Subscribe to Updates
Get the latest creative news from FooBar about art, design and business.
Author: kannadanewsnow05
ಕಲಬುರ್ಗಿ : ಕಲ್ಬುರ್ಗಿ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು ಕಲ್ಬುರ್ಗಿ ಸುತ್ತಮುತ್ತಲಿನ ನದಿಗಳು ಸಹ ಭಾರಿ ಪ್ರಮಾಣದಲ್ಲಿ ತುಂಬಿ ಹರಿಯುತ್ತಿವೆ ಇದೀಗ ಕಲ್ಬುರ್ಗಿ ಜಿಲ್ಲೆಯಲ್ಲಿ ಕಾಗಿನಾ ನದಿ ತುಂಬಿ ಹರಿಯುತ್ತಿದ್ದರಿಂದ ಜಿಲ್ಲೆಯ ಮಳಕೇಡದಉತ್ತರಾದಿ ಮಠದಲ್ಲಿರುವ ಜಯತೀರ್ಥರ ಮೂಲ ಬೃಂದಾವನ ಸಂಪೂರ್ಣವಾಗಿ ಜಲಾವೃತವಾಗಿದೆ. ಹೌದು ಕಲ್ಬುರ್ಗಿಯಲ್ಲಿ ಭಾರಿ ಪ್ರವಾಹಕ್ಕೆ ಮಳಖೇಡದ ಉತ್ತರಾದಿ ಮಠದ ಜಯತೀರ್ಥರ ಮೂಲ ಬೃಂದಾವನ ಜಲಾವೃತವಾಗಿದೆ. ಕಾಗಿನಾ ನದಿ ತಡದಲ್ಲಿರುವ ಈ ಒಂದು ಉತ್ತರಾದಿ ಮಠಕ್ಕೆ ಮಠದ ಆವರಣದಲ್ಲಿ ಸಂಪೂರ್ಣವಾಗಿ ನದೀ ನೀರು ತುಂಬಿ ಹರಿಯುತ್ತಿದೆ ಈ ಹಿನ್ನಲೆಯಲ್ಲಿ ಭಕ್ತರಿಗೆ ಪ್ರವೇಶ ನಿರ್ಭಂಧಿಸಲಾಗಿದೆ.
ಕಲಬುರ್ಗಿ : ಕಲ್ಬುರ್ಗಿ ವಿಜಯಪುರ, ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆ ಸುರಿಯುತ್ತಿದ್ದು, ಈ ಹಿನ್ನಲೆಯಲ್ಲಿ ಕಲಬುರ್ಗಿಯಲ್ಲಿ ನದಿ ದಡದಲ್ಲಿರುವ ಗ್ರಾಮಗಳು ಸಂಪೂರ್ಣವಾಗಿ ಜಲಾವೃತವಾಗಿದ್ದು, ನದಿ ದಡದಲ್ಲಿರುವ ಹಲವು ಮನೆಗಳು ಸಂಪೂರ್ಣವಾಗಿ ಜಲಾವೃತವಾಗಿವೆ. ತಕ್ಷಣ ಸಚಿವ ಕೃಷ್ಣ ಬೈರೇಗೌಡ ಜಿಲ್ಲಾಧಿಕಾರಿಗಳಿಗೆ ಹಾಗೂ ಸಿಇಒಗಳಿಗೆ ಘಟನಾ ಸ್ಥಳಕ್ಕೆ ತೆರಳಿ, ಪರಿಶೀಲನೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಕಲ್ಬುರ್ಗಿ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಭೀಮ ನದಿ ತೀರದಲ್ಲಿ ಹಾಗೂ ಬೆಣ್ಣೆತೋರಾದಲ್ಲಿ ಪ್ರವಾಹದ ಪರಿಸ್ಥಿತಿ ಉದ್ಭವಿಸಿದೆ. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಸಿಇಒ ಗಳು ಪ್ರವಾಹ ಪೀಡಿತ ಪ್ರದೇಶಗಳಿಗೆ ಖುದ್ದು ಭೇಟಿ ನೀಡಬೇಕು, ಸಂತ್ರಸ್ಥರಿಗೆ ಆಹಾರ ಕೇಂದ್ರಗಳು, ಜಾನವಾರುಗಳಿಗೆ ಅಗತ್ಯ ಮೇವಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಸೂಚಿಸಲಾಗಿದೆ. ಶೀಘ್ರದಲ್ಲೇ ನಾನೂ ಸಹ ಸ್ಥಳಕ್ಕೆ ಭೇಟಿ ನೀಡಿ ತುರ್ತು ಕ್ರಮಗಳ ಬಗ್ಗೆ ಪರಿಶೀಲಿಸಲಿದ್ದೇನೆ ಎಂದು ತಿಳಿಸಿದ್ದಾರೆ.
ಕಲಬುರ್ಗಿ : ಕಲ್ಬುರ್ಗಿ ವಿಜಯಪುರ, ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆ ಸುರಿಯುತ್ತಿದ್ದು, ಈ ಹಿನ್ನಲೆಯಲ್ಲಿ ಕಲಬುರ್ಗಿಯಲ್ಲಿ ನದಿ ದಡದಲ್ಲಿರುವ ಗ್ರಾಮಗಳು ಸಂಪೂರ್ಣವಾಗಿ ಜಲಾವೃತವಾಗಿದ್ದು, ಇದೀಗ ಕಲ್ಬುರ್ಗಿಯಲ್ಲಿ ಪ್ರವಾಹದ ನೀರು ಕೊಟ್ಟಿಗೆಗೆ ನುಗ್ಗಿ ಸುಮಾರು 42ಕ್ಕೂ ಹೆಚ್ಚು ಜಾನುವಾರುಗಳು ಸಾವನ್ನಪ್ಪಿರುವ ಘೋರ ದುರಂತ ಜಿಲ್ಲೆಯ ಚಿಂಚೋಳಿ ತಾಲೂಕಿನ ಜಟ್ಟೂರ್ ಗ್ರಾಮದಲ್ಲಿ ನಡೆದಿದೆ. ಹೌದು ಹಳ್ಳದ ನೀರು ಕೊಟ್ಟಿಗೆಗೆ ನುಗ್ಗಿ ಸುಮಾರು 42ಕ್ಕೂ ಹೆಚ್ಚು ಜಾನುವಾರುಗಳು ಸಾವನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಭಾರಿ ಮಳೆಯಿಂದಾಗಿ ಹಳ್ಳದ ನೀರು ಕೊಟ್ಟಿಗೆಗೆ ನೀರಿಗೆ ನುಗ್ಗಿದೆ. ಚಿಂಚೋಳಿ ತಾಲೂಕಿನ ಜಟ್ಟೂರ್ ಗ್ರಾಮದಲ್ಲಿ ನಿನ್ನೆ ತಡರಾತ್ರಿ ಕೊಟ್ಟಿಗೆ ಭಾರಿ ಪ್ರಮಾಣದಲ್ಲಿ ನೀರು ನುಗ್ಗಿ ಸುಮಾರು 42ಕ್ಕೂ ಹೆಚ್ಚು ಜಾನುವಾರುಗಳು ಸಾವನ್ನಪ್ಪಿವೆ. ಏಕಾಏಕಿ ಪ್ರವಾಹದ ರೀತಿಯಲ್ಲಿ ನೀರು ನುಗ್ಗಿದ್ದರಿಂದ ಜಾನುವಾರುಗಳನ್ನ ರಕ್ಷಣೆ ಮಾಡಲು ಸಾಧ್ಯವಾಗಲಿಲ್ಲ. 42ಕ್ಕೂ ಹೆಚ್ಚು ಹಸುಗಳು ಎತ್ತುಗಳು ಸಾವನ್ನಪ್ಪಿರುವ ಹಿನ್ನೆಲೆ ರೈತ ಕಂಗಾಲಾಗಿದ್ದಾನೆ.
ನವದೆಹಲಿ : ಆರ್ಎಸ್ಎಸ್ ಸ್ವಯಂಸೇವಕರ ಪ್ರತಿಯೊಂದು ಕೆಲಸ, ಪ್ರತಿಯೊಂದು ಪ್ರಯತ್ನವೂ ದೇಶ ಮೊದಲು ಎಂಬ ಭಾವನೆಯನ್ನು ಸದಾಕಾಲ ಅತ್ಯುತ್ತಮವಾಗಿರಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ “ಮನ್ ಕಿ ಬಾತ್” ನ 126 ನೇ ಆವೃತ್ತಿಯಲ್ಲಿ ರಾಷ್ಟ್ರಕ್ಕೆ ಸ್ಪೂರ್ತಿದಾಯಕ ಸಂದೇಶವನ್ನು ನೀಡಿದರು. ಈ ಬಾರಿ ಅವರು ಗಾಂಧಿ ಜಯಂತಿ, ಭಗತ್ ಸಿಂಗ್, ಲತಾ ಮಂಗೇಶ್ಕರ್ ಮತ್ತು ಆರ್ಎಸ್ಎಸ್ನ ಶತಮಾನೋತ್ಸವವನ್ನು ನೆನಪಿಸಿಕೊಂಡರು. ಸ್ವಾವಲಂಬನೆ ಮತ್ತು ಸ್ಥಳೀಯ ಉತ್ಪನ್ನಗಳ ಮಹತ್ವವನ್ನು ಒತ್ತಿ ಹೇಳಿದ ಪ್ರಧಾನಿ ಮೋದಿ, ಹಬ್ಬದ ಸಮಯದಲ್ಲಿ ಸ್ಥಳೀಯ ಉತ್ಪನ್ನಗಳಿಗೆ ಆದ್ಯತೆ ನೀಡುವುದು ಸಂಪ್ರದಾಯಗಳನ್ನು ಬಲಪಡಿಸುವುದಲ್ಲದೆ ಸಣ್ಣ ಮತ್ತು ಅತಿ ಸಣ್ಣ ಕೈಗಾರಿಕೆಗಳಿಗೂ ಪ್ರಯೋಜನವನ್ನು ನೀಡುತ್ತದೆ ಎಂದು ಹೇಳಿದರು. ಛಠ್ ಹಬ್ಬವನ್ನು ಯುನೆಸ್ಕೋದ ಅಮೂರ್ತ ಸಾಂಸ್ಕೃತಿಕ ಪರಂಪರೆಯಲ್ಲಿ ಸೇರಿಸುವ ಉಪಕ್ರಮ, ದೇಶದ ಕರಕುಶಲ ಮತ್ತು ಕೈಮಗ್ಗ ಉದ್ಯಮಗಳಲ್ಲಿನ ನಾವೀನ್ಯತೆಗಳು ಮತ್ತು ಯುವಕರಿಗೆ ಭಗತ್ ಸಿಂಗ್ರಂತಹ ವೀರರ ಸ್ಫೂರ್ತಿಯನ್ನು ಅವರು ಹಂಚಿಕೊಂಡರು. ದೀಪಾವಳಿಗೆ ಮುಂಚಿತವಾಗಿ, ಪ್ರಧಾನಿ ಪ್ರತಿಯೊಬ್ಬ ನಾಗರಿಕರೂ…
ಬೆಂಗಳೂರು : ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಕಿಡಿಗೇಡಿಗಳು ಗಣೇಶ ಮೆರವಣಿಗೆಯ ಮೇಲೆ ಕಲ್ಲೆಸೆತ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಮದ್ದೂರಿನಲ್ಲಿ ಭಾರಿ ಪ್ರತಿಭಟನೆ ನಡೆಸಲಾಗಿತ್ತು. ಹಿಂದೂ ಕಾರ್ಯಕರ್ತರು ಬೃಹತ್ ಪ್ರಮಾಣದಲ್ಲಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪೊಲೀಸರು ಕಾರ್ಯಕರ್ತ ಮೇಲೆ ಲಾಠಿ ಚಾರ್ಜ್ ಸಹ ನಡೆಸಿದ್ದರು. ಪ್ರಕರಣ ಗಂಭೀರ ಪಡೆದುಕೊಳ್ಳುತ್ತಿದ್ದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್ ಅಶೋಕ್ ಸೇರಿದಂತೆ ಎಲ್ಲಾ ಬಿಜೆಪಿ ನಾಯಕರು ಮಂಡ್ಯ ಜಿಲ್ಲೆಯ ಮದ್ದೂರಿಗೆ ಭೇಟಿ ನೀಡಿ ಬೃಹತ್ ಶೋಭಾ ಯಾತ್ರೆಯಲ್ಲಿ ಪಾಲ್ಗೊಂಡರು. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಮದ್ದೂರಿನಲ್ಲಿ ನಡೆದಂತಹ ಗಣೇಶ ಮೆಸವಣಿಗೆ ವೇಳೆ ಕಲ್ಲೇಸೆತ ಹಾಗೂ ಲಾಠಿ ಚಾರ್ಜ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸತ್ಯಶೋಧನಾ ಸಮಿತಿ ಬಿ.ವೈ ವಿಜಯೇಂದ್ರ ಗೆ ವರದಿ ಸಲ್ಲಿಸಿದೆ. ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ವರದಿ ಸಲ್ಲಿಸಲಾಯಿತು. ರಾಜ್ಯ ಬಿಜೆಪಿ ಮುಖ್ಯ ವಕ್ತಾರ ಅಶ್ವಥ್ ನಾರಾಯಣ ನೇತೃತ್ವದ ಈ ಒಂದು ಸತ್ಯಶೋಧನಾ ಸಮಿತಿಯಲ್ಲಿ…
ಬೆಂಗಳೂರು : ಸೆಪ್ಟೆಂಬರ್ 29ರಿಂದ ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಆಗಿರುವ ಬಿಗ್ ಬಾಸ್ ಸೀಸನ್ 12 ಶುರುವಾಗಲಿದೆ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಇವರೇ ಈ ಬಾರಿಯ ಬಿಗ್ ಬಾಸ್ ಸ್ಪರ್ಧಿಗಳು ಅಂತ ಹೆಸರು ಫೋಟೋ ವೈರಲ್ ಆಗಿವೆ. ಆದರೆ ಇದರ ಮಧ್ಯ ಕಿಡಿಗಿಡಿ ಒಬ್ಬ ಬಿಗ್ ಬಾಸ್ ಗೆ ನನ್ನನ್ನು ಕರೆಯಲಿಲ್ಲ ಅಂದರೆ ಬಾಂಬ್ ಇಡುತ್ತೇನೆ ಎಂದು ಹೇಳಿಕೆ ನೀಡಿರುವ ವಿಡಿಯೋ ಒಂದು ವೈರಲ್ ಆಗಿದೆ. ಹೌದು ಇನ್ಸ್ಟಾಗ್ರಾಮ್ ಅಲ್ಲಿ ಯುವಕನಿಂದ ಬೆದರಿಕೆ ವಿಡಿಯೋ ವೈರಲ್ ಆಗಿದ್ದು ಬಿಗ್ ಬಾಸ್ ಗೆ ನನ್ನ ಕರೆದಿಲ್ಲ ಆದರೆ ನಾನು ಬಾಂಬ್ ಇಡುತ್ತೇನೆ ಮಮ್ಮಿ ಅಶೋಕ್ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ಒಂದು ವಿಡಿಯೋ ಪೋಸ್ಟ್ ಮಾಡಿದ್ದು ವಿಡಿಯೋ ಬಗ್ಗೆ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಪೊಲೀಸರು ಸ್ವಯಂ ಪ್ರೇರಿತವಾಗಿ NCR ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಶೋಕ್ ಎಂಬ ಯುವಕನನ್ನು ಕರೆದು ಪೊಲೀಸರು ಎಚ್ಚರಿಕೆ ಕೊಟ್ಟು ಕಳುಹಿಸಿದ್ದಾರೆ. ಫಾಲೋವರ್ಸ್ ಹೆಚ್ಚಿಸಿಕೊಳ್ಳಲು ಈ ರೀತಿ…
ದಕ್ಷಿಣಕನ್ನಡ : ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಬಿಜೆಪಿ ಮುಖಂಡನ ಪುತ್ರ ಕೃಷ್ಣ ಜೆ. ರಾವ್ ಯುವತಿಗೆ ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ ಬೆಳೆಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸ್ಪೋಟಕ ರಹಸ್ಯವೊಂದು ಬಯಲಾಗಿದ್ದು, ಡಿಎನ್ಎ ಪರೀಕ್ಷೆಯಲ್ಲಿ ಆತನೇ ಮಗುವಿನ ತಂದೆ ಎಂದು ದೃಢಪಟ್ಟಿದೆ. ಹೌದು ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಪುತ್ರ ಕೃಷ್ಣ ಜೆ.ರಾವ್ ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ್ದ ಪ್ರಕರಣ ಈಗ ಮಹತ್ವದ ಘಟ್ಟ ತಲುಪಿದೆ. ಯುವತಿಗೆ ಜನಿಸಿದ್ದ ಮಗುವಿನ ತಂದೆ ಆರೋಪಿ ಕೃಷ್ಣ ಜೆ.ರಾವ್ ಎಂಬುದು ಡಿಎನ್ಎ ಪರೀಕ್ಷೆಯಿಂದ ದೃಢಪಟ್ಟಿರುವುದಾಗಿ ಯುವತಿಯ ಕುಟುಂಬದವರು ಹಾಗೂ ವಿಶ್ವಕರ್ಮ ಮಹಾಸಭಾ ಅಧ್ಯಕ್ಷ ಕೆಪಿ ನಂಜುಂಡಿ ತಿಳಿಸಿದ್ದಾರೆ. ಆರೋಪಿ ಕೃಷ್ಣ ಜೆ ರಾವ್ ಹಾಗೂ ಸಂತ್ರಸ್ತೆ ಶಾಲಾ ದಿನಗಳಿಂದಲೂ ಪರಿಚಿತರು ಎನ್ನಲಾಗಿದೆ. ಮದುವೆಯಾಗುವ ಭರವಸೆ ನೀಡಿ ಆರೋಪಿಯು ಯುವತಿ ಜತೆ ದೈಹಿಕ ಸಂಪರ್ಕ ಬೆಳೆಸಿದ್ದ. ಪರಿಣಾಮವಾಗಿ ಆಕೆ ಗರ್ಭವತಿಯಾಗಿದ್ದಳು. ನಂತರ ಕುಟುಂಬದವರು ಮಾತುಕತೆ ನಡೆಸಿ ಮದುವೆ ಮಾಡುವ ಭರವಸೆ ನೀಡಿದ್ದರು.…
ಉಡುಪಿ : ರಾಜ್ಯದಲ್ಲಿ ಮತ್ತೊಂದು ಘೋರವಾದ ಘಟನೆ ನಡೆದಿದ್ದು, ಉಡುಪಿ ತಾಲೂಕಿನ ಕೊಡವೂರು ಬಳಿ ಹಾಡಹಗಲೇ ಮನೆಗೆ ನುಗ್ಗಿ, ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ನನ್ನು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಹೌದು ಹಾಡಹಗಲೇ ಮನೆಗೆ ನುಗ್ಗಿ ರೌಡಿ ಶೀಟರ್ ಸೌಫುದ್ದೀನ್ ನನ್ನ ಭೀಕರವಾಗಿ ಹತ್ಯೆ ಗೈಯ್ಯಲಾಗಿದೆ. ಕೊಲೆಯಾದ ಸೌಫುದ್ದೀನ್ ಖಾಸಗಿ ಬಸ್ ಮಾಲೀಕನಾಗಿದ್ದ ಮಣಿಪಾಲದ ನಿವಾಸಿಯಾಗಿ ಅವನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದು ಪರಾರಿಯಾಗಿದ್ದಾರೆ.
ನವದೆಹಲಿ : ರಾಜ್ಯದ ಜನತೆಗೆ ಕೇಂದ್ರ ಸರ್ಕಾರ ಇದೀಗ ಮತ್ತೊಂದು ಸಿಹಿ ಸುದ್ದಿಯೊಂದನ್ನು ನೀಡಿದ್ದು, ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ಸೂಪರ್ಫಾಸ್ಟ್ ರೈಲಿಗೆ ಕೇಂದ್ರ ರೈಲ್ವೆ ಸಚಿವಾಲಯ ಅನುಮೋದನೆ ನೀಡಿದೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಕರ್ನಾಟಕದ ಜನರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಅದೇನೆಂದರೆ ಬೆಂಗಳೂರು ಟು ಮುಂಬೈಗೆ ಸೂಪರ್ ಫಾಸ್ಟ್ ರೈಲು ಘೋಷಣೆ ಮಾಡಿದ್ದಾರೆ. ಈ ವಿಚಾರವಾಗಿ ಮಾತನಾಡಿರುವ ಸಚಿವ ಅಶ್ವಿನಿ ವೈಷ್ಣವ್, ಶೀಘ್ರದಲ್ಲೇ ನಾವು ಬೆಂಗಳೂರು ಟು ಮುಂಬೈ ನಡುವೆ ಸೂಪರ್ಫಾಸ್ಟ್ ರೈಲು ಪ್ರಾರಂಭಿಸುತ್ತೇವೆ. ಎರಡೂ ನಗರಗಳು ಪ್ರಮುಖ ಆರ್ಥಿಕ ಕೇಂದ್ರಗಳಾಗಿವೆ. ಹಾಗಾಗಿ ಇದು ಪ್ರಮುಖ ಯೋಜನೆ ಆಗಿದೆ ಎಂದು ಹೇಳಿದರು. ಇನ್ನು ಸಂಸದ ತೇಜಸ್ವಿ ಸೂರ್ಯ ಕೂಡ ಈ ವಿಚಾರವಾಗಿ ಮಾತನಾಡಿದ್ದು, ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ಸೂಪರ್ಫಾಸ್ಟ್ ರೈಲಿಗೆ ಕೇಂದ್ರ ರೈಲ್ವೆ ಸಚಿವಾಲಯ ಅನುಮೋದನೆ ನೀಡಿದೆ. ಆ ಮೂಲಕ ಎರಡೂ ನಗರಗಳ ಜನರ 30 ವರ್ಷಗಳ ಬೇಡಿಕೆ ಈಡೇರಿದೆ ಎಂದಿದ್ದಾರೆ.…
ಬೆಂಗಳೂರು : ಧರ್ಮಸ್ಥಳ ಬುರುಡೆ ಗ್ಯಾಂಗ್ ಷಡ್ಯಂತ್ರದ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬುರುಡೆಯನ್ನ ದೆಹಲಿಗೆ ಎತ್ತಿಕೊಂಡು ಹೋಗಿದ್ದೂ ಗೊತ್ತು, ಸುಪ್ರೀಂ ಕೋರ್ಟ್ಗೆ ಹೋಗಿದ್ದೂ ಗೊತ್ತು ಎಂದು ಬಾಂಬ್ ಸಿಡಿಸಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ ಅವರು, ವಾಸ್ತವಾಂಶ ಜನರಿಗೆ ತಿಳಿಸಬೇಕು ಅನ್ನೋದು ನಮ್ಮ ಆಸೆ ಎಂದು ಅವರು ತಿಳಿಸಿದರು. ರಾಜಕೀಯ ಯಾರೂ ಏನ್ ಬೇಕಾದರೂ ಮಾತಾಡಬಹುದು. ನಾನು ಮಾತಾಡಿದ್ರೆ ಸರ್ಕಾರದ ಹೇಳಿಕೆ ಆಗುತ್ತೆ. ಅಂತಿಮ ವರದಿ ಬರಲಿ, ಮಾತಾಡ್ತೀನಿ. ಹೋಮ್ ಮಿನಿಸ್ಟರ್, ಸಿಎಂ ಅಧಿಕೃತ ಸ್ಟೇಟ್ಮೆಂಟ್ ಮಾಡ್ತಾರೆ. ಬುರುಡೆ ಡೆಲ್ಲಿಗೆ ಎತ್ತಿಕೊಂಡು ಹೋಗಿದ್ದು ಗೊತ್ತೂ, ನಮಗೆ ಆ ಮಾಹಿತಿ ಇದೆ. ಸುಪ್ರೀಂ ಕೋರ್ಟ್ಗೆ ಹೋಗಿದ್ದೂ ಗೊತ್ತು. ಪಿಐಎಲ್ ಹಾಕಿದ್ದು ಗೊತ್ತು, ಅಲ್ಲಿ ರಿಜೆಕ್ಟ್ ಆಗಿದ್ದು ಗೊತ್ತು. ಆದ್ರೆ ಪೊಲೀಸ್ ಇಲಾಖೆ ಅವರು ತನಿಖೆ ಮಾಡ್ತಿದ್ದಾರೆ, ವರದಿ ಕೊಡ್ತಾರೆ ಎಂದು ತಿಳಿಸಿದರು. ಇನ್ನು ದಕ್ಷಿಣ ಕನ್ನಡ ಎಸ್ಪಿಗೆ ದೂರು ನೀಡುವುದಕ್ಕೆ ಮುನ್ನವೇ ಚಿನ್ನಯ್ಯನ ಮೂಲಕ ಬುರುಡೆ ಗ್ಯಾಂಗ್ ಸುಪ್ರೀಂ ಕೋರ್ಟ್ಗೆ…