಲೆ ಇವೆ. ಎಷ್ಟೇ ಮುಂಜಾಗ್ರತ ಕ್ರಮ ವಹಿಸಿದರು ಕೂಡ ಅಗ್ನಿ ಅವಘಡಗಳು ಸಂಭವಿಸುತ್ತಲೇ ಇವೆ. ಇದೀಗ ಪರಪ್ಪನ ಅಗ್ರಹಾರದ ಬಳಿ ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಸ್ಕ್ರಾಪ್ ಗೋದಾಮಿಗೆ ಬೆಂಕಿ ತಗುಲಿ ಧಗ ಧಗ ಹೊತ್ತಿ ಉರಿದಿದೆ. ಈ ಒಂದು ಘಟನೆಯಲ್ಲಿ ಸುಮಾರು ಐದು ಎಕರೆ ಪ್ರದೇಶದಲ್ಲಿರುವ ಗೋದಾಮು ಇದಾಗಿದ್ದು, ಘಟನೆಯಲ್ಲಿ ಎರಡು ಟ್ರಾಕ್ಟರ್, ಒಂದು ಟಾಟಾ ಎಸ್ ಮತ್ತು ಬೈಕ್ ಬೆಂಕಿಗಾಹುತಿಯಾಗಿದೆ. ಅಗ್ನಿ ಅವಘಡದಿಂದ ಮುಗಿಲೆತ್ತರಕ್ಕೆ ದಟ್ಟವ್ಗೆ ಆವರಿಸಿದ್ದು, ಹೀಗಾಗಿ ಇಡೀ ಏರಿಯಾ ದುರ್ವಾಸನೆಯಿಂದ ಕೂಡಿದೆ. ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. 8 ಅಗ್ನಿ ಶಾಮಕ ಠಾಣೆ ಸಿಬ್ಬಂದಿಯಿಂದ ಕಾರ್ಯಾಚರಣೆ ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸುಮಾರು 8 ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳು ದೌಡಯಿಸಿ ಸತತವಾಗಿ 10 ಗಂಟೆಗಳ ಕಾರ್ಯಾಚರಣೆ ನಡೆಸಿದ ನಂತರ ಬೆಂಕಿ ನಿಯಂತ್ರಣಕ್ಕೆ ಬಂದಿತ್ತು.ಈ ಅಕ್ರಮ ಸ್ಕ್ರಾಪ್ ಗೋದಾಮಿನಲ್ಲಿ ಅಪಾರ ಪ್ರಮಾಣದಲ್ಲಿ ಪ್ಲಾಸ್ಟಿಕ್, ರಬ್ಬರ್, ಕೆಮಿಕಲ್…

Read More

ಬೆಂಗಳೂರು : ಏಪ್ರಿಲ್ 3 ರಂದು ಬೆಂಗಳೂರಿನ ಸುಂಕದಕಟ್ಟೆಯ ಗೋವಿಂದಪ್ಪ ಬೇಕರಿ ರಸ್ತೆಯ ಬಳಿ ವ್ಯಕ್ತಿ ಒಬ್ಬನ ಮೇಲೆ ಮಚ್ಚಿನಿಂದ ಕೊಚ್ಚಿ ಕೊಲೆಗೆ ಯತ್ನಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. https://kannadanewsnow.com/kannada/breaking-calcutta-hc-orders-cbi-probe-into-sandeshkhali-case/ ಹೌದು ಆರೋಪಿಗಳಾದ ಶ್ರೀಧರ್, ಸಿದ್ದೇಶ್, ನಿತೀಶ್ ಅಲಿಯಾಸ್ ಶಿವು ಎನ್ನುವ ಆರೋಪಿಗಳನ್ನು ಬಂಧಿಸಿದ್ದಾರೆ. ಚಂದ್ರಕಾಂತ್ ಎನ್ನುವ ವ್ಯಕ್ತಿಯ ಮೇಲೆ ಬಂಧಿತ ಆರೋಪಿಗಳು ಕೊಲೆಗೆ ಯತ್ನ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಚಂದ್ರಕಾಂತ್ ಹಾಗೂ ಶ್ರೀಧರ್ ಕಿದ್ವಾಯಿಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. ವೈಯಕ್ತಿಕ ಕಾರಣಕ್ಕೆ ಚಂದ್ರಕಾಂತ ಮೇಲೆ ಶ್ರೀಧರ್ ದ್ವೇಷ ಸಾಧಿಸುತ್ತಿದ್ದ ಎಂದು ತಿಳಿದುಬಂದಿದೆ. https://kannadanewsnow.com/kannada/chamarajanagar-a-woman-who-was-on-her-way-to-male-mahadeshwara-hills-was-attacked-by-a-wild-elephant-killing-her-on-the-spot/ ಹೀಗಾಗಿ ಶ್ರೀಧರ್ ಚಂದ್ರಕಾಂತ್ ಕೊಲೆಗೆ ಒಂದು ಲಕ್ಷ ಹಣಕ್ಕೆ ಸುಪಾರಿ ನೀಡಿದ ಎನ್ನಲಾಗಿದೆ. ಸುಪಾರಿ ಪಡೆದಿದ್ದ ನಿತೇಶ್ ಕಳ್ಳತನ ಸೇರಿ ಹಲವು ಪ್ರಕರಣದ ಆರೋಪಿಯಾಗಿದ್ದಾನೆ ಎಂದು ಹೇಳಲಾಗುತ್ತಿದ್ದು, ಏಪ್ರಿಲ್ 3ರಂದು ಚಂದ್ರಕಾಂತ್ ಕೆಲಸಕ್ಕೆ ಹೋಗುತ್ತಿದ್ದ ವೇಳೆ ಆತನ ಮೇಲೆ ಇವರಿಬ್ಬರೂ ದಾಳಿ ಮಾಡಿದ್ದರು. https://kannadanewsnow.com/kannada/pm-modi-congratulates-irelands-youngest-pm-simon-harris/ ಸುಂಕದಕಟ್ಟೆಯ ಗೋವಿಂದಪ್ಪ ಬೇಕರಿ…

Read More

ಚಾಮರಾಜನಗರ : ಯುಗಾದಿ ಹಬ್ಬದ ಪ್ರಯುಕ್ತ ಮಳೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಮಾಡುವ ಸಂದರ್ಭದಲ್ಲಿ ಮಹಿಳೆಯ ಮೇಲೆ ಏಕಾಏಕಿ ಕಾಡಾನೆ ದಾಳಿ ನಡೆಸಿದೆ. ದಾಳಿ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹುಲ್ಲೆಗಾಳ ಗ್ರಾಮದ ಲಕ್ಷ್ಮಿ(36) ಎನ್ನುವ ಮಹಿಳೆ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. https://kannadanewsnow.com/kannada/pm-modi-congratulates-irelands-youngest-pm-simon-harris/ ಪಾದಯಾತ್ರೆಯ ಮೂಲಕ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಹಾಲಹಳ್ಳ ಸಮೀಪ ಲಕ್ಷ್ಮಿ ಅವರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಪರಿಣಾಮ ಲಕ್ಷ್ಮಿ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ನಂತರ ಗಾಬರಿಗೊಂಡ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ದೂರಿನ ಮೆರೆಗೆ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಮೃತ ಶವವನ್ನು ಮಲೆ ಮಹದೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಿದ್ದಾರೆ. https://kannadanewsnow.com/kannada/pm-modis-poem-maruti-prana-pratishthana-written-41-years-ago-goes-viral/ ಯುಗಾದಿ ಹಬ್ಬದ ದಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಮಳವಳ್ಳಿ ತಾಲೂಕಿನ ಹೊನಗನಹಳ್ಳಿ ಗ್ರಾಮದಿಂದ ಸುಮಾರು 20 ಕ್ಕೂ ಹೆಚ್ಚು ಜನರು ಗೂಡ್ಸ್ ವಾಹನದಲ್ಲಿ ತೆರಳುತ್ತಿದ್ದರು.ಮಲೆಮಾದೇಶ್ವರ ಬೆಟ್ಟಕ್ಕೆ ತೆರಳುವಾಗ…

Read More

ಹಾವೇರಿ : ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಪ್ರಮುಖವಾದಂತಹ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ಮಾಡಿದೆ. ಅದರಲ್ಲಿ ಗ್ರಹಲಕ್ಷ್ಮಿ ಯೋಜನೆ ಮಹಿಳೆಯರಿಗೆ ಬಹಳ ಅನುಕೂಲವಾಗಿದೆ.ಈ ಯೋಜನೆಯಿಂದ ಬಹಳಷ್ಟು ಬಡ ಕುಟುಂಬಗಳ ಜೀವನಮಟ್ಟ ಸುಧಾರಿಸಿದೆ. ಅದೆಷ್ಟೋ ಬಡ ಮಹಿಳೆಯರಿಗೆ ಆರ್ಥಿಕವಾಗಿ ಬಹಳಷ್ಟು ಸಹಾಯಕ್ಕೆ ಬಂದಿದೆ. ಗೃಹಲಕ್ಷ್ಮೀ ಯೋಜನೆಯಿಂದ ಬಡವರ ಚಿಕ್ಕಪುಟ್ಟ ಕನಸುಗಳು ನನಸಾಗಿವೆ ಎಂಬುದಕ್ಕೆ ಇಲ್ಲೊಂದು ಘಟನೆ ಸಾಕ್ಷಿಯಾಗಿದೆ. ಹೌದು ಹಾವೇರಿ ಜಿಲ್ಲೆಯ ಶಿಂಗ್ಗಾವಿ ಪಟ್ಟಣದ ಲತಾ ಎನ್ನುವ ಮಹಿಳೆಯೊಬ್ಬರು ಪ್ರತಿತಿಂಗಳು ಬರುತ್ತಿದ್ದ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಖರ್ಚು ಮಾಡದೇ ಕೂಡಿಟ್ಟು ಯುಗಾದಿ ಹಬ್ಬದ ದಿನವೇ ಫ್ರಿಡ್ಜ್ ಖರೀದಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಮನೆಯ ಯಜಮಾನತಿ ಪ್ರತಿ ತಿಂಗಳು 2000 ರೂಪಾಯಿ ನೀಡುವ ‘ಗೃಹ ಲಕ್ಷ್ಮೀ’ ಯೋಜನೆ ಅತ್ಯಂತ ಮಹತ್ವದ್ದಾಗಿದೆ ಎಂದು ತೋರಿಸಿಕೊಟ್ಟಿದ್ದಾರೆ. ಗೃಹಲಕ್ಷ್ಮೀ ಫಲಾನುಭವಿಯಾಗಿರುವ ಲತಾ ಎಂಬ ಮಹಿಳೆ ಫ್ರಿಡ್ಜ್ ಖರೀದಿಸಿದ್ದಾರೆ. ರಾಜ್ಯ ಸರ್ಕಾರ ಗೃಹಲಕ್ಷ್ಮೀ ಜಾರಿ ಮಾಡಿದಾಗ, ಅಗತ್ಯ ದಾಖಲೆಗಳನ್ನು ನೀಡಿ ಯೋಜನೆಯ ಫಲಾನುಭವಿಯಾಗಿದ್ದ ಮಹಿಳೆ. ಯೋಜನೆ ಜಾರಿಯಾದಾಗಿನಿಂದಲೂ ಪ್ರತಿ…

Read More

ಬೆಂಗಳೂರು : ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಭಾವನಿಂದ ಭಾಮೈದನ ಹತ್ಯೆಗೆ ಈಡಗಿರುವ ಘಟನೆ ಬೆಂಗಳೂರಿನ ವೆಂಕಟೇಶಪುರದಲ್ಲಿ ನಡೆದಿದೆ.ಹೌದು ಕಿರಣ್ ಕುಮಾರ್ (32) ಹತ್ಯೆಗೆ ಈಡಾದ ವ್ಯಕ್ತಿಯಾಗಿದ್ದಾನೆ. ಚಾಕುವಿನಿಂದ ಇರಿದು ಭಾಮೈದನನ್ನು ಭಾವ ಲಕ್ಷ್ಮಣ ಎನ್ನುವವರು ಭೀಕರವಾಗಿ ಹತ್ಯೆಗೈದಿದ್ದಾರೆ. ಆರೋಪಿ ಲಕ್ಷ್ಮಣ ಮತ್ತು ಪತ್ನಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಎಂದು ಹೇಳಲಾಗುತ್ತಿದೆ. ಇದೇ ವಿಚಾರಕ್ಕೆ ಇಂದು ಭಾವ ಹಾಗೂ ಬಾಮೈದನ ನಡುವೆ ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿ ಕಿರಣ್ ಕುಮಾರ್ ಬೆನ್ನಿಗೆ ಲಕ್ಷ್ಮಣ ಚಾಕು ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಕಿರಣ್ ನನ್ನು ಸ್ಥಳೀಯ ಅಂಬೇಡ್ಕರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಕಿರಣ್ ಕುಮಾರ್ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ಕೆ.ಜಿ ಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

Read More