Subscribe to Updates
Get the latest creative news from FooBar about art, design and business.
Author: kannadanewsnow05
ಬಾಗಲಕೋಟೆ : ಪ್ರತಿ ವರ್ಷ ಬೇಸಿಗೆ ಆರಂಭವಾದರೆ ಸಾಕು, ಲೋಡ್ ವೆಡ್ಡಿಂಗ್ ನಿಂದ ಜನರು ಹೈರಾಣಾಗುತಾರೆ. ಒಂದು ಕಡೆ ವಿಪರೀತ ಸುಡುವ ಬಿಸಿಲು ಆದರೆ ಇನ್ನೊಂದು ಕಡೆ ಲೋಡ್ ಶೆಡ್ಡಿಂಗ್ ನಿಂದ ಜನರು ವಿದ್ಯುತ್ ಇಲ್ಲದೆ ಸೆಕೆಯಿಂದ ಬೇಸತ್ತು ಹೋಗುತ್ತಾರೆ. ಆದರೆ ಈ ಬಾರಿ ರಾಜ್ಯದ ಜನತೆಗೆ ಸಿಹಿ ಸುದ್ದಿ ಒಂದು ಇದ್ದು, ಈ ಬಾರಿ ಬೇಸಿಗೆಯಲ್ಲಿ ಯಾವುದೇ ರೀತಿಯ ಲೋಡ್ ಶೇಡ್ಡಿಂಗ್ ಮಾಡಲ್ಲ ಎಂದು ಇಂಧನ ಸಚಿವ ಕೆಜೆ ಜಾರ್ಜ್ ತಿಳಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಬಾರಿ ಬೇಸಿಗೆ ಸಂದರ್ಭದಲ್ಲಿ ಲೋಡ್ ಶೆಡ್ಡಿಂಗ್ ಇರುವುದಿಲ್ಲ. ರಾಜ್ಯದಲ್ಲಿ ಬರಗಾಲ ಇದ್ದಾಗಲೇ ಲೋಡ್ ಶೆಡ್ಡಿಂಗ್ ಮಾಡಿಲ್ಲ. ಹೀಗಾಗಿ ಈ ವರ್ಷ ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಇರುವುದಿಲ್ಲ ಎಂದು ತಿಳಿಸಿದರು. ಒಂದು ವೇಳೆ ವಿದ್ಯುತ್ ಕೊರತೆ ಉಂಟಾದರೆ ಬೇರೆ ಕಡೆಯಿಂದ ವಿದ್ಯುತ್ ಖರೀದಿಸುತ್ತೇವೆ.ಈ ವರ್ಷವೂ ಬೇಡಿಗೆ ಜಾಸ್ತಿಯಾಗಿದೆ. ಈಗ 16 ರಿಂದ 17 ಸಾವಿರ ಮೆಗಾ ವೇಟ್ ಬೇಡಿಕೆ ಬರ್ತಾ…
ಮಂಗಳೂರು : ಮಂಗಳೂರು ಕೋಟೆಕಾರ್ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಇದೀಗ ಸ್ಥಳ ಮಹಜರು ವೇಳೆ ದರೋಡೆಕೋರ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರು ಆತನ ಮೇಲೆ ಫೈರಿಂಗ್ ಮಾಡಿರುವ ಘಟನೆ ನಡೆದಿದೆ. ಹೌದು ಮಂಗಳೂರು ಬ್ಯಾಂಕ್ ನಲ್ಲಿ ಚಿನ್ನಾಭರಣ ನಗದು ದರೋಡೆ ಕೇಸ್ ಗೆ ಸಂಬಂಧಪಟ್ಟಂತೆ ಬ್ಯಾಂಕ್ ದರೋಡೆಕೋರನ ಮೇಲೆ ಪೊಲೀಸರಿಂದ ಗುಂಡಿನ ದಾಳಿ ನಡೆದಿದೆ. ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಹಿನ್ನೆಲೆಯಲ್ಲಿ ಇದೀಗ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಆರೋಪಿ ಮುಂಬೈ ಕಣ್ಣನ್ ಮಣಿ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಪೊಲೀಸರ ಮೇಲೆ ಹಲ್ಲೆ ನಡೆಸಿ ಮುಂಬೈ ಕಣ್ಣನ್ ಮಣಿ ಪರಾರಿ ಆಗಲು ಯತ್ನಿಸಿದ್ದಾನೆ. ಈ ವೇಳೆ ಮಂಗಳೂರಿನ ಉಳ್ಳಾಲದ ಬಳಿ ಈ ಒಂದು ಗೂಡಿನ ದಾಳಿ ನಡೆದಿದೆ. ಆರೋಪಿಗಳು ಅರೆಸ್ಟ್ ಮಂಗಳೂರು ಕೋಟೆಕಾರ್ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ಮಧುರೈ…
ಬೆಳಗಾವಿ : ಬಿಜೆಪಿ ಆರ್ ಎಸ್ ಎಸ್ ನ ಕೈಗೊಂಬೆ ಆಗಿ ಕೆಲಸ ಮಾಡುತ್ತಿದೆ. ಇವರ ಸಿದ್ಧಾಂತ ಒಡಕು ಮೂಡಿಸುವುದೇ ಆಗಿದೆ. ಬಾಪೂಜಿ ಆರ್ಎಸ್ಎಸ್ ಸಿದ್ಧಾಂತ ವಿರೋಧಿಸುತ್ತಿದ್ದರು. ಅಲ್ಲದೇ ಅಂಬೇಡ್ಕರ್ ಸಂವಿಧಾನವನ್ನು ಕೂಡ ಬಿಜೆಪಿ RSS ವಿರೋಧಿಸುತ್ತಿದ್ದರು. ಬಿಜೆಪಿ ಆರ್ ಎಸ್ ಎಸ್ ವಿರುದ್ಧ ಹೋರಾಟ ಮಾಡಬೇಕು. ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಈ ಒಂದು ಕರ್ತವ್ಯ ಇದೆ. ಎಂದು ಸಿಎಂ ಸಿದ್ದರಾಮಯ್ಯ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಗಾಂಧಿ ಭಾರತ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಬಿಜೆಪಿ ಆರ್ ಎಸ್ ಎಸ್ ನ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ.ದೇಶದಲ್ಲಿ ಒಡಕು ಮೂಡಿಸುವುದೇ ಬಿಜೆಪಿ ಮತ್ತು ಆರ್ ಎಸ್ ಎಸ್ ಸಿದ್ದಾಂತವಾಗಿದೆ. ಹಾಗಾಗಿ ಇಂತವರ ವಿರುದ್ಧ ಹೋರಾಟ ಮಾಡಬೇಕಾದ ಕರ್ತವ್ಯ ಪ್ರತಿಯೊಬ್ಬ ಕಾರ್ಯಕರ್ತನ ಮೇಲಿದೆ ಎಂದು ತಿಳಿಸಿದರು. ನಮ್ಮ ಎಲ್ಲಾ ಕಾರ್ಯಕರ್ತರ ಮುಂದೆ ಹಲವಾರು ಸವಾಲುಗಳಿವೆ. ಭಾರತದ ಬಹುತ್ವದ ದೇಶ ಇಲ್ಲಿ ಅನೇಕ…
ಬೆಂಗಳೂರು : ಬೆಂಗಳೂರಿನ ಬನ್ನೇರುಘಟ್ಟ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಹೌದು ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮನೆಯ ಮೇಲೆ ದಾಳಿಸಿದ ಪೊಲೀಸರು ಸುಮಾರು 10 ಲಕ್ಷ ಮೌಲ್ಯದ 9 ಕೆಜಿಗೂ ಅಧಿಕ ಗಾಂಜಾ ಜಪ್ತಿ ಮಾಡಿದ್ದು, ಅಲ್ಲದೆ ಓರ್ವ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ ಬಂಧಿತ ಆರೋಪಿಯನ್ನು ರುಕ್ಸನ ಎಂದು ತಿಳಿದುಬಂದಿದ್ದು, ಗಾಂಜಾ ಮಾರುತಿದ್ದ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ಮಾಡಿದ್ದಾರೆ. ಆರೋಪಿ ರುಕ್ಸಾನ ಬಳಿ 10 ಲಕ್ಷ ಮೌಲ್ಯದ 9 ಕೆಜಿ 850 ಗ್ರಾಮ ಗಾಂಜಾವನ್ನು ಇದೆ ವೇಳೆ ಜಪ್ತಿ ಮಾಡಿಕೊಂಡಿದ್ದಾರೆ. ಬಿಲ್ದಳಹಳ್ಳಿಯ ರುಕ್ಸನಳನ್ನು ಅರೆಸ್ಟ್ ಮಾಡಿದ್ದು, ಉಳಿದ ಮೂವರು ಸ್ಥಳದಿಂದ ಪರಾರಿಯಾಗಿದ್ದಾರೆ.
ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಬೆಳಗಾವಿಯ ಬೈಲಹೊಂಗಲ ತಾಲೂಕಿನ ಬಳಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕಾರು ಅಪಘಾತವಾಗಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಬಿಜೆಪಿ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಕಾರಿನಲ್ಲಿ ಬೃಹತ್ ಮೊತ್ತದ ಹಣ ಸಾಗಿಸುತ್ತಿದ್ದರು ಹಾಗಾಗಿ ಒಬ್ಬರೇ ಪ್ರಯಾಣ ಮಾಡಿದ್ದಾರೆ ಎಂದು ಸ್ಪೋಟಕ ಆರೋಪ ಮಾಡಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಪಘಾತದ ವೇಳೆ ಮೊದಲು ನಾಯಿ ತಪ್ಪಿಸಲು ಅಪಘಾತ ಅಂದ್ರು. ನಂತರ ಹಿಟ್ & ರನ್ ಅಂದ್ರು, ಡೈವರ್ ನಿದ್ದೆಗೆ ಜಾರಿದ್ರು ಅನ್ನೋದು ಸತ್ಯವಾ? ಎಸ್ಕಾರ್ಟ್ ಇಲ್ಲದೇ ಪ್ರಯಾಣ ಮಾಡಿದ್ದು ಯಾಕೆ? ಒಬ್ಬರೇ ಪ್ರಯಾಣ ಮಾಡಿದ್ದರ ಗುಟ್ಟೇನೂ? ಸಚಿವರ ಕಾರಿನಲ್ಲಿ ಹಣ ಸಾಗಿಸುತ್ತಿದ್ದರು. ದೊಡ್ಡ ಮೊತ್ತದ ಹಣ ಆ ಕಾರಿನಲ್ಲಿ ಸಾಗಿಸಲಾಗುತ್ತಿತ್ತು ಎಂದು ಸ್ಪೋಟಕವಾದ ಆರೋಪ ಮಾಡಿದ್ದಾರೆ. ದೊಡ್ಡ ಮೊತ್ತದ ಹಣ ಆ ಕಾರಿನಲ್ಲಿ ಸಾಗಿಸಲಾಗುತ್ತಿತ್ತು. ಜನರು ಇದರ ಬಗ್ಗೆ ಕೇಳುತ್ತಿದ್ದಾರೆ. ಅಪಘಾತದ ಬಳಿಕ…
ಬೆಳಗಾವಿ : ಸಂಸತ್ ನಲ್ಲಿ ಕೇಂದ್ರ ಸಚಿವ ಅಮಿತ್ ಶಾ ಅವರು ಡಾ. ಬಿ ಆರ್ ಅಂಬೇಡ್ಕರ್ ಅವರ ಕುರಿತು ಅವಮಾನ ಮಾಡಿದ್ದ ಘಟನೆಯನ್ನು ಉಲ್ಲೇಖಿಸಿ, ಸಂಸದ ಪ್ರಿಯಾಂಕಾ ಗಾಂಧಿ ಎಂದು ಅಮಿತ್ ಶಾ ವಿರುದ್ಧವಾಗಿ ವಾಗ್ದಾಳಿ ನಡೆಸಿದ್ದು, ಕೇಂದ್ರ ಸಚಿವ ಅಮಿತ್ ಶಾ ಕೇವಲ ಅಂಬೇಡ್ಕರ್ ಅಷ್ಟೇ ಅಲ್ಲದೆ ಎಲ್ಲಾ ಸ್ವತಂತ್ರ ಹೋರಾಟಗಾರರನ್ನು ಅವಮಾನ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇಂದು ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಗಾಂಧಿ ಭಾರತ ಸಮಾವೇಶ ಹಮ್ಮಿಕೊಂಡಿದ್ದು, ಈ ಒಂದು ಸಮಾವೇಶದಲ್ಲಿ ಮಾತನಾಡಿದ ಅವರು, ಭಾರತದ ಹೆಮ್ಮೆಯ ಭೂಮಿ ಬೆಳಗಾವಿ ಪುಣ್ಯಭೂಮಿ ಬೆಳಗಾವಿ ಎಂದು ಪ್ರಿಯಾಂಕಾ ಗಾಂಧಿ ಭಾಷಣ ಆರಂಭಿಸಿದರು. ತಿಲಕ್ ಅವರು ತಮ್ಮ ಚಳುವಳಿಯನ್ನು ಬೆಳಗಾವಿಯಿಂದ ಆರಂಭಿಸಿದ್ದರು. ಗಾಂಧೀಜಿಯವರು ಬೆಳಗಾವಿ ಕಾಂಗ್ರೆಸ್ ಸಮಾವೇಶದ ಅಧ್ಯಕ್ಷರಾಗಿದ್ದರು. ಸಂವಿಧಾನ ನಮ್ಮೆಲ್ಲರನ್ನು ರಕ್ಷಿಸುವ ಕವಚವಾಗಿದೆ ಎಂದರು. ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದ್ದು, ಸ್ವತಂತ್ರ ಸಿಕ್ಕ ಬಳಿಕ ಹಲವು ಸರ್ಕಾರಗಳು ಅಧಿಕಾರಕ್ಕೆ ಬಂದಿವೆ.…
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊಲೆ ಆರೋಪಿ ನಟ ದರ್ಶನ್ ಅವರ ಬಳಿ ಇರುವ ಎರಡು ಲೈಸೆನ್ಸ್ ಗನ್ ಅನ್ನು ಇದೀಗ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಲೈಸೆನ್ಸ್ ರದ್ದಾಗಿದೆ ಪಿಸ್ತೂಲ್ ಠಾಣೆಗೆ ಸರಂಡರ್ ಮಾಡಿ ಹೀಗಂತ ಪೊಲೀಸರು ನೋಟಿಸ್ ಕೊಡೋಕೆ ತೆರಳಿದ್ದರು. ನಟ ದರ್ಶನ್ ಮನೆಗೆ ಆರ್ ಆರ್ ನಗರ ಠಾಣೆ ಪೋಲಿಸರು ತೆರಳಿದ್ದರು.ಈ ವೇಳೆ ನೋಟಿಸ್ ಪಡೆದು ನಟ ದರ್ಶನ್ ಗನ್ ಸೆರೆಂಡರ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಬೆಂಗಳೂರು ನಗರ ಪೊಲೀಸ್ ಆಡಳಿತ ವಿಭಾಗ ದರ್ಶನ್ ಬಳಿರುವ 2 ಗನ್ ಗಳ ಲೈಸೆನ್ಸ್ ಅನ್ನು ತಾತ್ಕಾಲಿಕವಾಗಿ ಕ್ಯಾನ್ಸಲ್ ಮಾಡಿತ್ತು. ಅಲ್ಲದೆ ಬೆಂಗಳೂರಿನ ಆರ್ ಆರ್ ನಗರ ಠಾಣೆ ಪೊಲೀಸರಿಗೆ ಕೂಡಲೇ ಗನ್ ಗಳನ್ನು ವಶಪಡಿಸಿಕೊಳ್ಳಿ ಎಂದು ಸೂಚನೆ ನೀಡಿತ್ತು.ಈ ಹಿನ್ನೆಲೆಯಲ್ಲಿ ಇದೀಗ ಆರ್ ಆರ್ ಠಾಣೆಯ ಪೊಲೀಸರು ದರ್ಶನ್ ಮನೆಗೆ ನೋಟಿಸ್ ಬಂದಾಗ ದರ್ಶನವರು 2 ಗನ್ ಗಳನ್ನು ಸರಂಡರ್ ಮಾಡಿದ್ದಾರೆ.
ಬೆಳಗಾವಿ : ಇಂದು ಬೆಳಗಾವಿಯ ಸುವರ್ಣಸೌಧದಲ್ಲಿ ಗಾಂಧಿ ಭಾರತ್ ಸಮಾವೇಶದಲ್ಲಿ ಮಹಾತ್ಮ ಗಾಂಧಿ ಬೃಹತ್ ಪುತ್ಥಳಿಯನ್ನು AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನಾವರಣಗೊಳಿಸಿದರು. ಸಮಾವೇಶದ ಕುರಿತು ಮಾತನಾಡಿದ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಮಿತ್ ಶಾ ಹಾಗೂ ಕೆಲವು ಚಮಚಗಳು ಅಭಿವೃದ್ಧಿ ಮಾಡೋಕೆ ಆಗದೆ ಗಾಂಧಿ ಕುಟುಂಬಕ್ಕೆ ಬೈಯುತ್ತಾರೆ ಎಂದು ವಾಗ್ದಾಳಿ ಎಂದು ನಡೆಸಿದರು. ಇಂದು ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಗಾಂಧಿ ಭಾರತ ಸಮಾವೇಶದಲ್ಲಿ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, RSS, ಬಿಜೆಪಿಯವರು ಯಾವಾಗಲೂ ದಲಿತ ವಿರೋಧಿಗಳು. ಬಡವರು ರೈತರು ಕೂಲಿಕಾರ್ಮಿಕರ ಬಗ್ಗೆ ಬಿಜೆಪಿಯವರಿಗೆ ಚಿಂತೆ ಇಲ್ಲ. ದೇಶಕ್ಕಾಗಿ ಚೆನ್ನಮ್ಮ ಹೋರಾಟ ಮಾಡಿದ ನೆಲ ಇದು. ಗಾಂಧಿ ಕುಟುಂಬಕ್ಕೆ ಪ್ರಧಾನಿ ಮೋದಿ ಅಮಿತ್ ಶಾ ಹಾಗೂ ಚಮಚಗಳು ಬೈಯುತ್ತಾರೆ. ಕೆಲಸ ಮಾಡಲು ಆಗದೆ ಗಾಂಧಿ ಕುಟುಂಬದ ಬಗ್ಗೆ ಬೈಯುತ್ತಾರೆ. ನಾಥುರಾಮ್ ಗೋಡ್ಸೆ ಸಾವರ್ಕರ್ ಶಿಷ್ಯ. ಗಾಂಧೀಜಿಯನ್ನ ಕೊಂದ ಗೋಡ್ಸೆಯನ್ನು ಮೋದಿ ಪೂಜೆ ಮಾಡುತ್ತಾರೆ ಎಂದು ಬೆಳಗಾವಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ…
ಉತ್ತರಕನ್ನಡ : ಕಳೆದ ಎರಡು ದಿನಗಳ ಹಿಂದೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನಲ್ಲಿ ಗರ್ಭ ಧರಿಸಿದಂತಹ ಹಸುವಿನ ತಲೆಕೆಡಿದು ಮಾಂಸ ಕದ್ದು ದುರುಳರು ವಿಕೃತಿ ಮೇರಿದಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಹೌದು ಉತ್ತರ ಕನ್ನಡದಲ್ಲಿ ಈ ಒಂದು ಘಟನೆಯಿಂದ ಜನರು ಬೆಚ್ಚಿಬಿದ್ದಿದ್ದಾರೆ. ಇದೆ ವೇಳೆ ಉತ್ತರ ಕನ್ನಡ ಎಸ್ಪಿ ಜತೆ ಗೃಹಸಚಿವ ಪರಮೇಶ್ವರ್ ನಿನ್ನೆ ಪ್ರತ್ಯೇಕ ಸಭೆ ಮಾಡಿದ್ದಾರೆ. ಗೋ ಹತ್ಯೆಯನ್ನ ಸರ್ಕಾರ ಯಾವುದೇ ಕಾರಣಕ್ಕೂ ಬೆಂಬಲಿಸಲ್ಲ. ಗೋ ಹಂತಕರು ಯಾರೇ ಆಗಿದ್ದರೂ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ. ಗೋ ಮಾಂಸ ಸಾಗಾಟದ ಜಾಲ ಇದರೆ ಸಂಪೂರ್ಣ ಕಲೆ ಹಾಕುವಂತೆ ಗೃಹ ಸಚಿವ ಪರಮೇಶ್ವರ್ ಸಭೆಯಲ್ಲಿ ಸೂಚನೆ ನೀಡಿದ್ದರು. ಕೂಡಲೇ ಕಾರ್ಯಪ್ರವೃತ್ತರಾದ ಉತ್ತರ ಕನ್ನಡ ಜಿಲ್ಲೆಯ ಎಸ್ಪಿ ನಾರಾಯಣ್ ಅವರು, ನಾಲ್ಕು ತಂಡಗಳನ್ನು ರಚಿಸಿ ಗೋ ಹಂತಕರನ್ನು ಬಂಧಿಸಲು ಕಾರ್ಯಚರಣೆ ನಡೆಸಿ ಇದುವರೆಗೂ ಒಟ್ಟು ಐದು ಆರೋಪಿಗಳನ್ನು ಬಂಧಿಸಿದ್ದಾರೆ. ಅಲ್ಲದೆ ಕಳೆದ ಒಂದು ತಿಂಗಳಲ್ಲಿ…
ಬೆಂಗಳೂರು : ನಿನ್ನೆ ಬೆಂಗಳೂರಳಲ್ಲಿ ರಾತ್ರಿ ಬಸ್ ಗಾಗಿ ಕಾಯುತ್ತಿದ್ದ ಮಹಿಳೆಯ ಮೇಲೆ ಇಬ್ಬರು ಸಾಮೂಹಿಕ ಅತ್ಯಾಚಾರ ಎಸಗಿದ್ದ ಘಟನೆ ನಡೆದಿತ್ತು.ಇದೀಗ ಬೆಂಗಳೂರಲ್ಲಿ ವಕೀಲೇಯ ಮೇಲೆ ಐಟಿ ಅಧಿಕಾರಿಯೊಬ್ಬರು ಹಲ್ಲೆ ನಡೆಸಿದ್ದು ಅಲ್ಲದೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಹಿನ್ನೆಲೆಯಲ್ಲಿ ಅವರ ವಿರುದ್ಧ FIR ದಾಖಲಾಗಿದೆ. ಹೌದು ಐಟಿ ಅಧಿಕಾರಿ ವರುಣ್ ಮಲ್ಲಿಕ್ ಲೈಂಗಿಕ ಕಿರುಕುಳ ನೀಡಿದ್ದಾರೆ. ಅಲ್ಲದೇ ಹಲ್ಲೆ ನಡೆಸಿದ್ದಾರೆ ಎಂದು ವಕೀಲೆಯೊಬ್ಬರು ಆರೋಪಿಸಿ ದೂರು ದಾಖಲಿಸಿದ್ದರು. ದೂರಿನ ಅನ್ವಯ ಆರೋಪಿಗೆ ಪೊಲೀಸರು 2 ನೋಟಿಸ್ ನೀಡಿದ್ದಾರೆ.ಈ ಕುರಿತು ಬೆಂಗಳೂರಿನ ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ವರುಣ್ ಮಲ್ಲಿಕ್ ವಿರುದ್ಧ FIR ದಾಖಲಾಗಿದೆ.